Browsing: ಜಿಲ್ಲೆ

ಜಿಲ್ಲೆ

ಅ.ನಾ.ಪ್ರಹ್ಲಾದರಾವ್ ರಚನೆಯ ‘ಹೆಜ್ಜೆಗುರುತು’ ಕೃತಿ  ಲೋಕಾರ್ಪಣೆ

ಬೆಂಗಳೂರು,  ಡಿ, 30: ಲೇಖಕ ಅ.ನಾ.ಪ್ರಹಾದರಾವ್ ಕನ್ನಡ ಚಲನಚಿತ್ರ ಚರಿತ್ರೆ ಕುರಿತು ದಾಖಲಿಸಿರುವ ‘ಹೆಜ್ಜೆಗುರುತು’ ಕೃತಿಯನ್ನು ಪ್ರಸಿದ್ಧ ಕವಿ, ಸಾಹಿತಿ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ಅವರು ತಮ್ಮ ನಿವಾದಲ್ಲಿ ಇಂದು (2021, ಡಿಸೆಂಬರ್ 30) ಬಿಡುಗಡೆ ಮಾಡಿದರು. ಹಂಸಜ್ಯೋತಿ ಸಾಂಸ್ಕೃತಿಕ ಸಂಸ್ಥೆಯ ಮು.ಮುರಳೀಧರ ಹಾಗೂ ಶ್ರೀಮತಿ ಮಲ್ಲಿಕಾ ಪ್ರಹ್ಲಾದ್ ಈ ಸಂದರ್ಭದಲ್ಲಿ ಹಾಜರಿದ್ದರು. ಚಿತ್ರರಂಗ ಮೂಕಿ ಕಾಲದಿಂದ ಆರಂಭಗೊಂಡು ಬೆಳವಣಿಗೆಯ ವಿವಿಧ ಮಜಲುಗಳಿಗೆ ಸಂಬಂಧಿಸಿದ ಚಲನಚಿತ್ರಗಳು, ವ್ಯಕ್ತಿಗಳು ಹಾಗೂ ಘಟನಾವಳಿಗಳನ್ನು ಹೆಣೆಯುತ್ತಾ ಕನ್ನಡ ಚಿತ್ರರಂಗದ ಔನತ್ಯವನ್ನು ದಾಖಲಿಸುವ ಪ್ರಯತ್ನವನ್ನು ಈ…

ಚಿತ್ರಕಲಾ ಪರಿಷತ್ ನಲ್ಲಿ ‘ಬೆಂಗಳೂರು ಆರ್ಟ ಅಂಡ್ ಕ್ರಾಪ್ಟ್ ಮೇಳ

ಬೆಂಗಳೂರು, ಡಿ, 24: ದೇಶದ ವಿವಿಧ ಭಾಗಗಳಿಂದ ಆಗಮಿಸುವ ಕರಕುಶಲ ಕರ್ಮಿಗಳಿಗೆ ಸೂಕ್ತವಾದ ಮಾರುಕಟ್ಟೆಯನ್ನು ಒದಗಿಸುವ ನಿಟ್ಟಿನಲ್ಲಿ  ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಫ್ಟ್‌ ಮೇಳ’ವನ್ನು ಆಯೋಜಿಸಲಾಗಿದ್ದು, ನಟಿ ರಕ್ಷಿಕಾ ಶೆಟ್ಟಿ ಶುಕ್ರವಾರ ಚಾಲನೆ ನೀಡಿದರು. ಜನವರಿ 2, 2022 ರ ವರೆಗೆ ಮೇಳ ನಡೆಯಲಿದೆ. ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ…

ಬಸವಣ್ಣ ಭಾವಚಿತ್ರಕ್ಕೆ ಮಸಿ ಬಳಿದ ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು,ಡಿ,21;ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಬೆಳಗಾವಿ ಜಿಲ್ಲೆಯ ಆಲಿಸಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳೆದ ಎಂಇಎಸ್ ಕಾರ್ಯಕರ್ತರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ  ಪ್ರತಿಭಟನೆ ನಡೆಸಿತು. ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಎಂ ಇಎಸ್ ಪುಂಡರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಲಾಯಿತು. ಬೆಂಗಳೂರು ಜಿಲ್ಲೆ ಮತ್ತು ಬೆಂಗಳೂರು ಸಿಟಿ ಮತ್ತು ವೀರಶೈವ ಮಹಾಸಭಾ ಯುವ ಘಟಕ ಕರ್ನಾಟಕ ರಾಜ್ಯ ಯುವ ಘಟಕ…

ಜಾತಿ ನಿಂದನೆಗೆ ಕಡಿವಾಣ ಹಾಕಲು ಸರಕಾರ ಕಟ್ಟುನಿಟ್ಟಿನ ಕಾನೂನು ರೂಪಿಸಲು ಸವಿತಾ ಸಮಾಜ ಆಗ್ರಹ

ಬೆಂಗಳೂರು, ಡಿ,21: ಸವಿತಾ ಸಮಾಜದ ಮೇಲೆ ನಡೆಯುತ್ತಿರುವ ಜಾತಿ ನಿಂದನೆ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಜಾತಿ ನಿಂದನೆ ತಡೆಯುವಂತೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸವಿತಾ ಸಮಾಜದ ಸರ್ವ ಸದಸ್ಯರ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಯಿತು. ಜತೆಗೆ ಸವಿತಾ ಸಮಾಜದ ಸಮುದಾಯಕ್ಕೆ ರಾಜಕೀಯ ಮತ್ತು ಶೈಕ್ಷಣಿಕವಾಗಿ ಅಗತ್ಯ ಮೀಸಲಾತಿಗಳನ್ನು ಕೊಟ್ಟು ಸಮುದಾಯದ ಅಭಿವೃದ್ಧಿಗೆ ಸರಕಾರ ಮುಂದಾಗಬೇಕು ಎಂಬ ಒತ್ತಾಯವೂ ಕೇಳಿ ಬಂತು. ಕರ್ನಾಟಕ ರಾಜ್ಯ ಸವಿತಾ ಸಮಾಜ ಸಂಘವು…

ವರ್ಷದಲ್ಲಿ ಗಂಗೂಬಾಯಿ ಸಂಗೀತ ವಿವಿ ಪುನಶ್ಚೇತನ: ಅಶ್ವತ್ಥನಾರಾಯಣ

ಬೆಂಗಳೂರು,ಡಿ,12: ಮೈಸೂರಿನಲ್ಲಿರುವ ಗಂಗೂಬಾಯಿ ಸಂಗೀತ ವಿಶ್ವವಿದ್ಯಾಲಯವನ್ನು ಮುಂದಿನ ಒಂದು ವರ್ಷದಲ್ಲಿ ಜಾಗತಿಕ ಗುಣಮಟ್ಟದೊಂದಿಗೆ ಪುನಶ್ಚೇತನಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದ ಗಾಯನ ಸಮಾಜದಲ್ಲಿ ನಡೆಯುತ್ತಿದ್ದ 51ನೇ ಸಂಗೀತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಮಾತನಾಡಿದ ಅವರು, ವ್ಯಕ್ತಿಗಳು ನೆಮ್ಮದಿಯಿಂದ ಬದುಕಬೇಕಾದರೆ ಸಂಸ್ಕೃತಿ ಮತ್ತು ಸಂಸ್ಕಾರಗಳು ಬಹಳ ಮುಖ್ಯ ಎಂದರು. ಶಿಕ್ಷಣದಲ್ಲಿ ಭಾರತೀಯತೆ ಮತ್ತು ಸಂಸ್ಕೃತಿಯ ಇತರ ಅಂಶಗಳೆಲ್ಲವೂ ಇರಬೇಕೆನ್ನುವುದು ಸದಾಶಯವಾಗಿದೆ. ಏಕೆಂದರೆ, ಕೇವಲ ಶಾಲಾಕಾಲೇಜುಗಳ ಓದಷ್ಟೇ ಮುಖ್ಯವಲ್ಲ. ಇದನ್ನು ಮನಗಂಡೇ ಪ್ರಧಾನಿ…

ಬಿಡಿಎ ಸೇವೆಗಳೂ ಶೀಘ್ರವೇ `ಜನಸೇವಕ’ ವ್ಯಾಪ್ತಿಗೆ: ಡಾ.ಅಶ್ವತ್ಥನಾರಾಯಣ

ಬೆಂಗಳೂರು,ಡಿ,11: ಆಧಾರ್ ಕಾರ್ಡಿನಿಂದ ಹಿಡಿದು ಭೂ ಹಿಡುವಳಿ ಪ್ರಮಾಣ ಪತ್ರದವರೆಗೆ 79 ಅಗತ್ಯ ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ `ಜನಸೇವಕ’ ಯೋಜನೆ ವ್ಯಾಪ್ತಿಗೆ ಸದ್ಯದಲ್ಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸೇವೆಗಳನ್ನೂ ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ತಾವು ಪ್ರತಿನಿಧಿಸುತ್ತಿರುವ ಮಲ್ಲೇಶ್ವರಂ ಕ್ಷೇತ್ರದಲ್ಲಿ ಇತ್ತೀಚೆಗೆ ಚಾಲನೆ ಕಂಡಿದ್ದ `ಜನಸೇವಕ’ ಕಾರ್ಯಕ್ರಮ ಕುರಿತಾದ ವಾರ್ಡ್ ವಾರು ಪ್ರತ್ಯೇಕ ಕಿರುಹೊತ್ತಿಗೆ ಬಿಡುಗಡೆ ಹಾಗೂ ಜನರಿಗೆ ಸಾಂಕೇತಿಕವಾಗಿ ಸೇವೆಗಳನ್ನು ಒದಗಿಸುವ ಕಾರ್ಯಕ್ರಮದ ನಂತರ ಅವರು ಮಾತನಾಡಿದರು.…

ಕಂಪನಿಗಳಿಗೆ ಸಾಮಾಜಿಕ ಒಳಗೊಳ್ಳುವಿಕೆ ದೃಷ್ಟಿಕೋನ ಮುಖ್ಯ: ಅಶ್ವತ್ಥನಾರಾಯಣ

ಬೆಂಗಳೂರು,ಡಿ,10:  ಕೇವಲ ವಾಣಿಜ್ಯ ಲಾಭದ ದೃಷ್ಟಿಯಿಂದ ಕಂಪನಿಗಳನ್ನು ನಡೆಸುವುದರ ಬದಲು ಸಮಾಜದ ಪ್ರತಿಯೊಬ್ಬರನ್ನೂ ಒಳಗೊಳ್ಳುವಂತಹ ದೃಷ್ಟಿಕೋನವು ಉದ್ಯಮಗಳಲ್ಲಿ ಬೇರೂರಬೇಕಾಗಿದೆ. ಇದರಿಂದ ಮಾತ್ರ ಸಮಾಜವು ಪ್ರಗತಿ ಸಾಧಿಸಬಲ್ಲದು ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತಿಪಾದಿಸಿದ್ದಾರೆ. ನಗರದ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ನಡೆದ 12ನೇ ಸಿಎಸ್ಆರ್ ನಾಯಕತ್ವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿರುವ ಯೂನಿಕಾರ್ನ್ ಕಂಪನಿಗಳಲ್ಲಿ ಶೇ.60ರಷ್ಟು ರಾಜ್ಯದಲ್ಲೇ ಇದ್ದು, ಇವು ಈಗ ಸಾಮಾಜಿಕ ವಲಯಗಳತ್ತಲೂ ಗಮನ ಹರಿಸುತ್ತಿರುವುದು ಸ್ವಾಗತಾರ್ಹ…

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಕುರಿತು ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ : ಸಿಎಂ

ನವದೆಹಲಿ, ಡಿ,೨ :ಇದೇ ೬ ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ , ಆರೋಗ್ಯ , ಕಾನೂನು ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ೨ ನೇ ನ್ಯಾಯಾಧಿಕರಣದ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ…

ಕನ್ನಡ ಕಲಿತು ಕನ್ನಡಿಗರಾಗಿ:ಡಾ. ಆರೂಢಭಾರತೀ ಶ್ರೀ

ಬೆಂಗಳೂರು,ನ,29:ಕನ್ನಡಿಗರ ಕಲೆ ಸಂಸ್ಕೃತಿ ಇತಿಹಾಸ ಅಡಗಿರುವುದು ಕನ್ನಡ ಸಾಹಿತ್ಯದಲ್ಲಿ. ಕನ್ನಡ ಭಾಷೆಯನ್ನು ಸರಿಯಾಗಿ ಕಲಿಯದಿದ್ದರೆ ಕನ್ನಡ ಸಾಹಿತ್ಯವನ್ನು ತಿಳಿಯಲಾಗದು. ಕನ್ನಡ ನಾಡಿನಲ್ಲಿ ಹುಟ್ಟಿದವರು ಮಾತ್ರವಲ್ಲ, ಕನ್ನಡ ನೆಲಕ್ಕೆ ಬಂದ ವಲಸಿಗರೆಲ್ಲರೂ ಕನ್ನಡ ಭಾಷೆಯನ್ನು ಕಲಿತು ಕನ್ನಡಿಗರೆನಿಸಬೇಕು ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಶ್ರೀ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಕೆಂಗೇರಿಯ ಗಾಂಧಿ ನಗರದಲ್ಲಿ ರಾಮಸೇನೆ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‌ಕುಮಾರ್ ಮತ್ತು ರಾಮಸೇನಾ ಕಾರ್ಯಕರ್ತ ದಿ. ಜಗದೀಶ್…

ಬಂಡವಾಳ ಆಕರ್ಷಿಸಲು ಬೆಂಗಳೂರಿನಲ್ಲಿ ಮೊರಾಕ್ಕೊ ರೋಡ್-ಶೋ

ಬೆಂಗಳೂರು,ನ,25: ಕರ್ನಾಟಕ ಮತ್ತು ಮೊರಾಕ್ಕೊ ನಡುವೆ ಎರಡೂ ಕಡೆಗಳಿಂದ ನೇರ ವಿಮಾನ ಸಂಪರ್ಕವನ್ನು ಆರಂಭಿಸಿದರೆ ದ್ವಿಪಕ್ಷೀಯ ವಾಣಿಜ್ಯ ವಹಿವಾಟು ವೃದ್ಧಿಯಾಗುವ ಸದವಕಾಶವಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಮೊರಾಕ್ಕೊದ ಹೂಡಿಕೆ ಮತ್ತು ರಫ್ತು ಅಭಿವೃದ್ಧಿ ಸಂಸ್ಥೆಯು ಬಂಡವಾಳ ಆಕರ್ಷಿಸಲು `ಮೊರಾಕ್ಕೊ ನೌ’ ಉಪಕ್ರಮದಡಿ ನಗರದ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೋಡ್ ಶೋ ಸಭೆಯಲ್ಲಿ ಸಚಿವರು ಮಾತನಾಡಿದರು. `ಬೆಂಗಳೂರು ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ಮಟ್ಟದ ನಗರವಾಗಿದ್ದು, ಅತ್ಯುತ್ತಮ…

ಉನ್ನತ ಶಿಕ್ಷಣಕ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ

ಬೆಂಗಳೂರು,ನ,25: ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಕುರಿತು ಉಚಿತವಾಗಿ ಮಾರ್ಗದರ್ಶನ ಹಾಗೂ ಉನ್ನತ ಮಟ್ಟದ ಕಾಲೇಜುಗಳಿಗೆ ದಾಖಲಾತಿಗೆ ಕೌನ್ಸಲಿಂಗ್ ನೀಡಲು ಅಮೆರಿಕಾ ಮೂಲದ ನೆಸ್ಟ್‌ಲಿಂಗ್ ಸಂಸ್ಥೆ ತನ್ನ ಮೊದಲ ಕೌನ್ಸಿಲಿಂಗ್ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಿದೆ.ಇದಲ್ಲದೆ ಈ ಕೇಂದ್ರಲ್ಲಿ ಕೌನ್ಸಲಿಂಗ್ ಪಡೆದು ವಿದೇಶಕ್ಕೆಉನ್ನತ ಶಿಕ್ಷಣಕ್ಕೆ ಕೌನ್ಸಲಿಂಗ್ ಪಡೆಯುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ* ಓದಲು ತೆರಳುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ಸ್ಕಾಲರ್‌ಶಿಪ್‌ ನೀಡುವುದಾಗಿಯೂ ಘೋಷಿಸಿದೆ. ಉನ್ನತ ಶಿಕ್ಷಣ ಸಚಿವ…

ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ

ಬೆಂಗಳೂರು, ನ, 25: ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಲಾಖೆಗಳ ಮುಖ್ಯಸ್ಥರ ಗಮನಕ್ಕೆ ತಂದು, ವಿಚಾರಣೆ ನಡೆಸಿ,ಯಾವುದೇ ತಪ್ಪು ಕಂಡುಬಂದಲ್ಲಿ , ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ನನ್ನ ಸರ್ಕಾರ ಬಂದ ಮೇಲೆ ಯಾವುದೇ ಟೆಂಡರ್ ಅಂತಿಮವಾಗಿದ್ದರೆ ಅದನ್ನು ವಿಶೇಷವಾಗಿ ಪರಿಶೀಲನೆ…

ಸಾಹಿತಿ ದೇವು ಪತ್ತಾರ್ ಗೆ ವಿ.ಕೃ. ಗೋಕಾಕ್ ಫೇಲೋಶಿಫ್ ಪ್ರಶಸ್ತಿ

ಬೆಂಗಳೂರು,ನ,15:ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಕೊಡಮಾಡುವ ವಿ. ಕೃ. ಗೋಕಾಕ್ ಫೇಲೋಶಿಫ್ ಗೆ 2021ನೆಯ ಸಾಲಿನಲ್ಲಿ ’ಬುಕ್ ಬ್ರಹ್ಮ’ ಪ್ರಧಾನ ಸಂಪಾದಕ, ಸಾಹಿತಿ ದೇವು ಪತ್ತಾರ ಹಾಗೂ ಪತ್ರಕರ್ತೆ, ಲೇಖಕಿ ವಿದ್ಯಾರಶ್ಮಿ ಆಯ್ಕೆಯಾಗಿದ್ದಾರೆ. ‘ಗೋಕಾಕರ ಮುನ್ನುಡಿಗಳ ಅಧ್ಯಯನಕ್ಕಾಗಿ ದೇವು ಪತ್ತಾರ ಮತ್ತು ‘ಗೋಕಾಕರನ್ನು ಕುರಿತ ಕವಿತೆಗಳ ಅಧ್ಯಯನಕ್ಕಾಗಿ ವಿದ್ಯಾರಶ್ಮಿ ಪೆಲತ್ತಡ್ಕ ಅವರಿಗೆ ಗೋಕಾಕ್ ವಾಙ್ಮಯ ಟ್ರಸ್ಟ್ ನೀಡುವ ಪ್ರತಿಷ್ಠಿತ ವಿ. ಕೃ. ಗೋಕಾಕ್ ಫೆಲೋಶಿಫ್‌ನ್ನು ನೀಡಲಾಗಿದೆ. ಪ್ರಶಸ್ತಿಯು 10,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಟ್ರಸ್ಟ್‌ನ…

ಅಲ್ಲಮ ಕಾವ್ಯ ಪ್ರಶಸ್ತಿ’ಗೆ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ.

ಬೆಂಗಳೂರು,ನ,೦೯: ಅಲ್ಲಮ ಪ್ರಕಾಶನದಿಂದ ಅಲ್ಲಮ ಕಾವ್ಯ ಪ್ರಶಸ್ತಿಗಾಗಿ ನಲವತ್ತೈದು ವರ್ಷದೊಳಗಿನ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ನಿಮಗಳ ಅನುಸಾರ ಕವಿತೆಗಳನ್ನು ಕಳುಹಿಸಬಹುದು. ಹಸ್ತಪ್ರತಿ ಕಳಿಸಲು ನಿಯಮಗಳು ಈ ಕೆಳಗಿನಂತಿವೆ. ೧. ಮೂವತ್ತಕ್ಕಿಂತಲೂ ಹೆಚ್ಚಿನ ಸ್ವರಚಿತ ಕನ್ನಡ ಕವಿತೆಗಳನ್ನು ಹಸ್ತಪ್ರತಿಯು ಒಳಗೊಂಡಿರಬೇಕು. ೨. ಅನುವಾದಿತ, ಹನಿಗವನ ಮತ್ತು ಚುಟುಕು ಕವಿತೆಗಳ ಹಸ್ತಪ್ರತಿಗಳು ಬೇಡ. ೩. ಪ್ರವೇಶವನ್ನು ಕಳಿಸುವ ಯುವಕವಿಗಳು ನಲವತ್ತೈದು ವರ್ಷದೊಳಗಿನವರಾಗಿರಬೇಕು. ೪ ಈ ಪ್ರಶಸ್ತಿಯು ೫,೦೦೦ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ೫.…

ಬೆಂಗಳೂರಿನಲ್ಲಿ ಆಟೋದರ ಏರಿಕೆ

ಬೆಂಗಳೂರು,ನ,08: ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳವಾಗಿದ್ದು, ಕನಿಷ್ಠ ದರ 25 ರೂಪಾಯಿಂದ 30 ರೂ.ಗೆ ಏರಿಕೆಯಾಗಿದೆ. ನಂತರ ಪ್ರತಿ ಕಿಲೋಮೀಟರ್​ಗೆ 15 ರೂ.ಗೆ ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಕಿಲೋಮೀಟರ್​ಗೆ 13 ರುಪಾಯಿ ಇತ್ತು. ಇದನ್ನು 15 ರುಪಾಯಿಗೆ ಏರಿಕೆ ಮಾಡಲಾಗಿದೆ. ಡಿಸೆಂಬರ್ 1 ರಿಂದಲೇ ಹೊಸ ದರ ಅನ್ವಯವಾಗುತ್ತದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ತಿಳಿಸಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ 5 ರೂಪಾಯಿ ಬಾಡಿಗೆ ಹಣ ನಿಗದಿಪಡಿಸಲಾಗಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ…

ಕರ್ನಾಟಕದಲ್ಲಿ ಪ್ರತಿಯೊಬ್ಬರು ಕನ್ನಡಲ್ಲೇ ವ್ಯವಹರಿಸಬೇಕು-ಬಿ.ಸಿ.ನಾಗೇಶ್

ಬೆಂಗಳೂರು, ನ. ೦೧: ಪ್ರತಿಯೊಬ್ಬರು ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲಿಯೇ ಮಾತನಾಡಬೇಕು. ಕನ್ನಡದಲ್ಲಿಯೇ ಬರೆಯಬೇಕು. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುವುದು ಹಾಗೂ ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವ ಮೂಲಕ ನಮ್ಮ ನಾಡು-ನುಡಿ, ಸಂಸ್ಕತಿ ಉಳಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಭಿಪ್ರಾಯಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೬೬ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ…

ಭಾಷೆ ಸದೃವಾದರೆ ರಾಜ್ಯ ಶಕ್ತಿಶಾಲಿ-ಸಿಎಂ ಬೊಮ್ಮಾಯಿ

ಬೆಂಗಳೂರು,ನ೦೧: ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ ಮತ್ತು ಕನ್ನಡ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿರುವ ಅವರು, ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ…

ಪೇಜಾವರರ ಹೇಳಿಕೆ ಹಾಸ್ಯಾಸ್ಪದ :ಡಾ. ಆರೂಢಭಾರತೀ ಸ್ವಾಮೀಜಿ.

ಬೆಂಗಳೂರು,ಅ,26:ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಸರ್ಕಾರವು ಬ್ರಾಹ್ಮಣೇತರರನ್ನು ಅರ್ಚಕರನ್ನಾಗಿ ನೇಮಿಸುತ್ತಿದ್ದು, ಅರ್ಚಕವೃತ್ತಿಯನ್ನು ಬ್ರಾಹ್ಮಣರಿಂದ ಕಿತ್ತುಕೊಳ್ಳುವ ಪ್ರಯತ್ನವಾಗಿದ್ದು, ಸರ್ಕಾರವು ಅರ್ಚಕ ಉದ್ಯೋಗವನ್ನು ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಮೀಸಲಿಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಭಾನುವಾರ ಮೈಸೂರಿನ ವಿಪ್ರ ಸಮ್ಮೇಳನದಲ್ಲಿ ಹೇಳಿರುವುದಾಗಿ ವರದಿಯಾಗಿದ್ದು ಅವರ ಈ ಹೇಳಿಕೆ ಹಾಸ್ಯಾಸ್ಪದ ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಖಂಡಿಸಿದ್ದಾರೆ. ಇದು ಶ್ರೇಣೀಕೃತ ವರ್ಣ ವ್ಯವಸ್ಥೆಯನ್ನು ವಿಸ್ತರಿಸುವ, ಪುರೋಹಿತಶಾಹಿತನವನ್ನು ಪುನಃ ಪ್ರತಿಷ್ಠಾಪಿಸುವ ಹುನ್ನಾರ. ಈ ಮೂಲಕ ವೇದಾಧ್ಯಯನವನ್ನು…

ಚಿತ್ರಕಲಾ ಪರಿಷತ್ತಿನಲ್ಲಿ ದೀಪಾವಳಿ ದೀಪಗಳ ಉತ್ಸವ – ಬೆಂಗಳೂರು ಉತ್ಸವಕ್ಕೆ ಚಾಲನೆ

ಬೆಂಗಳೂರು ಅ, 22: ದೇಶದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಆಚರಿಸಲ್ಪಡುವ ದೀಪಾವಳಿ ಹಬ್ಬಕ್ಕೆ ಭಾರತೀಯರ ಜೀವನದಲ್ಲಿ ಬಹಳ ಮಹತ್ವವಾದ ಸ್ಥಾನವಿದೆ. ಅದರಲ್ಲೂ ಅಂಧಕಾರವನ್ನು ಹೋಗಲಾಡಿಸುವ ದೀಪಗಳಿಗೆ ಅವುಗಳದೇ ಆದ ವೈಶಿಷ್ಟ್ಯತೆ ಇದೆ. ದೇಶದ ವಿವಿಧ ಭಾಗಗಳಲ್ಲಿ ತಯಾರಿಸಲಾಗುವ ದೀಪಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ದೊರಕುವಂತೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ದೀಪಗಳ ಉತ್ಸವ – ಬೆಂಗಳೂರು ಉತ್ಸವಕ್ಕೆ ನಟಿಯರಾದ ದೀನಶ್ರೀ ಹಾಗೂ ಪೂರ್ಣಿಮಾ ಪ್ರಭಾಕರ್‌ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ…

ಆಲಮಟ್ಟಿ ಡ್ಯಾಂ ಅಂತರಜಲಾಶಯದ ನೀರು ಮರುಹಂಚಿಕೆಗೆ ಒತ್ತಾಯ

ಆಲಮಟ್ಟಿ,ಅ,18: ಕೃಷ್ಣಾಮೇಲ್ದಂಡೆ ಯೋಜನೆ ವ್ಯಾಪ್ತಿಯ ಆಲಮಟ್ಟಿ ಜಲಾಶಯವನ್ನು ಎತ್ತರಿಸುವದು, ಅಂತರಜಲಾಶಯದ ನೀರನ್ನು ಮರುಹಂಚಿಕೆ ಹಾಗೂ ಜನ-ಜಾನುವಾರುಗಳಿಗಾಗಿ ಕಾಲುವೆಗಳ ಮೂಲಕ ನೀರು ಹರಿಸಲು ಒತ್ತಾಯಿಸಿ ಅಖಂಡ ಕರ್ನಾಟಕ ರೈತಸಂಘದವತಿಯಿಂದ ಮುಖ್ಯ ಅಭಿಯಂತರರಿಗೆ ಎರಡು ಪ್ರತ್ಯೇಕ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನಕಾರ್ಯದರ್ಶಿ ಅರವಿಂದ ಕುಲಕರ್ಣಿ, ಬರಗಾಲ ಪೀಡಿತ ಜಿಲ್ಲೆಯ ನೀರಾವರಿಗಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಜಲಾಶಯ ನಿರ್ಮಿಸಿದ್ದರೂ ಜಿಲ್ಲೆಯ ಭೂಮಿಗೆ ನೀರುಣಿಸಲು ಸ್ಕೀಂ.ಗಳ ಹೆಸರಿನಲ್ಲಿ ವಂಚನೆ ಮಾಡಲಾಗುತ್ತದೆ. ಅವಳಿ ಜಲಾಶಯ ನಿರ್ಮಾಣಕ್ಕಾಗಿ ಅಖಂಡ ವಿಜಯಪುರ ಜಿಲ್ಲೆಯ…

1 4 5 6 7 8 15
error: Content is protected !!