Browsing: ಬೆಂಗಳೂರು

ಬೆಂಗಳೂರು

ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಉದ್ಘಾಟಿಸಿದ ಸಿಎಂ

ಬೆಂಗಳೂರು ಜು, 7: ಕೋವಿಡ್ ಮೂರನೇ ಅಲೆ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸಿಎಸ್ಆರ್ ನಿಧಿಯಡಿ 70 ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಿಸಿರುವುದು ರಾಜ್ಯದಲ್ಲಿಯೇ ಪ್ರಥಮ ಹಾಗೂ ವಿನೂತನವಾಗಿದ್ದು, ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ದೇಶದಲ್ಲಿಯೇ ಅತಿ ಶೀಘ್ರವಾಗಿ ನಿರ್ಮಾಣಗೊಂಡ ಮೊದಲ ಮೇಕ್ ಶಿಫ್ಟ್ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 70 ಬೆಡ್…

ಬಿಡಿಎ ಉದ್ದೇಶಿತ ನಿವೇಶನ,ಪ್ಲಾಟ್ ಗಳ ಶುಲ್ಕಹಿಂಪಡಿಯಲು ಎಫ್ ಕೆಸಿಸಿ ಐ ಮನವಿ

ಬೆಂಗಳೂರು,ಜೂ,28:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿವೇಶನ ಮತ್ತು ಪ್ಲಾಟ್ ಗಳ ಖರೀದಿ ಶುಲ್ಕ ಹೆಚ್ಚಳಕ್ಕೆ ಮುಂದಾಗಿದ್ದು ಅದನ್ನು ಹಿಂಪಡಿಯುವಂತೆ ಕರ್ನಾಟ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ. ಕರ್ನಾಟಕ ವಾಣಿಜ್ಯ ಮತ್ತುಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ರವರು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗ 2ನೇ ಅಲೆಯಿಂದಾಗಿ ಕೈಗಾರಿಕೋದ್ಯಮಿಗಳು ವ್ಯಾಪಾರಸ್ಥರು, ಮಧ್ಯಮ ವರ್ಗದವರು ಹಾಗೂ ಜನಸಾಮಾನ್ಯರು ಈಗಾಗಲೇ ಆರ್ಥಿಕ ನಷ್ಟ ಅನುಭವಿಸಿದ್ದು,…

ಬೆಂಗಳೂರು ಮೂಲಭೂತ ಸೌಕರ್ಯಕ್ಕೆ ನಿರಂತರ ಶ್ರಮ; ಬಿಎಸ್ ವೈ

ಬೆಂಗಳೂರು,ಜೂ.27: ನಗರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ವಿಧಾನಸೌಧದ ಬಾಂಕ್ವೆಟ್‍ನಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಕಾರ್ಯಕ್ರಮದಲ್ಲಿ ಅಂಚೆಚೀಟಿ ಬಿಡುಗಡೆ ಹಾಗೂ ಬೆಂಗಳೂರು ವಿವಿ ಆವರಣದಲ್ಲಿ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು. ಬೆಂಗಳೂರನ್ನು ಮಾದರಿ ನಗರವನ್ನಾಗಿ ಮಾಡುವ ಸಂಕಲ್ಪ ತೊಡಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಹಲವಾರು ಯೋಜನೆಗಳನ್ನು ನೀಡಿದ್ದಾರೆ. ಪೆರಿಪರಲ್ ರಸ್ತೆ ನಿರ್ಮಾಣ, ಉಪನಗರ ರೈಲು ಯೋಜನೆ…

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ

ಬೆಂಗಳೂರು,ಜೂ,24:ಹಾಡು ಹಗಲೇ ಜನನಿನಿಡಿ ಪ್ರದೇಶದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘೋರ ಘಟನೆಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಜರುಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಕಚೇರಿ ಮುಂದೆಯೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಒಳಗಿದ್ದ ರೇಖಾ ಕದಿರೇಶ್ ಅವರನ್ನು ಹೊರಗೆ ಕರೆದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿದ್ದಾರೆ. ರಕ್ತಸ್ರಾವವಾಗಿ ಕೆಳಗೆ ಬಿದ್ದ ಅವರನ್ನು ಸ್ಥಳದಲ್ಲಿದ್ದವರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ರೇಖಾ ಅವರು ಮೃತಪಟ್ಟ…

ವಿದ್ಯಾರ್ಥಿಗಳಿಗೆ ಸ್ಮಾರ್ಟ್ ತರಗತಿಯ ಟ್ಯಾಬ್ಲೆಟ್ ಪಿ.ಸಿ.ವಿತರಣೆ

ಬೆಂಗಳೂರು,ಜೂ,23: ಡಿಜಿಟಲ್ ಕಲಿಕಾ ಯೋಜನೆಯಡಿ 2500 ಸ್ಮಾರ್ಟ್ ತರಗತಿಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ.ಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಸರ್ಕಾರಿ ಕಾಲೇಜುಗಳಲ್ಲಿ 2,500 ತರಗತಿಗಳನ್ನು ಸ್ಮಾರ್ಟ್ ತರಗತಿ ಕೊಠಡಿಗಳಾಗಿ ಉನ್ನತೀಕರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 6,500 ತರಗತಿ ಕೊಠಡಿಗಳನ್ನು ಸ್ಮಾರ್ಟ್ ತರಗತಿಗಳಾಗಿ ಪರಿವರ್ತಿಸಲಾಗುವುದು ಎಂದರು. 2021-22ನೇ ಸಾಲಿನಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆಯುವ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಟ್ಯಾಬ್ಲೆಟ್ ಪಿ.ಸಿ. ನೀಡಲಾಗುವುದು ಎಂದು ತಿಳಿಸಿದರು. ಡಿಜಿಟಲ್ ಕಲಿಕೆ…

ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ನೆರವು ನೀಡಲು ಕೆಯುಡಬ್ಲ್ಯೂಜೆ ತೀರ್ಮಾನ

ಬೆಂಗಳೂರು,ಜೂ,23:ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ತಲಾ 10 ಸಾವಿರ ಪರಿಹಾರ ನೀಡಲು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀರ್ಮಾನಿಸಿದೆ. ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ಕಳೆದ ವರ್ಷ ನೀಡಿದಂತೆ ಸರ್ಕಾರದಿಂದ 5ಲಕ್ಷ‌ರೂ ನೆರವು ಕೊಡಿಸಲು ನಿರ್ಣಯಿಸಲಾಗಿದೆ. ಪತ್ರಕರ್ತರ ಕುಟುಂಬಕ್ಕೆ ಪಡಿತರ ಕಿಟ್ ಕೊಡಿಸಲು ತೀರ್ಮಾನಿಸಲಾಗಿದೆ.ಬೆಂಗಳೂರಿನಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಶೀಘ್ರವಾಗಿ ಶಂಕುಸ್ಥಾಪನೆ ಮಾಡಿಸಲು…

ಮೆಟ್ರೋದಲ್ಲಿ ಜುಲೈನಿಂದ ಟೋಕನ್ ವ್ಯವಸ್ಥೆ ಜಾರಿ?

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮೆಟ್ರೋದಲ್ಲಿ ಟೋಕನ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು ಇದರಿಂದ ಸಾವಿರಾರು ಪ್ರಯಾಣಿಕರಿಗೆ ಅನಾನುಕೂಲವಾಗಿತ್ತು ಈಗ ಜುಲೈತಿಂಗಳಲ್ಲಿ ಮೆಟ್ರೋ ಟೋಕನ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಸರ್ಕಾರ ಹೇಳಿದೆ ಬೆಂಗಳೂರು, ಜೂ, ೨೨;ಕೊರೊನಾ ಒಂದನೇ ಅಲೆಯಿಂದ ಮೆಟ್ರೋ ಪ್ರಯಾಣಿಕರಿಗೆ ಟೋಕನ್ ವ್ಯವಸ್ಥೆ ಇಲ್ಲದೆ ಸಂಚಾರಕ್ಕೆ ತೊಂದರೆಯಾಗಿದ್ದು ಮುಂದಿನ ಮಾರ್ಗಸೂಚಿ ಅನ್ವಯ ಬಹುತೇಕ ಅಥವ ಜುಲೈ ಒಂದರಿಂದ ಟೋಕನ್ ವ್ಯವಸ್ಥೆಯನ್ನು ಕಲ್ಪಿಸುವ ಸಾದ್ಯತೆಗಳಿವೆ ಎಂದು ಸರ್ಕಾರ ಹೇಳಿದೆ. ಕಳೆದ ವರ್ಷದ ಲಾಕ್ ಡೌನ್ ನಂತರ ಕೇವಲ ಮೆಟ್ರೋ ಕಾರ್ಡ್ ದಾರರಿಗೆ…

ಕೊವಿಡ್ 3 ನೇ ಅಲೆ ಎದುರಿಸಲು ಸಕಲ ಸಿದ್ಧತೆ; ಶಶಿಕಲಾ ಜೊಲ್ಲೆ

ಬೆಂಗಳೂರು,ಜೂ,21: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಕೊವಿಡ್ 3 ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೆ ಅಲೆಯಲ್ಲಿ ಸುಮಾರು 50 ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ. ಅವರಿಗೆ ಬಾಲ…

ಮನೆಯಲ್ಲೇ ಯೋಗ ದಿನ ಆಚರಿಸಿ:ಕೆ.ಸುಧಾಕರ್

ಬೆಂಗಳೂರು, ಜೂ, 19:ಜೂನ್ 21 ರಂದು ಜಗತ್ತಿನಾದ್ಯಂತ ಯೋಗ ದಿನ ಆಚರಿಸುತ್ತಿದ್ದು, ಈ ಬಾರಿ ಎಲ್ಲರೂ ಮನೆಯಲ್ಲೇ ಇದ್ದು ಆಚರಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜೂನ್ 21 ರಂದು ಯೋಗ ದಿನವನ್ನು ಆನ್ ಲೈನ್ ನಲ್ಲೇ ಆಚರಿಸಲಾಗುತ್ತಿದೆ. ಬಿ ವಿತ್ ಯೋಗ ಬಿ ಅಟ್ ಹೋಮ್ ಮತ್ತು ಯೋಗ ಫಾರ್ ವೆಲ್ ನೆಸ್ ಎಂಬ ಘೋಷವಾಕ್ಯದಡಿ ಯೋಗ ದಿನ ಆಚರಿಸಲಾಗುತ್ತಿದೆ.…

ಚೇರಂಬಾಣೆ ಸಿದ್ಧಾಶ್ರಮದ ಬೇಬಿತಾಯಿ ಬ್ರಹ್ಮೈಕ್ಯ.

ಬೆಂಗಳೂರು,ಜೂ,19:ಕೊಡಗು ಜಿಲ್ಲೆಯ ಚೇರಂಬಾಣೆಯ ಶ್ರೀ ಸಿದ್ಧಾರೂಢಾಶ್ರಮದ ಶ್ರೀಮಾತೆ ಬೇಬಿತಾಯಿಯವರು (84) ಇಂದು ಬೆಳಿಗ್ಗೆ ಬ್ರಾಹ್ಮೀಮುಹೂರ್ತದಲ್ಲಿ (5.15) ಬ್ರಹ್ಮೈಕ್ಯರಾದರು. ಮಧ್ಯಾಹ್ನಆಶ್ರಮದಲ್ಲಿ ಸಂಪ್ರದಾಯದಂತೆ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇತ್ತೀಚೆಗೆ ಅವರು ವಯಸ್ಸಹಜ ಕಾಯಿಲೆಯಿಂದ ಬಳಲುತ್ತಿದ್ದರೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಲು ನಿರಾಕರಿಸಿದ್ದರು. 20.11.1936 ರಲ್ಲಿ ಚೇರಂಬಾಣೆ ಬಳಿಯ ಕೊಟ್ಟೂರು ಗ್ರಾಮದ ಶ್ರೀ ಅಚ್ಚಯ್ಯ ಶ್ರೀಮತಿ ಬಿಳ್ಳವ್ವ ದಂಪತಿಗಳಿಗೆ ಜನಿಸಿದ ಇವರು ಬಾಲಬ್ರಹ್ಮಚಾರಿಣಿಯಾಗಿದ್ದರು. ಮೂರು ಜನ ಸಹೋದರ ಐದು ಜನ ಸಹೋದರಿಯರನ್ನು ಹೊಂದಿದ್ದ ಇವರು ತಮ್ಮ ನಲವತ್ತೆರಡನೇ ವಯಸ್ಸಿನಲ್ಲಿ ಚೇರಂಬಾಣೆಯ ಸಿದ್ಧಾರೂಢಾಶ್ರಮಕ್ಕೆ ಸೇರಿಕೊಂಡರು.…

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿಗೆ ಅಭಿನಂದನೆ ಸಲ್ಲಿಸಿದ ಕನ್ನಡ ಪರ ಸಂಘಟನೆಗಳು

ಬೆಂಗಳೂರು,ಜೂ,18:ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾಗಿ ಅಧಿಕಾರ ಸ್ವೀಕರಿಸಿದ ಡಾ. ಸಂತೋಷ ಹಾನಗಲ್ ಅವರನ್ನು ಕನ್ನಡಪರ ಸಂಘಟನೆಗಳು ಅವರ ಕಛೇರಿಯಲ್ಲಿ ಅಭಿನಂದಿಸಿದವು. ಕನ್ನಡ ಶ್ರೀಸಾಮಾನ್ಯರ ಕೂಟದ ಅಧ್ಯಕ್ಷ ಶ್ರ.ದೇ. ಪಾರ್ಶ್ವನಾಥ್, ಮಹಮದೀಯರ ಕನ್ನಡ ವೇದಿಕೆ ಅಧ್ಯಕ್ಷ ಸಮೀವುಲ್ಲಾಖಾನ್, ವಚನಜ್ಯೋತಿ ಬಳಗದ ಅಧ್ಯಕ್ಷ ಪಿನಾಕಪಾಣಿ, ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ, ಸದ್ಭಾವನ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶಮೂರ್ತಿ, ಕರ್ನಾಟಕ ವಿದ್ಯಾರ್ಥಿಕೂಟದ ಪ್ರಧಾನ ಕಾರ್ಯದರ್ಶಿ ಹರ್ಷ, ವಿಷ್ಣುಸೇನೆಯ ಆನಂದ್ ಮತ್ತಿತರರು ನೂತನ‌…

ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಮೋದಿಗೆ ಮನವಿ

ಬೆಂಗಳೂರು,ಜೂ. 18: ವಿರೋಧ ವ್ಯಕ್ತಪಡಿಸುತ್ತಿರುವ ತಿಮಿಳುನಾಡು ಸರ್ಕಾರಕ್ಕೆ ಮೇಕೆ ದಾಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮೇಕೆದಾಟು ವಿಚಾರದ ಕುರಿತು ಇನ್ನು ಸುಪ್ರೀಂ ಕೋರ್ಟಿನಲ್ಲಿ ಇನ್ನು ಕೇಸ್​ ನಡೆಯುತ್ತಿದೆ. ರಾಜ್ಯದ ಹಿತಾಸಕ್ತಿ ಬದ್ಧವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಈ ಕುರಿತು ಉತ್ತಮ ವಾದ ಕೂಡ ನಡೆದಿದೆ. ಈ ಬಗ್ಗೆ ನ್ಯಾಷನಲ್ ಎನ್.ಜಿ.ಟಿ ಸ್ಪಷ್ಟಪಡಿಸಿದ್ದು,…

ಬಡವರಿಗೆ ಅನ್ನ,ವಸತಿ,ಉದ್ಯೋಗ ಒದಗಿಸುವ ಸಂಕಲ್ಪ-ಸೋಮಣ್ಣ

ಬೆಂಗಳೂರು,ಜೂ,೧೮: ರಾಜ್ಯದಲ್ಲಿ ಕಷ್ಟದಲ್ಲಿರುವ ಬಡವರಿಗೆ ಅನ್ನ, ವಸತಿ, ಆರೋಗ್ಯ ಮತ್ತು ಉದ್ಯೋಗ ಒದಗಿಸುವುದು ನಮ್ಮ ಸಂಕಲ್ಪ ಎಂದು ವಸತಿ ಸಚಿವರಾದ ವಿ ಸೋಮಣ್ಣನವರು ಅಭಿಪ್ರಾಯಪಟ್ಟಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜ ನಗರ ವಾರ್ಡ್‌ನಲ್ಲಿ ಬಡವರು, ಬೀದಿ ಬದಿಯ ವ್ಯಾಪಾರಿಗಳು, ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ ಮಾಡಿ ಬಳಿಕ ಮಾತನಾಡಿದ ಸೋಮಣ್ಣನವರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ೯ವಾರ್ಡ್‌ಗಳಲ್ಲಿ ಆರ್ಥಿಕವಾಗಿ ಹಿಂದುಳಿದರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ. ಸೋನ ಮಸೂರಿ ಅಕ್ಕಿ, ಎಣ್ಣೆ, ಬೇಳೆ ಮತ್ತು ಸಾಂಬಾರ್…

ಪಿಜಿಗಳಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚನೆ

ಬೆಂಗಳೂರು, ಜೂ, ೧೫:ನಗರದಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡುತ್ತಿರುವ ಸರ್ಕಾರ ಈ ವೇಳೆ ಪಿಜಿಯಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚಿಸಿದೆ. ಯಾವುದೇ ಕಾರಣಕ್ಕೂ ಪಿಜಿಯಲ್ಲಿ ಇರುವ ಅವಕಾಶ ನೀಡಬಾರದು ಎಲ್ಲರನ್ನೂ ಅವರವರ ಊರುಗಳಿಗೆ ಕಳಿಸಿಕೊಡಿ ಎಂದು ಪಿಜಿ ಮಾಲೀಕರಿಗೆ ಬಿಬಿಎಂಪಿ ನೊಟೀಸ್ ಜಾರಿಮಾಡಿದೆ. ಒಂದು ವೇಳೆ ಅನಿವಾರ್ಯ ಕಾರಣಗಳಿಗಿಂದಾಗಿ ವಿದ್ಯಾರ್ಥಿಗಳನ್ನು ಪಿಜಿಯಲ್ಲಿ ಉಳಿಸಿಕೊಂಡಲ್ಲಿ ಪಿಜಿಯಲ್ಲಿ ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಜವಾಬ್ದಾರಿ ಅವರದ್ದೇ ಆಗಿರುತ್ತದೆ. ೧೧೦ ಚದುರ ಅಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿಗೆ…

ಹೊರಗಿನಿಂದ ಬರುವವರಿಗೆ ಕೋವಿಡ್ ಪರೀಕ್ಷೆಗೆ ಆದ್ಯತೆ: ಬಿಬಿಎಂಪಿ

ಬೆಂಗಳೂರು.ಜೂ,೧೪: ಹೊರಗಿನಿಂದ ನಗರಕ್ಕೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗುಯತ್ತಿರುವ ಕಾರಣ ಕೋವಿಡ್ ಮತ್ತಷ್ಟು ಹರಡುವ ಸಾಧ್ಯತೆಗಳಿರುವ ಕಾರಣ ಹೊರಗಿನಿಂದ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಆರೋಗ್ಯಾಧಿಕಾರಿಗಳಿವೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಸೂಚಿಸಿದ್ದಾಋಎ ಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ವರ್ಚುವಲ್ ರೂಪದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಸಾರ್ವಜನಿಕರು ಕೋವಿಡ್ ನಿಯಂತ್ರಣ ನಿಯಮಗಳನ್ನು ಪಾಲಿಸಿದರೆ, ಮಾತ್ರ ಈ ಸೋಂಕಿನ ವಿರುದ್ಧದ ಹೋರಾಟ ಯಶಸ್ಸು ಕಾಣಲು ಸಾಧ್ಯ. ಕೋವಿಡ್ ಪರೀಕ್ಷೆ, ಕಂಟೈನ್ಮೆಂಟ್…

ಅಗಲಿದ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ

ಬೆಂಗಳೂರು,ಜೂ,14:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ಕೇಂದ್ರ ಕಚೇರಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. kuwj ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ನಾಡಿನ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ, ಹಿರಿಯ ಪತ್ರಕರ್ತರಾದ ಸುರೇಶ್ ಚಂದ್ರ, ದವಡಬೆಟ್ಟ ನಾಗರಾಜ್, ದಾವಣಗೆರೆಯ ಹೆಚ್.ಎನ್.ಮುನೇಶ್ ರವರಿಗೂ, ರಾಷ್ಟ ಪ್ರಶಸ್ತಿ ವಿಜೇತರಾದಂತ ಚಲನ ಚಿತ್ರನಟರಾದ ಸಂಚಾರಿ ವಿಜಯ್, ಕೆ.ಸಿ.ಎನ್.ಚಂದ್ರು ಅವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ…

ಉಳ್ಳವರು ಸಂತ್ರಸ್ತರಿಗೆ ನೆರವಾಗಿ: ಆರೂಢಭಾರತೀ ಸ್ವಾಮೀಜಿ

ಬೆಂಗಳೂರು,ಜೂ,08:ಯಾವುದೂ ಯಾರಿಗೂ ಶಾಶ್ವತವಲ್ಲ. ನಿನ್ನೆ ಇನ್ನಾರದ್ದೋ ಆಗಿದ್ದು ಇಂದು ನಮ್ಮದಾಗಿದೆ. ನಾಳೆ ಯಾರ ಪಾಲೆಂಬುದು ತಿಳಿದಿಲ್ಲ. ನಮ್ಮ ಲೆಕ್ಕಾಚಾರಗಳು ಯಥಾವತ್ತಾಗಿ ನಡೆಯುವುದಿಲ್ಲ ಎಂಬುದಕ್ಕೆ ಕೊರೊನಾ ದುಷ್ಕಾಲವೇ ಸಾಕ್ಷಿ. ಇಂದು ನಾವು ಚೆನ್ನಾಗಿರಬಹುದು. ನಾಳೆ ಏನಿದೆಯೋ? ಚೆನ್ನಾಗಿರುವಾಗಲೇ ನಮ್ಮಲ್ಲಿರುವುದನ್ನು ಇಲ್ಲದವರಿಗೆ ನೀಡೋಣ. ಇಂದು ಕೈ ಒಡ್ಡಿ ಪಡೆಯುವವನು ನಾಳೆ ನಮಗೇ ಕೈ ಎತ್ತಿ ಕೊಡುವವನಾದಾನು! ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಇಂದು ಸಿದ್ಧಾರೂಢ ಮಿಷನ್, ಸಹಬಾಳ್ವೆ…

ಕೊರೊನಾ ಸೋಂಕಿತರ ಪ್ರಮಾಣ ಕಡಿಮೆ, ಸಾವಿನ ಸಂಖ್ಯೆ ಜಾಸ್ತಿ ;ವಿವರಣೆ ನೀಡಿದ ಬಿಬಿಎಂಪಿ ಆಯುಕ್ತ

ಬೆಂಗಳೂರು, ಜೂ, ೮: ಕೊರೊನಾ ಸೋಂಕಿತರ ಪ್ರಮಾಣ ದಿನೇ ದಿನೇ ಕಡಿಮೆಯಾಗುತ್ತಿದ್ದರೂ ಕುಡ ಸಾವಿನ ಸಂಖ್ಯೆ ಹೆಚ್ಚಾಗುತ್ತಿತ್ತು ಈ ಕುರಿತು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ವಿವರಣೆ ನೀಡಿದ್ದಾರೆ, ಕಳೆದ ಒಂದು ತಿಂಗಳ ಹಿಂದಿನ ಪರಿಸ್ಥಿತಿ ಅವಲೋಕಿಸಿದರೆ ಸ್ಮಶಾನದಲ್ಲಿ ಕ್ಯೂ ಕೂಡಾ ಹಿಂದಿನ ರೀತಿಯಲ್ಲಿ ಇರಲಿಲ್ಲ. ಆದರೂ, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆಯ ಅಂಕಿಅಂಶ ಕಮ್ಮಿಯಾಗಿರಲಿಲ್ಲ. ಈ ಬಗ್ಗೆ ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತ ಅಸಲಿ ಕಾರಣವನ್ನು ಬಿಚ್ಚಿಟ್ಟಿದ್ದು, ಸಾರ್ವಜನಿಕರು ಗಾಬರಿ ಪಡಬೇಕಾಗಿಲ್ಲ ಎಂದು ಹೇಳಿ, ಸಾವಿನ ಸಂಖ್ಯೆ…

ಮಾಜಿ ಸಚಿವ ಮುಮ್ತಾಜ್ ಅಲಿಖಾನ್ ನಿಧನ

ಬೆಂಗಳೂರು,ಜೂ,೦೭: ಮಾಜಿ ಸಚಿವ ಪ್ರೊ ಮುಮಾಜ್ ಆಲಿಖಾನ್ ಇಂದು ಬೆಳಿಗ್ಗೆ ನಿಧನಹೊಂದಿದಾರೆ. ಅವರಿಗೆ ೯೪ ವರ್ಷ ವಯಸ್ಸಾಗಿತ್ತು ಇಂದು ಬಳಿಗ್ಗೆ ಅವರು ಗಂಗಾನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಯೋಸಹಜ ಕಾಯಿಲಿಯಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ, ಮಗಳು ಇದ್ದಾರೆ. ೨೦೦೮ರಲ್ಲಿ ಬಿ.ಎಸ್. ಯಡಿಯಾರಪ್ಪ ನೇತೃತ್ವದ ಸರ್ಕಾರದಲ್ಲಿ ಅವರು ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ೩೦ ವರ್ಷಗಳಿಂದ ಬೆಂಗಳೂರು ನಗರದ ಆರ್‌ಟಿನಗರದಲ್ಲಿ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುತ್ತಿದ್ದು,…

ಉಚಿತ ದಿನಸಿ ಕಿಟ್ ವಿತರಣೆ.

ಉಚಿತ ದಿನಸಿ ಕಿಟ್ ವಿತರಣೆ. ಕೋವಿಡ್ ಮಹಾರೋಗದಿಂದ ಜನಜೀವನ ತತ್ತರಿಸಿದೆ. ಅನೇಕರಿಗೆ ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಇದನ್ನು ಮನಗಂಡು, ಶ್ರೀ ಸಿದ್ಧಾರೂಢ ಮಿಷನ್, ಸಹಬಾಳ್ವೆ ಸಂಸ್ಥೆ ಹಾಗೂ ಸೌಖ್ಯ ನ್ಯಾಚುರಲ್ ಫುಡ್ ಪ್ರೈ. ಲಿ. ಈ ಮೂರೂ ಸಂಸ್ಥೆಗಳು ಜೊತೆಯಾಗಿ, ಸಂಕಷ್ಟಕ್ಕೆ ಒಳಗಾದ ಶ್ರಮಿಕರು, ಕೂಲಿ ಕಾರ್ಮಿಕರು, ಬಡವರು ಹಾಗೂ ಆವಶ್ಯಕತೆ ಇರುವವರಿಗೆ, ದಾನಿಗಳ ನೆರವಿನಿಂದ ಹಂತ ಹಂತವಾಗಿ, ಬೆಂಗಳೂರು ಮೈಸೂರು ಹುಬ್ಬಳ್ಳಿ ಮೊದಲಾದ ಕಡೆಗಳಲ್ಲಿ, ಉಚಿತ ದಿನಸಿ ಕಿಟ್ ಗಳನ್ನು ವಿತರಿಸಲು ಮುಂದಾಗಿವೆ.ದಿನಾಂಕ 8.6.2021 ರಂದು…

1 4 5 6 7 8
error: Content is protected !!