Browsing: ಜಿಲ್ಲೆ

ಜಿಲ್ಲೆ

ನಗರ ನಾಶವಾಗುತ್ತಿದ್ದರೂ ಗಮನ ಹರಿಸದ ಅಧಿಕಾರಿಗಳು

by G.K.Hebbar ಶಿಕಾರಿಪುರ,ಮೇ,೨೨: ನಗರದ ಹಲವಾರು ರಸ್ತೆಗಳು ಒಂದಲ್ಲ ಒಂದು ರೀತಿಯಲ್ಲಿ ಬೇರೆ ಬೇರೆ ನೆಪ ವ ಡ್ಡಿ.ಅಗೆದು ಅಗೆದು ಹಾಳಾಗುತ್ತಿದೆ ಆದರೆ ಅಧಿಕಾರಿಗಳು ದಿವ್ಯ ಮೌನಕ್ಕೆ ಶರಣಾಗಿದ್ದು ಬುದ್ದಿ ಜೀವಿಗಳಲ್ಲಿ ಆತಂಕ ಎದುರಾಗಿದೆ.ಕಾರಣ ಕೋಟಿ ಕೋಟಿ ಮೊತ್ತದ ಅನುದಾನ ಅಡಿಯಲ್ಲಿ ಊರಿಗೆ ಅನೇಕ ಕೆಲಸಗಳು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ್ದಾರೆ . ನಗರದ ಸುಂದರತೆ ಅನುಗುಣವಾಗಿ ಆಡಳಿತ ಸೌಧ.ಪಾರ್ಕ್.ಕೆರೆ. ರಾಜ್ಯ ಎಲ್ಲು ಕಂಡರಿಯದ ವಿಶೇಷ ಕುಡಿಯುವ ನೀರಿನ ವ್ಯವಸ್ಥೆ.ಹೀಗೆ ಲೆಕ್ಕ ಹಾಕಲು ಸಾಧ್ಯವಾ…

ಶಿಕಾರಿಪುರ-ಅಂಗಡಿಗಳ ತೆರವುಗೊಳಿಸಲು ಮೀನಾ-ಮೇಷ!

by Gopolkrishna hebbar shikaripura ಶಿಕಾರಿಪುರ,ಮೇ,೨೧: ಇಲ್ಲಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಮುಂಭಾಗ ಆಲದ ಮರದಹತ್ತಿರದಿಂದ ಮುಭಾಗದ ಗೇಟಿನ ಬಳಿ ಇರುವ ಅಂಗಡಿಗಳನ್ನು ತೆರವು ಗೊಳಿಸಲು ಪುರಸಭೆ ಇನ್ನೂ ಮಿನ -ಮೇಷ ಎಣಸುತ್ತಿದೆ. ಆಡಳಿತ ವೈದ್ಯಧಿಕಾರಿ ಗಳ ಮೇಲೆ ಪುರಸಭೆಯವರು. ಪುರಸಭೆ ಮೇಲೆ ವೈದ್ಯಾಧಿಕಾರಿಗಳು. ಹೀಗೆ ಒಂದು ವರ್ಷಗಳೇ ಕಳೆದು ಈಗ ಕೂ ರೋ ನಾ ವಕ್ಕರಿಸಿದೆ. ಇದರ ನಡುವೆ ಸಾರ್ವಜನಿಕರ ಆರೋಗ್ಯ ವೈದ್ಯರ ಆರೋಗ್ಯದ ದೃಷ್ಟಿ ಯಿಂದ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಆಗಲೆಂದು ಪುರಸಭೆ ಹಾಗೂ ವೈದ್ಯ…

ಸಚಿವ ಸೋಮಶೇಖರ್ ಕಾರ್ಯಗಳ ಶ್ಲಾಘಿಸಿದ ಉಪೇಂದ್ರ

ಬೆಂಗಳೂರು,ಮೇ,20: ಕೋವಿಡ್ 19 ರ ಈ ಸಂದರ್ಭದಲ್ಲಿ ಜನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಿಗೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಇದು ಎಲ್ಲರಿಗೂ ಮಾದರಿಯಾಗಿದೆ ಎಂದು ನಟ, ನಿರ್ದೇಶಕರಾದ ಉಪೇಂದ್ರ ಹೇಳಿದರು ಕುಂಬಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೃಪಪಟ್ಟ ಕುಟುಂಬಗಳಿಗೆ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವೈಯಕ್ತಿಕವಾಗಿ ಕೊಡಮಾಡುವ ತಲಾ ರೂ.1 ಲಕ್ಷಗಳ ಪರಿಹಾರವನ್ನು ನೀಡಿ ಮಾತನಾಡಿದ ಉಪೇಂದ್ರ ಅವರು, ಸಚಿವರಾದ ಸೋಮಶೇಖರ್ ಅವರು ಕೊಟ್ಟಿದ್ದು ತನಗೆ,…

ಮಂಡ್ಯ ದಲ್ಲಿ ಕೋವಿಡ್ ಸೋಂಕಿತರ ಜೊತೆ ಸಂವಾದ ನಡೆಸಿದ ಡಿಸಿಎಂ

ಮಂಡ್ಯಮೇ,20: ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ಮಂಡ್ಯ ಜಿಲ್ಲೆಯಲ್ಲಿ ಬೆಳಗಿನಿಂದ ಮಧ್ಯಾಹ್ನದವರೆಗೆ ಕೋವಿಡ್‌ ವ್ಯವಸ್ಥೆ ವೀಕ್ಷಿಸಲು ಬಿರುಸಿನ ಪ್ರವಾಸ ನಡೆಸಿದರಲ್ಲದೆ ಮದ್ದೂರು, ಬೂದನೂರು ಹಾಗೂ ಮಂಡ್ಯ ಆಸ್ಪತ್ರೆಗಳಿಗೆ ಭೇಟಿ ವ್ಯಾಪಕ ಪರಿಶೀಲನೆ ನಡೆಸಿದರು. ಮಂಡ್ಯದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಇ ಕಿಟ್‌ ಧರಿಸಿ ಕೋವಿಡ್‌ ಸೋಂಕಿತರ ವಾರ್ಡ್‌ಗೆ ತೆರಳಿ ಖುದ್ದು ಪರಿಶೀಲನೆ ನಡೆಸಿದರಲ್ಲದೆ, ಸೋಂಕಿತರ ಯೋಗ ಕ್ಷೇಮ ವಿಚಾರಿಸಿ ಅವರಿಗೆ ಸಿಗುತ್ತಿರುವ ಚಿಕಿತ್ಸೆ-ಆರೈಕೆಯ ಮಾಹಿತಿ ಪಡೆದುಕೊಂಡರು. ವಾರ್ಡ್‌ನಲ್ಲಿ ಆಮ್ಲಜನಕದ ವ್ಯವಸ್ಥೆ,…

ಎರಡನೇ ಹಂತದ ಲಾಕ್‌ಡೌನ್ ನಂತರ ಪ್ಯಾಕೇಜ್ ಘೋಷಣೆ-ಅಶೋಕ್

ಕಾರವಾರ,ಮೇ,೧೮: ಲಾಕ್‌ಡೌನ್ ಮುಂದುವರೆಸಬೇಕೆ ಬೇಡವೇ ಕುರಿತು ಮುಖ್ಯಮಂತ್ರಿಗಳು ನಿರ್ಧರಿsಲಿದ್ದು ಎರಡನೇ ಹಂತದ ಲಾಕ್‌ಡೌನ್ ಘೋಷಣೆ ನಂತರ ಪ್ಯಾಕೇಜ್‌ಘೋಷಣೆಯೂ ಮಾಡುತ್ತಾರೆ ಎನ್ನುವ ಸುಳುವಿನ್ನು ಕಂದಾಯ ಸಚಿವ ಆರ್.ಅಶೋಕ್ ನೀಡಿದ್ದಾರೆ. ಭಟ್ಕಳದಲ್ಲಿ ಚಂಡಮಾರುದಿಂದ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಿಸ್ಥಿತಿಯನ್ನು ಅವಲೋಕಿಸಿ ಲಾಕ್‌ಡೌನ್ ವಿಸ್ತರಣೆ ಮಾಡಬೇಕೆ ಬೇಡವೇ ಎನ್ನುವ ಕುರಿತು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ ಈ ವೇಳೆ ಎರಡನೇ ಹಂತದ ಘೋಷಣೆ ಮಾಡಿದಾಗ ಪ್ಯಾಕೇಜ್ ಕೂಡ ಘೋಷಣೆ ಮಾಡುತ್ತಾರೆ ಎಂದು ಅವರು ಹೇಳಿದರು ಹಳ್ಳಿಗಳಲ್ಲಿ…

ಕೊರೊನಾ ಚಿಕಿತ್ಸೆಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಬಿಬಿಎಂಪಿ ಹೊಸ ಹೊಸ ಮಾರ್ಗಸೂಚಿಗಳನ್ನು ಅನುಸರಿಸುತ್ತಿದೆ ಒಂದು ರೀತಿ ಜ್ಞಾನೋದಯವಾದಂತೆ ಈಗ ಚಿಕಿತ್ಸೆಗೆ ಮೂರು ಹಂತದ ವ್ಯವಸ್ಥೆಯನ್ನು ಮಾಡಲು ಈಗ ನಿರ್ಧರಿಸಿದೆ. ಈ ಕುರಿತಂತೆ ಈ ಮೂರು ಹಂತದ ವ್ಯವಸ್ತೆ ಹೇಗಿರಬೇಕು ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ತಗೆದುಕೊಳ್ಳಬಹುದಾದ ಜಾಗೃತಿ ಕುರಿತಂತೆ ಮಾರ್ಗಸೂಚಿಯನ್ನು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಬಿಡುಗಡೆ ಮಾಡಿದ್ದಾರೆ ಒಟ್ಟು ಮೂರು ಹಂತಗಳಲ್ಲಿ ಚಿಕಿತ್ಸಾ ನಿರ್ಧಾರ ಕೇಂದ್ರಗಳನ್ನು (ಪಿಟಿಸಿ) ಆರಂಭಿಸುವಂತೆ ಸೂಚಿಸಿದ್ದಾರೆ. ಸೋಂಕಿತರ ದೇಹಸ್ಥಿತಿ ಅವಲೋಕಿಸಿ…

ನಕಲಿ ಪತ್ರಕರ್ತನ ಬಂಧಿಸಿದ ಪೊಲೀಸರು

ಹುಬ್ಬಳ್ಳಿ,ಮೇ,೧೮: ನಕಲಿ ಪತ್ರಕರ್ತರ ಹಾವಳಿ ರಾಜ್ಯಾದ್ಯಂತ ಹೆಚ್ಚಾಗುತ್ತಿದೆ ಯಾರೆ ಕೇಳಿದರು ಕೆಲವರು ಪತ್ರಕರ್ತ ಎಂದು ನಕಲಿ ಐಡಿ ಕಾರ್ಡ್‌ಗಳನ್ನು ತೋರಿಸಿ ಸಂಚರಿಸುವವರ ಸಂಖ್ಯೆ ಹೆಚ್ಚಾಗಿದೆ ಇದರ ಪರಿಣಾಮ ಹುಬ್ಬಳಿಯಲ್ಲಿ ಪೊಲೀಸರು ನಕಲಿ ಪತ್ರಕರ್ತನನ್ನು ವಶಕ್ಕೆ ಪಡೆದು ಬೈಕ್ ಸೀಜ್ ಮಾಡಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ ಡಿಸಿಪಿ ರಾಮರಾಜನ್ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಂದು ಮುಂಜಾನೆ ಅನಗತ್ಯವಾಗಿ ಓಡಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹಿಡಿದು ಬೈಕ್ ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಜಾನ್ ನಿಕೋಲಸ್ ಹಲವು…

ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರೀಕರಿಗೂ ವ್ಯಾಕ್ಸಿನ್ ಸೌಲಭ್ಯ – ಜೊಲ್ಲೆ ಭರವಸೆ

çಬೆಂಗಳೂರು ಮೇ,17:ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೆ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ಕೊರೊನಾ ಸೇನಾನಿಗಳೆಂದು ಭಾವಿಸಿ ಅವರಿಗೂ ಲಸಿಕೆಯನ್ನು ನೀಡಬೇಕು, ಹಾಗೂ ಹೈಕೋರ್ಟ್…

ರಾಜ್ಯ ಸರ್ಕಾರ ಸತ್ತೇ ಹೋಗಿದೆ-ಸಿದ್ದು ಲೇವಡಿ

ಕೋಲಾರ,ಮೇ೧೭:ತಜ್ಞರು ಕೊರೊನಾ ಎರಡನೇ ಅಲೆ ಕುರಿತು ವರದಿ ಕೊಟ್ಟರು ಎಚ್ಚೆತ್ತುಕೊಳ್ಳದೆ ಸರ್ಕಾರ ಸತ್ತು ಹೋಗಿದೆ ಇಂತಹ ಮನಗೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಾಗ್ದಾಳಿ ನಡೆಸಿದ್ದಾರೆ ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮುನ್ಸಿಪಲ್ ಮೈದಾನದಲ್ಲಿ ನಡೆದ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಕೊರೊನಾ ಎರಡನೇ ಅಲೆ ಬರುವ ಮುನ್ಸೂಚನೆ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮಾನಗೆಟ್ಟ ಸರ್ಕಾರವನ್ನು ನಾನು…

ರಾಜಕಾರಣ ಬಿಟ್ಟು ಜನರ ಕಷ್ಟಕ್ಕೆ ಸ್ಪಂದಿಸಿ; ನಾರಾಯಣಗೌಡ

ಮಂಡ್ಯ ,ಮೇ17 ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೋವಿಡ್ – 19 ತಡೆಗಟ್ಟಲು ಮಾಡುತ್ತಿರುವ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಶ್ಲಾಘಿಸಿದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿಯ ಲ್ಲಿ ಮೆಡಿಸಿನ್ ಕಿಟ್ ವಿತರಣೆ ಮಾಡಿದರು. ಈ ವೇಳೆ ಪಕ್ಷದ ಕಾರ್ಯಕರ್ತರ ಜನಪರ ಕಾರ್ಯಗಳನ್ನು ನೆನೆದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರತಿದಿನ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಖುದ್ದು ಅವಲೋಕಿಸುತ್ತಿದ್ದೇನೆ. ನಿಮ್ಮೊಂದಿಗೆ…

ಕೋವ್ಯಾಕ್ಸಿನ್ ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಂಗಳೂರು, ಮೇ,17: ಕಂದಾಯ ಭವನದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೇಂದ್ರ ಕಾರ್ಯಾಲಯದಲ್ಲಿ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಕೋವ್ಯಾಕ್ಸಿನ್ ಲಸಿಕೆ ಅಭಿಯಾನಕ್ಕೆ Ôವಸತಿ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು. ಈ ವೇಳೆ ಇತ್ತೀಚೆಗೆ ಕೋವಿಡ್ ನಿಂದ ಸಾವನ್ನಪ್ಪಿದ  ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್,ಸೇರಿದಂತೆ ಸಾವನ್ನಪ್ಪಿದ  ಪತ್ರಕರ್ತರುಗಳಿಗೆ ಶ್ರದ್ದಾಂಜಲಿ ಸಲ್ಲಿಸಿ ನುಡಿ ನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೆ.ಯು.ಡಬ್ಲು.ಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು,ರಾಜ್ಯಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್, ಬಂಗ್ಲೆ ಮಲ್ಲಿಕಾರ್ಜುನ,ಬಿ.ಬಿ.ಎಂ.ಪಿ.ಸದಸ್ಯ…

ಜಿಡಿಎಸ್ ನಿಂದ 2ಡಿಜಿ ಔ‍ಷಧ ಖರೀದಿಸಿ ಹಂಚಲು ಚಿಂತನೆ

ಬೆಂಗಳೂರು,ಮೇ,17: ರಾಜ್ಯದ ಕೋವಿಡ್‌ ಸ್ಥಿತಿಗತಿ ಮತ್ತು ಜೆಡಿಎಸ್‌ ವತಿಯಿಂದ ಜನರಿಗೆ ನೀಡಲಾಗುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಪಕ್ಷದ ಶಾಸಕರು, ಮುಖಂಡರೊಂದಿಗೆ ಸೋಮವಾರ ಆನ್‌ಲೈನ್‌ ಸಮಾಲೋಚನೆ ನಡೆಸಿದರು. ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು, ಪರೀಕ್ಷಾ ವರದಿಗಳು ವಿಳಂಬವಾಗಿ ಬರುತ್ತಿರುವುದು ಮತ್ತು ವರದಿ ವಿಳಂಬವಾಗುತ್ತಿರುವುದರಿಂದ ಆಗುತ್ತಿರುವ ಅನಾಹುತಗಳು, ಲಸಿಕೆ ಅಭಿಯಾನ ಅವ್ಯವಸ್ಥೆ, ಆಕ್ಸಿಜನ್‌ ಪೂರೈಕೆಯಲ್ಲಿ ಅಗುತ್ತಿರುವ ಸಮಸ್ಯೆ, ತಾರತಮ್ಯ, ಆಸ್ಪತ್ರೆಗಳು ರೋಗಿಗಳಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ…

ಆನೇಕಲ್ ;ಬೆಡ್ ಬುಕಿಂಗ್, ಮಿನಿ ವಾರ್ ರೂಂ ಸೇವೆಗಳಿಗೆ ಚಾಲನೆ

ಪರಶಿವ ಧನಗೂರು. ಬೆಂಗಳೂರು,ಮೇ17:ಎರೆಡನೇ ಅಲೆಯ ರೂಪಾಂತರಿ ಡಬಲ್ ಮ್ಯುಟೆಂಟ್ ವೈರಸ್ ಆನೇಕಲ್ ತಾಲೂಕಿಗೆ ವಿಶೇಷ ಶಾಪವಾಗಿ ಪರಿಣಮಿಸಿದ್ದು ಈವರೆಗೆ ಬೆಡ್ ಬುಕಿಂಗ್, ಆಮ್ಲಜನಕ ಕೊರತೆ ವೆಂಟಿಲೇಷನ್ ಆಸ್ಪತ್ರೆಗಳ ಅಲಭ್ಯತೆ ಸೋಂಕಿತರನ್ನು ಸಾಕಷ್ಟು ಕಾಡಿತ್ತು. ಬೆಂಗಳೂರಿನ ಬೊಮ್ಮನಹಳ್ಳಿ ವಾರ್ ರೂಂ ಅಕ್ಷರಶಃ ಆನೇಕಲ್ ಜನತೆಗೆ ಮರೀಚಿಕೆಯಾಗಿತ್ತು. ಸಾಕಷ್ಟು ಸಾವುಗಳನ್ನು ಕಂಡ ಜನತೆಗೆ ಬೆಂಗಳೂರು ನಗರ ಜಿಲ್ಲಾದಿಕಾರಿಗಳು ರಾಜ್ಯ ಸರ್ಕಾರದ ಆದೇಶದಂತೆ ಆನೇಕಲ್ ವಿಧಾನ ಸಭಾ ಕ್ಷೇತ್ರದಲ್ಲಿಯೇ ಕೋವಿಡ್-19 ಚಿಕಿತ್ಸೆಯ ಸರಧಿ ತೀರ್ಮಾನ ಕೇಂದ್ರ (ಟ್ರೈಯಾಗಿಂಗ್ ಸೆಂಟರ್) ವನ್ನು ಚಾಲನೆಗೊಳಿಸಿದರು.…

ಬೌರಿಂಗ್ ನಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ;ಸುಧಾಕರ್

ಬೆಂಗಳೂರು, ಮೇ 16:ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಸ್ಟೀರಾಯಿಡ್ ಅಧಿಕವಾಗಿ ಬಳಸಿರುವವರಿಗೆ ಹಾಗೂ ಮಧುಮೇಹ ಹೆಚ್ಚಿರುವವರಿಗೆ ಕೋವಿಡ್ ಬಂದಾಗ ಬ್ಲ್ಯಾಕ್ ಫಂಗಸ್ ಬರುವ ಸಾಧ್ಯತೆ ಇದೆ. ಮೂಗಿನಿಂದ ಆರಂಭವಾಗುವ ಈ ರೋಗ ಕಣ್ಣಿಗೆ ಹಾನಿ ಮಾಡುತ್ತದೆ.…

ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 50 ಸಾವಿರ ಪರಿಹಾರ:ಬಿ.ಸಿ.ಪಾಟೀಲ್

ಬೆಂಗಳೂರು,ಮೇ.16 :ಹಿರೇಕರೂರು ಮತಕ್ಷೇತ್ರದಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50ಸಾವಿರ ರೂ.ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ. ಹಿರೇಕೆರೂರು ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು ಹದಿನೆಂಟು ಮಂದಿ‌ ಸೋಂಕಿನಿಂದ ಮೃತಪಟ್ಟಿದ್ದು,ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ.ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ. ಇನ್ನು ಕೆಲವು ದಿನಗಳ ಹಿಂದೆ ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ…

ಬಸವಣ್ಣನಿಗೆ ವಚನಜ್ಯೋತಿ ಬಳಗದ ವಿಶಿಷ್ಟ ನಮನ

ಬೆಂಗಳೂರು,ಮೇ,16:ವಚನಜ್ಯೋತಿ ಬಳಗ ಬಸವ ಜಯಂತಿಯನ್ನು ವಚನ ಗಾನಾಭಿಷೇಕದ ಮೂಲಕ ವಿಶಿಷ್ಟವಾಗಿ ಆಚರಿಸಿತು. ಗೂಗಲಮೀಟಿನಲ್ಲಿ ನಡೆದ ಗಾನಾಭಿಷೇಕವನ್ನು ಹಿಂದೂಸ್ಥಾನಿ ಸಂಗೀತದ ಹಿರಿಯ ವಿದ್ವಾಂಸರಾದ ಪಂ. ದೇವೇಂದ್ರಕುಮಾರ ಪತ್ತಾರ್ ಅಲ್ಲಮಪ್ರಭುಗಳ ಬಸವ ಸ್ತುತಿಯೊಂದಿಗೆ ಉದ್ಘಾಟಿಸಿದರು. ನೇತೃತ್ವ ವಹಿಸಿದ್ದ ಬಳಗದ ಮಹಾಪೋಷಕಿ 86 ವರ್ಷದ ಪಾರ್ವತಮ್ಮ ಶಿವಲಿಂಗಯ್ಯ ಪಂಡಿತರು ಅತ್ಯಂತ ಉತ್ಸಾಹದಿಂದ ಅಣ್ಣನ ವಚನ “ತನುವ ಕೊಟ್ಟು ತನು ಬಯಲಾಯಿತ್ತು” ಹಾಡಿ ಗಾನಾಭಿಷೇಕಕ್ಕೆ ಮೆರುಗು ಕೊಟ್ಟರು. ಗೋಕಾಕದ ವಿದ್ಯಾಮಗ್ದಂ, ವಿಜಯಪುರ ಚಡಚಣದ ವಿದ್ಯಾ ಕಲ್ಯಾಣಶೆಟ್ಟಿ, ಚಿಕ್ಕನಾಯಕನಹಳ್ಳಿ ಹುಳಿಯಾರಿನ ಕವಿತಾ, ಮೈಸೂರಿನ…

ಅಮೂಲಾಗ್ರ ಸುಧಾರಣೆಗೆ ಕ್ರಮ;ಅಶ್ವತ್ಥ ನಾರಾಯಣ

ಬೆಂಗಳೂರು,ಮೇ,15: ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಜನರಿರುವ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇರುವ ವ್ಯವಸ್ಥೆಯನ್ನೇ ಆಮೂಲಾಗ್ರವಾಗಿ ಸುಧಾರಿಸಲು ರಾಜ್ಯ ಕೋವಿಡ್‌ ಕಾರ್ಯಪಡೆಯು ತಜ್ಞರರದಿ ಪಡೆಯಲು ನಿರ್ಧರಿಸಿದೆ. ಬೆಂಗಳೂರಿನಲ್ಲಿ ಶನಿವಾರ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ನೇತೃತ್ವದಲ್ಲಿ ನಡೆದ ಕಾರ್ಯಪಡೆ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಆರೋಗ್ಯ ವ್ಯವಸ್ಥೆಯನ್ನು ಬಿಬಿಎಂಪಿ ವ್ಯಾಪ್ತಿಯಿಂದ ತೆಗೆದು ಆರೋಗ್ಯ…

೨ನೇ ಕಂತಿನ ಆಮ್ಲಜನಕ ಹೊತ್ತು ತಂದ ಎಕ್ಸ್ ಪ್ರೆಸ್ ರೈಲು

ಬೆಂಗಳೂರು, ಮೇ,೧೫: ಕೋವಿಡ್-೧೯ ಚಿಕಿತ್ಸೆಗಾಗಿ ಆಕ್ಸಿಜನ್ ಕೊರತೆ ಮುಂದುವರೆದಿದ್ದು ಕೇಂದ್ರ ಸರ್ಕಾರ ೨ನೆ ಬಾರಿ ರಾಜ್ಯಕ್ಕೆ ಆಕ್ಸಿಜನ್ ರವಾನೆ ಮಾಡಿದೆ. ೧೨೦ ಮೆಟ್ರಿಕ್ ಟನ್ ಆಕ್ಸಿಜನ್ ಶನಿವಾರ ಬೆಳಿಗ್ಗೆ ಎಕ್ಸ್ ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ತಲುಪಿತು. ಕಳಿಂಗ ನಗರದಿಂದ ಬೇಂಗಳೂರಿಗೆ ಬೆಳಗಿನ ಜಾವ೩.೨೦ಕ್ಕೆ ತಲುಪಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ತಲಾ ೨೦ ಟನ್ ಆಕ್ಸಿಜನ್ ಸಾಮರ್ಥ್ಯದ ಒಟ್ಟು ಆರು ಕಂಟೇನರ್ ಗಳಲ್ಲಿ ಸುಮಾರು ೧೨೦ ಮೆಟ್ರಿಕ್ ಟನ್ ನಷ್ಟು ತೂಕದ ಆಮ್ಲಜನಕ ಹೊತ್ತು…

ಎಸ್.ಆರ್.ಪಾಟೀಲ್ ರಿಂದ ಉಚಿತ ಆಂಬುಲೆನ್ಸ್

ನಿಡಗುಂದಿ, ಮೇ,15:ದಿನೇ ದಿನೇ ಕೊರೊನಾ ಅಟ್ಟಹಾಸ ಜಾಸ್ತಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ,ತಾಲ್ಲೂಕು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಜನಪ್ರತಿನಿದಿಗಳು ಹಲವು ಸೇವೆಗಳನ್ನು ಮನನ ಅಡುತ್ತಿದ್ದಾರೆ. ನಿಡಗುಂದಿ ಆರೋಗ್ಯ ಸಮುದಾಯ ಕೇಂದ್ರಕ್ಕೆ ಅವಶ್ಯಕತೆ ಇದ್ದ ಆಂಬುಲೆನ್ಸ್ ಅನ್ನು ವಿಧಾನ ಪರಿಷತ್ ಸದಸ್ಯ ಎಸ್.ಆರ್. ಪಾಟೀಲ್ ಉಚಿತವಾಗಿ ನೀಡಿದ್ದಾರೆ. ಕೋವಿಡ್ ರೋಗಿಗಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಅಂಬುಲೆಸ್ಸ್ ನೀಡಿದ್ದು ಇದರ ಸದುಪಯೋಗ ಪಡೆಯುವಂತೆ ಅವರು ತಿಳಿಸಿದ್ದಾರೆ. ಇದೇ ವೇಳೆ ಎಸ್.ಆರ್.ಪಾಟೀಲ್ ಪರವಾಗಿ ಅವರ ಸಹೋದರ ಶಿವಾನಂದ ಮಾವಟಿ ಅವರಿಗೆ ಸನ್ಮಾನಿಸಲಾಯಿತು.

ಶುಕ್ರವಾರ ಕೋವಿಡ್‌ನಿಂದ ೩೫,೮೭೯ ಮಂದಿ ಮುಕ್ತ

ಬೆಂಗಳೂರು,ಮೇ,೧೪:ಕಳೆದ ೨೪ ಗಂಟೆಯಲ್ಲಿ ೩೫,೮೭೯ ಜನಕೋವಿಡ್ ಸೋಂಕಿನಿಂದ ಮುಕ್ತರಾಗಿದ್ದಾರೆ ಎಂದು ಶುಕ್ರವಾರ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಕೋವಿಡ್ ವರದಿಯಲ್ಲಿ ತಿಳಿಸಿದೆ. ಆರೋಗ್ಯ ಮತ್ತು ಕುಟುಂಬ ಇಲಾಖೆ ಈ ವರದಿಯನ್ನು ನೀಡಿದ್ದು,ಶುಕ್ರವಾರದ ಅಂಕಿ ಅಂಶದ ಪ್ರಕಾರ, ರಾಜ್ಯದಲ್ಲಿ ಈವರೆಗೆ ಒಟ್ಟು ೧೫,೧೦,೫೫೭ ಮಂದಿ ಕೋವಿಡ್ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕರ್ನಾಟಕದಲ್ಲಿ ಇಂದು ೪೧,೭೭೯ ಹೊಸ ಪ್ರಕರಣ ವರದಿಯಾಗಿದ್ದು, ರಾಜ್ಯದಲ್ಲಿ ೫,೯೮,೬೦೫ ಸಕ್ರಿಯ ಪ್ರಕರಣಗಳಿವೆ. ಅಲ್ಲದೆ, ಶುಕ್ರವಾರ ಒಟ್ಟು ೩೭೩ ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್-೧೯: ದೇಶದಾದ್ಯಂತ…

error: Content is protected !!