Browsing: ಜಿಲ್ಲೆ

ಜಿಲ್ಲೆ

ಉಳ್ಳವರು ಸಂತ್ರಸ್ತರಿಗೆ ನೆರವಾಗಿ: ಆರೂಢಭಾರತೀ ಸ್ವಾಮೀಜಿ

ಬೆಂಗಳೂರು,ಜೂ,08:ಯಾವುದೂ ಯಾರಿಗೂ ಶಾಶ್ವತವಲ್ಲ. ನಿನ್ನೆ ಇನ್ನಾರದ್ದೋ ಆಗಿದ್ದು ಇಂದು ನಮ್ಮದಾಗಿದೆ. ನಾಳೆ ಯಾರ ಪಾಲೆಂಬುದು ತಿಳಿದಿಲ್ಲ. ನಮ್ಮ ಲೆಕ್ಕಾಚಾರಗಳು ಯಥಾವತ್ತಾಗಿ ನಡೆಯುವುದಿಲ್ಲ ಎಂಬುದಕ್ಕೆ ಕೊರೊನಾ ದುಷ್ಕಾಲವೇ ಸಾಕ್ಷಿ. ಇಂದು ನಾವು ಚೆನ್ನಾಗಿರಬಹುದು. ನಾಳೆ ಏನಿದೆಯೋ? ಚೆನ್ನಾಗಿರುವಾಗಲೇ ನಮ್ಮಲ್ಲಿರುವುದನ್ನು ಇಲ್ಲದವರಿಗೆ ನೀಡೋಣ. ಇಂದು ಕೈ ಒಡ್ಡಿ ಪಡೆಯುವವನು ನಾಳೆ ನಮಗೇ ಕೈ ಎತ್ತಿ ಕೊಡುವವನಾದಾನು! ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಇಂದು ಸಿದ್ಧಾರೂಢ ಮಿಷನ್, ಸಹಬಾಳ್ವೆ…

ಕೊರೊನಾ ಸೋಂಕಿತರ ಪ್ರಮಾಣ ಕಡಿಮೆ, ಸಾವಿನ ಸಂಖ್ಯೆ ಜಾಸ್ತಿ ;ವಿವರಣೆ ನೀಡಿದ ಬಿಬಿಎಂಪಿ ಆಯುಕ್ತ

ಬೆಂಗಳೂರು, ಜೂ, ೮: ಕೊರೊನಾ ಸೋಂಕಿತರ ಪ್ರಮಾಣ ದಿನೇ ದಿನೇ ಕಡಿಮೆಯಾಗುತ್ತಿದ್ದರೂ ಕುಡ ಸಾವಿನ ಸಂಖ್ಯೆ ಹೆಚ್ಚಾಗುತ್ತಿತ್ತು ಈ ಕುರಿತು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ವಿವರಣೆ ನೀಡಿದ್ದಾರೆ, ಕಳೆದ ಒಂದು ತಿಂಗಳ ಹಿಂದಿನ ಪರಿಸ್ಥಿತಿ ಅವಲೋಕಿಸಿದರೆ ಸ್ಮಶಾನದಲ್ಲಿ ಕ್ಯೂ ಕೂಡಾ ಹಿಂದಿನ ರೀತಿಯಲ್ಲಿ ಇರಲಿಲ್ಲ. ಆದರೂ, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆಯ ಅಂಕಿಅಂಶ ಕಮ್ಮಿಯಾಗಿರಲಿಲ್ಲ. ಈ ಬಗ್ಗೆ ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತ ಅಸಲಿ ಕಾರಣವನ್ನು ಬಿಚ್ಚಿಟ್ಟಿದ್ದು, ಸಾರ್ವಜನಿಕರು ಗಾಬರಿ ಪಡಬೇಕಾಗಿಲ್ಲ ಎಂದು ಹೇಳಿ, ಸಾವಿನ ಸಂಖ್ಯೆ…

ಮಾಜಿ ಸಚಿವ ಮುಮ್ತಾಜ್ ಅಲಿಖಾನ್ ನಿಧನ

ಬೆಂಗಳೂರು,ಜೂ,೦೭: ಮಾಜಿ ಸಚಿವ ಪ್ರೊ ಮುಮಾಜ್ ಆಲಿಖಾನ್ ಇಂದು ಬೆಳಿಗ್ಗೆ ನಿಧನಹೊಂದಿದಾರೆ. ಅವರಿಗೆ ೯೪ ವರ್ಷ ವಯಸ್ಸಾಗಿತ್ತು ಇಂದು ಬಳಿಗ್ಗೆ ಅವರು ಗಂಗಾನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಯೋಸಹಜ ಕಾಯಿಲಿಯಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ, ಮಗಳು ಇದ್ದಾರೆ. ೨೦೦೮ರಲ್ಲಿ ಬಿ.ಎಸ್. ಯಡಿಯಾರಪ್ಪ ನೇತೃತ್ವದ ಸರ್ಕಾರದಲ್ಲಿ ಅವರು ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ೩೦ ವರ್ಷಗಳಿಂದ ಬೆಂಗಳೂರು ನಗರದ ಆರ್‌ಟಿನಗರದಲ್ಲಿ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುತ್ತಿದ್ದು,…

ಉಚಿತ ದಿನಸಿ ಕಿಟ್ ವಿತರಣೆ.

ಉಚಿತ ದಿನಸಿ ಕಿಟ್ ವಿತರಣೆ. ಕೋವಿಡ್ ಮಹಾರೋಗದಿಂದ ಜನಜೀವನ ತತ್ತರಿಸಿದೆ. ಅನೇಕರಿಗೆ ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಇದನ್ನು ಮನಗಂಡು, ಶ್ರೀ ಸಿದ್ಧಾರೂಢ ಮಿಷನ್, ಸಹಬಾಳ್ವೆ ಸಂಸ್ಥೆ ಹಾಗೂ ಸೌಖ್ಯ ನ್ಯಾಚುರಲ್ ಫುಡ್ ಪ್ರೈ. ಲಿ. ಈ ಮೂರೂ ಸಂಸ್ಥೆಗಳು ಜೊತೆಯಾಗಿ, ಸಂಕಷ್ಟಕ್ಕೆ ಒಳಗಾದ ಶ್ರಮಿಕರು, ಕೂಲಿ ಕಾರ್ಮಿಕರು, ಬಡವರು ಹಾಗೂ ಆವಶ್ಯಕತೆ ಇರುವವರಿಗೆ, ದಾನಿಗಳ ನೆರವಿನಿಂದ ಹಂತ ಹಂತವಾಗಿ, ಬೆಂಗಳೂರು ಮೈಸೂರು ಹುಬ್ಬಳ್ಳಿ ಮೊದಲಾದ ಕಡೆಗಳಲ್ಲಿ, ಉಚಿತ ದಿನಸಿ ಕಿಟ್ ಗಳನ್ನು ವಿತರಿಸಲು ಮುಂದಾಗಿವೆ.ದಿನಾಂಕ 8.6.2021 ರಂದು…

ಶಿಲ್ಪಾ ರಾಜೀನಾಮೆ ಕುರಿತು ಸೋಮವಾರ ನಿರ್ಧಾರ?

ಮೈಸೂರು,ಜೂ,೦೫: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನೀಡಿರುವ ರಾಜೀನಾಮೆಯನ್ನು ಸ್ವೀಕರಿಸಿರುವ ಮುಖ್ಯಕಾರ್ಯದರ್ಶಿ ಈ ಕುರಿತು ಸೋಮವಾರ ನಿರ್ಧಾರ ಮಾಡುವ ಸಾಧ್ಯತೆಗಳಿವೆ ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿರುವ ಶಿಲ್ಪಾ ಅವರು ರಾಜೀನಾಮೆ ಸಲ್ಲಿಸಿದ್ದರು ಈ ಕುರಿತು ನಿನ್ನೆ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರು ಇಬ್ಬರು ಅಧಿಕಾರಿಗಳ ಜೊತೆ ಪ್ರತ್ಯೇಕವಾಗಿ ಚರ್ಚಿಸಿದ್ದರು. ಈ ವೇಳೆ ಶಿಲ್ಪಾ ನೀಡಿದ ರಾಜೀನಾಮೆಯನ್ನು ಪಡೆದಿದ್ದ ರವಿಕುಮಾರ್ ವರು ಮುಖ್ಯಮಂತ್ರಿ ಅವರಿಗೆ ಈ ಇಬ್ಬರು ಅಧಿಕಾರಿಗಳ ಕುರಿತು ವರದಿ ಸಲ್ಲಿಸಿ ಆ ನಂತರ ಮೈಸೂರಿನಲ್ಲಿ ಐಎಎಸ್…

ಹಸಿದವರ ನೆರವಿಗೆ ಧಾವಿಸಿ :ಡಾ ಆರೂಢಭಾರತೀ ಸ್ವಾಮೀಜಿ.

ಬೆಂಗಳೂರು,ಜೂ,04:ಕೊರೊನಾ ಮಹಾಮಾರಿ ಇಡೀ ಜನಜೀವನವನ್ನೇ ತಲ್ಲಣಗೊಳಿಸಿದೆ. ಜನತೆ ಸ್ವಾರ್ಥ ತ್ಯಜಿಸಿ ಮಾನವೀಯತೆ ಮೆರೆಯಬೇಕು. ಹಸಿದವರಿಗೆ ಅನ್ನದಾನದಂಥ ನೆರವಿಗೆ ಧಾವಿಸಬೇಕು ” ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಇಂದು ಕೆಂಗೇರಿಯ ಕೋಟೆ ಬೀದಿಯಲ್ಲಿ ದೇಶಭಕ್ತಿ ಫೌಂಡೇಶನ್, ಕಲಾ ಕದಂಬ ಆರ್ಟ್ ಸೆಂಟರ್ ಹಾಗೂ ಒಳಿತಿಗಾಗಿ ಮಿಡಿಯುವ ಮನಸುಗಳ ತಂಡ ಇವುಗಳ ಸಹಯೋಗದಲ್ಲಿ ನಡೆದ ಅನ್ನಗಂಗಾ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಕೆಂಗೇರಿಯಲ್ಲಿ ಈ ಯೋಜನೆ ಕಳೆದ ಹದಿನೈದು…

ಮೈಸೂರು ಜಿಲ್ಲಾ ಆಡಳಿತದಲ್ಲಿ ಅಯೋಮಯ-ಉಸ್ತುವಾರಿ ಸಚಿವರ ವೈಫಲ್ಯ

ಬೆಂಗಳೂರು,ಜೂ,೦೪: ಮೈಸೂರು ಜಿಲ್ಲಾ ಆಳಿತ ವ್ಯವಸ್ಥೆಯೇ ಹದಗೆಟ್ಟಿದೆ, ಅಸಮರ್ಥ ಉಸ್ತುವಾರಿ ಸಚಿವರಿಂದ ಇಡೀ ವ್ಯವಸ್ಥೆ ಹಾಳುಗೆಟ್ಟಂತಿದೆ. ಮೈಸೂರಿನಲ್ಲಿ ಕಳೆದ ಆರು ತಿಂಗಳಿನಿಂದಲೂ ಜಿಲ್ಲಾಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮಧ್ಯೆ ನಿರಂತರವಾಗಿ ಮಾತಿನ ಸಮರಗಳು. ಏಟಿಗೆ-ಎದುರೇಟು ನಡೆಯುತ್ತಲೇ ಇದೆ ಇದರ ಮುಂದುವರೆದ ಭಾಗವಾಗಿ ಈಗ ಪಾಲಿಕೆ ಆಯುಕ್ತರೇ ರಾಜೀನಾಮೆ ಕೊಟ್ಟಿದ್ದಾರೆ ಎಂದರೆ ಇದರಲ್ಲಿ ಉಸ್ತುವಾರಿ ಸಚಿವ ಸೋಮಶೇಖರ್ ಅವರ ವೈಫಲ್ಯವಂತೂ ಎದ್ದು ಕಾಣುತ್ತದೆ. ಇದು ಕಳೆದ ಎರಡು ತಿಂಗಳಿನಿಂದಲೂ ಇಬ್ಬರಲ್ಲೂ ಆಂತರಿಕ ಕಚ್ಚಾಟ ನಡೆಯುತ್ತಿತ್ತು, ಜೊತೆಗೆ ಜನಪ್ರತಿನಿಧಿಗಳು ರೋಹಿಣಿ ವಿರುದ್ಧ…

ಪತ್ರಕರ್ತರು ದೇಶದ ಕನ್ನಡಿ- ಜಾಧವ್

ಶಿಕಾರಿಪುರ,ಜೂ,೦೪:ಪ್ರಜಾ ಪ್ರಭುತ್ವದ ನಾಲ್ಕನೇ ಅಂಗವಾಗಿ ಕೆಲಸ ಮಾಡುತ್ತಿರುವ ಹಾಗೂ ಕೂ ರೋ ನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸುದ್ದಿ ಮಾಡಿ ಸಮಾಜದಲ್ಲಿ ಗುರುತಿಸಿ ಕೊಂಡಿರುವ ಪತ್ರಕರ್ತರು ದೇಶವನ್ನು ಪ್ರತಿಬಿಂಬಿಸುವ ಕನ್ನಡಿ. ಎಂದು ಬೀಳಕಿ ಆಯುಷ್‌ಮಾ ಇಲಾಖೆಯ ಆಯುರ್ವೇದ ಆಸ್ಪತ್ರೆ ವೈದ್ಯ ಡಾ.ಖೇಮು ಜಾಧವ್ ಅಭಿಪ್ರಾಯಿಸಿದರು. ಅವರು ಶಿಕಾರಿಪುರದ ಸುದ್ದಿ ಮನೆಯಲ್ಲಿ ಪತ್ರಕರ್ತರಿಗೆ ಆಯುರ್ವೇದದ ಮೆಡಿಕಲ್ ಕಿಟ್ ವಿತರಿಸಿ ಮಾತನಾಡಿದರು.ಆಯುಷ್ಮಾನ್ ಇಲಾಖೆಯ ಎಂಟುನೂರು ನಲವತ್ತು ಸಿಬ್ಬಂದಿಗಳು ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುತ್ತಲೇ ಪ್ರತಿಭಟಿತ್ತಿದ್ದಾರೆ ಆದರೆ ಸರ್ಕಾರ…

ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ – ಅರವಿಂದ ಲಿಂಬಾವಳಿ

ಬೆಂಗಳೂರು,ಜೂ,03:ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ  ಅರವಿಂದ ಲಿಂಬಾವಳಿ ಹೇಳಿದ್ದಾರೆ. ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ ತಂದಾಗ , ಅವರು ಇದು ಅತ್ಯಂತ ಖಂಡನೀಯ ಸಂಗತಿ. ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ…

ಶ್ರೀ ಈಶ್ವರಾನಂದ ಸ್ವಾಮೀಜಿ ಬ್ರಹ್ಮೈಕ್ಯ

ಬೆಳಗಾವಿ, ಜೂ,01:ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲ್ಲೂಕಿನ ಗುಡಸ ಗ್ರಾಮದ ಶ್ರೀ ಸಿದ್ಧಾರೂಢ ಮಠದ ಪೀಠಾಧಿಪತಿ ಶ್ರೋ. ಬ್ರ. ಸದ್ಗುರು ಶ್ರೀ ಈಶ್ವರಾನಂದ ಮಹಾಸ್ವಾಮೀಜಿ (65) ಇಂದು ಬೆಳಗಿನ ಜಾವ 2 ಘಂಟೆಗೆ ಬ್ರಹ್ಮಲೀನರಾಗಿದ್ದಾರೆ. ಕಳೆದ ಹದಿನೈದು ದಿನಗಳಿಂದ ಕೋವಿಡ್ ಪೀಡಿತರಾಗಿದ್ದ ಶ್ರೀಗಳು ಕೊಲ್ಲಾಪುರ ಬಳಿಯ ಕಣೇರಿ ಮಠದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಅವರನ್ನು ಮಠಕ್ಕೆ ಕರೆತರಲಾಗಿತ್ತು. ಮಠದಲ್ಲಿಯ ಕೊನೆಯುಸಿರೆಳೆದರೆಂದು ಹೇಳಲಾಗಿದೆ. ಹುಕ್ಕೇರಿ ತಾಲ್ಲೂಕಿನ ಕೊಚ್ರಿ ಎಂಬಲ್ಲಿ ಶ್ರೀ ದುಂಡಪ್ಪ ಶ್ರೀಮತಿ ಶಿವಕ್ಕ ಲೋಳಸೂರೆ…

ಸಿದ್ದರಾಮಯ್ಯಗೆ ಜ್ವರ-ಮೂರು ದಿನ ವಿಶ್ರಾಂತಿ

ಬೆಂಗಳೂರು, ಜೂ, ೦೧: ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಸೋಮವಾರ ರಾತ್ರಿ ತೀವ್ರ ಜ್ವರ ಕಾಣಿಸಿಕೊಂಡಿದೆ, ಈ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಯನ್ನು ಕೂಡ ಮಾಡಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಆಪ್ತ ವೈದ್ಯ ಡಾ. ರವಿ ಕುಮಾರ್ ಅವರು ಆರೋಗ್ಯ ತಪಾಸಣೆ ನಡೆಸಿದ್ದು, ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದೆ, ಆದರೂ ಜ್ವರ ಇರುವ…

ಆಸ್ತಿಗಾಗಿ ಸಹೋದರರ ನಡುವೆ ಜಗಳ-ಅಣ್ಣನನ್ನೇ ಕೊಂದ ಪಾಪಿ

ಮಂಡ್ಯ,ಜೂ,೦೧: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ನಡೆದ ಜಗಳ ಅಣ್ಣನನ್ನು ಬಲಿತಗೆದುಕೊಂಡ ಘಟನೆ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ನಡೆದಿದೆ ಅರಳಕುಪ್ಪೆ ಗ್ರಾಮದ ಬಾಲಕೃಷ್ಣ (೫೪) ಮೃತ ದುರ್ದೈವಿ ಅಣ್ಣನಾಗಿದ್ದು, ಸುರೇಶ್ ಕೊಲೆ ಮಾಡಿದ ತಮ್ಮನಾಗಿದ್ದಾನೆ. ಕೊಲೆಯಾದ ಬಾಲಕೃಷ್ಣ ಮೈಸೂರಿನಲ್ಲಿ ವಾಸ ಮಾಡುತ್ತಿದ್ದು, ಲಾಕ್‌ಡೌನ್ ಆಗಿರುವ ಕಾರಣ ಅರಳಕುಪ್ಪೆ ಗ್ರಾಮಕ್ಕೆ ಬಂದಿದ್ದರು. ಜಮೀನು ವಿಚಾರದಲ್ಲಿ ಬಾಲಕೃಷ್ಣ ಹಾಗೂ ಸುರೇಶ್ ನಡುವೆ ಈ ಹಿಂದೆ ಜಗಳವಾಗಿತ್ತು. ಹೀಗಾಗಿ ಒಂದೇ ಮನೆಯ ಮಧ್ಯೆ ಗೋಡೆ ಹಾಕಿಕೊಂಡು ಬೇರೆ ಬೇರೆ…

ಯೂಟ್ಯೂಬ್‌ನಲ್ಲಿ ಹೈಕೋರ್ಟ್ ಕಲಾಪ

ಬೆಂಗಳೂರು,ಮೇ,೩೨: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೈಕೋರ್ಟ್ ಕಲಾಪವನ್ನು ಯೂಟ್ಯೂಬ್‌ನಲ್ಲಿ ನೇರಪ್ರಸಾರ ಮಾಡಲಾಯಿತು. ಜನಸಾಮಾನ್ಯರಿಗೆ ಹೈಕೋರ್ಟ್ ಕಲಾಪ ವೀಕ್ಷಿಸಲು ಅವಕಾಶ ಸಿಗಬೇಕು ಎನ್ನುವ ಆಶಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಈ ಮಹತ್ವದ ಕ್ರಮ ತೆಗೆದುಕೊಂಡರು. ೩೧ರ ಮಧ್ಯಾಹ್ನ ೨.೪೦ರಿಂದ ಹೈಕೋರ್ಟ್ ಕಲಾಪದ ಯುಟ್ಯೂಬ್ ನೇರ ಪ್ರಸಾರ ಆರಂಭವಾಯಿತು. ಕೋರ್ಟ್ ಹಾಲ್೧ರಲ್ಲಿ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನ್ಯಾಯಪೀಠದಲ್ಲಿದ್ದರು. ಪ್ರಾಯೋಗಿಕವಾಗಿ ಕಲಾಪವನ್ನು ಯುಟ್ಯೂಬ್‌ನಲ್ಲಿ…

ಕೊರೊನಾ ವಾರಿಯರ್ಸ್ ದಾದಿಯರ ಜೊತೆ ಸಿಎಂ ಸಂವಾದ

ಬೆಂಗಳೂರು,ಮೇ,೩೧: ಕೊರೊನಾ ವಾರಿಯರ್ಸ್ ಗಳಾಗಿ ಕಾರ್ಯನಿರ್ವಹಿಸುತ್ತಿರುವ ದಾದಿಯರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂವಾದ ನಡೆಸಿದರು. ಕೋವಿಡ್-೧೯ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಜಿಲ್ಲೆಗಳ ಸ್ಟಾಫ್ ನರ್ಸ್ ಗಳೊಂದಿಗೆ ಸಂವಾದ ನಡೆಸಿದ ಮುಖ್ಯಮಂತ್ರಿ,ಕೋವಿಡ್-೧೯ ಸಂಕಷ್ಟದ ಪರಿಸ್ಥಿತಿಯಲ್ಲಿ ಅಪಾಯ ಲೆಕ್ಕಿಸದೆ, ಸೋಂಕಿತರ ಶುಶ್ರೂಷೆಯಲ್ಲಿ ನಿರತರಾಗಿರುವ ಎಲ್ಲ ನರ್ಸ್ ಗಳ ಪರಿಶ್ರಮ, ಕರ್ತವ್ಯ ನಿಷ್ಠೆಯನ್ನು ಶ್ಲಾಘಿಸಿದರು. ವೈಯಕ್ತಿಕ ಕಷ್ಟ-ನಷ್ಟಗಳನ್ನು ಬದಿಗೊತ್ತಿ, ಕುಟುಂಬದವರಿಂದ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸುತ್ತಿರುವ ಶುಶ್ರೂಷರ ಕರ್ತವ್ಯ ಪ್ರಜ್ಞೆ ಅನುಕರಣೀಯ ಎಂದರು. ಪ್ರಸ್ತುತ ರಾಜ್ಯದಲ್ಲಿ ೨೧ ಸಾವಿರದ ೫೭೪ ಸ್ಟಾಫ್ ನರ್ಸ್…

ಟೀಕಿಸಿದ ಜನಪ್ರತಿನಿಧಿಗಳಿಗೆ ಲೆಕ್ಕಪತ್ರಗಳ ಮೂಲಕ ತಿರುಗೇಟು ನೀಡಿದ ರೋಹಿಣಿ

ಮೈಸೂರು, ಮೇ 31: ಮೈಸೂರು ಜಿಲ್ಲಾಧಿಕಾರ ಹಾಗೂ ಜನಪ್ರತಿನಿಧಿಗಳ ಜತೆಗಿನ ಕತ್ತಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ..ಆದರೆ ಇದ್ಯಾವುದಕ್ಕೂ ಜಗ್ಗದ ರೋಹಿಣಿ ತಮ್ಮ ಮೇಲಿನ ಆರೋಪಗಳಿಗೆ ಕಡಕ್ಕಾಗಿಯೇ ಉತ್ತರ ನೀಡುತ್ತಾ ಬಂದಿದ್ದಾರೆ. ಈಗ ಸಂಸದ ಪ್ರತಾಪ್ ಸಿಂಹ ಮಾಡಿರುವ ಆರೋಪಕ್ಕೆ ದಾಖಲೆ ಸಮೇತ ಉತ್ತರಿಸಿದ್ದಾರೆ. ರೋಹಿಣಿ ಸಿಂಧೂರಿ ವಿರುದ್ಧ ಸಿಡಿದೆದ್ದ ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿಗಳ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಇವರ ಬೆನ್ನಲ್ಲೇ ಶಾಸಕ ಸಾ.ರಾ ಮಹೇಶ್ ಸಹ ಡಿಸಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.…

ಅನಾಥಮಕ್ಕಳಿಗೆ ಬಾಲಸೇವಾಯೋಜನೆ ಘೋಷಿಸಿ ,ಪ್ರಧಾನಿ,ಸಿಎಂಗೆ ಸ್ವಾಗತಿಸಿದ ಜೊಲ್ಲೆ

ಬೆಂಗಳೂರು,ಮೇ,29: ಮಹಾಮಾರಿ ಕೊರೊನಾ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿರುವ ಪ್ರಧಾನಿ ಹಾಗೂ ಸಿಎಂಗೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸ್ವಾಗತಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕೊರೊನಾ ಸೋಂಕಿನಿಂದ ಬಹಳಷ್ಟು ಮಕ್ಕಳು ತಂದೆ ತಾಯಿಗಳನ್ನು ಕಳೆದುಕೊಂಡಿದ್ದಾರೆ. ಕೆಲವು ಮಕ್ಕಳಿಗೆ ಪೋಷಕರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತಹ ಮಕ್ಕಳನ್ನು ನಮ್ಮ ಇಲಾಖೆ ಗುರುತಿಸಿ ಅವರಿಗೆ ನೆರವು ನೀಡಲು ಈಗಾಗಲೇ…

ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ತುಮಕೂರು, ಮೇ೨೮: ಜಿಲ್ಲೆಯಯಲ್ಲಿ ಎರಡನೇ ಹಂತದ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು ಅಧಿಕಾರಿಗಳು ಬೇಜವಾಬ್ದಾರಿಯಾಗಿ ವರ್ತಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಸಿ,ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು ನಂಚರ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಎಚ್ಚರಿಕೆ…

ಶಿಕ್ಷಕರ ನಿಧಿಯಿಂದ ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಸಹಾಯಮಾಡಲು ರಾಜ್ಯಪಾಲರಿಗೆ ಮನವಿ

ಬೆಂಗಳೂರು,ಮೇ:೨೭: ಕೊರೋನಾ ಸಂಕಷ್ಟದ ಕಾಲದಲ್ಲಿ ಅನುದಾನ ರಹಿತ ಶಾಲೆಗಳು ಹಲವಾರು ತೊಂದರೆಗಳನ್ನು ಅನುಭವಿಸುತ್ತಿದೆ ಹೀಗಾಗಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಲ್ಯಾಣ ನಿಧಿಯಿಂದ ಸಂಕಷ್ಟಕ್ಕೊಳಗಾಗಿರುವ ರಾಜ್ಯ ಅನುದಾನ ರಹಿತ ರಾಜ್ಯಪಠ್ಯಕ್ರಮದ ಶಾಲೆಗಳ ಶಿಕ್ಷಕರಿಗೆ 2020-21 ನೇ ಸಾಲಿಗೆ ಆರ್ಥಿಕ ಸಹಾಯ ಮಾಡುವಂತೆ ಈಜಿಪುರದ ಚಿನ್ಮಯ ವಿದ್ಯಾ ಕೇಂದ್ರ ಪ್ರೌಢಶಾಲೆ ರಾಜ್ಯಪಾಲರಲ್ಲಿ ಮನವಿ ಮಾಡಿದೆ. ಈ ಕುರಿತಂತೆ ಸುಧೀರ್ಘ ಮನವಿ ಪತ್ರವನ್ನು ನೀಡಿರುವ ಚಿನ್ಮಯ ವಿದ್ಯಾ ಕೇಂದ್ರ ಪ್ರೌಢಶಾಲೆಯ ಕಾರ್ಯದರ್ಶಿ ಡಾ.ವಿ.ರಾಘವೇಂದ್ರರಾವ್ ಅವರು, ಅನುದಾನರಹಿತ ಶಾಲೆಗಳು ರಾಜ್ಯದಲ್ಲಿ ಹಲವಾರು ತೊಂದರೆಗಳನ್ನು…

ಬೆಂಗಳೂರಲ್ಲಿ ಇಂದು ೫,೯೭೭ ಸೋಂಕಿತರು ಪತ್ತೆ

ಬೆಂಗಳೂರು,ಮೇ,೨೭: ಕೊರೊನಾ ಸಂಕಷ್ಟ ಎದುರಿಸಲು ಸರ್ಕಾರ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ ಇದರ ಪರಿಣಾಮವಾಗಿ ಸೋಂಕಿತರ ಸಂಖ್ಯೆ ಇಳಿಕೆ ಕಾಣುತ್ತಿದೆ ಬಂಗಳೂರಿನಲ್ಲಿ ಇಂದು ೫೯೭೭ ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನ ವಿವಿಧ ವಾರ್ಡ್‌ಗಳಲ್ಲಿನ ಸೋಂಕಿತರ ಸಂಖ್ಯೆ ಈ ರೀತಿ ಇದೆ: ಬೊಮ್ಮನಹಳ್ಳಿಯಲ್ಲಿ-೫೪೭, ದಾಸರಹಳ್ಳಿ-೨೧೫, ಬೆಂಗಳೂರು ಪೂರ್ವ-೭೮೩, ಮಹಾದೇವಪುರ-೯೮೭, ಆರ್‌ಆರ್ ನಗರ-೪೪೨, ಬೆಂಗಳೂರು ದಕ್ಷಿಣ-೬೧೬, ಬೆಂಗಳೂರು ಪಶ್ಚಿಮ-೪೭೯, ಯಲಹಂಕ-೪೬೪, ಹೊರವಲಯದ ತಾಲೂಕುಗಳಲ್ಲಿ ೪೪೮ ಜನರಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು ೬೧೧ ಮಂದಿ ಕೋವಿಡ್ ಸೋಂಕಿತರು ಪಾಲಿಕೆ ಸಂಪರ್ಕಕ್ಕೆ ಸಿಗದೆ…

ಅವಶ್ಯಕತೆ ಪೂರೈಸುವಲ್ಲಿ ವೀರ ಶೈವ ಸಮಾಜ ಸೇವೆ ಅನನ್ಯ

ವರದಿ; ಜಿ ಕೆ ಹೆಬ್ಬಾರ್ ಶಿಕಾರಿಪುರ ಶಿಕಾರಿಪುರ,ಮೇ,೨೬;ದೇಶ .ಹಾಗೂ ರಾಜ್ಯ ಹಿಂದೆಂದೂ ಕಂಡರಿಯದ ಒಂದು ಸಂದಿಗ್ಧ ಸ್ಥಿತಿಯಲ್ಲಿ ಇದ್ದು ಈ ಕೂ ರೋ ನಾ ಹೆಮ್ಮರಿಯನ್ನು ಕಟ್ಟಿ ಹಾಕುವುದರ ಜೊತೆಗೆ ಸಾರ್ವಜನಿಕರ ಜೀವ ಕಾಪಾಡುವ ಮತ್ತು ತುರ್ತು ಸೇವೆ ಸಲ್ಲಿಸುವುದು ಎಲ್ಲರ ಆದ್ಯ ಕರ್ತವ್ಯ ಅಂತಹ ಸೇವೆಯಲ್ಲಿ ನಮ್ಮ ವೀರ ಶೈವ ಸಮಾಜ ಪೂರಕವಾಗಿ ಕೆಲಸಮಾಡಿ ತೋರಿಸುತ್ತಿದೆ ಸಮಾಜ ಮುಖಿಯಾಗಿ ಅವರಸೇವೆ ಅನನ್ಯ ಎಂದು ಸಂಸದ ರಾಘವೇಂದ್ರ ತಿಳಿಸಿದರು. ಅವರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅಖಿಲ…

error: Content is protected !!