Browsing: ರಾಷ್ಟ್ರೀಯ

ರಾಷ್ಟ್ರೀಯ

ಶಶಿಕಲಾಗೆ ಜೈಲಿನಲ್ಲಿ ವಿಶೇಷ ಅತಿಥ್ಯ: ೨ತಿಂಗಳಲ್ಲಿ ವರದಿ ಸಲ್ಲಿಸಲು ಹೈ ಗಡವು

ಬೆಂಗಳೂರು,ಜೂ,೧೧: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತ ಆಪ್ತೆ ಶಶಿಕಲಾಗೆ ಜೈಲಲ್ಲಿ ನೀಡಲಾಗುತ್ತಿದ್ದ ವಿಶೇಷ ಆತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಇನ್ನೂ ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ವಿಕೆ ಶಶಿಕಲಾಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿತ್ತು. ಜೈಲು ವರಿಷ್ಠಾಧಿಕಾರಿಗಳು ಲಂಚ ಪಡೆದು ಜೈಲಿನಲ್ಲಿ ಆಕೆಗೆ ವಿಶೇಷ ಸೌಲಭ್ಯಗಳನ್ನು ಒದಗಿಸಿದ್ದರು ಎಂಬ ಗಂಭೀರ ಆರೋಪ ವ್ಯಾಪಕ ಸದ್ದು ಮಾಡಿತ್ತು.…

ಎರಡು ವರ್ಷ ಸಾಧನೆ;ಸಚಿವರ ಜೊತೆ ಮೋದಿ ವೈಯಕ್ತಿಕ ಸಭೆ?

ನವದೆಹಲಿ,ಜೂ,೧೧:ಕೇಂದ್ರ ಸರ್ಕಾರದ ಎರಡು ವರ್ಷದಲ್ಲಿ ಆಗಿರುವ ಕೆಲಸ ಕುರಿತಂತೆ ಪ್ರಗತಿ ಪರಿಶೀಲನೆ ಮಾಡುತ್ತಿರುವ ಪ್ರಧಾನಿ ಮೋದಿ ಅವರು ಕೇಂದ್ರ ಸಚಿವರ ಜೊತೆ ವೈಯಕ್ತಿಕವಾಗಿ ಸಭೆ ನಡೆಸಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ ಈ ವೇಳೆ ತಮ್ಮ ವೈಯಕ್ತಿಕ ವರ್ಚಸ್ಸು ಮತ್ತು ಮುಂದಿನ ದಿನಗಳ ಸರ್ಕಾರದ ಯೋಜನೆಗಳ ಕುರಿತಂತೆಯೂ ಈ ಸಭೆಯಲ್ಲಿ ಚರ್ಚಿಸಲಾಗುತ್ತಿದೆ ಎನ್ನಲಾಗಿದೆ. ದೆಹಲಿಯ ೭ ಲೋಕ ಕಲ್ಯಾಣ ಮಾರ್ಗ್‌ನಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸದಲ್ಲಿ ಈ ಸಭೆ ನಡೆಯುತ್ತಿದ್ದು, ಈಗಾಗಲೇ ಇಂತಹ ಅಂತಹ ಮೂರು…

ಪೆಟ್ರೋಲ್ ಬೆಲೆಯಲ್ಲಿ ಮತ್ತೇ ಏರಿಕೆ

ನವದೆಹಲಿ,ಜೂ,೧೧: ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಈ ಸಂದರ್ಭದಲ್ಲೂ ಮತ್ತೇ ಇಮದು ತೈಲ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ದರ ೨೯ ಪೈಸೆ ಮತ್ತು ಡೀಸೆಲ್ ದರ ೨೯ ಪೈಸೆ ಏರಿಕೆ ಮಾಡಿವೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶುಕ್ರವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ…

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ

ನವದೆಹಲಿ, ಜೂ, ೧೧: ಕೊರೊನಾ ವೈರಸ್ ಭಾರತದಲ್ಲಿ ದಿನೇ ದಿನೇ ಕಡಿಮೆಗೊಳ್ಳುತ್ತಿದೆ ಕಳೆದ ೨೪ ಗಂಟೆಯಲ್ಲಿ ಅದರ ಸಂಖ್ಯೆ ಮತ್ತಷ್ಟು ಇಳಿಮುಖವಾಗಿದ್ದು ಸದ್ಯ ನಿಟ್ಟುಸಿರು ಬಿಡುವಂತಾಗಿದೆ. ಕಳೆದ ೨೪ ಗಂಟೆಯಲ್ಲಿ ೬,೧೦೦ಕ್ಕೂ ಹೆಚ್ಚಾಗಿದ್ದ ಸಾವಿನ ಸಂಖ್ಯೆ ೩,೪೦೩ಕ್ಕೆ ತಗ್ಗಿದೆ. ಒಂದೇ ದಿನ ೯೧,೭೦೨ ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ೧,೩೪,೫೮೦ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾರತದಲ್ಲಿ ಒಟ್ಟು ೨,೯೨,೭೪,೮೨೩ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ…

ಕೋವಿಡ್ ಮೂರನೆ ಅಲೆ; ಮಾರ್ಗಸೂಚಿ ಬಿಡುಗಡೆ

ನವದೆಹಲಿ,ಜೂ,10:ದೇಶದಲ್ಲಿ ‌ನಿಧಾನಗತಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ.ಈಗ ಮೂರನೇ ಅಲೆಯ ಕುರಿತು ಸರ್ಕಾರ ಪೂರ್ವ ಸಿದ್ದತೆಗಳ ಬಗ್ಗೆ ತಯಾರಿ ನಡೆಸುತ್ತಿದೆ. ಮೂರನೇ ಅಲೆಯಲ್ಲಿ ವೈರಸ್ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಕೆಲವು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. “ಮಕ್ಕಳಲ್ಲಿ ಸೋಂಕು ಗಂಭೀರ ಸ್ವರೂಪ ಪಡೆಯುವುದಿಲ್ಲ. ಇದಕ್ಕೆ ಯಾವುದೇ ಪುರಾವೆ ಸದ್ಯಕ್ಕೆ ದೊರೆತಿಲ್ಲ” ಎಂದು ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಈಗಾಗಲೇ ಹೇಳಿದ್ದಾರೆ. ಆದರೂ ಮುಂಜಾಗ್ರತಾ ಕ್ರಮವಾಗಿ 18 ವರ್ಷಕ್ಕಿಂತ ಕೆಳಗಿನ ಮಕ್ಕಳಲ್ಲಿ ಕೊರೊನಾ ಬಂದರೆ ಏನು…

ಕಟ್ಟಡ ಕುಸಿದು ಮುಂಬೈನಲ್ಲಿ ೧೧ ಸಾವು

ಮುಂಬೈ, ಜೂ, ೧೦; ನಾಲ್ಕು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ೧೧ ಜನ ಮೃತಪಟ್ಟ ಘಟನೆ ಮುಂಬೈ ನಗರದ ಪಶ್ಚಿಮ ಭಾಗದ ಮಲಾಡ್ ಪ್ರದೇಶದಲ್ಲಿ ಸಂಭಿವಿಸಿದೆ ನಾಲ್ಕು ಅಂತಸ್ತಿನ ಕಟ್ಟಡ ಬುಧವಾರ ತಡರಾತ್ರಿ ಕುಸಿದು ಮತ್ತೊಂದು ಕಟ್ಟಡದ ಮೇಲೆ ಬಿದ್ದಿದೆ. ಇದುವರೆಗೂ ೧೮ ಜನರನ್ನು ರಕ್ಷಣೆ ಮಾಡಲಾಗಿದ್ದು, ೬ ಮಕ್ಕಳು ಸೇರಿದಂತೆ ೧೧ ಜನರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಅವಶೇಗಳಡಿ ಸಿಲುಕಿದ ಜನರಿಗಾಗಿ ಹುಡುಕಾಟವನ್ನು ನಡೆಸಲಾಗುತ್ತಿದೆ. ಘಟನೆಯಲ್ಲಿ ೬ ಜನರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲು…

ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಮತ್ತಷ್ಟು ಇಳಿಕೆ

ನವದೆಹಲಿ, ಜೂ 08:ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಪ್ರಕರಣಗಳು ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 86,498 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2123 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,82,282 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 23,61,98,726 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಲಸಿಕೆ ವಿಳಂಬ ನೀತಿಯಿಂದ ಹಲವರ ಸಾವಿಗೆ ಕಾರಣರಾದ ಮೋದಿ-ಮಮತಾ ಟೀಕೆ

ಕೋಲ್ಕತ್ತ,ಜೂ,೦೭: ಮೋದಿಯವರು ಈಗ ೧೮ ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತದೆಎಂಬ ನಿರ್ಧಾರವನ್ನು ಈ ಹಿಮದೆಯೇ ತಗೆದುಕೊಂಡಿದದರೆ ಜಿವ ಉಳಿಯುತ್ತಿತ್ತು ಇದರಿಂದ ಅನೇಕರ ಸಾವಿಗೆ ಕಾರನವಾಗಿದೆ ಎಂದು ಮೋದಿ ಹೇಳಿಕೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದರೆ. ಲ್ಲರಿಗೂ ಉಚಿತವಾಗಿ ಲಸಿಕೆ ನೀಡುವ ನಮ್ಮ ದೀರ್ಘಕಾಲದ ಬೇಡಿಕೆ ಬಗ್ಗೆ ಫೆಬ್ರುವರಿ ೨೧ರಂದು ಮತ್ತು ಹಲವು ಬಾರಿ ಪ್ರಧಾನಿಗೆ ಪತ್ರ ಬರೆದಿದ್ದೆ. ಇದನ್ನು ಕೇಳಲು ಅವರಿಗೆ ನಾಲ್ಕು ತಿಂಗಳು ಬೇಕಾಯಿತು. ಅಂತಿಮವಾಗಿ, ಬಹಳ ಒತ್ತಡದ ಬಂದ ಮೇಲೆ ಅವರು…

ಭಾರತದಲ್ಲಿ ಹೊಸ ಮಾದರಿಯ ವೈರಸ್ ಪತ್ತೆ

ಪುಣೆ, ಜೂ,7: ನಿಧಾನಕ್ಕೆ ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುತ್ತಿರುವ ಈ ವೇಳೆ ಹೊಸ ಮಾದರಿಯ ವೈರಸ್ ಪತ್ತೆಯಾಗಿದೆ. ಇದನ್ನು B.1.1.28.2 ಕೊರೊನಾವೈರಸ್‌ ಎಂದು ಕರೆಯಲಾಗಿದ್ದು ಪುಣೆಯ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಪತ್ತೆ ಹಚ್ಚಿದೆ. ಬ್ರೆಜಿಲ್ ಮತ್ತು ಯುಕೆಯಿಂದ ಆಗಮಿಸಿದ ಪ್ರಯಾಣಿಕರಲ್ಲಿ ಸಂಗ್ರಹಿಸಿದ ಗಂಟಲು ಮತ್ತು ಮೂಗಿನ ದ್ರವಗಳಲ್ಲಿ ಈ ಹೊಸ ರೂಪಾಂತರಿ ಕೊರೊನಾ ವೈರಸ್‌ ಪತ್ತೆಯಾಗಿದೆ. ಸಿರಿಯನ್ ಹ್ಯಾಮ್ಸ್ಟರ್ ಮಾದರಿಯಲ್ಲಿ ಪತ್ತೆಯಾದ ರೂಪಾಂತರಿ ವೈರಸ್‌ನ ತೀವ್ರತೆಯನ್ನು ಪರೀಕ್ಷಿಸಲಾಗುತ್ತಿದ್ದು D614G ರೂಪಾಂತರಿಯೊಂದಿಗೆ ಹೋಲಿಕೆ ಮಾಡಲಾಗಿದೆ. ಹೊಸ…

ಜೂನ್ 21 ರ ನಂತರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ- ಮೋದಿ

ನವದೆಹಲಿ,ಜೂ,07:ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾಡೊದ ಭಾಷಣದಲ್ಲಿ ಬಹುತೇಕ ವ್ಯಾಕ್ಸಿನ್ ಬಗ್ಗೆಯೇ ಮೀಸಲಿಟ್ಟಿದ್ದು ಸಲಿಕೆಯನ್ನು ನವೆಂಬರ್ ಹೊತ್ತಿಗೆ ಎಲ್ಲರಿಗೂ ಲಸಿಕೆ ಹಾಕಲಾಗುತ್ತದೆ ಎಂದರು. ಇನ್ನೂ ಲಸಿಕೆ ಬಗ್ಗೆ ಟೀಕಿಸುತ್ತಿದ್ದವರಿಗೆ ಉತ್ತರ ನೀಡಿದ ಮೋದಿ ಜೂನ್ 21 ರ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಹೇಳಿದರು. ಈ ಮೊದಲು ಲಸಿಕೆ ವಿತರಣೆ ಸಂಬಂಧ ರಾಜ್ಯಗಳಿಗೆ ಶೇ. 50 ಜವಾಬ್ದಾರಿ ವಹಿಸಲಾಗಿತ್ತು. ಆದರೆ ಲಸಿಕೆ ವಿತರಣೆ ಕುರಿತು ಒಂದಷ್ಟು ಟೀಕೆಗಳು ವ್ಯಕ್ತವಾದ್ದರಿಂದ…

100 ಗಡಿ ದಾಟಿದ ಪೆಟ್ರೋಲ್

ಬೆಂಗಳೂರು,ಜೂ,07:ತೈಲ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವ ಕಾರಣ ರಾಜ್ಯದ ಕೆಕ ಜಿಲ್ಲೆಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ಗಡಿ ದಾಟಿದೆ. ಕಳೆದ ವಾರವೇ ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ 100 ಗಡಿ ದಾಟಿದ್ದು ಈಗ ರಾಜ್ಯದ ಕೆಲ ಜಿಲ್ಲೆಗಳಲ್ಲಿ 100 ಗಡಿ ದಟಿದೆ. ಬಳ್ಳಾರಿ ಮತ್ತು ಶಿರಸಿಯಲ್ಲಿ ಪೆಟ್ರೋಲ್ ದರವು ಭಾನುವಾರ ₹100ರ ಗಡಿ ದಾಟಿದೆ. ಬಳ್ಳಾರಿಯಲ್ಲಿ ಲೀಟರ್ ಪೆಟ್ರೋಲ್ ದರ ₹100.08, ಶಿರಸಿಯಲ್ಲಿ ₹100.28 ಆಗಿದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ₹100ಕ್ಕಿಂತ…

ದೇಶದಲ್ಲಿ ಕೊರೊನಾ ಪ್ರಕರಣ ಮತ್ತಷ್ಟು ಇಳಿಕೆ

ನವದೆಹಲಿ, ಜೂ,06:ಕೊರೊನಾ ಸೋಂಕಿತ ಒ್ರಕರಣಗಳು ದೇಶದಲ್ಲಿ ಮತ್ತಷ್ಟು ಇಳಿಮುಖವಾಗುತ್ತಾ ಸಾಗಿದ್ದು ಕಳೆದ 24 ಗಂಟೆಯಲ್ಲಿ, 1,14,460 ಕೋವಿಡ್ ಪ್ರಕರಣಗದೃಢಪಟ್ಟಿದೆ. ಇದು ಕಳೆದ 2 ತಿಂಗಳಲ್ಲೇ ಪತ್ತೆಯಾದ ಕನಿಷ್ಟ ಸಂಖ್ಯೆಯಾಗಿದೆ. ಇದೇ ವೇಳೆ ದೇಶದಲ್ಲಿ 2677 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬಂದಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,46,759ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ…

ಮಲ್ಯ ಆಸ್ತಿ ಮಾರಾಟಕ್ಕೆ ಗ್ರೀನ್ ಸಿಗ್ನಲ್

ನವದೆಹಲಿ,ಜೂ,05: ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನ್ಯಾಯಾಲಯವು ಬ್ಯಾಂಕುಗಳಿಗೆ ವಿಜಯ್ ಮಲ್ಯಗೆ ಸೇರಿದ ಕೆಲವು ರಿಯಲ್ ಎಸ್ಟೇಟ್ ಆಸ್ತಿಗಳು ಮತ್ತು ಸೆಕ್ಯೂರಿಟಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ ಇದರೊಂದಿಗೆ ಪರಾರಿಯಾದ ಉದ್ಯಮಿಯ ಸಾಲವನ್ನು ವಸೂಲಿ ಮಾಡಲು ಅವಕಾಶ ಮಾಡಿಕೊಟ್ಟಿದೆ. ಪಿಎಂಎಲ್‌ಎ ನ್ಯಾಯಾಲಯ 5,600 ಕೋಟಿ ರೂ. ಬಾಕಿ ಸಾಲದ ಮೊತ್ತವನ್ನು ಹಿಂಪಡೆಯಲು ವಿಜಯ್ ಮಲ್ಯ ಅವರಿಗೆ ಸೇರಿದ ಕೆಲ ರಿಯಲ್ ಎಸ್ಟೇಟ್ ಆಸ್ತಿಗಳನ್ನು ಮತ್ತು ಸೆಕ್ಯೂರಿಟಿಯನ್ನು ಮಾರಾಟ ಮಾಡಲು ಬ್ಯಾಂಕುಗಳಿಗೆ ಅನುಮತಿ ನೀಡಿದೆ. ಇದು ಹಿಂದೆ…

ಭಾರತದಲ್ಲಿ ಇಳಿಮುಖಕಾಣುತ್ತಿರುವ ಕೋವಿಡ್-೧೯

ನವದೆಹಲಿ,ಜೂ, ೦೫: ಸದ್ಯ ದೇಶದಲ್ಲಿ ದಿನ ದಿನ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು ಒಂದು ರೀತಿ ನಿಟ್ಟುಸಿರು ಬಿಟ್ಟಂತಾಗಿದೆ.ಕಳೆದ ೨೪ ಗಂಟೆಯಲ್ಲಿ ೧,೨೦,೫೨೯ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ೩,೩೮೦ ಮಂದಿ ಮೃತಪಟ್ಟಿದ್ದು, ಶುಕ್ರವಾರ ಒಂದೇ ದಿನ ೧,೯೭,೮೯೪ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಹಾಗೆಯೇ ಆರೋಗ್ಯ ಸಚಿವಾಲಯದ ಪ್ರಕಾರ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ೨,೮೬,೯೪,೮೭೯ಕ್ಕೆ ಏರಿಕೆಯಾಗಿದ್ದು, ಇದುವರೆಗೆ ದೇಶದಲ್ಲಿ ಒಟ್ಟು ೨,೬೭,೯೫,೫೪೯ ಮಂದಿ ಗುಣಮುಖರಾಗಿದ್ದಾರೆ. ಹೊಸ ಸೋಂಕಿತರ ಭಾರೀ ಇಳಿಕೆ ಕಾಣುತ್ತಿರುವುದು ದೇಶದ ಜನರಲ್ಲಿ…

ಕೊರೊನಾ ಉಲ್ಬಣಕ್ಕೆ ಸರ್ಕಾರದ ಗೊಂದಲವೇ ಕಾರಣ:ಅಮಥ್ರ್ಯಸೇನ್

ಮುಂಬೈ,ಜೂ.೫: ಇಷ್ಟೊಂದು ದೊಡ್ಡ ಮಟ್ಟದ ಕೊರೊನಾ ಉಲ್ಬಣಕ್ಕೆ ಸರ್ಕಾರದ ನಿರ್ಲಕ್ಷ್ಯ ಹಾಗೂ ಗೊಂದಲವೇ ಕಾರಣ ಎಂದು ಎಂದು ನೋಬಲ್ ಪ್ರಶಸ್ತಿ ಪುರಸ್ಕೃತ ಆರ್ಥಶಾಸ್ತ್ರಜ್ಞ ಅಮಥ್ರ್ಯಸೇನ್ ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರ ಸೇವಾ ದಳ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಫಾರ್ಮಾ ಉದ್ಯಮ ಸಾಕಷ್ಟು ಅಭಿವೃದ್ಧಿ ಹೊಂದಿದೆ.ಇರುವ ಸೌಲಭ್ಯ ಸದುಪಯೋಗಪಡಿಸಿಕೊಂಡು ಕೊರೊನಾ ಸೋಂಕನ್ನು ಹೋಗಲಾಡಿಸಬಹುದಾಗಿತ್ತು. ಅದಕ್ಕೆ ಸರ್ಕಾರ ಅವಕಾಶ ನೀಡಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಎರಡನೆ ಅಲೆ ಕಾಣಿಸಿಕೊಂಡಾಗ ಒಂದು ದಿನದಲ್ಲೇ ೪ ಲಕ್ಷಕ್ಕೂ ಹೆಚ್ಚು ಸೋಂಕು ಪ್ರಕರಣಗಳು…

ಭಾರತೀಯಾ ನೌಕಪಡೆಗೆ ಆರು ಜಲಾಂರ್ಗಾಮಿ ನೌಕೆಗಳ ನಿಮರ್ಮಾಣಕ್ಕೆ ಅನುಮೋದನೆ

ನವದೆಹಲಿ,ಜೂ,04:ತಮ್ಮ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಭಾರತೀಯ ನೌಕಾಪಡೆಗಾಗಿ ಆರು ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸುವ ಮೆಗಾ ಯೋಜನೆಗೆ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಹೆಚ್ಚುತ್ತಿರುವ ಚೀನಾ ಅತಿಕ್ರಮಣವನ್ನು ನಿರ್ವಹಿಸುವ ನಿಟ್ಟಿನಲ್ಲಿ ಮತ್ತು ನೌಕಾಪಡೆಗಳ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಇಲಾಖೆ ಮತ್ತೆ ಆರು ಹೊಸ ಸಬ್ ಮೆರಿನ್ ಗಳ ನಿರ್ಮಾಣಕ್ಕೆ ಅಸ್ತು ಎಂದಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ಸಭೆಯಲ್ಲಿ ಈ…

ಭಾರತದಲ್ಲಿ ಹತೋಟಿಗೆ ಬಂದ ಕೊರೊನಾ ಪ್ರಕರಣಗಳು;ಒಂದೇ ದಿನ 1,34,154 ಮಂದಿಗೆ ಸೋಂಕು

ನವದೆಹಲಿ, ಜೂ,03:ಕೋವಿಡ್-೧೯ ಸರ್ಕಾರ ತಗೆದು ಕೊಂಡ ನಿಯಂತ್ರಣ ಕ್ರಮದಿಂದ ಸದ್ಯ ಒಂದು ಹಂತದವರೆಗೂ ಹತೋಟಿಗೆ ಬಂದಂತೆ ಕಾಣುತ್ತಿದೆ. ಪ್ರತಿನಿತ್ಯ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ 1,00,000ಕ್ಕಿಂತಲೂ ಹೆಚ್ಚಿದ್ದು, ಸಾವಿನ ಪ್ರಮಾಣದಲ್ಲೂ ಇಳಿಮುಖ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 1,34,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,11,499 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2,887 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲಿ ಒಟ್ಟು…

ಕೋವಿಡ್ ಶೀಲ್ಡ್,ಕೋವ್ಯಾಕ್ಸಿನ್ ಖರೀದಿ ಕುರಿತ ಅಂಕಿ- ಅಂಶ ಸಲ್ಲಿಸಲು ಕೇದ್ರಕ್ಕೆ ಸುಪ್ರೀಂ ಆದೇಶ

ನವದೆಹಲಿ,ಜೂ,02: ಕೊರೊನಾ ಸೋಂಕಿತ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಖರೀದಿ ಮಾಡಿರುವ ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಪುಟ್ನಿಕ್ V ಲಸಿಕೆಗಳ ಅಂಕಿ-ಸಂಖ್ಯೆಗಳ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಎರಡು ವಾರಗಳಲ್ಲಿ ಎಲ್ಲಾ ವಿವರಗಳನ್ನೂ ಪ್ರಮಾಣಪತ್ರದಲ್ಲಿ ಸಲ್ಲಿಸುವಂತೆ ಕೋರ್ಟ್ ಹೇಳಿದೆ. ಸಂಗ್ರಹ ಮಾಡಿರುವ ಲಸಿಕೆಗಳ ದಿನಾಂಕ, ಸಂಗ್ರಹಕ್ಕೆ ಆದೇಶ ನೀಡಿದ ದಿನಾಂಕ, ಲಸಿಕೆಗಳ ಪ್ರಮಾಣ ಸಹಿತ ಸರ್ಕಾರಕ್ಕೆ ಮಾಹಿತಿ ನೀಡಬೇಕೆಂದು ಕೋರ್ಟ್ ಹೇಳಿದೆ. ಇನ್ನು ಶೇಕಡವಾರು ಜನಸಂಖ್ಯೆಗೆ ನೀಡಿರುವ ಲಸಿಕೆಯ ವಿವರಗಳನ್ನೂ ಕೋರ್ಟ್…

ಸಿಎಸ್ ವಾಪಾಸ್ ಕಳೆಸಲಾಗದು-ಮೋದಿಗೆ ಪತ್ರ ಬರೆದ ಮಮತಾ

ಕೋಲ್ಕತಾ,ಮೇ,೩೧: ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರ ಸೇವೆಯನ್ನು ಹಿಂಪಡಡೆಯವಂತೆ ಕೇಂದ್ರ ಸರ್ಕಾರ ನೀಡಿದ ಅದೇಶದ ಮೂಲಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸಂಘರ್ಷ ಮುಂದುವರೆದಿದೆ. ಯಾವುದೇ ಕಾರಣಕ್ಕೂ ಮುಖ್ಯಕಾರ್ಯದರ್ಶಿ ಅವರನ್ನು ಬಿಟ್ಟುಕೊಡುವುದಿಲ್ಲ ಎಂದು ಮಮತಾ ಪ್ರಧಾನಿ ಮೋದಿಯವರಿಗೆ ಪತ್ರವನ್ನು ರವಾನಿಸಿದ್ದಾರೆ ಈ ಕುರಿತು ಇಂದು ೫ ಪುಟಗಳ ಪತ್ರವನ್ನು ಪ್ರಧಾನಿಗೆ ಬರೆದಿರುವ ಸಿಎಂ ಮಮತಾ, ಮೂರು ತಿಂಗಳ ವಿಸ್ತರಣೆ ನೀಡಿ ಮುಖ್ಯ ಕಾರ್ಯದರ್ಶಿಗಳ ಸೇವೆಯನ್ನು ವಿಸ್ತರಿಸಿ ಇದೀಗ…

ಸೆಟ್ರಲ್ ವಿಸ್ಟ್ರಾ ಯೋಜನೆ ಸ್ಥಗಿತಗೊಳಿಸಲು ಕೋರಿದ್ದ ಅರ್ಜಿ ವಜಾ

ನವದೆಹಲಿ,ಮೇ,೩೧: ಸೆಂಟ್ರಲ್ ವಸ್ಟಾ ನಿರ್ಮಾಣವನ್ನು ಸ್ಥಗಿತಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಈ ಯೋಜನೆ ಒಂದು ರಾಷ್ಟ್ರೀಯ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಹೇಳಿದೆ. ಅಲ್ಲದೆ ಈ ಅರ್ಜಿ ನಿಜವಾದ ಅರ್ಜಿಯಲ್ಲಿ ಇದು ಅರ್ಜಿದಾರರ ಪ್ರೇರಿತವಾಗಿದೆ ಹಾಗಾಗಿ ಅರ್ಜಿಯನ್ನು ೧,೦೦,೦೦೦ ವೆಚ್ಚದೊಂದಿಗೆ ವಜಾಗೊಳಿಸಲಾಗಿದೆ ಎಂದು ನ್ಯಾಯಪೀಠ ತಿಳಿಸಿದೆ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ವಿಭಾಗೀಯ ಪೀಠವು ಸೆಂಟ್ರಲ್ ವಿಸ್ಟಾ ಅವೆನ್ಯೂದಲ್ಲಿನ ಕೆಲಸವು ಸೆಂಟ್ರಲ್ ವಿಸ್ಟಾ ಪ್ರಾಜೆಕ್ಟ್‌ನಲ್ಲಿನ ಕೆಲಸದ…

1 3 4 5 6 7 8
error: Content is protected !!