Browsing: Uncategorized

ಹಕ್ಕುಗಳು ನಮ್ಮವು- ಕರ್ತವ್ಯಗಳು ನಿಮ್ಮವು!

ಹಕ್ಕುಗಳು ನಮ್ಮವು- ಕರ್ತವ್ಯಗಳು ನಿಮ್ಮವು! ಭಾರತೀಯರು ತಮ್ಮ ಮೂಲಭೂತ ಕರ್ತವ್ಯಗಳನ್ನು ಮರೆತು ಕೇವಲ ಹಕ್ಕುಗಳಿಗಾಗಿ ಹೋರಾಡುತ್ತ ಬಂದ ಕಾರಣ ಸಮಯ ಪೋಲಾಯಿತಲ್ಲದೆ ದೇಶ ದುರ್ಬಲವಾಯಿತು ಎಂದಿದ್ದಾರೆ ಪ್ರಧಾನಮಂತ್ರಿ ಮೋದಿ. ಮೋದಿಯವರು ಮೂಲಭೂತ ಹಕ್ಕುಗಳಿಗೆ ಮೂಲಭೂತ ಕರ್ತವ್ಯಗಳನ್ನು ತಳುಕು ಹಾಕುತ್ತಿರುವುದು ಇದೇ ಮೊದಲೇನೂ ಅಲ್ಲ. ಪ್ರಾಯಶಃ ಕಡೆಯ ಬಾರಿಯೂ ಅಲ್ಲ. ಈ ಹಿಂದೆಯೂ ಇಂತಹ ಮಾತುಗಳನ್ನು ಆಡಿರುವುದು ಉಂಟು. ಮೂಲಭೂತ ಹಕ್ಕುಗಳಿಂದ ದೇಶ ದುರ್ಬಲವಾಗಿಲ್ಲ. ಮೇಲು ಕೀಳುಗಳ, ಏಣಿಶ್ರೇಣಿಯ, ಕರ್ಮಸಿದ್ಧಾಂತದ, ಜಾತಿ ವ್ಯವಸ್ಥೆಯ ಯಥಾಸ್ಥಿತಿವಾದಿ ಅಸ್ತ್ರಗಳ ಅಡಿಪಾಯ…

ವೈಜ್ಞಾನಿಕ ನೀರು ಬಳಕೆ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ; ರಘುಮೂರ್ತಿ

ಚಳ್ಳಕೆರೆ, ಫೆ,04:ಒಟ್ಟು ಭೂಮಿಯ ಶೇಕಡ 71ರಷ್ಟು ಪಾದ ನೀರಿನಿಂದ ತುಂಬಿತ್ತು ಈ 71ರಷ್ಟು ನೀರಿನ ಪ್ರದೇಶದಲ್ಲಿ ಶೇಕಡಾ ಮೂರರಷ್ಟು ಮಾತ್ರ ಕುಡಿಯಲು ಯೋಗ್ಯವಾದ ನೀರಿದೆ ಈ ನೀರಿನ ಬಳಕೆಯನ್ನು ವೈಜ್ಞಾನಿಕವಾಗಿ ಬಳಸಿಕೊಳ್ಳುವ ಅನಿವಾರ್ಯತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಚಳ್ಕೆರೆ ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದರು. ಅಟಲ್ ಭೂಜಲ ಯೋಜನೆ ಅನುಷ್ಠಾನ ಕುರಿತಾದ ಗ್ರಾಮ ಸಭೆ ಹಾಗೂ ಕಾರ್ಯಾಗಾರದಲ್ಲಿ ಮಾತನಾಡಿ ಪರಿಸರದಿಂದ ನನಗಿಲ್ಲದೆ ವಾದಂತ ಕಾಡು ಮತ್ತು ಮರಗಿಡಗಳ ದುರ್ಬಳಕೆಯನ್ನು ಮಾಡಿಕೊಂಡ…

ಮಹಾತ್ಮಗಾಂಧೀಜಿ ತ್ಯಾಗಕ್ಕೆ ಬೆಲೆಕಟ್ಟಲಾಗದು; ರಘುಮೂರ್ತಿ

ಚಳ್ಳಕೆರೆ, ಜ30;ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿಯ ಹಿನ್ನೆಲಯಲ್ಲಿ ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ. ಭಾರತ ದೇಶದ ರಕ್ಷ ಣೆಯಲ್ಲಿ ಪ್ರಾಣ ತೆತ್ತು ಹುತಾತ್ಮರಾದ ಜವಾನರೆಷ್ಟೋ ಮಂದಿ ಅದರಲ್ಲಿ ಮಹಾತ್ಮ ಗಾಂಧೀಜಿಯವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು . ನಗರದ ಹೊರವಲಯದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಲ್ಲಿನ ವಸತಿ ಶಾಲೆಯ ಮಕ್ಕಳೊಂದಿಗೆ ಎರಡು ನಿಮಿಷ…

ಅಶುಭ ಸುದ್ದಿಗಳ ದನಿಯಾದ ಈ ಸೇವಕ

ಅಶುಭ ಸುದ್ದಿಗಳ ದನಿಯಾದ ಈ ಸೇವಕ ಅದು ೧೯೯೧ರ ಜನವರಿ ತಿಂಗಳ ಮೊದಲ ದಿನ. ಹೊಸವರ್ಷದ ಹರ್ಷ ವಿಶ್ವದ ಎಲ್ಲೆಡೆ ಪಸರಿಸಿದ ದಿನ. ನಾನು ಕಳೆದ ಮೂರು ವರ್ಷಗಳಿಂದ ಸದೂರದ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ಸೇವಾನಿರತನಾಗಿದ್ದವನು, ಒಂದು ತಿಂಗಳ ರಜೆಯ ಮೇಲೆ ದಾವಣಗೆರೆಗೆ ಬಂದಿದ್ದೆ. ಅಂದು ಸಾಯಂಕಾಲ ಐದರ ವೇಳೆ ಇದ್ದಿರಬಹುದು, ಸ್ನೇಹಿತ ಭದ್ರಾವತಿ ಮೂಲದ ಲೆಕ್ಚರರ್ ರೇಣುಕಾಪ್ರಸಾದರನ್ನು ಭೇಟಿಯಾಗಿ ಹೊಸವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲೆಂದು ಹೊರಗೆ ಹೋಗಿದ್ದವನು, ಎಂ.ಸಿ.ಸಿ. “ಬಿ” ಬ್ಲಾಕಿನಲ್ಲಿದ್ದ ನಮ್ಮ ಬಾಡಿಗೆ…

ಅಕಾಶವಾಣಿಯನ್ನು ಕೇಂದ್ರ ಮುಚ್ಚುವ ಕೆಲಸ ಮಾಡುತ್ತಿದೆ; ಕೇಂದ್ರದ ವಿರುದ್ಧ ಎಚ್ ಡಿ ಕೆ ಆಕ್ರೋಶ

ಬೆಂಗಳೂರು, ಜ,28:ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಕನ್ನಡದ ಕಾರ್ಯಕ್ರಮಗಳನ್ನು ಮೊಟಕುಗೊಳಿಸುತ್ತಿರುವ ಕೇಂದ್ರ ಸರ್ಕಾರ ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ…

ಪ್ರತಿಭೆಯ ವಿಕಾಸಕ್ಕೆ ಆಧುನಿಕ ಮಾಧ್ಯಮಗಳು ಪೂರಕವಾಗಬೇಕು- ಹಂಪ ನಾಗರಾಜಯ್ಯ

ಬೆಂಗಳೂರು ,ಜ,7-ಜಾಗತೀಕರಣದ ಈ ಸಂದರ್ಭದಲ್ಲಿ ನಮಗೆ ಲಭ್ಯವಿರುವ ಇಂದಿನ ಆಧುನಿಕ ಮಾಧ್ಯಮ ಗಳನ್ನು ಯುವ ಲೇಖಕರು ತಮ್ಮ ಪ್ರತಿಭೆಯ ವಿಕಾಸಕ್ಕೆ ಬಳಸಿಕೊಳ್ಳಬೇಕು ಎಂದು ಕನ್ನಡದ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಹೇಳಿದ್ದಾರೆ. ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಆಯೋಜಿಸಿದ್ದ 55 ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಮತ್ತು ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು. ಹಿಂದೆ ಇಂತಹ ಅನುಕೂಲಗಳು ಇರಲಿಲ್ಲ ಈ ರೀತಿಯ ಅದ್ದೂರಿಯ…

ಓಮಿಕ್ರಾನ್ ಸೋಂಕು: ಅಂತರರಾಜ್ಯ ಗಡಿ ಬಂದ್ ಇಲ್ಲ

ಬೆಳಗಾವಿ,ಜ,05: ಕೊರೋನಾ ಮತ್ತು ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಇಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬಂದಿಳಿದಾಗ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ…

ಕೋವಿಡ್ ತೊಲಗಿಸಲು ಪಣ ತೋಡೋಣ: ಸಿಎಂ

ಬೆಂಗಳೂರು, ಜ, 03: 2022ನ್ನು ಆರೋಗ್ಯಭರಿತ ಹಾಗೂ ಕೋವಿಡ್ ಮುಕ್ತ ವರ್ಷವನ್ನಾಗಿ ಮಾಡಲು ಸಂಕಲ್ಪ ತೋಡೋಣ. ಕೋವಿಡ್ ವಿರುದ್ದ ಒಟ್ಟಾಗಿ ಸಮರವನ್ನು ಸಾರಿ ತೊಲಗಿಸಲು ಪಣ ತೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಅವರು ಇಂದು ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ 15-18 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಕೋವಿಡ್…

ಮದುವೆ ದಲ್ಲಾಳಿಯ ಚಾಕುಚಕ್ಯತೆ

ಮದುವೆ ದಲ್ಲಾಳಿಯ ಚಾಕುಚಕ್ಯತೆ “ಇಂದ್ರಮ್ಮಾ, ಇಂದ್ರಮ್ಮಾ” ಎನ್ನುವ ಪರಿಚಿತ ಕಂಠವೊಂದು ನನ್ನ ಅಮ್ಮನ ಹೆಸರಿಡಿದು ಕೂಗುತ್ತಾ, ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿದ್ದ ನಮ್ಮ ಬಾಡಿಗೆ ಮನೆಯ ಮುಂಬಾಗಿಲು ದಾಟಿ ಒಳಬರಲು, ಹೊರಕೋಣೆಯಲ್ಲಿ ಕುಳಿತು ಅಂದಿನ “ವಿಜಯಕರ್ನಾಟಕ” ದಿನಪತ್ರಿಕೆಯ ಹಾಳೆಗಳನ್ನು ಮುಗುಚಿ ಹಾಕುತ್ತಿದ್ದ ನಾನು, ಯಾರು ಬಂದಿರಬಹುದು ಎನ್ನುವ ಕುತೂಹಲವನ್ನು ಅದುಮಿಡಲಾಗದೆ, ಮುಂಭಾಗದ ಹಾಲನ್ನು ಪ್ರವೇಶಿಸಿದೆ. “ಏನಪ್ಪಾ, ಪ್ರಕಾಶ, ಬೆಂಗಳೂರಿನಿಂದ ಯಾವಾಗ ಬಂದಿದ್ದು?” ಎಂದು ನನ್ನ ಯೋಗಕ್ಷೇಮವನ್ನು ವಿಚಾರಿಸಲು ಮೊದಲಿಟ್ಟ ಅತಿಥಿಯ ಮುಖವನ್ನು ದಿಟ್ಟಿಸಿ ನೋಡತೊಡಗಿದೆ. “ಯಾಕೆ ಸಾಹೇಬರೇ? ನನ್ನ…

ಸಂಗೀತದ ಅನನ್ಯ ಉಪಾಸಕನ ಅಸಂಗತ ಬದುಕು..!

ಸಂಗೀತದ ಅನನ್ಯ ಉಪಾಸಕನ ಅಸಂಗತ ಬದುಕು..! “ನೀರ ಮೇಲಣ ಗುಳ್ಳೆ ನಿಜವಲ್ಲೊ ಹರಿಯೇ” ಎನ್ನುವ ಸುಶ್ರಾವ್ಯ ಕಂಠವೊಂದು ಕಿವಿಗಳನ್ನು ಅಪ್ಪಳಿಸಲು, ಜಳಕಕ್ಕೆಂದು ಬಚ್ಚಲು ಮನೆಗೆ ನಡೆದಿದ್ದವನು ಹಿಂತಿರುಗಿ ಓಡುತ್ತಾ ಸೀದಾ ಮುಂಬಾಗಿಲಿಗೆ ಬಂದು ನಿಂತು, ಕತ್ತನ್ನು ನೀಳವಾಗಿ ಹೊರಚಾಚಿ, ರಸ್ತೆಯ ಎರಡೂ ಬದಿಗೆ ದೃಷ್ಟಿ ಹರಿಸುತ್ತಾ, ಬಾಗಿಲ ಎಡತೋಳಿಗೆ ದೇಹದ ಅಷ್ಟೂ ಭಾರವನ್ನು ಹಾಕಿ ಒರಗಿ ನಿಂತೆನು. ನಾನು ಊಹಿಸಿದಂತೆಯೇ ಸುಮಾರು ಐವತ್ತನ್ನು ಮೀರಿದ ವಯಸ್ಸಿನ ಕೃಶಕಾಯದ, ಗೌರವರ್ಣದ, ಬಣ್ಣದ ಪಟ್ಟೆಪಟ್ಟೆ ಲುಂಗಿ ಮತ್ತು ಬಿಳಿಯ ಬನಿಯನ್…

ಎಂಇಎಸ್ ಪುಂಡಾಟಿಕೆ ಖಂಡಿಸಿ ಕನ್ನಡ ಸಂಘಟನೆ ಪ್ರತಿಭಟನೆ

ಬೆಳಗಾವಿ, ಡಿ, ೨೦: ಎಂಇಎಸ್ ಪುಂಡಾಟ ಖಂಡಿಸಿ ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ಪ್ರತಿಭಟನೆ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಹೀರೇಬಾಗೇವಾಡಿ ಟೋಲ್ ಬಳಿ ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಕರ್ನಾಟಕ ರಕ್ಷ ವೇದಿಕೆ ಅಧ್ಯಕ್ಷ ಟಿ. ಎ. ನಾರಾಯಣಗೌಡ ಅವರನ್ನೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ವೇಳೆ ಎಂಇಎಸ್ ಪುಂಡಾಟ ಖಂಡಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು…

ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯ ನಿರೀಕ್ಷೆ;ಸಿ.ಎಂ

ಹುಬ್ಬಳ್ಳಿ, ಡಿ 12: ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯನ್ನು ನಿರೀಕ್ಷಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಭಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಬೆಳಗಾವಿಯಲ್ಲಿ 2 ವರ್ಷಗಳ ನಂತರ ಅಧಿವೇಶನ ನಡೆಯಲಿದ್ದು, ಇದಕ್ಕಾಗಿ ಸರ್ಕಾರ ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಅಧಿವೇಶನದಲ್ಲಿ ಅಭಿವೃದ್ಧಿಯ ಪರವಾದ ಹಾಗೂ ಜನರಿಗೆ ಉಪಯುಕ್ತವಾಗುವ ಚರ್ಚೆಯಾಗಬೇಕೆಂದು ಬಯಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಮಹತ್ವದ ಹಾಗೂ ಅರ್ಥಪೂರ್ಣ ಚರ್ಚೆಗಳಾಗಬೇಕೆನ್ನುವುದು ಉತ್ತರ ಕರ್ನಾಟಕ ಭಾಗದ ಜನರ ಅಪೇಕ್ಷೆಯೂ ಹೌದು. ಸರ್ಕಾರವು ಸಮಗ್ರ ಕರ್ನಾಟಕ ಅದರಲ್ಲಿಯೂ ವಿಶೇಷವಾಗಿ ಉತ್ತರ…

ಯುವ ಸಬಲೀಕರಣ, ಮಹಿಳಾ ಉದ್ಯಮಶೀಲತೆ ಗುರಿ: `ಕೋಡ್ ಉನ್ನತಿ’ ಉಪಕ್ರಮಕ್ಕೆ ಚಾಲನೆ

ಬೆಂಗಳೂರು,ಡಿ,10: ರಾಜ್ಯದಲ್ಲಿ ಯುವಜನ ಸಬಲೀಕರಣ ಮತ್ತು ಮಹಿಳಾ ಉದ್ಯಮಶೀಲತೆಯನ್ನು ಸಾಧಿಸುವ ಮಹತ್ವಾಕಾಂಕ್ಷೆಯುಳ್ಳ `ಕೋಡ್ ಉನ್ನತಿ’ ಉಪಕ್ರಮಕ್ಕೆ ಐಟಿ, ಬಿಟಿ ಮತ್ತು ಕೌಶಲ್ಯ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶುಕ್ರವಾರ ಇಲ್ಲಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ, ಯೋಜನೆಯ ಅಂಗವಾಗಿ ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ (ಯುಎನ್ ಡಿಪಿ), ಎಸ್ ಎ ಪಿ ಲ್ಯಾಬ್, ಕೌಶಲ್ಯಾಭಿವೃದ್ಧಿ ಮತ್ತು ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳು ಒಡಂಬಡಿಕೆಗೆ ಸಹಿ ಹಾಕಿದವು. ಇದರ ಅಂಗವಾಗಿ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು,…

ಶಿವಾಜಿ ಗಣೇಶನ್ ಅಭಿನಯದ ಪಂತುಲು ನಿರ್ಮಾಣದ ಮಕ್ಕಳ ರಾಜ್ಯ

ಶಿವಾಜಿ ಗಣೇಶನ್ ಅಭಿನಯದ  ಪಂತುಲು ನಿರ್ಮಾಣದ ಮಕ್ಕಳ ರಾಜ್ಯ ಬಿ.ಆರ್.ಪಂತುಲು ನಿರ್ಮಿಸಿ ನಿರ್ದೇಶಿಸಿದ ಕಪ್ಪು-ಬಿಳುಪು ಜಾನಪದ ಕಥಾ ಹಂದರದ ‘ಮಕ್ಕಳ ರಾಜ್ಯ‘ ಚಲನಚಿತ್ರ ೧೯೬೦ರಲ್ಲಿ ತೆರೆಗೆ ಬಂದಿತು. ಬಿ.ಆರ್.ಪಂತುಲು ಅವರ ಪದ್ಮಿನಿ ಪಿಕ್ಚರ್ಸ್ ಜೊತೆಯಲ್ಲಿ ಎಂ.ವಿ.ರಾಜಮ್ಮನವರ ಎಂ.ವಿ.ಆರ್ ಪ್ರೊಡಕ್ಷನ್ಸ್ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸಿದರು, ಮಕ್ಕಳ ಪಾತ್ರಗಳನ್ನೇ ಪ್ರಧಾನವಾಗಿಟ್ಟುಕೊಂಡು ತಯಾರಾದ ಮೊದಲ ಚಿತ್ರ ಇದು. ಈ ಚಿತ್ರದಲ್ಲಿ ಹಿರಿಯ ನಟರ ಅಭಿನಯಕ್ಕಿಂತಲೂ ಮಕ್ಕಳ ಅಭಿನಯವೇ ಪ್ರಮುಖವಾಗಿತ್ತು. ಆ ಕಾಲಕ್ಕೆ ಇದೊಂದು ಪ್ರಯೋಗಾತ್ಮಕ ಚಿತ್ರವೆಂದೇ ಹೇಳಬಹುದಿತ್ತು. ಎಸ್.ಆರ್.ಪುಟ್ಟಣ್ಣ ಕಣಗಾಲ್…

ನಕಲಿ ಛಾಪಾ ಕಾಗದದ ನೆಟ್ವರ್ಕ್ ಜಾಲ  ರೀ ಆಕ್ಟೀವ್..!

writing-ಪರಶಿವ ಧನಗೂರು ನಕಲಿ ಛಾಪಾ ಕಾಗದದ ನೆಟ್ವರ್ಕ್ ಜಾಲ  ರೀ ಆಕ್ಟೀವ್ ದೇಶದ ಆರ್ಥಿಕತೆಯನ್ನೆ ಬುಡಮೇಲು ಮಾಡಲು ಹೊರಟಿದ್ದ, ಭಾರತವನ್ನೇ ಬೆಚ್ಚಿ ಬೀಳಿಸಿದ್ದ ಬಹುಕೋಟಿ ಛಾಪಾ ಕಾಗದದ ಹಗಹರಣವೂ 2001ರಲ್ಲಿ ಬೆಳಕಿಗೆ ಬಂದದ್ದು ಬೆಂಗಳೂರಿನಲ್ಲೇ! ಸುಮಾರು ಹತ್ತು ವರ್ಷಗಳ ಕಾಲ ಸಿಬಿಐ ಮತ್ತು ಹಲವು ರಾಜ್ಯಗಳ ಪೊಲೀಸರಿಂದ ತನಿಖೆ ಗೊಳಪಟ್ಟಿದ್ದ 20.000 ಕೋಟಿ ರೂಪಾಯಿಗಳ ಮೌಲ್ಯದ ಈ ನಕಲಿ ಛಾಪಾ ಕಾಗದದ ಹಗಹರಣದ ರೂವಾರಿ ಬೆಳಗಾವಿ ಜಿಲ್ಲೆಯ ಖಾನಾಪುರ ಮೂಲದ ಅಬ್ದುಲ್ ಕರೀಂ ಲಾಲಾ ತೆಲಗಿ.…

2020ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ವಿದೇಶಿಹೂಡಿಕೆಗೆ ದುಬೈ ಭೇಟಿ ನೆರವು: ನಿರಾಣಿ

ಬೆಂಗಳೂರು,ಅ.21-‘ದುಬೈ ಎಕ್ಸ್ ಪೋ 2020’ಭೇಟಿಯು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ರಾಜ್ಯದಲ್ಲಿ ಅನೇಕ ಪ್ರತಿಷ್ಠಿತ ಉದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಇದರಿಂದ ಉದ್ಯೋಗ ಅವಕಾಶಗಳು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್‌. ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮೂರು ದಿನಗಳಲ್ಲಿ ಕಾಲ ನಡೆದ ದುಬೈ ಎಕ್ಸ್ ಪೋ ದಲ್ಲಿ ಐಟಿಬಿಟಿ ಸಚಿವ ಡಾ. ಅಶ್ವಥ್ ನಾರಾಯಣ, ದುಬೈ-ಭಾರತೀಯ ಕೌನ್ಸಿಲರ್ ಡಾ. ಅಮನ್ ಪುರಿ, ಹೆಚ್ಚುವರಿ ಮುಖ್ಯ…

ದಸರಾ;ಮಾರ್ಗಸೂಚಿ ಬಿಡುಗಡೆ,ಮೈಸೂರಿಗೆ ಪ್ರತ್ಯೇಕ ಮಾರ್ಗಸೂಚಿ

ಬೆಂಗಳೂರು,ಅ,06; ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ. ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಮೈಸೂರು ದಸರಾ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುವುದು. ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಇತರೆ ಇಲಾಖೆ…

ಬತ್ತಬಾರದು ಭಾವಗಳ ಒರತೆ

ವಿ.ಮಂಜುಳ ಪಟೇಲ್ ಅವರು ಕವನ ಲೇಖನಗಳನ್ನು ಬರೆದಿದ್ದಾರೆ,ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು ಶೀಘ್ರ ಕವನ ಸಂಕಲನ ಹಾಗೂ ಕಾದಂಬರಿ ಪ್ರಕಟಗೊಳ್ಳಲಿದೆ.ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಅವರು ಟಿಕ್ ಟಾಕ್ ನಲ್ಲಿ ಹೆಚ್ಚು ಕಾಣಸಿಕೊಳ್ಲಕುತ್ತಿದ್ದಾರೆ…ಇವರು ಸದ್ಯ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಿದ್ದಾರೆ. ವಿ. ಮಂಜುಳಾ ಪಟೇಲ್ ಬತ್ತಬಾರದು ಭಾವಗಳ ಒರತೆ ವಾಸ್ತವದ ಹಂಗನ್ನು ಮೀರಿ ಆ ನಿನ್ನ ನೆನಪುಗಳಲ್ಲಿ ಮೆದ್ದಾಗಲೆಲ್ಲ ಇಳಿದು ಬಿಡುವುದು ಮನಸ್ಸು ನಿನ್ನ ಪ್ರೀತಿಯ ಭಿಕ್ಷಾಟನೆಗೆ ಮಮಕಾರದಿ ಕರೆದು ಬಿಡು ನಿನ್ನ ಒಲವಿಗೆ ಒಮ್ಮೆಯಾದರೂ ಒಲವ ರಾಗ ಹೊಸತೇನಲ್ಲ…

ಯಾರಿಗೆ ಯಾರುಂಟು ಯರವಿನ ಸಂಸಾರ

ಜಾತಿ ಮತ್ತು ಹಣ ಬಲದ ರಾಜಕಾರಣ ಇನ್ನೆಷ್ಟು ವರ್ಷ ಕಾಲ ಇರುತ್ತದೋ ಹೇಳಲಾಗದು. ಗುಜರಾತ್ ಸಿಎಂ ಆಗಿರುವ ಭೂಪೇಂದ್ರ ಪಟೇಲರಿಗೆ ಜಾತಿ ತೋರಿಸಿ ಚುನಾವಣೆ ಗೆಲ್ಲುವ ಅಧಿಕಾರವನ್ನು ಬಿಜೆಪಿ ಹೈಕಮಾಂಡ್ ನೀಡಿದೆ. ಕರ್ನಾಟಕದಲ್ಲೂ ಪ್ರಬಲ ಲಿಂಗಾಯತ-ವೀರಶೈವ ಸಮುದಾಯಕ್ಕೆ ಬೊಮ್ಮಾಯಿ ಮುಖ ತೋರಿಸುವ ಕೆಲಸ ಮಾಡಿದೆ. “ಮುದುಕರ ಕಾಲ ಮುಗಿಯಿತು” ಎಂಬ ಸಂದೇಶವನ್ನು ಯುವ ಮತದಾರರಿಗೆ ರವಾನಿಸುವ ಯತ್ನಕ್ಕೂ ಬಿಜೆಪಿ ಕೈ ಹಾಕಿರುವಂತಿದೆ. ಯಾರಿಗೆ ಯಾರುಂಟು ಯರವಿನ ಸಂಸಾರ ಮುದಿಗೂಬೆಗಳನ್ನು ನೋಡಿ ನೋಡಿ ಸಾಕಾಗಿದೆ ಎನ್ನುವುದು ಭಾರತದ ಪ್ರಚಲಿತ…

ಸೆ.೮ಕ್ಕೆ ಕೊಟ್ಟಿಗೆಹಾರದಲ್ಲಿ ತೇಜಸ್ವಿ ಸಾಹಿತ್ಯ ವಿಚಾರ ಮಂಥನ

ಚಿಕ್ಕಮಗಳೂರು. ಸೆ, ೫: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ ೮ ರಂದು ತೇಜಸ್ವಿ ಸಾಹಿತ್ಯ ವಿಚಾರ ಮಂಥನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಗ್ಗೆ ೧೧;೩೦ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ”ವರ್ತಮಾನದಲ್ಲಿ ತೇಜಸ್ವಿ ವಿಚಾರಧಾರೆ” ವಿಷಯದ ಕುರಿತು ಚಿಕ್ಕಮಗಳೂರಿನ ನಿವೃತ್ತ ಉಪನ್ಯಾಸಕರಾದ ಬಿ ತಿಪ್ಪೆರುದ್ರಪ್ಪ ಅವರು ಉಪನ್ಯಾಸ ನೀಡಲಿದ್ದಾರೆ. ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ತೇಜಸ್ವಿಯವರ ನೆನಪಿನ ಕಥಾಸ್ಪರ್ಧೆ…