Browsing: ಜಿಲ್ಲೆ

ಜಿಲ್ಲೆ

ಡಿಸೆಂಬರ್‌ವರೆಗೂ ಜಿಪಂ,ತಾಪಂ ಚುನಾವಣೆ ಇಲ್ಲ-ಈಶ್ವರಪ್ಪ

ದಾವಣಗೆರೆ,ಜೂ,೧೯: ಕೊನಾನಾ ಆತಂಕದ ಹಿನ್ನೆಲಯಲ್ಲಿ ಡಿಸೆಂಬರ್ ವರೆಗೂ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ನಡೆಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಸೋಮವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು ಟೆಂಡರ್ ಆರೋಪ ಮುಗಿದು ಹೋಗಿರೋದು. ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಸ್ಪಷ್ಟನೆ ನೀಡಿಯಾಗಿದೆ. ಮತ್ತೆ ಕೇಳಬೇಡಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. .ಎಲ್ಲ ಬಡವರಿಗೆ ಉಚಿತ ಪಡಿತರ, ಎಲ್ಲರಿಗೂ ಉಚಿತ ಲಸಿಕೆ ನೀಡುವ ಪ್ರಧಾನಿ…

ಹಕ್ಕು ಪತ್ರಕ್ಕಾಗಿ ನಿಲ್ಲದ ಹೋರಾಟ

ರಾಮನಗರ ಜೂ 19: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಈರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಅನ್ ಲಾಕ್ ನಂತರ  ಧರಣಿ ಮತ್ತೆ ಮುಂದುವರೆದಿದೆ. 2006 ರ ಅರಣ್ಯ ಹಕ್ಕು ಕಾಯ್ದೆ ಪ್ರಕಾರ ಸುಮಾರು ಎಂಟು ವರ್ಷಗಳಿಂದ ಅರಣ್ಯ ಭೂಮಿ ಹಕ್ಕುಪತ್ರಕ್ಕಾಗಿ ಹೋರಾಟ ನಡೆಸುತ್ತಾ ಬಂದಿರುವ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಈರುಳಿಗ ಸಮಾಜದ 24 ಕುಟುಂಬಗಳಿಗೆ ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ಒಕ್ಕಲೆಬ್ಬಿಸಿದ ಜಮೀನು ನೀಡದೆ ಅರಣ್ಯ ಇಲಾಖೆ ಕಾನೂನು ಗಾಳಿಗೆ ತೂರಿ…

ಸಿದ್ದಲಿಂಗಯ್ಯ ಸಮಾಜದ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ: ಕೆ. ಶೇಷಾದ್ರಿ.

ರಾಮನಗರ ಜೂ 19: ಸಮಾಜದ ಎಲ್ಲ ವರ್ಗಗಳ ಏಳಿಗೆಗೆ ಶ್ರಮಿಸಿದ ಹಾಗೂ ತಮ್ಮ ಕವಿತೆಗಳಿಂದ ಜನರಿಗೆ ಸರಿಯಾದ ಮಾರ್ಗ ತೋರಿಸುವ ಮೂಲಕ ಜನಮಾನಸದಲಿ ಶಾಶ್ವತವಾಗಿ ಉಳಿದ ಅದರ್ಶ ವ್ಯಕ್ತಿ ಡಾ.ಸಿದ್ದಲಿಂಗಯ್ಯ ಎಂದು ಮಾಜಿ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಹಾಲಿ ನಗರಸಭಾ ಅಧ್ಯಕ್ಷ ಕೆ ಶೇಷಾದ್ರಿ ಹೇಳಿದರು. ನಗರದ ಐಜೂರು ವೃತ್ತದಲ್ಲಿ ಸಿದ್ದಲಿಂಗಯ್ಯರವರಿಗೆ ಏರ್ಪಡಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಸಿದ್ದಲಿಂಗಯ್ಯರವರು ಬಹಳ ಸರಳವಾಗಿ ತಮ್ಮ ಬದುಕನ್ನು ಕಟ್ಟಿಕೊಂಡ ಜೀವನ ನಡೆಸುತ್ತಿದ್ದರು…

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿಗೆ ಅಭಿನಂದನೆ ಸಲ್ಲಿಸಿದ ಕನ್ನಡ ಪರ ಸಂಘಟನೆಗಳು

ಬೆಂಗಳೂರು,ಜೂ,18:ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾಗಿ ಅಧಿಕಾರ ಸ್ವೀಕರಿಸಿದ ಡಾ. ಸಂತೋಷ ಹಾನಗಲ್ ಅವರನ್ನು ಕನ್ನಡಪರ ಸಂಘಟನೆಗಳು ಅವರ ಕಛೇರಿಯಲ್ಲಿ ಅಭಿನಂದಿಸಿದವು. ಕನ್ನಡ ಶ್ರೀಸಾಮಾನ್ಯರ ಕೂಟದ ಅಧ್ಯಕ್ಷ ಶ್ರ.ದೇ. ಪಾರ್ಶ್ವನಾಥ್, ಮಹಮದೀಯರ ಕನ್ನಡ ವೇದಿಕೆ ಅಧ್ಯಕ್ಷ ಸಮೀವುಲ್ಲಾಖಾನ್, ವಚನಜ್ಯೋತಿ ಬಳಗದ ಅಧ್ಯಕ್ಷ ಪಿನಾಕಪಾಣಿ, ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ, ಸದ್ಭಾವನ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶಮೂರ್ತಿ, ಕರ್ನಾಟಕ ವಿದ್ಯಾರ್ಥಿಕೂಟದ ಪ್ರಧಾನ ಕಾರ್ಯದರ್ಶಿ ಹರ್ಷ, ವಿಷ್ಣುಸೇನೆಯ ಆನಂದ್ ಮತ್ತಿತರರು ನೂತನ‌…

ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಮೋದಿಗೆ ಮನವಿ

ಬೆಂಗಳೂರು,ಜೂ. 18: ವಿರೋಧ ವ್ಯಕ್ತಪಡಿಸುತ್ತಿರುವ ತಿಮಿಳುನಾಡು ಸರ್ಕಾರಕ್ಕೆ ಮೇಕೆ ದಾಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮೇಕೆದಾಟು ವಿಚಾರದ ಕುರಿತು ಇನ್ನು ಸುಪ್ರೀಂ ಕೋರ್ಟಿನಲ್ಲಿ ಇನ್ನು ಕೇಸ್​ ನಡೆಯುತ್ತಿದೆ. ರಾಜ್ಯದ ಹಿತಾಸಕ್ತಿ ಬದ್ಧವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಈ ಕುರಿತು ಉತ್ತಮ ವಾದ ಕೂಡ ನಡೆದಿದೆ. ಈ ಬಗ್ಗೆ ನ್ಯಾಷನಲ್ ಎನ್.ಜಿ.ಟಿ ಸ್ಪಷ್ಟಪಡಿಸಿದ್ದು,…

ಬಡವರಿಗೆ ಅನ್ನ,ವಸತಿ,ಉದ್ಯೋಗ ಒದಗಿಸುವ ಸಂಕಲ್ಪ-ಸೋಮಣ್ಣ

ಬೆಂಗಳೂರು,ಜೂ,೧೮: ರಾಜ್ಯದಲ್ಲಿ ಕಷ್ಟದಲ್ಲಿರುವ ಬಡವರಿಗೆ ಅನ್ನ, ವಸತಿ, ಆರೋಗ್ಯ ಮತ್ತು ಉದ್ಯೋಗ ಒದಗಿಸುವುದು ನಮ್ಮ ಸಂಕಲ್ಪ ಎಂದು ವಸತಿ ಸಚಿವರಾದ ವಿ ಸೋಮಣ್ಣನವರು ಅಭಿಪ್ರಾಯಪಟ್ಟಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜ ನಗರ ವಾರ್ಡ್‌ನಲ್ಲಿ ಬಡವರು, ಬೀದಿ ಬದಿಯ ವ್ಯಾಪಾರಿಗಳು, ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ ಮಾಡಿ ಬಳಿಕ ಮಾತನಾಡಿದ ಸೋಮಣ್ಣನವರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ೯ವಾರ್ಡ್‌ಗಳಲ್ಲಿ ಆರ್ಥಿಕವಾಗಿ ಹಿಂದುಳಿದರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ. ಸೋನ ಮಸೂರಿ ಅಕ್ಕಿ, ಎಣ್ಣೆ, ಬೇಳೆ ಮತ್ತು ಸಾಂಬಾರ್…

ಮಕ್ಕಳಿಗೆ ಬಾಲ ಸೇವಾ ಯೋಜನೆ : ಜೊಲ್ಲೆ

ರಾಮನಗರ ಜೂ 18: ಕೋವಿಡ್ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ನೆರವು ನೀಡಲು ಬಾಲ ಸೇವಾ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಅ ಜೊಲ್ಲೆ ಅವರು ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿ ಬಾಲಸೇವಾ ಯೋಜನೆಯಡಿ ಪ್ರತಿ ತಿಂಗಳು ಮಕ್ಕಳಿಗೆ ಮೂರುವರೆಸಾವಿರ ರೂ. ಹಾಗೂ ಉಚಿತ ಶಿಕ್ಷಣ, ಎಸ್.ಎಸ್.ಎಲ್.ಸಿ.…

ಧರ್ಮಸ್ಥಳ ವಿರುದ್ಧ ಅಪಪ್ರಾಚಾರ;ಕೆ.ಸೋಮನಾಥ್ ನಾಯಕ್ ಗೆ ಮೂರು ತಿಂಗಳು ಜೈಲು ಶಿಕ್ಷೆ

ಬೆಳ್ತಂಗಡಿ,ಜೂ,18: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ದುರುದ್ದೇಶಪೂರಿತ ಅಪಪ್ರಚಾರ ಮಾಡಿದ ಪ್ರಕರಣದಲ್ಲಿ ನಾಗರಿಕ ಸೇವಾ ಟ್ರಸ್ಟ್, ಗುರುವಾಯನಕೆರೆ ಅಧ್ಯಕ್ಷ ಕೆ.ಸೋಮನಾಥ್ ನಾಯಕ್ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಬೆಳ್ತಂಗಡಿ ನ್ಯಾಯಾಲಯ ತನ್ನ ಈ ಹಿಂದಿನ ಆದೇಶವನ್ನು ಎತ್ತಿಹಿಡಿದಿದೆ, ಮೂರು ತಿಂಗಳ ಜೈಲು ಶಿಕ್ಷೆಯ ಹೊರತಾಗಿ, ಕ್ಷೇತ್ರಕ್ಕೆ 4.5 ಲಕ್ಷ ರೂ.ಗಳ ಪರಿಹಾರವನ್ನು ಪಾವತಿಸಲು ನಾಯಕ್ ಒಡೆತನದ ಸ್ಥಿರಾಸ್ತಿಯನ್ನು ಲಗತ್ತಿಸಲು ನ್ಯಾಯಾಲಯ ಆದೇಶಿಸಿದೆ. ಅವರ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ತಿಳಿದಿದ್ದರೂ ಶ್ರೀ ಕ್ಷೇತ್ರದ…

ಪಿಜಿಗಳಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚನೆ

ಬೆಂಗಳೂರು, ಜೂ, ೧೫:ನಗರದಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡುತ್ತಿರುವ ಸರ್ಕಾರ ಈ ವೇಳೆ ಪಿಜಿಯಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚಿಸಿದೆ. ಯಾವುದೇ ಕಾರಣಕ್ಕೂ ಪಿಜಿಯಲ್ಲಿ ಇರುವ ಅವಕಾಶ ನೀಡಬಾರದು ಎಲ್ಲರನ್ನೂ ಅವರವರ ಊರುಗಳಿಗೆ ಕಳಿಸಿಕೊಡಿ ಎಂದು ಪಿಜಿ ಮಾಲೀಕರಿಗೆ ಬಿಬಿಎಂಪಿ ನೊಟೀಸ್ ಜಾರಿಮಾಡಿದೆ. ಒಂದು ವೇಳೆ ಅನಿವಾರ್ಯ ಕಾರಣಗಳಿಗಿಂದಾಗಿ ವಿದ್ಯಾರ್ಥಿಗಳನ್ನು ಪಿಜಿಯಲ್ಲಿ ಉಳಿಸಿಕೊಂಡಲ್ಲಿ ಪಿಜಿಯಲ್ಲಿ ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಜವಾಬ್ದಾರಿ ಅವರದ್ದೇ ಆಗಿರುತ್ತದೆ. ೧೧೦ ಚದುರ ಅಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿಗೆ…

ಹೊರಗಿನಿಂದ ಬರುವವರಿಗೆ ಕೋವಿಡ್ ಪರೀಕ್ಷೆಗೆ ಆದ್ಯತೆ: ಬಿಬಿಎಂಪಿ

ಬೆಂಗಳೂರು.ಜೂ,೧೪: ಹೊರಗಿನಿಂದ ನಗರಕ್ಕೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗುಯತ್ತಿರುವ ಕಾರಣ ಕೋವಿಡ್ ಮತ್ತಷ್ಟು ಹರಡುವ ಸಾಧ್ಯತೆಗಳಿರುವ ಕಾರಣ ಹೊರಗಿನಿಂದ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಆರೋಗ್ಯಾಧಿಕಾರಿಗಳಿವೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಸೂಚಿಸಿದ್ದಾಋಎ ಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ವರ್ಚುವಲ್ ರೂಪದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಸಾರ್ವಜನಿಕರು ಕೋವಿಡ್ ನಿಯಂತ್ರಣ ನಿಯಮಗಳನ್ನು ಪಾಲಿಸಿದರೆ, ಮಾತ್ರ ಈ ಸೋಂಕಿನ ವಿರುದ್ಧದ ಹೋರಾಟ ಯಶಸ್ಸು ಕಾಣಲು ಸಾಧ್ಯ. ಕೋವಿಡ್ ಪರೀಕ್ಷೆ, ಕಂಟೈನ್ಮೆಂಟ್…

ಅಗಲಿದ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ

ಬೆಂಗಳೂರು,ಜೂ,14:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ಕೇಂದ್ರ ಕಚೇರಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. kuwj ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ನಾಡಿನ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ, ಹಿರಿಯ ಪತ್ರಕರ್ತರಾದ ಸುರೇಶ್ ಚಂದ್ರ, ದವಡಬೆಟ್ಟ ನಾಗರಾಜ್, ದಾವಣಗೆರೆಯ ಹೆಚ್.ಎನ್.ಮುನೇಶ್ ರವರಿಗೂ, ರಾಷ್ಟ ಪ್ರಶಸ್ತಿ ವಿಜೇತರಾದಂತ ಚಲನ ಚಿತ್ರನಟರಾದ ಸಂಚಾರಿ ವಿಜಯ್, ಕೆ.ಸಿ.ಎನ್.ಚಂದ್ರು ಅವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ…

ಬಿಎಸ್‌ವೈ ನಾಯಕತ್ವ ಬದಲಾವಣೆ ವಿಚಾರ ಎತ್ತಬೇಡಿ-ಕಲ್ಮಠಸ್ವಾಮೀಜಿ ಎಚ್ಚರಿಕೆ!

ಶಿವಮೊಗ್ಗ,ಜೂ,೧೨:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತಂತೆ ಯಾರು ಮಾತನಾಡಬಾರದು ಒಂದು ವೇಳೆ ಅಂತ ಕೇಸಲ ಮಾಡಿದರೆ ತಮ್ಮ ಮೇಲೆ ಕಲ್ಲು ಎತ್ತಿ ಹಕಿಕೊಂಡಂತೆ ಎಂದು ಬೆಕ್ಕಿನ ಕಲ್ಮಠದ ಮುರುಘಾ ರಾಜೇಂದ್ರ ಸ್ವಾಮೀಜಿ ಎಚ್ಚರಿಸಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಗಳು ಯಡಿಯೂರಪ್ಪ ಉತ್ತಮ ಆಡಳಿತಗಾರ, ಹೋರಾಟದ ಹಿನ್ನೆಲೆಯಿಂದ ಬಂದವರು ಜನಪರ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಈ ರೀತಿ ಹೇಳಿಕೆಗಳು ನೀಡುವ…

ಶಿಕಾರಿಪುರ:ತೈಲಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರ,ಜೂ,೧೨: ತೈಲಬೆಲೆ ಏರಿಕೆ ಖಂಡಿಸಿ ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ ನಡೆಸಿದ ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್,ಉಪಾಧ್ಯಕ್ಷ ಎಂ.ಅರುಣ್ ಕುಮಾರ್,ಜಿಲ್ಲಾ ಕಾರ್ಯದರ್ಶಿ ಬಂಡಾರಿ ಮಾಲತೇಶ್ ಪುರಸಭೆ ಸದಸ್ಯ ಗೋಣಿ ಪ್ರಕಾಶ್ ಖಚಾಂಜಿ ಮಂಜುನಾಥ್ ರಆವ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಜೆಪಿ ಸರ್ಕಾರ ನಿರಂತರವಾಗಿ…

ದುಪ್ಪಟ್ಟು ತೆರಿಗೆ ;ಸಾರ್ವಜನಿಕರ ಆಕ್ರೋಶ

G.k.hegade,shikarripura ಶಿಕಾರಿಪುರ,ಜೂ,೦೯:ಕೊ ರೋ ನಾ ಮಹಾಮಾರಿ ಎರಡು ವರ್ಷ ಗಳಿಂದ ಜನರ ಜೀವ .ಜೀವನವನ್ನು ಕಿತ್ತುತಿನ್ನುತಿದೆs ಈ ಸಂದರ್ಭದಲ್ಲೂ ಕಂದಾಯ ಹಾಗೂ ಕಾಲಿ ನಿವೇಶನದ ತೆರಿಗೆಗಳು ಎರಡು ಪಟ್ಟು ಆಗಿದ್ದು ಸಾರ್ವಜನಿಕರು ಪುರಸಭೆ ಶಾಪ ಹಾಕುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗಗಳು ನಡೆಯುತ್ತಿದೆ. ಸರ್ಕಾರ ತೆರಿಗೆ ಜಾಸ್ತಿ ಮಾಡುವುದು ಅನಿವಾರ್ಯ ಆದರೆ ಈ ಕೆಟ್ಟ ಪರಿಸ್ಥಿಯಲ್ಲಿ ಮಾಡುವುದು ಸರಿಯಲ್ಲ ಎನ್ನುವುದು ಸಾರ್ವಜನಿಕರ ವಾದ .ಕೆಲವು ಜನರಿಗೆ ಕಂದಾಯ ಜಾಸ್ತಿ ಯಾಗಿರುವುದು ತಿಳಿದೇ ಇಲ್ಲ ಕಟ್ಟಲು ಹೋದವರಿಗೆ ಮಾತ್ರ…

ಉಳ್ಳವರು ಸಂತ್ರಸ್ತರಿಗೆ ನೆರವಾಗಿ: ಆರೂಢಭಾರತೀ ಸ್ವಾಮೀಜಿ

ಬೆಂಗಳೂರು,ಜೂ,08:ಯಾವುದೂ ಯಾರಿಗೂ ಶಾಶ್ವತವಲ್ಲ. ನಿನ್ನೆ ಇನ್ನಾರದ್ದೋ ಆಗಿದ್ದು ಇಂದು ನಮ್ಮದಾಗಿದೆ. ನಾಳೆ ಯಾರ ಪಾಲೆಂಬುದು ತಿಳಿದಿಲ್ಲ. ನಮ್ಮ ಲೆಕ್ಕಾಚಾರಗಳು ಯಥಾವತ್ತಾಗಿ ನಡೆಯುವುದಿಲ್ಲ ಎಂಬುದಕ್ಕೆ ಕೊರೊನಾ ದುಷ್ಕಾಲವೇ ಸಾಕ್ಷಿ. ಇಂದು ನಾವು ಚೆನ್ನಾಗಿರಬಹುದು. ನಾಳೆ ಏನಿದೆಯೋ? ಚೆನ್ನಾಗಿರುವಾಗಲೇ ನಮ್ಮಲ್ಲಿರುವುದನ್ನು ಇಲ್ಲದವರಿಗೆ ನೀಡೋಣ. ಇಂದು ಕೈ ಒಡ್ಡಿ ಪಡೆಯುವವನು ನಾಳೆ ನಮಗೇ ಕೈ ಎತ್ತಿ ಕೊಡುವವನಾದಾನು! ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಇಂದು ಸಿದ್ಧಾರೂಢ ಮಿಷನ್, ಸಹಬಾಳ್ವೆ…

ಕೊರೊನಾ ಸೋಂಕಿತರ ಪ್ರಮಾಣ ಕಡಿಮೆ, ಸಾವಿನ ಸಂಖ್ಯೆ ಜಾಸ್ತಿ ;ವಿವರಣೆ ನೀಡಿದ ಬಿಬಿಎಂಪಿ ಆಯುಕ್ತ

ಬೆಂಗಳೂರು, ಜೂ, ೮: ಕೊರೊನಾ ಸೋಂಕಿತರ ಪ್ರಮಾಣ ದಿನೇ ದಿನೇ ಕಡಿಮೆಯಾಗುತ್ತಿದ್ದರೂ ಕುಡ ಸಾವಿನ ಸಂಖ್ಯೆ ಹೆಚ್ಚಾಗುತ್ತಿತ್ತು ಈ ಕುರಿತು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ವಿವರಣೆ ನೀಡಿದ್ದಾರೆ, ಕಳೆದ ಒಂದು ತಿಂಗಳ ಹಿಂದಿನ ಪರಿಸ್ಥಿತಿ ಅವಲೋಕಿಸಿದರೆ ಸ್ಮಶಾನದಲ್ಲಿ ಕ್ಯೂ ಕೂಡಾ ಹಿಂದಿನ ರೀತಿಯಲ್ಲಿ ಇರಲಿಲ್ಲ. ಆದರೂ, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆಯ ಅಂಕಿಅಂಶ ಕಮ್ಮಿಯಾಗಿರಲಿಲ್ಲ. ಈ ಬಗ್ಗೆ ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತ ಅಸಲಿ ಕಾರಣವನ್ನು ಬಿಚ್ಚಿಟ್ಟಿದ್ದು, ಸಾರ್ವಜನಿಕರು ಗಾಬರಿ ಪಡಬೇಕಾಗಿಲ್ಲ ಎಂದು ಹೇಳಿ, ಸಾವಿನ ಸಂಖ್ಯೆ…

ಮಾಜಿ ಸಚಿವ ಮುಮ್ತಾಜ್ ಅಲಿಖಾನ್ ನಿಧನ

ಬೆಂಗಳೂರು,ಜೂ,೦೭: ಮಾಜಿ ಸಚಿವ ಪ್ರೊ ಮುಮಾಜ್ ಆಲಿಖಾನ್ ಇಂದು ಬೆಳಿಗ್ಗೆ ನಿಧನಹೊಂದಿದಾರೆ. ಅವರಿಗೆ ೯೪ ವರ್ಷ ವಯಸ್ಸಾಗಿತ್ತು ಇಂದು ಬಳಿಗ್ಗೆ ಅವರು ಗಂಗಾನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಯೋಸಹಜ ಕಾಯಿಲಿಯಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ, ಮಗಳು ಇದ್ದಾರೆ. ೨೦೦೮ರಲ್ಲಿ ಬಿ.ಎಸ್. ಯಡಿಯಾರಪ್ಪ ನೇತೃತ್ವದ ಸರ್ಕಾರದಲ್ಲಿ ಅವರು ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ೩೦ ವರ್ಷಗಳಿಂದ ಬೆಂಗಳೂರು ನಗರದ ಆರ್‌ಟಿನಗರದಲ್ಲಿ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುತ್ತಿದ್ದು,…

ಉಚಿತ ದಿನಸಿ ಕಿಟ್ ವಿತರಣೆ.

ಉಚಿತ ದಿನಸಿ ಕಿಟ್ ವಿತರಣೆ. ಕೋವಿಡ್ ಮಹಾರೋಗದಿಂದ ಜನಜೀವನ ತತ್ತರಿಸಿದೆ. ಅನೇಕರಿಗೆ ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಇದನ್ನು ಮನಗಂಡು, ಶ್ರೀ ಸಿದ್ಧಾರೂಢ ಮಿಷನ್, ಸಹಬಾಳ್ವೆ ಸಂಸ್ಥೆ ಹಾಗೂ ಸೌಖ್ಯ ನ್ಯಾಚುರಲ್ ಫುಡ್ ಪ್ರೈ. ಲಿ. ಈ ಮೂರೂ ಸಂಸ್ಥೆಗಳು ಜೊತೆಯಾಗಿ, ಸಂಕಷ್ಟಕ್ಕೆ ಒಳಗಾದ ಶ್ರಮಿಕರು, ಕೂಲಿ ಕಾರ್ಮಿಕರು, ಬಡವರು ಹಾಗೂ ಆವಶ್ಯಕತೆ ಇರುವವರಿಗೆ, ದಾನಿಗಳ ನೆರವಿನಿಂದ ಹಂತ ಹಂತವಾಗಿ, ಬೆಂಗಳೂರು ಮೈಸೂರು ಹುಬ್ಬಳ್ಳಿ ಮೊದಲಾದ ಕಡೆಗಳಲ್ಲಿ, ಉಚಿತ ದಿನಸಿ ಕಿಟ್ ಗಳನ್ನು ವಿತರಿಸಲು ಮುಂದಾಗಿವೆ.ದಿನಾಂಕ 8.6.2021 ರಂದು…

ಶಿಲ್ಪಾ ರಾಜೀನಾಮೆ ಕುರಿತು ಸೋಮವಾರ ನಿರ್ಧಾರ?

ಮೈಸೂರು,ಜೂ,೦೫: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನೀಡಿರುವ ರಾಜೀನಾಮೆಯನ್ನು ಸ್ವೀಕರಿಸಿರುವ ಮುಖ್ಯಕಾರ್ಯದರ್ಶಿ ಈ ಕುರಿತು ಸೋಮವಾರ ನಿರ್ಧಾರ ಮಾಡುವ ಸಾಧ್ಯತೆಗಳಿವೆ ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿರುವ ಶಿಲ್ಪಾ ಅವರು ರಾಜೀನಾಮೆ ಸಲ್ಲಿಸಿದ್ದರು ಈ ಕುರಿತು ನಿನ್ನೆ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರು ಇಬ್ಬರು ಅಧಿಕಾರಿಗಳ ಜೊತೆ ಪ್ರತ್ಯೇಕವಾಗಿ ಚರ್ಚಿಸಿದ್ದರು. ಈ ವೇಳೆ ಶಿಲ್ಪಾ ನೀಡಿದ ರಾಜೀನಾಮೆಯನ್ನು ಪಡೆದಿದ್ದ ರವಿಕುಮಾರ್ ವರು ಮುಖ್ಯಮಂತ್ರಿ ಅವರಿಗೆ ಈ ಇಬ್ಬರು ಅಧಿಕಾರಿಗಳ ಕುರಿತು ವರದಿ ಸಲ್ಲಿಸಿ ಆ ನಂತರ ಮೈಸೂರಿನಲ್ಲಿ ಐಎಎಸ್…

ಹಸಿದವರ ನೆರವಿಗೆ ಧಾವಿಸಿ :ಡಾ ಆರೂಢಭಾರತೀ ಸ್ವಾಮೀಜಿ.

ಬೆಂಗಳೂರು,ಜೂ,04:ಕೊರೊನಾ ಮಹಾಮಾರಿ ಇಡೀ ಜನಜೀವನವನ್ನೇ ತಲ್ಲಣಗೊಳಿಸಿದೆ. ಜನತೆ ಸ್ವಾರ್ಥ ತ್ಯಜಿಸಿ ಮಾನವೀಯತೆ ಮೆರೆಯಬೇಕು. ಹಸಿದವರಿಗೆ ಅನ್ನದಾನದಂಥ ನೆರವಿಗೆ ಧಾವಿಸಬೇಕು ” ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಇಂದು ಕೆಂಗೇರಿಯ ಕೋಟೆ ಬೀದಿಯಲ್ಲಿ ದೇಶಭಕ್ತಿ ಫೌಂಡೇಶನ್, ಕಲಾ ಕದಂಬ ಆರ್ಟ್ ಸೆಂಟರ್ ಹಾಗೂ ಒಳಿತಿಗಾಗಿ ಮಿಡಿಯುವ ಮನಸುಗಳ ತಂಡ ಇವುಗಳ ಸಹಯೋಗದಲ್ಲಿ ನಡೆದ ಅನ್ನಗಂಗಾ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಕೆಂಗೇರಿಯಲ್ಲಿ ಈ ಯೋಜನೆ ಕಳೆದ ಹದಿನೈದು…

error: Content is protected !!