Browsing: ಕ್ರೀಡೆ

ಕ್ರೀಡೆ

ಶ್ರೀಲಂಕಾ ಟೂರ್ನಿಗೆ ಭಾರತ ತಂಡ ಪ್ರಕಟ,ಶಿಖರ್ ದವನ್ ಗೆ ನಾಯಕತ್ವ

ಮುಂಬೈ,ಜೂ,11:ಜುಲೈ ತಿಂಗಳಲ್ಲಿ ಶ್ರೀಲಂಕಾದಲ್ಲಿ ನಡಯಲಿರುವ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಎಡಗೈ ದಾಂಡಿಗ ಶಿಖರ್ ಧವನ್ ಗೆ ತಂಡದ ಸಾರಥ್ಯ ನೀಡಲಾಗಿದೆ. ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡವನ್ನು ಪ್ರಕಟಿಸಿದ್ದು, ನಾಯಕ ಕೊಹ್ಲಿ ಮತ್ತು ಇತರೆ ಹಿರಿಯ ಆಟಾಗರರ ತಂಡ ಇಂಗ್ಲೆಂಡ್ ಪ್ರವಾಸದಲ್ಲಿರುವುದರಿಂದ ಶಿಖರ್ ಧವನ್ ಗೆ ತಂಡದ ನಾಯಕತ್ವ ನೀಡಲಾಗಿದೆ. ಅಂತೆಯೇ ಭುವನೇಶ್ವರ್ ಕುಮಾರ್ ಅವರನ್ನು ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ. ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಲಂಕಾ ಪ್ರವಾಸಕ್ಕೆ ಹೊಸ ಪ್ರತಿಭೆಗಳಿಗೆ ಅವಕಾಶ…

ಫ್ರೆಂಚ್ ಓಪನ್ ಟೆನಿಸ್; ೧೫ನೇ ಬಾರಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ನಡಾಲ್

ಪ್ಯಾರೀಸ್,ಜೂ,೦೮:ರಾಫೆಲ್ ನಡಾಲ್ ಆರಂಭಿಕ ಹಿನ್ನಡೆಯ ಹೊರತಾಗಿಯೂ ಸರಿಯಾದ ಸಮಯದಲ್ಲಿ ತಮ್ಮ ಅನುಭವವನ್ನು ಬಳಸಿಕೊಂಡು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಇಟಲಿಯ ಯುವ ಆಟಗಾರ ಜೆನಿಕ್ ಸಿನ್ನರ್ ೭-೫, ೬-೩, ೬-೦ ಸೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ೧೫ನೇ ಬಾರಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಕೇವಲ ೧೯ ವರ್ಷದ ಇಟಲಿ ಆಟಗಾರ ಸಿನ್ನರ್ ಮೊದಲ ಸೆಟ್‌ನಲ್ಲೇ ನಡಾಲ್ ಅವರನ್ನು ತಬ್ಬಿಬ್ಬುಗೊಳಿಸುವಲ್ಲಿ ಯಶಸ್ವಿಯಾದರು. ವಿಶ್ವ ೧೯ನೇ ಶ್ರೇಯಾಂಕಿತ ಆಟಗಾರ ಸಿನ್ನರ್ ರಣತಂತ್ರಕ್ಕೆ ನಡಾಲ್…

ಭಾರತ-ಶ್ರೀಲಂಕ ವೇಳಾಪಟ್ಟಿ ಪ್ರಕಟ

ನವದೆಹಲಿ,ಜೂ,07: ಶ್ರೀಲಂಕಾ ವಿರುದ್ಧ ಭಾರತದ ಪರ್ಯಾಯ ತಂಡವು ಆಡಲಿರುವ ತಲಾ ಮೂರು ಏಕದಿನ ಹಾಗೂ ಟ್ವೆಂಟಿ–20 ಪಂದ್ಯಗಳ ಕ್ರಿಕೆಟ್‌ ಸರಣಿಯು ಜುಲೈ 13ರಿಂದ 25ರವರೆಗೆ ನಡೆಯಲಿದೆ. ಆಯ್ಕೆಗಾರರು ಶಿಖರ್ ಧವನ್ ಅಥವಾ ಹಾರ್ದಿಕ ಪಾಂಡ್ಯ ನಾಯಕತ್ವದಲ್ಲಿ ಸಾಕಷ್ಟು ಯುವ ಆಟಗಾರರನ್ನು ಆಯ್ಕೆ ಮಾಡುವ ನಿರೀಕ್ಷೆಯಿದೆ. ಸಂಪೂರ್ಣ ಫಿಟ್ ಆಗಿರುವ ಶ್ರೇಯಸ್ ಅಯ್ಯರ್‌ ಕೂಡ ನಾಯಕತ್ವದ ರೇಸ್‌ನಲ್ಲಿದ್ದಾರೆ. ಸೋನಿ ಸ್ಪೋರ್ಟ್ಸ್ ವಾಹಿನಿಯು ಜಾಲತಾಣಗಳ ಮೂಲಕ ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೂರು ಏಕದಿನ ಪಂದ್ಯಗಳು ಕ್ರಮವಾಗಿ ಜುಲೈ 13, 16…

ಐಪಿಎಲ್ ಪುನಾರಂಭಿಸಲು ಬಿಸಿಸಿಐ ನಿರ್ಧಾರ

ನವದೆಹಲಿ,ಮೇ,೨೯ :ಕೋವಿಡ್ ಅಟ್ಟಹಾಸದಿಂದ ರದ್ದಾಗಿದ್ದ ೧೪ನೇ ಆವೃತ್ತಿಯ ಐಪಿಎಲ್ ಪಂದ್ಯವಾಳಿಯನ್ನು ಪುನಾರಂಭಿಸಲು ಬಿಸಿಸಿಐ ನಿರ್ಧರಿಸಿದೆ. ಈ ಪಂದ್ಯಗಳು ಭಾರತದ ಬದಲಾಗಿಎ ಅರಬ್‌ನಲ್ಲಿ (ಯುನೈಟೆಡ್ ಅರಬ್ ಎಮಿರೇಟ್ಸ್-ಯುಎಇ) ನಡೆಯಲಿದೆ. ಬಾಕಿ ಉಳಿದ ೩೧ ಪಂದ್ಯಗಳು ನಡೆಯಲಿದ್ದು ಆ ಕುರಿತು ಎಲ್ಲೆಲ್ಲಿ ನಡೆಯಲಿವೆ ಎನ್ನುವುದನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ ಇಂದು ವಿಶೇಷ ಸಾಮಾನ್ಯ ಸಭೆ ನಡೆಸಿದ ಬಳಿಕ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ. ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಭಾರತದಲ್ಲಿ ಮಳೆಗಾಲ ಇರುವುದರಿಂದ ಯುಎಇನಲ್ಲಿ ಬಾಕಿ ಉಳಿದಿರುವ…

ಒಲಂಪಿಕ್‌ನಲ್ಲಿ ಆಡುವ ಅವಕಾಶ ಕಳೆದುಕೊಂಡ ಸೈನಾ

ನವದೆಹಲಿ,ಮೇ,೨೮: ಒಲಂಪಿಕ್ ನಲ್ಲಿ ಆಡುವ ಕನಸು ಹೊತ್ತಿದ್ದ ಕದಂಬಿ ಶ್ರೀಕಾಂತ್ ಕೊರೊನಾ ಹಿನ್ನಲೆಯಲ್ಲಿ ರ‍್ಯಾಂಕಿಂಗ್‌ನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಇಂದು ವಿಶ್ವಬ್ಯಾಡ್ಮಿಂಟನ್‌ಫೆಡರೇಷನ್ ರ‍್ಯಾಂಕಿಂಗ್‌ನಲ್ಲಿ ಯಾವುದೆ ಬದಲಾವಣೆ ಇಲ್ಲ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಈ ಇಬ್ಬರು ಈಗ ಒಲಂಪಿಕ್‌ನಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಕಿದಂಬಿ ಶ್ರೀಕಾಂತ್ ಮತ್ತು ಸೈನಾ ನೆಹ್ವಾಲ್ ನಿರೀಕ್ಷೆಯಿಂದ ಕಾಯುತ್ತಿದ್ದರು.ಟೋಕಿಯೊ ಒಲಿಂಪಿಕ್ಸ್‌ನ ಅರ್ಹತಾ ಅವಧಿ ಜೂನ್ ೧೫ರಂದು ಮುಕ್ತಾಯಗೊಳ್ಳಲಿದೆ. ಆದರೆ ಅದಕ್ಕೂ ಮುನ್ನ ಯಾವುದೇ ಟೂರ್ನಿಯನ್ನು ಆಯೋಜಿಸಲಾಗುವುದಿಲ್ಲ. ರ‍್ಯಾಂಕಿಂಗ್‌ನಲ್ಲಿ ಬದಲಾವಣೆಯೂ…

ಐಪಿಎಲ್ ಉಳಿದ ಪಂದ್ಯಗಳು ಸೆಪ್ಟಂಬರ್ ಮೂರನೆ ವಾರ

ಮುಂಬೈ,ಮೇ,೨೫: ಕೋವಿಡ್ ಅಟ್ಟಹಾಸದಿಂದ ದೇಶದೆಲ್ಲಡೆ ಆತಂಕ ಉಂಟುಮಾಡಿದ್‌ದ ಕಾರಣ ಐಪಿಎಲ್ ಪಂದ್ಯಗಳನ್ನು ಮುಂದೂಡಲಾಗಿತ್ತು ಈಗ ಐಪಿಎಲ್ ಪಂದ್ಯಗಳನ್ನು ಸೆಪ್ಟಂಬರ್ ಮೂರನೇ ವಾರ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಸೆಪ್ಟೆಂಬರ್ ೧೯ ರಿಂದ ಅಕ್ಟೋಬರ್ ೧೦ ರವರೆಗೆ ಈ ಆವೃತ್ತಿಯ ಉಳಿದ ಪಂದ್ಯಗಳು ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಸಂಬಂಧಿಸಿದ ವೇಳಾಪಟ್ಟಿ ಶೀಘ್ರದಲ್ಲೇ ಹೊರಬೀಳಲಿದೆ . ಅಕ್ಟೋಬರ್ ೧೦ ರಂದು ಐಪಿಎಲ್‌ನ ೧೪ನೇ ಆವೃತ್ತಿಯ ಅಂತಿಮ ಪಂದ್ಯ ನಡೆಯುವ ಸಾಧ್ಯತೆ ಇದೆ. ಇದರಲ್ಲಿ ೧೦ ಡಬಲ್ ಹೆಡರ್ ಪಂದ್ಯಗಳು,…

ಸ್ಪಿನ್ ಮಾಂತ್ರಿಕ ಅನಿಲ್‌ಕುಂಬ್ಳೆ ಬಗ್ಗೆ ಶ್ರೀಲಂಕಾ,ಪಾಕಿಸ್ತಾನ ಕ್ರಿಕೆಟಿಗರ ಪ್ರಶಂಸೆ

ನವದೆಹಲಿ,ಮೇ,೨೨:ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ಗ್ ಐಸಿಸಿ ಹಾಲ್ ಆಫ್ ಮೇಮಸ್‌ಗೆ ಆಯ್ಕೆಯಾಗಿರು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಲೆಗ್ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರನ್ನು ಶ್ರೀಲಂಕಾಹಾಗೂ ಪಾಕಿಸ್ತಾನ ಕ್ರಿಕೆಟ್ ಆಟಗಾರರು ಪ್ರಶಂಸಿದ್ದಾರೆ. ಇತರ ದೇಶಗಳ ಅತ್ಯುತ್ತಮ ಆಟಗಾರರ ಸಾಧನೆಗಳನ್ನು ಆಚರಿಸಿದ ಬಳಿಕ, ಐಸಿಸಿಯು ಅನಿಲ್ ಕುಂಬ್ಳೆಯವರು ಕ್ರಿಕೆಟ್‌ನಲ್ಲಿ ಮಾಡಿರುವ ಅದ್ಭುತ ದಾಖಲೆಗಳನ್ನು ಮತ್ತೆ ನೆನಪಿಸಿಕೊಳ್ಳುವಂತೆ ಮಾಡಿದೆ. ಅನಿಲ್ ಕುಂಬ್ಳೆ ಅವರನ್ನು, “ಸಾರ್ವಕಾಲಿಕ ಅತಿ ಶ್ರೇಷ್ಟ ಬೌಲರ್‌ಗಳಲ್ಲಿ ಒಬ್ಬರು” ಎಂದು ಕರೆದಿರುವ ಐಸಿಸಿ, ಅವರು ಕ್ರಿಕೆಟ್‌ನಲ್ಲಿ…

ಏಕ ದಿನ ಟಿ20 ಪಂದ್ಯದ ಕೋಚ್ ಆಗಿ ದ್ರಾವಿಡ್ ನೇಮಕ

ನವದೆಹಲಿ, ಮೇ,20:ಜುಲೈನಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಆಡಲಿರುವ ಏಕದಿನ ಟಿ20 ಸರಣಿ ಪಂದ್ಯಗಳ ಕೋಚ್ ಆಗಿ ರಾಷ್ಟ್ರೀಯ ಕ್ರಿಕೆಟ್ ಆಕಾಡೆಮಿಖ್ಯಸ್ಥ ರಾಹುಲ್ ದ್ರಾವಿಡ್ ನೇಮಕವಾಗಿದ್ದಾರೆ. 2014ರಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ರಾಹುಲ್ ದ್ರಾವಿಡ್ ಬ್ಯಾಟಿಂಗ್ ಸಲಹೆಗಾರನಾಗಿ ಕೆಲಸ ಮಾಡಿದ್ದರು.ಈ ಮಾಹಿತಿಯನ್ನು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿರುವ ಬಿಸಿಸಿಐ ಅಧಿಕಾರಿ, ಈ ಸಮಯದಲ್ಲಿ ಕೋಚ್ ರವಿ ಶಾಸ್ತ್ರಿ, ಭರತ್ ಅರುಣ್ ಮತ್ತು ವಿಕ್ರಮ್ ರಾಥೋರ್ ಅವರು ಇಂಗ್ಲೆಂಡಿನಲ್ಲಿ ಟೆಸ್ಟ್ ಸರಣಿಯಲ್ಲಿ ನಿರತರಾಗಿರುವುದರಿಂದ ರಾಹುಲ್ ದ್ರಾವಿಡ್ ಅವರನ್ನು ನಿಯೋಜಿಸಲಾಗುತ್ತಿದೆ…

ಹಗಲು-ರಾತ್ರಿ ಪಿಂಕ್ ಪಂದ್ಯ ಆಡಲಿದ್ದಾರೆ ಮಹಿಳಾ ಕ್ರಿಕೆಟಿಗರು

ಕೋಲ್ಕೊತ್ತಾ,ಮೇ,೨೦: ಇದೇ ಮೊದಲ ಬಾರಿಗೆ ಭಾರತ ಮಹಿಳಾ ಕ್ರಿಕೇಟಿಗರು ಹಗಲು-ರಾತ್ರಿ ಪಿಂಕ್ ಬಾಲ್ ಕ್ರಿಕೆಟ್ ಆಡಲಿದ್ದಾರೆ. ಈ ಬಗ್ಗೆ ಭಾರತೀಯ ಕ್ರಿಕೆಟ್ ಮಂಡಳಿ ಇಂತಹ ಮಹತ್ವದ ನಿರ್ಧಾರವನ್ನು ತಗೆದುಕೊಂಡಿದೆ ಈ ಕುರಿತಂತೆ ಟ್ವೀಟ್ ಮಾಡಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಷಾ, ಇದೇ ವರ್ಷಾಂತ್ಯದಲ್ಲಿ ಭಾರತ ಕ್ರಿಕೆಟ್ ತಂಡದ ವನಿತೆಯರು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಆ ವೇಳೆ ಅವರು ಆಸ್ಟ್ರೇಲಿಯಾ ತಂಡದ ವಿರುದ್ಧ ಮೊದಲ ಬಾರಿಗೆ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಕ್ರಿಕೆಟ್ ಆಡಲಿದ್ದಾರೆ. ಭಾರತೀಯ ಮಹಿಳಾ ಕ್ರಿಕೆಟ್…

ಮಹಿಳಾ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ಶಿವ್ ಸುಂದರ್ ದಾಸ್

ನವದೆಹಲಿ,ಮೇ,೧೮:ಭಾರತೀಐ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮೆನ್ ಶಿವಸುಂದರ್ ದಾಸ್ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ.ಹೀಗಾಗಿ ಇಂಗ್ಲೆಂಡ್ ಪ್ರವಾಸದ ವೇಳೆ ದಾಸ್ ಮಹಿಳಾ ಕ್ರಿಕೆಟ್‌ಗರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಶಿವ್ ಸುಂದರ್ ದಾಸ್ ಭಾರತ ತಂಡದ ಪರ ೨೦೦೦-೦೨ರ ವರೆಗೆ ೨೩ ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ೨೩ ಟೆಸ್ಟ್ ಪಂದ್ಯಗಳಲ್ಲಿ ೩೪.೮೯ರ ಸರಾಸರಿಯಂತೆ ೧೩೨೬ ರನ್ ಗಳಿಸಿದ್ದಾರೆ. ಇದರಲ್ಲಿ ೨ ಶತಕಗಳು ಮತ್ತು ೯ ಅರ್ಧ ಶತಕಗಳು ಸೇರಿವೆ. ’ಇದೊಂದು ಒಳ್ಳೆಯ ಅನುಭವವಾಗಲಿದೆ. ನಾನು ಇದಕ್ಕಾಗಿ…

ಕುಸ್ತಿಪಟುಗಳ ತರಬೇತಿ ಶಿಬಿರ ರದ್ಧು

ನವದೆಹಲಿ,ಮೇ,16: ಸೋನಿಪತ್ ನಲ್ಲಿ ಓಲಂಪಿಕ್ ಆಯ್ಕೆ ಯಾದ ಕ್ರೀಡಾಪಟುಗಳ ತರಬೇತಿ ಶಿಬಿರವನ್ನು ರದ್ಧುಗೊಳಿಸಲಾಗಿದೆ. ಒಲಿಂಪಿಕ್ಸ್‌ಗೆ ತೆರಳಲಿರುವ ಪುರುಷ ಮತ್ತು ಮಹಿಳಾ ಕುಸ್ತಿಪಟುಗಳು ಮುಂದಿನ ಮಂಗಳವಾರ ಬಹಲ್‌ಗರ್‌ನಲ್ಲಿರುವ ಭಾರತ ಕ್ರೀಡಾ ಪ್ರಾಧಿಕಾರದ ಆವರಣದಲ್ಲಿ ಜಮಾಯಿಸಬೇಕಾಗಿತ್ತು. ಆದರೆ ಅದನ್ನು ರದ್ದು ಮಾಡಿ ಕುಸ್ತಿಪಟುಗಳನ್ನು ನೇರವಾಗಿ ಪಾಲೆಂಡ್‌ಗೆ ಕಳುಹಿಸಲು ನಿರ್ಧರಿಸಲಾಗಿದೆ. ಅಲ್ಲಿ ಜೂನ್ ಎಂಟರಿಂದ 13ರ ವರೆಗೆ ಟೋಕಿಯೊ ಒಲಿಂಪಿಕ್ಸ್‌ಗೆ ಸಂಬಂಧಿಸಿದ ರ‍್ಯಾಂಕಿಂಗ್ ಸೀರಿಸ್ ನಡೆಯಲಿದೆ. ಕ್ವಾರೆಂಟೇನ್ ಗೆ ಒಳಗಾಗಬೇಕಾಗಿರುವುದರಿಂದ ಬಹಲ್‌ಗರ್‌ನಲ್ಲಿ ನಡೆಯಬೇಕಾಗಿದ್ದ ತರಬೇತಿ ಶಿಬಿರವನ್ನು ರದ್ದುಮಾಡಲಾಗಿದೆ. ಅವರವರ ಅಖಾಡಗಳಲ್ಲೇ…

ಟೀಂ ಇಂಡಿಯಾ ಇಂದಿನ ಸುಸ್ತಿತಿಗೆ ದ್ರಾವಿಡ್ ಕಾರಣ-ಗ್ರೇಗ್‌ಚಾಪಲ್

ಸಿಡ್ನಿ,ಮೇ,೧೪: ಭಾರತದ ಕ್ರಿಕೆಟ್ ತಂಡದಲ್ಲಿ ಪ್ರತಿಭೆಗಳಿಗೆ ಭಂಡಾರವನ್ನೇ ಹೊಂದಿದೆ ಇಂತ ಸುಸ್ತಿತಿಗೆ ರಾಹುಲ್ ದ್ರಾವಿಡ್ ಅವರ ಕೊಡುಗೆಯೇ ಕಾರಣ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಗ್ರೇಗ್ ಚಾಪೆಲ್ ಹೇಳಿದ್ದಾರೆ. ಆಸ್ಟ್ರೇಲಿಯಾದ ಕ್ರಿಕೆಟ್ ವೆಬ್ ಸೈಟ್‌ನ ಸಂದರ್ಶನದಲ್ಲಿ ನೀಡಿದ ಹೇಳಿಕೆಯಲ್ಲಿ ಭಾರತೀಯ ಕ್ರಿಕೆಟ್‌ತಂಡ ಇಂದು ವಿಶ್ವದಲ್ಲಿ ಅನಭಿಶಕ್ತ ದೊರೆಯಾಗಿ ಮೆರೆಯುತ್ತಿದೆಎಂದರೆ ಅದಕ್ಕೆ ದ್ರಾವಿಡ್ ಅವರೇ ಕಾರಣ ಅವರ ನೀಡಿರುವ ತರಬೇತಿ ನಿಜಕ್ಕೂ ಮೆಚ್ಚುವಂತದ್ದು ಎಂದು ಅವರು ಹೇಳಿದ್ದಾರೆ. ’ಆಸ್ಟ್ರೇಲಿಯಾದಲ್ಲಿನ ದೇಶಿ ಕ್ರಿಕೆಟ್ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವ ಭಾರತ ಮತ್ತು…

ಏಕಕಾಲದಲ್ಲಿ ಎರಡು ತಂಡಗಳು ಕಣಕ್ಕಿಳಿಯಲಿವೆ; ಗಂಗೋಲಿ

ನವದೆಹಲಿ,10: ಟೀಂ ಇಂಡಿಯಾ ಜುಲೈ ತಿಂಗಳಿನಲ್ಲಿ ಇಂಗ್ಲೆಂಡ್ ಹಾಗೂ ಶ್ರೀಲಂಕಾ ವಿರುದ್ದ ಸರಣಿ ಆಡಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಈ ಮೂಲಕ ಇಂಗ್ಲೆಂಡ್‌ ಹಾಗೂ ಶ್ರೀಲಂಕಾಕ್ಕೆ ಪ್ರತ್ಯೇಕ ತಂಡಗಳು ತೆರಳಲಿವೆ ಎನ್ನುವ ಸುಳಿವನ್ನು ಗಂಗೂಲಿ ನೀಡಿದ್ದಾರೆ. ಟೀಂ ಇಂಡಿಯಾ ಜೂನ್‌ನಲ್ಲಿ ಇಂಗ್ಲೆಂಡ್‌ಗೆ ತೆರಳಲಿದ್ದು ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾಗೂ ಇಂಗ್ಲೆಂಡ್‌ ವಿರುದ್ಧ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ಇದೇ ವೇಳೆ ಜುಲೈನಲ್ಲಿ ಭಾರತ ತಂಡ ಶ್ರೀಲಂಕಾಕ್ಕೆ ತೆರಳಲಿದ್ದು, 3…

ಐಪಿಎಲ್ ಮುಂದೂಡಿಕೆ,ಅರ್ ಸಿಬಿಗೆ ಲಾಭ

ಬೆಂಗಳೂರು,10;ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸಕ್ತ ಐಪಿಎಲ್ ಸೀಸನ್​ನಲ್ಲಿ ಆಡಿರುವ 7 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿ 3ನೇ ಸ್ಥಾನದಲ್ಲಿದೆ. ಆರಂಭದಿಂದಲೇ ಭರ್ಜರಿ ಪ್ರದರ್ಶನದೊಂದಿಗೆ ಗಮನ ಸೆಳೆದಿದ್ದ ಆರ್​ಸಿಬಿ ಈ ಬಾರಿ ಕಪ್ ಗೆಲ್ಲುವ ಫೇವರೇಟ್ ತಂಡಗಳಲ್ಲಿ ಗುರುತಿಸಿಕೊಂಡಿತ್ತು. ಆದರೀಗ ಐಪಿಎಲ್ ಮುಂದೂಡಲಾಗಿದೆ. ಇದಾಗ್ಯೂ ಟೂರ್ನಿಯನ್ನು ಪೂರ್ಣಗೊಳಿಸುವುದಾಗಿ ಬಿಸಿಸಿಐ ಘೋಷಿಸಿದೆ. ಆದರೆ ಈ ಮುಂದೂಡಿಕೆಯಿಂದ ಆರ್​ಸಿಬಿ ಅತ್ಯುತ್ತಮ ಲಾಭ ಪಡೆದುಕೊಳ್ಳಲಿದೆ. ಹೌದು, ಐಪಿಎಲ್ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಇದರಿಂದ ಆರ್​ಸಿಬಿ ತನ್ನ ತಂಡವನ್ನು ಪೂರ್ಣ ಪ್ರಮಾಣದಲ್ಲಿ ರಚಿಸಿಕೊಳ್ಳಬಹುದು. ಏಕೆಂದರೆ…

1 3 4 5
error: Content is protected !!