ರಾಜ್ಯ
ಲಾಕ್ ಡೌನ್ ವಿಸ್ತರಿಸಿ. 10 ಸಾವಿರ ಪರಿಹಾರ ಕೊಡಿ- ಎಚ್ಡಿಕೆ
ಬೆಂಗಳೂರು,ಜೂ,03:ರಾಜ್ಯದಲ್ಲಿ ಇನ್ನೂ ಒಂದುವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕೊರೋನಾ ಸೋಂಕು, ಬೆಂಗಳೂರಿನಲ್ಲಿ ಸ್ವಲ್ಪ ತಗ್ಗಿದ್ದರೂ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ಪ್ರಮಾಣ ತಗ್ಗಿಲ್ಲ. ಆದ್ದರಿಂದ ಸರ್ಕಾರ, ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂದು ಹೆಚ್ ಡಿಕೆ ಹೇಳಿದ್ದಾರೆ. ಕೊರೋನಾ ಸೋಂಕಿನ ಮೊದಲ ಅಲೆಯ ಕಳೆದ ವರ್ಷದ ಏಪ್ರಿಲ್ ಮತ್ತು…