Browsing: ರಾಷ್ಟ್ರೀಯ

ರಾಷ್ಟ್ರೀಯ

ಸದಾನಂದಗೌಡ ಸೇರಿ ಐವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ

ಬೆಂಗಳೂರು, ಜು,07:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎರಡನೇ ಅವಧಿಯಲ್ಲಿ ಮೊದಲ ಬೃಹತ್ ಸಂಪುಟ ಪುನಾರಚನೆಗೆ ಮುಂಚಿತವಾಗಿ ಸಚಿವರಾದ ಡಿವಿ ಸದಾನಂದಗೌಡ, ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಮತ್ತು ದೇಬಶ್ರೀ ಚೌಧರಿ ಅವರು ಇಂದು ರಾಜೀನಾಮೆ ನೀಡಿದರು. ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನೊವಾಲ್, ನಾರಾಯಣ್ ರಾಣೆ ಮತ್ತು ಪಶುಪತಿ ನಾಥ್ ಪರಾಸ್ ಅವರಂತಹ ಹೆಸರುಗಳು ಹೊಸ ಸಂಪುಟ ಸೇರ್ಪಡೆಯಾಗಲಿದೆ ಎಂಬುದಾಗಿ ಕೇಳಿ ಬರುತ್ತಿದೆ. ಕೇಂದ್ರ ಸಚಿವ ಸಂಪುಟ ಪುನರಚನೆಯ ಸಮಯ ಸಮೀಪಿಸುತ್ತಿರುವಾಗಲೇ, ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೇಂದ್ರ…

ರಾಜ್ಯದ ನೂತನ ರಾಜ್ಯಪಾಲರಾಗಿ ಥಾಮರ್ ಚಂದ್ ನೇಮಕ

ಬೆಂಗಳೂರು,ಜು,೦೬: ಕರ್ನಾಟಕ ರಾಜ್ಯಪಾಲ ವಾಜುಭಾಯ್ ವಾಲಾ ಅವರ ಅವಧಿ ಮುಗಿದ ಕಾರಣ ನೂತನ ರಾಜ್ಯಪಾಲರನ್ನಾಗಿ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಿಸಲಾಗಿದೆ. ಕರ್ನಾಟಕ ಸೇರಿದಂತೆ ೮ ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚರನೆ ಬೆನ್ನಲ್ಲೇ ನೇಮಕಾತಿಯಾಗಿದೆ. ಈ ಮೂಲಕ ಕರ್ನಾಟಕದ ೧೯ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕರಿಸಲಿದ್ದಾರೆ. ಕರ್ನಾಟಕ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ನೇಮಕವಾಗುವ ಜತೆಗೆ ಒಟ್ಟು ೮ ರಾಜ್ಯಗಳಿಗೆ…

ಮೇಕೆದಾಟು ಯೋಜನೆ ಮಾಡಬೇಡಿ ತಮಿಳುನಾಡು ಸಿಎಂ ಪತ್ರ

ಚೆನ್ನೈ,ಜು,04: ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಮುಂದುವರೆಸಬೇಡಿ ಎಂದು ತಮಿಳುನಾಡು ಸಿ.ಎಂ.ಸ್ಟಾಲಿನ್ ಕರ್ನಾಟಕ ಸಿಎಂಗೆ ಪತ್ರ ಬರೆದಿದ್ದಾರೆ. ಮೇಕೆ ದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗಲಿದೆ ನಮ್ಮ ಲ್ಲೂ ನೀರಿಗೆ ಅಭಾವವಿದೆ. ನಾವು ಪ್ರತಿನಿತ್ಯ ಪರದಾಡುತ್ತಿದ್ದೇವೆ. ನಿಮ್ಮ ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗುವುದಿಲ್ಲ ಎಂಬುದು ಸಮಂಜಸವಲ್ಲ ಎಂದಿದ್ದಾರೆ. ಆ ಪತ್ರದಲ್ಲಿ ಎರಡೂ ರಾಜ್ಯಗಳ ಮಧ್ಯೆ ಸೌಹಾರ್ದ ಸಂಬಂಧ ಬೆಳೆಯಬೇಕು. ಹೀಗಾಗಿ, ಮೇಕೆದಾಟು ಯೋಜನೆಗೆ ಯಾವುದೇ ವಿರೋಧ ವ್ಯಕ್ತಪಡಿಸಬಾರದು. ಎರಡು ರಾಜ್ಯಗಳ ಅಧಿಕಾರಿಗಳು ಜತೆಗೂಡಿ ದ್ವಿಪಕ್ಷೀಯ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು.…

ಒಂದು ರಾಷ್ಟ್ರ ಒಂದು ಪಡಿತರ ಕಾರ್ಡ್ ಯೋಜನೆ ಜಾರಿಗೆ ಸುಪ್ರೀಂ ಗಡವು

ನವದೆಹಲಿ,ಜೂ,೨೯: ಮುಂದಿನ ಜುಲೈ ೩೧ ರೊಳಗೆ ’ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್, ಮಂಗಳವಾರ ಗಡುವು ನೀಡಿದೆ. ಸಾಂಕ್ರಾಮಿಕ ರೋಗ ಮುಂದುವರಿಯುವವರೆಗೆ ಪಡಿತರವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ಇದರ ಜೊತೆಗೆ ವಲಸೆ ಕಾರ್ಮಿಕರನ್ನು ನೋಂದಾಯಿಸಲು ಪೋರ್ಟಲ್ ಸ್ಥಾಪಿಸುವಂತೆಯೂ ಕೇಂದ್ರಕ್ಕೆ ಸೂಚನೆ ಕೊಟ್ಟಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ವಿಭಾಗೀಯ ಪೀಠ ಕೋವಿಡ್-೧೯ ರಿಂದ ಬಾಧಿತರಾದ ವಲಸೆ ಕಾರ್ಮಿಕರ…

ಕೊರೊನಾ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ

ನವದೆಹಲಿ,ಜೂ,28:ಕೊರೋನ ಸೋಂಕಿತರ ಸಂಖ್ಯ ಇಳಿಮುಖವಾಗುತ್ತಿದ್ದು ಕೊರೊನಾ ಬಾಧಿತ ವಲಯಗಳಿಗೆ ಕೇಂದ್ರ ಸರ್ಕಾರ 1.1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಸುದ್ದಿಗೋಷ್ಡಿ ನಡೆಸಿ ವಿವಿರ ನೀಡಿದರು. ಕೊರೋನಾ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ರೂ, ವೈದ್ಯಕೀಯ ಮೂಲಸೌಕರ್ಯಕ್ಕೆ 50 ಸಾವಿರ ಕೋಟಿ ರೂ. ಉಳಿದ ವಲಯಗಳಿಗೆ 60 ಸಾವಿರ ಕೋಟಿ ಅನುದಾನ ನೀಡಲಾಗುತ್ತದೆ ಎಂದು ತಿಳಿಸಿದರು. 1.5 ಲಕ್ಷ ಕೋಟಿ ರೂ. ತುರ್ತು ಕ್ರೆಡಿಟ್…

ಜಮ್ಮು ಕೇಂದ್ರಿತ ಸ್ಥಳಗಳ ಮೇಲೆ ಇದೆ ಮೊದಲಬಾರಿ ಡ್ರೋನ್ ಬಳಕೆ

ಜಮ್ಮು,ಜೂ28: ಪ್ರಮುಖ ಕೇಂದ್ರಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನಕೇಂದ್ರಿತ ಉಗ್ರರು ಇದೇ ಮೊದಲ ಬಾರಿಗೆ ಡ್ರೋನ್‌ಗಳನ್ನು ಬಳಸಿದ್ದಾರೆ. ಜಮ್ಮು ವಿಮಾನ ನಿಲ್ದಾಣದಲ್ಲಿರುವ ಭಾರತೀಯ ವಾಯು ಪಡೆ ಕೇಂದ್ರವೊಂದರ ಮೇಲೆ ಭಾನುವಾರ ಬೆಳಿಗ್ಗಿನ ಜಾವ 1.40ರ ಹೊತ್ತಿಗೆ ಎರಡು ಬಾಂಬ್‌ ಎಸೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರು ನಿಮಿಷಗಳ ಅಂತರದಲ್ಲಿ ಎರಡು ಬಾಂಬ್‌ ದಾಳಿಗಳು ನಡೆದಿವೆ. ಇಬ್ಬರು ಯೋಧರು ದಾಳಿಯಲ್ಲಿ ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದ ಭಾರಿ ಭದ್ರತೆಯ ತಾಂತ್ರಿಕ ಪ್ರದೇಶದ ಒಂದಸ್ತಿನ ಕಟ್ಟಡದ ಚಾವಣಿಯನ್ನು ಸೀಳಿ ಮೊದಲ ಬಾಂಬ್‌…

ಹಳ್ಳಿಹುಡುಗ ರಾಷ್ಟ್ರಪತಿ ಹುದ್ದೆಗೇರಿದ್ದೇನೆ ಎಂದರೆ ಅದಕ್ಕೆ ಪ್ರಜಾಪ್ರಭುತ್ವ ಕಾರಣ: ಕೋವಿಂದ್

ಕಾನ್ಪುರ,ಜೂ,27:ಇಂಥ ಚಿಕ್ಕ ಹಳ್ಳಿಯಲ್ಲಿ ‌ಜನಸಿದ‌ನಾನು ಈ ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನದಲ್ಲಿ ಕೂರುತ್ತೇನೆ  ಎಂದು ಕನಸಲ್ಲೂ ಕಂಡಿರಲಿಲ್ಲ ಇದಕ್ಕೆ ಈ ದೇಶದ ಪ್ರಜಾಪ್ರಭುತ್ವ ವೇ ಕಾರಣ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಅವರು ಭಾನುವಾರ ಅವರ ಹುಟ್ಟೂರಾದ ಉತ್ತರ ಪ್ರದೇಶದ ಕಾನ್ಪುರದ ದೇಹತ್ ಜಿಲ್ಲೆಯ ಪರಾಂಖ್ ಗ್ರಾಮದಲ್ಲಿ ಅಭಿನಂದನೆ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡುತ್ತಾ ತಮ್ಮ ಬಾಲ್ಯದ ದಿನಗಳು, ಕನಸು ಕಂಡಿದ್ದು, ಮುಂದೆ ಬೆಳೆದ ರೀತಿಯನ್ನು ಬಣ್ಣಿಸಿದರು. ನನ್ನಂತಹ ಸಾಮಾನ್ಯ ಹಳ್ಳಿಯಲ್ಲಿ…

ದೇಶದಲ್ಲಿ ಹೆಚ್ಚುತ್ತಿರುವ ಡೆಲ್ಟಾ ಪ್ಲೆಸ್ ಕೊರೊನಾ ಸಂಖ್ಯೆ

ನವದೆಹಲಿ,ಜೀ,25: ಕೊರೊನಾ ಮೂರನೇ ಅಲೆ ಆರಂಭದ ಮುನ್ನವೇ ಡೆಲ್ಟಾ ಪ್ಲೆಸ್ ಕೋವಿಡ್ ಸಂಖ್ಯೆ ಜಾಸ್ತಿಯಾಗುತ್ತಿದೆ. 45,000 ಮಾದರಿಗಳ ಪೈಕಿ 48 ‘ಡೆಲ್ಟಾ ಪ್ಲಸ್’ ಕೋವಿಡ್ ರೂಪಾಂತರ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 20 ಪ್ರಕರಣಗಳು ಎಂದು ವರದಿಯಾಗಿದೆ ಎಂದು ಕೇಂದ್ರ ತಿಳಿಸಿದೆ. ತಮಿಳುನಾಡಿನಲ್ಲಿ ಒಂಬತ್ತು, ಮಧ್ಯಪ್ರದೇಶದಲ್ಲಿ ಏಳು, ಕೇರಳದಲ್ಲಿ ಮೂರು, ಪಂಜಾಬ್ ಮತ್ತು ಗುಜರಾತ್‌ನಲ್ಲಿ ತಲಾ ಎರಡು ಪ್ರಕರಣಗಳು ಪತ್ತೆಯಾಗಿವೆ. ಇನ್ನು ಆಂಧ್ರಪ್ರದೇಶ, ಒಡಿಶಾ, ರಾಜಸ್ಥಾನ, ಜಮ್ಮು ಮತ್ತು ಕರ್ನಾಟಕದಲ್ಲಿ ತಲಾ ಒಂದು…

೧೨ನೇ ತರಗಿ ಪರೀಕ್ಷೆ ವೇಳೆ ಯಾರೇ ಸಾವಪ್ಪಿದರೂ ಸರ್ಕಾರವೇ ಹೊಣೆ-ಸುಪ್ರೀಂ

ನವ ದೆಹಲಿ,ಜೂ, ೨೪;ಕೊರೊನಾ ಸೋಂಕಿನ ಸಂಕಷ್ಟದಲ್ಲಿಯೂ ಆಂಧ್ರ ಸರ್ಕಾರ ೧೨ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿರು ಸುಪ್ರೀಂಕೋರ್ಟ್ ಒಂದು ವೇಳೆ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಒಂದು ಸಾವಾದರೂ ಅದಕ್ಕೆ ಆ ಸರ್ಕಾರವೇ ನೇರ ಹೊಣೆಯಾಗಲಿದ್ದು ಸಾವನ್ನಪ್ಪಿದ ವಿದ್ಯಾರ್ಥಿ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ನೀಡುವಂತೆ ಎಚ್ಚರಿಸಿದೆ ಆಂಧ್ರಪ್ರದೇಶ ೧೨ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವ ನಿರ್ಣಯವನ್ನು ಖಂಡಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇಂದು ಈ ಅರ್ಜಿಯ ವಿಚಾರಣೆಗೆ ಮುಂದಾದ ನ್ಯಾಯಮೂರ್ತಿಗಳಾದ…

ನ ಕಲಿ ಟಿಆರ್‌ಪಿ ಹಗರಣ: ಅರ್ನಬ್ ಆರೋಪಿ

ಮುಂಬೈಜೂ,೨೨: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನ್ಯಾಯಾಲಯಕ್ಕೆ ಮುಂಬೈ ಪೊಲೀಸರು ಮಂಗಳವಾರ ಎರಡನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಆರೋಪಿಯನ್ನಾಗಿ ಉಲ್ಲೇಖಿಸಲಾಗಿದೆಹಗರಣ ಕುರಿತು ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್‌ನ ಕ್ರೈಂ ಇಂಟೆಲಿಜೆನ್ಸ್ ಯುನಿಟ್ (ಸಿಐಯು) ಈ ಚಾರ್ಜ್‌ಶೀಟನ್ನು ಸಲ್ಲಿಸಿದೆ.ಚಾರ್ಜ್‌ಶೀಟ್‌ನಲ್ಲಿ ಹಲವು ಆರೋಪಿಗಳ ಹೆಸರುಗಳಿದ್ದು, ಅರ್ನಬ್ ಗೋಸ್ವಾಮಿ ಹಾಗೂ ಎಆರ್‌ಜಿ ಔಟ್‌ಲಿಯರ್ ಸಂಸ್ಥೆಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ’ ಎಂದು ಗೋಸ್ವಾಮಿ ಪರ ವಕೀಲರು ತಿಳಿಸಿದ್ದಾರೆನಕಲಿ ಟಿಆರ್‌ಪಿ ಹಗರಣ ಕಳೆದ ವರ್ಷ ಅಕ್ಟೋಬರ್‌ನಲ್ಲಿ…

ತೃತೀಯ ರಂಗ ರಚನೆಗೆ ಪುಷ್ಟಿ ನೀಡಿದ ಕಿಶೋರ್ ,ಶರದ್ ಪವಾರ್ ಮಾತುಕತೆ

ಬಿಜೆಪಿಯೇತರ ತೃತೀಯ ರಂಗ ಉದಯವಾಗಲಿದೆ ಎಂಬ ಉಹಾಪೋಗಳ ಮಧ್ಯೆ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಮತ್ತು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನಡೆಸಿದ ಮಾತುಕತೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತದೆ ನವದೆಹಲಿ,ಜೂ,21: ಬಿಜೆಪಿಯೇತರ ತೃತೀಯ ರಂಗ  ರಚನೆಯಾಗುವ ಲಕ್ಷಣಗಳು ಇತ್ತೀಚಗೆ ಬಲವಾಗಿ ಗೋಚರಿಸುತ್ತವೆ. ಇದಕ್ಕೆ ಪುಷ್ಟಿ ನೀಡುವಂತೆ ರಸಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಎನ್ ಸಿಪಿ ಮುಖ್ಯಸ್ಥ ಶರದ್ ಪವರ್ ಜತೆ ಮಾತುಕತೆ ನಡೆಸಿರುವುದು ಮತ್ತಷ್ಟು ಊಹಾಪೋಹಗಳು ಎದ್ದಿವೆ. ಶರದ್ ಪವಾರ್ ಅವರ ನಿವಾಸದಲ್ಲಿ…

ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗ ಆಶಾಕಿರಣ; ಮೋದಿ

ನವದೆಹಲಿ,ಜೂ,21: ಭಾರತೀಯ ಮೂಲದ ಯೋಗ ಪದ್ದತಿಯನ್ನು ಅಳವಡಿಸಿಕೊಂಡಿದ್ದು,ಇದರಿಂದ ಕೊರೊನಾ ಕಾಲದ ಈ ಸಮಯದಲ್ಲಿ ಯೋಗಾಭ್ಯಾಸ ಒಂದು ಉತ್ತಮ ಅಂಶವಾಗಿದೆ ಇದರಿಂದ ದೇಹ ಮತ್ತು ಮನಸ್ಸು ಮತ್ತಷ್ಟು ದೃಡವಾಗುತ್ತದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯ ಪಟ್ಟಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು,ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು ಎನ್ನುವ ಮೂಲಕ ಮಾತು ಆರಂಭಿಸಿ, ಕೊರೊನಾ ನಡುವೆ ಯೋಗ ಆಶಾಕಿರಣವಾಗಿದೆ. ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ ಎಂದು ತಿಳಿಸಿದ್ದಾರೆ. ವಿಶ್ವದ ಮೂಲೆಮೂಲೆಯಲ್ಲಿ ಲಕ್ಷಾಂತರ ಜನರು…

ಶೈಲಜಾ ಟೀಚರ್ ಗೆ ಯುರೋಪಿಯನ್ ಓಪನ್ ಸೊಸೈಟಿ ಪ್ರಶಸ್ತಿ

ತಿರುವನಂತಪುರಂ,ಜೂ,29: ಕೇರಳ ಸರ್ಕಾರದ ಮಾಜಿ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಅವರು ಸಮುದಾಯ ಆರೋಗ್ಯ ಸೇವೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿಯ ‘ಓಪನ್ ಸೊಸೈಟಿ‘ ಪ್ರಶಸ್ತಿ ದೊರಕಿದೆ. ಇತ್ತೀಚೆಗೆ ವರ್ಚುವಲ್ ಮೂಲಕ ನಡೆದ ಯೂನಿವರ್ಸಿಟಿಯ 30 ನೇ ಪದವಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. 1994 ರಲ್ಲಿ ತತ್ವಶಾಸ್ತ್ರಜ್ಞ ಸರ್ ಕಾರ್ಲ್ ಪಾಪರ್ ಅವರಿಗೆ ‘ಓಪನ್ ಸೊಸೈಟಿ‘ಯ ಮೊದಲ ಪ್ರಶಸ್ತಿ ಸಂದಿತ್ತು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ವಿವಿಯ ಅಧ್ಯಕ್ಷ ಮಿಚೆಲ್…

ಅಪ್ಪಂದಿರ ದಿನವನ್ನು ವಿಶೇಷವಾಗಿ ಸಂಭ್ರಿಸಿದ ಗೂಗಲ್

ಇಂದು ಅಪ್ಪಂದಿರ ದಿನಾಚರಣೆ ಈ ಸಂದರ್ಭದಲ್ಲಿ ಗೂಬಲ್ ಇದನ್ನು ವಿಶೇಷವಾಗಿ ಸಂಭ್ರಮಿಸಿದೆ. ಬಣ್ಣ ಬಣ್ಣದ ಅಲಂಕಾರದ ಜತೆ ಡೂಡಲ್ ಮೂಲಕ ಅಪ್ಪಂದಿರ ದಿನದ ಶುಭಾಶಯ ತಿಳಿಸಿದೆ. ಡೂಡಲ್‌ನೊಂದಿಗೆ ವಿಶೇಷವಾಗಿ ‘ಅಪ್ಪಂದಿರ ದಿನದ ಶುಭಾಶಯಗಳು’! ಎಂದು ಸಂದೇಶ ಸಾರುವ ಮೂಲಕ ಗೂಗಲ್ ಶುಭಕೋರಿದೆ. ಅನಿಮೇಟೆಡ್? ಡೂಡಲ್ ರಚಿಸುವ ಮೂಲಕ ಗೂಗಲ್ ಶುಭಾಶಯ ತಿಳಿಸಿದೆ ಕೊರೊನಾ ವೈರಸ್ ಹಾವಳಿಯಿಂದಾಗಿ ಕಳೆದ ವರ್ಷದಂತೆಯೇ ಈ ವರ್ಷವೂ ಕೂಡಾ ಹೆಚ್ಚು ವಿಜೃಂಭಣೆಯಿಂದ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತಿಲ್ಲ. ಹೆಚ್ಚಿನ ಜನರು ಗ್ರೀಟಿಂಗ್ ಕೊಡುವ ಮೂಲಕ…

ಅತ್ಯಾಚಾರ ಆರೋಪ;ತಮಿಳುನಾಡು ಮಾಜಿ ಸಚಿವ ಮಣಿಕಂದನ್ ಬಂಧನ

ಬೆಂಗಳೂರು,ಜೂ.೨೦: ಎಐಡಿಎಂಕೆ ಪಕ್ಷದ ಮಾಜಿ ಸಚಿವ ಮಣಿಕಂದನ್ ಅವರನ್ನು ಅತ್ಯಾಚಾರ ಆರೋಪದ ಮೇಲೆ ಇಂದು ಬೆಂಗಳೂರಿನಲ್ಲಿ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಆರೋಪ ಹೊತ್ತಿರುವ ಮಾಜಿ ಸಚಿವ ಮಣಿಕಂದನ್ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು ತಮಿಳುನಾಡು ಪೊಲಿಸರು ಅವರ ಬಂಧನಕ್ಕೆ ಬಲೆ ಬೀಸಿದ್ದರು ಇಂದು ಬೆಂಗಳೂರಿನಲ್ಲಿ ಇರುವುದು ಖಾತ್ರಿಯಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿದ್ದಾರೆ ಆರೋಪಿ ಮಣಿಕಂದನ್ ಮಲೇಷ್ಯಾ ಮೂಲದ ನಟಿ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿ ಬಂದಿದೆ. ೨೦೧೭ರಲ್ಲಿ ಮಣಿಕಂದನ್ ಐಟಿ ಸಚಿವರಾಗಿದ್ದಾಗ ನಟಿಯ ಪರಿಚಯವಾಗಿತ್ತು. ಮಲೇಷಿಯಾದಲ್ಲಿ…

೭ನೇ ಅಂತರಾಷ್ಟ್ರೀಯ ಯೋಗದಿನ ನಾಳೆ-ಮೋದಿ ಭಾಷಣ

ನವದೆಹಲಿ,ಜೂ,೨೦: ಅಂತರಾಷ್ಟ್ರೀಯ ಯೋಗ ದಿನದ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಿಗ್ಗೆ ನಡೆಯುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಏಳನೇ ಅಂತರಾಷ್ಟ್ರೀಯ ಯೋಗದಿನವಾಗಿದ್ದು ಕೋವಿಡ್-೧೯ ಹಿನ್ನೆಯಲ್ಲಿಯಲ್ಲಿ ಯೋಗದಿನದ ಪ್ರಧಾನ ಸಮಾರಂಭ ಬೆಳಿಗ್ಗೆ ೬.೧೫ಕ್ಕೆ ಆರಂಭವಾಗಲಿದ್ದು ಈ ಸಮಾರಂಭದಲ್ಲಿ ಮೋದಿ ಭಾಷಣ ಮಾಡಲಿದ್ದು ಇದರ ನೇರಪ್ರಸಾರವನ್ನು ದೂರದರ್ಶನ ತನ್ನ ಎಲ್ಲಾ ವಾಹಿನಿಗಳಲ್ಲಿ ಪ್ರಸಾರ ಮಾಡಲಿದೆ ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಸಹ ಭಾಷಣ ಮಾಡಲಿದ್ದಾರೆ. ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯಲ್ಲಿ ನಡೆಯಲಿರುವ…

ಶೀಘ್ರ ಕೇಂದ್ರ ಸಚಿವ ಸಂಪುಟ ವಿಸ್ತರಣೆ?

ನವದೆಹಲಿ,ಜೂ,೧೫: ಕೇಂದ್ರ ಸಚಿವ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ .ಹೀಗಾಗಿಯೇ ಮೋದಿ ನಿರಂತರ ಸಭೆಗಳನ್ನು ಮಾಡುತ್ತಿದ್ದಾರೆ ಇದೇ ವೇಳೆ ರಾಜ್ಯ ಬಿಜೆಪಿ ಸಂಸದರು ಕೂಡ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ಖಾಲಿ ಇರುವ ಮತ್ತು ಕೆಲವರ ಖಾತೆಗಳನ್ನು ಬದಲಾವನೆ ಮಾಡಲಾಗುತ್ತಿದೆ ಹೀಗಾಗಿ ಯಾರಿಗೆ ಯಾವ ಖಾತೆ ದೊರೆಯುತ್ತದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಕೇಂದ್ರದ ಕೆಲವು ಸಚಿವರು ರಾಜೀನಾಮೆ, ನಿಧನದಿಂದ ಕೇಂದ್ರದ ಸಚಿವ ಸ್ಥಾನಗಳು ತೆರವಾಗಿವೆ. ರಾಮ್ ವಿಲಾಸ್ ಪಾಸ್ವಾನ್,…

ಕಾಂಗ್ರೆಸ್ ಪಕ್ಷದಲ್ಲಿ ವ್ಯಾಪಕ ಸುಧಾರಣೆ ಅಗತ್ಯ-ಕಪಿಲ್ ಸಿಬಲ್

ನವದೆಹಲಿ,ಜೂ,೧೩:ಕಾಂಗ್ರೆಸ್ ಪಕ್ಷ ಜಡತ್ವವನ್ನು ಬಿಟ್ಟು ಸಕ್ರಿಯ ರಾಜಕಾರಣದತ್ತ ಮುಖಮಾಡಬೇಕು ಮತ್ತು ಸಂಘಟನಾ ವಲಯದಲ್ಲಿ ವ್ಯಾಪಕ ಸುಧಾರಣೆಗಳ ಅಗತ್ಯವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ. ಭಾರತಕ್ಕೆ ಪುನಃ ಚೇತರಿಸಿಕೊಂಡ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಅದಕ್ಕಾಗಿ ಜಡತ್ವವನ್ನು ಬಿಟ್ಟು ಸಕ್ರಿಯವಾಗಿ ಅರ್ಥಪೂರ್ಣವಾಗಿ ತೊಡಗಿಸಿಕೊಳ್ಳುವ ಮನಸ್ಥಿತಿ ಇದೆ ಎಂದು ಇದು ಸಂಭವಿಸಬೇಕಾದರೆ ಕೇಂದ್ರ ಹಾಗೂ ರಾಜ್ಯ ಸಂಘಟನಾ ವಲಯದಲ್ಲಿ ವ್ಯಾಪಕ ಸುಧಾರಣೆಗಳನ್ನು ಮಾಡಬೇಕಿದೆ. ಈ ಮೂಲಕ ಪಕ್ಷವು ಸಂಘಟನಾ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಸಾಬೀತು ಮಾಡಬೇಕು ಎಂದಿದ್ದಾರೆ…

ಜಿ೭ ಶೃಂಗಸಭೆಯಲ್ಲಿ ಮೋದಿ ಪ್ರಸ್ತಾವನೆಗೆ ಒಪ್ಪಿಗೆ

ನವದೆಹಲಿ, ಜೂ,೧೩: ಜಿ-೭ ಶೃಂಗ ಸಭೆಯಲ್ಲಿ ಪಾಲೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಲ್ಲಿಸಿರುವ ಪ್ರಸ್ತಾವನೆಗೆ ಹಲವಾರು ಮುಖಂಡರು ಒಪ್ಪಿಕೊಂಡಿದ್ದು,ಇದಕ್ಕೆ ದಕ್ಷಿಣ ಆಫ್ರಿಕ ಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಜೂನ್ ೧೨ ಮತ್ತು ೧೩ ರಂದು ವರ್ಚುವಲ್ ಮಾದರಿಯಲ್ಲಿ ನಡೆಯಲಿರುವ ಜಿ.೭ ಶೃಂಗದ ಬಾಹ್ಯ ಅಧಿವೇಶನ ಹೈಬ್ರೀಡ್ ಮಾದರಿಯಲ್ಲಿ ಆಯೋಜನೆಗೊಂಡಿದೆ. ವಿಶ್ವ ನಾಯಕರು ಕೋವಿಡ್ ೧೯ ವಿರುದ್ಧ ಹೋರಾಡುತ್ತಿರುವ ರಾಷ್ಟ್ರಗಳಿಗೆ ಲಸಿಕೆಯ ೧೦೦ ಕೋಟಿ ಡೋಸ್‌ಗಳನ್ನು ಒದಗಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಯುಕೆ, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್…

ಮೋದಿಗೆ ಭಾರತೀಯರಿಗಿಂತ ರಾಜಕಾರಣವೇ ಮುಖ್ಯ;ಪ್ರಿಯಾಂಕ ಗಾಂಧಿ

ನವದೆಹಲಿ,ಜೂ,12: ಪ್ರಧಾನಿ ಮೋದಿ ಅವರಿಗೆ ಭಾರತೀಯರಿಗಿಂತ ಅವರಿಗೆ ರಸಜಕಾತಣವೇ ಮುಖ್ಯ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ. ‘ಕೊರೊನಾ ಸಂದರ್ಭದಲ್ಲಿ ಹಿಂದೆ ಸರಿದು ಕೆಟ್ಟದ್ದು ಹಾದುಹೋಗಲು ಕಾಯುತ್ತಿದ್ದರು. ಭಾರತದ ಪ್ರಧಾನಿ ಹೇಡಿಯಂತೆ ವರ್ತಿಸಿದ್ದಾರೆ. ಅವರು ನಮ್ಮ ದೇಶವನ್ನು ನಿರಾಸೆಗೊಳಿಸಿದ್ದಾರೆ ’ ಎಂದು ಪ್ರಿಯಾಂಕಾ ಗಾಂಧಿ ತಮ್ಮ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ‘ಭಾರತೀಯರು ಅವರಿಗೆ ಮುಖ್ಯವಲ್ಲ. ರಾಜಕೀಯ ಮುಖ್ಯ. ಸತ್ಯದ ಬಗ್ಗೆ ಅವರಿಗೆ ಕಾಳಜಿ ಇಲ್ಲ, ಅಪಪ್ರಚಾರ ಮಾಡುತ್ತಾರೆ, ’ಜನರು…

1 2 3 4 5 6 8
error: Content is protected !!