Browsing: ಬೆಂಗಳೂರು

ಬೆಂಗಳೂರು

ಸಾರ್ವಜನಿಕರಿಂದ ದೂರುಗಳು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ – ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್

ಬೆಂಗಳೂರು, ಏ, 24- ಸಾರ್ವಜನಿಕರಿಮದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಸೂಚಿಸಿದರು. ಕಸ ವಿಲೇವಾರಿ, ಬೀದಿ ನಾಯಿಗಳ ಹಾವಳಿ, ಕೆರೆ ನೈರ್ಮಲೀಕರಣ ಹಾಗೂ ಇನ್ನಿತರ ವಿಷಯಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಿ.ಬಿ.ಎಂಪಿ ವಲಯದ ಅಧಿಕಾರಿಗಳನ್ನು ಪ್ರಕರಣ ಸಂಬಂಧ ಇಂದು ತಮ್ಮ ಕಚೇರಿಯಲ್ಲಿ ವಿಚಾರಣೆ ನಡೆಸಿದರು. ನಗರದಲ್ಲಿ ಬೀದಿ ನಾಯಿಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಇವುಗಳಿಗೆ ಸಂತಾನಹರಣ…

ಗ್ರಾಮೀಣ ಭಾಗದ ಯುವಕರಿಗೆ ತಂತ್ರಜ್ಞಾನದ ಶಿಕ್ಷಣ ನೀಡಿ ಉದ್ಯೋಗ ಸೃಷ್ಟಿಸಿದ ಕಿಯೋನಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್ ಶ್ಲಾಘನೆ

ಬೆಂಗಳೂರು, ಏ.21-“ತಂತ್ರಜ್ಞಾನದಿಂದಲೇ ಅಭಿವೃದ್ಧಿ, ಸಂಪತ್ತು, ಶಿಕ್ಷಣ ಎನ್ನುವಂತಾಗಿದೆ. ಪ್ರತಿಯೊಂದು ಏಳಿಗೆಯೂ ಸಹ ತಂತ್ರಜ್ಞಾನದ ಮೂಲಕ ನೋಡುವಂತಾಗಿದೆ. ಗ್ರಾಮೀಣ ಭಾಗದ ಯುವಕರಿಗೆ ಹೊಸ ತಂತ್ರಜ್ಞಾನದ ಶಿಕ್ಷಣ ನೀಡಿರುವ ಕಿಯೋನಿಕ್ಸ್ ಉದ್ಯೋಗ ಸೃಷ್ಟಿ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶ್ಲಾಘಿಸಿದರು. ಬೆಂಗಳೂರಿನಲ್ಲಿ ಕಿಯೋನಿಕ್ಸ್ ಸಂಸ್ಥೆಯ ಇ-ಕಾಮರ್ಸ್ ಪೋರ್ಟಲ್ ಅನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಉದ್ಘಾಟಿಸಿ ಮಾತನಾಡಿದರು. “ನೂತನ ತಂತ್ರಜ್ಞಾನದ ವಿಚಾರದಲ್ಲಿ ಕಿಯೋನಿಕ್ಸ್ ಸಂಸ್ಥೆ ದೇಶಕ್ಕೆ ಮಾದರಿ. ಅನೇಕ ರಾಜ್ಯಗಳಿಗೆ ತನ್ನ ಸೇವೆಯನ್ನು ನೀಡುತ್ತಿದೆ. ಇಂತಹ ಉತ್ತಮವಾದ…

ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು ಏ 21-ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು. ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ…

ಮಡಿವಾಳ ಸಮಾಜದ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಏ.18-“ಮಡಿವಾಳ ಸಮುದಾಯ ಸದಾ ನಮ್ಮ ಬೆಂಬಲಕ್ಕೆ ನಿಂತಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಗೇರಿಯಲ್ಲಿ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ ವತಿಯಿಂದ ಹೊಸದಾಗಿ ನಿರ್ಮಿಸಿರುವ ಕಲ್ಯಾಣ ಮಂಟಪ ‘ಕಲಿದೇವ ಕನ್ವೆನ್ಷನ್ ಹಾಲ್’ ಉದ್ಘಾಟನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಈ ಸಮಾಜದ ಜತೆಗಿನ ಒಡನಾಟದಲ್ಲಿ ನಿಮ್ಮ ಸಮಸ್ಯೆ, ಹೋರಾಟವನ್ನು ನಾನು ನೋಡಿದ್ದೇನೆ. ನಮ್ಮ ತಾಲೂಕು ಹಾಗೂ ಜಿಲ್ಲೆಯಲ್ಲಿ ಕೂಡ ಗಮನಿಸಿದ್ದೇನೆ. ಈ…

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ by-ಕೆಂಧೂಳಿ ಬೆಂಗಳೂರು, ಏ.07- ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆರೆಗಳ ಸಂರಕ್ಷಣೆ, ಕಸ ವಿಲೇವಾರಿ…

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಏ.07-“ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಲೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ರಸ್ತೆಗಳ ಡಾಂಬರೀಕರಣ ಕಾಮಗಾರಿಗಳ ಭೂಮಿ ಪೂಜೆಯನ್ನು ಸೋಮವಾರ ನೆರವೇರಿಸಿದರು. ಈ ವೇಳೆ ಮಾಧ್ಯಮಗಳಿಗೆ ಮಾಹಿತಿ…

ಬಿಬಿಎಂಪಿ ಸದಸ್ಯರಿಲ್ಲದೆ ಐದನೇ ಬಾರಿ ಅಧಿಕಾರಿಗಳೆ 19,927 ಕೋಟಿ ಗಾತ್ರದ ಬಜೆಟ್ ಮಂಡನೆ

ಬಿಬಿಎಂಪಿ ಸದಸ್ಯರಿಲ್ಲದೆ ಐದನೇ ಬಾರಿ ಅಧಿಕಾರಿಗಳೆ 19,927 ಕೋಟಿ ಗಾತ್ರದ ಬಜೆಟ್ ಮಂಡನೆ by-ಕೆಂಧೂಳಿ ಬೆಂಗಳೂರು, ಮಾ,29-ಬಿಬಿಎಂಪಿ ಸದಸ್ಯರಿಲ್ಲದೆ ಐದನೇಬಾರಿಗೆ ಅಧಿಕಾರಿಗಳೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಮೆರದಂತಾಗಿದೆ. ಈ ಬಾರಿಯ 2025-26ರ ಬಜೆಟ್‌ನಲ್ಲಿ 19.927 ಕೋಟಿ ರೂ.ಗಳ ಬೃಹತ್‌ ಯೋಜನೆಗಳನ್ನು ಘೋಷಿಸಲಾಗಿದೆ. ರಾಜ್ಯ ಸರ್ಕಾರದ ಗ್ರೇಟರ್‌ ಬೆಂಗಳೂರು ರಚನೆಗೂ ಮುನ್ನ ಮಂಡಿಸುತ್ತಿರುವ ಬಿಬಿಎಂಪಿಯ ಕೊನೆಯ ಬಜೆಟ್ ಮಂಡನೆ ಇದಾಗಿದ್ದು, ಬಜೆಟ್ ಗೆ ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್‌ ಬಜೆಟ್‌ಗೆ ಅನುಮೋದನೆ ನೀಡಿದರು. ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌…

ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳನ್ನು ಖರೀದಿಸಲು  ಡಾ. ಶಾಲಿನಿ ರಜನೀಶ್ ಕರೆ

ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳನ್ನು ಖರೀದಿಸಲು  ಡಾ. ಶಾಲಿನಿ ರಜನೀಶ್ ಕರೆ by-ಕೆಂಧೂಳಿ ಬೆಂಗಳೂರು, ಮಾ, 19- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೆಂಗಳೂರಿನ ಐಎಎಸ್ ಅಸೋಸಿಯೇಷನ್‌ನಲ್ಲಿ ಮಾರ್ಚ್ 21ರವರೆಗೆ ಮೂರು ದಿನಗಳು ಆಯೋಜಿಸಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮೇಳವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ವಿಶೇಷ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು…

ಎಂಇಎಸ್ ಅನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಎಂಇಎಸ್ ಅನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ by-ಕೆಂಧೂಳಿ ಬೆಂಗಳೂರು, ಮಾ,16-ಬೆಳಗಾವಿಯಲ್ಲಿ ಮರಾಠಿ ಮೇಯರ್ ಮಾಡಿರುವುದನ್ನು ಖಂಡಿಸಿ ಎಂಇಎಸ್ ಅನ್ನು ನಿಷೇಧಿಸುವಂತೆ ಒತ್ತಾಯಿಸಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇದೇ ಮಾರ್ಚ್ 22 ರಂದು ಕರ್ನಾಟಕ ಬಂದ್ ನಡೆಸಲಿದ್ದು ಎಲ್ಲಾ ಸಂಘಟನೆಗಳು ವ್ಯಾಪಾರಿಗಳು ಸಹಕರಿಸುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದರು.ಈ ವೇಳೆ ಎಂ ಇಎಸ್ ನಿಷೇಧಿಸಬೇಕೆಂದು ಹಾಗೂ ಬೆಳಗಾವಿಯಲ್ಲಿ ಮರಾಠಿ ಮೇಯರ್ ಆಯ್ಕೆ ಮಾಡಿರುವುದನ್ನು ಖಂಡಿಸಿ ಎಂಇಎಸ್ ಫಲಕವನ್ನು ಸುಟ್ಟಿ…

ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್‌ ಗುಂಡೂರಾವ್‌

ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್‌ ಗುಂಡೂರಾವ್‌ by-ಕೆಂಧೂಳಿ ಬೆಂಗಳೂರು,ಮಾ,10- ಉತ್ತಮ ಆರೋಗಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್‌” (ದೀರ್ಘಾಯುಷ್ಯ ಭಾರತ ಸಮ್ಮೇಳನ)ವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕುವುದು ಸವಾಲಿನ ವಿಷಯವಾಗಿದೆ. ನಮ್ಮ ಆಹಾರಭ್ಯಾಸಗಳು ನಮ್ಮನ್ನು ಅನಾರೋಗ್ಯದತ್ತ ಕೊಂಡೊಯ್ಯುತ್ತಿದೆ. ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಎಷ್ಟು…

ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ

ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ by-ಕೆಂಧೂಳಿ ಬೆಂಗಳೂರು, ಮಾ, 08-ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ ಕೇಂದ್ರ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ಸಾರಿಗೆ ಹಾಗೂ ಮುಜರಾಯಿ ಸಚಿವರು ಮಾತನಾಡಿ ಇಂದು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ವೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು…

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಕ್ಕೆ  ಡಿ.ಕೆ. ಶಿ ಸೂಚನೆ

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಕ್ಕೆ  ಡಿ.ಕೆ. ಶಿ ಸೂಚನೆ by-ಕೆಂಧೂಳಿ ಬೆಂಗಳೂರು, ಫೆ.24-“ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ” ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ. ಶಿವಕುಮಾರ್…

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್ 

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್  by-ಕೆಂಧೂಳಿ ತುಮಕೂರು (ಕುಣಿಗಲ್) ,ಫೆ,23-ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು  ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು. ಅವರು ಇಂದು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಬಿದನಗೆರೆ ಶ್ರೀ ಬಸವೇಶ್ವರ ಮಠದ ನೂತನವಾಗಿ ನಿರ್ಮಿಸಿರುವ ನವಗ್ರಹ ದಂಪತಿ ದೇವಾಲಯ ಹಾಗೂ ನೂತನ ಗೋಪುರ ಉದ್ಘಾಟನೆ…

ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ-ಸಚಿವ ರಾಮಲಿಂಗಾರೆಡ್ಡಿ

ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ-ಸಚಿವ ರಾಮಲಿಂಗಾರೆಡ್ಡಿ  by-ಕೆಂಧೂಳಿ ಬೆಂಗಳೂರು,ಫೆ,೨೩- ಇದೇ ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ ಐದು ವರ್ಷಗಳಿಂದ ಬಿಬಿಎಂಪಿಗೆ ಚುನಾವಣೆ ನಡೆದಿಲ್ಲ ಈಗ ಚುನಾವಣೆ ನಡೆಯಲೇ ಬೇಕು ಯಾರಿಗೆ ಇಷ್ಟವಿದೆಯೋ ಇಲ್ಲವೋ ಬರುವ ಮೇ ತಿಂಗಳಲ್ಲಿ ಚುನಾವಣೆಯನ್ನು ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ ಸೆಪ್ಟೆಂಬರ್ ೨೦೨೦ ರಿಂದ ಬೆಂಗಳೂರಿನಲ್ಲಿ ಬಿಬಿಎಂಪಿ ಗೆ ಚುನಾವಣೆ ನಡೆದಿಲ್ಲ. ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ೨೦೦೧ ರಲ್ಲಿ ಸಮಯಕ್ಕೆ ಸರಿಯಾಗಿ ಚುನಾವಣೆಗಳು…

ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛ: ಈಶ್ವರ ಖಂಡ್ರೆ

ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛ: ಈಶ್ವರ ಖಂಡ್ರೆ by-ಕೆಂಧೂಳಿ ಬೆಂಗಳೂರು, ಫೆ21- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛವಾಗಿರಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ರಾಜ್ಯದ ಪ್ರಥಮ ಮಹಿಳಾ ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಸರ್ಕಾರಿ ನೌಕರಿ ಎಲ್ಲರಿಗೂ ದೊರಕುವುದಿಲ್ಲ. ಅದು ಪ್ರತಿಭಾವಂತರು, ಅದೃಷ್ಟವಂತರಿಗೆ ಮಾತ್ರ ದೊರಕುತ್ತದೆ…

ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ: ಚಲುವರಾಯಸ್ವಾಮಿ

ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ:  ಚಲುವರಾಯಸ್ವಾಮಿ ಬೆಂಗಳೂರು, ಫೆ,20- ರಾಜ್ಯ ಸರ್ಕಾರ ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಇದರಿಂದ ಕೃಷಿಕರ ಉತ್ಪಾದನೆ ಹೆಚ್ಚಳ ಹಾಗೂ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಗರದ ಬಹುಮಹಡಿಗಳ ಕಟ್ಟಡದ ಐಟಿ ,ಬಿಟಿ ಸಭಾಂಗಣಲ್ಲಿಂದು ಕೃಷಿ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ವತಿಯಿಂದ ಆಯೋಜಿಸಲಾಗಿದ್ದ ಅಗ್ರಿ ಸ್ಟಾರ್ಟ್…

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿ.ಕೆ.ಶಿವಕುಮಾರ್

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿ.ಕೆ.ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಫೆ.20-“ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕು. ಇಲ್ಲದಿದ್ದರೇ ಬೆಂಗಳೂರಿಗೆ ನಾವುಗಳು ಮೋಸ ಮಾಡಿದಂತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ” ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ಕಾರ್ಯಕ್ರಮದಲ್ಲಿ…

ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗ ಮತ್ತು ದುರ್ಬಲಗೊಳಿಸುವುದನ್ನು ತಪ್ಪಿಸಲು- ಪ್ರಭಾಕರ್ ಸಲಹೆ

 ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗ ಮತ್ತು ದುರ್ಬಲಗೊಳಿಸುವುದನ್ನು ತಪ್ಪಿಸಲು- ಪ್ರಭಾಕರ್ ಸಲಹೆ by-ಕೆಂಧೂಳಿ ಬೆಂಗಳೂರು ಫೆ 19- ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗವನ್ನು ಮತ್ತು ದುರ್ಬಲಗೊಳಿಸುವ ಪ್ರಯತ್ನವನ್ನು ತಪ್ಪಿಸಿ, ಸರ್ಕಾರದ ಸಾಮಾಜಿಕ ನ್ಯಾಯದ ಗುರಿಯನ್ನು ಈಡೇರಿಸಿ ಎಂದು ನೂತನವಾಗಿ ನೇಮಕಗೊಂಡ ಮಾಹಿತಿ ಹಕ್ಕು ಆಯುಕ್ತರಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾಹಿತಿ ಆಯುಕ್ತರಾಗಿ ನೇಮಕಗೊಂಡ ಪತ್ರಕರ್ತರು ಮತ್ತು ಚಲನಚಿತ್ರ ಅಕಾಡೆಮಿ ಸದಸ್ಯರಾದ ಪತ್ರಕರ್ತರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.…

ಶೋಷಿತ ದಲಿತರ ಸಮಸ್ಯೆ ನಿವಾರಣೆಗೆ ಬದ್ದ- ಸಿಎಂ

ಶೋಷಿತ ದಲಿತರ ಸಮಸ್ಯೆ ನಿವಾರಣೆಗೆ ಬದ್ದ- ಸಿಎಂ by-ಕೆಂಧೂಳಿ ಬೆಂಗಳೂರು, ಫೆ,18-ಶೋಷಿತ ಮತ್ತು ದಲಿತರ ಸಮಸ್ಯೆಗಳನ್ನು ನಾನು ನಿರಂತರವಾಗಿ ನಿವಾರಿಸಿಕೊಂಡು ಬರುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ 24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಾವು. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ…

ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿ.ಕೆ. ಶಿವಕುಮಾರ್

 ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿ.ಕೆ. ಶಿವಕುಮಾರ್* by-ಕೆಂಧೂಳಿ ಬೆಂಗಳೂರು, ಫೆ.16-“ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿ ಶಿವಕುಮಾರ್…

1 2 3 9
error: Content is protected !!