ರಾಜಕೀಯ
ಸಿದ್ದರಾಮಯ್ಯ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ!
ಬೆಂಗಳೂರು,ಜ,03: ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಸೋಮವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಿಸ್ಟರ್ ಸುಳ್ಳಯ್ಯ ಎಂದು ಕರೆದಿದಿದ್ದಾರೆ. ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುತ್ತಿರುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ…