Browsing: ರಾಜ್ಯ

ರಾಜ್ಯ

ಶಾಲೆಗಳಲ್ಲಿ ಸಮವಸ್ರ್ತಕಡ್ಡಾಯ; ಮಹತ್ವದ ಆದೇಶ ನೀಡಿದ ಹೈಕೋರ್ಟ್

ಬೆಂಗಳೂರು, ಮಾ.15. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಹಿಜಾಬ್ ಧಾರಣೆ ಇಸ್ಲಾಂ ಧರ್ಮದ ಧಾರ್ಮಿಕ ಅತ್ಯಗತ್ಯ ಆಚರಣೆಯಲ್ಲ ಎಂದು ಮಹತ್ವದ ಆದೇಶ ನೀಡಿದೆ. ತರಗತಿಗೆ ಹಿಜಾಬ್ ಧರಿಸಿ ಬರದಂತೆ ನಿರ್ಬಂಧಿಸಿರುವ ಕಾಲೇಜಿನ ಕ್ರಮ ಪ್ರಶ್ನಿಸಿ ಹಾಗೂ ಸಮವಸ್ತ್ರ ಸಂಹಿತೆ ಜಾರಿ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ರದ್ದುಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಮತ್ತಿತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದ ಅರ್ಜಿಗಳನ್ನು ಪೂರ್ಣಪೀಠ…

ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಎರಡು ಪ್ರಶಸ್ತಿ ಘೋಷಿಸಿದ ಸಿಎಂ

ಬೆಂಗಳೂರು, ಮಾ, 14: ಜನ್ಮಶತಮಾನೋತ್ಸವವನ್ನು ಇಡೀ ವರ್ಷ ಆಚರಣೆ ಮಾಡುವ ತೀರ್ಮಾನ ಸರ್ಕಾರ ಮಾಡಿದೆ. ಹಾಗೂ ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಶಾಸಕ ಪ್ರಶಸ್ತಿಗಳನ್ನು ಪ್ರತಿ ವರ್ಷ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಪ್ರತಿಷ್ಠಾನ ಹಾಗೂ ಜನ್ಮ ಶತಮಾನೋತ್ಸವ ಆಚಾರಣೆ ಸಮಿತಿ ಆಯೋಜಿಸಿದ್ದ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಗೋಪಾಲಗೌಡರ ಕುರಿತ ಕೃತಿಗಳನ್ನು ಮುದ್ರಿಸಿ, ನಾಡಿನಾದ್ಯಂತ ಎಲ್ಲಾ ಗ್ರಂಥಾಲಯಗಳಿಗೆ…

ಬಡತನದ ನಿರ್ಮೂಲನೆಗೆ ನರೇಗಾ ಅಸ್ತ್ರ:ಸಿಎಂ ಬೊಮ್ಮಾಯಿ

ಬೆಂಗಳೂರು, ಮಾ,14:ಬಡತನದ ನಿರ್ಮೂಲನೆಯಲ್ಲಿ ನರೇಗಾ ಎನ್ನುವ ಅಸ್ತ್ರ ಬಹಳ ದೊಡ್ಡ ಪಾತ್ರವ್ನನು ನಿರ್ವಹಿಸಲಿದೆ. ನರೇಗಾದಡಿ ಹಲವಾರು ಯೋಜನೆಗಳನ್ನು ಸೇರ್ಪಡೆಗೊಳಿಸಬೇಕು. ಒಂದು ವರ್ಷದ ದುಡಿಮೆಯನ್ನು ಸಂಭ್ರಮಿಸಲು ಆಚರಿಸುವ ನರೇಗಾ ಹಬ್ಬ ರಾಜ್ಯದ ಹಬ್ಬ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ನರೇಗಾ ಹಬ್ಬ 2022 ನ್ನು ಉದ್ಘಾಟಿಸಿ ಮಾತನಾಡಿದರು. ಮಹಾತ್ಮಾ ಗಾಂಧಿಯವರಿಂದ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಮೂಡಿತು. ಅಂದಿನ ಪ್ರಧಾನಿ ಅಟಲ್…

ದೇಶದ ಮೊಟ್ಟಮೊದಲ ಡಿಜಿಟಲ್ ವಾಟರ್ ಬ್ಯಾಂಕ್ `ಅಕ್ವೇರಿಯಂ’ ಉದ್ಘಾಟನೆ

ಬೆಂಗಳೂರು,ಮಾ,14: ಜಲ ಸಂರಕ್ಷಣೆ, ನೈರ್ಮಲ್ಯ, ಜಲಭೂಗರ್ಭ ವಿಜ್ಞಾನ ಮತ್ತು ಡೇಟಾ ವಿಜ್ಞಾನಗಳಲ್ಲಿ 10 ಲಕ್ಷ ಯುವಜನರಿಗೆ ತರಬೇತಿ ನೀಡುವ ಗುರಿ ಹೊಂದಿರುವ ದೇಶದ ಮೊಟ್ಟಮೊದಲ ಡಿಜಿಟಲ್ ವಾಟರ್ ಬ್ಯಾಂಕ್ ಆದ `ಅಕ್ವೇರಿಯಂ’ ನವೋದ್ಯಮಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಚಾಲನೆ ನೀಡಿದರು. ಈ ಸಂಬಂಧ ನಗರದ ಖಾಸಗಿ ಹೋಟೆಲೊಂದರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `5 ಟ್ರಿಲಿಯನ್ ಡಾಲರ್ ಆರ್ಥಿಕಶಕ್ತಿಯ ಆತ್ಮನಿರ್ಭರ ಭಾರತವನ್ನು ಕಟ್ಟುವಲ್ಲಿ ಶುದ್ಧನೀರು ಮತ್ತು ಜಲಭದ್ರತೆ ಎರಡೂ ಪ್ರಮುಖ…

ಮಹಿಳಾ ಶಕ್ತಿಯು ಸಂಘಟನೆಯಾಗಿ ಬೆಳೆಯಬೇಕು : ಬಿ. ವೈ. ರಾಘವೇಂದ್ರ

ಶಿಕಾರಿಪುರ,ಮಾ,12 : ಭಾರತ ದೇಶದಲ್ಲಿ ಭೂಮಿಯನ್ನು, ನದಿಯನ್ನು ಹಾಗೂ ಗೋವನ್ನು ತಾಯಿಯಂತೆ ಗೌರವಿಸುವ ಪರಂಪರೆ ನಮ್ಮದು, ಕರ್ನಾಟಕ ಸರ್ಕಾರವು ಬಾಲ್ಯ ವಿವಾಹವನ್ನು ತಡೆಯುವ ಉದ್ದೇಶದಿಂದ ಮದುವೆಯ ವಯಸ್ಸನ್ನು 18 ರಿಂದ 21 ಕ್ಕೆ ಏರಿಸಿದ್ದಾರೆ, ಕೇಂದ್ರ ಸರ್ಕಾರವು ಬೇಟಿ ಬಚಾವ್, ಬೇಟಿ ಪಡಾವ್ ಯೋಜನೆಯನ್ನು ಜಾರಿಗೆ ತಂದಿದೆ, ಮಹಿಳಾ ಸುರಕ್ಷತೆಗೆ ಆದ್ಯತೆಯನ್ನು ನೀಡಿ ವಿವಿಧ ಯೋಜನೆಯನ್ನು ಚಾಲ್ತಿಗೆ ತಂದಿದೆ, ಸ್ಥಳೀಯ ಮಟ್ಟದಲ್ಲಿ ಇರುವ ಮಹಿಳಾ ಶಕ್ತಿಯು ಸಂಘಟನೆಯಾಗಿ ಬೆಳೆಯಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು…

ಮನೆ ಮನೆಗೆ ಕಂದಾಯ ದಾಖಲೆ ಉದ್ಟಾಟನೆ

ಚೆಳ್ಳಕೆರೆ, ಮಾ, 12:ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎನ್ನುವ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಕಾರ್ಯಕ್ರಮವನ್ನು ಚಳ್ಳಕೆರೆ ತಾಲ್ಲೂಕು ಮರುಕಟ್ಟೆ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು . ಆರಂಭದಲ್ಲಿ ಶಾಸಕರಾದ ತಾಶೀಲ್ದಾರ್ ಆದ ಎನ್ ರಘುಮೂರ್ತಿ ಇವರನ್ನು ಎತ್ತಿನ ಬಂಡಿ ಗಾಡಿಯಲ್ಲಿ ಸ್ವಾಗತಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಮತ್ತು ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರುಗಳು ವಿವಿಧ ವಾದ್ಯ ಮೇಳದೊಂದಿಗೆ ಗ್ರಾಮದ ಕೇರಿಗಳಲ್ಲಿ ಸಂಚರಿಸಿ ಜನಪದ ಶೈಲಿಯ ಅರಳಿಕಟ್ಟೆಯಲ್ಲಿ ಸಮಾರಂಭ ಆಯೋಜಿಸಿ ಉದ್ಘಾಟಿಸಲಾಯಿತು. ನಂತರ ಮಾತನಾಡಿದ ಶಾಸಕ ಟಿ ರಘುಮೂರ್ತಿ…

ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ

ಬೆಂಗಳೂರು, ಮಾ,12:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು ಡಾ. ಬಿ ಎನ್ ಗಂಗಾಧರ, ಪ್ರೊ. ಗೈತಿ ಹಾಸನ್ ಅವರಿಗೆ ಸರ್.ಎಂ.ವಿಶ್ವೇಶ್ವರಯ್ಯ, ಪ್ರೊ. ಲಲಿತ್ ಮೋಹನ್ ಪಟ್ನಾಯಕ್, ಪ್ರೊ. ಶೆಟ್ಟಿ ಹುಂತ್ರಿಕೆ ಶೇಖರ್ ಅವರಿಗೆ ಡಾ.ರಾಜಾರಾಮಣ್ಣ, ಪ್ರೊ. ಎಚ್. ನಾಗಭೂಷಣ, ಡಾ. ಜಿ. ವೆಂಕಟಸುಬ್ರ…

 ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಮೊದಲು ಕಡಿಮೆ ಮಾಡಿಕೊಳ್ಳಬೇಕು: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು ಮಾ, 9: ಮೊದಲು ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್‌ ಆಸ್ಪತ್ರೆಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊರತಂದಿರುವ ಕೇವಲ 390 ರೂಪಾಯಿಗಳಲ್ಲಿ ಮಹಿಳಾ ಸಮಗ್ರ ಆರೋಗ್ಯ ಪರೀಕ್ಷೆಯನ್ನು ಮಾಡುವಂತಹ ವಿಶೇಷ ಪ್ಯಾಕೇಜ್‌ಗೆ ಚಾಲನೆ ನೀಡಿ ಮಾತನಾಡಿದರು. ಸೊಸೆ ಅಥವಾ ಮಗಳು ಹೆರಿಗೆ ಆದಾಗ ಮೊದಲು ಕೇಳುವ ಪ್ರಶ್ನೆ ಗಂಡೋ,…

ಕಂದಾಯ ದಾಖಲೆಗಳು ಇನ್ನೂ ಮನೆಬಾಗಿಲಿಗೆ

ಚಳ್ಳಕೆರೆ,ಮಾ,10: ಕ್ಷೇತ್ರ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಗ್ರಾಮೀಣ ಪ್ರದೇಶದ ಹಳ್ಳಿಯ ಜನ ಕಂದಾಯ ಇಲಾಖೆ ಹಲವು ದಾಖಲೆಗಳಾದ ಪಹಣಿ ,ಅಟ್ಲಾಸ್, ಆದಾಯ ಜಾತಿ ಪ್ರಮಾಣ ಪತ್ರ ಮತ್ತು ಇತರೆ ಕಂದಾಯ ದಾಖಲೆಗಳಿಗೆ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸುವ ಸಲುವಾಗಿ ಸರ್ಕಾರ ನೂತನ ಕಾರ್ಯಕ್ರಮವನ್ನ ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎಂಬ ವಿನೋತನ ಕಾರ್ಯಕ್ರಮವನ್ನು ರಾಜ್ಯ ವ್ಯಾಪ್ತಿ ಜಾರಿಗೆ ತಂದಿದೆ .ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಸಚಿವರು ಹಾಗೂ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಆದೇಶದಂತೆ ಅಧಿಕಾರಿಗಳೇ…

12ರಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ:  ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಸೂಚನೆ

ಬೆಂಗಳೂರು,ಮಾ,10: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಇದೇ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪರೀಕ್ಷಾ ಕೇಂದ್ರಗಳಿರುವ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠರು, ಕಮಿಷನರ್ ಮತ್ತಿತರ ಅಧಿಕಾರಿಗಳೊಂದಿಗೆ ಬುಧವಾರ ವಿಡಿಯೋ ಸಂವಾದ ನಡೆಸಿದರು. ಈ ಸಭೆಯಲ್ಲಿ ಅವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಕಲು ಹೊಡೆಯುವುದು ಸೇರಿದಂತೆ ಯಾವುದೇ ಅಕ್ರಮಕ್ಕೆ ಕಿಂಚಿತ್ತೂ ಅವಕಾಶ ಮಾಡಿಕೊಡಬಾರದು. ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ…

ಚಿತ್ರ ಡಾನ್ ಬೋಸ್ಕೋದಲ್ಲಿ ಮಹಿಳಾ ದಿನಾಚರಣೆ

ಚಿತ್ರದುರ್ಗ,ಮಾ,10:ಇಲ್ಲಿನ  ಚಿತ್ರ ಡಾನ್ ಬೋಸ್ಕೋ ಸಂಸ್ಥೆಯ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಮತಿ ಸುಧಾ ಅವರು ಮಹಿಳೆಯರು ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು ಆಗ ಮಾತ್ರ ಸುಸ್ಥಿರ ಸಮಾಜ ಕಟ್ಟಬಹುದೆಂದು ಹೇಳಿದರು. ಅಭಿವೃದ್ಧಿಯ ಕಾಲಘಟ್ಟದಲ್ಲಿ ಮಹಿಳೆಯರು ಶಿಕ್ಷಣ ಮತ್ತು ಸಾಮಾಜಿಕವಾಗಿ ಚಲನಶೀಲರಾಗಬೇಕು ಆಗ ಮಾತ್ರ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕರಾದ ಫಾದರ್…

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿದ ಫೊರ್ಟಿಸ್ ಆಸ್ಪತ್ರೆ

ಬೆಂಗಳೂರು,ಮಾ,09: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಫೋರ್ಟಿಸ್ ಆಸ್ಪತ್ರೆ ಹಾಗೂ ವಿದ್ಯಾ ಫೌಂಡೇಷನ್ ಸಹಭಾಗಿತ್ವದಲ್ಲಿ 200ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಫೊರ್ಟಿಸ್ ಆಸ್ಪತ್ರೆ ಸ್ತೀರೋಗ ತಜ್ಞೆ ಡಾ. ಗಾಯತ್ರಿ ಕಾಮತ್, ಬಡ ಕುಟುಂಬದ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವುದು ಅಪರೂಪ. ಆರ್ಥಿಕ ಪರಿಸ್ಥಿತಿಯ ಕಾರಣ ಅವರು…

ಉಜ್ವಲ ಭವಿಷ್ಯಕ್ಕೆ ನ್ಯಾನೋ ತಂತ್ರಜ್ಞಾನ ನಿರ್ಣಾಯಕ: ಬೊಮ್ಮಾಯಿ

ಬೆಂಗಳೂರು,ಮಾ,07: ನ್ಯಾನೋ ತಂತ್ರಜ್ಞಾನದ ಮೂಲಕ ತಯಾರಿಸಿರುವ ನ್ಯಾನೋ ಯೂರಿಯಾ ರಸಗೊಬ್ಬರವು ಪರೀಕ್ಷಾ ಹಂತದಲ್ಲಿ ಯಶಸ್ವಿಯಾಗಿದ್ದು, ಇದು ಮುಂಬರುವ ದಿನಗಳಲ್ಲಿ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವರ್ಚುಯಲ್ ಮಾದರಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ವನ್ನು ಸೋಮವಾರ ಉದ್ಘಾಟಿಸಿ, ಅವರು ಮಾತನಾಡಿದರು. ಈ ಸಮಾವೇಶವು ಬುಧವಾರದವರೆಗೆ ನಡೆಯಲಿದೆ. `ನ್ಯಾನೋ ಯೂರಿಯಾವನ್ನು ರಾಜ್ಯದ ಎಲ್ಲ ಕೃಷಿ ವಿ.ವಿ.ಗಳಲ್ಲಿ ಈಗಾಗಲೇ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಳ್ಳೆಯ ಫಲಿತಾಂಶ ಬಂದಿದೆ. ಇದು ಮುಂಬರುವ ದಿನಗಳಲ್ಲಿ…

ಉಕ್ರೇನ್ʼನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳಿ ನೆರವಾಗಿ;ಕದ್ರಕ್ಕೆ ಎಚ್ ಡಿ ಕೆ ಆಗ್ರಹ

ಬೆಂಗಳೂರು,ಮಾ,07: ಉಕ್ರೇನ್ ದೇಶದಿಂದ ವಾಪಸ್ ಬಂದು ವೈದ್ಯ ಶಿಕ್ಷಣದಲ್ಲಿ ಅತಂತ್ರರಾಗಿರುವ ಎಲ್ಲ ವಿದ್ಯಾರ್ಥಿಗಳ ನೆರವಿಗೆ ಕೇಂದ್ರ ಸರಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಅಲ್ಲದೆ, ಜೀವ ಉಳಿಸಿಕೊಂಡು ರಾಜ್ಯಕ್ಕೆ ವಾಪಸ್ ಬಂದಿರುವ ಎಲ್ಲ ವಿದ್ಯಾರ್ಥಿಗಳಿಗೂ ರಾಜ್ಯ ಸರಕಾರ ಮಾನವೀಯ ದೃಷ್ಟಿಯಿಂದ ಉಚಿತ ವೈದ್ಯ ಶಿಕ್ಷಣ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು ಕೆಲ ಮಹತ್ವದ ಅಂಶಗಳನ್ನು ಪ್ರಸ್ತಾಪ ಮಾಡಿದ್ದಾರೆ. ಅವರ…

ಮಾರ್ಚ್ 7ರಿಂದ ಮೂರು ದಿನ `ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ

ಬೆಂಗಳೂರು,ಮಾ,02: `ಸುಸ್ಥಿರ ಅಭಿವೃದ್ಧಿಗಾಗಿ ನ್ಯಾನೋ ತಂತ್ರಜ್ಞಾನ’ ಎನ್ನುವ ಧ್ಯೇಯದೊಂದಿಗೆ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶವು ಪ್ರಥಮ ಬಾರಿಗೆ ವರ್ಚುಯಲ್ ಮಾದರಿಯಲ್ಲಿ ಮಾರ್ಚ್ 7ರಿಂದ 9ರವರೆಗೆ ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ಕ್ಕೆ…

ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್ ತರಗತಿಯಿಂದ ಶೇ.67ರಷ್ಟು ಬಾಲಕಿಯರು ವಂಚಿತರಾಗಿದ್ದಾರೆ: ಸೇವ್ ದಿ ಚಿಲ್ಡ್ರನ್ ಸಂಸ್ಥೆ ವರದಿ

ಬೆಂಗಳೂರು,ಮಾ,02: ಕೋವಿಡ್ ಸಂದರ್ಭದಲ್ಲಿ ಕೊಳಗೇರಿ ಪ್ರದೇಶದ ಹೆಣ್ಣು ಮಕ್ಕಳ ಕುರಿತು ಸೇವ್ ದಿ ಚಿಲ್ಡ್ರನ್ ಅಧ್ಯಯನ ನಡೆಸಿದ್ದು, ಆತಂಕಕಾರಿ ವಿಷಯಗಳನ್ನು ವರದಿಯಲ್ಲಿ ಬಹಿರಂಗ ಪಡಿಸಿದೆ. ಹೌದು, ಬುಧವಾರ ವರ್ಚುವಲ್ ಮೂಲಕ “ ದಿ ವರ್ಲ್ಡ್ ಆಫ್ ಇಂಡಿಯನ್ ಗರ್ಲ್ಸ್-ವಿಂಗ್ಸ್ 2022” ಶೀರ್ಷಿಕೆಯಲ್ಲಿ ಸೇವ್ ದಿ ಚಿಲ್ಡ್ರನ್ ಸಂಸ್ಥೆಯು ವರದಿ ಬಿಡುಗಡೆ ಮಾಡಿದೆ. ಕೋವಿಡ್ ಸಾಂಕ್ರಮಿಕದ ಕಾರಣ ಬಾಲಕರಿಗಿಂತ ಬಾಲಕರಿಯರೇ ಹೆಚ್ಚಾಗಿ ಶಾಲೆ ತೊರೆದಿದ್ದಾರೆ. ಕೊಳಚೆ ಪ್ರದೇಶ ಹಾಗೂ ಗ್ರಾಮೀಣ ಭಾಗದಲ್ಲಿ ಶೇ.67ರಷ್ಟು ಬಾಲಕಿಯರು ಆನ್‌ಲೈನ್ ತರಗತಿಯನ್ನು…

ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ವಂಡರ್‌ಲಾದಲ್ಲಿ ಮಹಿಳೆಯರಿಗೆ ಮಾತ್ರ ಪ್ರವೇಶ

ಬೆಂಗಳೂರು, ಮಾ,02:ಅಂತರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ವಂಡರ್‌ಲಾದಲ್ಲಿ ಮಾರ್ಚ್‌ 8 ರಂದು ಕೇವಲ ಮಹಿಳೆಯರಿಗೆ ಮಾತ್ರ ಪ್ರವೇಶವಿದ್ದು, ಒಂದು ಟಿಕೆಟ್ ಖರೀದಿಸಿದರೆ ಮತ್ತೊಬ್ಬರಿಗೆ ಉಚಿತ ಪ್ರವೇಶ ಘೋಷಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ವಂಡರ್‌ಲಾ ಆ ದಿನದಂದು ಕೇವಲ ಮಹಿಳೆಯರು ಹಾಗೂ ಯುವತಿಯರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. 10 ವರ್ಷ ಒಳಗಿನ ಗಂಡು ಮಕ್ಕಳಿಗೆ ಪ್ರವೇಶವಿದ್ದು, ಉಳಿದಂತೆ ಯಾವ ಪುರುಷರಿಗೂ ಆ ದಿನ ಪ್ರವೇಶವಿರುವುದಿಲ್ಲ. ಇದಷ್ಟೆ ಅಲ್ಲದೆ, ವಂಡರ್‌ಲಾ ರೆಸಾರ್ಟ್‌HBನಲ್ಲಿಯೂ ಸಹ ಮಹಿಳೆಯರಿಗೆ…

ದೇಶದಲ್ಲೇ ವಿನೂತನ ಪು ನೀತ್ಉಪಗ್ರಹ ಅಭಿವೃದ್ಧಿ ಯೋಜನೆಗೆ ಚಾಲನೆ

ಬೆಂಗಳೂರು,ಫೆ,28: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲೆಗಳ ಮಕ್ಕಳೇ ಉಪಗ್ರಹ ಅಭಿವೃದ್ಧಿ ಮಾಡಲಿದ್ದು, ಇದಕ್ಕೆ ದಿವಂಗತ ನಟ ಪುನೀತ್ ರಾಜಕುಮಾರ್ ಗೌರವಾರ್ಥವಾಗಿ ಅವರ ಹೆಸರನ್ನೇ ಇಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. `ರಾಷ್ಟ್ರೀಯ ವಿಜ್ಞಾನ ದಿನ’ದ ಅಂಗವಾಗಿ ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ಮತ್ತು ಭಾರತೀಯ ತಂತ್ರಜ್ಞಾನ…

ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಳಗಾವಿ, ಫೆ.28: ಕಿತ್ತೂರಿನಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ‌ಸಂಪೂರ್ಣವಾಗಿ ಜಲಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಬೆಳಗಾವಿ ಜಿಲ್ಲೆಯಿಂದ ಆರಂಭಿಸಲಾಗುವ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಢಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಒಟ್ಟು 3972 ಕೋಟಿ ರೂಪಾಯಿ ವೆಚ್ಚದ 238 ಕಿ.ಮೀ. ಉದ್ದದ…

ವಿ.ವಿ.ಗಳಲ್ಲಿ ಇ-ಆಫೀಸ್ ಕಡ್ಡಾಯ: ಮಾರ್ಚ್ 1ರ ಗಡುವು ವಿಧಿಸಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು,ಫೆ,25: ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಅನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, `ಇ-ಆಫೀಸ್’ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ…

1 7 8 9 10 11 33
error: Content is protected !!