Browsing: ರಾಜಕೀಯ

ರಾಜಕೀಯ

ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ

ರಾಮನಗರ,ಜೂ,26-ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ದೃಢ ಸಂಕಲ್ಪವನ್ನು ವ್ಯಕ್ತಪಡಿಸಿದರು. ಇದು ನಮ್ಮ ಸ್ವ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನ ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ. ಸೋಲು ಗೆಲುವು ಸರ್ವೇ ಸಾಮಾನ್ಯ ನನ್ನ ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ. ಈ ಸೋಲುಗಳಿಂದ ಕುಗ್ಗದೆ ಮತ್ತೆ ಅವಕಾಶ ಸಿಕ್ಕರೆ ರಾಮನಗರದಿಂದಲೇ ಸ್ವರ್ಧೆ…

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬದಲಾವಣೆ ಸಾಧ್ಯತೆ

ಬೆಂಗಳೂರು,ಜೂ,26-ರಾಜ್ಯ ಬಿಜೆಪಿಯಲ್ಲಿ ಉಂಟಾಗಿದ್ದ ಆಂತರಿಕ ಭಿನ್ನಾಭಿಪ್ರಾಯಗಳು ಈಗ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆ ಆಗುವ ಸಾಧ್ಯತೆಗಳು ಹೆಚ್ಚಿವೆ. ಪ್ರತಿಪಕ್ಷದ ನಾಯಕ ಆಶೋಕ್ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ದಿಡೀರ್ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡು ರಾಜ್ಯದ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಮರ್ಥವಾಗಿ ಹೋರಾಟ ನಡೆಸುತ್ತಿಲ್ಲ ಎನ್ನುವ ಕಾರಣಕ್ಕೆ ಈ ಇಬ್ಬರು ನಾಯಕರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಲಾಸ್ ತಗೆದುಕೊಂಡಿದ್ದಾರೆ ಎನ್ನಲಾಗಿದೆ. ಕಳೆದವಾರ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ…

ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.25_“ಮುಂದಿನ ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಿಸಲಾಗುವುದು. ತಪ್ಪು ಗ್ರಹಿಕೆಯಿಂದ ಕೆಲವರು ಈ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಮ್ಮೆ ಎಲ್ಲರ ಜತೆ ಸಭೆ ಮಾಡುತ್ತೇನೆ. ಈ ಕಾರ್ಯಕ್ರಮ ನಡೆಯಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ಸಂಬಂಧ ಮಂಡ್ಯ ಜಿಲ್ಲೆ ರೈತ ಹಾಗೂ ಇತರೆ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿ…

ರಾಜ್ಯ ಸರ್ಕಾರದ ವಿರುದ್ದ ಜನಾಂದೋಲನಕ್ಕೆ ಬಿಜೆಪಿ ತೀರ್ಮಾನ : ಬಸವರಾಜ ಬೊಮ್ಮಾಯಿ

ಹಾವೇರಿ,ಜೂ,23-ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಜನಾಂದೋಲನ ಮಾಡಬೇಕೆಂದು ಬಿಜೆಪಿ ತೀರ್ಮಾನ ಮಾಡಿದೆ. ಜನರ ವಿಶ್ವಾಸದೊಂದಿಗೆ ಯಾವ ಪ್ರದೇಶದಲ್ಲಿ ಯಾವ ವಿಷಯ ತೆಗೆದುಕೊಂಡು ಜನಾಂದೋಲನ ರೂಪಿಸಬೇಕು ಎಂದು ಪಕ್ಷದ ಪ್ರಮುಖರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದ ವರಗೆ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರಾಮಾಣಿಕ…

ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ ಸಿಎಂ

ರಾಯಚೂರು ಜೂ 23- ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಹಾಗೂ 371 ಜೆ ದಶಮಾನೋತ್ಸವ ಮತ್ತು 936 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ…

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.23-“ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ. ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು.ಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಸುರೇಶ್ ಅವರನ್ನು ಇಡಿ ವಿಚಾರಣೆ ಕರೆದಿರುವ ಬಗ್ಗೆ ಕೇಳಿದಾಗ, “ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು…

ವಸತಿ ಇಲಾಖೆ ಅಕ್ರಮ ಮರೆಮಾಚಲು ಹೆಚ್.ಕೆ. ಪಾಟೀಲ್ ಪತ್ರ ತೇಲಿ ಬಿಡಲಾಗಿದೆ!- ಹೆಚ್ ಡಿಕೆ ಆರೋಪ

ಬೆಂಗಳೂರು,ಜೂ,22-ವಸತಿ ಇಲಾಖೆಯಲ್ಲಿ ಕೇಳಿ ಬರುತ್ತಿರುವ ಆಕ್ರಮಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಸಚಿವ ಹೆಚ್.ಕೆ. ಪಾಟೀಲ್ ಬರೆದಿರುವ ಪತ್ರವನ್ನು ತೇಲಿ ಬಿಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಮಂಡ್ಯದಲ್ಲಿ ಸುಸಜ್ಜಿತ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.ವಸತಿ ಇಲಾಖೆಯಲ್ಲಿ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದನ್ನು ಜನರು ಹಾದಿಬೀದಿಗಳಲ್ಲಿ ಮಾತನಾಡುತ್ತಿದ್ದಾರೆ. ಹಣ ಕೊಟ್ಟವರಿಗೆ ಮನೆ ಹಂಚಿಕೆ ಮಾಡಲಾಗಿದೆ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರು,…

ಸತ್ಯ ಹೇಳಿದ ನಾಯಕರನ್ನು ಕಾಂಗ್ರೆಸ್ ಬೆದರಿಸುತ್ತಿದೆ- ವಿಜಯೇಂದ್ರ

ನೆಲಮಂಗಲ, ಜೂ,22-ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಬಿ.ಆರ್.ಪಾಟೀಲ್ ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚಲ್ಲಿದ್ದಾರೆ . ಬಡವರಿಗೆ ಮನೆಗಳನ್ನು ಕೊಡಬೇಕಿತ್ತು ಅಲ್ಲಿಯೂ ಸಹ ಭ್ರಷ್ಟಾಚಾರ ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ . ಹಿರಿಯ ನಾಯಕರಾದ ಬಿ.ಆರ್ ಪಾಟೀಲ್ ರವರನ್ನ ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ .ಕರ್ನಾಟಕ ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರಿಗೆ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಹಿಂದೆ ಯಡಿಯೂರಪ್ಪನವರ…

ಎಚ್.ಕೆ. ಪಾಟೀಲರ ಪತ್ರಕ್ಕೆ ಸಿಎಂ ಸ್ಪಂದನೆ ಏನು:ಬಸವರಾಜ ಬೊಮ್ಮಾಯಿ

ಗದಗ,ಜೂ,22-ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ ಶಹರದಲ್ಲಿ ಎಚ್.ಎಸ್.ಎಲ್. ಟೈಲ್ ಮತ್ತು ಗ್ರಾನೈಟ್ ಶೋ ರೂಮ್ ಉದ್ಘಾಟಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್. ಕೆ. ಪಾಟೀಲರು ಗಣಿಯಲ್ಲಿ ನೋಂದಾಗಿರುವ ಕೇಸ್‌ಗಳ ಬಗ್ಗೆ ಶೇ 90 ಕೇಸ್‌ಗಳು…

ಮನೆ ಹಂಚಿಕೆಯಲ್ಲಿ ಲಂಚ, ಬಿ,ಆರ್.ಪಾಟೀಲ್‌ಹೇಳಿಕೆ ಖಂಡಿಸಿದ ಡಿಕೆಶಿ

ಬೆಂಗಳೂರು,ಜೂ,೨೧-ವಸತಿಇಲಾಖೆಯಲ್ಲಿ ಮನೆ ಹಂಚಿಕೆ ಮಾಡಲು ಲಂಚ ನೀಡಿದವರಿಗೆ ಮಾತ್ರ ನೀಡಲಾಗುತ್ತದೆ ಎಂಬ ಶಾಸಕ ಬಿ.ಆರ್.ಪಾಟೀಲ್ ಅವರ ಹೇಳಿಕೆಯನ್ನುಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ. ರಾಜ್ಯ ನೀತಿಆಯೋಗದ ಉಪಧ್ಯಕ್ಚರಾದ ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಜಮೀರ್ ಅಹಮದ್ ಕಾರ್ಯದರ್ಶಿ ಸರ್ಪರಾಜ್‌ಖಾನ್ ಅವರೊಡನೆ ನಡೆಸಿದ ಸಂಭಾಷಣೆ ಆಡಿಯೋ ಕ್ಲಿಪನಲ್ಲಿ ತಮ್ಮ ಕ್ಷೇತ್ರದ ಹಳ್ಳಿಗಳಲ್ಲಿ ಮನೆ ಹಂಚಿಕೆನಡೆದಿದೆಎನ್ನಲಾಗಿದೆ ಲಂಚದ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ್ದ ಕಾರ್ಯದರ್ಶಿಯನ್ನುಪ್ರಶ್ನಿಸಿದ್ದಾರೆಮನೆ ಹಂಚಿಕೆಯ ಲಂಚದ ಆರೋಪ ಮಾಡಿ ತಮ್ಮದೆಪಕ್ಷದ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ್ದರು. ಈ ಕುರಿತು ಇಂದು ಸುದ್ದಿಗಾರರೊಂದಿಗೆ…

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಸರ್ಕಾರದ ಗುರಿ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.21-“2027ರ ಒಳಗಾಗಿ ಕೋಲಾರ ಭಾಗಕ್ಕೆ ಎತ್ತಿನ ಹೊಳೆ ನೀರನ್ನು ಹರಿಸಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.”ಈ ಯೋಜನೆಗೆ ಅರಣ್ಯ ಇಲಾಖೆಗೆ ಸಂಬಂಧಿತ ಸಮಸ್ಯೆಗಳು, ಭೂ ಸ್ವಾಧೀನ ಪ್ರಕ್ರಿಯೆ, ಬೈರಗೊಂಡಲು, ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ಭೂ ಸ್ವಾಧೀನ ಹಾಗೂ ಆರ್ಥಿಕ ವಿಚಾರವಾಗಿ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ಹೀಗಾಗಿ ಈ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ…

ವಸತಿ ಯೋಜನೆಗಳಲ್ಲಿ ಶೇ. 15 ಮೀಸಲಾತಿ- ಕೇಂದ್ರದ ಮಾದರಿ ಅನುಸರಿಸಿದ್ದೇವೆ – ಜಮೀರ್

ಬೆಂಗಳೂರು,ಜೂ,20- ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನ ವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ ಈ ಕುರಿತು ಹೇಳಿಕೆ ನೀಡಿರುವ ಅವರು, ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ.…

ಸರಕಾರದ ನಿರ್ಧಾರದಿಂದ ಎಸ್‍ಸಿ, ಎಸ್‍ಟಿ, ಒಬಿಸಿ ಜನರ ಮೀಸಲಾತಿಗೆ ಧಕ್ಕೆ – ಪ್ರಲ್ಹಾದ್ ಜೋಶಿ

ಬೆಂಗಳೂರು,ಜೂ,19-ವಸತಿ ಇಲಾಖೆಯ ವಿವಿಧ ಮನೆ ಹಂಚಿಕೆ ಯೋಜನೆಗಳಲ್ಲಿ ಶೇ 15ರಷ್ಟು ಮುಸಲ್ಮಾನರಿಗೆ ಹಂಚಿಕೆ ಮಾಡಲು ಮುಂದಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದಿಂದ ಸಾಮಾನ್ಯ ಜನರು, ಎಸ್‍ಸಿ, ಎಸ್‍ಟಿ, ಒಬಿಸಿ ಜನರ ಮೀಸಲಾತಿಗೆ ಧಕ್ಕೆ ಆಗಲಿದೆ; ಇದು ಖಂಡನೀಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ವಸತಿ ಯೋಜನೆಗಳಡಿ ಮುಸ್ಲಿಮರಿಗೆ ಶೇ 15 ಮೀಸಲಾತಿ ನೀಡಿದೆ. ಯಾವುದೇ ಮಾದರಿಯ…

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ: ಆರ್.ಅಶೋಕ

ಬೆಂಗಳೂರು, ಜೂ, 19-ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ ಪ್ರಕಾರ ಧರ್ಮಾಧಾರಿತವಾದ ಮೀಸಲು ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್‌ ನಾಯಕರು ಸಂವಿಧಾನದ ಪುಸ್ತಕ ಹಿಡಿದುಕೊಂಡು ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ. ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ.5 ರಷ್ಟು ಮೀಸಲು ಹೆಚ್ಚಿಸಿರುವುದರಿಂದ ಹಿಂದುಳಿದ ವರ್ಗದವರಿಗೆ…

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 15 ರಷ್ಡು ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು, ಜೂ,19-ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ 15 ರಷ್ಟು ಮೀಸಲಾತಿ ಹೆಚ್ಚಳ ಕರಿತು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಎಚ್.ಕೆ.ಪಾಟೀಲ್ವಸತಿ ಇಲಾಖೆಯಡಿ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ನಿಗದಿ ಪಡಿಸಿರುವ ಶೇ 10 ರ ಮೀಸಲಾತಿಯನ್ನು 15% ಗೆ ಹೆಚ್ಚಿಸಲು ನಿರ್ಣಯ ಮಾಡಲಾಗಿದೆ. ಕೇಂದ್ರ ಸರ್ಕಾರದವರು ಅಲ್ಪಸಂಖ್ಯಾತರಿಗೆ ಕೊರತೆಯಿದ್ದ ವಸತಿಯನ್ನು…

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬೆಂಗಳೂರು, ಜೂ.19-ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಂತರ ಸುರೇಶ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.…

ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.19-“ವಸತಿ ಇಲಾಖೆಯಿಂದ ನಗರ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ವಸತಿಗಳು ಹೆಚ್ಚಾಗಿ ಖಾಲಿ ಇದ್ದು, ಅಲ್ಪಸಂಖ್ಯಾತರು ಈ ಮನೆಗಳಿಗೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಅವರಿಗೆ ನೀಡಲಾಗಿದ್ದ ವಸತಿ ಹಂಚಿಕೆ ಮೀಸಲಾತಿಯನ್ನು ಶೇ. 10 ರಿಂದ 15 ಕ್ಕೆ ಏರಿಕೆ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.ಕೆಲವು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ. 20-30 ರಷ್ಟು ಬಡವರು ಇದ್ದಾರೆ. ಹೀಗಾಗಿ ಅವರಿಗೆ ಮೀಸಲಾತಿ ಹೆಚ್ಚಳ…

ಅಭಿವೃದ್ಧಿ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ-ನಿಖಿಲ್

ತುಮಕೂರು,ಜೂ,18- ಜೆಡಿಎಸ್ ಭವಿಷ್ಯದ ಬಗ್ಗೆ ಯಾರು ತಲೆ ಕೆಡಿಸಕೊಳ್ಳಬೇಕಾಗಿಲ್ಲ ಭದ್ರವಾಗಿದೆ ಸುಭದ್ರವಾಗಿದೆ ಅದು ಕಾರ್ಯಕರ್ತರ ಕೈಯಲ್ಲಿದೆ ಎಂದು ನಿಖಿಲ್ ಕುಮಾರಸ್ವಾಮಿ ವಿರೋಧಿಗಳಿಗೆ ಟಾಂಗ್ ನೀಡಿದರು. ತುಮಕೂರಿನ ಚಿಕ್ಕನಾಯಕನಹಳ್ಳಿಯ ಬುಕ್ಕಾ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಎರಡನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಮ್ಮ ಪಕ್ಷದಲ್ಲಿ ನಾಯಕರನ್ನ ಬೆಳಸುವಂತಹ ಕಾರ್ಯಕರ್ತರಿದ್ದಾರೆ. ಎಷ್ಟೋ ಜನ ದೊಡ್ಡ ದೊಡ್ಡ ನಾಯಕರು ನಮ್ಮ ಪಕ್ಷದಿಂದ ಬೆಳೆದು ಬೇರೆ ಪಕ್ಷಕ್ಕೆ ಹೋಗಿರುವ ಇತಿಹಾಸ ಇದೆ.…

ನಂದಿನಿ ಬ್ರ್ಯಾಂಡ್ ಅನ್ನು ಕಾಂಗ್ರೆಸ್ ಸರ್ವನಾಶಮಾಡಲು ಹೊರಟಿದೆ- ಅಶೋಕ್ ವ್ಯಂಗ್ಯ

ಬೆಂಗಳೂರು, ಜೂ,18-ನಂದಿನಿ ಬ್ರ್ಯಾಂಡ್ ಹೆಸರನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಮೇಲೆ ನಂದಿನಿ ಬ್ರ್ಯಾಂಡ್ ಅನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯ ಮಾಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು ಒಂದು ಕಡೆ ಹಾಲು ಉತ್ಪಾದಕರಿಗೆ ನೂರಾರು ಕೋಟಿ ಬಾಕಿ ಉಳಿಸಿಕೊಂಡಿದೆ. ಮತ್ತೊಂದು ಕಡೆ ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ…

ಜಿಲ್ಲಾ ಘಟಕದ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ

ಬೆಂಗಳೂರು,ಜೂ,18-ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷದ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿದರಲ್ಲದೆ, ವಿಶೇಷ ಸಭೆಯಲ್ಲಿ ಪಾಲ್ಗೊಂಡರು. ಮಾಜಿ ಸಚಿವ ಸಿ.ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ಪಕ್ಷದ ಚುನಾವಣಾ ಸಂಚಾಲಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜ್ಯ ಪದಾಧಿಕಾರಿಗಳು ಮತ್ತು ಎಲ್ಲ ನೂತನ…

1 2 3 4 5 6 24
error: Content is protected !!