Browsing: ರಾಜಕೀಯ

ರಾಜಕೀಯ

ಬಿಎಸ್‌ವೈ ಸ್ಥಾನಕ್ಕೆ ಬಿಜೆಪಿಯಲ್ಲಿ ಮತ್ತೊಬ್ಬ ಸಮರ್ಥನಾಯಕರೇ ಇಲ್ಲ-ಸಿದ್ದು

ಹುಬ್ಬಳ್ಳಿ,ಮೇ,೨೬: ರಾಜ್ಯದಲ್ಲಿ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣವಿಫಲರಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಳಿಸಲು ಬಿಜೆಪಿ ಹೈಕಮಾಂಡ್ ಪ್ರಯತ್ನಪಡುತ್ತಿದೆ ಆದರೆ ಅವರ ಸ್ಥಾನಕ್ಕೆ ಮತ್ತೊಬ್ಬ ಸಮರ್ಥನಾಯಕ ಆ ಪಕ್ಷದಲ್ಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬೀದಿ ಕಾಳಗ ನಡೆಯುತ್ತಿದೆ. ಅವರ ಪಕ್ಷದ ಶಾಸಕರೇ ಯಡಿಯೂರಪ್ಪ ವಿರುದ್ಧವಾಗಿ ಮಾತನಾಡಿದ್ದಾರೆ.ನಾಯಕತ್ವ ಬದಲಾವಣೆಯಾದ ತಕ್ಷಣ ಸರ್ಕಾರ ಹೋಗುತ್ತದೆ ಎಂದು ಅಂದುಕೊಳ್ಳುವುದಿಲ್ಲ, ಅಲ್ಲಿ ಸಮರ್ಥ ಬದಲಿ…

ಕದ್ದುಮುಚ್ಚಿ ಮಾಡುವುದು ಬಿಜೆಪಿ ಸಂಸ್ಕೃತಿ-ಎಚ್‌ಡಿ ಕೆ ವ್ಯಂಗ್ಯ

ಬೆಂಗಳೂರು, ಮೇ ೨೮: ಜಿಂದಾಲ್‌ಗೆ ಕೊಟ್ಟಿದ್ದ ಭೂಮಿಯನ್ನು ವಾಪಾಸ್ ಪಡೆದ ರಾಜ್ಯ ಸರ್ಕಾರದ ಧೋರಣೆಯನ್ನು ವ್ಯಂಗ್ಯಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿದ ಪಾಪದ ಫಲವನ್ನು ಬಿಜೆಪಿ ಅನುಭವಿಸುತ್ತಿದೆ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು.ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಿಎಂ ಎಚ್‌ಡಿಕೆ, “”ಜಿಂದಾಲ್ ಕಂಪನಿಗೆ ೩೬೬೭ ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ” ಎಂದಿದ್ದಾರೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು…

ಸಿಎಂ ಬದಲಾವಣೆ ಮಾಡುವಷ್ಟು ಶಕ್ತಿ ನನಗಿಲ್ಲ-ಯೋಗೇಶ್ವರ್

ಬೆಂಗಳೂರು, ಮೇ ೨೭; ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ ಇದಕ್ಕೆ ಪುಷ್ಟಿ ನೀಡುವಂತೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರು ದೆಹಲಿಯಲ್ಲಿ ಬೀಡುಬಿಟ್ಟಿದ್ದು ಚರ್ಚೆಗೆ ಮತ್ತಷ್ಟು ಗ್ರಾಸವಾಗಿತ್ತು ಆದರೆ ಯೋಗೇಶ್ವರ್ ಅವರು ಈಗ ದೆಹಲಿ ಭೇಟಿ ಕುರಿತು ವಿವರಣೆ ನೀಡಿದ್ದಾರೆ. ನಮ್ಮ ಉದ್ದೇಶ ಮುಖ್ಯಮಂತ್ರಿ ಬದಲಾವಣೆ ಯಲ್ಲ ಅವರನ್ನು ಬದಲಾಯಿಸುವಷ್ಟು ಶಕ್ತಿಯೂ ನನ್ನಲ್ಲಿಲ್ಲ ಆದರೆ ಅವರ ಪುತ್ರ ಅವತ ಹಸ್ತಕ್ಷೇಪ ಕುರಿತು ನಮ್ಮ ಅಸಮಾಧಾನ ಎಂದಿದ್ದಾರೆ. ದೆಹಲಿಗೆ ನನ್ನ ವೈಯಕ್ತಿಕ ವಿಚಾರಕ್ಕೆ ಆಗಾಗ ಹೋಗುತ್ತಿರುತ್ತೇನೆ.…

ನಾಯಕತ್ವ ಬದಲಾವಣೆ ಗೆ ಮುಂದಾದವರಿಗೆ ಬಿಎಸ್‌ವೈ ಕೊಟ್ಟ ಏಟು

ಬೆಂಗಳೂರು,ಮೇ,೨೭: ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಕುರಿತಂತೆ ಭಾರಿ ಸುದ್ದಿಯಲ್ಲಿದ್ದು ಇದಕ್ಕೆ ಸಂಬಧಿಸಿದಂತೆ ಪ್ರತಿಕ್ರಿಯಿಸಿರುವ ಬಿಎಸ್‌ವೈ ಯಾರೋ ಎಲ್ಲಿಗೋ ಹೋದವರಿಗೆ ಉತ್ತರ ಸಿಕ್ಕಿದೆ .ಅಲ್ಲಿಯೇ ಉತ್ತರ ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ವಿರೋಧಿ ಗುಂಪಿಗೆ ಟಾಂಗ್ ನೀಡಿದ್ದಾರೆ. ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಯಡಿಯುರಪ್ಪ,, ದೆಹಲಿಗೆ ಹೋಗಿ ಬಂದರೆ ಅರ್ಥವಿಲ್ಲ. ದೆಹಲಿಗೆ ಹೋದವರಿಗೆ ಉತ್ತರ ಕೊಟ್ಟು ಕಳಿಸಿದ್ದಾರೆ. ಕೊರೋನಾ ನಿಯಂತ್ರಿಸುವುದಷ್ಟೇ ನನ್ನ ಗುರಿ. ಸದ್ಯ ನನ್ನ ಆದ್ಯತೆ ಕೋವಿಡ್ ನಿಯಂತ್ರಣಕ್ಕಷ್ಟೇ ಆಗಿದೆ. ಬೇರೆ ವಿಷಯ…

ಬಿಎಸ್‌ವೈ ಬದಲಾವಣೆ ಖಚಿತ;ಜೂನ್ ೭ರ ನಂತರ ರಾಜಕೀಯ ದ್ರವೀಕರಣ!

ಬೆಂಗಳೂರು,೨೬: ಕರ್ನಾಟಕದಲ್ಲಿ ಬರುವ ಜೂನ್ ಏಳರ ನಂತರ ರಾಜಕೀಯ ದ್ರವೀಕರಣವಾಗುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ; ದೇಶದಲ್ಲಿ ಬಿಜೆಪಿ ಮತ್ತು ಪ್ರಧಾನಿ ಮೋದಿ ವರ್ಚಸ್ಸು ಗಣನೀಯ ಪ್ರಮಾಣದಲ್ಲಿ ಕುಸಿದ ಹಿನ್ನೆಲೆಯಲ್ಲಿ ಪಕ್ಷ ಮತ್ತು ಮೋದಿ ವರ್ಚಸ್ಸನ್ನು ವೃದ್ಧಿಸಿಕೊಳ್ಳಲು ಕೆಲ ಬದಲಾವಣೆಗಳನ್ನು ತರಲು ಆರ್‌ಎಸ್‌ಎಸ್ ಮುಂದಾಗಿದೆ ಅದರ ಒಂದು ಭಾಗವೇ ಕರ್ನಾಕಟದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ. ಹೌದು.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾಯಿಸಲು ಈಗಾಗಲೇ ವೇದಿಕೆ ಸಜ್ಜಾಗಿದೆ. ಜುಲೈ ೭ ರ ನಂತರ ಲಾಕ್ ಡೌನ್ ಮುಗಿಯುತ್ತಿದ್ದಂತೆ ರಾಜಕೀಯ ಬೆಳವಣಿಗೆಗಳು…

ಡಾ.ದೇವಿ ಶೆಟ್ಟಿ ಗೆ ಕೇಂದ್ರ ಸಂಪುಟದಲ್ಲಿ ಸ್ಥಾನ..!?

ಬೆಂಗಳೂರು ,ಮೇ,೨೫: ಇದು ಸತ್ಯವೋ ಸುಳ್ಳೋ ಗೊತ್ತಿಲ್ಲ ಹೀಗೊಂದು ಸುದ್ದಿ ಹರಡುತ್ತಿದೆ ಸದ್ಯದಲ್ಲೇ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಈ ಸಂಪುಟಕ್ಕೆ ನಾರಾಯಣ ಹೆಲ್ತ್‌ಕೇರ್ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಅವರನ್ನು ಸೇರಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಅವರನ್ನು ಕೋವಿಡ್ ಮೂರನೇ ಅಲೆಯ ಟಾಸ್ಕ್‌ಪೋರ್ಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕಮಾಡಲಾಗಿದ್ದು ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಂಪುಟ ದರ್ಜೆಯ ಸಚಿವರನ್ನಾಗಿ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಹಾಲಿ ಇರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ…

ಕೇಂದ್ರದಿಂದ ಹಣ ಬಿಡುಗಡೆಯಲ್ಲಿ ತಾರತಮ್ಯ-ದೇವೇಗೌಡ

ಬೆಂಗಳೂರು,ಮೇ,೨೪: ದೇಶದಲ್ಲಿ ಕೊರೊನಾ ಸಂಖ್ಯೆ ಹೆಚ್ಚಳಕ್ಕೆ ಪಂಚರಾಜ್ಯಗಳ ಚುನಾವಣೆಗಳು ನಡೆಸಿದ ರ‍್ಯಾಲಿಗಳೂ ಕಾರಣ ಎಂದು ಮಾಜಿ ಪ್ರದಾನಿ ಎಚ್.ಡಿ.ದೇವೇಗೌ ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಧಾನಿ ಮೋದಿ ಅವರು ಎರಡನೇ ಅಲೆ ಬಗ್ಗೆ ಹೆಚ್ಚು ಗಮನ ಹರಿಸಲಿಲ್ಲ ಬದಲಾಗಿ ಪಂಚರಾಜ್ಯಗಳ ಚುನಾವಣೆಗಳ ಬಗ್ಗೆ ಹೆಚ್ಚು ಒತ್ತು ಕೊಟ್ಟರು ಕೊರೊನಾ ಬಗ್ಗೆ ಪ್ರಾಮುಖ್ಯತೆ ನೀಡಿದ್ದರೆ ಇಂತ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದು ಅವರು ಹೇಳಿದರು. ಕೇಂದ್ರ ಸರ್ಕಾರ ಹಣ ಬಿಡುಗಡೆಯಲ್ಲೂ ಕೂಡ ತಾರತಮ್ಯ ಮಾಡುತ್ತಿದೆ ಎಂದು…

ಕೋವಿಡ್ ಸೌಲಭ್ಯಗಳ ಕುರಿತು ಶ್ವೇತಪತ್ರಹೊರಡಿಸಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮೇ,೨೪ : ರಾಜ್ಯದಲ್ಲಿ ಲಭ್ಯ ಇರುವ ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಇತರ ಸೌಲಭ್ಯಗಳ ಬಗ್ಗೆ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶ್ವೇತಪತ್ರ ಹೊರಡಿಸುವಂತೆ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಬೇಕು. ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ. ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು ಎಂದರು. ಆಕ್ಸಿಜನ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನೂ ಸರ್ಕಾರ ಈ…

ಲಸಿಕೆ ವಿಚಾರದಲ್ಲಿ ಜನರ ಹಾದಿ ಸಪ್ಪಿಸಿದ ಕಾಂಗ್ರೆಸ್ ಕ್ಷಮೆ ಕೇಳಲಿ; ಸಿ.ಟಿ.ರವಿ

ಬೆಂಗಳೂರು,ಮೇ,22: ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ದ್ವಂದ್ವ ನಿಲುವು ತಾಳಿದ್ದು..ಇದರಿಂದಲೇ ಜನರ ಹಾದಿ ತಪ್ಪಿಸಿದ್ದಾರೆ ಹೀಗಾಗಿ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೊರೋನಾ ಲಸಿಕೆ ವಿರೋಧಿಸಿಲ್ಲ ಅಂತಾ ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ ಹೇಳುತ್ತಾರೆ. ಆದರೆ ನಮ್ಮ ಬಳಿ ಲಸಿಕೆ ವಿರೋಧಿ ಹೇಳಿಕೆಗಳು, ಟ್ವಿಟ್ಟರ್ ಗಳು ಸಾಕ್ಷಿಯಾಗಿ ಇವೆ. ಲಸಿಕೆ ವಿರೋಧಿಸುವವರು ದೇಶದ ಜನರ ಬಳಿ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.…

ಡಿಸಿಗಳಿಂದ ಮಾಹಿತಿ ಸಂಗ್ರಹಿಸಲು ಅಡ್ಡಿ :ಹಕ್ಕುಚ್ಯುತಿ ನಿರ್ಣಯ ಮಂಡಿಸಲು ನಿರ್ಧಾರ-ಸಿದ್ದು

ಬೆಂಗಳೂರು ,ಮೇ,21: ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕೊರೊನಾದಿಂದಾಗಿ ರಾಜ್ಯ…

ಲಸಿಕೆ ವಿಚಾರದಲ್ಲಿ ಎಚ್‌ಡಿಕೆ ಹೇಳಿಕೆಗೆ ಸಿದ್ದರಾಮಯ್ಯ ಕಿಡಿ

ಬೆಂಗಳೂರು.ಮೇ,೨೦: ಕೋವಿಡ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುವುದಕ್ಕೆ ಕಾಂಗ್ರೆಸ್ ಕಾರಣ ಎಂದು ಹೇಳಿಕೆ ನೀಡಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎಂದು ಆರೋಪಿಸುವ ಮೂಲಕ ಕುಮಾರಸ್ವಾಮಿ ತಮಗೆ ತಾವೇ ಗೋಲು ಹೊಡೆದುಕೊಂಡಿದ್ದಾರೆ. ಕಾಂಗ್ರೆಸ್ ಪ್ರಚಾರ ನಂಬಿ ನೀವು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮಾರ್ಚ್ ೨೩ರ ವರೆಗೆ ಕಾದು ಕೂತಿದ್ದೇ…

ಇಂದಿರಾ ಕ್ಯಾಂಟೀನ್ ಮುಂದೆ ಜನರೇ ಇಲ್ಲ ೬ ಲಕ್ಷ ಲೆಕ್ಕ ಹೇಗೆ-ಎಚ್‌ಡಿಕೆ

ಬೆಂಗಳೂರು, ಮೇ ,೨೦: ಇಂದಿರಾ ಕ್ಯಾಂಟೀನ್‌ಲ್ಲಿ ಅಹಾರ ಪಡೆಯಲು ಜನರೇ ಇಲ್ಲ ಆದರೆ ನಿತ್ಯ ೬ ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ನಲ್ಲಿ ಅಹಾರ ಪಡೆಯುತ್ತಿದ್ದಾರೆ ಎನ್ನುವ ಮೂಲಕ ಸರ್ಕಾರ ಸುಳ್ಳು ಲೆಕ್ಕ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ನಿತ್ಯ ೬ ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ ೬ ಲಕ್ಷ ಜನರ ಲೆಕ್ಕ…

ಪ್ಯಾಕೇಜ್ ಹೆಸರಿನಲ್ಲಿ ಜನರಿಗೆ ಟೋಪಿ; ಎಚ್‌ಡಿಕೆ ಟೀಕೆ

ಬೆಂಗಳೂರು,ಮೇ,೧೯: ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್‌ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ಜನರ ಹೆಸರಿನಲ್ಲಿ ಜನರಿಗೆ ಟೋಪಿ ಹಾಕಿದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ, ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ಸಮರ್ಪಕವಾಗಿಲ್ಲ ಕಳೆದ ವರ್ಷವೂ ಕೂಡ ಇದೇ ರೀತಿ ಪ್ಯಾಕೇಜ್ ಘೋಷಿಸಿ ಜನರಿಗೆ ವಂಚಿಸಿತ್ತು ಈಗ ಮತ್ತೊಮ್ಮೆ ನಾಟಕೀಯ ಪ್ಯಾಕೇಜ್ ಘೋಷಿಸುವ ಮೂಲಕ ಜನರಿಗೆ ಟೋಪಿ ಹಾಕಿದೆಎಂದು ಟೀಕಿಸಿದ್ದಾರೆ. ಕಳೆದ ವರ್ಷವೂ…

ಕೊರೊನಾ ಪ್ಯಾಕೇಜ್ ಜನರ ಕಣ್ಣಿಗೆ ಮಣ್ಣೆರಚುವ ತಂತ್ರ ;ಸಿದ್ದು

ಬೆಂಗಳೂರು,ಮೇ,19: ಕೊರೊನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿ ರೀತಿಯಂತಿದೆ. ಜೊತೆಗೆ ಅವೈಜ್ಞಾನಿಕ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬಡ ಕುಟುಂಬಗಳಿಗೆ ತಲಾ ಹತ್ತು ಕೆ.ಜಿ. ಅಕ್ಕಿ ಮತ್ತು ದುಡಿಯುವ ವರ್ಗದವರಿಗೆ ತಲಾ ಹತ್ತು ಸಾವಿರ ರೂ. ಪರಿಹಾರ ನೀಡುವ ಪ್ಯಾಕೇಜ್ ಘೋಷಣೆ ಮಾಡಿ ನೂರಕ್ಕೆ ನೂರರಷ್ಟು ಲಾಕ್‍ಡೌನ್ ಜಾರಿಗೆ ತನ್ನಿ ಎಂದು ಅವರು ಒತ್ತಾಯಿಸಿದ್ದಾರೆ. ತಮ್ಮ ನಿವಾಸದಲ್ಲಿ  ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,…

ಬಡವರಿಗೆ ಉಪಯೋಗವಾಗದ ಆರ್ಥಿಕ ಪ್ಯಾಕೇಜ್-ಡಿಕೆಶಿ

ಬೆಂಗಳೂರು,ಮೇ,19:ಲಾಕ್ ಡೌನ್ ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿರುವ 1215 ಕೋಟಿ ರುಪಾಯಿ ಪ್ಯಾಕೇಜ್ ಕೇವಲ ನೆಪಕ್ಕೆ ಮಾತ್ರ. ಬಡವರಿಗೆ ನೆರವಾಗುವ ಉದ್ದೇಶ ಇದರಲ್ಲಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಸರ್ಕಾರದ ಕೊರೋನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಂಬಿಕೆ ಇಲ್ಲ. ಕಳೆದ ಬಾರಿಯೂ ಇದೇ ರೀತಿ ಪರಿಹಾರ ಘೋಷಿಸಿದ್ದರು. ಚಾಲಕರು, ನೇಕಾರರು, ಸವಿತಾ ಸಮಾಜದವರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡಿಲ್ಲ ಎಂದು…

ದೇಶದ ಸಂಕಷ್ಟ ಸ್ಥಿತಿಯಲ್ಲೂ ಕೈ-ಕಮಲದ ರಾಜಕೀಯ ಕೆರಚಾಟ

ಬೆಂಗಳೂರು,ಮೇ೧೯: ಈ ದೇಶದಲ್ಲಿ ಬಂದೊದಗಿದ ಕೊರೊನಾ ಮಹಾಮಾರಿಗೆ ದಿನನಿತ್ಯ ಸಾವಿರಾರು ಮಂದಿ ಬಲಿಯಾಗುತ್ತಿದ್ದಾರೆ ಬದುಕೆ ದುಸ್ತರವಾದ ಈ ಹೊತ್ತಿನಲ್ಲಿ ರಜಕೀಯ ಪಕ್ಷಗಳ ಕೆರಚಾಟ ಅಗತ್ಯವಿದೆಯೇ. ರಾಜಕೀಯ ಪಕ್ಷಗಳ ನಾಯಕರಿಗೆ ಈ ದೇಶದ ಭವಿಷ್ಯ ಈ ದೇಶದ ಜನರ ಸಂಕಷ್ಟಗಳು ಅರಿವು ಇದ್ದಿದ್ದರೆ ಈ ಸಮಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ಪರಸ್ಪರ ವಾದ ಪ್ರತಿವಾದಗಳಲ್ಲಿ ತೊಡಗುತ್ತಿರಲಿಲ್ಲ ರಾಜಕಾರಕ್ಕೆ ಇಳಿಯುತ್ತಿರಲಿಲ್ಲ. ದೇಶದ ಜನರ ಚಿತ್ತ ಬೇರೆಡೆಗೆ ಎಳೆಯಲು ರಾಜಕಾರಣಿಗಳು ಈ ಹೊತ್ತಿನಲ್ಲಿ ಇಂತ ವಾಕ್ಸಮರಕ್ಕೇ ಇಳಿದಿದ್ದಾರೆಯೇ ಎನ್ನುವ ಅನುಮಾನಗಳು…

ದೇವಗೌಡರ ೮೮ ನೇ ಜನ್ಮದಿನಕ್ಕೆ ಶುಭಕೋರಿದ ಗಣ್ಯರು

ಬೆಂಗಳೂರು,ಮೇ೧೮:ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ೮೮ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಜನ್ಮದಿನದ ಅಂಗವಾಗಿ ಪದ್ಮನಾಭನಗರದಲ್ಲಿರುವ ಅವರ ನಿವಾಸದಲ್ಲಿ ಅವರ ಕುಟುಂಬ ವರ್ಗ ಸರಳವಾಗಿ ಜನ್ಮದಿನವನ್ನು ಆಚರಿಸಿದರು. ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆಯೇ ದೂರವಾಣಿ ಕರೆ ಮಾಡಿ ಜನ್ಮದಿನದ ಶುಭ ಹಾರೈಸಿದ್ದಾರೆ. ಇನ್ನೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ,ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹಾಗೂ ಅವರ ಪುತ್ರ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸಂಸದ ಬಿ.ವೈ.ರಾಘವೇಂದ್ರ, ಪ್ರತಾಪ ಸಿಂಹ, ಸಂಸದೆ…

ಬ್ಲಾಕ್ ಫಂಗಸ್ ಔಷಧ ತರಿಸಿಕೊಳ್ಳುವಂತೆ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಬೆಂಗಳೂರು, ಮೇ ೧೭: ರಾಜ್ಯದಲ್ಲಿ ಎಲ್ಲರಲ್ಲೂ ಭಯ ಹುಟ್ಟಿಸಿರುವ ಕಪ್ಪು ಶಿಲೀಂಧ್ರದ ಔಷಧಗಳನ್ನು ತರಿಸಿಕೊಳ್ಳುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಆದಷ್ಟು ಬೇಗ ತರಿಸಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ ೧,೦೫೦ ವಾಯ್ಲ್‌ಗಳು (ಶೀಶೆ)…

ಕೊರೊನಾ ಬಿರುಗಾಳಿಯಲ್ಲಿ ತೂರಿ ಹೋದ ಬಿಜೆಪಿ ಭಿನ್ನಮತ

ಬೆಂಗಳೂರು,ಮೇ,೧೭:ಬಿಜೆಪಿ ರೆಬೆಲ್ ನಾಯಕ ಬಸವನಗೌಡ ಯತ್ನಾಳರ ಪ್ರಕಾರ ಈಗಾಗಲೇ ಸಿಎಂ ಯಡಿಯೂರಪ್ಪ ತಮ್ಮ ಕುರ್ಚಿ ಕಳೆದುಕೊಳ್ಳಬೇಕಿತ್ತು. ಕರುನಾಡ ಹೊಸ ಸಿಂಹಾಸನಾಧೀಶರಾಗಿ ಉತ್ತರ ಕರ್ನಾಟಕದ ಯಾರದರೂ ವಿಜೃಂಭಿಸಬೇಕಿತ್ತು. ಯತ್ನಾಳ್ ಯಡಿಯೂರಪ್ಪ ವಿರುದ್ದ ಗುಟುರು ಹಾಕಿದಾಗೆಲ್ಲ, ನೋಡಿ ಸಧ್ಯವೇ ಕರುನಾಡಿಗೆ ಹೊಸ ಸಿಎಂ ಬರ್ತಾರೆ. ಅವರು ಉತ್ತರ ಕರ್ನಾಟಕವರೇ ಆಗಿರ್ತಾರೆ ಎಂದು ಒಗಟು ನುಡಿಯುತ್ತಿದ್ದರು. ಹೊಸ ಸಿಎಂ ಹೆಸರನ್ನು ಮಾತ್ರ ಯತ್ನಾಳ್ ಜಪ್ಪಯ್ಯ ಎಂದರೂ ಹೇಳುತ್ತಿರಲಿಲ್ಲ. ಈ ರೀತಿ ಒಗಟನ್ನು ಹೇಳುವ ಮೂಲಕ ಅವರು ತಮ್ಮ ಅಂತರಂಗದ ಕನಸನ್ನು ರಾಜ್ಯದ…

ಬೆಜೆಪಿ ಬೆಂಬಲಿಗರಿಂದ ಬೆಡ್ ಬ್ಲಾಕ್‌ದಂಧೆ-ರಾಮಲಿಂಗಾರೆಡ್ಡಿ ಆರೋಪ

ಬೆಂಗಳೂರು,ಮೇ,೧೬: ಬಿಜೆಪಿ ಶಾಸಕರ ಬಂಬಲದ ಪ್ರಭಾದಿಂದ ಬೆಡ್ ಬ್ಲಾಕಿಂಗ್ ದಂಧೆ ಬೆಂಗಳೂರಿನಲ್ಲಿ ಹೆಚ್ಚಾದ ಕಾರಣ ಜನಸಾಮಾನ್ಯರಿಗೆ ಬೆಡ್ ದೊರಕುವುದು ದುಸ್ತರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ಬಿಟಿಎಂ ವಿಧಾನ ಸಭಾ ಕ್ಷೇತ್ರದ ಕೋರಮಂಗಲದ ಒಳಾಂಗಣ ಸ್ಟೇಡಿಯಂನಲ್ಲಿ ೨೪x೭ ತುರ್ತು ಟೈಯಾಗ್ ಸೆಂಟರ್,ಆಕ್ಸಿಜನ್ ಹಾಗೂ ಕೋವಿಡ್ ಬೆಡ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ಅವರು, ಬೆಡ್ ಬ್ಲಾಕಿಂಗ್ ದಂಧೆಯಿಂದಾಗಿ ಕೋವಿಡ್ ಗೆ ಚಿಕಿತ್ಸೆ ಸಿಗದೇ ಜನರು ಸಾವನ್ನಪ್ಪುತ್ತಿದ್ದಾರೆ ಎಂದರು. ಎಲ್ಲ ಜನಸಾಮಾನ್ಯ ಕೋವಿಡ್ ಪೀಡಿತರಿಗೆ ಸೂಕ್ತ ಬೆಡ್ ವ್ಯವಸ್ಥೆ…

error: Content is protected !!