Browsing: ಜಿಲ್ಲೆ

ಜಿಲ್ಲೆ

ಆರೋಗ್ಯಕರ ಜಗತ್ತು ನಿರ್ಮಾಣಕ್ಕೆ ಕೈಜೋಡಿಸಿ:ಗೆಹ್ಲೋಟ್

ಬೆಂಗಳೂರು,ಏ,24: ಪ್ರಾಚೀನ ಭಾರತದ ಶಿಕ್ಷಣ ವ್ಯವಸ್ಥೆ, ಜ್ಞಾನ ಮತ್ತು ವಿಜ್ಞಾನ, ಕೃಷಿ, ಆರ್ಥಿಕತೆ ಮತ್ತು ಉದ್ಯಮವು ಬಹಳ ಶ್ರೀಮಂತವಾಗಿತ್ತು. ಭಾರತವು ಎಲ್ಲಾ ರೀತಿಯ ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದ್ದರಿಂದ ಭಾರತ ದೇಶವನ್ನು ವಿಶ್ವ ಗುರು ಮತ್ತು ಚಿನ್ನದ ಹಕ್ಕಿ ಎಂದು ಕರೆಯಲಾಗುತ್ತಿತ್ತು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಗ್ಲೋಬಲ್ ಇಂಡಿಯಾ ಬಿಸಿನೆಸ್ ಫೋರಮ್ ವತಿಯಿಂದ ಆಯೋಜಿಸಲಾಗಿದ್ದ ವೃತ್ತಿಪರ ಶ್ರೇಷ್ಠತೆಗಾಗಿ ರಾಷ್ಟ್ರೀಯ ಪ್ರಶಸ್ತಿ 2022 ವಿತರಣಾ ಮತ್ತು “ಗ್ಲೋಬಲ್ ಬಿಸಿನೆಸ್” ಸೆಮಿನಾರ್ ಕಾರ್ಯಕ್ರಮವನ್ನುದ್ದೇಶಿಸಿ…

ಡಾ.ರಾಜ್ ಜನ್ಮದಿನ; ಗೋಕಾಕ್ ಚಳವಳಿ ನೆನೆದ ಅಶ್ವತ್ಥ್ ನಾರಾಯಣ

ಬೆಂಗಳೂರು,ಏ 24: ಕನ್ನಡದ ವರನಟ ದಿ. ರಾಜಕುಮಾರ್ ಅವರ 94ನೇ ಹುಟ್ಟುಹಬ್ಬದ ಪ್ರಯುಕ್ತ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೋಕಾಕ್ ಚಳವಳಿ ವೃತ್ತ (18ನೇ ಕ್ರಾಸ್) ಮತ್ತು ಸುಬ್ರಹ್ಮಣ್ಯ ನಗರದ ಸಂಗೊಳ್ಳಿ ರಾಯಣ್ಣ ಉದ್ಯಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಗಳಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು. ಎರಡೂ ಕಡೆಗಳಲ್ಲಿ ರಾಜಕುಮಾರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಕೇಕ್ ಕತ್ತರಿಸಿದ ಸಚಿವರು, ನೆರೆದಿದ್ದ ಅಭಿಮಾನಿಗಳಿಗೆ ಸಿಹಿ ಮತ್ತು ಉಪಾಹಾರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,…

ಸ್ತನಕ್ಯಾನ್ಸರ್‌ನ ನೂತನ ಚಿಕಿತ್ಸೆ ಕುರಿತು ಕಾರ್ಯಾಗಾರ

ಬೆಂಗಳೂರು,ಏ,19: ಆರಂಭದಲ್ಲಿಯೇ ಸ್ತನ ಕ್ಯಾನ್ಸರ್‌ ಪತ್ತೆ ಹಚ್ಚುವುದು ಉತ್ತಮವೇ? ಇದಕ್ಕೆ ನೂತನ ಚಿಕಿತ್ಸಾ ವಿಧಾನ ಈ ಕುರಿತು “ಸರ್ಜಿಕಲ್‌ ಕಾರ್ಯಾಗಾರ”ವನ್ನು ಫೊರ್ಟಿಸ್‌ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟ್‌ ಆಯೋಜಿಸಿತ್ತು. ಈ ಕಾರ್ಯಾಗಾರವನ್ನು ನಟಿ ರಾಚೆಲ್‌ ಡೇವಿಟ್‌ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಫೊರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್‌ ಆಂಕಾಲಜಿ ನಿರ್ದೇಶಕ ಡಾ. ಸಂದೀಪ್‌ ನಾಯಕ್‌, ಸ್ತನ ಕ್ಯಾನ್ಸರ್‌ನನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚುವುದು ಅನಿವಾರ್ಯ. ಸ್ತನ ಕ್ಯಾನ್ಸರ್‌ಗೆ ಪ್ರಾರಂಭದಲ್ಲಿ ಸರ್ಜಿಕಲ್‌ ಚಿಕಿತ್ಸೆ ನೀಡುವುದು ಅನಿವಾರ್ಯ. ಇಂಟ್ರಾ ಆಪರೇಟಿವ್‌ ರೇಡಿಯೇಶನ್‌ ಥೆರಪಿ (ಐಒಆರ್‌ಟಿ) ಹೊಸ…

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ದಿಂದ ವಿಶೇಷ ಕೊಡುಗೆ ಘೋಷಣೆ!*

ಬೆಂಗಳೂರು,ಏ,18:ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ಹಾಲಿಡೇಸ್‌ ವಿಶೇಷ ರಿಯಾಯಿತಿ ಘೋಷಿಸಿದೆ. ಹೌದು, 2021-22 ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಮೊದಲ ಹಾಗೂ ದ್ವೀತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ನನ್ನು ತೋರಿಸುವ ಮೂಲಕ ಶೇ.35ರಷ್ಟು ರಿಯಾಯಿಯನ್ನು ಪಡೆಯಬಹುದು. ವಿದ್ಯಾರ್ಥಿಗಳು ಪರೀಕ್ಷೆ ಬರೆದು ತಮ್ಮ ಬೇಸಿಗೆ ರಜೆಯನ್ನು ಆನಂದಿಸಲು ಪ್ರಾರಂಭಿಸಿದ್ದಾರೆ. ಅವರ ಬೇಸಿಗೆ ರಜೆಯ ಮನರಂಜನೆಯನ್ನು ಇನ್ನಷ್ಟು ದ್ವಿಗುಣಗೊಳಿಸಲು ಈ ಆಫರ್‌ ನೀಡಲಾಗಿದೆ. ವಂಡರ್‌ಲಾದಲಿ ಸಾಮಾಜಿಕ ಅಂತರದ ನಿಯಮವನ್ನು ಪಾಲಿಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು…

ಭಾರತದಲ್ಲಿ ಧಾರ್ಮಿಕ ಪರಂಪರೆಗೆ ವಿಶೇಷ ಸ್ಥಾನವಿದೆ; ರಘುಮೂರ್ತಿ

ನಾಯಕನಹಟ್ಟಿ,ಏ,01:ನಮ್ಮ ರಾಷ್ಟ್ರದ ಧಾರ್ಮಿಕ ಪರಂಪರೆಗೆ ವಿಶೇಷವಾದ ಸ್ಥಾನಮಾನವಿದೆ ಋಗ್ವೇದದಪಲ್ಲಿ ಆರ್ಯನರು ಧಾರ್ಮಿಕ ನೆಲೆಘಟ್ಟನ್ನು ಗಟ್ಟಿಗೊಳಿಸಿದರು ಸಿಂಧೂ ನಾಗರೀಕತೆ ಯಿಂದಲು ಧಾರ್ಮಿಕ ಭಾವನೆ ಶ್ರೀಮಂತ ಗೊಂಡಿತು ಎಂದು ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದರು ಕರ್ನಾಟಕ ರಾಜ್ಯ ಸರ್ಕಾರದಿಂದ ಧಾರ್ಮಿಕ ದಿನಾಚರಣೆಯನ್ನು ಗೌರಸಮುದ್ರದ ಅಧಿದೇವತೆ ಮಾರಮ್ಮನ ದೇವಸ್ಥಾನದಲ್ಲಿಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ ತಾಲೂಕಿನಲ್ಲಿ ಎರಡು ಮೇಜರ್ ಮುಜರಾಯಿ ದೇವಸ್ಥಾನಗಳಿದ್ದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಹಾಗೂ ಗೌರಸಮುದ್ರದ ಮಾರಮ್ಮ ದೇವಸ್ಥಾನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬರು ಭಕ್ತಾಧಿಗಳಿಗೆ ವಿಶೇಷವಾಗಿ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ…

ಪಠ್ಯ ಪುಸ್ತಕಗಳಲ್ಲಿ ಲಿಂಗ ತಾರತಮ್ಯ ಬದಲಿಸಲು ಡಿ. ರೂಪ ಒತ್ತಾಯ

ಬೆಂಗಳೂರು,ಮಾ,24:ಶಾಲಾ ಪಠ್ಯ ಪುಸ್ತಕದಲ್ಲಿ ಈಗಲೂ ಲಿಂಗ ತಾರತಮ್ಯ ಮಾಡಲಾಗುತ್ತಿದೆ. ಇದನ್ನು ಮೊದಲು ಬದಲಿಸುವ ಕೆಲಸ ಮಾಡಬೇಕು ಎಂದು ಐಪಿಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ ಕರೆ ನೀಡಿದರು. ಕರುನಾಡ ವಿಜಯ ಸೇನೆಯು ಭಾನುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಲವು ಸಾಧಕ ಮಹಿಳೆಯರನ್ನು ಸನ್ಮಾನಿಸಿ ಅವರು ಮಾತನಾಡಿದರು. “ಪಠ್ಯ ಪುಸ್ತಕಗಳಲ್ಲಿ ಕೆಲವು ದಶಕಗಳಿಂದ ರಾಮನು/ಅವನು ಮನೆಗೆ ತರಕಾರಿ ತರುತ್ತಾನೆ. ಸೀತೆ/ಅವಳು ಅಡುಗೆ ಮನೆಯಲ್ಲಿ…

ಪುನೀತ್ ಸತ್ಕಾರ್ಯಗಳು ಎಲ್ಲರಿಗೂ ಆದರ್ಶವಾಗಲಿ; ರಘುಮೂರ್ತಿ

ಚಳ್ಳಕೆರೆ, ಮಾ,24:ಪರರಿ ಗೋಸ್ಕರ ಬದುಕುವ ವ್ಯಕ್ತಿಗಳು ಅವರು ಸತ್ತಮೇಲೂ ಕೂಡ ಬದುಕಿರುತ್ತಾರೆ ನಮಗೋಸ್ಕರ ಬದುಕುವ ವ್ಯಕ್ತಿಗಳನ್ನು ಸಮಾಜವು ಶಾಶ್ವತವಾಗಿ ಅವರುಗಳ ನೆನಪಿನಿಂದ ದೂರ ಮಾಡುತ್ತದೆ ಎಂದು ತಹಸಿಲ್ದಾರ್ ಎನ್ ರಘುಮೂರ್ತಿಮೂರ್ತಿ ಹೇಳಿದರು ಚಳ್ಳಕೆರೆ ಬೀಡ್ಸ್ ವತಿಯಿಂದ ಹಮ್ಮಿಕೊಂಡಿದ್ದ  ಪುನೀತ್ ರಾಜಕುಮಾರ್ ಅವರ ಗೀತ ಗಾಯನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ ಡಾಕ್ಟರ್ ಪುನೀತ್ ರಾಜಕುಮಾರ್ ಅವರ ಜೀವಿತಾವಧಿಯಲ್ಲಿ ಅವರು ಮಾಡಿರುವಂತಹ ಸತ್ಕಾರ್ಯಗಳು ಸಮಾಜಕ್ಕೆ ಏನಾದರೂ ತಿಳಿದಿದ್ದಲ್ಲಿ ಅವರಿಗೆ ಗುಡಿಕಟ್ಟಿಸಿ ಅವರನ್ನು ದೇವರ ರೀತಿಯಲ್ಲಿ ಆರಾಧಿಸುತ್ತಿದ್ದರು ಆದರೆ ದುರಾದೃಷ್ಟವಶಾತ್…

ಅಕ್ರಮ ಪಡಿತರ ಅಕ್ಕಿ ವಶ

ಚಳ್ಳಕೆರೆ ,ಮಾ,23:ತಾಲೂಕಿನ ನೆಹರೂ ರುತ್ತದ ಬಳಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 12 ಟನ್ ಪಡಿತರ ಅಕ್ಕಿಯನ್ನು ಚಳ್ಳಕೆರೆ ತಾಸಿಲ್ದಾರ್ ಮತ್ತು ಸಿಬ್ಬಂದಿ ವರ್ಗದವರು ವಶಪಡಿಸಿಕೊಂಡಿದ್ದಾರೆ ಬಳ್ಳಾರಿಯಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಲಾರಿ ಸಂಖ್ಯೆ ಕೆಎ 06 AA5508 ರಲ್ಲಿ 12 ಅಕ್ಕಿಯನ್ನು ಅನಧಿಕೃತವಾಗಿ ಸರಬರಾಜು ಮಾಡುತ್ತಾರೆಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಇಂದು ಮಧ್ಯಾನ ತಶಿಲ್ದಾರ್ ಆಹಾರ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಈ ಲಾರಿಯನ್ನು ತಪಾಸಣೆ ಮಾಡಿ ಡ್ರೈವರ್ ಅಜ್ಮನ್ ಸಮೇತ ದಸ್ತಗಿರ್ ಮಾಡಿ ಇವರುಗಳ ಮೇಲೆ…

ಬೆಳ್ಳಂಬೆಳಗ್ಗೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು, ಮಾ,೨೨: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಸಮರ ಸಾರಿರುವ ಎಸಿಬಿ, ಇಂದು ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಯಾಡಿದೆ. ನಗರದ ೯ ಭ್ರಷ್ಟ ಬಿಡಿಎ ಮಧ್ಯವರ್ತಿಗಳ ಕಚೇರಿ, ನಿವಾಸಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಇನ್ನೂ ಮಹತ್ವದ ದಾಖಲೆ ಹುಡುಕಾಟದಲ್ಲಿ ತೊಡಗಿದ್ದಾರೆ. ಎಸಿಬಿ ಅಧಿಕಾರಿಗಳು ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ೯ ಮಧ್ಯವರ್ತಿಗಳು,ಏಜೆಂಟರು, ಭ್ರಷ್ಟ,ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ…

ದೇಶದ ಮೊಟ್ಟಮೊದಲ ಡಿಜಿಟಲ್ ವಾಟರ್ ಬ್ಯಾಂಕ್ `ಅಕ್ವೇರಿಯಂ’ ಉದ್ಘಾಟನೆ

ಬೆಂಗಳೂರು,ಮಾ,14: ಜಲ ಸಂರಕ್ಷಣೆ, ನೈರ್ಮಲ್ಯ, ಜಲಭೂಗರ್ಭ ವಿಜ್ಞಾನ ಮತ್ತು ಡೇಟಾ ವಿಜ್ಞಾನಗಳಲ್ಲಿ 10 ಲಕ್ಷ ಯುವಜನರಿಗೆ ತರಬೇತಿ ನೀಡುವ ಗುರಿ ಹೊಂದಿರುವ ದೇಶದ ಮೊಟ್ಟಮೊದಲ ಡಿಜಿಟಲ್ ವಾಟರ್ ಬ್ಯಾಂಕ್ ಆದ `ಅಕ್ವೇರಿಯಂ’ ನವೋದ್ಯಮಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಚಾಲನೆ ನೀಡಿದರು. ಈ ಸಂಬಂಧ ನಗರದ ಖಾಸಗಿ ಹೋಟೆಲೊಂದರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `5 ಟ್ರಿಲಿಯನ್ ಡಾಲರ್ ಆರ್ಥಿಕಶಕ್ತಿಯ ಆತ್ಮನಿರ್ಭರ ಭಾರತವನ್ನು ಕಟ್ಟುವಲ್ಲಿ ಶುದ್ಧನೀರು ಮತ್ತು ಜಲಭದ್ರತೆ ಎರಡೂ ಪ್ರಮುಖ…

ಮಹಿಳಾ ಶಕ್ತಿಯು ಸಂಘಟನೆಯಾಗಿ ಬೆಳೆಯಬೇಕು : ಬಿ. ವೈ. ರಾಘವೇಂದ್ರ

ಶಿಕಾರಿಪುರ,ಮಾ,12 : ಭಾರತ ದೇಶದಲ್ಲಿ ಭೂಮಿಯನ್ನು, ನದಿಯನ್ನು ಹಾಗೂ ಗೋವನ್ನು ತಾಯಿಯಂತೆ ಗೌರವಿಸುವ ಪರಂಪರೆ ನಮ್ಮದು, ಕರ್ನಾಟಕ ಸರ್ಕಾರವು ಬಾಲ್ಯ ವಿವಾಹವನ್ನು ತಡೆಯುವ ಉದ್ದೇಶದಿಂದ ಮದುವೆಯ ವಯಸ್ಸನ್ನು 18 ರಿಂದ 21 ಕ್ಕೆ ಏರಿಸಿದ್ದಾರೆ, ಕೇಂದ್ರ ಸರ್ಕಾರವು ಬೇಟಿ ಬಚಾವ್, ಬೇಟಿ ಪಡಾವ್ ಯೋಜನೆಯನ್ನು ಜಾರಿಗೆ ತಂದಿದೆ, ಮಹಿಳಾ ಸುರಕ್ಷತೆಗೆ ಆದ್ಯತೆಯನ್ನು ನೀಡಿ ವಿವಿಧ ಯೋಜನೆಯನ್ನು ಚಾಲ್ತಿಗೆ ತಂದಿದೆ, ಸ್ಥಳೀಯ ಮಟ್ಟದಲ್ಲಿ ಇರುವ ಮಹಿಳಾ ಶಕ್ತಿಯು ಸಂಘಟನೆಯಾಗಿ ಬೆಳೆಯಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು…

ಮನೆ ಮನೆಗೆ ಕಂದಾಯ ದಾಖಲೆ ಉದ್ಟಾಟನೆ

ಚೆಳ್ಳಕೆರೆ, ಮಾ, 12:ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎನ್ನುವ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಕಾರ್ಯಕ್ರಮವನ್ನು ಚಳ್ಳಕೆರೆ ತಾಲ್ಲೂಕು ಮರುಕಟ್ಟೆ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು . ಆರಂಭದಲ್ಲಿ ಶಾಸಕರಾದ ತಾಶೀಲ್ದಾರ್ ಆದ ಎನ್ ರಘುಮೂರ್ತಿ ಇವರನ್ನು ಎತ್ತಿನ ಬಂಡಿ ಗಾಡಿಯಲ್ಲಿ ಸ್ವಾಗತಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಮತ್ತು ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರುಗಳು ವಿವಿಧ ವಾದ್ಯ ಮೇಳದೊಂದಿಗೆ ಗ್ರಾಮದ ಕೇರಿಗಳಲ್ಲಿ ಸಂಚರಿಸಿ ಜನಪದ ಶೈಲಿಯ ಅರಳಿಕಟ್ಟೆಯಲ್ಲಿ ಸಮಾರಂಭ ಆಯೋಜಿಸಿ ಉದ್ಘಾಟಿಸಲಾಯಿತು. ನಂತರ ಮಾತನಾಡಿದ ಶಾಸಕ ಟಿ ರಘುಮೂರ್ತಿ…

ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ

ಬೆಂಗಳೂರು, ಮಾ,12:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು ಡಾ. ಬಿ ಎನ್ ಗಂಗಾಧರ, ಪ್ರೊ. ಗೈತಿ ಹಾಸನ್ ಅವರಿಗೆ ಸರ್.ಎಂ.ವಿಶ್ವೇಶ್ವರಯ್ಯ, ಪ್ರೊ. ಲಲಿತ್ ಮೋಹನ್ ಪಟ್ನಾಯಕ್, ಪ್ರೊ. ಶೆಟ್ಟಿ ಹುಂತ್ರಿಕೆ ಶೇಖರ್ ಅವರಿಗೆ ಡಾ.ರಾಜಾರಾಮಣ್ಣ, ಪ್ರೊ. ಎಚ್. ನಾಗಭೂಷಣ, ಡಾ. ಜಿ. ವೆಂಕಟಸುಬ್ರ…

 ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಮೊದಲು ಕಡಿಮೆ ಮಾಡಿಕೊಳ್ಳಬೇಕು: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು ಮಾ, 9: ಮೊದಲು ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್‌ ಆಸ್ಪತ್ರೆಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊರತಂದಿರುವ ಕೇವಲ 390 ರೂಪಾಯಿಗಳಲ್ಲಿ ಮಹಿಳಾ ಸಮಗ್ರ ಆರೋಗ್ಯ ಪರೀಕ್ಷೆಯನ್ನು ಮಾಡುವಂತಹ ವಿಶೇಷ ಪ್ಯಾಕೇಜ್‌ಗೆ ಚಾಲನೆ ನೀಡಿ ಮಾತನಾಡಿದರು. ಸೊಸೆ ಅಥವಾ ಮಗಳು ಹೆರಿಗೆ ಆದಾಗ ಮೊದಲು ಕೇಳುವ ಪ್ರಶ್ನೆ ಗಂಡೋ,…

ಕಂದಾಯ ದಾಖಲೆಗಳು ಇನ್ನೂ ಮನೆಬಾಗಿಲಿಗೆ

ಚಳ್ಳಕೆರೆ,ಮಾ,10: ಕ್ಷೇತ್ರ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಗ್ರಾಮೀಣ ಪ್ರದೇಶದ ಹಳ್ಳಿಯ ಜನ ಕಂದಾಯ ಇಲಾಖೆ ಹಲವು ದಾಖಲೆಗಳಾದ ಪಹಣಿ ,ಅಟ್ಲಾಸ್, ಆದಾಯ ಜಾತಿ ಪ್ರಮಾಣ ಪತ್ರ ಮತ್ತು ಇತರೆ ಕಂದಾಯ ದಾಖಲೆಗಳಿಗೆ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸುವ ಸಲುವಾಗಿ ಸರ್ಕಾರ ನೂತನ ಕಾರ್ಯಕ್ರಮವನ್ನ ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎಂಬ ವಿನೋತನ ಕಾರ್ಯಕ್ರಮವನ್ನು ರಾಜ್ಯ ವ್ಯಾಪ್ತಿ ಜಾರಿಗೆ ತಂದಿದೆ .ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಸಚಿವರು ಹಾಗೂ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಆದೇಶದಂತೆ ಅಧಿಕಾರಿಗಳೇ…

ಚಿತ್ರ ಡಾನ್ ಬೋಸ್ಕೋದಲ್ಲಿ ಮಹಿಳಾ ದಿನಾಚರಣೆ

ಚಿತ್ರದುರ್ಗ,ಮಾ,10:ಇಲ್ಲಿನ  ಚಿತ್ರ ಡಾನ್ ಬೋಸ್ಕೋ ಸಂಸ್ಥೆಯ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಮತಿ ಸುಧಾ ಅವರು ಮಹಿಳೆಯರು ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು ಆಗ ಮಾತ್ರ ಸುಸ್ಥಿರ ಸಮಾಜ ಕಟ್ಟಬಹುದೆಂದು ಹೇಳಿದರು. ಅಭಿವೃದ್ಧಿಯ ಕಾಲಘಟ್ಟದಲ್ಲಿ ಮಹಿಳೆಯರು ಶಿಕ್ಷಣ ಮತ್ತು ಸಾಮಾಜಿಕವಾಗಿ ಚಲನಶೀಲರಾಗಬೇಕು ಆಗ ಮಾತ್ರ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕರಾದ ಫಾದರ್…

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿದ ಫೊರ್ಟಿಸ್ ಆಸ್ಪತ್ರೆ

ಬೆಂಗಳೂರು,ಮಾ,09: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಫೋರ್ಟಿಸ್ ಆಸ್ಪತ್ರೆ ಹಾಗೂ ವಿದ್ಯಾ ಫೌಂಡೇಷನ್ ಸಹಭಾಗಿತ್ವದಲ್ಲಿ 200ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಫೊರ್ಟಿಸ್ ಆಸ್ಪತ್ರೆ ಸ್ತೀರೋಗ ತಜ್ಞೆ ಡಾ. ಗಾಯತ್ರಿ ಕಾಮತ್, ಬಡ ಕುಟುಂಬದ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವುದು ಅಪರೂಪ. ಆರ್ಥಿಕ ಪರಿಸ್ಥಿತಿಯ ಕಾರಣ ಅವರು…

ಮಾರ್ಚ್ 7ರಿಂದ ಮೂರು ದಿನ `ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ

ಬೆಂಗಳೂರು,ಮಾ,02: `ಸುಸ್ಥಿರ ಅಭಿವೃದ್ಧಿಗಾಗಿ ನ್ಯಾನೋ ತಂತ್ರಜ್ಞಾನ’ ಎನ್ನುವ ಧ್ಯೇಯದೊಂದಿಗೆ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶವು ಪ್ರಥಮ ಬಾರಿಗೆ ವರ್ಚುಯಲ್ ಮಾದರಿಯಲ್ಲಿ ಮಾರ್ಚ್ 7ರಿಂದ 9ರವರೆಗೆ ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ಕ್ಕೆ…

ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್ ತರಗತಿಯಿಂದ ಶೇ.67ರಷ್ಟು ಬಾಲಕಿಯರು ವಂಚಿತರಾಗಿದ್ದಾರೆ: ಸೇವ್ ದಿ ಚಿಲ್ಡ್ರನ್ ಸಂಸ್ಥೆ ವರದಿ

ಬೆಂಗಳೂರು,ಮಾ,02: ಕೋವಿಡ್ ಸಂದರ್ಭದಲ್ಲಿ ಕೊಳಗೇರಿ ಪ್ರದೇಶದ ಹೆಣ್ಣು ಮಕ್ಕಳ ಕುರಿತು ಸೇವ್ ದಿ ಚಿಲ್ಡ್ರನ್ ಅಧ್ಯಯನ ನಡೆಸಿದ್ದು, ಆತಂಕಕಾರಿ ವಿಷಯಗಳನ್ನು ವರದಿಯಲ್ಲಿ ಬಹಿರಂಗ ಪಡಿಸಿದೆ. ಹೌದು, ಬುಧವಾರ ವರ್ಚುವಲ್ ಮೂಲಕ “ ದಿ ವರ್ಲ್ಡ್ ಆಫ್ ಇಂಡಿಯನ್ ಗರ್ಲ್ಸ್-ವಿಂಗ್ಸ್ 2022” ಶೀರ್ಷಿಕೆಯಲ್ಲಿ ಸೇವ್ ದಿ ಚಿಲ್ಡ್ರನ್ ಸಂಸ್ಥೆಯು ವರದಿ ಬಿಡುಗಡೆ ಮಾಡಿದೆ. ಕೋವಿಡ್ ಸಾಂಕ್ರಮಿಕದ ಕಾರಣ ಬಾಲಕರಿಗಿಂತ ಬಾಲಕರಿಯರೇ ಹೆಚ್ಚಾಗಿ ಶಾಲೆ ತೊರೆದಿದ್ದಾರೆ. ಕೊಳಚೆ ಪ್ರದೇಶ ಹಾಗೂ ಗ್ರಾಮೀಣ ಭಾಗದಲ್ಲಿ ಶೇ.67ರಷ್ಟು ಬಾಲಕಿಯರು ಆನ್‌ಲೈನ್ ತರಗತಿಯನ್ನು…

ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ವಂಡರ್‌ಲಾದಲ್ಲಿ ಮಹಿಳೆಯರಿಗೆ ಮಾತ್ರ ಪ್ರವೇಶ

ಬೆಂಗಳೂರು, ಮಾ,02:ಅಂತರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ವಂಡರ್‌ಲಾದಲ್ಲಿ ಮಾರ್ಚ್‌ 8 ರಂದು ಕೇವಲ ಮಹಿಳೆಯರಿಗೆ ಮಾತ್ರ ಪ್ರವೇಶವಿದ್ದು, ಒಂದು ಟಿಕೆಟ್ ಖರೀದಿಸಿದರೆ ಮತ್ತೊಬ್ಬರಿಗೆ ಉಚಿತ ಪ್ರವೇಶ ಘೋಷಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ವಂಡರ್‌ಲಾ ಆ ದಿನದಂದು ಕೇವಲ ಮಹಿಳೆಯರು ಹಾಗೂ ಯುವತಿಯರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. 10 ವರ್ಷ ಒಳಗಿನ ಗಂಡು ಮಕ್ಕಳಿಗೆ ಪ್ರವೇಶವಿದ್ದು, ಉಳಿದಂತೆ ಯಾವ ಪುರುಷರಿಗೂ ಆ ದಿನ ಪ್ರವೇಶವಿರುವುದಿಲ್ಲ. ಇದಷ್ಟೆ ಅಲ್ಲದೆ, ವಂಡರ್‌ಲಾ ರೆಸಾರ್ಟ್‌HBನಲ್ಲಿಯೂ ಸಹ ಮಹಿಳೆಯರಿಗೆ…

1 2 3 4 5 6 15
error: Content is protected !!