Browsing: ಬೆಂಗಳೂರು

ಬೆಂಗಳೂರು

ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಮೋದಿಗೆ ಮನವಿ

ಬೆಂಗಳೂರು,ಜೂ. 18: ವಿರೋಧ ವ್ಯಕ್ತಪಡಿಸುತ್ತಿರುವ ತಿಮಿಳುನಾಡು ಸರ್ಕಾರಕ್ಕೆ ಮೇಕೆ ದಾಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮೇಕೆದಾಟು ವಿಚಾರದ ಕುರಿತು ಇನ್ನು ಸುಪ್ರೀಂ ಕೋರ್ಟಿನಲ್ಲಿ ಇನ್ನು ಕೇಸ್​ ನಡೆಯುತ್ತಿದೆ. ರಾಜ್ಯದ ಹಿತಾಸಕ್ತಿ ಬದ್ಧವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಈ ಕುರಿತು ಉತ್ತಮ ವಾದ ಕೂಡ ನಡೆದಿದೆ. ಈ ಬಗ್ಗೆ ನ್ಯಾಷನಲ್ ಎನ್.ಜಿ.ಟಿ ಸ್ಪಷ್ಟಪಡಿಸಿದ್ದು,…

ಬಡವರಿಗೆ ಅನ್ನ,ವಸತಿ,ಉದ್ಯೋಗ ಒದಗಿಸುವ ಸಂಕಲ್ಪ-ಸೋಮಣ್ಣ

ಬೆಂಗಳೂರು,ಜೂ,೧೮: ರಾಜ್ಯದಲ್ಲಿ ಕಷ್ಟದಲ್ಲಿರುವ ಬಡವರಿಗೆ ಅನ್ನ, ವಸತಿ, ಆರೋಗ್ಯ ಮತ್ತು ಉದ್ಯೋಗ ಒದಗಿಸುವುದು ನಮ್ಮ ಸಂಕಲ್ಪ ಎಂದು ವಸತಿ ಸಚಿವರಾದ ವಿ ಸೋಮಣ್ಣನವರು ಅಭಿಪ್ರಾಯಪಟ್ಟಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜ ನಗರ ವಾರ್ಡ್‌ನಲ್ಲಿ ಬಡವರು, ಬೀದಿ ಬದಿಯ ವ್ಯಾಪಾರಿಗಳು, ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ ಮಾಡಿ ಬಳಿಕ ಮಾತನಾಡಿದ ಸೋಮಣ್ಣನವರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ೯ವಾರ್ಡ್‌ಗಳಲ್ಲಿ ಆರ್ಥಿಕವಾಗಿ ಹಿಂದುಳಿದರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ. ಸೋನ ಮಸೂರಿ ಅಕ್ಕಿ, ಎಣ್ಣೆ, ಬೇಳೆ ಮತ್ತು ಸಾಂಬಾರ್…

ಪಿಜಿಗಳಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚನೆ

ಬೆಂಗಳೂರು, ಜೂ, ೧೫:ನಗರದಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡುತ್ತಿರುವ ಸರ್ಕಾರ ಈ ವೇಳೆ ಪಿಜಿಯಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚಿಸಿದೆ. ಯಾವುದೇ ಕಾರಣಕ್ಕೂ ಪಿಜಿಯಲ್ಲಿ ಇರುವ ಅವಕಾಶ ನೀಡಬಾರದು ಎಲ್ಲರನ್ನೂ ಅವರವರ ಊರುಗಳಿಗೆ ಕಳಿಸಿಕೊಡಿ ಎಂದು ಪಿಜಿ ಮಾಲೀಕರಿಗೆ ಬಿಬಿಎಂಪಿ ನೊಟೀಸ್ ಜಾರಿಮಾಡಿದೆ. ಒಂದು ವೇಳೆ ಅನಿವಾರ್ಯ ಕಾರಣಗಳಿಗಿಂದಾಗಿ ವಿದ್ಯಾರ್ಥಿಗಳನ್ನು ಪಿಜಿಯಲ್ಲಿ ಉಳಿಸಿಕೊಂಡಲ್ಲಿ ಪಿಜಿಯಲ್ಲಿ ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಜವಾಬ್ದಾರಿ ಅವರದ್ದೇ ಆಗಿರುತ್ತದೆ. ೧೧೦ ಚದುರ ಅಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿಗೆ…

ಹೊರಗಿನಿಂದ ಬರುವವರಿಗೆ ಕೋವಿಡ್ ಪರೀಕ್ಷೆಗೆ ಆದ್ಯತೆ: ಬಿಬಿಎಂಪಿ

ಬೆಂಗಳೂರು.ಜೂ,೧೪: ಹೊರಗಿನಿಂದ ನಗರಕ್ಕೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗುಯತ್ತಿರುವ ಕಾರಣ ಕೋವಿಡ್ ಮತ್ತಷ್ಟು ಹರಡುವ ಸಾಧ್ಯತೆಗಳಿರುವ ಕಾರಣ ಹೊರಗಿನಿಂದ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಆರೋಗ್ಯಾಧಿಕಾರಿಗಳಿವೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಸೂಚಿಸಿದ್ದಾಋಎ ಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ವರ್ಚುವಲ್ ರೂಪದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಸಾರ್ವಜನಿಕರು ಕೋವಿಡ್ ನಿಯಂತ್ರಣ ನಿಯಮಗಳನ್ನು ಪಾಲಿಸಿದರೆ, ಮಾತ್ರ ಈ ಸೋಂಕಿನ ವಿರುದ್ಧದ ಹೋರಾಟ ಯಶಸ್ಸು ಕಾಣಲು ಸಾಧ್ಯ. ಕೋವಿಡ್ ಪರೀಕ್ಷೆ, ಕಂಟೈನ್ಮೆಂಟ್…

ಅಗಲಿದ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ

ಬೆಂಗಳೂರು,ಜೂ,14:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ಕೇಂದ್ರ ಕಚೇರಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. kuwj ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ನಾಡಿನ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ, ಹಿರಿಯ ಪತ್ರಕರ್ತರಾದ ಸುರೇಶ್ ಚಂದ್ರ, ದವಡಬೆಟ್ಟ ನಾಗರಾಜ್, ದಾವಣಗೆರೆಯ ಹೆಚ್.ಎನ್.ಮುನೇಶ್ ರವರಿಗೂ, ರಾಷ್ಟ ಪ್ರಶಸ್ತಿ ವಿಜೇತರಾದಂತ ಚಲನ ಚಿತ್ರನಟರಾದ ಸಂಚಾರಿ ವಿಜಯ್, ಕೆ.ಸಿ.ಎನ್.ಚಂದ್ರು ಅವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ…

ಉಳ್ಳವರು ಸಂತ್ರಸ್ತರಿಗೆ ನೆರವಾಗಿ: ಆರೂಢಭಾರತೀ ಸ್ವಾಮೀಜಿ

ಬೆಂಗಳೂರು,ಜೂ,08:ಯಾವುದೂ ಯಾರಿಗೂ ಶಾಶ್ವತವಲ್ಲ. ನಿನ್ನೆ ಇನ್ನಾರದ್ದೋ ಆಗಿದ್ದು ಇಂದು ನಮ್ಮದಾಗಿದೆ. ನಾಳೆ ಯಾರ ಪಾಲೆಂಬುದು ತಿಳಿದಿಲ್ಲ. ನಮ್ಮ ಲೆಕ್ಕಾಚಾರಗಳು ಯಥಾವತ್ತಾಗಿ ನಡೆಯುವುದಿಲ್ಲ ಎಂಬುದಕ್ಕೆ ಕೊರೊನಾ ದುಷ್ಕಾಲವೇ ಸಾಕ್ಷಿ. ಇಂದು ನಾವು ಚೆನ್ನಾಗಿರಬಹುದು. ನಾಳೆ ಏನಿದೆಯೋ? ಚೆನ್ನಾಗಿರುವಾಗಲೇ ನಮ್ಮಲ್ಲಿರುವುದನ್ನು ಇಲ್ಲದವರಿಗೆ ನೀಡೋಣ. ಇಂದು ಕೈ ಒಡ್ಡಿ ಪಡೆಯುವವನು ನಾಳೆ ನಮಗೇ ಕೈ ಎತ್ತಿ ಕೊಡುವವನಾದಾನು! ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಇಂದು ಸಿದ್ಧಾರೂಢ ಮಿಷನ್, ಸಹಬಾಳ್ವೆ…

ಕೊರೊನಾ ಸೋಂಕಿತರ ಪ್ರಮಾಣ ಕಡಿಮೆ, ಸಾವಿನ ಸಂಖ್ಯೆ ಜಾಸ್ತಿ ;ವಿವರಣೆ ನೀಡಿದ ಬಿಬಿಎಂಪಿ ಆಯುಕ್ತ

ಬೆಂಗಳೂರು, ಜೂ, ೮: ಕೊರೊನಾ ಸೋಂಕಿತರ ಪ್ರಮಾಣ ದಿನೇ ದಿನೇ ಕಡಿಮೆಯಾಗುತ್ತಿದ್ದರೂ ಕುಡ ಸಾವಿನ ಸಂಖ್ಯೆ ಹೆಚ್ಚಾಗುತ್ತಿತ್ತು ಈ ಕುರಿತು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ವಿವರಣೆ ನೀಡಿದ್ದಾರೆ, ಕಳೆದ ಒಂದು ತಿಂಗಳ ಹಿಂದಿನ ಪರಿಸ್ಥಿತಿ ಅವಲೋಕಿಸಿದರೆ ಸ್ಮಶಾನದಲ್ಲಿ ಕ್ಯೂ ಕೂಡಾ ಹಿಂದಿನ ರೀತಿಯಲ್ಲಿ ಇರಲಿಲ್ಲ. ಆದರೂ, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆಯ ಅಂಕಿಅಂಶ ಕಮ್ಮಿಯಾಗಿರಲಿಲ್ಲ. ಈ ಬಗ್ಗೆ ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತ ಅಸಲಿ ಕಾರಣವನ್ನು ಬಿಚ್ಚಿಟ್ಟಿದ್ದು, ಸಾರ್ವಜನಿಕರು ಗಾಬರಿ ಪಡಬೇಕಾಗಿಲ್ಲ ಎಂದು ಹೇಳಿ, ಸಾವಿನ ಸಂಖ್ಯೆ…

ಮಾಜಿ ಸಚಿವ ಮುಮ್ತಾಜ್ ಅಲಿಖಾನ್ ನಿಧನ

ಬೆಂಗಳೂರು,ಜೂ,೦೭: ಮಾಜಿ ಸಚಿವ ಪ್ರೊ ಮುಮಾಜ್ ಆಲಿಖಾನ್ ಇಂದು ಬೆಳಿಗ್ಗೆ ನಿಧನಹೊಂದಿದಾರೆ. ಅವರಿಗೆ ೯೪ ವರ್ಷ ವಯಸ್ಸಾಗಿತ್ತು ಇಂದು ಬಳಿಗ್ಗೆ ಅವರು ಗಂಗಾನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಯೋಸಹಜ ಕಾಯಿಲಿಯಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ, ಮಗಳು ಇದ್ದಾರೆ. ೨೦೦೮ರಲ್ಲಿ ಬಿ.ಎಸ್. ಯಡಿಯಾರಪ್ಪ ನೇತೃತ್ವದ ಸರ್ಕಾರದಲ್ಲಿ ಅವರು ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ೩೦ ವರ್ಷಗಳಿಂದ ಬೆಂಗಳೂರು ನಗರದ ಆರ್‌ಟಿನಗರದಲ್ಲಿ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುತ್ತಿದ್ದು,…

ಉಚಿತ ದಿನಸಿ ಕಿಟ್ ವಿತರಣೆ.

ಉಚಿತ ದಿನಸಿ ಕಿಟ್ ವಿತರಣೆ. ಕೋವಿಡ್ ಮಹಾರೋಗದಿಂದ ಜನಜೀವನ ತತ್ತರಿಸಿದೆ. ಅನೇಕರಿಗೆ ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಇದನ್ನು ಮನಗಂಡು, ಶ್ರೀ ಸಿದ್ಧಾರೂಢ ಮಿಷನ್, ಸಹಬಾಳ್ವೆ ಸಂಸ್ಥೆ ಹಾಗೂ ಸೌಖ್ಯ ನ್ಯಾಚುರಲ್ ಫುಡ್ ಪ್ರೈ. ಲಿ. ಈ ಮೂರೂ ಸಂಸ್ಥೆಗಳು ಜೊತೆಯಾಗಿ, ಸಂಕಷ್ಟಕ್ಕೆ ಒಳಗಾದ ಶ್ರಮಿಕರು, ಕೂಲಿ ಕಾರ್ಮಿಕರು, ಬಡವರು ಹಾಗೂ ಆವಶ್ಯಕತೆ ಇರುವವರಿಗೆ, ದಾನಿಗಳ ನೆರವಿನಿಂದ ಹಂತ ಹಂತವಾಗಿ, ಬೆಂಗಳೂರು ಮೈಸೂರು ಹುಬ್ಬಳ್ಳಿ ಮೊದಲಾದ ಕಡೆಗಳಲ್ಲಿ, ಉಚಿತ ದಿನಸಿ ಕಿಟ್ ಗಳನ್ನು ವಿತರಿಸಲು ಮುಂದಾಗಿವೆ.ದಿನಾಂಕ 8.6.2021 ರಂದು…

ಹಸಿದವರ ನೆರವಿಗೆ ಧಾವಿಸಿ :ಡಾ ಆರೂಢಭಾರತೀ ಸ್ವಾಮೀಜಿ.

ಬೆಂಗಳೂರು,ಜೂ,04:ಕೊರೊನಾ ಮಹಾಮಾರಿ ಇಡೀ ಜನಜೀವನವನ್ನೇ ತಲ್ಲಣಗೊಳಿಸಿದೆ. ಜನತೆ ಸ್ವಾರ್ಥ ತ್ಯಜಿಸಿ ಮಾನವೀಯತೆ ಮೆರೆಯಬೇಕು. ಹಸಿದವರಿಗೆ ಅನ್ನದಾನದಂಥ ನೆರವಿಗೆ ಧಾವಿಸಬೇಕು ” ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಇಂದು ಕೆಂಗೇರಿಯ ಕೋಟೆ ಬೀದಿಯಲ್ಲಿ ದೇಶಭಕ್ತಿ ಫೌಂಡೇಶನ್, ಕಲಾ ಕದಂಬ ಆರ್ಟ್ ಸೆಂಟರ್ ಹಾಗೂ ಒಳಿತಿಗಾಗಿ ಮಿಡಿಯುವ ಮನಸುಗಳ ತಂಡ ಇವುಗಳ ಸಹಯೋಗದಲ್ಲಿ ನಡೆದ ಅನ್ನಗಂಗಾ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಕೆಂಗೇರಿಯಲ್ಲಿ ಈ ಯೋಜನೆ ಕಳೆದ ಹದಿನೈದು…

ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ – ಅರವಿಂದ ಲಿಂಬಾವಳಿ

ಬೆಂಗಳೂರು,ಜೂ,03:ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ  ಅರವಿಂದ ಲಿಂಬಾವಳಿ ಹೇಳಿದ್ದಾರೆ. ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ ತಂದಾಗ , ಅವರು ಇದು ಅತ್ಯಂತ ಖಂಡನೀಯ ಸಂಗತಿ. ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ…

ಶ್ರೀ ಈಶ್ವರಾನಂದ ಸ್ವಾಮೀಜಿ ಬ್ರಹ್ಮೈಕ್ಯ

ಬೆಳಗಾವಿ, ಜೂ,01:ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲ್ಲೂಕಿನ ಗುಡಸ ಗ್ರಾಮದ ಶ್ರೀ ಸಿದ್ಧಾರೂಢ ಮಠದ ಪೀಠಾಧಿಪತಿ ಶ್ರೋ. ಬ್ರ. ಸದ್ಗುರು ಶ್ರೀ ಈಶ್ವರಾನಂದ ಮಹಾಸ್ವಾಮೀಜಿ (65) ಇಂದು ಬೆಳಗಿನ ಜಾವ 2 ಘಂಟೆಗೆ ಬ್ರಹ್ಮಲೀನರಾಗಿದ್ದಾರೆ. ಕಳೆದ ಹದಿನೈದು ದಿನಗಳಿಂದ ಕೋವಿಡ್ ಪೀಡಿತರಾಗಿದ್ದ ಶ್ರೀಗಳು ಕೊಲ್ಲಾಪುರ ಬಳಿಯ ಕಣೇರಿ ಮಠದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಅವರನ್ನು ಮಠಕ್ಕೆ ಕರೆತರಲಾಗಿತ್ತು. ಮಠದಲ್ಲಿಯ ಕೊನೆಯುಸಿರೆಳೆದರೆಂದು ಹೇಳಲಾಗಿದೆ. ಹುಕ್ಕೇರಿ ತಾಲ್ಲೂಕಿನ ಕೊಚ್ರಿ ಎಂಬಲ್ಲಿ ಶ್ರೀ ದುಂಡಪ್ಪ ಶ್ರೀಮತಿ ಶಿವಕ್ಕ ಲೋಳಸೂರೆ…

ಸಿದ್ದರಾಮಯ್ಯಗೆ ಜ್ವರ-ಮೂರು ದಿನ ವಿಶ್ರಾಂತಿ

ಬೆಂಗಳೂರು, ಜೂ, ೦೧: ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಸೋಮವಾರ ರಾತ್ರಿ ತೀವ್ರ ಜ್ವರ ಕಾಣಿಸಿಕೊಂಡಿದೆ, ಈ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಯನ್ನು ಕೂಡ ಮಾಡಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಆಪ್ತ ವೈದ್ಯ ಡಾ. ರವಿ ಕುಮಾರ್ ಅವರು ಆರೋಗ್ಯ ತಪಾಸಣೆ ನಡೆಸಿದ್ದು, ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದೆ, ಆದರೂ ಜ್ವರ ಇರುವ…

ಯೂಟ್ಯೂಬ್‌ನಲ್ಲಿ ಹೈಕೋರ್ಟ್ ಕಲಾಪ

ಬೆಂಗಳೂರು,ಮೇ,೩೨: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೈಕೋರ್ಟ್ ಕಲಾಪವನ್ನು ಯೂಟ್ಯೂಬ್‌ನಲ್ಲಿ ನೇರಪ್ರಸಾರ ಮಾಡಲಾಯಿತು. ಜನಸಾಮಾನ್ಯರಿಗೆ ಹೈಕೋರ್ಟ್ ಕಲಾಪ ವೀಕ್ಷಿಸಲು ಅವಕಾಶ ಸಿಗಬೇಕು ಎನ್ನುವ ಆಶಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಈ ಮಹತ್ವದ ಕ್ರಮ ತೆಗೆದುಕೊಂಡರು. ೩೧ರ ಮಧ್ಯಾಹ್ನ ೨.೪೦ರಿಂದ ಹೈಕೋರ್ಟ್ ಕಲಾಪದ ಯುಟ್ಯೂಬ್ ನೇರ ಪ್ರಸಾರ ಆರಂಭವಾಯಿತು. ಕೋರ್ಟ್ ಹಾಲ್೧ರಲ್ಲಿ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನ್ಯಾಯಪೀಠದಲ್ಲಿದ್ದರು. ಪ್ರಾಯೋಗಿಕವಾಗಿ ಕಲಾಪವನ್ನು ಯುಟ್ಯೂಬ್‌ನಲ್ಲಿ…

ಕೊರೊನಾ ವಾರಿಯರ್ಸ್ ದಾದಿಯರ ಜೊತೆ ಸಿಎಂ ಸಂವಾದ

ಬೆಂಗಳೂರು,ಮೇ,೩೧: ಕೊರೊನಾ ವಾರಿಯರ್ಸ್ ಗಳಾಗಿ ಕಾರ್ಯನಿರ್ವಹಿಸುತ್ತಿರುವ ದಾದಿಯರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂವಾದ ನಡೆಸಿದರು. ಕೋವಿಡ್-೧೯ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಜಿಲ್ಲೆಗಳ ಸ್ಟಾಫ್ ನರ್ಸ್ ಗಳೊಂದಿಗೆ ಸಂವಾದ ನಡೆಸಿದ ಮುಖ್ಯಮಂತ್ರಿ,ಕೋವಿಡ್-೧೯ ಸಂಕಷ್ಟದ ಪರಿಸ್ಥಿತಿಯಲ್ಲಿ ಅಪಾಯ ಲೆಕ್ಕಿಸದೆ, ಸೋಂಕಿತರ ಶುಶ್ರೂಷೆಯಲ್ಲಿ ನಿರತರಾಗಿರುವ ಎಲ್ಲ ನರ್ಸ್ ಗಳ ಪರಿಶ್ರಮ, ಕರ್ತವ್ಯ ನಿಷ್ಠೆಯನ್ನು ಶ್ಲಾಘಿಸಿದರು. ವೈಯಕ್ತಿಕ ಕಷ್ಟ-ನಷ್ಟಗಳನ್ನು ಬದಿಗೊತ್ತಿ, ಕುಟುಂಬದವರಿಂದ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸುತ್ತಿರುವ ಶುಶ್ರೂಷರ ಕರ್ತವ್ಯ ಪ್ರಜ್ಞೆ ಅನುಕರಣೀಯ ಎಂದರು. ಪ್ರಸ್ತುತ ರಾಜ್ಯದಲ್ಲಿ ೨೧ ಸಾವಿರದ ೫೭೪ ಸ್ಟಾಫ್ ನರ್ಸ್…

ಅನಾಥಮಕ್ಕಳಿಗೆ ಬಾಲಸೇವಾಯೋಜನೆ ಘೋಷಿಸಿ ,ಪ್ರಧಾನಿ,ಸಿಎಂಗೆ ಸ್ವಾಗತಿಸಿದ ಜೊಲ್ಲೆ

ಬೆಂಗಳೂರು,ಮೇ,29: ಮಹಾಮಾರಿ ಕೊರೊನಾ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿರುವ ಪ್ರಧಾನಿ ಹಾಗೂ ಸಿಎಂಗೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸ್ವಾಗತಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕೊರೊನಾ ಸೋಂಕಿನಿಂದ ಬಹಳಷ್ಟು ಮಕ್ಕಳು ತಂದೆ ತಾಯಿಗಳನ್ನು ಕಳೆದುಕೊಂಡಿದ್ದಾರೆ. ಕೆಲವು ಮಕ್ಕಳಿಗೆ ಪೋಷಕರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತಹ ಮಕ್ಕಳನ್ನು ನಮ್ಮ ಇಲಾಖೆ ಗುರುತಿಸಿ ಅವರಿಗೆ ನೆರವು ನೀಡಲು ಈಗಾಗಲೇ…

ಶಿಕ್ಷಕರ ನಿಧಿಯಿಂದ ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಸಹಾಯಮಾಡಲು ರಾಜ್ಯಪಾಲರಿಗೆ ಮನವಿ

ಬೆಂಗಳೂರು,ಮೇ:೨೭: ಕೊರೋನಾ ಸಂಕಷ್ಟದ ಕಾಲದಲ್ಲಿ ಅನುದಾನ ರಹಿತ ಶಾಲೆಗಳು ಹಲವಾರು ತೊಂದರೆಗಳನ್ನು ಅನುಭವಿಸುತ್ತಿದೆ ಹೀಗಾಗಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಲ್ಯಾಣ ನಿಧಿಯಿಂದ ಸಂಕಷ್ಟಕ್ಕೊಳಗಾಗಿರುವ ರಾಜ್ಯ ಅನುದಾನ ರಹಿತ ರಾಜ್ಯಪಠ್ಯಕ್ರಮದ ಶಾಲೆಗಳ ಶಿಕ್ಷಕರಿಗೆ 2020-21 ನೇ ಸಾಲಿಗೆ ಆರ್ಥಿಕ ಸಹಾಯ ಮಾಡುವಂತೆ ಈಜಿಪುರದ ಚಿನ್ಮಯ ವಿದ್ಯಾ ಕೇಂದ್ರ ಪ್ರೌಢಶಾಲೆ ರಾಜ್ಯಪಾಲರಲ್ಲಿ ಮನವಿ ಮಾಡಿದೆ. ಈ ಕುರಿತಂತೆ ಸುಧೀರ್ಘ ಮನವಿ ಪತ್ರವನ್ನು ನೀಡಿರುವ ಚಿನ್ಮಯ ವಿದ್ಯಾ ಕೇಂದ್ರ ಪ್ರೌಢಶಾಲೆಯ ಕಾರ್ಯದರ್ಶಿ ಡಾ.ವಿ.ರಾಘವೇಂದ್ರರಾವ್ ಅವರು, ಅನುದಾನರಹಿತ ಶಾಲೆಗಳು ರಾಜ್ಯದಲ್ಲಿ ಹಲವಾರು ತೊಂದರೆಗಳನ್ನು…

ಬೆಂಗಳೂರಲ್ಲಿ ಇಂದು ೫,೯೭೭ ಸೋಂಕಿತರು ಪತ್ತೆ

ಬೆಂಗಳೂರು,ಮೇ,೨೭: ಕೊರೊನಾ ಸಂಕಷ್ಟ ಎದುರಿಸಲು ಸರ್ಕಾರ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ ಇದರ ಪರಿಣಾಮವಾಗಿ ಸೋಂಕಿತರ ಸಂಖ್ಯೆ ಇಳಿಕೆ ಕಾಣುತ್ತಿದೆ ಬಂಗಳೂರಿನಲ್ಲಿ ಇಂದು ೫೯೭೭ ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನ ವಿವಿಧ ವಾರ್ಡ್‌ಗಳಲ್ಲಿನ ಸೋಂಕಿತರ ಸಂಖ್ಯೆ ಈ ರೀತಿ ಇದೆ: ಬೊಮ್ಮನಹಳ್ಳಿಯಲ್ಲಿ-೫೪೭, ದಾಸರಹಳ್ಳಿ-೨೧೫, ಬೆಂಗಳೂರು ಪೂರ್ವ-೭೮೩, ಮಹಾದೇವಪುರ-೯೮೭, ಆರ್‌ಆರ್ ನಗರ-೪೪೨, ಬೆಂಗಳೂರು ದಕ್ಷಿಣ-೬೧೬, ಬೆಂಗಳೂರು ಪಶ್ಚಿಮ-೪೭೯, ಯಲಹಂಕ-೪೬೪, ಹೊರವಲಯದ ತಾಲೂಕುಗಳಲ್ಲಿ ೪೪೮ ಜನರಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು ೬೧೧ ಮಂದಿ ಕೋವಿಡ್ ಸೋಂಕಿತರು ಪಾಲಿಕೆ ಸಂಪರ್ಕಕ್ಕೆ ಸಿಗದೆ…

ವಿಕಲಚೇತನರು, ಅನಾಥಾಶ್ರಮದ ವಯೋವೃದ್ಧರಿಗೆ ಲಸಿಕೆಗೆ ವ್ಯವಸ್ಥೆ..!

ಬೆಂಗಳೂರು,ಮೇ,೨೫: ಅನಾಥಶ್ರಮಗಳಲ್ಲಿನ ವೃದ್ಧರಿಗೆ ಮತ್ತು ವಿಕಲ ಚೇತನಿರಿಗೆ ಬೆಂಗಳೂರು ನಗರ ಜಿಲ್ಲಾಡಿಳ ಅಲ್ಲಿಯೇ ಲಸಿಕೆ ಹಾಕಲು ನಿರ್ಧರಿಸಿದೆ ಪಂಚಾಯ್ತಿ, ರೆವಿನ್ಯೂ ಹಾಗೂ ಹೆಲ್ತ್ ಆಫೀಸರ್ಸ್ ನಿಂದ ಮ್ಯಾಪಿಂಗ್ ಮಾಡುವ ಕೆಲಸ ನಡೆಯುತ್ತಿದೆ. ಬೆಂಗಳೂರಿನಲ್ಲಿ ವಿಶೇಷ ಚೇತನರು ಬರೋಬ್ಬರಿ ೫೯ ಸಾವಿರ ಮಂದಿ ಇದ್ದಾರೆ. ಅದರಲ್ಲಿ ೪೫ ವರ್ಷ ಮೇಲ್ಪಟ್ಟವರು ಬರೋಬ್ಬರಿ ೧೯,೯೧೧ ಮಂದಿ ಇಷ್ಟು ಮಂದಿಯ ಮ್ಯಾಪಿಂಗ್ ಮಾಡಿ ಅವರಿರೋ ಸ್ಥಳಕ್ಕೆ ವಾಹನ ವ್ಯವಸ್ಥೆ ಮಾಡಿ, ವಿಶೇಷ ಚೇತನರಿರೋ ಮನೆ ಮನೆಗೆ ತೆರಳಿ ತಮ್ಮ ವಾಹನದಲ್ಲಿ ಸ್ಥಳೀಯ…

ಕೋವಿಡ್ ಪರೀಕ್ಷೆ ಮಾದರಿ ಕೊಡುವುದು ತಡ ಮಾಡಿದ ಲ್ಯಾಬ್‌ಗಳಿಗೆ ದಂಡ

ಬೆಂಗಳೂರು, ಮೇ ೨೫; ಲ್ಯಾಬ್‌ಗಳು ಮೋವಿಡ್ ಮಾದರಿ ಪರೀಕ್ಷೆಗಳನ್ನು ತಡ ಮಾಡಿದರೆ ಅಂತವುಗಲಿಗೆ ದಂಡವಿದಲಾಗುತ್ತಿದ್ದು ಈಗಾಗಲೇ ೪೦ ಲ್ಯಾಬ್‌ಗಳಿಗೆ ದಂಡ ಹಾಕಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್‌ನಾರಾಯಣ ತಿಳಿಸಿದ್ದಾರೆ. ಈಗಾಗಲೇ ಒಟ್ಟು೨೦.೨೦ ಲಕ್ಷ ರೂ ದಂಡವನ್ನು ವಿಧಿಸಲಾಗಿದ್ದು ೩೧ ಖಾಸಿಗಿ ಲ್ಯಾಬ್,೯ ಸರ್ಕಾರಿ ಲ್ಯಾಬ್‌ಗಳು ಸಏರಿ ೪೦ ಲ್ಯಾಬ್‌ಗಳಿಗೆ ದಂಡ ಹಾಕಲಾಗಿದೆ ಎಂದು ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯ ನೋಡೆಲ್ ಅಧಿಕಾರಿಯಾದ ಶಾಲಿನಿ ರಜನೀಶ್ ಸಚಿವರಿಗೆ ಈ ಕುರಿತು ವಿವರಗಳನ್ನು ನೀಡಿದ್ದಾರೆ. ಕೋವಿಡ್ ಟಾಸ್ಕ್ ಪೋರ್ಸ್ ಅಧ್ಯಕ್ಷರೂ ಆಗಿರುವ…

1 5 6 7 8 9
error: Content is protected !!