Browsing: ರಾಜ್ಯ

ರಾಜ್ಯ

ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು, ಸೆ. 4-ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು.ನಂತರದ ಮಾತನಾಡಿದ ಅವರು ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ…

ಧರ್ಮಸ್ಥಳ ಪ್ರಕರಣ- ಎನ್ಐಎ ತನಿಖೆಗೆ ವಹಿಸಲು ಸ್ವಾಮೀಜಿಗಳ ಮನವಿ

ನವದೆಹಲಿ, ಸೆ,04- ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಕುರಿತು ಎನ್ಐಎ ತನಿಗೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸ್ಮಾಮೀಜೊಗಳ ನಿಯೋಗ ಮನವಿ ಮಾಡಿದೆ. ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಚೇರಿಗೆ ಭೇಟಿ ನೀಡಿದ ವಚನಾನಂದ ಸ್ವಾಮೀಜಿಗಳ ನಿಯೋಗ ಧರ್ಮಸ್ಥಳ ಪ್ರಕರಣ ಕುರಿತು ಚರ್ಚೆ ನಡೆಸಿದರು. ಸ್ವಾಮೀಜಿಗಳಿಂದ ಅಮಿತ್ ಶಾ ಅವರು ಬುರುಡೆ ಪ್ರಕರಣ ಕುರಿತು ಮಾಹಿತಿ ಪಡೆದರು. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದೇನೆ ಎಂದು ತಿಳಿಸಿದರು. ಪ್ರಕರಣ…

ಎಲ್ ಡಿ ಇ ಸಂಸ್ಥೆಯಿಂದ 65 ಸಂಪುಟಗಳಲ್ಲಿ ದಾಸಸಾಹಿತ್ಯ ಪ್ರಕಟ: ಎಂ ಬಿ ಪಾಟೀಲ

ಬೆಂಗಳೂರು,ಆ,30–ಶ್ರೀಸಾಮಾನ್ಯನ ನುಡಿಗಟ್ಟಿನಲ್ಲ ಭಕ್ತಿ ಮತ್ತು ಭಗವಂತ‌ನ ಪಾರಮ್ಯವನ್ನು ಗೇಯತೆಯ ಧ್ವನಿಯಲ್ಲಿ ಸಾರಿದ್ದು ದಾಸಸಾಹಿತ್ಯದ ಹಿರಿಮೆಯಾಗಿದೆ. ಇಂತಹ ದಾಸಸಾಹಿತ್ಯದ 65 ಸಂಪುಟಗಳನ್ನು ತಮ್ಮ‌ ನೇತೃತ್ವದ ಬಿ.ಎಲ್.ಡಿ.ಇ. ಶಿಕ್ಷಣ ಸಂಸ್ಥೆಯ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಮೂಲಕ ಪ್ರಕಟಿಸಲಾಗುತ್ತಿದೆ. ಇವುಗಳ ಪೈಕಿ ಈಗಾಗಲೇ ಅರವತ್ತಕ್ಕೂ ಹೆಚ್ಚು ಸಂಪುಟಗಳು ಬಿಡುಗಡೆಗೆ ಸಿದ್ಧವಾಗಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ಕಾಗಿನೆಲೆ ಮಹಾಸಂಸ್ಥಾನ ಪೀಠವು ಶನಿವಾರ ಇಲ್ಲಿನ ಕೇತೋಹಳ್ಳಿಯಲ್ಲಿ ಏರ್ಪಡಿಸಿದ್ದ, ಕನಕದಾಸ ಸಾಹಿತ್ಯದ ವೈಚಾರಿಕ ಅನುಸಂಧಾನದ ‘ತಲ್ಲಣಿಸದಿರು ಮನವೇ’ ವಿಚಾರ…

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ

ಬೆಂಗಳೂರು, ಆ,30- ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಇಂದು ಮುಂದುವರೆದಿದೆ ಕಲ್ಯಾಣ ಕರ್ನಾಟಕದ ಕಲಬುರ್ಗಿ ಯಾದಗಿರಿ ಜಿಲ್ಲೆಗಳಲ್ಲೂ ಮಳೆ ಮುಂದುವರೆದಿದ್ದು ನದಿ ಪಾತ್ರ ಗ್ರಾಮಗಳಲ್ಲಿ ಜಮೀನಿಗೆ ನೀರು ನುಗ್ಗೆ ಭಾರಿ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸಿದೆ ಗೇರು ಸೊಪ್ಪು ಜಲಾಶಯದಿಂದ ಶರಾವತಿ ನದಿಗೆ ಹರಿಸಿದ್ದರಿಂದ ಹೊನ್ನಾವರದ ಗ್ರಾಮಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಿತ್ತು ನದಿ ಪಾತ್ರದ ಹೆರಂಗಡಿ ,ಸರಳಗಿ ,ಗುಂಡಬಾಳ ,ಬೇರೊಳ್ಳಿ ಸೇರಿ ಗ್ರಾಮಗಳ ಮನೆಗೆ ನೀರು ನುಂಗಿತ್ತು…

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಅವರ ಹೆಸರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು, ಆ. 30-“ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಡಿ. ಕೆ. ಶಿವಕುಮಾರ್ ಅವರು ಮಾತನಾಡಿದರು. “ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ…

ಮಹೇಶ್ ಶೆಟ್ಟಿ ತೀಮಿರೋಡಿ ಬಂಧನ

ಉಡುಪಿ,ಆ,21-ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮಹೇಶ್ ತಿಮರೋಡಿ ಅವರನ್ನ ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು ಪೊಲೀಸ್ ಠಾಣೆಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಬ್ರಹ್ಮಾವರ ಠಾಣೆ ಬಳಿ ಜನ ಸೇರುವಂತಿಲ್ಲ.…

ದಾವಣಗೆರೆಯಲ್ಲಿ ಸುಸ್ಥಿರ ಭತ್ತದ ಕೃಷಿ ಯೋಜನೆಗೆ ಪ್ರಾಯೋಗಿಕ ಚಾಲನೆ.

ಬೆಂಗಳೂರು ಆ,21-ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು,…

ಪಿಓಪಿ ಬಳಸುವುದಿಲ್ಲವೆಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಗೆ ಬರೆಸಿಕೊಳ್ಳಲು ಸೂಚನೆ: ಖಂಡ್ರೆ

ಬೆಂಗಳೂರು, ಆ.21- ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ನಾವು ಶ್ರದ್ಧಾಭಕ್ತಿಯಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರಗಳಿಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಓಪಿ ಗಣಪತಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿ…

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಬೆಂಗಳೂರು, ಆ.21-ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025’ ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪಚರ್ಚೆ ಬಳಿಕ ಅನುಮೋದನೆ ನೀಡಲಾಯಿತು. ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ…

ಬಿಜೆಪಿಯಿಂದ ಧರ್ಮಯಾತ್ರೆ’ಗೆ ಚಾಲನೆ

ಬೆಂಗಳೂರು,ಆ21-: ಬಿಜೆಪಿ ಬ್ಯಾಟರಾಯನಪುರ ಕ್ಷೇತ್ರದ ವತಿಯಿಂದ ರಾಜ್ಯ ಬಿಜೆಪಿ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ ಅವರ ನೇತೃತ್ವದಲ್ಲಿ ಕೊಡಿಗೇಹಳ್ಳಿಯ ಶ್ರೀ ಗುಂಡಾಂಜನೇಯ ಸ್ವಾಮಿ ದೇವಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ತನಕ ನಡೆಯುವ ‘ಧರ್ಮಯಾತ್ರೆ’ ಅಭಿಯಾನಕ್ಕೆ ಇಂದು ಬೆಳಿಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಚಾಲನೆ ನೀಡಿದರು. ವಿಶೇಷ ಪೂಜೆ ನೆರವೇರಿಸಿದ ನಂತರ ನೂರಾರು ವಾಹನಗಳೊಂದಿಗೆ ಅಭಿಯಾನವನ್ನು ಆರಂಭಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಈ ಯಾತ್ರೆ ನಡೆಯುತ್ತಿದೆ. ಇಂದು ಸಂಜೆ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಅಸ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆ, 20 -ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಕಟಿಬದ್ಧವಾಗಿದ್ದು ಈ‌ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು ಒಳಮೀಸಲಾತಿ ಕುರಿತು ವಿಧಾನ‌ ಪರಿಷತ್‌ನಲ್ಲಿ ಉತ್ತರಿಸಿದ ಮುಖ್ಯಮಂತ್ರಿಗಳು   ಸರ್ವೋಚ್ಛ ನ್ಯಾಯಾಲಯವು 2024ರಲ್ಲಿ ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ ನೀಡಲಾದ ತೀರ್ಪಿನಲ್ಲಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರವಿದ್ದು, ಸಂವಿಧಾನದ ಅನುಚ್ಚೇದ 14, 15 ಮತ್ತು 16 ರ ಮೂಲ…

ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಬಿಜೆಪಿಯವರು ಭಾವಿಸಿದ್ದಾರೆ- ಡಿಕೆಶಿ

ಬೆಂಗಳೂರು, ಆ.16-“ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರ ನಿಯೋಗ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದೆ ಎಂದು ಕೇಳಿದ ಪ್ರಶ್ನೆಗೆ, “ಬಿಜೆಪಿಯವರು ಆರಂಭದಲ್ಲಿ…

ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನಿಧನ

ಬೆಂಗಳೂರು,ಆ,೧೬- ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ (೮೧) ವಿಧಿವಶರಾಗಿದ್ದಾರೆ. ಕೆಲವು ದಿನಗಳ ಹಿಂದೆ ತಮ್ಮ ಹೇಳಿಕೆಗಳಿಂದಲೇ ಸ್ವಾಮೀಜಿ ಸುದ್ದಿ ಮಾಡಿದ್ದರು. ಈ ಹೇಳಿಕೆ ಪೊಲೀಸ್ ಠಾಣೆಯ ಮೆಟ್ಟಿಲನ್ನು ಏರಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ತಡರಾತ್ರಿ ವಿಧಿವಶರಾದರು. ಬೆಂಗಳೂರಿನ ಕೆಂಗೇರಿಯಲ್ಲಿ ಮಠವನ್ನು ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಕ ಕ್ಷೇತ್ರಕ್ಕೆ ಸ್ವಾಮೀಜಿ ಅಪಾರ ಕೊಡುಗೆಯನ್ನು ನೀಡಿದ್ದರು. ಶ್ರೀ ಚಂದ್ರಶೇಖರನಾಥ…

ಡಾ. ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ

ಕಲಬುರಗಿ,ಆ,15-ನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಸಂತ, ಜ್ಞಾನ ದಾಸೋಹಿ ಹಾಗೂ ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಶಿವೈಕ್ಯರಾಗಿದ್ದಾರೆ. ಅಪ್ಪ ಅವರು ಕಳೆದ ತಿಂಗಳು ಜುಲೈ 26 ರಂದು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಮಹಾದಾಸೋಹ ಮನೆಯಲ್ಲಿ ಸಕಲ ವೈದ್ಯಕಿಯ ಚಿಕಿತ್ಸಾ ಸೌಲಭ್ಯ ಹೊಂದಿರುವ ವಿಶೇಷ ಕೋಣೆ ಸಿದ್ಧಪಡಿಸಿ, ಗುರುವಾರ ಸಂಜೆ ಆಸ್ಪತ್ರೆಯಿಂದ ದಾಸೋಹ ಮನೆಗೆ ಸ್ಥಳಾಂತರಿಸಲಾಗಿತ್ತು. ದಾಸೋಹ ಮನೆಯಲ್ಲಿಯೇ…

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.14-“ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆ ಕಲಾಪದಲ್ಲಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಈ ವಿಚಾರವನ್ನು ಮಾತನಾಡಿದರು. “ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ ಆಚಾರ…

ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹ: ಡಿ.ಕೆ. ಶಿವಕುಮಾರ್ ವಾಗ್ದಾಳಿ

*ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚ ಬೆಂಗಳೂರು, ಆ.13-ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ರಾಮನಗರದಲ್ಲಿ ಒಂದೂ ಕ್ಷೇತ್ರ ಗೆಲ್ಲಲಾಗದವ, ಅಲ್ಪಸಂಖ್ಯಾತ ನಾಯಕನನ್ನು ಅಸಮರ್ಥ ಎನ್ನುತ್ತೀಯಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. ವಿಧಾನಸಭೆ ಕಲಾಪದಲ್ಲಿ ರಸಗೊಬ್ಬರ ಕೊರತೆ ವಿಚಾರವಾಗಿ ನಡೆದ ಚರ್ಚೆ ವೇಳೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಬುಧವಾರ ಬಿರುಸಿನ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಚರ್ಚೆ ವೇಳೆ ಮಾತನಾಡುವಾಗ ತಪ್ಪು…

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು,ಆ,13- ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಜೀ ಅವರ ಅಪೇಕ್ಷೆಯಂತೆ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ತ್ರಿವರ್ಣ ಧ್ವಜ ರಾರಾಜಿಸುವ ಮೂಲಕ ಪ್ರತಿಯೊಬ್ಬ ಭಾರತೀಯರಲ್ಲೂ ದೇಶದ ಬಗ್ಗೆ ಸದ್ಭಕ್ತಿ, ಶ್ರದ್ಧೆ ಬರಬೇಕೆಂಬ ಸದುದ್ದೇಶದಿಂದ ಬಿಜೆಪಿ, ರಾಜ್ಯದಲ್ಲೂ ಅಭಿಯಾನ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ‘ಹರ್ ಘರ್ ತಿರಂಗ’ ಅಭಿಯಾನದ ಪ್ರಯುಕ್ತ ಗುಟ್ಟಹಳ್ಳಿಯ ಮಾರುತಿ ಬಡಾವಣೆಯಲ್ಲಿರುವ…

ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು, ಆ,13-ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಬ್ಬಾಗುತ್ತಿದೆ, ಬಾಲ್ಯ ವಿವಾಹಗಳ ಸಂಖ್ಯೆ…

ಹುಚ್ಚವ್ವನಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

*ವರದಿ :-ಆಂಜನೇಯ ನಾಯಕನಹಟ್ಟಿ ಜಗಳೂರು,ಆ,-ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದ್ದು‌‌ ಶೀಘ್ರ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿಮಕ್ಕಳು ಶಾಲೆಯ ಮುಂಭಾಗದಲ್ಲಿ ಎಸ್ ಡಿ ಎಂ ಸಿ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಿದರು. ಹುಚ್ಚನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2013 ರಿಂದಲೂ ಮೂರು ಶಿಕ್ಷಕರು ಮಾತ್ರ ಇದ್ದು. ಸದರಿ ದಿನಾಂಕದ ಶಾಲಾ ಹಾಜರಾತಿಯ ಪ್ರಕಾರ 65 ಮಕ್ಕಳಿದ್ದು ಒಂದರಿಂದ ಎಂಟನೇ ತರಗತಿವರೆಗೆ ತರಗತಿಗಳು ಇರುತ್ತವೆ ಈ ತರಗತಿಗಳಲ್ಲಿ ಕೇವಲ ಮೂರು…

ಆ.11ರಂದು ಗೋoಧಿ ಚಟ್ನಹಳ್ಳಿ ನಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಉದ್ಘಾಟನೆ

ಶಿವಮೊಗ್ಗ,ಆ,11-ನೂತನವಾಗಿ ನಿರ್ಮಿಸಿರುವ ಗೋoಧಿ ಚಟ್ನಹಳ್ಳಿ ನಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಪ್ರವೇಶ ಹಾಗೂ ವಿಗ್ರಹ ಪ್ರತಿಷ್ಠಾಪನೆ ಕಳಸರೋಹಣ ಅಷ್ಟ ಬಂಧನ ಮಹಾ ಕುಂಭ ಅಭಿಷೇಕ ಮಹೋತ್ಸವ ಆಗಸ್ಟ್ 13 ರಂದು ನೆರವೇರಲಿದೆ. ಅಂದು ಬೆಳಗ್ಗೆ ಪೂಜೆ ಆರಂಭಗೊಂಡು ದಿ. 14 ಗುರುವಾರ ಬೆಳಿಗ್ಗೆ 9:00 ರಿಂದ 10.30 ರವರೆಗೆ ನಡೆಯುವ ನೂತನ ದೇವಸ್ಥಾನ ಪ್ರವೇಶ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ಅಷ್ಟ ಬಂಧನ ಮತ್ತು ಮಾಹಾ ಕುಂಭಾಭಿಷೇಕ ಕಾರ್ಯಕ್ರಮವು ಬಹು ವಿಜೃಂಭಣೆಯಿಂದ ನಡೆಯಲಿದೆ.  ಅಭಿಷೇಕವನ್ನು…

1 2 3 4 5 53
error: Content is protected !!