Browsing: ರಾಜ್ಯ

ರಾಜ್ಯ

ಅರಣ್ಯ ರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಹಿರಿದು: ಈಶ್ವರ ಖಂಡ್ರೆ

ಹೆಮ್ಮಡಗಾ (ಖಾನಾಪುರ), ಮೇ 17-ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಹಿರಿದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ, ಖಾನಾಪುರ ತಾಲೂಕು ಹೆಮ್ಮಡಗಾದಲ್ಲಿಂದು ಭೀಮಗಢ ಅರಣ್ಯ ವಲಯದ ತಳೇವಾಡಿ (ಗೌವಳಿ) ಗ್ರಾಮದಿಂದ ಸ್ವಯಂ ಪ್ರೇರಿತವಾಗಿ ಕಾಡಿನಿಂದ ಹೊರಗೆ ಬರಲು ಇಚ್ಛಿಸಿರುವ 27 ಕುಟುಂಬಗಳಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಯ ಜೊತೆಗೆ ಅರಣ್ಯವಾಸಿಗಳೂ ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು. ಮಾನವನ ಹಸ್ತಕ್ಷೇಪ ಇಲ್ಲದಿದ್ದರೆ ಅರಣ್ಯ…

ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಡಿ.ಕೆ. ಸುರೇಶ್

ಬೆಂಗಳೂರು, ಮೇ 17-“ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಬಮೂಲ್ ಕಚೇರಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಕೆ ನಂತರ ಹಾಗೂ ಅದಕ್ಕೂ ಮುನ್ನ ತಮ್ಮ ಸದಾಶಿವನಗರ ನಿವಾಸದಲ್ಲಿ ಡಿ.ಕೆ. ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. “ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಚುನಾವಣೆಯಲ್ಲಿ ಎಲ್ಲಾ ಹಿರಿಯ ನಾಯಕರು, ಶಾಸಕರು ಹಾಗೂ ಹಾಲು ಉತ್ಪಾದಕರ ಸಲಹೆ ಹಾಗೂ ಪಕ್ಷದ…

ಆಶಾಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು, ಮೇ ೧೭-ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಶಾಕಾರ್ಯಕರ್ತೆಯರಿಗೆ ನೀಡಲಾಗಿದ್ದ ಭರವಸೆಯನ್ನು ಗೌರವಧನವನ್ನು ಹೆಚ್ಚಳ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ೨೦೨೫-೨೬ ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ ೧೪೮ ರಲ್ಲಿ ” ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು ೧೦೦೦ ರೂ. ಹೆಚ್ಚಿಸಲಾಗುವುದು ಎಂದು ಘೋಷಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತದಲ್ಲಿ ಆಶಾ…

ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ: ಸಿ.ಟಿ.ರವಿ

ಬೆಂಗಳೂರು,ಮೇ,16 ‘ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ ಕಾಣಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕೆಲವು ನಾಯಕರು, ಸಚಿವರು ‘ಆಪರೇಷನ್ ಸಿಂದೂರ’ದ ಕುರಿತು ಅಪಸ್ವರ ಎತ್ತಿದ್ದಾರೆ. ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಭಯೋತ್ಪಾದನೆಯನ್ನು ಕಿತ್ತು ಹಾಕಬೇಕು. ಯಾಕೆ ಯುದ್ಧ ನಿಲ್ಲಿಸಿದಿರಿ ಎಂದು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ನಾಲ್ಕು ವಿಮಾನ ಹಾರಿ ಹೋಗಿದೆ;…

ಬೆಂಬಲ ಬೆಲೆಯಲ್ಲಿ ಶೀಘ್ರ ಹಿಂಗಾರು ಸೂರ್ಯಕಾಂತಿ ಖರೀದಿ: ಶಿವಾನಂದ ಪಾಟೀಲ

ಬೆಂಗಳೂರು,ಮೇ,16-ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಎಫ್‌ಎಕ್ಯು ಗುಣಮಟ್ಟದ ಸೂರ್ಯಕಾಂತಿಗೆ ಪ್ರತಿ ಕ್ವಿಂಟಾಲ್‌ಗೆ 7,280 ರೂ. ನಿಗದಿಪಡಿಸಲಾಗಿದ್ದು, ಬಾಗಲಕೋಟ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಕೇಂದ್ರ ಸರ್ಕಾರ ನಾಫೆಡ್‌ ಹಾಗೂ ಎನ್‌ ಸಿ ಸಿ ಎಫ್‌…

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು, ಮೇ 16,-“ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ…

ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ : ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ- ಸಿಎಂ

ವಿಜಯನಗರ(ಹೊಸಪೇಟೆ) ಮೇ 16- ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಕೆಲಸವನ್ನು ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿಗಳ ಆದೇಶ ಹೊರತಾಗಿಯೂ , ಕೆಲಸ ಮುಂದುವರೆದಿರುವ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ…

ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿಕೆಶಿ

ರಾಮನಗರ, ಮೇ 14-“ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಬಾಲಕಿಯ ಶವ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಬುಧವಾರ ಸಾಂತ್ವನ ಹೇಳಿ, ಜಿಲ್ಲಾಡಳಿತ ಪರವಾಗಿ ₹4,12,500 ಹಾಗೂ ಪಂಚಾಯ್ತಿ ವತಿಯಿಂದ ₹50,000 ಪರಿಹಾರ…

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ : ಇಂದಿನಿಂದ ಜಾರಿ

ಬೆಂಗಳೂರು,ಮೇ 15- ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. *ಮಳೆ ಅನಾಹುತಕ್ಕೆ…

ಭ್ರಷ್ಟರಾಜ್ಯದ ವಿವಿದೆಡೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು, ಮೇ,15-ಭ್ರಷ್ಟ ಅಧಿಕಾರಿಗಳ ವಿರುದ್ಧ ಬೇಟೆ ಮುಂದುವರಿಸಿರುವ ಲೋಕಾಯುಕ್ತರು ಇಂದು ಬೆಳಂಬೆಳಿಗ್ಗೆರಾಜ್ಯದ ವಿವಿದೆಡೆ ಭ್ರಷ್ಟ ಅಧಿಕಾರಿಗಳ ಮನೆ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಕಲುಬುರುಗಿ,ತುಮಕೂರು, ಯಾದಗಿರಿ ಸೇರಿದಂತೆ ವಿವಿದೆಡೆ ದಾಳಿ ನಡೆಸಿದ್ದು,ನಗ- ನಗದು,ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿ ತಹಶೀಲ್ದಾರ್ ಮನೆ ಹಾಗೂ ಯಾದಗಿರಿ ಜಿಲ್ಲೆಯ ಲೋಕಾಯುಕ್ತ ಶಹಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ,ತುಮಕೂರಿನಲ್ಲಿ ನಿರ್ಮಿತ ಕೇಂದ್ರದ ಎಂಡಿ ರಾಜಶೇಖರ್ ಹಾಗೂ ಸಹೋದರರ ಮನೆ ಮೇಲೆ ಕೂಡ ಅಧಿಕಾರಿಗಳು ದಾಳಿ ನಡಸಿದ್ದಾರೆ.…

ಜವಾಬ್ದಾರಿಯಿಂದ ಕೆಲಸ ಮಾಡಿ: ಅಧಿಕಾರಿಗಳಿಗೆ ಎನ್ .ಚಲುವರಾಯಸ್ವಾಮಿ ಸೂಚನೆ

ಧಾರವಾಡ, ಮೇ, 14-ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಹಾಗೂ ಜವಾಬ್ದಾರಿಯುತವಾಗಿ ಕೆಲಸಮಾಡಿ ಎಂದು ಕೃಷಿ ಸಚಿವರು ಸೂಚಿಸಿದ್ದಾರೆ. ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗ ಬಗ್ಗಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೆಳಗಾವಿ ವಿಭಾಗದ 7 ಜಿಲ್ಲೆಗಳ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸೂಚನೆ ನೀಡಿದರು ಹೈಟೆಕ್ ಹಾರ್ವೆಸ್ಟ್‌ ಹಬ್ ,ಕೃಷಿ ಭಾಗ್ಯ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ…

ನರೇಗ ಯೋಜನೆಯಲ್ಲಿ ಅಕ್ರಮವೆಸಗಿದವರ ವಿರುದ್ದ ಕ್ರಮಕ್ಕೆ ಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು ಮೇ 14-ರಾಜ್ಯದಲ್ಲಿ ನರೇಗಾ ಯೋಜನೆ ಮಾಡಿ ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಖ್ಯಮಂತ್ರಿ  ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ  ಈ ಸೂಚನೆ ನೀಡಿದರು. ಹಲವಾರು ಯೋಜನೆಗಳು ಜಾರಿಯಲ್ಲಿವೆ  ಅದರಂತೆ ನರೇಗ ಯೋಜನೆಯ ಮುಖಾಂತರ ಹಲವರು ಅಕ್ರಮ ಎಸಗಿದ್ದಾರೆ ಅಂತವರ ವಿರುದ್ಶ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ…

ಆನೆ ಸೆರೆ, ಪಳಗಿಸುವುದರಲ್ಲಿ ರಾಜ್ಯ ಮಂಚೂಣಿ- ಈಶ್ವರ ಬಿ ಖಂಡ್ರೆ

ಬಿಕ್ಕೋಡು, (ಬೇಲೂರು), ಮೇ 13-ಆನೆ ಸೆರೆ ಹಿಡಿಯುವುದು, ಪಳಗಿಸುವುದರಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತಾತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೇಲೂರು ತಾಲೂಕು ಬಿಕ್ಕೋಡಿನಲ್ಲಿಂದು ಆನೆ ಕಾರ್ಯಪಡೆಯ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತಂದಿರುವ ಹಿನ್ನೆಲೆಯಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆನೆಗಳ ಸಂಖ್ಯೆಯಲ್ಲಿ ರಾಜ್ಯ ನಂ.1 ಆಗಿದ್ದು, 6395 ಆನೆಗಳಿವೆ. ಹೀಗಾಗಿ ಮಾನವ-ವನ್ಯಜೀವಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ…

ಚಿತ್ತಾಪುರ ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ದಿಗೆ ರೂ 150 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ದ:  ಪ್ರಿಯಾಂಕ್ ಖರ್ಗೆ

ಕಲಬುರಯ,ಮೇ,13-ಚಿತ್ತಾಪುರ ಕ್ಷೇತ್ರದ ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ದಿಗಾಗಿ ರೂ 150 ಕೋಟಿ ವೆಚ್ಚದ ಕ್ರಿಯಾಯೋಜನೆ ಈಗಾಗಲೇ ಸಿದ್ದವಾಗಿದೆ. ಇದರ ಅಡಿಯಲ್ಲಿ 87 ಹಳ್ಳಿಗಳಿಗೆ ಅಗತ್ಯ ಅನುದಾನ ಲಭ್ಯವಾಗಲಿದ್ದು ಮುಂದಿನ ಹದಿನೈದು ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅಮೃತ್ ಯೋಜನೆಯಡಿಯಲ್ಲಿ ಚಿತ್ತಾಪುರ ಹಾಗೂ ವಾಡಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅಡಿಗಲ್ಲು, ಚಿತ್ತಾಪುರ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾಂಗಣ…

ಕೊಟ್ಟ ಮಾತಿನಂತೆ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಂಭ್ರಮಾಚರಣೆ: ಡಿ.ಕೆ. ಶಿ

ಬೆಂಗಳೂರು, ಮೇ 12-“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದ್ದು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ 1 ಲಕ್ಷ ಪಟ್ಟಾ ಖಾತೆ ಹಂಚಿಕೆ ಮಾಡಲಾಗುತ್ತಿದೆ. ಇದು ಕೇವಲ ಸರ್ಕಾರದ ಸಂಭ್ರಮಾಚರಣೆ ಮಾತ್ರವಲ್ಲ. ಇಡೀ ರಾಜ್ಯದ ಜನ ಸಂಭ್ರಮಿಸುವ ಕ್ಷಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು  ಸೋಮವಾರ ಉತ್ತರಿಸಿದರು, ಎರಡು ವರ್ಷಗಳ ಸಂಭ್ರಮಾಚರಣೆ ಬಗ್ಗೆ ಕೇಳಿದಾಗ, “ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ ಮಾಡಿದ್ದೆವು.…

ಕದನ ವಿರಾಮ- ಕೇಂದ್ರ ತಗೆದುಕೊಳ್ಳುವ ನಿರ್ಧಾರಕ್ಕೆ ಬದ್ದ- ಸಿಎಂ

ಮೈಸೂರು, ಮೇ,12- ಭಾರತ- ಪಾಕಿಸ್ತಾನ ನಡುವೆ ನಡೆಯುವ ಕದನ ವಿರಾಮ ಕುರಿತಂತೆ ತಗೆದುಕೊಳ್ಲುವ ಯಾಬುದೇ ತೀರ್ಮಾನಕ್ಕೂ ನಾವು ಬದ್ದರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎರಡು ದೇಶಗಳ ಡಿಜಿಎಂಗಳು ಇಂದು ಸಭೆ ಮಾಡುತ್ತಿದ್ದಾರೆ. ಸಭೆಯಲ್ಲಿ ಏನು ತೀರ್ಮಾನ ಮಾಡುತ್ತಾರೆ ಮಾಡಲಿ. ಕೇಂದ್ರದ ತೀರ್ಮಾನಕ್ಕೆ ನಾವು ಬದ್ದ ಎಂದಿದ್ದಾರೆ. ಕದನ ವಿರಾಮ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ…

ರಾಜ್ಯದಲ್ಲಿ ಕಟ್ಟೆಚ್ಚರ- ಸಿಎಂ ನೇತೃತ್ವದಲ್ಲಿ ನಡೆದ ಸಭೆ

ಬೆಂಗಳೂರು, ಮೇ,10-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು , ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆಯುತ್ತಿದ್ದಾರೆ. ಗೃಹ ಸಚಿವರಾದ. ಡಾ ಜಿ ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ರೇವಣ್ಣ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ…

ಟ್ಯಾಂಕರ್ ನೀರಿನ ಮಾಫಿಯಾ ತಡೆಯಲು, ಸಂಚಾರಿ ಕಾವೇರಿ ಯೋಜನೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 09-ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ. ಇದನ್ನು ತಪ್ಪಿಸಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರು ಪೂರೈಸಲು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ‘ಸರ್ವರಿಗೂ ಸಂಚಾರಿ ಕಾವೇರಿ’, ‘ಮನೆ ಬಾಗಿಲಿಗೆ ಸರಳ ಕಾವೇರಿ’ ಯೋಜನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು. “ಸುಮಾರು 3 ಸಾವಿರ ಕೊಳವೆ…

ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ 

ಬೆಂಗಳೂರು, ಮೇ 9-ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಬಗ್ಗೆ…

ಗಡಿಯೊಳಗೆ ನುಸುಳಲೆತ್ನಿಸಿದ 5 ಉಗ್ರರ ಹೊಡೆದುರುಳಿಸಿದ ಬಿಎಸ್ ಎಫ್ ಯೋದರು

ನವದೆಹಲಿ,ಮೇ,09- ಆಪರೇಷನ್ ಸಿಂಧೂರ ನಂತರ ಪಾಕಿಸ್ತಾನ ಭಾರತದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,ಭಾರತದ ಗಡಿ ಪ್ರವೇಶ ಮಾಡಲೆತ್ನಿಸಿದ ಪಾಕಿಸ್ತಾನ ಏಳು ಉಗ್ರರನ್ನು ಬಿಎಸ್ಎಫ್ ಯೋದರು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರ ಬಹುದೊಡ್ಡ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ. ಮೂಲಗಳ ಪ್ರಕಾರ ಮೇ 8ರ ರಾತ್ರಿ 11 ಗಂಟೆ ಸುಮಾರಿಗೆ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ ಎಂದು…

1 2 3 4 5 6 43
error: Content is protected !!