Browsing: ವಾಣಿಜ್ಯ

ವಾಣಿಜ್ಯ

ವಿಪ್ರೋ ಹೆಲ್ತ್ ಕೇರ್ ನಿಂದ ರಾಜ್ಯದಲ್ಲಿ 8,000 ಕೋಟಿ ರೂ. ಹೂಡಿಕೆ

ವಿಪ್ರೋ ಹೆಲ್ತ್ ಕೇರ್ ನಿಂದ ರಾಜ್ಯದಲ್ಲಿ 8,000 ಕೋಟಿ ರೂ. ಹೂಡಿಕೆ ಬೆಂಗಳೂರು,ಫೆ,12-ವಿಪ್ರೋ-ಜಿಇ ಹೆಲ್ತ್ ಕೇರ್ ಸಂಸ್ಥೆಯು ಕರ್ನಾಟಕದ ಆರೋಗ್ಯಸೇವೆಗಳ ಕ್ಷೇತ್ರದಲ್ಲಿ ಮುಂದಿನ 5 ವರ್ಷಗಳಲ್ಲಿ ಇನ್ನೂ 8,000 ಕೋಟಿ ರೂ. ಹೂಡಿಕೆ ಮಾಡಲಿದೆ. ಇದು ಕಳೆದ ಎರಡು ದಶಕಗಳಲ್ಲಿ ವಿನಿಯೋಗಿಸಿರುವ 32 ಸಾವಿರ ಕೋಟಿ ರೂ. ಬಂಡವಾಳದ ಮುಂದುವರಿದ ಭಾಗವಾಗಿದೆ ಎಂದು ಕಂಪನಿಯ ದಕ್ಷಿಣ ಏಷ್ಯಾ ವಿಭಾಗದ ಮುಖ್ಯಸ್ಥ ಚೈತನ್ಯ ಸರವಟೆ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ನಡೆದ `ಜಗತ್ತಿನ ಅಗತ್ಯಗಳಿಗೆ ಮೇಕ್ ಇನ್…

ಸ್ವಯಂಚಾಲಿತ ಕಾರಿನ ಮೇಲೆ ವಾಹನೋದ್ಯಮದ ನಿರೀಕ್ಷೆ

ಸ್ವಯಂಚಾಲಿತ ಕಾರಿನ ಮೇಲೆ ವಾಹನೋದ್ಯಮದ ನಿರೀಕ್ಷೆ by-ಕೆಂಧೂಳಿ ಬೆಂಗಳೂರು,ಫೆ,12-: ಸ್ವಯಂಚಾಲಿತ ಕಾರುಗಳು ಮುಂದಿನ ದಿನಗಳಲ್ಲಿ ಸಂಚಾರ ಕ್ಷೇತ್ರದಲ್ಲಿನ ಬಹುದೊಡ್ಡ ತಂತ್ರಜ್ಞಾನವಾಗಲಿದೆ ಎಂದು ‘ಮರ್ಸಿಡಿಸ್-ಬೆನ್ಜ್ ಇಂಡಿಯಾ’ದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಸಂತೋಷ್‌ ಅಯ್ಯರ್‌ ಬುಧವಾರ ಅಭಿಪ್ರಾಯಪಟ್ಟರು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ‘ಜಾಗತಿಕ ಹೂಡಿಕೆ ಸಮಾವೇಶ’ದಲ್ಲಿ ನಡೆದ ‘ವೇಗದ ನಗರೀಕರಣದ ವೇಳೆ ಸಂಚಾರ ಕ್ಷೇತ್ರದ ಭವಿಷ್ಯ’ ಗೋಷ್ಠಿಯಲ್ಲಿ ಮಾತನಾಡಿದರು. ಸರಕಾರ ಕಾರುಗಳ ಮೇಲೆ 68% ತೆರಿಗೆ ವಿಧಿಸುತ್ತಿದೆ. ಆದರೆ ಆ ಹಣ ಬೇರೆಡೆ ಬಳಕೆಯಾಗುತ್ತಿರುವುದು ಈ…

ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ

ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ’ by-ಕೆಂಧೂಳಿ ಬೆಂಗಳೂರು,ಫೆ,12- `ನಾವು ಸೆಮಿಕಂಡಕ್ಟರ್ ಕ್ಷೇತ್ರದ ಸಹಿತ ಎಲ್ಲಾ ಕೈಗಾರಿಕಾ ವಲಯಗಳಿಗೆ ಸಂಬಂಧಿಸಿದಂತೆ ಬರೀ ಬಂಡವಾಳ ಆಕರ್ಷಿಸುವ ಬಗ್ಗೆ ಮಾತನಾಡುತ್ತಿರುತ್ತೇವೆ. ಆದರೆ, ವಾಸ್ತವವಾಗಿ ನಾವು ಪ್ರತಿಭೆ ಮತ್ತು ಸಾಮರ್ಥ್ಯ ಎರಡನ್ನೂ ಸೃಷ್ಟಿಸುವ ಜರೂರಿದೆ. ಇದು ಸಾಧ್ಯವಾದರೆ, ಬಂಡವಾಳದ ಹರಿವು ತನ್ನಿಂತಾನೇ ಆಗುತ್ತದೆ.’ ಇದು ಜಾಗತಿಕ ಹೂಡಿಕದಾರರ ಸಮಾವೇಶದಲ್ಲಿ ಬುಧವಾರ ನಡೆದ `ಸೆಮಿಕಂಡಕ್ಟರ್ ಕ್ರಾಂತಿಯಲ್ಲಿ ಭಾರತದ ನಾಯಕತ್ವದ ಸರದಿ’ ಕುರಿತು ನಡೆದ ಗೋಷ್ಠಿಯಲ್ಲಿ ಮಾತನಾಡಿದ ಉದ್ಯಮ ಪರಿಣತರಾದ ಟೆಕ್ಸಾಸ್…

5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ,ತಾಲ್ಲೂಕಿಗೆ ಒತ್ತು

5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ,ತಾಲ್ಲೂಕಿಗೆ ಒತ್ತು by-ಕೆಂಧೂಳಿ ಬೆಂಗಳೂರು,ಫೆ,11- ರಾಜ್ಯ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಡುಗಡೆ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು. ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ…

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು,ಫೆ,11- ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ,…

12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ ಬಿ ಪಾಟೀಲ

12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರುಫೆ,11-ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ…

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್ by-ಕೆಂಧೂಳಿ ಬೆಂಗಳೂರು,ಫೆ,11- ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿಮಾಡಿಸಿದ ರಾಜ್ಯವಾಗಿದೆ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.…

ಇಂದಿನಿಂದ ಮೂರು ದಿನಗಳ ಕಾಲ  ಬೆಂಗಳೂರು ಅರಮನೆ ಮೈದಾನದಲ್ಲಿ   ಇನ್ವೆಸ್ಟ್ ಕರ್ನಾಟಕ ಸಮಾವೇಶ

ಇಂದಿನಿಂದ ಮೂರು ದಿನಗಳ ಕಾಲ  ಬೆಂಗಳೂರು ಅರಮನೆ ಮೈದಾನದಲ್ಲಿ  ಇನ್ವೆಸ್ಟ್ ಕರ್ನಾಟಕ ಸಮಾವೇಶ by-ಕೆಂಧೂಳಿ ಬೆಂಗಳೂರು,ಫೆ11-ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್‌, ನವೋದ್ಯಮ, ಏರೊಸ್ಪೇಸ್‌ ಆ್ಯಂಡ್‌ ಡಿಫೆನ್ಸ್‌ ಮತ್ತಿತರ ಕ್ಷೇತ್ರಗಳಲ್ಲಿ ವಿಶ್ವದಾದ್ಯಂತ ಪ್ರಖ್ಯಾತಿಯ ಛಾಪು ಮೂಡಿಸಿರುವ ಕರ್ನಾಟಕವು, ʼಪ್ರಗತಿಯ ಮರುಕಲ್ಪನೆʼ (Reimagining Growth) ಧ್ಯೇಯದ ಇನ್ವೆಸ್ಟ್‌ ಕರ್ನಾಟಕ 2025ರ ಮೂಲಕ ವಿಶ್ವದಾದ್ಯಂತದ ಹೂಡಿಕೆದಾರರನ್ನು ರಾಜ್ಯದತ್ತ ಚುಂಬಕದಂತೆ ಸೆಳೆಯಲು ಸಜ್ಜಾಗಿದೆ. ಮಂಗಳವಾರದಿಂದ ಶುಕ್ರವಾರದವರೆಗೆ (ಫೆ. 11ರಿಂದ 14) ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲಿರುವ ಉದ್ದಿಮೆ ದಿಗ್ಗಜರು,…

ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ:  ಎಂ.ಬಿ. ಪಾಟೀಲ

ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ:  ಎಂ.ಬಿ. ಪಾಟೀಲ by-ಕೆಂಧೂಳಿ ಬೆಂಗಳೂರು,ಫೆ,09- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲಿರುವ ಭವ್ಯ ಉದ್ಘಾಟನಾ ಸಮಾರಂಭವು ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ ಮುನ್ನುಡಿ ಬರೆಯಲಿದೆ. ʼಈ ಹೂಡಿಕೆದಾರರ ಸಮಾವೇಶವು, ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ನಾವೀನ್ಯತೆ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ…

ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ

ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ  by-ಕೆಂಧೂಳಿ ಬೆಂಗಳೂರು,ಫೆ,08-ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನಗಳನ್ನು ಆಧರಿಸಿದ ಆಗ್ರೋ ಪಾರ್ಕ್, ಚಿತ್ರದುರ್ಗದಲ್ಲಿ ಡ್ರೋನ್ ಪಾರ್ಕ್, ಜಂಗಮನಕೋಟೆಯಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ಡೀಪ್-ಟೆಕ್ ಪಾರ್ಕ್, ಡಾಬಸಪೇಟೆಗೆ ಸಮೀಪದ ಹನುಮಂತಪುರದಲ್ಲಿ ಮೆಗಾ ಲಾಜಿಸ್ಟಿಕ್ಸ್ ಪಾರ್ಕ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು…

ಆರ್ ಬಿ ಐ ಬಡ್ಡಿದರದಲ್ಲಿ 25 ಬಿಪಿಎಸ್ ಕಡಿತ, ಆರ್ಥಿಕ ಬೆಳವಣಿಗೆಗೆ ಉತ್ತೇಜನಕ್ಕೆ ಎಪ್ ಕೆಸಿಸಿಐ ಸ್ವಾಗತ

ಆರ್ ಬಿ ಐ ಬಡ್ಡಿದರದಲ್ಲಿ 25 ಬಿಪಿಎಸ್ ಕಡಿತ, ಆರ್ಥಿಕ ಬೆಳವಣಿಗೆಗೆ ಉತ್ತೇಜನಕ್ಕೆ ಎಪ್ ಕೆಸಿಸಿಐ ಸ್ವಾಗತ by- ಕೆಂಧೂಳಿ ಬೆಂಗಳೂರು, ಫೆ,07- ಸುಮಾರು ಐದು ವರ್ಷಗಳಲ್ಲಿ ಮೊದಲ ಬಾರಿಗೆ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್ ಗಳಷ್ಟು ಕಡಿತಗೊಳಿಸುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿರ್ಧಾರವನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಸ್ವಾಗತಿಸಿದೆ. ಆರ್‌ಬಿಐ ಗವರ್ನರ್ ಆದ ಶ್ರೀ ಸಂಜಯ್ ಮಲ್ಹೋತ್ರಾ ಅವರು ಘೋಷಿಸಿದ ಈ ಬಹು ನಿರೀಕ್ಷಿತ ಕ್ರಮವು ಆರ್ಥಿಕ ಬೆಳವಣಿಗೆಯನ್ನು…

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ:  ಎಂ. ಬಿ. ಪಾಟೀಲ by ಕೆಂಧೂಳಿ ಬೆಂಗಳೂರು,ಫೆ,06-ಇದೇ 11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 – ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 19 ದೇಶಗಳು ಭಾಗವಹಿಸಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ‘ಸಮಾವೇಶದಲ್ಲಿರುವ 9 ಪ್ರತ್ಯೇಕ ಕಂಟ್ರಿ ಪೆವಿಲಿಯನ್‌ಗಳು ಹೂಡಿಕೆ ಅವಕಾಶಗಳು ಮತ್ತು ವಾಣಿಜ್ಯ ಬಾಂಧವ್ಯ ಸಹಯೋಗದ ಅವಕಾಶಗಳನ್ನು ಪ್ರದರ್ಶಿಸಲಿವೆ. ಫ್ರಾನ್ಸ್, ನೆದರ್‌ಲ್ಯಾಂಡ್ಸ್, ಜಪಾನ್, ಥಾಯ್ಲೆಂಡ್‌, ಮಲೇಷ್ಯಾ, ದಕ್ಷಿಣ ಕೊರಿಯಾ, ಇಸ್ರೇಲ್,…

ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವೆ ನಿರ್ಮಲಾ, ಪಿಯೂಷ್ ಗೆ ಆಹ್ವಾನ

ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವೆ ನಿರ್ಮಲಾ, ಪಿಯೂಷ್ ಗೆ ಆಹ್ವಾನ by- ಕೆಂಧೂಳಿ ನವದೆಹಲಿ,ಫೆ,05-ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಖುದ್ದಾಗಿ ಆಹ್ವಾನಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಚಿವೆಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಆಮಂತ್ರಣ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು, ಹೂಡಿಕೆದಾರರ ಸಮಾವೇಶದ ವೈಶಿಷ್ಟ್ಯಗಳನ್ನು ಮತ್ತು ರಾಜ್ಯ ಸರಕಾರದ…

ಹೂಡಿಕೆದಾರರ ಸಮಾವೇಶಕ್ಕೆ  ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಅಹ್ವಾನ ನೀಡಿದ ಎಂ.ಬಿ.ಪಾಟೀಲ್

ಹೂಡಿಕೆದಾರರ ಸಮಾವೇಶಕ್ಕೆ  ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಅಹ್ವಾನ ನೀಡಿದ ಎಂ.ಬಿ.ಪಾಟೀಲ್   by-ಕೆಂಧೂಳಿ ನವದೆಹಲಿ,ಫೆ,04-ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಮೊದಲಿಗೆ ಸೋಮಣ್ಣ…

ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.೧೩ರಂದು ‘ಕ್ವಿನ್ ಸಿಟಿ ಕುರಿತು ರೌಂಡ್ ಟೇಬಲ್’ ಚರ್ಚೆ

ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.೧೩ರಂದು ‘ಕ್ವಿನ್ ಸಿಟಿ ಕುರಿತು ರೌಂಡ್ ಟೇಬಲ್’ ಚರ್ಚೆ    by-ಕೆಂಧೂಳಿ ಬೆಂಗಳೂರು,ಫೆ,೦೪- ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ ‘ಕ್ವಿನ್ ಸಿಟಿ’ಯಲ್ಲಿ ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು ಪ್ರತ್ಯೇಕ ರೌಂಡ್ ಟೇಬಲ್ ಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ…

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ by ಕೆಂಧೂಳಿ ಬೆಂಗಳೂರು,ಫೆ,03-ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಸಮಾವೇಶದ ಸಿದ್ಧತೆ ಮತ್ತು ನಾನಾ ಇಲಾಖೆಗಳ ನಡುವಿನ ಸಮನ್ವಯಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ…

ಬಜೆಟ್ ಬಳಿಕ ಡಿಜಿಟಲ್ ವಸ್ತುಗಳು ಇಳಿಕೆ ಸಾಧ್ಯತೆ?

ಬಜೆಟ್ ಬಳಿಕ ಡಿಜಿಟಲ್ ವಸ್ತುಗಳು ಇಳಿಕೆ ಸಾಧ್ಯತೆ? – ಎಂ.ಡಿ.ದಿನೇಶ್ ರಾವ್ ನವದೆಹಲಿ, ಜ,29-ಫೆಬ್ರವರಿ ಒಂದರೊಂದು ಕೇಂದ್ರ ದಿನ ನಿತ್ಯ ಬಳಕೆಯ ವಸ್ತುಗಳಾದ ಡಿಜಿಟಲ್ ವಸಗತುಗಳ ಬೆಲೆ ಇಳಿಕೆ ಯಾಗಲಿದೆ ಎನ್ನಲಾಗುತ್ತದೆ. ಕೇಂದ್ರ ವಿತ್ತ ಸಚಿವೆ ಪೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು ಈ ಬಾರಿ ಮದ್ಯಮವರ್ಗದ ಜನರಿಗೆ ಒಂದಿಷ್ಟು ಸಿಹಿ ಸುದ್ದಿಗಳು ಸಿಗಲಿವೆ ಎನ್ನುವ ಮಾಹಿತಿಗಳಿವೆ. ಬಜೆಟ್ ನಂತರ ಯಾವೆಲ್ಲಾ ವಸ್ತುಗಳು ಕಡಿಮೆಯಾಗಲಿವೆ ಎನ್ನುವ ಮಾಹಿತಿ ಇಲ್ಲಿದೆ.. ದಿನ ನಿತ್ಯ ಬಳಕೆ ವಸ್ತುಗಳಿಂದ ಹಿಡಿದು, ಆಟೋಮೊಬೈಲ್,…

ಯಂತ್ರೋಪಕರಣ ಉದ್ಯಮದಲ್ಲಿ ಕರ್ನಾಟಕದ ಪಾಲು ಶೇ.50; ಹೆಚ್.ಡಿ.ಕುಮಾರಸ್ವಾಮಿ

ಯಂತ್ರೋಪಕರಣ ಉದ್ಯಮದಲ್ಲಿ ಕರ್ನಾಟಕದ ಪಾಲು ಶೇ.50; ಹೆಚ್.ಡಿ.ಕುಮಾರಸ್ವಾಮಿ by ಕೆಂಧೂಳಿ ಬೆಂಗಳೂರು,ಜ,23- ಯಂತ್ರೋಪಕರಣ ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದ್ದು, ಕರ್ನಾಟಕವು ಭಾರತದ ಯಂತ್ರೋಪಕರಣಗಳಲ್ಲಿ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ. ಈ ರಾಜ್ಯವು ದೇಶದ ಯಂತ್ರೋಪಕರಣಗಳ ರಾಜಧಾನಿ ಎಂದು ಪ್ರಖ್ಯಾತಿ ಆಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆದ ಭಾರತೀಯ ಯಂತ್ರೋಪಕರಣ ತಂತ್ರಜ್ಞಾನ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಂತ್ರೋಪಕರಣ…

ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ- ಸಿಎಂ ಭರವಸೆ

ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ- ಸಿಎಂ ಭರವಸೆ by ಕೆಂಧೂಳಿ ಬೆಂಗಳೂರು, ಜ,23- ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.…

ಇನ್ವೆಸ್ಟ್ ಕರ್ನಾಟಕ; ದೆಹಲಿಯಲ್ಲಿ ಉದ್ಯಮ ದಿಗ್ಗಜರ ಜೊತೆ ಎಂ. ಬಿ. ಪಾಟೀಲ ಸಮಾಲೋಚನೆ

ಇನ್ವೆಸ್ಟ್ ಕರ್ನಾಟಕ; ದೆಹಲಿಯಲ್ಲಿ ಉದ್ಯಮ ದಿಗ್ಗಜರ ಜೊತೆ ಎಂ. ಬಿ. ಪಾಟೀಲ ಸಮಾಲೋಚನೆ by ಕೆಂಧೂಳಿ ನವದೆಹಲಿ,ಜ,22-ಮುಂದಿನ ತಿಂಗಳು 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ʼಇನ್ವೆಸ್ಟ್‌ ಕರ್ನಾಟಕ 2025ʼರ ಪೂರ್ವಸಿದ್ಧತೆಗಳ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರವು ಬುಧವಾರ ಇಲ್ಲಿ ಯಶಸ್ವಿಯಾಗಿ ರೋಡ್‌ಷೋ ನಡೆಸಿತು. ಐಟಿಸಿ ಲಿಮಿಟೆಡ್‌, ರಿನ್ಯೂ ಪವರ್‌, ಸಂವರ್ಧನ ಮದರ್‌ಸನ್‌ ಇಂಟರ್‌ನ್ಯಾಷನಲ್‌ ಲಿಮಿಟೆಡ್‌, ಹ್ಯಾವೆಲ್ಸ್‌, ಕೆಇಐ ಇಂಡಸ್ಟ್ರೀಸ್‌, ದಾಲ್ಮಿಯಾ, ಫ್ಲೆಕ್ಸಿಬಸ್‌ ಮತ್ತಿತರ ಕಂಪನಿಗಳ ಉನ್ನತಾಧಿಕಾರಿಗಳ ಜೊತೆಗೆ ರಾಜ್ಯದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು…

error: Content is protected !!