ರಾಜಕೀಯ
ಲಸಿಕೆ ವಿಚಾರದಲ್ಲಿ ಎಚ್ಡಿಕೆ ಹೇಳಿಕೆಗೆ ಸಿದ್ದರಾಮಯ್ಯ ಕಿಡಿ
ಬೆಂಗಳೂರು.ಮೇ,೨೦: ಕೋವಿಡ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುವುದಕ್ಕೆ ಕಾಂಗ್ರೆಸ್ ಕಾರಣ ಎಂದು ಹೇಳಿಕೆ ನೀಡಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎಂದು ಆರೋಪಿಸುವ ಮೂಲಕ ಕುಮಾರಸ್ವಾಮಿ ತಮಗೆ ತಾವೇ ಗೋಲು ಹೊಡೆದುಕೊಂಡಿದ್ದಾರೆ. ಕಾಂಗ್ರೆಸ್ ಪ್ರಚಾರ ನಂಬಿ ನೀವು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮಾರ್ಚ್ ೨೩ರ ವರೆಗೆ ಕಾದು ಕೂತಿದ್ದೇ…