ರಾಜ್ಯ
ಇನ್ನು 3 ವರ್ಷ ಹೋರಾಟದ ಪರ್ವ: ವಿಜಯೇಂದ್ರ
ಕಲಬುರ್ಗಿ,ಏ,18- ಇನ್ನು 3 ವರ್ಷಗಳ ಕಾಲ ಹೋರಾಟದ ಪರ್ವ ಎಂಬುದನ್ನು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ನೆನಪಿನಲ್ಲಿ ಇಟ್ಟುಕೊಳ್ಳಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಪೂರ್ವಕ ಮನವಿ ಮಾಡಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಿ ನಮ್ಮ ಕಾರ್ಯಕರ್ತರಿಗೆ ನೋವು, ಅವಮಾನ ಆಗುತ್ತದೋ, ಹಿಂದೂ ಕಾರ್ಯಕರ್ತರಿಗೆ ಅಪಮಾನ ಆದಾಗ ನೀವೆಲ್ಲರೂ ಒಗ್ಗಟ್ಟಿನಿಂದ, ಒಂದಾಗಿ ಹೋಗಿ ಅವರಿಗೆ ರಕ್ಷಣೆ ಕೊಡಬೇಕು ಎಂದು ಸೂಚಿಸಿದರು. ಕಾಂಗ್ರೆಸ್ಸಿನಲ್ಲಿ ರಾಜಕಾರಣ ಮಾಡಲು ಯಾವ…