Browsing: ರಾಜಕೀಯ

ರಾಜಕೀಯ

ಆರ್‌ಸಿಬಿ.ಕೆಎಸ್‌ಸಿಎ ವಿರುದ್ಧ ಕ್ರಿಮಿನಲ್ ಕೇಸ್‌ಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು,ಜು,೨೪-ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ, ಮೈಕೆಲ್ ಡಿ. ಕುನ್ಹಾ ವಿಚಾರಣಾ ಆಯೋಗದ ವರದಿಯನ್ನು ರಾಜ್ಯ ಸಚಿವ ಸಂಪುಟವು ಅಂಗೀಕರಿಸಿದೆ, ಈ ಮೂಲಕ ಆಯೋಗದ ಶಿಫಾರಸಿನಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮೈಕೆಲ್ ಡಿ ಕುನ್ಹಾ ಆಯೋಗದ ವರದಿಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ದುರಂತಕ್ಕೆ ಕಾರಣವಾದ ಅಂಶಗಳು ಮತ್ತು ಅದಕ್ಕೆ…

17.50 ಲಕ್ಷ ಜನರ ಆರೋಗ್ಯ ಖಾತ್ರಿಪಡಿಸುವ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ

ತುಮಕೂರು(ಪಾವಗಡ)ಜು, 21-ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಮಕೂರಿನ ಪಾವಗಡದಲ್ಲಿ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಯ ಉದ್ಘಾಟನೆ ಮತ್ತು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣ ದ ಘೋಷಣೆ ಹಾಗೂ ಪಾವಗಡ ವಿಧಾನಸಭಾ…

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ

ಬೆಂಗಳೂರು, ಜುಲೈ 21-ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ…

ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.21- “ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟೀಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಕೇಂದ್ರ ಬಿಜೆಪಿ ಸರ್ಕಾರ 2019ರಲ್ಲೇ ವಾರ್ಷಿಕ 40 ಲಕ್ಷಕ್ಕೂ ವಹಿವಾಟು ಮಿತಿ ನಿಗದಿಗೊಳಿಸಿ ಎಲ್ಲಾ ರಾಜ್ಯ ಸರ್ಕಾರಗಳಿಗೂ ಇದನ್ನು ಪಾಲಿಸುವಂತೆ ಆದೇಶ ನೀಡಿದ್ದಾರೆ. ಬಡವರಿಗೆ ಕಿರುಕುಳ…

ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ- ವಿಜಯೇಂದ್ರ ಸವಾಲು

ಕೊಪ್ಪಳ,ಜು,20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರ ಪ್ರಶ್ನೆಗೆ ಉತ್ತರಿಸಿ ನಂತರ ವಿರೋಧ ಪಕ್ಷದವರ ವಿರುದ್ಧ ಸವಾಲು ಹಾಕಲಿ. ಇಡೀ ರಾಜ್ಯದ ಜನ ಮೈಸೂರಿನ ಸಮಾವೇಶದಲ್ಲಿ ಏನು ನಡೆದಿದೆ ಎನ್ನುವುದನ್ನು ನೋಡಿದ್ದಾರೆ ಎಂದು ವ್ಯಂಗ್ಯವಾಗಿ ನುಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಅನುದಾನವಿಲ್ಲದೆ ಶಾಸಕರು…

ಅಣೆಕಟ್ಟುಗಳ ಸುರಕ್ಷತೆ ತಾಂತ್ರಿಕ ಸಮಿತಿ ವರದಿ ಬಂದ ಬಳಿಕ ಅಗತ್ಯ ಕಾಮಗಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಬಿನಿ, ಜು.20-“ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು, ಈ ಸಮಿತಿ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಬಿನಿ ಅಣೆಕಟ್ಟಿನ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ಕೆಆರ್ ಎಸ್ ಅಣೆಕಟ್ಟಿನ ನಂತರ ಇಂದು ಕಬಿನಿಯಲ್ಲಿ ಬಾಗಿನ ಅರ್ಪಣೆ ಮಾಡಿದ್ದೇವೆ. ಈ ಮಧ್ಯೆ ಎರಡು ವರ್ಷ ಅಣೆಕಟ್ಟು ಭರ್ತಿ ಆಗಿರಲಿಲ್ಲ. ಈ…

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ-ಸಿಎಂ ಸಿದ್ದರಾಮಯ್ಯ

ಮೈಸೂರು, ಜು,20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್…

ಆಡಳಿತ ನಡೆಸಲು ಆಗದೆ ಇದ್ದರೆ ಅಧಿಕಾರ ಬಿಟ್ಟು ತೊಲಗಿ: ಸಿ.ಟಿ.ರವಿ ಆಗ್ರಹ

ಬೆಂಗಳೂರುಜು,10- ರಾಜ್ಯದ ಬೇಹುಗಾರಿಕಾ ದಳ ಕೋಮಾ ಸ್ಥಿತಿಗೆ ತಲುಪಿದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದ’ಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ್ಳೆಯ ಕಾರಣಕ್ಕೆ ಕರ್ನಾಟಕ ಸುದ್ದಿ ಆಗುತ್ತಿಲ್ಲ. ಗ್ಯಾಂಗ್ ರೇಪ್, ಕಾಲ್ತುಳಿತ, ಆತ್ಮಹತ್ಯೆ, ಕೊಲೆಯಂಥ ಕಾರಣಕ್ಕೆ ಕರ್ನಾಟಕ ಸುದ್ದಿ ಆಗುವುದು ಒಳ್ಳೆಯ ಸಂಗತಿಯಲ್ಲ. ಈ ಸರಕಾರ, ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಆಡಳಿತ ನಡೆಸಲು ಆಗದೆ ಇದ್ದರೆ…

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ, ಜು.09-ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂದು ಮಾಧ್ಯಮದವರು ಕೇಳಿದಾಗ ಅವರು ಹೀಗೆ ಪ್ರತಿಕ್ರಿಯಿಸಿದರು. “ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನೂ ನಾನು ಸ್ವೀಕಾರ ಮಾಡುತ್ತೇನೆ” ಎಂದರು. ಸಂಪುಟ…

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ನವದೆಹಲಿ,ಜು,09- ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ದೆಹಲಿ…

ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತಾಡಿದರೆ, ಏಕವಚನದಲ್ಲಿ ಮಾತಾಡಿದರೆ ಕ್ರಮವಿಲ್ಲ: ಆರ್‌.ಅಶೋಕ

ಬೆಂಗಳೂರು, ಜು,5-ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ ಸದಸ್ಯರಾದ ಎನ್‌.ರವಿಕುಮಾರ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಐಎಎಸ್‌ ಅಧಿಕಾರಿಯಾದ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆದರೂ ಕ್ರಮ ಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಎಲ್ಲೂ ಅಭಿವೃದ್ಧಿ ಕಾರ್ಯ ನಡೆಯದೆ, ಶಾಸಕರು ದಂಗೆ ಏಳುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ…

ಹುಚ್ಚುತನದ ಹೇಳಿಕೆಗೆ ಜನರ ಕ್ಷಮೆ ಕೇಳಿ: ಯಡಿಯೂರಪ್ಪ ಆಗ್ರಹ

ಬೆಂಗಳೂರುಜು,05- ಆರೆಸ್ಸೆಸ್ ನಿಷೇಧ ಕುರಿತ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆಯವರ ಹೇಳಿಕೆ ಹುಚ್ಚುತನದ್ದು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟೀಕಿಸಿದ್ದು, ಅವರು ತಮ್ಮ ಹೇಳಿಕೆ ಸಂಬಂಧ ದೇಶದ ಜನರ ಕ್ಷಮಾಪಣೆ ಕೇಳಬೇಕೆಂದು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸುವುದಾಗಿ ಹೇಳಿದ್ದಾರೆ ಎಂದರಲ್ಲದೆ, ಇಡೀ ದೇಶದ…

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಬೆಂಗಳೂರು,ಜು,03- ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು…

ಸಿದ್ದರಾಮಯ್ಯರ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ: ಬಿ.ವೈ.ವಿಜಯೇಂದ್ರ ವ್ಯಂಗ್ಯ

ಬೆಂಗಳೂರು,ಜು,02- ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ.…

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ನೂ ಉತ್ತರ ಜಿಲ್ಲೆ;ಸಚಿವಸಂಪುಟದ ನಿರ್ಣಯ

ಬೆಂಗಳೂರು, ಜು,02-ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಬೆಂಗಳೂರು ಉತ್ತರ ತಾಲ್ಲೂಕು” ಎಂದು ಬಾಗೇಪಲ್ಲಿಗೆ “ಭಾಗ್ಯನಗರ” ಎಂದು ಹೆಸರಿಡಲು ಇಂದು ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಈ ಕುರಿತು ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ವಿವರ ನೀಡಿದರು. ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ…

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಜು,02-ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ. ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ…

ಕಾಂಗ್ರೆಸ್ ಅಧಿಕಾರ-ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

ಬೆಂಗಳೂರು,ಜು,01-ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಭೀಭತ್ಸ ಕೃತ್ಯ ನಡೆದು ತಣ್ಣಗಾಗಿತ್ತು. ಆಗ ಕೃತ್ಯ ಎಸಗಿದಾತ ಮಾನಸಿಕ ಅಸ್ವಸ್ಥ ಎಂದಿದ್ದರು. ಅದರ ನಂತರ ಭಟ್ಕಳದಲ್ಲಿ ಪ್ರಕರಣ ಆಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು, ಹೊಸನಗರ,…

ನಮ್ಮ ಕೊನೆ ಉಸಿರಿರುವರೆಗೂ ಮಂಡ್ಯ ಜನರ ಸೇವೆ ಮಾಡುತ್ತೇವೆ- ನಿಖಿಲ್ ಕುಮಾರಸ್ವಾಮಿ

ಮದ್ದೂರು,ಜೂ,30- ಪೆನ್ನು ಪೇಪರ್ ನಾಯಕರೇ ನಿಮ್ದು ಏನೇ ರಾಜಕಾರಣ ಇದ್ದರು ನಿಮ್ಮ ಚೌಕಟ್ಟಿಗೆ ಮಾತ್ರ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಮದ್ದೂರು ವಿಧಾನಸಭಾ ಕ್ಷೇತ್ರದ ಶಾಂತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು ಅವರು. ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆವರೆಗೂ ಗೃಹಲಕ್ಷ್ಮಿ ಹಣ ಹಾಕಲ್ಲ. ಯಾವುದಾದರು ಉಪಚುನಾವಣೆ, ಸಂಸತ್ ಚುನಾವಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ…

ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ: ಸಿ.ಎಂ ವ್ಯಂಗ್ಯ

ಕೆಆರ್ ಎಸ್ .(ಮಂಡ್ಯ) 30-ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸೋತ ಗಿರಾಕಿಗಳು ಸರ್ಕಾರ…

ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ*: *ಸಿಎಂ ಸಿದ್ದರಾಮಯ್ಯ

ಮೈಸೂರು, ಜೂ, 30-:ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು. ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು…

1 2 3 22
error: Content is protected !!