Browsing: ರಾಜ್ಯ

ರಾಜ್ಯ

ವಿ.ವಿ.ಗಳಲ್ಲಿ ಇ-ಆಫೀಸ್ ಕಡ್ಡಾಯ: ಮಾರ್ಚ್ 1ರ ಗಡುವು ವಿಧಿಸಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು,ಫೆ,25: ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಅನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, `ಇ-ಆಫೀಸ್’ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ…

ಸಾಮಾಜಿಕ ನ್ಯಾಯ ಪರಿಕಲ್ಪನೆ ಆರಂಭವಾಗಿದ್ದು ಬಸವಣ್ಣನ ಕಾಲದಿಂದ; ರಘುಮೂರ್ತಿ

ಚಳ್ಳಕೆರೆ, ಫೆ,24:ಸಾಮಾಜಿಕ ನ್ಯಾಯದ ಪರಿಕಲ್ಪನೆ 12ನೇ ಶತಮಾನದ ಬಸವಣ್ಣನವರಿಂದ ಲು ಪ್ರಾರಂಭವಾಗಿದೆ ಎಂದು ತಹಶಿಲ್ದಾರ ರಘುಮೂರ್ತಿ ಹೇಳಿದರು. ಚಳ್ಳಕೆರೆ ತಾಲೂಕಿನ ಹಳ್ಳಿ ಗ್ರಾಮದಲ್ಲಿ ಸಾಮಾಜಿಕ ಪರಿಕಲ್ಪನೆಯ ದಿನಾಚರಣೆಯ ಪ್ರಾಸ್ತಾವಿಕವಾಗಿ ಮಾತನಾಡಿ ಬಸವಣ್ಣನವರಿಂದ ಡಾಕ್ಟರ್ ಬಿಆರ್ ಅಂಬೇಡ್ಕರ್ ರವರ ವರೆಗೂ ಸಮಾಜದಲ್ಲಿ ಇವತ್ತು ಸಮಾನತೆಯ ಬಗ್ಗೆ ಜಾಗೃತಿ ಉಂಟು ಮಾಡಿದರು ಸಮಾಜದಲ್ಲಿ ಶೇಕಡ ನೂರರಷ್ಟು ಪರಿವರ್ತನೆ ಕಾಣದಿರುವುದು ತುಂಬಾ ವಿಷಾದದ ಸಂಗತಿ ಎಂದರು. ಕಾರ್ಲ್ ಮಾರ್ಕ್ಸ್ ಮಾರ್ಟಿನ್ ಲೂಥರ್ ಕಿಂಗ್ ದಯಾನಂದ ಸರಸ್ವತಿ ಸ್ವಾಮಿ ವಿವೇಕಾನಂದ ಜ್ಯೋತಿ…

ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ನಿಧನ

ಬೆಂಗಳೂರು,ಫೆ.೨೨: ಮಾತಿನ ಮಲ್ಲಿ ಎಂದೇ ಕರೆಸಿಕೊಳ್ಳುತ್ತಿದ್ದ ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನಹೊಂದಿದ್ದಾರೆ. ರೆಡಿಯೋ ಮಿರ್ಚಿಯಲ್ಲಿ ಆರ್‌ಜೆ ಆಗಿದ್ದ ರಚನಾ ತಮ್ಮ ಮಾತುಗಳಿಂದಲೇ ಜನರ ಮನ ಗೆದ್ದಿದ್ದರು. ಬಳಿಕ ರೆಡಿಯೋ ಜಾಕಿ ವೃತ್ತಿಗೆ ವಿದಾಯ ಕೋರಿದ್ದ ಅವರು ಮನೆಯಲ್ಲೇ ಇದ್ದರೆನ್ನಲಾಗಿದೆ. ಆದರೆ ಫಿಟ್ ಆಂಡ್ ಫೈನ್ ಆಗಿದ್ದ ರಚನಾ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಜೆಪಿ ನಗರದ ಪ್ಲಾಟ್‌ನಲ್ಲಿ ರಚನಾಗೆ ಎದೆ ನೋವು ಕಾಣಿಸಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ನಿಧನರಾಗಿದ್ದಾರೆ. ರಚನಾಗೆ ೩೯ ವರ್ಷ ವಯಸ್ಸಾಗಿತ್ತು. ಕಳೆದ…

ಆನ್ ಲೈನ್ ಶಿಕ್ಷಣಕ್ಕೆ ಅನುಮತಿ; ನಿಯಮಾವಳಿ ಸುಧಾರಣೆಗೆ ಸಲಹೆ

ಬೆಂಗಳೂರು,ಫೆ,21: ಮುಕ್ತ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಿದವರಿಗೆ ಉದ್ಯೋಗ ನೇಮಕಾತಿಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ನೀಡದಂತೆ ನಿಗಾ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಪಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಸೋಮವಾರ ಇಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ಮುಕ್ತ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮಾವೇಶದಲ್ಲಿ ‘ಕೋವಿಡ್ ಹಾಗೂ ಎನ್.ಇ.ಪಿ-2020 ಹಿನ್ನೆಲೆಯಲ್ಲಿ ಆನ್ ಲೈನ್ ಡಿಜಿಟಲ್ ಕಲಿಕೆ (ಒ.ಡಿ.ಎಲ್.) ಮತ್ತು ಆನ್ ಲೈನ್ ಕಲಿಕೆ (ಆನ್ ಲೈನ್ ಲರ್ನಿಂಗ್) ಉತ್ತೇಜಿಸಲು ನಿಯಮಾವಳಿಗಳಲ್ಲಿ ಗುಣಾತ್ಮಕ ಸುಧಾರಣೆ’ ಕುರಿತ ವಿಚಾರ ಸಂಕಿರಣವನ್ನು…

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ -ಶಾಲಾಕಾಲೇಜುಗಳಿಗೆ ಇಂದು ರಜೆ

ಶಿವಮೊಗ್ಗ, ಫೆ ೨೧: ನಿನ್ನೆ ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಹಿಂದೂ ಕಾರ್ಯಕರ್ತನ ಹರ್ಷ ಎಂಬಾತನ ಮೇಲೆ ಎರಗಿ ಮನ ಬಂದಂತೆ ಕೊಚ್ಚಿ ಕೊಲೆ ಮಾಡಿದೆ ಗೃಹ ಸಚಿವ ಅರಗ ಜ್ಞಾನೇಂದ್ರ ತವರು ಜಿಲ್ಲೆಯಲ್ಲೇ ಆಗಿದೆ. ಈ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಹಿಜಾಬ್ ವಿವಾಧದ ಬೆನ್ನಲ್ಲೆ ಈ ಘಟನೆ ಸಂಭವಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹಿಂದೂ ಕಾರ್ಯಕರ್ತನ ಹತ್ಯೆಯಿಂದ ರೊಚ್ಚಿಗೆದ್ದ ಜನರು ಮನ ಬಂದಂತೆ ಕಲ್ಲು ತೂರಾಟ ನಡೆಸಿದರು.…

ತುಂಗಾ ತಟ ಕಾಶಿ ಮಾದರಿಯಲ್ಲಿ ಅಭಿವೃದ್ಧಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹರಿಹರ,ಫೆ,20: ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನ ದೇವಸ್ಥಾನವನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಿದ್ದಾರೆ. ಮುಂಚೆ ಹೋದಾಗ ದೇವಸ್ಥಾನ ಎಲ್ಲಿದೆ ಎಂದು ಹುಡುಕಬೇಕಿತ್ತು. ಇಂದು ಎಲ್ಲಾ ಘಾಟ್‍ಗಳನ್ನು ಸ್ವಚ್ಛಗೊಳಿಸಿ, ದೇವಸ್ಥಾನವನ್ನು ಭವ್ಯವಾಗಿ ಕಾಣುವಂತೆ ಮಾಡಿ ಗಂಗಾ ಆರತಿ ಮಾಡುತ್ತಿದ್ದಾರೆ. ಅದೇ ರೀತಿ ದಕ್ಷಿಣದಲ್ಲಿ ತುಂಗಭದ್ರಾ ಆರತಿ ಕಾರ್ಯಕ್ರಮ ವೈಭವವಾಗಿ ನಡೆಯಬೇಕೆಂದು ನಮ್ಮೆಲ್ಲರ ಬಯಕೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಶ್ರೀ ವಚನಾನಂದ ಸ್ವಾಮಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿದೆ.…

ಹರಿಹರದಲ್ಲಿ ತುಂಗಾ ಆರತಿ: ಉತ್ತಮ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿ;ಸಿಎಂ ಬೊಮ್ಮಾಯಿ

ಹರಿಹರ, ಫೆ,20: ಹರಿಹರ ಕ್ಷೇತ್ರದ ತುಂಗಭದ್ರಾ ನದಿ ತಟದಲ್ಲಿ 108 ಯೋಗ ಮಂಟಪಗಳನ್ನು ನಿರ್ಮಿಸಿ ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿಯನ್ನು ಹಮ್ಮಿಕೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇದು ಉತ್ತಮ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಹರಿಹರದ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಶ್ರೀ ವಚನಾನಂದ ಜಗದ್ಗುರುಗಳು ತುಂಗಾರತಿ ಕಾರ್ಯಕ್ರಮ ಏರ್ಪಡಿಸಲು ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡು ಉತ್ತಮ ವಾತಾವರಣ ನಿರ್ಮಿಸಿದ್ದಾರೆ. ಪ್ರತಿನಿತ್ಯ ತುಂಗ ಭದ್ರೆಯ ಪೂಜೆ ನಡೆಯಲು ಅನುಕೂಲ…

ತ್ರಿಪದಿಗಳ ಮೂಲಕ ಜನಸಮೂಹಕ್ಕೆ ಅರಿವು ಮೂಡಿಸಿದ ಸರ್ಜಜ್ಞ: ರಘುಮೂರ್ತಿ

ಚಳ್ಳಕೆರೆ, ಫೆ,20:ಸರ್ವಜ್ಞ ತನ್ನ ತ್ರಿಪದಿ ಎಂಬ ಮೂರು ಸಾಲುಗಳ ಮೂಲಕ ಬದುಕಿನ ಒಳಿತ ಕೆಡುಕುಗಳ ಬಗ್ಗೆ ಮನಮುಟ್ಟುವಂತೆ ಹೇಳಿರುವುದನ್ನು ಮುನ್ನೂರು ಸಾಲುಗಳಲ್ಲಿ ಹೇಳಬಹುದಾದ–ಬರೆಯಬಹುದಾದ ಅರ್ಥವನ್ನು ತುಂಬಿದ್ದಾರೆ ಎಂದು ತಹಶೀಲ್ದರ್ ಎನ್. ರಘುಮೂರ್ತಿ ಹೇಳಿದರು . ನಗರದ ತಾಲ್ಲೂಕು ಕಚೇರಿಯ ಸಭಾಗಂಣದಲ್ಲಿ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ಮತ್ತು ಕುಂಬಾರ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ತ್ರಿಪದಿ ಕವಿ ಸರ್ವಜ್ಞ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ವಜ್ಞ ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲುಸುವುದರ ಮೂಲಕ ಕಾರ್ಯಕ್ರಮ ಚಾಲನೆ…

ಶಿವಾಜಿ ಆದರ್ಶಗಳನ್ನು ಮೂಗೂಡಿಸಿಕೊಳ್ಳಲು ಯುವಕರಿಗೆ ಕರೆ

ಚೆಳ್ಳಕೆರೆ,ಫೆ,19:ಶಿವಾಜಿ ಮಹಾರಾಜರು ಹಿಂದೂ ರಾಷ್ಟ್ರದ ಅಸ್ಮಿತೆಯನ್ನು ಕಾಪಾಡಿ ದಂತ ದಿಟ್ಟ ಹಾಗೂ ದೇಶಪ್ರೇಮಿ ರಾಜ ಇವರಿಗೆ ಹಿಂದೂ ರಾಷ್ಟ್ರದ ಕನಸು ಸ್ವರಾಜ್ಯ ಮತ್ತು ಸ್ವಧರ್ಮದ ಭಾವನೆಯನ್ನು ಮೈಗೂಡಿಸಿಕೊಂಡಿದ್ದ ಧೀಮಂತ ನಾಯಕ ಎಂದು ತಹಸೀಲ್ದಾರ್ ರಘು ಮೂರ್ತಿ ಹೇಳಿದರು . ತಾಲೂಕು ಕಚೇರಿಯಲ್ಲಿ ಛತ್ರಪತಿ ಶಿವಾಜಿಯವರ ಜಯಂತೋತ್ಸವ ವನ್ನು ಉದ್ಘಾಟಿಸಿ ಮಾತನಾಡಿ ಇವರು ಪರಕೀಯರ ವಿರುದ್ಧ ಹೋರಾಡುವ ಛ ಲವನ್ನು ಹೊಂದಿದ್ದರು ದೇಶದಲ್ಲಿನ ಭದ್ರತೆಗೆ ಕಂಟಕಪ್ರಾಯರಾಗಿ ದ್ದ ಔರಂಗಜೇಬ್ ಅಲ್ಲಾವುದ್ದೀನ್ ಖಿಲ್ಜಿ ಮಲ್ಲಿಕಾ ಕಾಫ್ ಮುಂತಾದವರನ್ನು ಹುಟ್ಟಡಗಿಸಿದ…

ಪ್ರಕಾಶಕರ ಸಮ್ಮೇಳನದ ಅಧ್ಯಕ್ಷರಾಗಿ ಟಿ.ಎಸ್.ಛಾಯಾಪತಿ ಆಯ್ಕೆ

ಮೈಸೂರು,ಫೆ,17: ಕನ್ನಡ ಪುಸ್ತಕ ಪ್ರಾಧಿಕಾರ ಮಾರ್ಚ್ ತಿಂಗಳಲ್ಲಿ ಹಮ್ಮಿಕೊಂಡಿರುವ ಪ್ರಕಾಶಕರ ಸಮ್ಮೇಳನದ ಅಧ್ಯಕ್ಷರಾಗಿ ಟಿ.ಎಸ್.ಛಾಯಾಪತಿ ಅವರನ್ನು ಆಯ್ಕೆ ಮಾಡಲಾಗಿದೆ. ಮೈಸೂರಿನಲ್ಲಿ ಎರಡನೇ ಬಾರಿಗೆ ಪ್ರಕಾಶನ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿಯೇ ಆರು ದಿನಗಳ ಕಾಲ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಸಹ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು. ಟಿ.ಎಸ್. ಛಾಯಾಪತಿ ಅವರು ಕನ್ನಡ ಪುಸ್ತಕ ಲೋಕ ಕಂಡ ಅಪರೂಪದ ಪ್ರಕಾಶಕರಲ್ಲಿ…

ಬಂಜಾರ ಸಮುದಾಯದವಾಸ್ಮಿತೆ ಉಳಿಸಿದ ಸೇವಾಲಾಲ್; ರಘುಮೂರ್ತು

ಚೆಳ್ಳಕೆರೆ,ಫೆ,16: ಸೇವಾಲಾಲ್ ಮಹಾರಾಜ ರವರು ಬಂಜಾರ ಸಮುದಾಯದ ಅಸ್ಮಿತೆಯನ್ನು ಉಳಿಸಿದಂತ ಆದರ್ಶ ಪುರುಷರಿಂದ ತಶಿಲ್ದಾರ್ ಎಂ ರಘುಮೂರ್ತಿ ಹೇಳಿದರು . ಅವರು  ಮಂಗಳವಾರತಾಲೂಕು ಕಚೇರಿಯಲ್ಲಿ 283 ನೇ ಸೇವಾಲಾಲ್ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿ ಮಹಾರಾಜ್ ಸೇವಾಲಾಲ್ ಅವರು ತಪಸ್ಸು ಧ್ಯಾನ ಭಕ್ತಿ ಮತ್ತು ಆಧ್ಯಾತ್ಮದಿಂದ ಈ ಸಮಾಜವನ್ನು ಸದೃಡ ಗೊಳಿಸಿದವರು ಬಾಲ ಬ್ರಹ್ಮಚಾರಿಯಾಗಿ ಸಾಧು ಪುರುಷರಾಗಿ ಸಮಾಜಕ್ಕೆ ಧೈರ್ಯ ಸಾಹಸ ಮತ್ತು ಆತ್ಮಸ್ಥೈರ್ಯವನ್ನು ತುಂಬಿದಂತ ಯುಗಪುರುಷ ರೆಂದು ಹೇಳಿ ಪ್ರಸ್ತುತ ಈ ಸಮಾಜದ ಎಲ್ಲ ವ್ಯಕ್ತಿಗಳು…

ಮಹಿಳಾಸ್ವಸಹಾಯಸಂಘಗಳಜತೆಗೂಡಿದರೆ ಆರ್ಥಿಕ ಸಾಕ್ಷರತೆ ಸಾಧ್ಯ ‘

ಬೆಂಗಳೂರು,ಫೆ,14: ಬ್ಯಾಂಕುಗಳು ಲಕ್ಷಾಂತರ ಸದಸ್ಯರನ್ನು ಹೊಂದಿರುವ ಮಹಿಳಾ ಸ್ವಸಹಾಯ ಗುಂಪುಗಳ ಜತೆಗೂಡಿ ಕೆಲಸ ಮಾಡಿದರೆ ಸಮಾಜದಲ್ಲಿ ಆರ್ಥಿಕ ಸಾಕ್ಷರತೆಯು ತಾನಾಗಿಯೇ ಬರುತ್ತದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ಏರ್ಪಡಿಸಿದ್ದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಇನ್ನು ಆರು ತಿಂಗಳಲ್ಲಿ ಈ ಸ್ವಸಹಾಯ ಗುಂಪುಗಳ ಚಟುವಟಿಕೆಗಳು ಸಂಪೂರ್ಣ ಡಿಜಿಟಲ್ ರೂಪ ಪಡೆಯಲಿವೆ. ಹೀಗಾಗಿ, ಬ್ಯಾಂಕಿಂಗ್ ವ್ಯವಸ್ಥೆಯು ಸುಸ್ಥಿರತೆ, ಸಮಾನತೆ ಮತ್ತು ಸಮಸ್ತರನ್ನೂ ಒಳಗೊಳ್ಳುವಂತಹ ಉಪಕ್ರಮಗಳನ್ನು ವ್ಯಾಪಕಗೊಳಿಸಬೇಕು…

ಇನ್ನೂ ಜೀತಪದ್ಧತಿ ಜೀವಂತ;ತಹಶಿಲ್ದಾರ್ ರಘುಮೂರ್ತಿ ಕಳವಳ

ತಚೆಳ್ಳಕೆರೆ,ಫೆ,09;ಭಾರತ ದೇಶ ಇಂದು ಬಲಿಷ್ಠಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಕೂಡ ದೇಶದ ಅಲ್ಲಲ್ಲಿ ಜೀತಪದ್ಧತಿಯ ಪ್ರಕರಣಗಳು ಕಂಡುಬರುತ್ತಿರುವುದು ತುಂಬ ವಿಷಾದದ ಸಂಗತಿಎಂದು ತಹಸೀಲ್ದಾರ್ ಎನ್.ರಘುಮೂರ್ತಿ ಹೇಳಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಜೀತ ಪದ್ಧತಿ ನಿರ್ಮೂಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇದು ಪಾಶ್ಚಾತ್ಯ ರೀತಿಯಜೀತ ಪದ್ಧತಿಯು ಭೂಮಾಲೀಕ ಹಾಗೂ ಬೇಸಾಯಗಾರನ ಸಂಬಂಧವನ್ನು ಕ್ರಮಪಡಿಸುವ ಊಳಿಗಮಾನ್ಯಯುಗದ ಒಂದು ಪದ್ಧತಿ ಇದು ಚೀನ, ಈಜಿಪ್ಟ, ಮಧ್ಯಯುಗದ ಯೂರೋಪ್, ಜಪಾನ್, ರಷ್ಯ ಮುಂತಾದ ದೇಶಗಳಲ್ಲಿ ಪ್ರಚಲಿತವಾಗಿತ್ತು. ಇದು ಒಂದೊಂದು ಪ್ರದೇಶದಲ್ಲಿ…

ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ : ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಫೆ, 04 :ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ‘ಆರೈಕೆಯ ಅಂತರವನ್ನು ಕಡಿತಗೊಳಿಸಿ’ ಎಂಬ ಘೋಷ ವಾಕ್ಯವನ್ನು ಬಿಡುಗಡೆ ಮಾಡಿದರು. ಸುಲಭ ದರದಲ್ಲಿ ಪೆಟ್ ಸ್ಕ್ಯಾನ್ ಪರೀಕ್ಷೆ : ಕಿದ್ವಾಯಿ ಸಂಸ್ಥೆಯ ಆಧುನೀಕರಣಕ್ಕಾಗಿ ಎರಡು ಪೆಟ್ ಸ್ಕ್ಯಾನ್ ಮೆಷಿನ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ.…

ವೈಜ್ಞಾನಿಕ ನೀರು ಬಳಕೆ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ; ರಘುಮೂರ್ತಿ

ಚಳ್ಳಕೆರೆ, ಫೆ,04:ಒಟ್ಟು ಭೂಮಿಯ ಶೇಕಡ 71ರಷ್ಟು ಪಾದ ನೀರಿನಿಂದ ತುಂಬಿತ್ತು ಈ 71ರಷ್ಟು ನೀರಿನ ಪ್ರದೇಶದಲ್ಲಿ ಶೇಕಡಾ ಮೂರರಷ್ಟು ಮಾತ್ರ ಕುಡಿಯಲು ಯೋಗ್ಯವಾದ ನೀರಿದೆ ಈ ನೀರಿನ ಬಳಕೆಯನ್ನು ವೈಜ್ಞಾನಿಕವಾಗಿ ಬಳಸಿಕೊಳ್ಳುವ ಅನಿವಾರ್ಯತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಚಳ್ಕೆರೆ ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದರು. ಅಟಲ್ ಭೂಜಲ ಯೋಜನೆ ಅನುಷ್ಠಾನ ಕುರಿತಾದ ಗ್ರಾಮ ಸಭೆ ಹಾಗೂ ಕಾರ್ಯಾಗಾರದಲ್ಲಿ ಮಾತನಾಡಿ ಪರಿಸರದಿಂದ ನನಗಿಲ್ಲದೆ ವಾದಂತ ಕಾಡು ಮತ್ತು ಮರಗಿಡಗಳ ದುರ್ಬಳಕೆಯನ್ನು ಮಾಡಿಕೊಂಡ…

ಸರ್ಕಾರಿ ಶಾಲೆಗಳು ದೇವಸ್ಥಾನಕ್ಕಿಂತ ಮಿಗಿಲು;ತಹಶಿಲ್ದಾರ್ ರಘುಮೂರ್ತಿ

ನಾಯಕನಹಟ್ಟಿ,ಫೆ,03ಸರ್ಕಾರಿ ಶಾಲೆ ಮತ್ತು ಕಛೇರಿಗಳು ದೇವಸ್ಥಾನಕ್ಕಿಂತ ಮಿಗಿಲು ಇವುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಉತ್ತಮ ನಿರ್ವಹಣೆ ಮಾಡಿದಾಗ ದೇವಸ್ಥಾನದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದ ರೂ ನಾಯಕನಹಟ್ಟಿ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವಂತ ಶೌಚಾಲಯ ಮತ್ತು ಸಾಂಸ್ಕೃತಿಕ ಭವನದ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ಖಾಸಗಿ ಶಾಲೆಗಳ ಜೊತೆಗೆ ಸರ್ಕಾರಿ ಶಾಲೆಗಳು ಕೂಡ ಮೂಲಭೂತ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಿದಾಗ ದೇಶದ ಅಭಿವೃದ್ಧಿಗೆ…

ಶೌಚಾಲಯ ಗೋಡೆ ಎತ್ತರಕ್ಕೆ ಕರವೇ ಮನವಿ

ವರದಿಗಾರರು ಬೀರು ಬೆನ್ನೂರ ನಿಡಗುಂದಿ ನಿಡಗುಂದಿ,ಫೆ02 : ಕರ್ನಾಟಕ ರಕ್ಷಣಾ ವೇದಿಕೆ ಅರಳದಿನ್ನಿ ಮತ್ತು ಆಲಮಟ್ಟಿ ಘಟಕದ ವತಿಯಿಂದ ಅರಳದಿನ್ನಿ ಗ್ರಾಮದಲ್ಲಿನ ಸಾರ್ವಜನಿಕ ಮಹಿಳಾ ಶೌಚಾಲಯದ ಗೋಡೆಯನ್ನು ಎತ್ತರ ಹೆಚ್ಚಿಸಲು ಆಲಮಟ್ಟಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮಂಜುನಾಥ್ ಹಿರೇಮಠ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು. ಆಲಮಟ್ಟಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಅರಳದಿನ್ನಿ ಗ್ರಾಮದಲ್ಲಿ ಹೆಣ್ಣುಮಕ್ಕಳಿಗೋಸ್ಕರ ಒಂದು ಹೊಸ ಶೌಚಾಲಯ ನಿರ್ಮಾಣಕ್ಕಾಗಿ ನಮ್ಮ ಸಂಘಟನೆಯಿಂದ ಮತ್ತು ಊರಿನ ಗ್ರಾಮಸ್ಥರಿಂದ ಹಲವಾರು ಬಾರಿ ಮನವಿ…

ಮಹಾತ್ಮಗಾಂಧೀಜಿ ತ್ಯಾಗಕ್ಕೆ ಬೆಲೆಕಟ್ಟಲಾಗದು; ರಘುಮೂರ್ತಿ

ಚಳ್ಳಕೆರೆ, ಜ30;ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿಯ ಹಿನ್ನೆಲಯಲ್ಲಿ ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ. ಭಾರತ ದೇಶದ ರಕ್ಷ ಣೆಯಲ್ಲಿ ಪ್ರಾಣ ತೆತ್ತು ಹುತಾತ್ಮರಾದ ಜವಾನರೆಷ್ಟೋ ಮಂದಿ ಅದರಲ್ಲಿ ಮಹಾತ್ಮ ಗಾಂಧೀಜಿಯವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು . ನಗರದ ಹೊರವಲಯದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಲ್ಲಿನ ವಸತಿ ಶಾಲೆಯ ಮಕ್ಕಳೊಂದಿಗೆ ಎರಡು ನಿಮಿಷ…

ಹೋರಾಟಗಳೇ ಬಯಲು ಸೀಮೆ ಜನರ ಶಕ್ತಿ !

ಚಿತ್ರದುರ್ಗ, ಜ,28;ಚಿತ್ರದುರ್ಗದಲ್ಲಿ 29 ಪೆಬ್ರವರಿ ಯಂದು ಎರಡು ಪ್ರಮುಖ ಕಾರ್ಯಕ್ರಮಗಳು ವಿಶೇಷ ಗಮನ ಸೆಳೆದವು ಒಂದು- ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ರಾಯಚೂರು ನ್ಯಾಯಾಧೀಶರೊಬ್ಬರು ಅವಮಾನ ಮಾಡಿರುವುದನ್ನು ಖಂಡಿಸಿ ದಲಿತ,ಪ್ರಗತಿಪರ ಸಂಘಟನೆಗಳು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದವು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನೃೆತಿಕತೆಯೂ ಕೂಡ ನಾನೂ ಭಾಗವಹಿಸಿ ಭಾರತದ ಸಂವಿಧಾನಕ್ಕೆ ,ಪ್ರಜಾಪ್ರಭುತ್ವಕ್ಕೆ ಗೌರವಿಸುವುದು ಜವಾಬ್ದಾರಿಯೂ ಹೌದು. ಅಂಬೇಡ್ಕರ್ ಅವರ ವಿಚಾರಧಾರೆಗಳು ಮತ್ತು ಅವರು ನೀಡಿದ ಸಂವಿಧಾನವು ಈ ದೇಶವನ್ನು ರಕ್ಷಣೆ ನೀಡಿದೆ ಎಂಬುವುದರಲ್ಲಿ ಎರಡು ಮಾತಿಲ್ಲ ಆ ಕಾರಣಕ್ಕೆ ಪ್ರತಿಭಟನೆಯಲ್ಲಿ…

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗೆ ಭರ್ತಿಗೆ ಕ್ರಮ: ಗೋವಿಂದ ಕಾರಜೋಳ

ಬೆಂಗಳೂರು,ಜ,29:ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕ ಗೊಂಡಿರುವ ಉಪಸಮಿತಿ ಇಂದು ಸಭೆ ಸೇರಿ ನಿರ್ದೇಶನ ನೀಡಿತು. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ರಾಜ್ಯ ಸಚಿವ ಸಂಪುಟದ ಆರು ಸದಸ್ಯರಿದ್ದಾರೆ.…

1 8 9 10 11 12 33
error: Content is protected !!