Browsing: ರಾಷ್ಟ್ರೀಯ

ರಾಷ್ಟ್ರೀಯ

ದೆಹಲಿ ಕೋರ್ಟ ಆವರಣದಲ್ಲಿ ಗ್ಯಾಂಗ್ ವಾರ್; ಫೈರಿಂಗ್ ನಲ್ಲಿ ನಾಲ್ವರು ಸಾವು

ನವದೆಹಲಿ, ಸೆ,24: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುವ ವೇಳೆ ದುಷ್ಕರ್ಮಿಗಳು ನ್ಯಾಯಾಲಯದ ಒಳಗಡೆಯೇ ಗುಂಡಿನ ದಾಳಿ ನಡೆದಿದ್ದು ಪೈರಿಂಗ್ ನಲ್ಲಿ ನಾಲ್ವರ ಸಾವನ್ನಪ್ಪಿದ್ದಸರೆ. ದೆಹಲಿ ಕೋರ್ಟ ಆವರಣದಲ್ಲಿ ನಡೆದ ಈ ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಸಗಿತ್ತು. ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಎಂಬಾತನನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ರೂಂ ನಂಬರ್ 207ರಲ್ಲಿ ನ್ಯಾಯಾಧೀಶರ ಮುಂದೆ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ವಕೀಲರ ವೇಷದಲ್ಲಿ…

ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚಿರಂಜಿತ್ ಸಿಂಗ್ ಆಯ್ಕೆ

ಅಮೃತಸರ್, ಸೆ, 19: ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆಗೆ ಭಾನುವಾರ ನಡೆಸಿದ ಚರ್ಚೆಯಲ್ಲಿ ಬಹುಪಾಲು ಕಾಂಗ್ರೆಸ್ ಶಾಸಕರು ಇವರ ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಲಾಗಿತ್ತು. ಇದರ ಮಧ್ಯೆಯೂ ನಡೆದ ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿ ಹೆಸರನ್ನು ಅಂತಿಮಗೊಳಿಸಲಾಗಿದೆ. ನವದೆಹಲಿಯಲ್ಲಿ ಎಐಸಿಸಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಹಿರಿಯ ನಾಯಕಿ ಅಂಬಿಕಾ ಸೋನಿ ನೇತೃತ್ವದಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು. ಈ…

ವಿಚ್ಚೇದಿ ಪುತ್ರಿಗೆ ಅನುಕಂಪದದಾರಿತ ಉದ್ಯೋಗ ಇಲ್ಲ

ನವದೆಹಲಿ,ಸೆ,೧೪: ಸರ್ಕಾರಿ ನೌಕರರು ಮರಣ ಹೊಂದಿದ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅಂಥ ಸಂದರ್ಭದಲ್ಲಿ ಅವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆಕರ್ನಾಟಕಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆ ಸರ್ವೋಚ್ಛ ನ್ಯಾಯಾಲಯ ಈ ಅಂಶವನ್ನು ಸ್ಪಷ್ಟಪಡಿಸಿದೆ. ಮಂಡ್ಯ ಜಿಲ್ಲಾ ಖಜಾನೆಯಲ್ಲಿ ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಿ. ಪಿ. ಭಾಗ್ಯಮ್ಮ ಅವರ ಪುತ್ರಿ ವಿ. ಸೌಮ್ಯಶ್ರೀ ಅವರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನ…

ಗುಜರಾತ್‌ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಪ್ರಮಾಣವಚನ ಸ್ವೀಕಾರ

ಅಹಮದಾಬಾದ್,ಸೆ,೧೩: ಗುಜರಾತ್‌ನ ೧೭ನೇ ಮುಖ್ಯಮಂತ್ರಿಯಾಗಿ ನಿನ್ನೆ ಆಯ್ಕೆಯಾದ ಭೂಪೇಂದ್ರ ಪಟೇಲ್ (೫೯) ಇಂದು ಪ್ರಮಾಣ ವಚನ ಸ್ವೀಕರಿಸಿದರು. ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಅಹಮದಾಬಾದ್‌ನ ರಾಜಭವನದಲ್ಲಿ ಆಯೋಜಿಸಲಾಗಿತ್ತು. ರಾಜ್ಯಪಾಲ ಆಚಾರ್ಯ ದೇವವೃತ ಪ್ರತಿಜ್ಞಾ ವಿಧಿ ಬೋಧಿಸಿದರು. ಗೃಹ ಸಚಿವ ಅಮಿತ್ ಶಾ ಸೇರಿ ಹಲವು ಕೇಂದ್ರ ಸಚಿವರು, ಉಪಮುಖ್ಯಮಂತ್ರಿ ನಿತಿನ್ ಪಟೇಲ್, ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟg, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಗೋವಾ ಸಿಎಂ ಪ್ರಮೋದ್ ಸಾವಂತ್ ಮತ್ತಿತರ ಗಣ್ಯರು ಸಮಾರಂಭದಲ್ಲಿ…

ನ್ಯಾಯಮಂಡಳಿಗಳ ನೇಮಕ ವಿಳಂಭ ;ಕೆಂದ್ರದ ವಿರುದ್ಧ ಸುಪ್ರೀಂ ಅಕ್ರೋಶ

ನವದೆಹಲಿ,ಸೆ,೦೭: ಕೇಂದ್ರ ಸರ್ಕಾರದ ನ್ಯಾಯಮಂಡಳಿಗಳ ನೇಮಕದಲ್ಲಿ ಮಾಡುತ್ತಿರುವ ವಿಳಂಬವನ್ನು ಗಮನಿಸಿದರೆ ತಾಳ್ಮೆ ಕಳೆದುಕೊಳ್ಳುವಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ ಈ ಹಿಂದಿನ ತೀರ್ಪುಗಳನ್ನು ನಿರ್ಲಕ್ಷಿಸಿ, ನ್ಯಾಯಮಂಡಳಿ ಸುಧಾರಣೆ ಕಾಯ್ದೆ ೨೦೨೧ ಅನ್ನು ಅಂಗೀಕರಿಸಲಾಗಿದೆ. ಇದು ನ್ಯಾಯಾಲಯಕ್ಕೆ ತೀವ್ರ ಅಸಮಾಧಾನ ಉಂಟು ಮಾಡಿದೆ. ಸುಪ್ರೀಂ ಕೋರ್ಟ್‌ನ ತೀರ್ಪುಗಳಿಗೆ ಗೌರವ ನೀಡಲೇಬಾರದು ಎಂದು ಕೇಂದ್ರವು ಟೊಂಕ ಕಟ್ಟಿ ನಿಂತ ಹಾಗೆ ಇದೆ’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು ಹೇಳಿದೆ. ನ್ಯಾಯಮಂಡಳಿಗಳಿಗೆ…

ಕಾಶ್ಮೀರ ಕಣಿವೆಯಲ್ಲಿ ಗರಿಗೆದರಿದೆ ಉಗ್ರ ಚಟುವಟಿಕೆ!

Writing:ಪರಶಿವ ಧನಗೂರು ಕಾಶ್ಮೀರ ಕಣಿವೆಯಲ್ಲಿ ಗರಿಗೆದರಿದೆ ಉಗ್ರ ಚಟುವಟಿಕೆ! ಭಾರತದ ಮಿತ್ರ ರಾಷ್ಟ್ರವಾದ ಆಫ್ಘಾನಿಸ್ತಾನ ತಾಲಿಬಾನಿಗಳ ಕೈವಶವಾಗುತ್ತಿದ್ದಂತೆ ಇತ್ತ ನಮ್ಮ ಭಾರತದ ಕಾಶ್ಮೀರದ ಕಣಿವೆಯಲ್ಲಿ ಪ್ರತಿದಿನವೂ ಒಂದಿಲ್ಲೊಂದು ಸ್ಫೋಟ, ಉಗ್ರರ ದಾಳಿ ನಡೆಯುತ್ತಲೇ ಇದೆ! ಇದ್ದಕ್ಕಿದ್ದಂತೆ ಈ ಭಯೋತ್ಪಾದಕರು ಇಷ್ಟೊಂದು ಚಿಗಿತುಕೊಂಡಿದ್ದು ಹೇಗೆ? ಆಗಾಗ ಶತ್ರುಗಳ ಹುಟ್ಟಡಗಿಸಲು ಉರಿದಾಳಿ ನಡೆಸಿ ಉಗ್ರಗಾಮಿಗಳ ಸದ್ದಡಗಿಸುತಿದ್ದ ನಮ್ಮ ಭಾರತೀಯ ಮಿಲಿಟರಿ ಪಡೆಗಳ ಹದ್ದಿನ ಕಣ್ಣಿದ್ದರೂ ಕಾಶ್ಮೀರ ಕಣಿವೆಯಲ್ಲಿ ನಿತ್ಯ ಗುಂಡಿನಚಕಮಕಿ, ನುಸುಳುಕೋರರ ಬಂಧನದ ಸುದ್ಧಿಗೇನೂ ಕೊರತೆಯಿಲ್ಲ. ಕಳೆದೊಂದು ವರ್ಷದಲ್ಲಿ…

ಮತ್ತೇ ಅಡುಗೆ ಅನಿಲ ಬೆಲೆ ಏರಿಕೆ

ನವದೆಹಲಿ,ಸೆ,01: ಒಂದು ಕಡೆ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೆ ಇದೆ ಮತ್ತೊಂದು ಕಡೆ ಅಡುಗೆ ಅನಿಲ ಬೆಲೆ ಕೂಡ ಏರಿಕೆಯಾಗುತ್ತಿದೆ.ಕಳೆದ ಒಂದು ತಿಂಗಳಲ್ಲಿ ಎರಡು ಬಾರಿ ಏರಿಕೆ ಕಂಡಿದೆ. ಕೊರೋನಾ, ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿ ನರಳುತ್ತಿರುವ ಜನರಿಗೆ ಅಡುಗೆ ಅನಿಲ ಬೆಲೆ ಏರಿಕೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ ಪಿಜಿ) ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ ಮಾಡಲಾಗಿದೆ. ಪ್ರತಿ ಸಿಲಿಂಡರ್ ಗೆ 25 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. 14.2…

ಅಫ್ಗನ್‌ನಿಂದ ಭಾರತಕ್ಕೆ ಬಂದಿಳಿದ ೧೫೦ ಮಂದಿ

ನವದೆಹಲಿ,ಆ,೧೯: ಅಫ್ಗಾನಿಸ್ತಾನದಲ್ಲಿ ಸಂಘರ್ಷಭರಿತ ಪರಿಸ್ಥಿತಿಯು ಮುಂದುವರಿದಿದೆ. ಅದರ ನಡುವೆಯೇ ಭಾರತದ ರಾಯಭಾರಿ ಮತ್ತು ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ಮಂಗಳವಾರ ತೆರವು ಮಾಡಲಾಗಿದೆ. ದೇಶವು ತಾಲಿಬಾನ್ ಸಂಘಟನೆಯ ವಶವಾದ ಬಳಿಕ ಅಫ್ಗಾನಿಸ್ತಾನ ರಾಜಧಾನಿಯಲ್ಲಿ ಭೀತಿ ಮತ್ತು ಅನಿಶ್ಚಿತ ಸ್ಥಿತಿ ಇದೆ. ಅದರ ನಡುವೆಯೇ ಕಾರ್ಯಾಚರಣೆ ನಡೆಸಲಾಗಿದೆ ಭಾರತೀಯ ವಾಯುಪಡೆಯ ಗ್ಲೋಬ್‌ಮಾಸ್ಟರ್ ಸಿ-೧೭ ವಿಮಾನವು ಸುಮಾರು ೧೫೦ ಜನರೊಂದಿಗೆ ಗುಜರಾತ್‌ನ ಜಾಮ್‌ನಗರಕ್ಕೆ ಮಂಗಳವಾರ ಬೆಳಿಗ್ಗೆ ಬಂದಿಳಿಯಿತು. ಇಂಧನ ಮರಪೂರಣದ ಬಳಿಕ, ಸಂಜೆ ಐದು ಗಂಟೆ ಸುಮಾರಿಗೆ ವಿಮಾನವು ದೆಹಲಿ…

೨೦ರವರೆಗೂ ಅಧಿಕ ಮಳೆ ಸೂಚನೆ

ನವದೆಹಲಿ, ಆ, 17: ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯವಾಗಿ ತೆಲಂಗಾಣದಲ್ಲಿ ಅಧಿಕ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ತೆಲಂಗಾಣದಲ್ಲಿ ಮುಂದಿನ ಮೂರು ದಿನಗಳ ಕಾಲ, ಅಂದರೆ ಆಗಸ್ಟ್ ೨೦ರವರೆಗೂ ಅಧಿಕ ಮಳೆಯಾಗುವುದು ಎಂದು ತಿಳಿಸಿದೆ. ತೆಲಂಗಾಣ ಮಧ್ಯ, ಉತ್ತರ ಹಾಗೂ ಈಶಾನ್ಯ ಭಾಗಗಳಲ್ಲಿ ಸಾಧಾರಣದಿಂದ ಅಧಿಕ ಮಟ್ಟದ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ. ಒಡಿಶಾದ ಕರಾವಳಿ ಹಾಗೂ ಆಂಧ್ರಪ್ರದೇಶದ…

ಸ್ವಾತಂತ್ರ್ಯಹೋರಾಟಗಾರರನ್ನು ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ,ಆ,15: ಭಾರತದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ದಿನವಿದು. ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದ ಪ್ರತಿಯೊಬ್ಬ ವ್ಯಕ್ತಿಯನ್ನು ದೇಶವು ಸ್ಮರಿಸುತ್ತಿದೆ, ಏಕೆಂದರೆ ದೇಶವು ಇವರೆಲ್ಲರಿಗೂ ಋಣಿಯಾಗಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಆಜಾದಿ ಕಾ ಅಮೃತ ಮಹೋತ್ಸವದ ಶುಭಾಶಯ ಕೋರಿದರು. 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ  ಮೋದಿ, ಭಾರತದ ಮೊದಲ ಪ್ರಧಾನಿ ನೆಹರೂ, ದೇಶವನ್ನು ಏಕೀಕೃತ ರಾಷ್ಟ್ರವನ್ನಾಗಿ ಮಾಡಿದ ಸರ್ದಾರ್ ವಲ್ಲಭಬಾಯಿ ಪಟೇಲ್,…

ಮೋದಿ ಆರ್ಥಿಕ ಮತ್ತು ವಿದೇಶಾಂಗ ನೀತಿ ವಿರುದ್ಧ ಸುಬ್ರಮಣ್ಯಂ‌ ಸ್ವಾಮಿ ವಿರೋಧ

ನವದೆಹಲಿ,ಆ,14: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮತ್ತು ವಿದೇಶಿ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ‘ಮೋದಿ ಭಾರತದ ರಾಜ ಅಲ್ಲ’ ಎಂದು ಹೇಳಿದ್ದಾರೆ. ತಮ್ಮ ಆಯ್ಕೆಯ ಸಚಿವ ಸ್ಥಾನ ನೀಡದಿರುವುದು ನಿಮ್ಮ ಅಸಮಾಧಾನಕ್ಕೆ ಕಾರಣ ಎಂದು ವಾದಿಸಿದ ಟ್ವಿಟರ್ ಬಳಕೆದಾರರೊಬ್ಬರಿಗೆ ಉತ್ತರಿಸಿದ ಸುಬ್ರಮಣಿಯನ್ ಸ್ವಾಮಿ, ನಾನು ಬೇರೆ ಕಾರಣಕ್ಕಾಗಿ “ಮೋದಿ ವಿರೋಧಿ” ಎಂದು ಹೇಳಿದ್ದಾರೆ. “ನಾನು ಆರ್ಥಿಕತೆ ಮತ್ತು ವಿದೇಶಾಂಗ ನೀತಿಗಾಗಿ ಮೋದಿ ವಿರೋಧಿ…

ಇಸ್ರೋದ ಮತ್ತೊಂದು ಸಾಧನೆ;ನಭಕ್ಕೆ ಹಾರಿದ ಭೌಗೊಳಿಕ ಇಮೆಜಿಂಗ್ ಉಪಗ್ರಹ

ನವದೆಹಲಿ,ಆ,12: ಇಸ್ರೋದ ಮತ್ತೊಂದು ಉಪಗ್ರಹ ಇಂದು ಬೆಳಗಿನ ಜಾವ 5;43ಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಕೇಂದ್ರದಿಂದ ಉಡಾವಣೆಯಾಗಿದೆ. ಕಳೆದ ಫೆಬ್ರವರಿ 28 ರಂದು, ಇಸ್ರೋ 18 ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಅದರಲ್ಲಿ ಪ್ರಾಥಮಿಕ ಬ್ರೆಜಿಲ್‌ನ ಅಮೆಜೋನಿಯಾ-1 ಉಪಗ್ರಹ ಮತ್ತು ಕೆಲವು ದೇಸೀ ಉಪಗ್ರಹಗಳನ್ನು ಹೊಂದಿದ್ದು, ಇಂದು ಇದರ ಉಡಾವಣೆಯಾಗಿದೆ. ಇದು ಪ್ರಕೃತಿ ವಿಕೋಪಗಳು ಮತ್ತು ಮೋಡ ಸ್ಫೋಟಗಳು ಅಥವಾ ಗುಡುಗು ಸಹಿತ ಹವಾಮಾನ ಘಟನೆಗಳನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ. ಜಿಎಸ್‌ಎಲ್‌ವಿ-ಎಫ್ 10 ಮಿಷನ್ ಭೌಗೋಳಿಕ…

ಕ್ರಿಮಿನಲ್ ಅಭ್ಯರ್ಥಿ ವಿವರ ಅಯ್ಕೆಯಾದ ೪೮ ಗಂಟೆಯೊಳಗೆ ಪ್ರಕರಟಿಸಲು ಸುಪ್ರೀಂ ನಿರ್ದೇಶನ

ನವದೆಹಲಿ, ಆ. ೧೦: ಚುನಾವಣೆ ಘೋಷಣೆಯಾದ ಬಳಿಕ ರಾಜಕೀಯ ಪಕ್ಷಗಳು ಅಭ್ಯರ್ಥಿಗಳಲ್ಲಿ ಯಾವುದಾದರೂ ಕ್ರಿಮಿನಲ್ ಕೇಸ್‌ಗಳು ಇದ್ದರೆ ಅದನ್ನ ಆ ಅಭ್ಯರ್ಥಿಯ ಆಯ್ಕೆಯಾದ ೪೮ ಗಂಟೆಯೊಳಗೆ ಪ್ರಕಟಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನ ಹೊರಡಿಸಿದೆ. ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಇದೇ ವಿಚಾರದಲ್ಲಿ ಇದೇ ರೀತಿಯ ತೀರ್ಪು ನೀಡಿತ್ತು. ರಾಜಕೀಯ ಪಕ್ಷಗಳು ಅಭ್ಯರ್ಥಿಯಲ್ಲಿ ಕ್ರಿಮಿನಲ್ ಕೇಸ್ ಇದ್ದರೆ ಅದರ ಮಾಹಿತಿಯನ್ನ ೪೮ ಗಂಟೆಯೊಳಗೆ ಪ್ರಕಟಿಸಬೇಕು. ಅಥವಾ ನಾಮಪತ್ರ ಸಲ್ಲಿಕೆಯ ದಿನಕ್ಕೆ ೨ ವಾರ ಮುಂಚಿತವಾಗಿ…

ಕಚ್ಚಾತೈಲ ಬೆಲೆ ಕುಸಿದರೂ ಪರಿಷ್ಕರಣೆಯಾಗದ ಇಂಧನ ಬೆಲೆ..!

ನವದೆಹಲಿ, ಆ, 09: ಜಾಗತಿಕವಾಗಿ ಕಚ್ಚಾತೈಲ ಬೆಲೆ ಈ ವಾರದಲ್ಲಿ ತೀವ್ರ ಕುಸಿತವಾದರೂ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 23 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಆಗಸ್ಟ್ 9ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿತ್ತು.…

ʼಇ-ರೂಪಿ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮೋದಿ ಚಾಲನೆ

ನವದೆಹಲಿ,ಆ,02: ದೇಶದಲ್ಲಿ ಡಿಜಿಟಲ್ ಪಾವತಿಗೆ ಉತ್ತೇಜನ ನೀಡುವ ಸಲುವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್‌ ಮೂಲಕ ʼಇ-ರೂಪಿ ಡಿಜಿಟಲ್ ಪಾವತಿ ವ್ಯವಸ್ಥೆಗೆ ಚಾಲನೆ ನೀಡಿದ್ದಾರೆ. ಈ ಇ-ರುಪಿ, ಸರ್ಕಾರಿ ಯೋಜನೆಗಳ ಲಾಭಗಳನ್ನು ಫಲಾನುಭವಿಗೆ ತಲುಪಿಸುವಲ್ಲಿ ಸರ್ಕಾರ ಹಾಗೂ ಫಲಾನುಭವಿ ನಡುವೆ ಪ್ರಸ್ತುತ ಇರುವ ಸೋರಿಕೆ ಹಾಗೂ ದುರುಪಯೋಗವನ್ನು ತಡೆಗಟ್ಟುವಂತಹ ಒಂದು ಉಪಯುಕ್ತ ಉಪಕ್ರಮವಾಗಿದೆ. ಈ ಆಯಪ್ ಅನ್ನು ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದೊಂದಿಗೆ…

ರದ್ದದ ಐಟಿಬಿಟಿ ಕಾಯ್ದೆಅಡಿ ಪ್ರಕರಣದಾಖಲಾತಿಗೆ ಸುಪ್ರೀ ಕೇಂದ್ರಾಡಳಿತ ಪ್ರದೇಶಗಳಿಗೆ ನೊಟೀಸ್

ನವದೆಹಲಿ,ಆ,೦೨: ರದ್ದಾದ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ ೬೬ಎ ಅಡಿಯಲ್ಲಿ ಪ್ರಕರಣ ದಾಖಲಿಸುತ್ತಿರುವುದಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮತ್ತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಗಳಿಗೆ ನೋಟಿಸ್ ನೀಡಿದೆ. ೨೦೧೫ರಲ್ಲಿ ಸುಪ್ರೀಂ ಕೋರ್ಟ್ ರದ್ದಗೊಳಿಸಿದ್ದ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ ೬೬ಎ ಅಡಿಯಲ್ಲಿ ಈಗಲೂ ಜನರ ವಿರುದ್ಧ ಪ್ರಕರಣದಾಖಲಿಸಲಾಗುತ್ತಿದೆ ಎಂದು ಎನ್ ಜಿಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಎಲ್ಲಾ ಹೈಕೋರ್ಟ್ ಗಳ ರಿಜಿಸ್ಟ್ರಾರ್…

ಒಲಂಪಿಕ್ಸ್ ಕ್ರೀಡೆಗಳ ಗೆಲುವಿಗೆ ಕೊಂಡಾಡಿದ ಮೋದಿ

ನವದೆಹಲಿ,ಆ,೦೨: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಸೆಮಿಫೈನಲ್ ಗೇರಿರುವ ಭಾರತದ ಸಾಧನೆಯನ್ನು ಪ್ರಧಾನಿ ಮೋದಿ ಕೊಂಡಾಡಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ವಿತರಣೆಯಾಗುತ್ತಿದ್ದು, ಜುಲೈನಲ್ಲಿ ೧೩ ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಈ ತಿಂಗಳು ಲಸಿಕೆ ಕಾರ್ಯಕ್ರಮವನ್ನು ಇನ್ನಷ್ಟು ವೇಗಗೊಳಿಸಲಾಗುವುದು ಸರ್ಕಾರದ ಆದ್ಯತೆಯಾಗಿದೆ. ಇದರ ಬೆನ್ನಲ್ಲೇ ಒಲಂಪಿಕ್ಸ್ ನಲ್ಲಿ ಪಿವಿ ಸಿಂಧು ಪದಕ ಗೆಲವು, ಭಾರತ ಮಹಿಳಾ ಹಾಕಿ ತಂಡದ ಐತಿಹಾಸಿಕ…

ಅಸ್ಸಾಂ,ಮಿಜೋರಾಂ ನಡುವೆ ಮತ್ತೆ ಬುಗಿಲೆದ್ದ ಗಡಿ ಸಂಘರ್ಷ

ಗುವಾಹಟಿ,ಜು,೨೭: ಅಸ್ಸಾಂ ಮತ್ತು ಮಿಜೋರಾಂ ನಡುವೆ ಮತ್ತೇ ಗಡಿ ಸಂಘರ್ಷ ಆರಂಭವಾಗಿದೆ.ಈ ಸಂಘರ್ಷಕ್ಕೆ ಐವರು ಪೊಲೀಸರು ಮೃತಪಟ್ಟಿದ್ದು ಐವತ್ತಕ್ಕೂ ಹೆಚ್ಚು ಜನರ ಗಾಯಗೊಂಡಿದ್ದಾರೆ. ಅಸ್ಸಾಂನ ವೈರೆಂಟ್ಗೆ ಪಟ್ಟಣದಲ್ಲಿ ಸೋಮವಾರ ಹಿಂಸಾಚಾರ ತಲೆದೋರಿದೆ. ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಗೃಹ ಸಚಿವ ಅಮಿತ್ ಶಾ ಅವರು ಸಭೆ ನಡೆಸಿದ ಎರಡೇ ದಿನಕ್ಕೆ ಈ ಸಂಘರ್ಷ ನಡೆದಿದೆ. ಲೈಲಾಪುರದಲ್ಲಿ ಮೀಸಲು ಅರಣ್ಯ ಪ್ರದೇಶವನ್ನು ನಾಶಪಡಿಸಿ ರಸ್ತೆ ನಿರ್ಮಿಸಲಾಗುತ್ತಿದೆ ಮತ್ತು ಸೇನಾ ಶಿಬಿರವೊಂದನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಮಿಜೋರಾಂ ವಿರುದ್ಧ ಅಸ್ಸಾಂ…

 ಪ್ರಶಾಂತ್ ಕಿಶೋರ್, ರಾಹುಲ್ ಗಾಂಧಿ ಭೇಟಿ-ರಾಷ್ಟ್ರ ರಾಜಕಾರಣದಲ್ಲಿ ಸಂಚಲನ

ನವದೆಹಲಿ,ಜು,೧೩:ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಮಂಗಳವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ ಪ್ರಶಾಂತ್ ಕಿಶೋರ್ ಗಂಟೆಗಳ ಕಾಲ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಹಾಜರಿದ್ದರು. ಜೂನ್ ೨೧ರಂದು ಪ್ರಶಾಂತ್ ಕಿಶೋರ್ ಹಾಗೂ ಶರದ್ ಪವಾರ್ ಚರ್ಚೆ ನಡೆಸಿದ್ದು ದೇಶದಲ್ಲಿ ಹೊಸ ರಾಜಕೀಯ ಸಾಧ್ಯತೆಗಳ ಕುರಿತು ಚರ್ಚೆ ಆರಂಭವಾಗಿತ್ತು. ೨…

ಜುಲೈ ೪ ರಿಂದಲೇ ಆರಂಭವಾಗಿದೆಯಂತೆ ಕೋವಿಡ್ ಮೂರನೇ ಅಲೆ!

ಹೈದರಾಬಾದ್,ಜು,೧೩: ಕೋವಿಡ್-೧೯ ಮೂರನೇ ಅಲೆ ಬರುತ್ತದೆ ಎನ್ನುವ ದಾವಂತದಲ್ಲಿರುವಾಗಲೇ ಹೈದರಾಬಾದ್‌ನಲ್ಲಿ ವಿಜ್ಞಾನಿಯೊಬ್ಬರು ಕಳೆದ ಜುಲೈ ೪ ರಿಂದಲೇ ಆರಂಭವಾಗಿದೆ ಎಂಬ ಅಘತಾಕಾರಿ ಮಾಹಿತಿಯನ್ನು ನೀಡಿದ್ದಾರೆ ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ ಹಿರಿಯ ಭೌತವಿಜ್ಞಾನಿ ಡಾ.ವಿಪಿನ್ ಶ್ರೀವಾಸ್ತವ ಅವರು, ಭಾರತದಲ್ಲಿ ಕೋವಿಡ್-೧೯ ಸೋಂಕಿನ ಹರಡುವಿಕೆಯನ್ನು ವಿವರವಾಗಿ ವಿಶ್ಲೇಷಿಸಿದ್ದು, ಜುಲೈ ೪ ರಿಂದಲೇ ಮೂರನೇ ಅಲೆ ಪ್ರಾರಂಭವಾಗಿರಬಹುದು ಎಂದು ಹೇಳಿದ್ದಾರೆ. ಕಳೆದ ೪೬೩ ದಿನಗಳಲ್ಲಿ ದೇಶದಲ್ಲಿ ಸೋಂಕು ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಅಧ್ಯಯನ ಮಾಡಲು ವಿಶೇಷ ವಿಧಾನವನ್ನು…

1 2 3 4 5 8
error: Content is protected !!