Browsing: ರಾಷ್ಟ್ರೀಯ

ರಾಷ್ಟ್ರೀಯ

ಭಾರತದಲ್ಲಿ 1,52,734 ಕೋವಿಡ್ ಪ್ರಕರಣ ದೃಡ

ನವದೆಹಲಿ,ಮೇ31:ಕೋವಿಡ್ ಸೋಂಕಿರತ ಸಂಖ್ಯೆ ಕಳೆದ ಒಂದು ವಾರದಲ್ಲಿ ಇಳಿಕೆ ಕಂಡಿದ್ದು ಇಂದು ಕೊಂಚ ಏರಿಕೆಯಾಗಿದೆ. ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,52,734 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಇದು ಕಳೆದ 50 ದಿನಗಳಲ್ಲಿಯೇ ಕನಿಷ್ಟ ಸಂಖ್ಯೆಯಾಗಿದೆ. ಇದೇ ವೇಳೆ ಒಂದೇ ದಿನ 3,128 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,80,47,534ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,29,100ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20,26,092ಕ್ಕೆ…

ಮತ್ತೇ ರಾಜಕಾರಣಕ್ಕೆ ಬರುವ ಇಂಗಿತ ವ್ಯಕ್ತಪಡಿಸಿರುವ ಶಶಿಕಲಾ

ಚೆನ್ನೈ,ಮೇ,೩೦: ತಮಿಳುನಾಡಿನಲ್ಲಿ ಎಐಡಿಎಂಕೆ ಪಕ್ಷದಲ್ಲಿ ಆಂತರಿಕ ಕಿತ್ತಾಟಗಳ ಈ ಸಂದರ್ಭದಲ್ಲಿ ಶಶಿಕಲಾ ಸಕ್ರಿಯ ರಾಜಕಾರಣಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದು ಇದಕ್ಕೆ ಸಂಬಂಧಿಸಿದ ಆಡಿಯೋ ಒಂದು ಬಹಿರಂಗವಾರುವುದು ತಮಿಳುನಾಡಿನಲ್ಲಿ ಸಂಚಲನ ಮೂಡಿಸಿದೆ. ಪಕ್ಷದಲ್ಲಿ ಆಗಿರುವ ಎರಡು ಬಣಗಳಿಂದ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದೆ ಹೀಗಾಗಿ ರಾಜ್ಯದಲ್ಲಿ ಮತ್ತೇ ಪಕ್ಷವನ್ನು ಸರಿದಾರಿಗೆ ತರಬೇಕು ಎಂದರೆ ಅದಕ್ಕೆ ಶಶಿಕಲಾಗೆ ಮಾತ್ರ ಸಾದ್ಯ ಈ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಮಾತನಾಡಿರುವ ಆಡಿಯೋ ಕ್ಲಿಪ್ ಈಗ ಬಹಿರಂಗವಾಗಿದೆ. ಮಾಜಿ ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ…

ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಅನಾಥರಿಗೆ ಪರಿಹಾರ ಘೋಷಿಸಿದ ಮೋದಿ

ದೆಹಲಿ,ಮೇ,29: ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥ ಮಕ್ಕಳಿಗೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕೇರ್ಸ್ ಅಡಿ ಈ ಯೋಜನೆ ಘೋಶಿಸಿದ್ದು, ಅನಾಥ ಮಕ್ಕಳಿಗೆ 18 ವರ್ಷ ತುಂಬಿದಾಗ ಪ್ರತಿ ತಿಂಗಳು ಅಂದರೆ 5 ವರ್ಷಗಳ ಕಾಲ ಸ್ಟೈಫಂಡ್ ನೀಡಲಾಗುವುದು. 23 ವರ್ಷ ತುಂಬಿದ ಮೇಲೆ ಪಿಎಂ ಕೇರ್ಸ್ ನಿಂದ 10 ಲಕ್ಷ ರೂಪಾಯಿ ನಗದು ಹಣ ನೀಡಲಾಗುವುದು ಎಂದು ಹೇಳಿದ್ದಾರೆ. ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು…

ಬಂಗಾಳದ ಅಭಿವೃದ್ಧಿಗಾಗಿ ಮೋದಿ ಕಾಲುಹಿಡಿಯಲು ಸಿದ್ದ-ದೀದಿ

ಕೋಲ್ಕತ್ತ,ಮೇ29: ಪಶ್ಚಿಮ ಬಂಗಾಳದ ಕಲ್ಯಾಣ ಮತ್ತು ಅಮೂಲಾಗ್ರ ಅಭಿವೃದ್ಧಿಗಾಗಿ ಪ್ರಧಾನಿ ಮೋದಿಯವರು ಕಾಲು ಹಿಡಿಯಲೂ ಸಿದ್ದ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಆದರೆ,ಮೋದಿ ಮತ್ತು ಅಮಿತ್ ಉದ್ದೇಶ ಪೂರ್ವಕವಾಗಿ ತೊಂದರೆ ಕೊಡುತ್ತಿದ್ದಾರೆ..ನನಗೆ ನನ್ನ ರಾಜ್ಯದ ಅಭಿವೃದ್ಧಿ ಗೆ ಏನುಬೇಕಾದರೂ ಮಾಡಬಲ್ಲೆ ಎಂದಿದ್ದಾರೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಅಲಪನ್‌ ಬಂಡೋಪಾಧ್ಯಾಯ ಅವರನ್ನು ವಾಪಸ್‌ ಕರೆಸಿಕೊಳ್ಳುವ ನಿರ್ಧಾರವನ್ನು ಹಿಂಪಡೆಯಬೇಕು. ಕೋವಿಡ್ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಲು ಅವರಿಗೆ ಅನುವು ಮಾಡಿಕೊಡಬೇಕು ಎಂದು ಅವರು…

ಮತ್ತೇ ಪೆಟ್ರೋಲ್ ಬೆಲೆ ಏರಿಕೆ!

ಮುಂಬೈ,ಮೇ,೨೯: ತೈಲ ಬೆಲೆ ಏರಿಕೆ ನಿತ್ಯ ಏರಿಕೆಯಾಗುತ್ತಲೇ ಇದೆ ಈಗಾಗಲೇ ೧೦೦ಗಡಿಯತ್ತ ಬಂದು ನಿಂತಿದ್ದು ದೇಶದ ಮಹಾನಗರ ಮುಂಬೈನಲ್ಲಿ ೧೦೦ ಗಡಿದಾಟಿದೆ. ಈ ತಿಂಗಳಲ್ಲಿ ೧೫ನೇ ಬಾರಿಗೆ ತೈಲ ಬೆಲೆ ಏರಿಕೆಯಾಗಿದ್ದು, ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ ೧೦೦ ಗಡಿಯನ್ನು ದಾಟಿದೆ ಮತ್ತು ಡೀಸೆಲ್ ದರ ಲೀಟರ್‌ಗೆ ೯೨.೧೭ಕ್ಕೆ ಏರಿಕೆಯಾಗಿದೆ. ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ದರವು ಲೀಟರ್‌ಗೆ ೨೬ ಪೈಸೆ ಮತ್ತು ಡೀಸೆಲ್ ದರವು ಲೀಟರ್‌ಗೆ ೩೦ ಪೈಸೆ ಹೆಚ್ಚಾಗಿದೆ ಎಂದು ಭಾರತೀಯ…

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ

ನವದೆಹಲಿ, ಮೇ ೨೯: ದೇಶದಲ್ಲಿ ಕಳೆದ ೨೪ ಗಂಟೆಯಲ್ಲಿ ಹೊಸದಾಗಿ ೧,೭೩,೭೯೦ ಕೊರೊನಾ ಸೋಂಕಿತರು ಪತ್ತೆಯಾಗಿದ್ದರೆ೩೬೧೭ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದೆ ಅದೇ ರೀತಿ ಸಾವುಗಳು ಕೂಡ ಕಡಿಮೆಯಾಗುತ್ತಿವೆ.ಯಾವಾಗ ಬೇಕಾದರೂ ಕೊರೊನಾದ ಮೂರನೇ ಅಲೆ ಶುರುವಾಗಬಹುದು. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏನೋ ಕಡಿಮೆಯಾಗುತ್ತಿದೆ ಆದರೆ ಸಾವಿನ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಒಟ್ಟು ೨,೭೭,೨೯,೨೪೭ ಪ್ರಕರಣಗಳಿವೆ, ಇದುವರೆಗೆ ೨,೫೧,೭೮,೦೧೧ ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್…

ಕೊರೊನಾ ಸೋಂಕಿಗೆ ಹೆತ್ತವರ ಕಳೆದುಕೊಂಡ ಅನಾಥ ಮಕ್ಕಳಿಗೆ ತಕ್ಷಣ ಪರಿಹಾರ ನೀಡಲು ಸುಪ್ರೀಂ ಸೂಚನೆ

ನವದೆಹಲಿ,ಮೇ,28:ಕೊರೊನಾ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಅನಾಥವಾಗಿರುವ ಮಕ್ಕಳಿಗೆ ತಕ್ಷಣವೇ ಪರಿಹಾರ ನೀಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಎಲ್‌.ಎನ್. ರಾವ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ರಜಾ ಪೀಠವು, ಸಾಂಕ್ರಾಮಿಕ ರೋಗದಿಂದ ಹೆತ್ತವರನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಗುರುತಿಸಿ, ಅವರ ಬಗೆಗಿನ ಸಮಗ್ರ ಮಾಹಿತಿಯನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ‘ಬಾಲ್ ಸ್ವರಾಜ್’ ವೆಬ್‌ಸೈಟ್‌ಗೆ ಶನಿವಾರ ಸಂಜೆಯೊಳಗೆ ಅಪ್‌ಲೋಡ್ ಮಾಡಬೇಕು ಎಂದು ಆಯಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ. ‘ಮಹಾರಾಷ್ಟ್ರದಲ್ಲಿ ಕೋವಿಡ್‌ನಿಂದಾಗಿ 2,900ಕ್ಕೂ…

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ

ಚೆನ್ನೈ, ಮೇ ೨೭; ತಮಿಳುನಾಡಿನಲ್ಲಿ ಯಾವುದೇ ಸರ್ಕಾರಗಳು ಬಂದರು ಮೊದಲು ಕರ್ನಾಟಕದ ಆಣೆಕಟ್ಟುಗಳ ಮೇಲೆಯೇ ಕಣ್ಣು, ಕಾವೇರಿ,ಮೇಕೆದಾಟು ಹೀಗೆ ಕರ್ನಾಟಕದ ಯೋಜನೆಗಳನ್ನು ವಿರೋಧಿಸುತ್ತಲೇ ಅಲ್ಲಿನ ಜನರ ವಿಶ್ವಾಸ ಪಡೆಯುವ ತಂತ್ರಗಾರಿಕೆ ಮಾಡುತ್ತವೆ ಹೀಗೂ ಕೂಡ ಅದೇ ದಾರಿಯಲ್ಲಿ ಹೊಸ ಸರ್ಕಾರ ಸಾಗಿದೆ ಮೇಕೆದಾಟು ಬಳಿ ಆಣೆಕಟ್ಟು ನಿರ್ಮಾಣ ಮಾಡುವುದನ್ನು ವಿರೋಧಿಸಿರುವ ಹೊಸ ಸರ್ಕಾರ ಯಾವುದೆ ಕಾರಣಕ್ಕೂ ಆಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಖ್ಯಾತೆ ತಗೆದಿದೆ ತಮಿಳುನಾಡಿನ ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಈ ಕುರಿತು ಮಾತನಾಡಿದ್ದಾರೆ. ಮೇಕೆದಾಟು…

ಆಯಾ ಪ್ರದೇಶದ ಕಾನೂನು ಪಾಲನೆ-ಗೂಗಲ್

ನವದೆಹಲಿ,ಮೇ,೨೭:ಆಯಾ ಪ್ರದೇಶದ ಕಾನೂನುಗಳನ್ನು ಪಾಲಿಸಲು ನಾವು ಸಿದ್ದರಿದ್ದೇವೆ ಅಲ್ಲದೆ ಸರ್ಕಾರಗಳು ಜನತೆ ಉತ್ತಮ ಸಂಬಂಧದೊಂದಿಗೆ ಕಾರ್ಯನಿರ್ವಹಿಸುತ್ತೇವೆ ಎಂದು ಗೂಗಲ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುಂದರ್ ಪಿಚೈ ತಿಳಿಸಿದ್ದಾರೆ ಕಂಪನಿ ಯಾವಾಗಲೂ ಸರ್ಕಾರದ ಕೋರಿಕೆಗಳನ್ನು ಪರಿಗಣಿಸುತ್ತದೆ ಅಲ್ಲದೆ ಸ್ಪಷ್ಟವಾದ ಪಾರದರ್ಶಕ ವರದಿಗಳನ್ನು ಹೊಂದಿದೆ ಎಂದು ಏಷ್ಯಾ ಪೆಸಿಫಿಕ್‌ನ ಆಯ್ದ ವರದಿಗಾರರ ಜತೆ ನಡೆದ ವರ್ಚುವಲ್ ಕಾನ್ಫೆರೆನ್ಸ್‌ನಲ್ಲಿ ಅವರು ತಿಳಿಸಿದ್ದಾರೆ.ಉಚಿತ ಮತ್ತು ಮುಕ್ತ ಇಂಟರ್‌ನೆಟ್ ಮೌಲ್ಯವನ್ನು ನಾವು ಅರಿತಿದ್ದೇವೆ. ಜತೆಗೆ, ಇದರ ಪ್ರಯೋಜನಗಳ ಅರಿವು ಇದೆ. ಇದೇ ನೀತಿ ಅನುಸರಿಸಬೇಕು ಎಂದು…

ದೇಶದಲ್ಲಿ ಇಳಿಕೆ ಕಂಡ ಕೊರೊನಾ ಪ್ರಕರಣ

ನವದೆಹಲಿ, ಮೇ,26: ಕೋವಿಡ್ ನಿರ್ವಹಣೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತಗೆದುಕೊಂಡಿರುವ ಕಠಿಣ ಕ್ರಮ ಕೈಗೊಂಡಿರುವ ಕಾರಣ ಈಗ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 2,08,92 ಮಂದಿಗೆ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,08,921 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,71,57,795 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4,157…

ಒಡಿಶಾಕ್ಕೆ ಯಸ್ ಚಂಡಮಾರುತ ,11 ಲಕ್ಷ ಜನರ ಸಿಫ್ಟ್

ಭುವನಶ್ವರ,ಮೇ,26:ಯಸ್ ಚಂಡಮಾರುತ ಇಂದು ಮಧ್ಯಾಹ್ನ ಒಡಿಶಾದ ಭದ್ರಕ್ ಜಿಲ್ಲೆಯ ಧಾಮ್ರ ಬಂದರು ಭೂ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಗಳಿವೆ . ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಉಮಾಶಂಕರ್ ದಾಸ್ ಅವರು ಬುಧವಾರ ಬೆಳಗ್ಗೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ‘ಯಸ್‌’ ಚಂಡಮಾರುತ ಮಧ್ಯಾಹ್ನದ ವೇಳೆಗೆ ಭೂಪ್ರದೇಶಕ್ಕೆ ಅಪ್ಪಳಿಸಲಿದೆ ಎಂದು ಹೇಳಿದ್ದಾರೆ. ಕಡಲ ತೀರದ ಅನೇಕ ಪ್ರದೇಶಗಳಲ್ಲಿ ಈಗಾಗಲೇ ಭಾರಿ ಮಳೆ ಸುರಿಯುತ್ತಿದೆ. ಸದ್ಯ ಗಂಟೆಗೆ 130 ರಿಂದ 140 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಮಧ್ಯಾಹ್ನದ ಹೊತ್ತಿಗೆ ಗಾಳಿಯ…

ದೇಶದಲ್ಲಿ ಕೊರೊನಾ ಇಳಿಕೆ,೧,೯೬ ಲಕ್ಷ ಹೊಸ ಪ್ರಕರಣ,೩,೫೧೧ ಸಾವು

ನವದೆಹಲಿ,ಮೇ,೨೫: ಕಳೆದ ೨೪ ಗಂಟೆಯಲ್ಲಿ ದೇಶದಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡಿದ್ದು ೧,೯೬,೪೨೭ ಜನರಲ್ಲಿ ಸೋಂಕು ದೃಡಪಟ್ಟಿದ್ದು,೩,೫೧೧ ಜನ ಸಾವನ್ನಪ್ಪಿದ್ದಾರೆ. ಕಳೆದ ಹಲವು ದಿನಗಳಿಂದ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆಯೂ ಹೆಚ್ಚಾಗಿತ್ತು ಆದರೆ ಕಳೆದ ೨೪ ಗಂಟೆಯಲ್ಲಿ ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿರುವುದು ಒಂದಿಷ್ಟು ನೆಮ್ಮದಿ ತಂದಿದೆ. ಹಲವು ದಿನಗಳಿಂದ ೪ ಲಕ್ಷದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ ೨ ಲಕ್ಷಕ್ಕಿಂತ ಕೆಳಗೆ ಇಳಿದಿರುವುದು, ೨ನೇ ಅಲೆಯ ಇಳಿಕೆಯ…

ನಾಳೆ ಒಂದೇ ದಿನ ಚಂದ್ರಗ್ರಹಣ,ಬ್ಲಡ್ ಮೂನ್ ಗೋಚರ!

ನವದೆಹಲಿ, ಮೇ ೨೫: ನಾಳೆ ಈ ವರ್ಷದ ಮೊದಲ ಚಂದ್ರಗ್ರಹಣ ಗೋಚರಿಸಲಿದ್ದು ಇದರ ಜೊತೆಗೆ ಬ್ಲಡ್ ಮೂರನ್ ಕೂಡ ಗೋಚರವಾಘಲಿದೆ ಎಂದು ಭೂ ವಿಜ್ಞಾನ ಸಚಿವಾಲಯ ತಿಳಿಸಿದೆ. ಹುಣ್ಣಿಮೆಯ ದಿನವಾದ ನಾಳೆ ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಬಂದಾಗ ಮತ್ತು ಎಲ್ಲಾ ಮೂರು ವಸ್ತುಗಳನ್ನು ಜೋಡಿಸಿದಾಗ ಚಂದ್ರಗ್ರಹಣ ಸಂಭವಿಸುತ್ತದೆ ಹಾಗೆಯೇ ಇಡೀ ಚಂದ್ರನು ಭೂಮಿಯ ನೆರಳಿನಲ್ಲಿ ಬಂದಾಗ ಮತ್ತು ಚಂದ್ರನು ಒಂದು ಭಾಗ ಮಾತ್ರ ಭೂಮಿಯ ನೆರಳಿನಲ್ಲಿ ಬಂದಾಗ ಭಾಗಶಃ ಚಂದ್ರ ಗ್ರಹಣ ಸಂಭಿಸಲಿದೆ ಎಂದು…

ರಾಜಕಾರಣಿಗಳಿಂದ ಔಷಧಗಳ ದಾಸ್ತಾನುಗಳ ಸಂಗ್ರಹ; ತನಿಖೆಗೆ ಕೋರ್ಟ್ ಸೂಚನೆ

ನವದೆಹಲಿ,ಮೇ,೨೪: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಏನೆಲ್ಲಾ ಔಷಧಿ ತಾರತಮ್ಯಗಳು ನಡೆಯುತ್ತಿವೆ ಎನ್ನುವುದಕ್ಕೆ ದೆಹಲಿ ಹೈಕೋರ್ಟ್ ನೀಡಿರುವ ಸೂಚನೆಯೇ ಇದಕ್ಕೆ ನಿದರ್ಶನ ಎನಿಸುತ್ತದೆ ಕೋವಿಡ್-೧೯ ಚಿಕಿತ್ಸೆಗೆ ಔಷಧ ಕೊರೆತೆಗೆ ಪ್ರಮುಖ ಕಾರಣ ರಾಜಕಾರಣಿಗಳು ತಮ್ಮ ಬಳಿ ಸಗಟು ರುಪದಲ್ಲಿ ಖರೀದಿಸಿ ಸಂಗ್ರಹಿಸಿ ತಮಗೆ ಬೇಕಾದವರಿಗೆ ನೀಡುತ್ತಿದ್ದಾರೆ ಈ ಬಗ್ಗೆ ತನಿಖೆಗೆ ದೆಹಲಿ ಹೈಕೋರ್ಟ್ ಔಷಧ ನಿಯಂತ್ರಕರಿಗೆ ಆದೇಶ ನೀಡಿದೆ. ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ತಮಗೆ ಗೊತ್ತಿದ್ದವರಿಗೆ ಔಷಧ ವಿತರಿಸುತ್ತಿರಬಹುದು ಎಂದೂ ಕೋರ್ಟ್ ಅಭಿಪ್ರಾಯಪಟ್ಟಿತು. ಇದೇ ಸಂದರ್ಭದಲ್ಲಿ…

ದ್ವಿತೀಯ ಪಿಯು ಪರೀಕ್ಷೆಗೆ ರಾಜ್ಯಗಳ ಒಲವು-ಜೂನ್ ೧ಕ್ಕೆ ಅಂತಿಮ ತೀರ್ಮಾನ

ನವದೆಹಲಿ,ಮೇ,೨೪:ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಬಹುತೇಕ ಎಲ್ಲಾ ರಾಜ್ಯಗಳು ಸಹಮತ ವ್ಯಕ್ತಪಡಿಸಿರುವ ಹಿನ್ನೆಲಯಲ್ಲಿ ಜೂನ್ ೧ಕ್ಕೆ ಈ ಕುರಿತು ಅಂತಿಪ ನಿರ್ಧಾರಕ್ಕೆ ಬರುವ ಸಾಧ್ಯತೆಗಳಿವೆ. ಭಾನುವಾರ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಸಬೇಕೆ ಅಥವಾ ಶಾಲಾ ಮಟ್ಟದಲ್ಲೇ ಪರೀಕ್ಷೆನಡೆಸಿ ವಿದ್ಯಾರ್ಥಿಗಳನ್ನು ಅಂಕಗಳ ಆಧಾರದ ಮೇಲೆ ತೇರ್ಗಡೆ ಮಾಡಬೇಕೆ ಎಂಬ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಸಹಮತ ಬಾರದ ಕಾರಣ ಯವುದೆ ನಿರ್ದಾರಕ್ಕೆ ಬಂದಿಲ್ಲವಾದರೂ ಕೂಡ ಬಹುತೇಕ ರಾಜ್ಯಗಳು ಅಂತಿಮ ಪರೀಕ್ಷೆ ಬರೆಸುವುದೇ ಒಳಿತ ಎನ್ನುವ ಮಾತುಗಳು ಕೇಳಿ ಬಂದ ಕಾರಣ…

ಯಾಸ್ ಚಂಡಮಾರುತ-ಅಪಾಯಕಾರಿ ಪ್ರದೇಶದ ಜನರ ಸ್ಥಳಾಂತರಕ್ಕೆ ಪ್ರಧಾನಿ ಸೂಚನೆ

ನವದೆಹಲಿ, ಮೇ ೨೩: ಯಾಸ್ ಚಂಟಮಾರುತದಿಂದಾಗಿ ಅಪಾಯ ಉಂಟಾಗಬಹುದಾದ ಸ್ಥಳದಲ್ಲಿರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಯಾಸ್ ಚಂಡಮಾರುತ ಎದುರಿಸುವ ಸಂಬಂಧ ನಡೆದ ಪೂರ್ವಸಿದ್ದತಾ ಪರಿಶೀಲನಾ ಸಭೆಯಲ್ಲಿ ಅವರು ಹೆಚ್ಚಿನ ಅಪಾಯಹೊಂದುವ ಸ್ಥಳದಲ್ಲಿರುವ ಜನರನ್ನು ಸ್ಥಳಾಂತರ ಮಾಡಬೇಕು , ಹೀಗೆ ಸ್ಥಳಾಂತರ ಮಾಡಿಕೊಳ್ಳುವುದನ್ನು ರಾಜ್ಯ ಸರ್ಕಾರಗಳೊಂದಿಗೆ ಸೂಕ್ತರೀತಿಯಲ್ಲಿ ಸಮನ್ವಯ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ ಇನ್ನು ವಿದ್ಯುತ್ ಸಂಪರ್ಕದ ಕಡಿತದ ಅವಧಿಯ ಅಗತ್ಯದ ಬಗ್ಗೆಯೂ ಪ್ರಧಾನಿ ಈ ಸಂದರ್ಭದಲ್ಲಿ ಮಾತನಾಡಿದ್ದಾರೆ. ಜೊತೆಗೆ…

ಅಸ್ಸಾಂ ನಲ್ಲಿ ಭದ್ರತಾ ಪಡೆ ಗುಂಡಿಗೆ ಆರು ಉಗ್ರರು ಬಲಿ

ನವದೆಹಲಿ, ಮೇ ೨೩: ಗಡಿ ಭದ್ರತಾ ಸಿಬ್ಬಂದಿಮತ್ತು ದಿಮಸಾ ನ್ಯಾಷನಲ್ಲಿಬರೇಷನ್ ಆರ್ಮಿನಡುವೆ ನಡೆದ ಗುಂಡಿನಚಕಮಕಿಯಲ್ಲಿಆರು ಉಗ್ರರು ಮೃತ ಪಟ್ಟ ಘಟನೆ ಅಸ್ಸಾಂ ಮತ್ತು ನಾಗಲ್ಯಾಂಡ್ ಗಡಿ ಪ್ರದೇಶದಲ್ಲಿ ಸಂಭವಿಸಿದೆ. ಅಸ್ಸಾಂ ರೈಫಲ್ಸ್ ಪರ್ಸನಲ್ ಮತ್ತು ಪೊಲೀಸರು ಪಶ್ಚಿಮ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸೋನೋವಲಾ ತಿಳಿಸಿದ್ದಾರೆ. ಉಗ್ರರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ಮಿಚಿಬೈಲಂಗ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ…

ದೇಶದಲ್ಲಿ ಮತ್ತೇ ಏರಿಕೆ ಕಂಡ ಕೋವಿಡ್ ಸಂಖ್ಯೆ

ನವದೆಹಲಿ,ಮೇ,೨೩ ದೇಶದಲ್ಲಿ ಕಳೆದ ೩೪ ಗಂಟೆಯಲ್ಲಿ ೨,೪೦ ಲಕ್ಷ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು ೩,೭೪೧ ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇಂದು ಬಿಡುಗಡೆ ಮಾಡಿದ ಕೋವಿಡ್ ಸೋಂಕಿತರ ವಿವರದಲ್ಲಿ ಸದ್ಯ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚ ಹೆಚ್ಚಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ೨,೬೫,೩೦,೧೩೨ಕ್ಕೆ ಏರಿಕೆಯಾಗಿದೆ. ಆ ಪೈಕಿ ೨,೯೯,೨೬೬ ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ ೨,೩೪,೨೫,೪೬೭ ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ ೨೮,೦೫,೩೯೯ ಸಕ್ರಿಯ ಪ್ರಕರಣಗಳಿವೆ.:ದೇಶದಲ್ಲಿ ಈವರೆಗೆ…

ಅಲೋಪಥಿ ವಿರುದ್ಧ  ಹೇಳಿಕೆ:  ರಾಮ್ ದೇವ್ ವಿರುದ್ಧ ಕ್ರಮಕ್ಕೆ ಐಎಂಎ ಆಗ್ರಹ

ನವದೆಹಲಿ,ಮೇ,22: ಅಲೋಪತಿ ವೈದ್ಯ ಪದ್ಧತಿಯನ್ನು ಅವಿವೇಕಿ ವಿಜ್ಞಾನ ಪದ್ದತಿ ಎಂದು ಹೇಳಿಕೆ ನೀಡುತ್ತಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆಗ್ರಹಿಸಿದೆ. ಬಾಬಾ ರಾಮ್ ದೇವ್ ವಿರುದ್ಧ ಎಪಿಡೆಮಿಕ್ ಡಿಸೀಸಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕು, ಬಾಬಾ ರಾಮ್ ದೇವ್ ಅಲೋಪತಿ ಬಗ್ಗೆ ತಿಳಿವಳಿಕೆ ಇಲ್ಲದೇ ನೀಡುತ್ತಿರುವ ಹೇಳಿಕೆಗಳು ಸುಶಿಕ್ಷಿತ ಜನರಿಗೆ, ಅವರ ಬಲೆಗೆ ಬೀಳುತ್ತಿರುವ ಜನರಿಗೆ ಅಪಾಯವಿದೆ ಎಂದು ಐಎಂಎ ಹೇಳಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ…

ಮೇ ೨೬ ಕ್ಕೆ ಯಾಸ್ ಚಂಡಮಾರುತ ಅಬ್ಬರ; ಹೈ ಅಲಾರ್ಟ್ ಘೋಷಣೆ

ಕೊಲ್ಕತ್ತಾ ,ಮೇ ,೨೨: ತೌತೆ ಚಂಡಮಾರುತದ ಅವಾಂತರ ನಂತರ ಈ ಮತತೊಂದು ಚಂಡಮಾರುತ ಅಪ್ಪಳಿಸಲು ಸಜ್ಜಾಗಿದೆ ಮೇ ೨೬ ರಿಂದ ಯಾಸ್ ಚಂಡಮಾರುತ ಈಗ ಕರಾವಳಿ ಪ್ರದೇಶಗಳಲ್ಲಿ ಅಪ್ಪಳಿಸುವ ಸುಳಿವನ್ನು ನೀಡಿರುವ ಅವಮಾನ ಇಲಾಖೆಮೇ ೨೩ ರಿಂದ ಇದು ಆರಂಭವಾಗಲಿದ್ದು ಮೇ ೨೬ ರವರೆಗೂ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಈ ಚಂಡಮಾರುತದಿಮದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ಸೂಕ್ತ ಎಚ್ಚರಿಕೆಯನ್ನು ನೀಡಿದೆ ಅಲ್ಲದೆ ಹೈ ಅಲಾರ್ಟ ಕೂಡ ಘೋಷಿಸಿದೆ. ಪಶ್ಚಿಮ ಬಂಗಾಳ, ಒರಿಸ್ಸಾ,…

1 4 5 6 7 8
error: Content is protected !!