Browsing: ರಾಜ್ಯ

ರಾಜ್ಯ

ಭಾರತದ ಭದ್ರತೆಗೆ ಬೆದರಿಕೆ ಒಡ್ಡುತ್ತಿರುವ ಸಿಮ್ ಬಾಕ್ಸ್ ರಾಕೆಟ್!!

ತಂತ್ರಜ್ಞಾನ ಬೆಳದಂತೆ  ಹಲವಾರು ರೀತಿಯವಂಚನೆಗಳು ನಡೆಯುತ್ತಿವೆ .ಈ ಮೂಲಕ ಸೈಬರ್ ಭಯೋತ್ಪಾದನೆ ಜಾಸ್ತಿಯಾಗುತ್ತಿದೆ, ಇದಕ್ಕೆ ಉದಾಹರಣೆ ಎನ್ನುವಂತೆ ಸಿಮ್  ಬಾಕ್ಸ್ ವಂಚನೆ ರಾಷ್ಟಮಟ್ಟದಲ್ಲಿ ದೊಡ್ಡ ಘಟನೆ ಈ   ಬಗ್ಗೆ ಇಲ್ಲಿ ವಿವರ  ನೀಡಲಾಗಿದೆ. Writing; ಪರಶಿವ ಧನಗೂರು ಭವಿಷ್ಯದ ಪ್ರಪಂಚಕ್ಕೆ ಅತ್ಯಂತ ದೊಡ್ಡ ಗಂಡಾಂತರ ವೇನಾದರೂ ಒಂದಾಗಿ ಬರುವುದಿದ್ದರೇ ಅದೂ ಇಂಟರ್ನೆಟ್ ನಿಂದ ಮಾತ್ರ ಸಾಧ್ಯ!. ಸೈಬರ್ ಟೆರರಿಸಂ. ಡಾರ್ಕ್ ನೆಟ್ ಮಾಫಿಯಾ. ಗಳು ಬಗ್ಗೆ ಅರಿವಿದ್ದವರಿಗೇ ಈ ಸೈಬರ್ ವಾರ್, ಇಂಟರ್ನೆಟ್ ಥ್ರೆಟ್ ಗಳ ಭಯಾನಕತೆ…

ಡೆಲ್ಟಾ ಪ್ಲೆಸ್ ಕೊರೊನಾ ರೂಪಾಂತರ ತಳಿ ಹೆಚ್ಚಿಸಿದ ಆತಂಕ

ಕೊರೊನಾ ಮೂರನೆ ಅಲೆಯ ಆತಂಕದಲ್ಲಿರುವ ಸಂದರ್ಭದಲ್ಲಿ ಡೆಲ್ಟಾ ಪ್ಲೆಸ್ ಕೊರೊನಾ ರೂಪಾಂತರ ತಳಿ ಕಾಣಿಸಿಕೊಂಡು ಆತಂಕ ಹುಟ್ಟಿಸಿದೆ. ಬೆಂಗಳೂರು ಜೂ,24: ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ತಳಿಯ ವೈರಸ್ ಇದೀಗ ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡಿದೆ. ಡೆಲ್ಟಾ ಪ್ಲಸ್ ವೈರಸ್ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿತ್ತು. ಇದೀಗ ಬೆಂಗಳೂರಿನಲ್ಲಿಯೂ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ದೃಢಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುಧಾಕರ್ ಅವರು, ಮಂಗಳವಾರ ಮೈಸೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು. ಬುಧವಾರ ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ…

ವಿದ್ಯಾರ್ಥಿಗಳಿಗೆ ಸ್ಮಾರ್ಟ್ ತರಗತಿಯ ಟ್ಯಾಬ್ಲೆಟ್ ಪಿ.ಸಿ.ವಿತರಣೆ

ಬೆಂಗಳೂರು,ಜೂ,23: ಡಿಜಿಟಲ್ ಕಲಿಕಾ ಯೋಜನೆಯಡಿ 2500 ಸ್ಮಾರ್ಟ್ ತರಗತಿಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ.ಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಸರ್ಕಾರಿ ಕಾಲೇಜುಗಳಲ್ಲಿ 2,500 ತರಗತಿಗಳನ್ನು ಸ್ಮಾರ್ಟ್ ತರಗತಿ ಕೊಠಡಿಗಳಾಗಿ ಉನ್ನತೀಕರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 6,500 ತರಗತಿ ಕೊಠಡಿಗಳನ್ನು ಸ್ಮಾರ್ಟ್ ತರಗತಿಗಳಾಗಿ ಪರಿವರ್ತಿಸಲಾಗುವುದು ಎಂದರು. 2021-22ನೇ ಸಾಲಿನಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆಯುವ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಟ್ಯಾಬ್ಲೆಟ್ ಪಿ.ಸಿ. ನೀಡಲಾಗುವುದು ಎಂದು ತಿಳಿಸಿದರು. ಡಿಜಿಟಲ್ ಕಲಿಕೆ…

ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ನೆರವು ನೀಡಲು ಕೆಯುಡಬ್ಲ್ಯೂಜೆ ತೀರ್ಮಾನ

ಬೆಂಗಳೂರು,ಜೂ,23:ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ತಲಾ 10 ಸಾವಿರ ಪರಿಹಾರ ನೀಡಲು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀರ್ಮಾನಿಸಿದೆ. ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ಕಳೆದ ವರ್ಷ ನೀಡಿದಂತೆ ಸರ್ಕಾರದಿಂದ 5ಲಕ್ಷ‌ರೂ ನೆರವು ಕೊಡಿಸಲು ನಿರ್ಣಯಿಸಲಾಗಿದೆ. ಪತ್ರಕರ್ತರ ಕುಟುಂಬಕ್ಕೆ ಪಡಿತರ ಕಿಟ್ ಕೊಡಿಸಲು ತೀರ್ಮಾನಿಸಲಾಗಿದೆ.ಬೆಂಗಳೂರಿನಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಶೀಘ್ರವಾಗಿ ಶಂಕುಸ್ಥಾಪನೆ ಮಾಡಿಸಲು…

ಕೊರೊನಾ ಕಾಲದ ಹೋಟೆಲ್- ರೆಸಾರ್ಟ್ ನ ವಿದ್ಯುತ್,ನೀರು ಶುಲ್ಕ ಮನ್ನಾ ಮಾಡಲು ಸಿಎಂಗೆ ಸಿದ್ದು ಪತ್ರ

ಬೆಂಗಳೂರು ,ಜೂ23: ಹೋಟೆಲ್-ರೆಸಾರ್ಟ್-ವಸತಿಗೃಹಗಳ ಕೊರೋನಾ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿದ್ದು,ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್ ಗಳು ಸೇರಿ ಇನ್ನಿತರೆ ನಾನಾ ಜನ ಸಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ.ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು…

ಸಿಂಧೂರಿಗೆ ಹಿನ್ನೆಡೆ-ಅನುಮತಿ ಇಲ್ಲದೆ ಈಜು ಕೊಳ ನಿರ್ಮಾಣ

ಬೆಂಗಳೂರು,ಜೂ,೨೩: ಸಂಸದ ಪ್ರತಾಪ್ ಸಿಂಹ ಎತ್ತಿದ್ದ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅನುಮತಿ ಇಲ್ಲದೆ ಈಜುಕೊಳ ನಿರ್ಮಿಸಿದ್ದರು ಎನ್ನುವ ಅಂಶ ಈಗ ತನಿಖಾ ವರದಿಯಿಂದ ಗೊತ್ತಾಗಿದೆ. ಜಿಲ್ಲಾಧಿಕಾರಿ ನಿವಾಸ ‘ಜಲಸನ್ನಿಧಿ’ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಹೇಳಿದೆ. ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಸಂಬಂಧ ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ ೩೨…

೨೫ ಲಕ್ಷ ಗ್ರಾಮೀಣ ಮನೆಗಳಿಗೆ ನೀರು ಒದಗಿಸಲು ಸಿಎಂ ಸೂಚನೆ

ಪ್ರತಿಮನೆಗೂ ಕುಡಿಯುವ ನೀರಿನ ಸೌಲಭ್ಯ ಒದಿಸುವ ಮಹತ್ವಾಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆಯಡಿ ೨೫ ಲಕ್ಷ ಗ್ರಾಮೀಣ ಮನೆಗಳಿಗೆ ನೀರು ಒದಿಸುವ ಕುರಿತು ಇಂದು ನಡೆದ ಸಭೆಯಲ್ಲಿ ಕೂಡಲೇ ನೀರು ಒದಗಿಸುವಂತೆ ಅಧಿಕಾರಿಗೆ ಸಿಎಂ ಸೂಚಿಸಿದ್ದಾರೆ. ಬೆಂಗಳೂರು, ಜೂ.೨೨: ಜಲಜೀವನ್ ಮಿಷನ್ ಯೋಜನೆಯಡಿ ೨೫ಲಕ್ಷ ಗ್ರಾಮೀಣಭಾಗದ ಮನೆಗಳಿಗೆ ಕುಡಿಯುವ ನೀರು ಬದಗಿಸುವಂತೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು,…

ಮೆಟ್ರೋದಲ್ಲಿ ಜುಲೈನಿಂದ ಟೋಕನ್ ವ್ಯವಸ್ಥೆ ಜಾರಿ?

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮೆಟ್ರೋದಲ್ಲಿ ಟೋಕನ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು ಇದರಿಂದ ಸಾವಿರಾರು ಪ್ರಯಾಣಿಕರಿಗೆ ಅನಾನುಕೂಲವಾಗಿತ್ತು ಈಗ ಜುಲೈತಿಂಗಳಲ್ಲಿ ಮೆಟ್ರೋ ಟೋಕನ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಸರ್ಕಾರ ಹೇಳಿದೆ ಬೆಂಗಳೂರು, ಜೂ, ೨೨;ಕೊರೊನಾ ಒಂದನೇ ಅಲೆಯಿಂದ ಮೆಟ್ರೋ ಪ್ರಯಾಣಿಕರಿಗೆ ಟೋಕನ್ ವ್ಯವಸ್ಥೆ ಇಲ್ಲದೆ ಸಂಚಾರಕ್ಕೆ ತೊಂದರೆಯಾಗಿದ್ದು ಮುಂದಿನ ಮಾರ್ಗಸೂಚಿ ಅನ್ವಯ ಬಹುತೇಕ ಅಥವ ಜುಲೈ ಒಂದರಿಂದ ಟೋಕನ್ ವ್ಯವಸ್ಥೆಯನ್ನು ಕಲ್ಪಿಸುವ ಸಾದ್ಯತೆಗಳಿವೆ ಎಂದು ಸರ್ಕಾರ ಹೇಳಿದೆ. ಕಳೆದ ವರ್ಷದ ಲಾಕ್ ಡೌನ್ ನಂತರ ಕೇವಲ ಮೆಟ್ರೋ ಕಾರ್ಡ್ ದಾರರಿಗೆ…

ಶ್ರೀ ಮೈಲಾರಲಿಂಗೇಶ್ವರ ಕಾರ್ಣೀಕದ ಗೊರವಯ್ಯ ಮಾಲತೇಶಪ್ಪ ನಿಧನ

ಹೂವಿನ ಹಡಗಲಿ,ಜೂ,22: ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇಂದು ಬೆಳಗಿನಜಾವ ನಿಧನರಾದರು. 31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ. ಮಾಲತೇಶಪ್ಪ ನಿಧನಕ್ಕೆ ನಾಡಿನ ಹಲವಾರು ಮಠಾಧೀಶರು,ಸ್ವಾಮೀಜಿಗಳು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕೋವಿಡ್ ಲಸಿಕೆ ಪಡೆದುಕೊಳ್ಳಲು ಸಲಹೆ : ಅನಿತಾ ಕುಮಾರ್ ಸ್ವಾಮಿ

ರಾಮನಗರ, ಜೂ, 22: ಲಸಿಕೆ ತಗೆದುಕೊಳ್ಳುವುದರಿಂದ ಕೋವಿಡ್ ಬಂದರು ಸಹ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರದಂತೆ ನಿಯಂತ್ರಿಸುತ್ತದೆ. ರಾಮನಗರ ಜಿಲ್ಲೆಯ ಎಲ್ಲಾ ಜನರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳಿ ಹಾಗೂ ನಿಮ್ಮ ಸುತ್ತಮುತ್ತಲಿನ ಜನರಿಗೂ ಸಹ ಲಸಿಕೆ ಪಡೆಯುವಂತೆ ಪ್ರೋತ್ಸಾಹಿಸಿ ಎಂದು ರಾಮನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿತಾ ಕುಮಾರ್ ಸ್ವಾಮಿ ಅವರು ತಿಳಿಸಿದ್ದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಡೆದ…

ಶಾಲೆ ಆರಂಭ ಕುರಿತ ವರದಿ ಸಲ್ಲಿಸಿದ ತಜ್ಞರ ಸಮಿತಿ

ಸರ್ಕಾರ ಆಯಾ ಪ್ರದೇಶದಲ್ಲಿ ಸುರಕ್ಷತೆ ಬಗ್ಗೆ ಅರಿತು ಸ್ಥಳೀಯವಾಗಿ ನಿರ್ಧಾರ ಮಾಡಬೆಕು ಎಂದಿರುವ ಅರು ಕೊರೊನಾ ಇಳಿಮುಖವಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಏಕಾ ಏಕಿ ನಿರ್ಧಾರಕ್ಕೆ ಬರುವುದು ಸೂಕ್ತವಲ್ಲ ಎಂದು ವರದಿಯಲ್ಲಿ ತಿಳಿಸಿದೆ ಬೆಂಗಳೂರು,ಜೂ.೨೨:ಮಕ್ಕಳಿಗೆ ಶಾಲೆ ಪುನರಾರಂಭ ಮಾಡುವುದರಿಂದ ಉಪಯೋಗ ಮತ್ತು ಸಮಸ್ಯೆ ಎರಡೂ ಇವೆ ಎರಡನ್ನು ಕೂಲಂಕುಷವಾಗಿ ಪರಿಶೀಲಿಸಿ ಶಾಲೆ ಆರಂಭ ಮಾಡಬೇಕೆ ಬೇಡವೇ ಎನ್ನುವ ಕುರಿತು ನಿರ್ಧಾರ ಮಾಡಬಹುದು. ಇದು ಡಾ.ದೇವಿಶೆಟ್ಟಿ ನೇತೃತ್ವದ ಮೂರನೇ ಅಲೆ ಸಿದ್ದತೆ ಕುರಿತು ರಚಿಸಿರುವ ಉನ್ನತ ಮಟ್ಟದ…

ಕೊವಿಡ್ 3 ನೇ ಅಲೆ ಎದುರಿಸಲು ಸಕಲ ಸಿದ್ಧತೆ; ಶಶಿಕಲಾ ಜೊಲ್ಲೆ

ಬೆಂಗಳೂರು,ಜೂ,21: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಕೊವಿಡ್ 3 ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೆ ಅಲೆಯಲ್ಲಿ ಸುಮಾರು 50 ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ. ಅವರಿಗೆ ಬಾಲ…

ಬಳ್ಳಾರಿಯಲ್ಲಿ ಮತ್ತೆ ಅಕ್ರಮ ಅದಿರು ಸಾಗಾಟ;೨೦ ಲಾರಿಗಳ ವಶ

ಬಳ್ಳಾರಿ,ಜೂ,೨೦: ಮತ್ತೇ ಗಣಿನಾಡಿನಲ್ಲಿ ಅಕ್ರಮ ಗಣಿಗಾರಿಕೆ ಶುರುವಾಗಿದೆ. ಈ ಸಂಬಂಧ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಅಕ್ರಮ ಅದಿರು ಸಾಗಾಟದ ೨೦ಕ್ಕೂ ಹೆಚ್ಚು ಲಾರಿಗಳನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಗಣಿನಾಡು ಬಳ್ಳಾರಿ ಅಂದರೆ ಅಕ್ರಮ ಗಣಿಗಾರಿಕೆ, ಅಕ್ರಮ ಗಣಿ ಸಾಗಾಟ ಎನ್ನುವುದು ಇಡೀ ದೇಶಕ್ಕೇ ಸಾರಿತು. ಮಾಜಿ ಸಚಿವ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿಕೊಂಡು ಸಿಬಿಐ ತನಿಖೆ ಆರಂಭಿಸಿದ ಬಳಿಕ ಸುಪ್ರೀಂ ಕೋರ್ಟ್ ಗಣಿ ರಪ್ತಿಗೆ ನಿಷೇಧ ಹೇರಿತ್ತು. ಪ್ಲಾಂಟ್ ಇದ್ದವರಿಗೆ ಗಣಿಗಾರಿಕೆ ಮಾತ್ರ…

ಕ್ಲೋಜರ್ ಕಾಮಗಾರಿ ಟೆಂಡರ್ ರದ್ದುಗೊಳಿಸದಿದ್ದರೆ ಧರಣಿ;ಎಚ್ಚರಿಕೆ

ಆಲಮಟ್ಟಿ,ಜೂ,20: ಲಾಲಬಹದ್ದೂರಶಾಸ್ತ್ರಿ ಜಲಾಶಯ ವ್ಯಾಪ್ತಿಯ ಕಾಲುವೆಗಳಿಗೆ ಕರೆಯಲಾದ ಕ್ಲೋಜರ್ ಮತ್ತು ವಿಶೇಷ ದುರಸ್ತ ಕಾಮಗಾರಿಗಳ ಟೆಂಡರ್ ರದ್ದುಗೊಳಿಸಬೇಕು. ಇಲ್ಲದಿದ್ದರೆ ಕೊವಿಡ್-೧೯ನಿಯಮ ಸಡಿಲಿಕೆಯಾದ ನಂತರ ಅನಿರ್ಧಿಷ್ಟ ಧರಣಿ ಉಪವಾಸ ಸತ್ಯಾಗ್ರಹ ನಡೆಸಲಾಗುವದು ಎಂದು ಅಖಂಡ ಕರ್ನಾಟಕ ರೈತಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು. ಆಲಮಟ್ಟಿಯಲ್ಲಿರುವ ಕೆಬಿಜೆನ್ನೆಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಅಖಂಡಕರ್ನಾಟಕ ರೈತಸಂಘದ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಿ ಮಾತನಾಡಿದ ಅವರು ಕ್ಲೋಜರ್ ಹಾಗೂ ವಿಶೇಷ ದುರಸ್ತಿ ಕಾಮಗಾರಿಗಳನ್ನು ಬೇಸಿಗೆಯಲ್ಲಿ ಟೆಂಡರ್ ಕರೆದು ಮಳೆಗಾಲಕ್ಕೂ ಮುಂಚೆ ಕಾಮಗಾರಿಗಳನ್ನು ಮುಗಿಸಿ…

ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಆಲಮಟ್ಟಿ,ಜೂ,20:ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಮುಂದುವರೆದಿದೆ. ಗರಿಷ್ಠ ೫೧೯.೬೦ ಮೀಟರ್ ಎತ್ತರದಲ್ಲಿ ೧೨೩.೦೮೧ ಟಿಎಂಸಿ ಆಲಮಟ್ಟಿ ಜಲಾಶಯದಲ್ಲಿ ಭಾನುವಾರ ಬೆಳಗ್ಗೆ ೫೧೩.೫೬ ಮೀಟರ್ ಎತ್ತರದಲ್ಲಿ ೫೧.೪೦೭ ಟಿಎಂಸಿ ನೀರು ಸಂಗ್ರಹವಾಗಿದ್ದರೆ ಒಳಹರಿವಿನ ಪ್ರಮಾಣ ೧೫೦೭೫೦ ಕ್ಯೂಸೆಕ್ ಇತ್ತು. ಸಂಜೆ ೬ಕ್ಕೆ ೫೧೪.೧೯ ಮೀಟರ್ ಎತ್ತರದಲ್ಲಿ ೫೬.೧೮೮ ಟಿಎಂಸಿ ನೀರು ಸಂಗ್ರಹವಾಗಿತ್ತು ಆಗ ಒಳಹರಿವಿನ ಪ್ರಮಾಣ ೧೩೧೯೪೪ ಕ್ಯೂಸೆಕ್‌ನಷ್ಟಿತ್ತು. ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ೬೪ ಎಂಎಂ, ಕೊಯ್ನಾದಲ್ಲಿ ೪೫ ಎಂಎಂ, ನಾವಜಾದಲ್ಲಿ ೬೩…

ಮನೆಯಲ್ಲೇ ಯೋಗ ದಿನ ಆಚರಿಸಿ:ಕೆ.ಸುಧಾಕರ್

ಬೆಂಗಳೂರು, ಜೂ, 19:ಜೂನ್ 21 ರಂದು ಜಗತ್ತಿನಾದ್ಯಂತ ಯೋಗ ದಿನ ಆಚರಿಸುತ್ತಿದ್ದು, ಈ ಬಾರಿ ಎಲ್ಲರೂ ಮನೆಯಲ್ಲೇ ಇದ್ದು ಆಚರಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜೂನ್ 21 ರಂದು ಯೋಗ ದಿನವನ್ನು ಆನ್ ಲೈನ್ ನಲ್ಲೇ ಆಚರಿಸಲಾಗುತ್ತಿದೆ. ಬಿ ವಿತ್ ಯೋಗ ಬಿ ಅಟ್ ಹೋಮ್ ಮತ್ತು ಯೋಗ ಫಾರ್ ವೆಲ್ ನೆಸ್ ಎಂಬ ಘೋಷವಾಕ್ಯದಡಿ ಯೋಗ ದಿನ ಆಚರಿಸಲಾಗುತ್ತಿದೆ.…

ಚೇರಂಬಾಣೆ ಸಿದ್ಧಾಶ್ರಮದ ಬೇಬಿತಾಯಿ ಬ್ರಹ್ಮೈಕ್ಯ.

ಬೆಂಗಳೂರು,ಜೂ,19:ಕೊಡಗು ಜಿಲ್ಲೆಯ ಚೇರಂಬಾಣೆಯ ಶ್ರೀ ಸಿದ್ಧಾರೂಢಾಶ್ರಮದ ಶ್ರೀಮಾತೆ ಬೇಬಿತಾಯಿಯವರು (84) ಇಂದು ಬೆಳಿಗ್ಗೆ ಬ್ರಾಹ್ಮೀಮುಹೂರ್ತದಲ್ಲಿ (5.15) ಬ್ರಹ್ಮೈಕ್ಯರಾದರು. ಮಧ್ಯಾಹ್ನಆಶ್ರಮದಲ್ಲಿ ಸಂಪ್ರದಾಯದಂತೆ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇತ್ತೀಚೆಗೆ ಅವರು ವಯಸ್ಸಹಜ ಕಾಯಿಲೆಯಿಂದ ಬಳಲುತ್ತಿದ್ದರೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಲು ನಿರಾಕರಿಸಿದ್ದರು. 20.11.1936 ರಲ್ಲಿ ಚೇರಂಬಾಣೆ ಬಳಿಯ ಕೊಟ್ಟೂರು ಗ್ರಾಮದ ಶ್ರೀ ಅಚ್ಚಯ್ಯ ಶ್ರೀಮತಿ ಬಿಳ್ಳವ್ವ ದಂಪತಿಗಳಿಗೆ ಜನಿಸಿದ ಇವರು ಬಾಲಬ್ರಹ್ಮಚಾರಿಣಿಯಾಗಿದ್ದರು. ಮೂರು ಜನ ಸಹೋದರ ಐದು ಜನ ಸಹೋದರಿಯರನ್ನು ಹೊಂದಿದ್ದ ಇವರು ತಮ್ಮ ನಲವತ್ತೆರಡನೇ ವಯಸ್ಸಿನಲ್ಲಿ ಚೇರಂಬಾಣೆಯ ಸಿದ್ಧಾರೂಢಾಶ್ರಮಕ್ಕೆ ಸೇರಿಕೊಂಡರು.…

ಮೇಕೆದಾಟು ಯೋಜನೆ ಶೀಘ್ರ ಜಾರಿಗೊಳಿಸಿ-ಎಚ್‌ಡಿಕೆ

ಬೆಂಗಳೂರು, ಜೂ.೧೯:ಮೇಕೆ ದಾಟು ಯೋಜನೆಜಾರಿಗೊಳಿಸುವ ಕುರಿಂತೆ ಶೀಘ್ರ ಕೇಂದ್ರ ಸರ್ಕಾರದ ಗಮನಹರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮೇಕೆದಾಟು ಯೋಜನೆ ವಿಚಾರವಾಗಿ ಎನ್‌ಜಿಟಿ ದಕ್ಷಿಣ ಪೀಠ ಆರಂಭಿಸಿದ್ದ ಸ್ವಯಂ ಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಈಗ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದು ಅವರು…

ನಾಗರಹೊಳೆಯಲ್ಲಿ ಹುಲಿಗಣತಿ ಕಾರ್ಯ ಆರಂಭ

ಮೈಸೂರು,ಜೂ,೧೯: ರಾಜ್ಯದ ಪ್ರತಿಷ್ಠಿತ ಅರಣ್ಯಪ್ರದೇಶವಾದ ನೊಗರಹೊಳೆಯಲ್ಲಿ ಎರಡನೇ ಹಂತದ ಹುಲಿ ಗಣತಿ ಆರಂಭವಾಗಿದೆ. ನಾಗರ ಹೊಳೆ ಅರಣ್ಯದಲ್ಲಿ ಕ್ಯಾಮರಾವನ್ನು ಹಳವಡಿಸಲಾಗಿದ್ದು ಹುಲಿಯ ವಯಸ್ಸು ಮತ್ತು ಲಿಂಗ ಪತ್ತೆಯನ್ನು ಮಾಡಲಾಗುತ್ತದೆ ಎಂದು ವಲಯಾಧಿಕಾರಿ ತಿಳಿಸಿದ್ದಾರೆ. ಕೊರೊನಾ ಹಾವಳಿ ಇರುವುದರಿಂದಾಗಿ ಸ್ವಯಂ ಸೇವಕರಿಗೆ ಅವಕಾಶ ಕಲ್ಪಿಸಲಾಗಿಲ್ಲ. ಒಟ್ಟು ೮೪೦ ಚದರ ಕಿ.ಮೀ ವ್ಯಾಪ್ತಿ ಇರುವ ನಾಗರ ಹೊಳೆ ಅರಣ್ಯ ಗಣತಿ ನಡೆಲಾಗುತ್ತಿದೆ. ಈಗಾಗಲೇ ಹುಲಿ ಗಣತಿ ಕಾರ್ಯಾರಂಭಗೊಂಡಿದೆ. ಪ್ರಥಮ ಹಂತದ ಗಣತಿ ಕಳೆದ ಮೇ ತಿಂಗಳಿನಲ್ಲಿ ಆರಂಭವಾಗಿ ಮುಕ್ತಾಯವಾಗಿತ್ತು. ಇದೀಗ…

ಡಿಸೆಂಬರ್‌ವರೆಗೂ ಜಿಪಂ,ತಾಪಂ ಚುನಾವಣೆ ಇಲ್ಲ-ಈಶ್ವರಪ್ಪ

ದಾವಣಗೆರೆ,ಜೂ,೧೯: ಕೊನಾನಾ ಆತಂಕದ ಹಿನ್ನೆಲಯಲ್ಲಿ ಡಿಸೆಂಬರ್ ವರೆಗೂ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ನಡೆಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಸೋಮವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು ಟೆಂಡರ್ ಆರೋಪ ಮುಗಿದು ಹೋಗಿರೋದು. ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಸ್ಪಷ್ಟನೆ ನೀಡಿಯಾಗಿದೆ. ಮತ್ತೆ ಕೇಳಬೇಡಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. .ಎಲ್ಲ ಬಡವರಿಗೆ ಉಚಿತ ಪಡಿತರ, ಎಲ್ಲರಿಗೂ ಉಚಿತ ಲಸಿಕೆ ನೀಡುವ ಪ್ರಧಾನಿ…

1 38 39 40 41 42 49
error: Content is protected !!