Browsing: ರಾಜ್ಯ

ರಾಜ್ಯ

ಮೈಸೂರು ದಸರಾ ಉತ್ಸವ; ಗಜ ಪಯಣಕ್ಕೆ ಚಾಲನೆ

ಮೈಸೂರು ಪ್ರತಿನಿಧಿ: ಬಾಲು .ಡಿ. ಮೈಸೂರು, ಸೆ, ೧೩:ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಮೊದಲ ಕಾರ್ಯಕ್ರಮವಾದ ಗಜಪಯಣಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಸರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಕಾಡಿನಿಂದ ನಾಡಿಗೆ ಹೊರಟ ಗಜಪಡೆ ಸಾರಥಿ ಅಭಿಮನ್ಯು ನೇತೃತ್ವದ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು. ನಾಗರಹೊಳೆ ವ್ಯಾಪ್ತಿಯ ಹುಣಸೂರಿನ ವೀರನಹೊಸಹಳ್ಳಿ ಅರಣ್ಯ ಪ್ರದೇಶದಲ್ಲಿ ದಸರಾ ಆನೆಗಳಿಗೆ ಸ್ವಾಗತ ನೀಡಿದ ಅರಣ್ಯಾಧಿಕಾರಿಗಳು, ದಸರಾಗೆ…

ಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ :ಸಿ.ಎಂ. ಬೊಮ್ಮಾಯಿ

ಬೆಂಗಳೂರು, ಸೆ, 12:ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನವಾಗಿ 120 ನೂತನ ಆಂಬ್ಯುಲೆನ್ಸ್ ಗಳ ನ್ನು ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಬೆಂಗಳೂರು ಆರೋಗ್ಯ ಸೇವೆಗಳು ಸಂಪೂರ್ಣವಾಗಿ ಒಂದು ಪ್ರಾಧಿಕಾರದಡಿಗೆ ಬರಬೇಕು. ಬರುವ ದಿನಗಳಲ್ಲಿ ಇದನ್ನು ಕಾರ್ಯಗತಗೊಳಿಸುವುದಾಗಿ ಮುಖ್ಯಮಂತ್ರಿ ಗಳು ತಿಳಿಸಿದರು. ಆರೋಗ್ಯಕ್ಕೆ ಜೀವನಾಡಿ ಆಂಬ್ಯುಲೆನ್ಸ್ , ಆರೋಗ್ಯ ಯಾವಾಗ ಕೆಡುತ್ತದೆ ಎಂದು ತಿಳಿಯೋದು ಕಷ್ಟ. ಆರೋಗ್ಯ ಕೈಕೊಟ್ಟ…

ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ:ಸಿ.ಎಂ. ಘೋಷಣೆ

ಬೆಂಗಳೂರು, ಸೆ, 11:ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಹುತಾತ್ಮರಿಗೆ ನಮನ ಸಲ್ಲಿಸಿ ಮಾತನಾಡುತ್ತಿದ್ದರು. ಪ್ರತಿ ವರ್ಷ ರಾಜ್ಯದಲ್ಲಿ ನಾಶವಾಗಿರುವ ಒಟ್ಟು ಹಸಿರು ಪ್ರದೇಶ ಎಷ್ಟು ಎಂಬುದನ್ನು ಅಂದಾಜಿಸುವ ವಿಧಾನ ಪ್ರಾರಂಭಿಸಬೇಕು. ಆಗ ಹಸಿರಿನ ಕೊರತೆ ಎಷ್ಟು ಎಂದೂ ಸಹ ಗೊತ್ತಾಗುತ್ತದೆ. ಪರಿಸರ ಆಯವ್ಯಯವನ್ನು ಪ್ರಾರಂಭಿಸಿದಾಗ ಮಾತ್ರ ಈ ನಷ್ಟವನ್ನು ತುಂಬಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಹೇಳಿದರು. ಅರಣ್ಯ ನಮಗಿಂತ ಮೊದಲು…

ಗಣಪತಿಯ ಆರಾಧನೆ ಭಾರತೀಯ ಸಮೃದ್ಧ ಸಂಸ್ಕೃತಿ :ಡಾ ಆರೂಢಭಾರತೀ ಸ್ವಾಮೀಜಿ

ಬೆಂಗಳೂರು, ಸೆ,11:”ಗಣಪತಿಯನ್ನು ಆರಾಧಿಸುವುದು ಸನಾತನ ಭಾರತದ ಸಮೃದ್ಧ ಸಂಸ್ಕೃತಿ” ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಗುರುವಾರ ಗಣೇಶ ಚೌತಿಯ ನಿಮಿತ್ತ ತಮ್ಮ ಆಶ್ರಮದಲ್ಲಿ ಮಕ್ಕಳು ಮಾಡಿದ ಗಣಪತಿಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ” ಪೆರಿಯಾರ್ ರಾಮಸ್ವಾಮಿಯಂಥವರು ಗಣೇಶನ ಕುರಿತು, ಆನೆಯ ತಲೆ ಜೋಡಿಸಿ ಜೀವ ಕೊಡಬಲ್ಲ ಶಿವನಿಗೆ, ತಾನೇ ಕತ್ತರಿಸಿದ ಗಣೇಶನ ತಲೆ ಜೋಡಿಸಿ ಜೀವ ಕೊಡಲಾಗಲಿಲ್ಲವೇ? ಎಂಬಿತ್ಯಾದಿ ಆಕ್ಷೇಪಿಸಿ, ವೇದ ಪುರಾಣಗಳೆಲ್ಲಾ ಮೋಸ, ಕಟ್ಟು…

ಪರಿಸರ ರಕ್ಷಣೆ ಮೂಲಕ ತೇಜಸ್ವಿ ನೆನಪಿಸಿಕೊಳ್ಳಬೇಕು; ಸಿದ್ದರಾಮಯ್ಯ

ಬೆಂಗಳೂರು, ಸೆ,08:ಪೂರ್ಣ ಚಂದ್ರ ತೇಜಸ್ವಿ ಒಬ್ಬ ಮಾನವತಾವಾದಿ ಅಲ್ಲದೆ ಪರಿಸರವಾದಿಯೂ ಕೂಡ ಆದರೆ ರಾಜಕಾರಣಿಗಳ ಬಗ್ಗೆ ಅವರಿಗೆ ವಿಶ್ವಾಸವಿರಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಅಂಗವಾಗಿ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದ್ದ ತೇಜಸ್ವಿ ಜೀವಲೋಕ ಹಾಗೂ ಕುರಿಂಜಿ ಲೋಕ ಸಾಕ್ಷ್ಯಚಿತ್ರ, ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯ ನನಗಿರಲಿಲ್ಲ. ವಾರಕ್ಕೊಮ್ಮೆ ಮೈಸೂರಿಗೆ ಬರುತ್ತಿದ್ದರು, ಮೈಸೂರಿನಲ್ಲಿ ಕೆ. ರಾಮದಾಸ್ ಎನ್ನುವವರು ತೇಜಸ್ವಿಯವರ ಆಪ್ತ ಸ್ನೇಹಿತರಾಗಿದ್ದರು. ಇವರು…

ರಾಷ್ಟ್ರ ನಿರ್ಮಾಣಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ;  ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು,ಸೆ,08: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆ ರಾಜ್ಯಾದ್ಯಂತ ಬಿಡುವಿಲ್ಲದ ಕಾರ್ಯಕ್ರಮ, ವಿಚಾರ ಸಂಕಿರಣ, ಚರ್ಚೆ, ಸಂವಾದದಲ್ಲಿ ಪಾಲ್ಗೊಳ್ಳುತ್ತಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಬೆಂಗಳೂರಿನಲ್ಲಿ ಎರಡು ಪ್ರಮುಖ ಸಭೆಗಳಲ್ಲಿ ಪಾಲ್ಗೊಂಡು ಶಿಕ್ಷಣ ನೀತಿ ಜಾರಿ ಬಗ್ಗೆ ಚರ್ಚಿಸಿದರು. ನಗರದ ಟಿ.ಜಾನ್ ಕಾಲೇಜು ಹಾಗೂ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಚಿವರು; ಮುಖ್ಯವಾಗಿ ಶಿಕ್ಷಣ ತಜ್ಞರು, ಅಧ್ಯಾಪಕರು, ವಿದ್ಯಾರ್ಥಿಗಳ ಜತೆ ಸಂವಾದ, ಚರ್ಚೆ ನಡೆಸಿದರು. ಶಿಕ್ಷಣ ನೀತಿ…

ರಾಜ್ಯದಲ್ಲಿ ಮಹಿಳಾ‌ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ;ಸಿದ್ದರಾಮಯ್ಯ ಕಳವಳ

ಬೆಂಗಳೂರು,ಸೆ,06:ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವುದು ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಲು ಕೈಗೊಂಡಿರುವ ತೀರ್ಮಾನ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ನೊಂದ…

೫ದಿನಗಳ ಕಾಲ ಗಣೇಶೋತ್ಸವಕ್ಕೆ ಷರತ್ತುಬದ್ದ ಅನುಮತಿ

ಬೆಂಗಳೂರು: ಹಲವು ಒತ್ತಡಗಳ ನಡುವೆಯೇ ರಾಜ್ಯದಲ್ಲಿ ೫ ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.…

ಇಂದಿನಿಂದ6ರಿಂದ8ನೇತರಗತಿ ಶಾಲೆಗಳು ಆರಂಭ

ಬೆಂಗಳೂರು,ಸೆ,06:  ಇಂದಿನಿಂದ 6ರಿಂದ8ನೇತರಗತಿ ವರೆಗೆ ಶಾಲೆಗಳು ಆರಂಭವಾಗಲಿವೆ. ಕೋವಿಡ್‌ ಮುನ್ನೆಚ್ಚರಿಕೆ ಕ್ರಮ ವಹಿಸಿಕೊಂಡು, ಎಸ್‌ಒಪಿ  ಪಾಲಿಸಿ ತರಗತಿಗಳನ್ನು ಆರಂಭಿಸುವಂತೆ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಪ್ರತಿಕ್ರಿಯಿಸಿ, ‘ಶಾಲೆ ಆರಂಭಿಸುವ ಬಗ್ಗೆ ಪೋಷಕರ ಸಭೆ ನಡೆಸಿದ್ದೇವೆ. ಆದರೆ, ಹೆಚ್ಚಿನ ಪೋಷಕರು ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಮುಂದುವರಿಸುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ’ ಎಂದರು. ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗುತ್ತಿರುವ ಕಾರಣ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್…

ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಸಿ ಎಂ

ಬೆಂಗಳೂರು, ಸೆ, 03:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 60 ವರ್ಷದ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಇಂದು ನಿಗಮವು ಸಂಕಷ್ಟದಲ್ಲಿದೆ. ಆದರೆ ಸಮಸ್ಯೆಯನ್ನು ಬೆಳೆಯಲು ಬಿಡದೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದಾಯೋತ್ಪನ್ನ ಮಾದರಿಯಿದ್ದರೂ, ನಿಗಮ ನಷ್ಟದಲ್ಲಿರಲು ಕಾರಣಗಳನ್ನು ವಿಶ್ಲೇಷಿಸುವುದರೊಂದಿಗೆ,…

ದೇಶ ವಿರೋಧಿ ಚಟುವಟಿಕೆ ಮೇಲೆ ನಿಗಾ: ಬೊಮ್ಮಾಯಿ‌

ಹುಬ್ಬಳ್ಳಿ,ಸೆ,01:ದೇಶವಿರೋಧಿ ಚಟುವಟಿಕೆ ಕುರಿತು ರಾಜ್ಯ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ. ಎನ್ ಐ ಎ ಜೊತೆ ನಿಕಟ ಸಂಪರ್ಕದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇದರ ಆಧಾರದಲ್ಲಿಯೇ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಹಲವರನ್ನು ಎನ್ ಐ ಎ ಬಂಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.…

ಸಂಪುಟ ಸಹೋದ್ಯೋಗಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ

ತಡಸ,ಸೆ,01:ತಮ್ಮ ಸಚಿವ ಸಂಪುಟದಲ್ಲಿನ ಸಹೋದ್ಯೋಗಿಗಳ ಕಾರ್ಯಕ್ಷಮತೆ ದಕ್ಷತೆ, ಪ್ರತಿಭೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಮೆಚ್ಚುಗೆಯ ಮಾತುಗಳನ್ನಾಡಿದರು. .. ಬುಧವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗಳಿಗೆ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ಅವರು ತಡಸ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು. ನನ್ನ ಸಚಿವ ಸಂಪುಟದಲ್ಲಿರು ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು…

ವಿಕಲಾಂಗ ಭಾಗ್ಯ ಯೋಜನೆಗೆ ಆಗ್ರಹ

meet ಬೆಂಗಳೂರು,ಆ,30:ಸಂಕಷ್ಟದಲ್ಲಿರುವ ಕಿವಿ ಕಣ್ಣು ಕಾಲು ಇಲ್ಲದ ವಿಕಲಾಂಗರಿಗೆ ಶ್ರವಣ ಸಾಧನ, ವ್ಹೀಲ್ ಚೇರ್ ಮೊದಲಾದವುಗಳನ್ನು ಉಚಿತವಾಗಿ ವಿತರಿಸುವ ವಿಕಲಾಂಗ ಭಾಗ್ಯ ಯೋಜನೆಯನ್ನು ಸರ್ಕಾರವು ಜಾರಿಗೆ ತರಬೇಕೆಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಆಗ್ರಹಿಸಿದರು. ಅವರು ಭಾನುವಾರ ಕೆಂಗೇರಿಯಲ್ಲಿ, ವಂಡರಿಂಗ್ ಟು ದಿ ಲೈಟ್ ಫೌಂಡೇಶನ್ ನೀಡಿದ ಶ್ರವಣ ಸಾಧನಗಳನ್ನು ವಿಕಲಾಂಗ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು.” ಪಂಚ ಜ್ಞಾನೇಂದ್ರಿಯಗಳಲ್ಲಿ ಕಿವಿಯು ಒಂದಾಗಿದ್ದು, ಅದು ಕೇಳದಿದ್ದಲ್ಲಿ ಬಾಳು ಶೂನ್ಯ ಎನಿಸುತ್ತದೆ. ಶ್ರವಣ…

ಮೈಸೂರು ಐವರು ಅತ್ಯಾಚಾರ ಆರೋಪಿಗಳ ಬಂಧನ

ಬೆಂಗಳೂರು, ಆ,೨೮: ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿನಡೆದಿದ್ದ, ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ತಮಿಳುನಾಡಿನಲ್ಲಿಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಘಟನೆ ನಡೆದ ಐದು ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಘಟಮಾ ಸ್ಥಳದಲ್ಲಿ ತಮಿಳುನಾಡು ಬಸ್‌ಟಿಕೆಟ್ ದೊರೆತ ಹಿನ್ನೆಯಲ್ಲಿ ಅದೇ ಜಾಡು ಹಿಡಿದು ತನಿಖಾ ತಂಡ ಈ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದರೆ, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು.…

ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಚಾಲನೆ

ಬೆಂಗಳೂರು, ಆ,27:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದಲ್ಲಿ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಚಾಲನೆ ನೀಡಿದರು. ಸ್ವಾತಂತ್ರ್ಯ ಬಂದ ನಂತರ ಅಸಂಘಟಿತ ಕಾರ್ಮಿಕರ ನೋಂದಣಿ ಮೊದಲ ಬಾರಿ ನಡೆಯುತ್ತಿದೆ. ಅವರನ್ನು ಗುರುತಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಜೀವನದ ಭದ್ರತೆ, ಆರೋಗ್ಯ, ಶಿಕ್ಷಣ ಮೊದಲಾದ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಅವರಿಗೆ ಜೀವನ ಭದ್ರತೆಯೊಂದಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ದೊರೆಯುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಆಶಿಸಿದರು. ಕೂಲಿ ಕಾರ್ಮಿಕ ಇರಲಿ, ರೈತ ಕಾರ್ಮಿಕ ಇರಲಿ,…

ಪತ್ರಕರ್ತ, ಸಂಘಟನಾಕಾರ ಗುಡಿಹಳ್ಳಿ ಸ್ಮರಣೆ

ಬೆಂಗಳೂರು,ಆ,27: ಬಹುಮುಖ ಪ್ರತಿಭೆಯ ಗುಡಿಹಳ್ಳಿ ನಾಗರಾಜ ಅವರು ಪತ್ರಕರ್ತರಾಗಿ, ಬಂಡಾಯ ಸಾಹಿತ್ಯ ಸಂಘಟನೆ ಸಂಚಾಲಕರಾಗಿ, ರಂಗಕರ್ಮಿಯಾಗಿ, ಪತ್ರಕರ್ತರ ಸಂಘಟನೆಗೂ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಹೇಳಿದರು. ಬೆಂಗಳೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು. ಗುಡಿಹಳ್ಳಿ ಅವರು ಪತ್ರಕರ್ತರಾಗಿ ರಂಗಭೂಮಿ ಬಗ್ಗೆ ಆಸಕ್ತಿ ಹೊಂದಿ ಅನೇಕ ಕಲಾವಿದರನ್ನು ಬೆಳಕಿಗೆ ತಂದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ತಮ್ಮ…

ರಸ್ತೆ ಸಂಪರ್ಕದಲ್ಲಿ ಕರ್ನಾಟಕ ಮಾದರಿ: ಬಿಹಾರ ಸಚಿವರ ಪ್ರಶಂಸೆ

ಬೆಂಗಳೂರು, ಆ,27:ಕರ್ನಾಟಕವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಅಭಿವೃದ್ಧಿಗೆ ಇಲ್ಲಿಯ ಸುಸಜ್ಜಿತ ಹೆದ್ದಾರಿಗಳು ಮತ್ತು ಹೆಚ್ಚಿನ ಮೂಲಸೌಲಭ್ಯಗಳು ಕಾರಣ ಎಂದು ಬಿಹಾರದ ರಸ್ತೆ ನಿರ್ಮಾಣ ಇಲಾಖೆಯ ಸಚಿವರಾದ  ನಿತಿನ್ ನಬಿನ್ ಅವರು ಪ್ರಶಂಸಿಸಿದರು. ವಿಕಾಸಸೌಧದಲ್ಲಿ ಇಂದು ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಕೈಗೊಳ್ಳುತ್ತಿರುವ ಹೆದ್ದಾರಿ ಮತ್ತು ರಸ್ತೆ ನಿರ್ಮಾಣಗಳ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ಪಡೆದುಕೊಂಡ ಬಳಿಕ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಕರ್ನಾಟಕದಲ್ಲಿ ಮೂಲೆಮೂಲೆಗಳಿಗೂ ಅಳವಡಿಸಿರುವ ರಸ್ತೆ ಸಂಪರ್ಕವು ಇಡೀ ದೇಶದಲ್ಲೇ ಮಾದರಿಯಾಗಿದೆ. ಕರ್ನಾಟಕದ…

ರಾಜ್ಯದಲ್ಲಿ ಅತ್ಯಾಧುನಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಬೆಂಬಲ; ಬೊಮ್ಮಾಯಿ

ಬೆಂಗಳೂರು, ಆ, 27: ಉದ್ಯೋಗ ಸೃಜಿಸುವ ಆಭರಣ ಉದ್ದಿಮೆ ಕೌಶಲ್ಯವಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಆಧುನಿಕ‌ ತಂತ್ರಜ್ಞಾನದಿಂದ ಆಭರಣ ಉತ್ಪಾದನೆಗೆ ಅನುಕೂಲವಾಗುವಂಥ ಅತ್ಯಾಧುನಿಕ ಜುವೆಲರಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಇರುವ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಜುವೆಲ್ಲರಿ ಸಂಸ್ಥೆಗೆ ಸಲಹೆ ನೀಡಿದರು.‌ ಇಂದು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸೌತ್ ಜ್ಯುವೆಲ್ಲರಿ ಷೋ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಬ್ಯುಲಿಯನ್ ವಿನಿಮಯ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಭಾರತದ ಆಭರಣ ವ್ಯಾಪಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ಮಾಡಬೇಕಾದ ಸಂದರ್ಭವಿದೆ.…

ಕೃಷ್ಣಾ ಮೇಲ್ದಂಡೆ ವಿವಾದ ಸುಪ್ರೀಂಗೆ ಅರ್ಜಿಗೆ ನಿರ್ಧಾರ: ಬೊಮ್ಮಾಯಿ

ನವದೆಹಲಿ,ಆ,27: ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾವೇರಿ ನದಿ ಕಣಿವೆಯಲ್ಲಿ ತಮಿಳುನಾಡು ಸರ್ಕಾರ ಕೈಗೊಂಡಿರುವ ಯೋಜನೆಗಳ ಬಗ್ಗೆಯೂ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ತಮಿಳುನಾಡು ಸರ್ಕಾರವು ನದಿ ಜೋಡಣೆಗೆ ಮುಂದಾಗಿದೆ. ಆದರೆ, ಅದು ಕಾನೂನುಬಾಹಿರ. ಈ ಬಗ್ಗೆ ವಕೀಲರ ತಂಡದ ಜತೆಗೆ ಚರ್ಚಿಸಲಾಗಿದೆ. ಹಾಗೆಯೇ, ರಾಜ್ಯದ ಜಲವಿವಾದ ಪ್ರಕರಣಗಳ ಸಂಬಂಧ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.…

ವಿದ್ಯಾರ್ಥಿಮೇಲೆ ಅತ್ಯಾಚಾರವೆಸಗಿದ ಆರೋಪಿಗಳ ವಿರುದ್ದ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ: ಶಶಿಕಲಾ ಜೊಲ್ಲೆ

ಮೈಸೂರು,ಆ,26: ಮೈಸೂರಿನ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿರುವುದು ಖಂಡನೀಯವಾಗಿದ್ದು,ಸರ್ಕಾರ ಶೀಘ್ರ ಕ್ರಮ ಕೈಗೊಂಡು ಕಠಿಣಕ್ರಮ ಕೈಗೊಳ್ಳಲಿದೆ  ಎಂದು ಮುಜರಾಯಿ ಸಚಿವೆ ಶಶಿಕಲ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಮೇಲೆ ನಡೆದ ಘಟನಾ ಸ್ಥಳಕ್ಕೆ ಭೇಟಿ ನೀಡಿದ  ನಂತರ ಸುದ್ದಿಗಾರರೊಂದಿಗೆ ಮಾತನಾಡಿ,ಸಂತ್ರಸ್ಥ ಯುವತಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆ.ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ರೀತಿಯ ದುಷ್ಕೃತ್ಯ ನಡೆದಿರುವುದು ನೋವಿನ ಸಂಗತಿ. ನಾನು ಒಬ್ಬ ಮಹಿಳೆಯಾಗಿ ಸರ್ಕಾರದಲ್ಲಿ ಮಹಿಳಾ ಸಚಿವೆಯಾಗಿ ಒಂದು ಹೆಣ್ಣಿನ ನೋವು ಒಬ್ಬಳು ಹೆಣ್ಣಾಗಿ ನನಗೆ…

1 32 33 34 35 36 49
error: Content is protected !!