Browsing: ಜಿಲ್ಲೆ

ಜಿಲ್ಲೆ

ಮೈಸೂರು ದಸರಾ ಉತ್ಸವ; ಗಜ ಪಯಣಕ್ಕೆ ಚಾಲನೆ

ಮೈಸೂರು ಪ್ರತಿನಿಧಿ: ಬಾಲು .ಡಿ. ಮೈಸೂರು, ಸೆ, ೧೩:ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಮೊದಲ ಕಾರ್ಯಕ್ರಮವಾದ ಗಜಪಯಣಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಸರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಕಾಡಿನಿಂದ ನಾಡಿಗೆ ಹೊರಟ ಗಜಪಡೆ ಸಾರಥಿ ಅಭಿಮನ್ಯು ನೇತೃತ್ವದ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು. ನಾಗರಹೊಳೆ ವ್ಯಾಪ್ತಿಯ ಹುಣಸೂರಿನ ವೀರನಹೊಸಹಳ್ಳಿ ಅರಣ್ಯ ಪ್ರದೇಶದಲ್ಲಿ ದಸರಾ ಆನೆಗಳಿಗೆ ಸ್ವಾಗತ ನೀಡಿದ ಅರಣ್ಯಾಧಿಕಾರಿಗಳು, ದಸರಾಗೆ…

ಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ :ಸಿ.ಎಂ. ಬೊಮ್ಮಾಯಿ

ಬೆಂಗಳೂರು, ಸೆ, 12:ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನವಾಗಿ 120 ನೂತನ ಆಂಬ್ಯುಲೆನ್ಸ್ ಗಳ ನ್ನು ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಬೆಂಗಳೂರು ಆರೋಗ್ಯ ಸೇವೆಗಳು ಸಂಪೂರ್ಣವಾಗಿ ಒಂದು ಪ್ರಾಧಿಕಾರದಡಿಗೆ ಬರಬೇಕು. ಬರುವ ದಿನಗಳಲ್ಲಿ ಇದನ್ನು ಕಾರ್ಯಗತಗೊಳಿಸುವುದಾಗಿ ಮುಖ್ಯಮಂತ್ರಿ ಗಳು ತಿಳಿಸಿದರು. ಆರೋಗ್ಯಕ್ಕೆ ಜೀವನಾಡಿ ಆಂಬ್ಯುಲೆನ್ಸ್ , ಆರೋಗ್ಯ ಯಾವಾಗ ಕೆಡುತ್ತದೆ ಎಂದು ತಿಳಿಯೋದು ಕಷ್ಟ. ಆರೋಗ್ಯ ಕೈಕೊಟ್ಟ…

ಗಣಪತಿಯ ಆರಾಧನೆ ಭಾರತೀಯ ಸಮೃದ್ಧ ಸಂಸ್ಕೃತಿ :ಡಾ ಆರೂಢಭಾರತೀ ಸ್ವಾಮೀಜಿ

ಬೆಂಗಳೂರು, ಸೆ,11:”ಗಣಪತಿಯನ್ನು ಆರಾಧಿಸುವುದು ಸನಾತನ ಭಾರತದ ಸಮೃದ್ಧ ಸಂಸ್ಕೃತಿ” ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಗುರುವಾರ ಗಣೇಶ ಚೌತಿಯ ನಿಮಿತ್ತ ತಮ್ಮ ಆಶ್ರಮದಲ್ಲಿ ಮಕ್ಕಳು ಮಾಡಿದ ಗಣಪತಿಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ” ಪೆರಿಯಾರ್ ರಾಮಸ್ವಾಮಿಯಂಥವರು ಗಣೇಶನ ಕುರಿತು, ಆನೆಯ ತಲೆ ಜೋಡಿಸಿ ಜೀವ ಕೊಡಬಲ್ಲ ಶಿವನಿಗೆ, ತಾನೇ ಕತ್ತರಿಸಿದ ಗಣೇಶನ ತಲೆ ಜೋಡಿಸಿ ಜೀವ ಕೊಡಲಾಗಲಿಲ್ಲವೇ? ಎಂಬಿತ್ಯಾದಿ ಆಕ್ಷೇಪಿಸಿ, ವೇದ ಪುರಾಣಗಳೆಲ್ಲಾ ಮೋಸ, ಕಟ್ಟು…

ಪರಿಸರ ರಕ್ಷಣೆ ಮೂಲಕ ತೇಜಸ್ವಿ ನೆನಪಿಸಿಕೊಳ್ಳಬೇಕು; ಸಿದ್ದರಾಮಯ್ಯ

ಬೆಂಗಳೂರು, ಸೆ,08:ಪೂರ್ಣ ಚಂದ್ರ ತೇಜಸ್ವಿ ಒಬ್ಬ ಮಾನವತಾವಾದಿ ಅಲ್ಲದೆ ಪರಿಸರವಾದಿಯೂ ಕೂಡ ಆದರೆ ರಾಜಕಾರಣಿಗಳ ಬಗ್ಗೆ ಅವರಿಗೆ ವಿಶ್ವಾಸವಿರಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಅಂಗವಾಗಿ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದ್ದ ತೇಜಸ್ವಿ ಜೀವಲೋಕ ಹಾಗೂ ಕುರಿಂಜಿ ಲೋಕ ಸಾಕ್ಷ್ಯಚಿತ್ರ, ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯ ನನಗಿರಲಿಲ್ಲ. ವಾರಕ್ಕೊಮ್ಮೆ ಮೈಸೂರಿಗೆ ಬರುತ್ತಿದ್ದರು, ಮೈಸೂರಿನಲ್ಲಿ ಕೆ. ರಾಮದಾಸ್ ಎನ್ನುವವರು ತೇಜಸ್ವಿಯವರ ಆಪ್ತ ಸ್ನೇಹಿತರಾಗಿದ್ದರು. ಇವರು…

ಸಂಪುಟ ಸಹೋದ್ಯೋಗಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ

ತಡಸ,ಸೆ,01:ತಮ್ಮ ಸಚಿವ ಸಂಪುಟದಲ್ಲಿನ ಸಹೋದ್ಯೋಗಿಗಳ ಕಾರ್ಯಕ್ಷಮತೆ ದಕ್ಷತೆ, ಪ್ರತಿಭೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಮೆಚ್ಚುಗೆಯ ಮಾತುಗಳನ್ನಾಡಿದರು. .. ಬುಧವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗಳಿಗೆ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ಅವರು ತಡಸ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು. ನನ್ನ ಸಚಿವ ಸಂಪುಟದಲ್ಲಿರು ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು…

ವಿಕಲಾಂಗ ಭಾಗ್ಯ ಯೋಜನೆಗೆ ಆಗ್ರಹ

meet ಬೆಂಗಳೂರು,ಆ,30:ಸಂಕಷ್ಟದಲ್ಲಿರುವ ಕಿವಿ ಕಣ್ಣು ಕಾಲು ಇಲ್ಲದ ವಿಕಲಾಂಗರಿಗೆ ಶ್ರವಣ ಸಾಧನ, ವ್ಹೀಲ್ ಚೇರ್ ಮೊದಲಾದವುಗಳನ್ನು ಉಚಿತವಾಗಿ ವಿತರಿಸುವ ವಿಕಲಾಂಗ ಭಾಗ್ಯ ಯೋಜನೆಯನ್ನು ಸರ್ಕಾರವು ಜಾರಿಗೆ ತರಬೇಕೆಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಆಗ್ರಹಿಸಿದರು. ಅವರು ಭಾನುವಾರ ಕೆಂಗೇರಿಯಲ್ಲಿ, ವಂಡರಿಂಗ್ ಟು ದಿ ಲೈಟ್ ಫೌಂಡೇಶನ್ ನೀಡಿದ ಶ್ರವಣ ಸಾಧನಗಳನ್ನು ವಿಕಲಾಂಗ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು.” ಪಂಚ ಜ್ಞಾನೇಂದ್ರಿಯಗಳಲ್ಲಿ ಕಿವಿಯು ಒಂದಾಗಿದ್ದು, ಅದು ಕೇಳದಿದ್ದಲ್ಲಿ ಬಾಳು ಶೂನ್ಯ ಎನಿಸುತ್ತದೆ. ಶ್ರವಣ…

ಪತ್ರಕರ್ತ, ಸಂಘಟನಾಕಾರ ಗುಡಿಹಳ್ಳಿ ಸ್ಮರಣೆ

ಬೆಂಗಳೂರು,ಆ,27: ಬಹುಮುಖ ಪ್ರತಿಭೆಯ ಗುಡಿಹಳ್ಳಿ ನಾಗರಾಜ ಅವರು ಪತ್ರಕರ್ತರಾಗಿ, ಬಂಡಾಯ ಸಾಹಿತ್ಯ ಸಂಘಟನೆ ಸಂಚಾಲಕರಾಗಿ, ರಂಗಕರ್ಮಿಯಾಗಿ, ಪತ್ರಕರ್ತರ ಸಂಘಟನೆಗೂ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಹೇಳಿದರು. ಬೆಂಗಳೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು. ಗುಡಿಹಳ್ಳಿ ಅವರು ಪತ್ರಕರ್ತರಾಗಿ ರಂಗಭೂಮಿ ಬಗ್ಗೆ ಆಸಕ್ತಿ ಹೊಂದಿ ಅನೇಕ ಕಲಾವಿದರನ್ನು ಬೆಳಕಿಗೆ ತಂದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ತಮ್ಮ…

ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ನಿಧನ

ಬೆಂಗಳೂರು,ಆ,26:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಪ್ರೆಸ್ ಕ್ಲಬ್ ಮಾಜಿ ಉಪಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಗುಡಿಹಳ್ಳಿಹಿರಿಯ ನಾಗರಾಜ್(66)  ನಿಧನರಾಗಿದ್ದಾರೆ.  ಮೈತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗುಡಿಹಳ್ಳಿ ನಾಗರಾಜ್ ಪ್ರಜಾವಾಣಿ ಪತ್ರಿಕೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದವರು. ಕನ್ನಡ ಸಾಂಸ್ಕೃತಿಕ ಲೋಕದ ಜೊತೆ ನಿಕಟ ಒಡನಾಟ ಇರಿಸಿ ಕೊಂಡಿದ್ದ ಗುಡಿಹಳ್ಳಿ ನಾಗರಾಜ್, ವಿಶೇಷವಾಗಿ ಕನ್ನಡ ರಂಗಭೂಮಿ ಕುರಿತು ಬರೆದ ಲೇಖನಗಳು ಮತ್ತು ಕೃತಿಗಳು ಕನ್ನಡ ಸಾಹಿತ್ಯ ಲೋಕಕ್ಕೆ ಉತ್ತಮ ಕೊಡುಗೆಗಳನ್ನು ನೀಡಿದ್ದಾರೆ. ಒಂದು ರೀತಿಯಲ್ಲಿ…

21 ರಂದು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿರುವ ಸಿಎಂ

ಆಲಮಟ್ಟಿ; ಆ.೨೧ರಂದು ತುಂಬಿದ ಕೃಷ್ಣೆಯ ಜಲನಿ ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಲಮಟ್ಟಿಜಲಾಶಯಕ್ಕೆ ಗಂಗಾಪೂಜೆ, ಬಾಗಿನ ಅರ್ಪಿಸಿದ ನಂತರ ಪ್ರವಾಹಮತ್ತು ಕೋವಿಡ್ ಕುರಿತು ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ಹೇಳಿದರು. ಶುಕ್ರವಾರ ಆಲಮಟ್ಟಿ ಜಲಾಶಯದ ಹಿಂಭಾಗದ ಬಾಗೀನ ಅರ್ಪಿಸುವಸ್ಥಳ ಹಾಗೂ ಹೆಲಿಪ್ಯಾಡಗೆ ಭೇಟಿ ನೀಡಿ ಅವರು ಮಾತನಾಡಿದರು. ಹೆಲಿಕಾಪ್ಟರ್ ಮೂಲಕ ಆಗಮಿಸುವ ಮುಖ್ಯಮಂತ್ರಿಯವರು ಹೆಲಿಪ್ಯಾಡ್‌ನಿಂದ ನೇರವಾಗಿ ಪ್ರವಾಸಿ ಮಂದಿರಕ್ಕೆ ಆಗಮಿಸುವರು, ಅವರೊಂದಿಗೆ ಸಚಿವರುಗಳು ಇರಲಿದ್ದು, ನಂತರ ಜಲಾಶಯಕ್ಕೆತೆರಳಿ ಬಾಗಿನ ಅರ್ಪಿಸುವರು. ಅವಳಿ ಜಿಲ್ಲೆಯ…

ಮಾತೃಭಾಷೆಯ ಮಹತ್ವವನ್ನು ಅರಿತ ಸಮುದಾಯ ಶ್ರೀಮಂತವಾಗಿ ಬೆಳೆಯುತ್ತದೆ: ಬೊಮ್ಮಾಯಿ

ಬೆಂಗಳೂರು, ಆ, 18: ಮಾತೃಭಾಷೆಯ ಮಹತ್ವವನ್ನು ಅರಿತ ಸಮುದಾಯ ಬಹಳ ಶ್ರೀಮಂತವಾಗಿ ಬೆಳೆಯುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯ ಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ 2019- 20 ನೇ ಸಾಲಿನ ವಿವಿಧ ರಾಜ್ಯ ಪ್ರಶಸ್ತಿ ಹಾಗೂ ಬಸವ ರಾಷ್ಟ್ರೀಯ ಪ್ರಶಸ್ತಿ ಯನ್ನು ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾನವೀಯ ಮತ್ತು ಮಾತೃ ಮೌಲ್ಯಗಳ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕು ಎಂದ ಮುಖ್ಯಮಂತ್ರಿಗಳು…

ಅಸಾಧ್ಯವನ್ನು ಸಾಧಿಸಿತೋರಿಸಿದಚನ್ನಯ್ಯ-ರೂಪಕಲಾ

ಶಿಕಾರಿಪುರ,ಆ,೧೮:ಮಂದಹಾಸ ದ ನಗುವ ಬೀರುವ ಸಂಸ್ಕಾರ ಅರಿತ ವ್ಯಕ್ತಿ ಮೀರಿದ ವ್ಯಕ್ತಿತ್ವದ ಪರಿಚಯದ ಶಿಕ್ಷಣದಿಂದ ಶಿಕ್ಷಕ ವೃತ್ತಿ ಅರಿತ ಚನ್ನಯ್ಯ ಸಾವು ಅನಿರೀಕ್ಷಿತ ನಾವು ಈ ಜ್ಞಾನ ದೇಗುಲದ ದೇವರನ್ನೇ ಕಳೆದು ಕೊಂಡಂತಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ರೂಪಕಲಾ ಹೆಗ್ಗಡೆ ಅಭಿಪ್ರಾಯಪಟ್ಟರು. ನಗರದ ಶ್ರಿ ಚನ್ನಮಲ್ಲಿಕಾರ್ಜುನ ಶಾಲೆಯಲ್ಲಿ ನೆಡೆದ ದಿ.ಚನ್ನಯ್ಯ ನವರ ಪುಣ್ಯ ಸ್ಮರಣೆ ನುಡಿ ನಮನ ವಿದ್ಯಾ ನಾವಿಕಾನಿಗೊಂದು ನಮನ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು . ಸ್ಥಿತಿವಂತರು .ಶಿಪಾರಸ್ಸು ಜನರು…

ದೇಶಭಕ್ತಿ ಸಾರಿದ ಸಿದ್ಧಾರೂಢರು

ಬೆಂಗಳೂರು, ಆ,16″ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಸಿದ್ಧಾರೂಢರ ಪಾತ್ರ ಅವಿಸ್ಮರಣೀಯ” ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ರಾಮೋಹಳ್ಳಿಯ ತಮ್ಮ ಆಶ್ರಮದಲ್ಲಿ ನಡೆದ 75 ನೇ ವರ್ಷದ ಸ್ವಾತಂತ್ರ್ಯ ಸಂಭ್ರಮಾಚರಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. 1904 ರಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರ ಸಮ್ಮುಖದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಾರರ ಮಹಾ ಅಧಿವೇಶನದಲ್ಲಿ ಸಿದ್ಧಾರೂಢರು ಅಧ್ಯಕ್ಷರಾಗಿದ್ದರು. “ಜನನೀ ಜನ್ಮಭೂಮಿ ಸ್ವರ್ಗಕ್ಕಿಂತ ಶ್ರೇಷ್ಠ. ದೇಶವಿದ್ದರೆ ನಾವು ನೀವು ಧರ್ಮ ಭಾಷೆ ಮತ್ತೊಂದು. ನೆಲೆಯಿಲ್ಲದ…

ಕನಕಶ್ರೀ ಗಳಿಗೆ ಪಿತೃ ವಿಯೋಗ

ಚಿತ್ರದುರ್ಗ, ಆ,15:ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ದರಾಮಾನಂದ ಮಹಾ ಸ್ವಾಮೀಜಿ ಅವರ ಪೂರ್ವಾಶ್ರಮದ ಪಿತೃಗಳಾದ ಪೂಜ್ಯ ಕಲಮರಹಳ್ಳಿ ಮಹಾದೇವಪ್ಪ ನವರು ಶಿವೈಕ್ಯರಾದರು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಲಮರಹಳ್ಳಿ ಗ್ರಾಮದಲ್ಲಿ ನೆಲೆಸಿದ್ದ ಮಹಾದೇವಪ್ಪ ಅವರು ಹೃದಯಾಘಾತದಿಂದ ಭಾನುವಾರ ಶಿವೈಕ್ಯರಾಗಿದ್ದು ಪತ್ನಿ ಜಯಮ್ಮ, ಮಕ್ಕಳಾದ ಶ್ರೀಧರ್, ಪ್ರದೀಪಕುಮಾರ್, ರೂಪ ಅವರನ್ನು ಹಾಗೂ ತಂಗಿ, ತಮ್ಮ, ಅಣ್ಣ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.ಮೃತರ ಅಂತ್ಯ ಸಂಸ್ಕಾರ ಸ್ವಗ್ರಾಮ ಕಲಮರಹಳ್ಳಿಯಲ್ಲಿ ಸೋಮವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶ್ರೀ…

ಈ ಬಾರಿ ಮಾಣಿಕ್ ಷಾ ಪೆರೇಡ್ ಗೆ ಸಾರ್ವಜನಿಕರ ಪ್ರವೇಶವಿಲ್ಲ

ಬೆಂಗಳೂರು,ಆ.13- ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಜಿಲ್ಲಾಧಿಕಾರಿ ಮಂಜುನಾಥ್, ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮುಂತಾದವರು ಭದ್ರತೆಯ ಸಿದ್ದತೆ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ…

ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

ಮಂಗಳೂರು, ಆ,೧೨; ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಸಭೆ ನಡೆಸುವ ವೇಳೆ ಕೊರೊನಾ ನಿರ್ಲಕ್ಷ್ಯದ ಮಾತು ಹೊರಬಂದಾಗ ಸಿಎಂ ಈ ಆಕ್ರೋಶ ವ್ಯಕ್ತಪಡಿಸಿದರು. ನನ್ನ ಪ್ರಗತಿ ಪರಿಶೀಲನೆ ಸ್ಟೈಲ್ ಸ್ವಲ್ಪ ಬೇರೆ…

ಮಹತ್ತ್ವ ಆಯುರ್ವೇದಿಕ್ ಹೆಲ್ತಿ ಮಿಕ್ಸ್ ಮಾರುಕಟ್ಟೆಗೆ

ಮೈಸೂರು,ಆ,12:ಬೆಂಗಳೂರಿನ ಸೌಖ್ಯ ನ್ಯಾಚುರಲ್ಸ್ ಫುಡ್ ಆ್ಯಂಡ್ ಬೇವರೇಜಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮಹತ್ತ್ವ ಆಯುರ್ವೇದಿಕ್ ಹೆಲ್ತಿ ಮಿಕ್ಸ್ ಅನ್ನು ಬುಧವಾರ ಮೈಸೂರಿನ ಸುತ್ತೂರು ಮಠದಲ್ಲಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು “ಸಾವಯವ ಸಿರಿಧಾನ್ಯ, ಮೊಳಕೆ ಕಟ್ಟಿದ ದ್ವಿದಳ ಧಾನ್ಯಗಳು, ಒಣ ಹಣ್ಣುಗಳು, ಖಾದ್ಯ ಬೀಜಗಳು ಹಾಗೂ ಆಯುರ್ವೇದಿಕ್ ಗಿಡಮೂಲಿಕೆಗಳಿಂದ ತಯಾರಿಸಿದ ಆರೋಗ್ಯ ಹಾಗೂ ಶಕ್ತಿವರ್ಧಕ ದ್ರಾವಣ ಇದಾಗಿದ್ದು ಯಾವುದೇ ರಾಸಾಯನಿಕ ಹಾಗೂ ಇತರೇ ಕರಬೆರಕೆ ರಹಿತವಾಗಿದೆ” ಎಂದರು. ರಾಮೋಹಳ್ಳಿಯ…

ಕರವೇಯಿಂದ ಕೃಷ್ಣಾಹಿನ್ನೀರಿಗೆ ಗಂಗಾಪೂಜೆ

ಆಲಮಟ್ಟಿ, ಆ,09:ಕರ್ನಾಟಕ ರಕ್ಷಣಾವೇದಿಕೆ ಆಲಮಟ್ಟಿ ಘಟಕದವತಿಯಿಂದ ತುಂಬಿದ ಕೃಷ್ಣೆಯ ಹಿನ್ನೀರಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮವು ಅಧ್ಯಕ್ಷ ಪತ್ತೆಸಾಬ ಚಾಂದ ನೇತೃತ್ವದಲ್ಲಿ ಸೋಮವಾರ ಜರುಗಿತು. ಪೂಜಾಕಾರ್ಯವನ್ನು ಗೋಪಾಲ ಧರ್ಮರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಮತ್ತು ಆಲಮಟ್ಟಿ ಗ್ರಾಮಪಂಚಾಯತ ಅಧ್ಯಕ್ಷ ಮಂಜುನಾಥ ಹಿರೇಮಠ, ಚಂದ್ರಶೇಖರ ಹೆರಕಲ್, ರಸೂಲಸಾಬ ಸಿಂಧೆ, ಬಷೀರ ಮುಲ್ಲಾ, ಯಲಗೂರೇಶ ಮೇಟಿ, ಮಹಿಬೂಬ ಡೊಣೂರ, ರಫೀಕ ಅಥಣಿ, ಶಂಕರ ವಡ್ಡರ, ಸಂತೋಷ ಕನಸೆ, ಗ್ರಾ.ಪಂ.ಸದಸ್ಯ ಬಸವರಾಜ ಬಂಡಿವಡ್ಡರ, ಮಸೂಬಾ ಕಟ್ಟಿಮನಿ, ಹನಮಂತ…

47 ಕುಟುಂಬಗಳಿಗೆ ಸಚಿವರಿಂದ ಹಕ್ಕುಪತ್ರ ವಿತರಣೆ

ವಿಜಯಪುರ,ಆ,09: ನಿರಂತರವಾಗಿ ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ಬದಕು ಕಳೆದುಕೊಂಡಿದ್ದ ತಾರಾಪುರ ಗ್ರಾಮದ ನಿರಾಶ್ರಿತರಿಗೆ ಹೊಸ ನಿವೇಶನಗಳ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ವಿಜಯಪುರ ಕೊವಿಡ್ ಮತ್ತು ಪ್ರವಾಹ ಉಸ್ತುವಾರಿ ಸಚಿವರಾಗಿರುವ ಶಶಿಕಲಾ ಜೊಲ್ಲೆ ದಶಕಗಳ ಜನರ ಬೇಡಿಕೆಯನ್ನು ಈಡೇರಿಸಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ತಾರಾಪುರ ಗ್ರಾಮದಲ್ಲಿ ಸೋಮವಾರ 47 ಜನರಿಗೆ ಹಕ್ಕು ಪತ್ರ ವಿತರಣೆಯನ್ನು ಸಚಿವರಾದ ಶಶಿಕಲಾ ಜೊಲ್ಲೆಯವರು ಮಾಡಿದರು. 2010 ರಿಂದ ಬಗೆ…

ರಾಜ್ಯದ ದೇವಾಲಯಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ : ಜೊಲ್ಲೆ

ವಿಜಯಪುರ,ಆ,09 : ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾಗಿ ನೇಮಕಗೊಂಡಿರುವ ಶಶಿಕಲಾ ಜೊಲ್ಲೆಯವರು ವಿಜಯಪುರ ನಗರದ ಐತಿಹಾಸಿಕ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ನಾಡಿನ ಜನತೆ ಕೊರೊನಾ ಮಹಾಮಾರಿ ಹಾಗೂ ಪ್ರವಾಹ ಸಂಕಷ್ಟದಿಂದ ಹೊರ ಬರಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. ಹಿಂದೂ ಧರ್ಮದ ಪ್ರಕಾರ ಶ್ರಾವಣ ಮಾಸದ ಮೊದಲ ಸೋಮವಾರ ಅತ್ಯಂತ ಪುಣ್ಯದ ದಿನವಾಗಿದ್ದು ಈ ದಿನ ಶಿವನ ಪೂಜೆ ಮಾಡುವ ಮೂಲಕ ಮುಜರಾಯಿ,…

ಅಮವಾಸ್ಯೆ ಪ್ರಯುಕ್ತ ಕೃಷ್ಣಾತಟದಲ್ಲಿ ಜನವೋ ಜನ..

ಆಲಮಟ್ಟಿ,ಆ,08: ನಾಗರ ಅಮವಾಸ್ಯೆ ಜೊತೆಗೆ ರವಿವಾರವೂ ಆಗಿರುವದರಿಂದ ಪಟ್ಟಣವೂ  ಸುತ್ತಮುತ್ತಲಿನ ಸುಕ್ಷೇತ್ರ ಹಾಗೂ ಕೃಷ್ಣೆಯ ತೀರದಲ್ಲಿ ಎಲ್ಲಿ ನೋಡಿದರೂ ಜನಸ್ತೋಮವೇ ಕಾಣುತ್ತಿತ್ತು. ನಾಗರ ಅಮವಾಸ್ಯೆಯು ರವಿವಾರ ಆಗಿರುವದರಿಂದ ವಿಜಯಪುರ ಹಾಗೂ ಬಾಗಲಕೋಟ ಅವಳಿ ಜಿಲ್ಲೆಯ ನಾಗರಿಕರು ರವಿವಾರ ನಸುಕಿನ ಜಾವದಿಂದ ಸಂಜೆಯವರೆಗೂ ಆಲಮಟ್ಟಿಯ ಕೃಷ್ಣಾಸೇತುವೆ, ಹಿನ್ನೀರು ಪ್ರದೇಶದಲ್ಲಿರುವ ಚಂದ್ರಮ್ಮಾದೇವಸ್ಥಾನದ ಬಳಿ, ಪಾರ್ವತಿಕಟ್ಟೆ ಹಾಗೂ ಯಲಗೂರ ಬಳಿಯಕೃಷ್ಣಾ ನದಿಯ ದಡದಲ್ಲಿ ಭಕ್ತರ ದಂಡು ಪುಣ್ಯಸ್ನಾನ ಮಾಡಿದರು. ಪಟ್ಟಣಕ್ಕೆ ಆಗಮಿಸಿದ್ದ ಪ್ರವಾಸಿಗರು ತುಂಬಿ ನಿಂತಿರುವ ಕೃಷ್ಣೆಯ ಜಲನಿಧಿ, ರಾಕ್ ಉದ್ಯಾನ,…

1 6 7 8 9 10 15
error: Content is protected !!