Browsing: ರಾಜ್ಯ

ರಾಜ್ಯ

ಹುಬ್ಬಳ್ಳಿ ಪ್ರಕರಣ; ಗಲಭೆಕೋರರ ವಿರುದ್ಧ ಕಠಿಣ ಕ್ರಮ- ಸಿಎಂ

ಹುಬ್ಬಳ್ಳಿ, ಏ, 24:ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಗಲಭೆ ಎಂದು ಪರಿಗಣಿಸಿಲ್ಲ. ಷಡ್ಯಂತ್ರ ಮಾಡಿ ಪೊಲೀಸ್ ಠಾಣೆಯ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಿರುವುದನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಕೆಲವೇ ದಿನಗಳಲ್ಲಿ ಇದರ ಹಿಂದಿರುವ ಸಂಘಟನೆ, ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣದಲ್ಲಿ ಬೇರೆ ಬೇರೆ ಶಕ್ತಿಗಳ ಹುನ್ನಾರ, ಕುಮ್ಮಕ್ಕು ಏನಿದೆ ಎಂದು ತನಿಖೆಯಾಗುತ್ತಿದೆ. ಈಗಾಗಲೇ ಬಂಧಿಸಿರುವವರಿಂದ ಹೇಳಿಕೆಗಳನ್ನು…

ಡಾ.ರಾಜ್ ಜನ್ಮದಿನ; ಗೋಕಾಕ್ ಚಳವಳಿ ನೆನೆದ ಅಶ್ವತ್ಥ್ ನಾರಾಯಣ

ಬೆಂಗಳೂರು,ಏ 24: ಕನ್ನಡದ ವರನಟ ದಿ. ರಾಜಕುಮಾರ್ ಅವರ 94ನೇ ಹುಟ್ಟುಹಬ್ಬದ ಪ್ರಯುಕ್ತ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೋಕಾಕ್ ಚಳವಳಿ ವೃತ್ತ (18ನೇ ಕ್ರಾಸ್) ಮತ್ತು ಸುಬ್ರಹ್ಮಣ್ಯ ನಗರದ ಸಂಗೊಳ್ಳಿ ರಾಯಣ್ಣ ಉದ್ಯಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಗಳಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು. ಎರಡೂ ಕಡೆಗಳಲ್ಲಿ ರಾಜಕುಮಾರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಕೇಕ್ ಕತ್ತರಿಸಿದ ಸಚಿವರು, ನೆರೆದಿದ್ದ ಅಭಿಮಾನಿಗಳಿಗೆ ಸಿಹಿ ಮತ್ತು ಉಪಾಹಾರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,…

ಸ್ತನಕ್ಯಾನ್ಸರ್‌ನ ನೂತನ ಚಿಕಿತ್ಸೆ ಕುರಿತು ಕಾರ್ಯಾಗಾರ

ಬೆಂಗಳೂರು,ಏ,19: ಆರಂಭದಲ್ಲಿಯೇ ಸ್ತನ ಕ್ಯಾನ್ಸರ್‌ ಪತ್ತೆ ಹಚ್ಚುವುದು ಉತ್ತಮವೇ? ಇದಕ್ಕೆ ನೂತನ ಚಿಕಿತ್ಸಾ ವಿಧಾನ ಈ ಕುರಿತು “ಸರ್ಜಿಕಲ್‌ ಕಾರ್ಯಾಗಾರ”ವನ್ನು ಫೊರ್ಟಿಸ್‌ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟ್‌ ಆಯೋಜಿಸಿತ್ತು. ಈ ಕಾರ್ಯಾಗಾರವನ್ನು ನಟಿ ರಾಚೆಲ್‌ ಡೇವಿಟ್‌ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಫೊರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್‌ ಆಂಕಾಲಜಿ ನಿರ್ದೇಶಕ ಡಾ. ಸಂದೀಪ್‌ ನಾಯಕ್‌, ಸ್ತನ ಕ್ಯಾನ್ಸರ್‌ನನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚುವುದು ಅನಿವಾರ್ಯ. ಸ್ತನ ಕ್ಯಾನ್ಸರ್‌ಗೆ ಪ್ರಾರಂಭದಲ್ಲಿ ಸರ್ಜಿಕಲ್‌ ಚಿಕಿತ್ಸೆ ನೀಡುವುದು ಅನಿವಾರ್ಯ. ಇಂಟ್ರಾ ಆಪರೇಟಿವ್‌ ರೇಡಿಯೇಶನ್‌ ಥೆರಪಿ (ಐಒಆರ್‌ಟಿ) ಹೊಸ…

11,513 ಕೋಟಿ ರೂ.ಗಳ 10 ಯೋಜನೆಗಳಿಗೆ ಅನುಮತಿ

ಬೆಂಗಳೂರು, ಏ,18: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58 ನೇ ಸಭೆಯಲ್ಲಿ ಒಟ್ಟು 11,513 ಕೋಟಿ ರೂ.ಗಳ 10 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಇದರಿಂದ 46,984 ಉದ್ಯೋಗ ಸೃಜನೆಯಾಗುವ ನಿರೀಕ್ಷೆ ಇದೆ. ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಗುತ್ತಿಗೆ ಮತ್ತು ಗುತ್ತಿಗೆಯ ಅವಧಿಯನ್ನು ಮಿತಿಮೀರಿ ವಿಸ್ತರಿಸಬಾರದು. ಈ ಬಗ್ಗೆ ಸ್ಪಷ್ಟ ನಿಯಮಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಕೈಗಾರಿಕೆಗಳಿಗೆ ನೀಡಲಾಗಿರುವ…

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ದಿಂದ ವಿಶೇಷ ಕೊಡುಗೆ ಘೋಷಣೆ!*

ಬೆಂಗಳೂರು,ಏ,18:ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ಹಾಲಿಡೇಸ್‌ ವಿಶೇಷ ರಿಯಾಯಿತಿ ಘೋಷಿಸಿದೆ. ಹೌದು, 2021-22 ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಮೊದಲ ಹಾಗೂ ದ್ವೀತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ನನ್ನು ತೋರಿಸುವ ಮೂಲಕ ಶೇ.35ರಷ್ಟು ರಿಯಾಯಿಯನ್ನು ಪಡೆಯಬಹುದು. ವಿದ್ಯಾರ್ಥಿಗಳು ಪರೀಕ್ಷೆ ಬರೆದು ತಮ್ಮ ಬೇಸಿಗೆ ರಜೆಯನ್ನು ಆನಂದಿಸಲು ಪ್ರಾರಂಭಿಸಿದ್ದಾರೆ. ಅವರ ಬೇಸಿಗೆ ರಜೆಯ ಮನರಂಜನೆಯನ್ನು ಇನ್ನಷ್ಟು ದ್ವಿಗುಣಗೊಳಿಸಲು ಈ ಆಫರ್‌ ನೀಡಲಾಗಿದೆ. ವಂಡರ್‌ಲಾದಲಿ ಸಾಮಾಜಿಕ ಅಂತರದ ನಿಯಮವನ್ನು ಪಾಲಿಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು…

ಎಸ್‌ಪಿ ಶೋಭಾ ಕಟಾವ್ಕರ್ ಮನೆಯಲ್ಲಿ ಶವವಾಗಿ ಪತ್ತೆ

ಬೆಂಗಳೂರು,ಏ,15: ಇತ್ತೀಚೆಗೆ ಎಸ್‌ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ ಕಟಾವ್ಕರ್(53) ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಸದಸ್ಯರು ತೆರಳಿದ್ದರೂ ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ಇಂದು ಒಬ್ಬರೇ ಇದ್ದರು. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮನೆಯ ಸದಸ್ಯರು ಶುಕ್ಸಂರವಾ ಸಂಜೆ ಕಟಾವ್ಕರ್‌ಗೆ ಕರೆ ಮಾಡಿದ್ದಾಗ ಅವರು ಫೋನ್ ರಿಸೀವ್ ಮಾಡಿರಲಿಲ್ಲ. ಹೀಗಾಗಿ ಮನೆಯ ಸೆಕ್ಯುರಿಟಿಗೆ ಪರಿಶೀಲಿಸಲು ಸೂಚಿಸಿದ್ದರು. ರಾತ್ರಿ 8 ಗಂಟೆಯ ವೇಳೆ ಮನೆಯನ್ನು ಸೆಕ್ಯೂರಿಟಿ ಮನೆಯನ್ನು ಪರಿಶೀಲಿಸಿದಾಗ ಕಟಾವ್ಕರ್ ಸಾವನ್ನಪ್ಪಿರುವುದು…

ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಗಂಭೀರವಾಗಿ ಪರಿಗಣಿಸಲು ಪೋಲಿಸರಿಗೆ ಸಿಎಂ ಸೂಚನೆ

ಬೆಂಗಳೂರು, ಏ, 08: ರಾಜ್ಯದಲ್ಲಿ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ. ಕರ್ನಾಟಕ ಪ್ರಗತಿಪರವಾದ ರಾಜ್ಯವಾಗಿದ್ದು, ಇದಕ್ಕೆ ಕೆಟ್ಟ ಹೆಸರು ತರಲು ಕೆಲವರು ಪದೇ ಪದೇ ಹೀಗೆ ಮಾಡುತ್ತಿದ್ದಾರೆ. ಪೋಲಿಸ್ ಅಧಿಕಾರಿಗಳಿಗೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಸುದ್ದಿಗಾರರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರು ಪ್ರತಿಕ್ರಿಯೆ ನೀಡಿದರು. ಈ ಕುರಿತು ಎಲ್ಲಾ ಕಡೆ ತಪಾಸಣೆ ಮಾಡಲು ತಿಳಿಸಿದ್ದು, ಕರೆ ಮಾಡಿದವರ…

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿಯಲ್ಲಿ ದಿಡೀರ್ ಬದಲಾವಣೆ

ಬೆಂಗಳೂರು ,ಏ.7: ದ್ವಿತೀಯ ಪಿಯುಸಿ  ಅಂತಿಮ ಪರೀಕ್ಷಾ ವೇಳಾಪಟ್ಟಿಯಲ್ಲಿ  ಬದಲಾವಣೆಯಾಗಿದೆ.  ವಿವಿಧ ವಿಷಯಗಳ ಪರೀಕ್ಷೆ ದಿನಾಂಕ ಮಾತ್ರ ಅದಲು ಬದಲು. ಕೆಲ‌ ತಾಂತ್ರಿಕ ಕಾರಣಗಳಿಂದ ಪರೀಕ್ಷೆ ದಿನಾಂಕ ಮಾತ್ರ ಬದಲಾವಣೆಯಾಗಿದೆ. ಈ ಮೊದಲು ತಿಳಿಸಿದಂತೆ ಏ. 22ರಿಂದ‌ ಮೇ 18ರವರೆಗೆ ಪರೀಕ್ಷೆ ನಡೆಯಲಿದೆ ವಿಷಯಗಳ ದಿನಾಂಕವಷ್ಟೆ ಬದಲಾಗಿದೆ ಎಂದು ಪಿಯು ಬೋರ್ಡ್  ಮಾಹಿತಿ ನೀಡಿದೆ. ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಈ ಬದಲಾವಣೆಯನ್ನು ವಿದ್ಯಾರ್ಥಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದೆ. ತಮ್ಮೆಲ್ಲರ ಗಮನಕ್ಕೆ ಈ ಹಿಂದೆ…

ವರ್ಷದಲ್ಲಿ 2.50 ಲಕ್ಷ ಜನರಿಗೆ ಕೌಶಲ್ಯ ತರಬೇತಿ: ಅಶ್ವತ್ಥನಾರಾಯಣ

ಮೈಸೂರು,ಏ,07: ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಈ ವರ್ಷ 2.50 ಲಕ್ಷ ಜನರಿಗೆ ಕೌಶಲ್ಯ ತರಬೇತಿ ಕೊಟ್ಟು, ಎಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡಲಾಗುವುದು. ಜತೆಗೆ, ವಿದ್ಯಾರ್ಥಿಗಳಿಗೆ ಪ್ರೌಢಶಾಲೆಯ ಮಟ್ಟದಿಂದಲೇ ಉದ್ಯೋಗಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಹೇಳಿದ್ದಾರೆ. ನಿಗಮದ ವತಿಯಿಂದ ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಏರ್ಪಡಿಸಿದ್ದ `ಉದ್ಯೋಗ ಮೇಳ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, `ರಾಜ್ಯದಲ್ಲಿ ಉದ್ಯೋಗಗಳಿಗೇನೂ ಕೊರತೆ ಇಲ್ಲ. ಆದರೆ, ಈ ಉದ್ಯೋಗಗಳಿಗೆ ಬೇಕಾದ…

ಉಕ್ರೇನಿಂದ ಸ್ವದೇಶಕ್ಕೆ ಆಗಮಿಸಿರುವ ವಿದ್ಯಾರ್ಥಿಗಳಿಗೆ ಬಿಎಲ್ ಡಿಇ ವಿ.ವಿ.ಯಿಂದ ಉಚಿತ ಶಿಕ್ಷಣ

ವಿಜಯಪುರ ,ಏ,7: ಯುದ್ಧಪೀಡಿತ ಉಕ್ರೇನಿನಿಂದ ವೈದ್ಯಕೀಯ ವಿದ್ಯಾಭ್ಯಾಸ ಮೊಟಕುಗೊಳಿಸಿ, ದೇಶಕ್ಕೆ ಆಗಮಿಸಿರುವ ವಿದ್ಯಾರ್ಥಿಗಳ ನೆರವಿಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮುಂದಾಗಿದೆ. ಸರ್ಕಾರದ ಮುಂದಿನ ಆದೇಶದವರೆಗೆ ಈ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಮೂಲಕ ಅತಂತ್ರದಲ್ಲಿದ್ದ ವಿದ್ಯಾರ್ಥಿಗಳ ಪಾಲಿಗೆ ಆಧಾರ ಹಸ್ತ ಚಾಚುವ ಮೂಲಕ ದೇಶದ ಪ್ರಥಮ ವೈದ್ಯಕೀಯ ಶಿಕ್ಷಣ ಸಂಸ್ಥೆಯಾಗಿದೆ. ಈ ಕುರಿತು ವಿಜಯಪುರದಲ್ಲಿ ಇಂದು ಪ್ರಕಟಿಸಿದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್‍ರವರು, ವಿಜಯಪುರದಲ್ಲಿ…

ಹಾಲು ಉತ್ಪಾದಕರಿಗೆ ಹೆಚ್ಚಿನ ಆರ್ಥಿಕ ನೆರವು ;ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏ, 01: ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಇದರಿಂದ ಹಾಲು ಉತ್ಪಾದಿಸುವ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕಿನ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಇಲಾಖೆ ಸಚಿವ ಅಮಿತ್ ಷಾ ಅವರೊಂದಿಗೆ ಪಾಲ್ಗೊಂಡು ಮಾತನಾಡುತ್ತಿದ್ದರು. ಸಹಕಾರಿ ರಂಗದ ಹಾಲು ಉತ್ಪಾದಕರ ಶಕ್ತಿ ಏನು ಎನ್ನುವುದು ಎಲ್ಲರಿಗೂ ಗೊತ್ತಿದೆ. ಸುಮಾರು…

ಭಾರತದಲ್ಲಿ ಧಾರ್ಮಿಕ ಪರಂಪರೆಗೆ ವಿಶೇಷ ಸ್ಥಾನವಿದೆ; ರಘುಮೂರ್ತಿ

ನಾಯಕನಹಟ್ಟಿ,ಏ,01:ನಮ್ಮ ರಾಷ್ಟ್ರದ ಧಾರ್ಮಿಕ ಪರಂಪರೆಗೆ ವಿಶೇಷವಾದ ಸ್ಥಾನಮಾನವಿದೆ ಋಗ್ವೇದದಪಲ್ಲಿ ಆರ್ಯನರು ಧಾರ್ಮಿಕ ನೆಲೆಘಟ್ಟನ್ನು ಗಟ್ಟಿಗೊಳಿಸಿದರು ಸಿಂಧೂ ನಾಗರೀಕತೆ ಯಿಂದಲು ಧಾರ್ಮಿಕ ಭಾವನೆ ಶ್ರೀಮಂತ ಗೊಂಡಿತು ಎಂದು ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದರು ಕರ್ನಾಟಕ ರಾಜ್ಯ ಸರ್ಕಾರದಿಂದ ಧಾರ್ಮಿಕ ದಿನಾಚರಣೆಯನ್ನು ಗೌರಸಮುದ್ರದ ಅಧಿದೇವತೆ ಮಾರಮ್ಮನ ದೇವಸ್ಥಾನದಲ್ಲಿಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ ತಾಲೂಕಿನಲ್ಲಿ ಎರಡು ಮೇಜರ್ ಮುಜರಾಯಿ ದೇವಸ್ಥಾನಗಳಿದ್ದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಹಾಗೂ ಗೌರಸಮುದ್ರದ ಮಾರಮ್ಮ ದೇವಸ್ಥಾನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬರು ಭಕ್ತಾಧಿಗಳಿಗೆ ವಿಶೇಷವಾಗಿ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ…

ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯಲಿ: *ಸಿಎಂ.ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಮಾ, 27: ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ, ಮುಕ್ತವಾಗಿ, ಧೈರ್ಯವಾಗಿ ಬರೆಯಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು ಎಂದರು.

ಪಠ್ಯ ಪುಸ್ತಕಗಳಲ್ಲಿ ಲಿಂಗ ತಾರತಮ್ಯ ಬದಲಿಸಲು ಡಿ. ರೂಪ ಒತ್ತಾಯ

ಬೆಂಗಳೂರು,ಮಾ,24:ಶಾಲಾ ಪಠ್ಯ ಪುಸ್ತಕದಲ್ಲಿ ಈಗಲೂ ಲಿಂಗ ತಾರತಮ್ಯ ಮಾಡಲಾಗುತ್ತಿದೆ. ಇದನ್ನು ಮೊದಲು ಬದಲಿಸುವ ಕೆಲಸ ಮಾಡಬೇಕು ಎಂದು ಐಪಿಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ ಕರೆ ನೀಡಿದರು. ಕರುನಾಡ ವಿಜಯ ಸೇನೆಯು ಭಾನುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಲವು ಸಾಧಕ ಮಹಿಳೆಯರನ್ನು ಸನ್ಮಾನಿಸಿ ಅವರು ಮಾತನಾಡಿದರು. “ಪಠ್ಯ ಪುಸ್ತಕಗಳಲ್ಲಿ ಕೆಲವು ದಶಕಗಳಿಂದ ರಾಮನು/ಅವನು ಮನೆಗೆ ತರಕಾರಿ ತರುತ್ತಾನೆ. ಸೀತೆ/ಅವಳು ಅಡುಗೆ ಮನೆಯಲ್ಲಿ…

ಪುನೀತ್ ಸತ್ಕಾರ್ಯಗಳು ಎಲ್ಲರಿಗೂ ಆದರ್ಶವಾಗಲಿ; ರಘುಮೂರ್ತಿ

ಚಳ್ಳಕೆರೆ, ಮಾ,24:ಪರರಿ ಗೋಸ್ಕರ ಬದುಕುವ ವ್ಯಕ್ತಿಗಳು ಅವರು ಸತ್ತಮೇಲೂ ಕೂಡ ಬದುಕಿರುತ್ತಾರೆ ನಮಗೋಸ್ಕರ ಬದುಕುವ ವ್ಯಕ್ತಿಗಳನ್ನು ಸಮಾಜವು ಶಾಶ್ವತವಾಗಿ ಅವರುಗಳ ನೆನಪಿನಿಂದ ದೂರ ಮಾಡುತ್ತದೆ ಎಂದು ತಹಸಿಲ್ದಾರ್ ಎನ್ ರಘುಮೂರ್ತಿಮೂರ್ತಿ ಹೇಳಿದರು ಚಳ್ಳಕೆರೆ ಬೀಡ್ಸ್ ವತಿಯಿಂದ ಹಮ್ಮಿಕೊಂಡಿದ್ದ  ಪುನೀತ್ ರಾಜಕುಮಾರ್ ಅವರ ಗೀತ ಗಾಯನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ ಡಾಕ್ಟರ್ ಪುನೀತ್ ರಾಜಕುಮಾರ್ ಅವರ ಜೀವಿತಾವಧಿಯಲ್ಲಿ ಅವರು ಮಾಡಿರುವಂತಹ ಸತ್ಕಾರ್ಯಗಳು ಸಮಾಜಕ್ಕೆ ಏನಾದರೂ ತಿಳಿದಿದ್ದಲ್ಲಿ ಅವರಿಗೆ ಗುಡಿಕಟ್ಟಿಸಿ ಅವರನ್ನು ದೇವರ ರೀತಿಯಲ್ಲಿ ಆರಾಧಿಸುತ್ತಿದ್ದರು ಆದರೆ ದುರಾದೃಷ್ಟವಶಾತ್…

ಅಕ್ರಮ ಪಡಿತರ ಅಕ್ಕಿ ವಶ

ಚಳ್ಳಕೆರೆ ,ಮಾ,23:ತಾಲೂಕಿನ ನೆಹರೂ ರುತ್ತದ ಬಳಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 12 ಟನ್ ಪಡಿತರ ಅಕ್ಕಿಯನ್ನು ಚಳ್ಳಕೆರೆ ತಾಸಿಲ್ದಾರ್ ಮತ್ತು ಸಿಬ್ಬಂದಿ ವರ್ಗದವರು ವಶಪಡಿಸಿಕೊಂಡಿದ್ದಾರೆ ಬಳ್ಳಾರಿಯಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಲಾರಿ ಸಂಖ್ಯೆ ಕೆಎ 06 AA5508 ರಲ್ಲಿ 12 ಅಕ್ಕಿಯನ್ನು ಅನಧಿಕೃತವಾಗಿ ಸರಬರಾಜು ಮಾಡುತ್ತಾರೆಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಇಂದು ಮಧ್ಯಾನ ತಶಿಲ್ದಾರ್ ಆಹಾರ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಈ ಲಾರಿಯನ್ನು ತಪಾಸಣೆ ಮಾಡಿ ಡ್ರೈವರ್ ಅಜ್ಮನ್ ಸಮೇತ ದಸ್ತಗಿರ್ ಮಾಡಿ ಇವರುಗಳ ಮೇಲೆ…

ಬೆಳ್ಳಂಬೆಳಗ್ಗೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು, ಮಾ,೨೨: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಸಮರ ಸಾರಿರುವ ಎಸಿಬಿ, ಇಂದು ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಯಾಡಿದೆ. ನಗರದ ೯ ಭ್ರಷ್ಟ ಬಿಡಿಎ ಮಧ್ಯವರ್ತಿಗಳ ಕಚೇರಿ, ನಿವಾಸಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಇನ್ನೂ ಮಹತ್ವದ ದಾಖಲೆ ಹುಡುಕಾಟದಲ್ಲಿ ತೊಡಗಿದ್ದಾರೆ. ಎಸಿಬಿ ಅಧಿಕಾರಿಗಳು ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ೯ ಮಧ್ಯವರ್ತಿಗಳು,ಏಜೆಂಟರು, ಭ್ರಷ್ಟ,ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ…

ಅಸಾಧ್ಯ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಭಗೀರಥ ಪ್ರಯತ್ನದಿಂದ ಸಾಧಿಸಿದ್ದಾರೆ: ಸಿಎಂ

ಬೆಂಗಳೂರು, ಮಾ, 21: ಉಕ್ರೇನ್ ನಿಂದ ನವೀನ್ ಮೃತ ದೇಹವನ್ನು ತರುವ ಅಸಾಧ್ಯವಾದ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರ ಭಗೀರಥ ಪ್ರಯತ್ನದಿಂದ ಸಾಧಿಸಿ, ಐತಿಹಾಸಿಕ ಕೆಲಸವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವೀನ್ ಮೃತದೇಹವನ್ನು ಬರಮಾಡಿಕೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಉಕ್ರೇನ್ ಸುತ್ತಲಿನ ಎಲ್ಲಾ ದೇಶಗಳ ಸಂಪರ್ಕವನ್ನು ಬೆಳೆಸಿ ರಾಜತಾಂತ್ರಿಕವಾಗಿ ವಿಮಾನನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಅನುಮತಿ ಪಡೆದು ಕರೆತರಲಾಗಿದೆ. ಇಡೀ ಪ್ರಕ್ರಿಯೆ ಸಮನ್ವಯದ ಆಧಾರದ ಮೇಲೆಯೇ…

ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ –ಸಿಎಂ ಬೊಮ್ಮಾಯಿ

ಬೆಂಗಳೂರು, ಮಾ, 20 :ದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲನ್ನು ಹಾಕುವ ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡಿನಲ್ಲಿ ಕರ್ನಾಟಕದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳೂ ಸೇರಿದಂತೆ ಒಟ್ಟು 3 ಜನ ನ್ಯಾಯಮೂರ್ತಿಗಳ ಮೇಲೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ಮೊಕದ್ದಮೆ ದಾಖಲಾಗಿದೆ. ನ್ಯಾಯಾಂಗದ ತೀರ್ಪನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ಅರ್ಜಿದಾರರಿಗೆ ತೀರ್ಪು ಸಮಂಜಸವೆನಿಸದಿದ್ದರೆ ಮೇಲ್ಮನವಿ ಸಲ್ಲಿಸಲು ಎಲ್ಲ ಅವಕಾಶಗಳಿವೆ.…

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ವ ಪ್ರಯತ್ನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಯಾದಗಿರಿ, ಮಾ,19:ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಸರ್ವಪ್ರಯತ್ನ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸುರಪುರ ತಾಲ್ಲೂಕಿನ ದೇವತ್ಕಲ್ ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 3000 ಕೋಟಿ ರೂ. ಅನುದಾನ ನೀಡಿದ್ದು, ವಲಯವಾರು ಶಿಕ್ಷಣ, ಆರೋಗ್ಯ, ಅಪೌಷ್ಠಿಕತೆಗೆ ಪ್ರತ್ಯೇಕವಾಗಿ ಅನುದಾನ ನೀಡಿದೆ. ಅದರ ಜೊತೆಗೆ ಎಸ್.ಡಿ.ಪಿ ಅಡಿ ನಂಜುಂಡಪ್ಪ ವರದಿ ಪ್ರಕಾರ ನೀಡಬೇಕಾಗುತ್ತದೆ. ಸಂಪುಟ ಉಪಸಮಿತಿ ರಚಿಸಿದ್ದು,ಅದರ ಶಿಫಾರಸ್ಸಿನಂತೆ ಅನುದಾನ ನೀಡಲಾಗುವುದು ಎಂದರು. ಯಾದಗಿರಿ ಜಿಲ್ಲೆಯಲ್ಲಿ…

1 6 7 8 9 10 33
error: Content is protected !!