Browsing: ಸಿನೆಮಾ

ಸಿನೆಮಾ

ಚಂದನವನ ಫಿಲ್ಮ್ ಕ್ರಿಕೆಟ್ ಅವಾರ್ಡ್ ,ಶಿವರಾಜ್ ಕುಮಾರ್ ಗೆ ಜೀವಮಾನ ಪ್ರಶಸ್ತಿ

ಕನ್ನಡದ ಸೂಪರ್‌ಸ್ಟಾರ್ ಶಿವ ರಾಜಕುಮಾರ್ ಅವರಿಗೆ ಕಳೆದ ಭಾನುವಾರ  ಬೆಂಗಳೂರಿನಲ್ಲಿ ನಡೆದ ಅದ್ದೂರಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ 2025 ರಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರಿಗೆ ಟ್ರೋಫಿ, ಹಂಸಲೇಖ ಅವರ ಐದನಿ ಸಂಸ್ಥೆಯಿಂದ ಚಿನ್ನದ ಪದಕ ಮತ್ತು ಸನ್ಮಾನ ಪತ್ರವನ್ನು ನೀಡಲಾಯಿತು. ಪ್ರಶಸ್ತಿಗಳ ಆರನೇ ಆವೃತ್ತಿಯಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮೊದಲ ಬಾರಿಗೆ ಕೊಡಲಾಗಿದೆ. 2024 ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳ ಇತರ ಪ್ರಮುಖ ವಿಜೇತರಲ್ಲಿ ಆಕ್ಷನ್ ಸ್ಟಾರ್…

ವಿಭಿನ್ನ ಪ್ರೇಮಕಥೆಯ ‘ ಮಾತೊಂದು ಹೇಳುವೆ’ ಚಿತ್ರ ಜೂನ್ 13 ಕ್ಕೆ ಬಿಡುಗಡೆ

ಹಲವು ಹೊಸತುಗಳಿಗೆ ಹೆಸರಾಗಿರುವ ಸ್ಯಾಂಡಲ್ ವುಡ್ ಈಗ ಮತ್ತೊಂದು ಹೊಸತನಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಮನೆಮಾತಾಗಿರುವ ‘ಮಾತೊಂದ ಹೇಳುವೆ’ ಚಿತ್ರವನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಜನತೆ ಅರ್ಪಿಸುತ್ತಿದ್ದಾರೆ‌. ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆರ್ ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ ನಿರ್ದೇಶಿಸಿದ್ದಾರೆ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ…

ಶಿವಮೊಗ್ಗದಲ್ಲಿ ಬಿಡುಗಡೆಯಾಯಿತು “ಚೇಸರ್” ಚಿತ್ರದ ಪ್ರೇಮಗೀತೆ ಹಾಡು ಬಿಡುಗಡೆ

ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಜಯರಾಮ್ ನಿರ್ದೇಶನದ ಹಾಗೂ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಕವಿರಾಜ್ ಅವರು ಬರೆದಿರುವ “ನೀನೇ ನೀನೇ ನನ್ನ ಆಸೆಯ ಬೆಳ್ಳಿಚುಕ್ಕಿ” ಎಂಬ ಸುಂದರ ಪ್ರೇಮಗೀತೆಯ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಅದ್ದೂರಿಯಾಗಿ ನೆರವೇರಿತು. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಜಸ್ಕರಣ್…

“S/O ಮುತ್ತಣ್ಣ” ಚಿತ್ರಕ್ಕಾಗಿ “ಕಮ್ಮಂಗಿ ನನ್ ಮಗನೇ” ಹಾಡು ಹಾಡಿದ ನಟ ಶರಣ್

ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಗೀತೆಗಳನ್ನು ನೀಡಿರುವ ನಿರ್ದೇಶಕ ಹಾಗೂ ಗೀತರಚನೆಕಾರ ಯೋಗರಾಜ್ ಭಟ್, ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಮತ್ತೊಂದು ಅದ್ಭುತ ಗೀತೆ ಬರೆದಿದ್ದಾರೆ. “ಕಮ್ಮಂಗಿ ನನ್ ಮಗನೇ” ಎಂಬ ಹಾಡನ್ನು ಯೋಗರಾಜ್ ಭಟ್ ಅವರು ಬರೆದಿದ್ದು, ತಮ್ಮ ವಿಶಿಷ್ಟ ಕಂಠದಿಂದ ಜನಪ್ರಿಯರಾಗಿರುವ ಸ್ಯಾಂಡಲ್ ವುಡ್ ಅಧ್ಯಕ್ಷ ನಟ ಶರಣ್ ಹಾಗೂ ಸಂಗೀತ ನಿರ್ದೇಶಕ ನಾದಗಾರುಡಿಗ ವಿ.ಹರಿಕೃಷ್ಣ ಮಧುರವಾಗಿ ಹಾಡಿದ್ದಾರೆ.…

ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನ

ಉಡುಪಿ, ಮೇ ೧೨-ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಲೋಬೀಪಿಯಿಂದ ನಿಧನಹೊಂದಿದ್ದಾರೆ. ಅವರು ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ನಿನ್ನೆಯೇ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂಬ ಮಾಹಿತಿ ಇದೆ. ಸುಸ್ತು ಅಂತ ಸ್ನೇಹಿತರ ಬಳಿ ಹೇಳಿದಾಗ ತಕ್ಷಣ ರಾಕೇಶ್ ಅವರನ್ನು ಖಾಸಗಿ…

ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ನಿಷೇಧ

ಬೆಂಗಳೂರು, ಮೇ,05-ಕನ್ನಡಿಗರಿಗೆ ಅವಮಾನ ಮಾಡಿ ದುರ್ವರ್ತನೆ ತೋರಿದ್ದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧ ಮಾಡಲಾಗಿದೆ. ಕನ್ನಡ ಚಿತ್ರರಂಗದಿಂದ ಜೀವನ ಕಟ್ಟಿಕೊಂಡ ಹಿಂದಿ ಗಾಯಕ ಸೋನು ನಿಗಮ್ ಕಾಲೇಜೊಂದರ ಕಾರ್ಯಕ್ರಮಕ್ಕೆ ಬಂದು ಕನ್ನಡದ ಹಾಡುಗಳನ್ನು ಹೇಳುವಂತೆ ಕೇಳಿದ ಕನ್ನಡಿಗರನ್ನು ಪೆಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿ ಕುಚೇಷ್ಟೆ ಮೆರೆದಿದ್ದರು. ಇದರ ಬಳಿಕ ಕನ್ನಡಪರ ಸಂಘಟನೆಗಳು ಕ್ಷಮೆ ಕೋರುವಂತೆ ಆಗ್ರಹಿಸಿದ ನಂತರ, ಕ್ಷಮೆ ಕೇಳದೇ ತನ್ನ ಹೇಳಿಕೆಗೆ ಸ್ಪಷ್ಟನೆ ಕೊಡುವ ಜೊತೆಗೆ ಮತ್ತೊಮ್ಮೆ ಕನ್ನಡಿಗರನ್ನು ಪುಂಡರು ಎಂದು…

ಮೋಳಿಗೆ ಮಾರಯ್ಯ” ಚಿತ್ರದ ಹಾಡುಗಳ ಅನಾವರಣ

ಮಧುಸೂದನ್ ಹವಾಲ್ದಾರ್ ನಿರ್ಮಾಣ, ನಿರ್ದೇಶನ ಹಾಗೂ ಸಂಗೀತ ನಿರ್ದೇಶನದ “ಮೋಳಿಗೆ ಮಾರಯ್ಯ” ಚಿತ್ರದ ಹಾಡುಗಳ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ಅಕ್ಷಯ ತೃತೀಯ ಹಾಗೂ ಬಸವ ಜಯಂತಿ ಶುಭದಿನದಂದು ನೆರವೇರಿತು. ಬೇಲಿಮಠದ ಶ್ರೀಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಭಕ್ತಿಪ್ರಧಾನ ಈ ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ನಿವೃತ್ತ ಐ ಎ ಎಸ್ ಅಧಿಕಾರಿ ಸಿ.ಸೋಮಶೇಖರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಧುಸೂದನ್ ಹವಾಲ್ದಾರ್ ಅವರು ಮಹಾನ್ ಶರಣರಾದ “ಮೋಳಿಗೆ ಮಾರಯ್ಯ” ಅವರ ಕುರಿತಾದ ಚಿತ್ರ ನಿರ್ಮಾಣ ಮಾಡುತ್ತಿರುವುದು…

ಅಮೆರಿಕಾದ ಅತ್ಯುನ್ನತ ಗೌರವಕ್ಕೆ ಪಾತ್ರರಾದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್

ಇತ್ತೀಚೆಗೆ ಅಮೇರಿಕಾದಲ್ಲಿ  ಖ್ಯಾತ ಗಾಯಕ ರಾಜೇಶ್ ಕೃಷ್ಣನ್.  ಅವರು ಕನ್ನಡಿಗರಿಗಾಗಿ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಕಂಠಸಿರಿಯಿಂದ ಮನಸೂರೆಗೊಳಿಸಿದ್ದರು. ಈ ಹಿನ್ನೆಲೆ ಅಮೆರಿಕದ ವಿಸ್ಕಾನ್ಸಿನ್‌ನ ಬ್ರೂಕ್‌ಫೀಲ್ಡ್ ನಗರವು ಏಪ್ರಿಲ್ 25ರ ದಿನವನ್ನು “ರಾಜೇಶ್ ಕೃಷ್ಣನ್ ಸಂಗೀತ ದಿನ” ಎಂದು ಘೋಷಿಸಿದೆ. ಸ್ಯಾಂಡಲ್‌ವುಡ್‌ನ ಮೆಲೋಡಿ ಕಿಂಗ್‌ ಹಾಗೂ ಖ್ಯಾತ ಗಾಯಕ ರಾಜೇಶ್‌ ಕೃಷ್ಣನ್‌ ಅವರು ಜಾಗತಿಕ ಗೌರವಕ್ಕೆ ಪಾತ್ರರಾಗಿದ್ದಾರೆ. ತಮ್ಮ ಇಂಪು ಧ್ವನಿಯಿಂದ ಕನ್ನಡದ ಸಂಗೀತ ಪ್ರಿಯರನ್ನು ರಂಜಿಸಿರುವ ಅವರ ಪ್ರತಿಭೆಯನ್ನು ಅಮೆರಿಕದ ವಿಸ್ಕಾನ್ಸಿನ್‌ನ ಬ್ರೂಕ್‌ಫೀಲ್ಡ್ ನಗರ ಗುರುತಿಸಿದೆ…

ಮೇ 9 ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ‘ಸೂತ್ರದಾರಿ’

ಈಗಲ್  ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರದ ಟ್ರೇಲರ್ ಅನ್ನು ಇತ್ತೀಚೆಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ‌. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಚೆನ್ನಾಗಿದೆ. ತಂತ್ರಜ್ಞರ ಕೆಲಸ ಹಾಗೂ ಕಲಾವಿದರ ಅಭಿನಯ ಸೊಗಸಾಗಿದೆ. ನಾನು ಇಲ್ಲಿಗೆ ಬರಲು…

‘ಗ್ರೀನ್’ ಮನೋವೈಜ್ಞಾನಿಕ ಥ್ರಿಲರ್ ಚಿತ್ರ

ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ನೋಡಗರ ಬೆಂಬಲ ಮೊದಲಿನಿಂದಲೂ ಸಿಗುತ್ತಿದೆ. ಅಂತಹ ವಿಭಿನ್ನ ಪ್ರಯೋಗಾತ್ಮಕ ಎನ್ನಬಹುದಾದ “ಗ್ರೀನ್” ಚಿತ್ರ ಕನ್ನಡದಲ್ಲಿ ನಿರ್ಮಾಣವಾಗಿದೆ. ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ಹಾಗೂ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ಪ್ರಮುಖಪಾತ್ರದಲ್ಲಿ ನಟಿಸಿರುವ “ಗ್ರೀನ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಟೀಸರ್ ನೋಡಿದಾಗ “ಗ್ರೀನ್” ಒಂದು ತಾಂತ್ರಿಕ ಶ್ರೀಮಂತಿಕೆಯಿಂದ ಕೂಡಿರುವ ಚಿತ್ರ ಎನ್ನುವುದು ತಿಳಿಯುತ್ತದೆ ಹಾಗೂ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸುತ್ತದೆ. ಚಿಕ್ಕ…

ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನ

ಬೆಂಗಳೂರು,ಏ,೧೪- ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಅವರಿಗೆ ೭೬ ವರ್ಷ ವಯಸ್ಸಾಗಿತ್ತು ತೀವ್ರ ಹೃದಯಾಘಾತದಿಂದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗಿನ ಜಾವ ೨-೩೦ಕ್ಕೆ ಕೊನೆಯಿಸಿರೆಳೆದರು ಎಂದು ಅವರ ಕುಟುಂಬ ತಿಳಿಸಿದೆ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದ್ದು ನಟರು,ಕಲಾವಿದರು ಅವರ ದರ್ಶನ ಮಾಡಲಿದ್ದಾರೆ ೧೯೪೯ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು. ೧೯೮೫ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ…

ವರ್ಣವೇದಂ” ಚಿತ್ರಕ್ಕಾಗಿ  ಹಾಡು ಹಾಡಿದ  ಸೋನು ನಿಗಂ

“ವರ್ಣವೇದಂ” ಚಿತ್ರಕ್ಕಾಗಿ  ಹಾಡು ಹಾಡಿದ  ಸೋನು ನಿಗಂ by-ಕೆಂಧೂಳಿ ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಹೆಸರು ಮಾಡಿರುವ ಜನಪ್ರಿಯ ಗಾಯಕ ಸೋನು ನಿಗಂ, “ನಾನು ಮತ್ತು ಗುಂಡ” ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ವರ್ಣವೇದಂ”‌ ಚಿತ್ರಕ್ಕಾಗಿ ” ಓ ವೇದ ಓ ವೇದ” ಎಂಬ ಸುಂದರ ರೊಮ್ಯಾಂಟಿಕ್ ಹಾಡು ಹಾಡಿದ್ದಾರೆ. ಗಗನ್ ಭಡೇರಿಯಾ ಸಂಗೀತ ನೀಡಿರುವ ಈ ಹಾಡನ್ನು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಅವರೆ ಬರೆದಿದ್ದಾರೆ. ಇತ್ತೀಚಿಗೆ ಈ ಹಾಡಿನ ಧ್ವನಿಮುದ್ರಣ ನಡೆದಿದ್ದು, ಸದ್ಯದಲ್ಲೇ…

ಕಣ್ಣಪ್ಪ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

‘ಕಣ್ಣಪ್ಪ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ by-ಕೆಂಧೂಳಿ ತೆಲುಗಿನ ಖ್ಯಾತ ನಟ ಡಾ. ಮೋಹನ್‍ ಬಾಬು, ಹೆಮ್ಮೆಯಿಂದ ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವು ಏಪ್ರಿಲ್‍ 25ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರದ ತಾಂತ್ರಿಕ ಕೆಲಸಗಳು ವಿಳಂಬವಾದ್ದರಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಇದೀಗ ಚಿತ್ರತಂಡವು ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ‘ಕಣ್ಣಪ್ಪ’ ಚಿತ್ರವು ಡಾ. ಮೋಹನ್‍ ಬಾಬು ಮತ್ತು ಅವರ…

ನಾಳೆಯಿಂದ ಎರಡು ದಿನ ನವರಸನ್ ನೇತೃತ್ವದ “CWKL” “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್. by-ಕೆಂಧೂಳಿ

ನಾಳೆಯಿಂದ ಎರಡು ದಿನ ನವರಸನ್ ನೇತೃತ್ವದ “CWKL” “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್. by-ಕೆಂಧೂಳಿ ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಅನೇಕ ಇವೆಂಟ್ ಗಳನ್ನು ಆಯೋಜಿಸಿ ಜನಪ್ರಿಯರಾಗಿರುವ ನವರಸನ್ ಇದೇ ಮೊದಲ ಬಾರಿಗೆ ನೂರಕ್ಕೂ ಹೆಚ್ಚು ವುಮೆನ್ಸ್ ಸೆಲೆಬ್ರಿಟಿ ಗಳು ಭಾಗವಹಿಸುತ್ತಿರುವ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸಿದ್ದಾರೆ. ಈ ಲೀಗ್ ನ ಉದ್ಘಾಟನೆ ಏಪ್ರಿಲ್ 5ರಂದು ನಡೆಯಲಿದೆ. ಏಪ್ರಿಲ್ 5, 6(ಶನಿವಾರ, ಭಾನುವಾರ) ಪಂದ್ಯಗಳು ನಡೆಯಲಿದೆ. ಕರ್ನಾಟಕ ಮಾತ್ರವಲ್ಲದೆ…

ಮಹಾನ್” ಚಿತ್ರದ ಶೀರ್ಷಿಕೆ ಅನಾವರಣ ಮಾಡಿ‌ ಶುಭಕೋರಿದ  ಶಿವರಾಜಕುಮಾರ್

“ಮಹಾನ್” ಚಿತ್ರದ ಶೀರ್ಷಿಕೆ ಅನಾವರಣ ಮಾಡಿ‌ ಶುಭಕೋರಿದ  ಶಿವರಾಜಕುಮಾರ್ by-ಕೆಂಧೂಳಿ ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. ಲ ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ ಮಾತನಾಡಿರುವ…

ಕಾಲಘಟ್ಟ’ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

‘ಕಾಲಘಟ್ಟ’ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ by-ಕೆಂಧೂಳಿ ಬೇಡಿದನ್ನೆಲ್ಲಾ ನೀಡುವ ಕಲಿಯುಗದ ಕಾಮಧೇನುಗಳೆಂದೆ ಖ್ಯಾತರಾದ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ಅವರು ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನದ “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್ ಯುಗಾದಿ ಹಬ್ಬದ ದಿನದಂದು ಬಿಡುಗಡೆಯಾಯಿತು. ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ಚಿತ್ರತಂಡದವರನ್ನು ಆಶೀರ್ವದಿಸಿದರು. “ಕಾಲಘಟ್ಟ” ಇದು ಎರಡು “ಕಾಲಘಟ್ಟ”ಗಳಲ್ಲಿ ನಡೆಯುವ ಕಥೆ. ಪೂರ್ವಾರ್ಧ ಮೂವತ್ತು ವರ್ಷಗಳ ಹಿಂದೆ ನಡೆದರೆ, ದ್ವಿತೀಯಾರ್ಧ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತದೆ. ಗ್ರಾಮೀಣ…

ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ”

ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ” by-ಕೆಂಧೂಳಿ ಮೇರು ನಟ ಡಾ||ರಾಜಕುಮಾರ್ ಅವರ ಮೊಮ್ಮಗ(ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ “ನಿಂಬಿಯಾ ಬನಾದ ಮ್ಯಾಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾ|ರಾಜಕುಮಾರ್ ಮಗಳು,‌ ಅಳಿಯ ಹಾಗೂ ನಾಯಕ ಷಣ್ಮುಖ ಅವರ ತಾಯಿ – ತಂದೆ ಲಕ್ಷ್ಮೀ ಹಾಗೂ ಗೋವಿಂದರಾಜು ಅವರು ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು‌. ಹಿರಿಯ ನಿರ್ಮಾಪಕ ಎಸ್‌‌ ಎ ಚಿನ್ನೇಗೌಡ, ಡಾ||ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್…

ಪೆನ್ ಡ್ರೈವ್” ಚಿತ್ರದಲ್ಲಿ ಖಡಕ್ ಪೊಲೀಸ್ ಆಗಿ ಮಾಲಾಶ್ರೀ

“ಪೆನ್ ಡ್ರೈವ್”ಚಿತ್ರದಲ್ಲಿ   ಖಡಕ್   ಪೊಲೀಸ್ ಆಗಿ  ಮಾಲಾಶ್ರೀ by-ಕೆಂಧೂಳಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಾ|ವಿ.ನಾಗೇಂದ್ರ ಪ್ರಸಾದ್ ಅವರು ಗೀತರಚನೆ…

ಠಾಣೆ ಹಾಡಿನಿಂದ ಜನಮನ ಗೆದ್ದ ಮಾನಸ ಹೊಳ್ಳ

ಠಾಣೆ ಹಾಡಿನಿಂದ ಜನಮನ ಗೆದ್ದ ಮಾನಸ ಹೊಳ್ಳ by-ಕೆಂಧೂಳಿ ಎರಡೂವರೆ ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಗಾಯಕಿಯಾಗಿದ್ದ ಗುರುತಿಸಿಕೊಂಡಿದ್ದ ಮಾನಸ ಹೊಳ್ಳ ಅವರು ಇತ್ತೀಚೆಗೆ ಸಂಗೀತ ನಿರ್ದೇಶಕಿಯಾಗಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಇತ್ತೀಚೆಗೆ ಅವರು ಸಂಗೀತ ನೀಡಿರುವ ಠಾಣೆ ಚಿತ್ರದ “ಬಾಳಿನಲಿ ಭರವಸೆಯ ಬೆಳಕನು ನೀ ಹೂಡು..” ಎಂಬ ಹಾಡಿಗೆ ಇಡೀ ಕರುನಾಡೇ ಮನಸೋತಿದೆ. ಎಲ್ಲೆಡೆ ವೈರಲ್ ಆಗಿರುವ,ಅದರಲ್ಲೂ ಪುಟ್ಟ ಮಕ್ಕಳೇ ದನಿಯಾಗಿರುವ ಈ ಹಾಡಿಗೆ ಗೆಳತಿ ರೆಮೋ ಸಾಹಿತ್ಯ ಬರೆದಿದ್ದಾರೆ. ಕರವೇ ರಾಜ್ಯಾಧ್ಯಕ್ಷ‌ ನಾರಾಯಣಗೌಡ್ರು ಕೂಡ ಈ ಹಾಡನ್ನು…

ಹೊಸ ಪ್ರತಿಭೆಗಳ ಸಮಾಗಮದ “ಉಜ್ಜಯಿನಿ ಮಹಾಕಾಲ”

ಹೊಸ ಪ್ರತಿಭೆಗಳ ಸಮಾಗಮದ “ಉಜ್ಜಯಿನಿ ಮಹಾಕಾಲ” by-ಕೆಂಧೂಳಿ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ “ಉಜ್ಜಯಿನಿ ಮಹಾಕಾಲ” ಕೂಡ ಒಂದು. ಈಗ ಅದೇ ಶೀರ್ಷಿಕೆಯಲ್ಲಿ ಕನ್ನಡ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಹರಿಪ್ರಸಾದ್ ಎಂ ಮಂಡ್ಯ ನಿರ್ಮಾಣ – ನಿರ್ದೇಶನದಲ್ಲಿ ವಿನಯ್ ನಾಯಕನಾಗಿ ನಟಿಸುತ್ತಿರುವ “ಉಜ್ಜಯಿನಿ ಮಹಕಾಲ” ಪೌರಾಣಿಕ ಚಿತ್ರವಲ್ಲ. ಹೊಸತಂಡದ ಸಮಾಗಮದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು ಬಿಡುಗಡೆ ಮಾಡಿದರು. ನಿರ್ಮಾಪಕ ನಾಗೇಶ್ ಕುಮಾರ್, ನಿರ್ದೇಶಕ ಜೆ.ಜಿ.ಶ್ರೀನಿವಾಸ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.…

1 2 3 9
error: Content is protected !!