ರಾಜ್ಯ
ಆನೇಕಲ್ ;ಬೆಡ್ ಬುಕಿಂಗ್, ಮಿನಿ ವಾರ್ ರೂಂ ಸೇವೆಗಳಿಗೆ ಚಾಲನೆ
ಪರಶಿವ ಧನಗೂರು. ಬೆಂಗಳೂರು,ಮೇ17:ಎರೆಡನೇ ಅಲೆಯ ರೂಪಾಂತರಿ ಡಬಲ್ ಮ್ಯುಟೆಂಟ್ ವೈರಸ್ ಆನೇಕಲ್ ತಾಲೂಕಿಗೆ ವಿಶೇಷ ಶಾಪವಾಗಿ ಪರಿಣಮಿಸಿದ್ದು ಈವರೆಗೆ ಬೆಡ್ ಬುಕಿಂಗ್, ಆಮ್ಲಜನಕ ಕೊರತೆ ವೆಂಟಿಲೇಷನ್ ಆಸ್ಪತ್ರೆಗಳ ಅಲಭ್ಯತೆ ಸೋಂಕಿತರನ್ನು ಸಾಕಷ್ಟು ಕಾಡಿತ್ತು. ಬೆಂಗಳೂರಿನ ಬೊಮ್ಮನಹಳ್ಳಿ ವಾರ್ ರೂಂ ಅಕ್ಷರಶಃ ಆನೇಕಲ್ ಜನತೆಗೆ ಮರೀಚಿಕೆಯಾಗಿತ್ತು. ಸಾಕಷ್ಟು ಸಾವುಗಳನ್ನು ಕಂಡ ಜನತೆಗೆ ಬೆಂಗಳೂರು ನಗರ ಜಿಲ್ಲಾದಿಕಾರಿಗಳು ರಾಜ್ಯ ಸರ್ಕಾರದ ಆದೇಶದಂತೆ ಆನೇಕಲ್ ವಿಧಾನ ಸಭಾ ಕ್ಷೇತ್ರದಲ್ಲಿಯೇ ಕೋವಿಡ್-19 ಚಿಕಿತ್ಸೆಯ ಸರಧಿ ತೀರ್ಮಾನ ಕೇಂದ್ರ (ಟ್ರೈಯಾಗಿಂಗ್ ಸೆಂಟರ್) ವನ್ನು ಚಾಲನೆಗೊಳಿಸಿದರು.…