Browsing: ಜಿಲ್ಲೆ

ಜಿಲ್ಲೆ

ಕಂಪನಿಗಳಿಗೆ ಸಾಮಾಜಿಕ ಒಳಗೊಳ್ಳುವಿಕೆ ದೃಷ್ಟಿಕೋನ ಮುಖ್ಯ: ಅಶ್ವತ್ಥನಾರಾಯಣ

ಬೆಂಗಳೂರು,ಡಿ,10:  ಕೇವಲ ವಾಣಿಜ್ಯ ಲಾಭದ ದೃಷ್ಟಿಯಿಂದ ಕಂಪನಿಗಳನ್ನು ನಡೆಸುವುದರ ಬದಲು ಸಮಾಜದ ಪ್ರತಿಯೊಬ್ಬರನ್ನೂ ಒಳಗೊಳ್ಳುವಂತಹ ದೃಷ್ಟಿಕೋನವು ಉದ್ಯಮಗಳಲ್ಲಿ ಬೇರೂರಬೇಕಾಗಿದೆ. ಇದರಿಂದ ಮಾತ್ರ ಸಮಾಜವು ಪ್ರಗತಿ ಸಾಧಿಸಬಲ್ಲದು ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತಿಪಾದಿಸಿದ್ದಾರೆ. ನಗರದ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ನಡೆದ 12ನೇ ಸಿಎಸ್ಆರ್ ನಾಯಕತ್ವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿರುವ ಯೂನಿಕಾರ್ನ್ ಕಂಪನಿಗಳಲ್ಲಿ ಶೇ.60ರಷ್ಟು ರಾಜ್ಯದಲ್ಲೇ ಇದ್ದು, ಇವು ಈಗ ಸಾಮಾಜಿಕ ವಲಯಗಳತ್ತಲೂ ಗಮನ ಹರಿಸುತ್ತಿರುವುದು ಸ್ವಾಗತಾರ್ಹ…

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಕುರಿತು ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ : ಸಿಎಂ

ನವದೆಹಲಿ, ಡಿ,೨ :ಇದೇ ೬ ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ , ಆರೋಗ್ಯ , ಕಾನೂನು ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ೨ ನೇ ನ್ಯಾಯಾಧಿಕರಣದ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ…

ಕನ್ನಡ ಕಲಿತು ಕನ್ನಡಿಗರಾಗಿ:ಡಾ. ಆರೂಢಭಾರತೀ ಶ್ರೀ

ಬೆಂಗಳೂರು,ನ,29:ಕನ್ನಡಿಗರ ಕಲೆ ಸಂಸ್ಕೃತಿ ಇತಿಹಾಸ ಅಡಗಿರುವುದು ಕನ್ನಡ ಸಾಹಿತ್ಯದಲ್ಲಿ. ಕನ್ನಡ ಭಾಷೆಯನ್ನು ಸರಿಯಾಗಿ ಕಲಿಯದಿದ್ದರೆ ಕನ್ನಡ ಸಾಹಿತ್ಯವನ್ನು ತಿಳಿಯಲಾಗದು. ಕನ್ನಡ ನಾಡಿನಲ್ಲಿ ಹುಟ್ಟಿದವರು ಮಾತ್ರವಲ್ಲ, ಕನ್ನಡ ನೆಲಕ್ಕೆ ಬಂದ ವಲಸಿಗರೆಲ್ಲರೂ ಕನ್ನಡ ಭಾಷೆಯನ್ನು ಕಲಿತು ಕನ್ನಡಿಗರೆನಿಸಬೇಕು ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಶ್ರೀ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಕೆಂಗೇರಿಯ ಗಾಂಧಿ ನಗರದಲ್ಲಿ ರಾಮಸೇನೆ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‌ಕುಮಾರ್ ಮತ್ತು ರಾಮಸೇನಾ ಕಾರ್ಯಕರ್ತ ದಿ. ಜಗದೀಶ್…

ಬಂಡವಾಳ ಆಕರ್ಷಿಸಲು ಬೆಂಗಳೂರಿನಲ್ಲಿ ಮೊರಾಕ್ಕೊ ರೋಡ್-ಶೋ

ಬೆಂಗಳೂರು,ನ,25: ಕರ್ನಾಟಕ ಮತ್ತು ಮೊರಾಕ್ಕೊ ನಡುವೆ ಎರಡೂ ಕಡೆಗಳಿಂದ ನೇರ ವಿಮಾನ ಸಂಪರ್ಕವನ್ನು ಆರಂಭಿಸಿದರೆ ದ್ವಿಪಕ್ಷೀಯ ವಾಣಿಜ್ಯ ವಹಿವಾಟು ವೃದ್ಧಿಯಾಗುವ ಸದವಕಾಶವಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಮೊರಾಕ್ಕೊದ ಹೂಡಿಕೆ ಮತ್ತು ರಫ್ತು ಅಭಿವೃದ್ಧಿ ಸಂಸ್ಥೆಯು ಬಂಡವಾಳ ಆಕರ್ಷಿಸಲು `ಮೊರಾಕ್ಕೊ ನೌ’ ಉಪಕ್ರಮದಡಿ ನಗರದ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೋಡ್ ಶೋ ಸಭೆಯಲ್ಲಿ ಸಚಿವರು ಮಾತನಾಡಿದರು. `ಬೆಂಗಳೂರು ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ಮಟ್ಟದ ನಗರವಾಗಿದ್ದು, ಅತ್ಯುತ್ತಮ…

ಉನ್ನತ ಶಿಕ್ಷಣಕ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ

ಬೆಂಗಳೂರು,ನ,25: ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಕುರಿತು ಉಚಿತವಾಗಿ ಮಾರ್ಗದರ್ಶನ ಹಾಗೂ ಉನ್ನತ ಮಟ್ಟದ ಕಾಲೇಜುಗಳಿಗೆ ದಾಖಲಾತಿಗೆ ಕೌನ್ಸಲಿಂಗ್ ನೀಡಲು ಅಮೆರಿಕಾ ಮೂಲದ ನೆಸ್ಟ್‌ಲಿಂಗ್ ಸಂಸ್ಥೆ ತನ್ನ ಮೊದಲ ಕೌನ್ಸಿಲಿಂಗ್ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಿದೆ.ಇದಲ್ಲದೆ ಈ ಕೇಂದ್ರಲ್ಲಿ ಕೌನ್ಸಲಿಂಗ್ ಪಡೆದು ವಿದೇಶಕ್ಕೆಉನ್ನತ ಶಿಕ್ಷಣಕ್ಕೆ ಕೌನ್ಸಲಿಂಗ್ ಪಡೆಯುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ* ಓದಲು ತೆರಳುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ಸ್ಕಾಲರ್‌ಶಿಪ್‌ ನೀಡುವುದಾಗಿಯೂ ಘೋಷಿಸಿದೆ. ಉನ್ನತ ಶಿಕ್ಷಣ ಸಚಿವ…

ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ

ಬೆಂಗಳೂರು, ನ, 25: ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಲಾಖೆಗಳ ಮುಖ್ಯಸ್ಥರ ಗಮನಕ್ಕೆ ತಂದು, ವಿಚಾರಣೆ ನಡೆಸಿ,ಯಾವುದೇ ತಪ್ಪು ಕಂಡುಬಂದಲ್ಲಿ , ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ನನ್ನ ಸರ್ಕಾರ ಬಂದ ಮೇಲೆ ಯಾವುದೇ ಟೆಂಡರ್ ಅಂತಿಮವಾಗಿದ್ದರೆ ಅದನ್ನು ವಿಶೇಷವಾಗಿ ಪರಿಶೀಲನೆ…

ಸಾಹಿತಿ ದೇವು ಪತ್ತಾರ್ ಗೆ ವಿ.ಕೃ. ಗೋಕಾಕ್ ಫೇಲೋಶಿಫ್ ಪ್ರಶಸ್ತಿ

ಬೆಂಗಳೂರು,ನ,15:ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಕೊಡಮಾಡುವ ವಿ. ಕೃ. ಗೋಕಾಕ್ ಫೇಲೋಶಿಫ್ ಗೆ 2021ನೆಯ ಸಾಲಿನಲ್ಲಿ ’ಬುಕ್ ಬ್ರಹ್ಮ’ ಪ್ರಧಾನ ಸಂಪಾದಕ, ಸಾಹಿತಿ ದೇವು ಪತ್ತಾರ ಹಾಗೂ ಪತ್ರಕರ್ತೆ, ಲೇಖಕಿ ವಿದ್ಯಾರಶ್ಮಿ ಆಯ್ಕೆಯಾಗಿದ್ದಾರೆ. ‘ಗೋಕಾಕರ ಮುನ್ನುಡಿಗಳ ಅಧ್ಯಯನಕ್ಕಾಗಿ ದೇವು ಪತ್ತಾರ ಮತ್ತು ‘ಗೋಕಾಕರನ್ನು ಕುರಿತ ಕವಿತೆಗಳ ಅಧ್ಯಯನಕ್ಕಾಗಿ ವಿದ್ಯಾರಶ್ಮಿ ಪೆಲತ್ತಡ್ಕ ಅವರಿಗೆ ಗೋಕಾಕ್ ವಾಙ್ಮಯ ಟ್ರಸ್ಟ್ ನೀಡುವ ಪ್ರತಿಷ್ಠಿತ ವಿ. ಕೃ. ಗೋಕಾಕ್ ಫೆಲೋಶಿಫ್‌ನ್ನು ನೀಡಲಾಗಿದೆ. ಪ್ರಶಸ್ತಿಯು 10,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಟ್ರಸ್ಟ್‌ನ…

ಅಲ್ಲಮ ಕಾವ್ಯ ಪ್ರಶಸ್ತಿ’ಗೆ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ.

ಬೆಂಗಳೂರು,ನ,೦೯: ಅಲ್ಲಮ ಪ್ರಕಾಶನದಿಂದ ಅಲ್ಲಮ ಕಾವ್ಯ ಪ್ರಶಸ್ತಿಗಾಗಿ ನಲವತ್ತೈದು ವರ್ಷದೊಳಗಿನ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ನಿಮಗಳ ಅನುಸಾರ ಕವಿತೆಗಳನ್ನು ಕಳುಹಿಸಬಹುದು. ಹಸ್ತಪ್ರತಿ ಕಳಿಸಲು ನಿಯಮಗಳು ಈ ಕೆಳಗಿನಂತಿವೆ. ೧. ಮೂವತ್ತಕ್ಕಿಂತಲೂ ಹೆಚ್ಚಿನ ಸ್ವರಚಿತ ಕನ್ನಡ ಕವಿತೆಗಳನ್ನು ಹಸ್ತಪ್ರತಿಯು ಒಳಗೊಂಡಿರಬೇಕು. ೨. ಅನುವಾದಿತ, ಹನಿಗವನ ಮತ್ತು ಚುಟುಕು ಕವಿತೆಗಳ ಹಸ್ತಪ್ರತಿಗಳು ಬೇಡ. ೩. ಪ್ರವೇಶವನ್ನು ಕಳಿಸುವ ಯುವಕವಿಗಳು ನಲವತ್ತೈದು ವರ್ಷದೊಳಗಿನವರಾಗಿರಬೇಕು. ೪ ಈ ಪ್ರಶಸ್ತಿಯು ೫,೦೦೦ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ೫.…

ಬೆಂಗಳೂರಿನಲ್ಲಿ ಆಟೋದರ ಏರಿಕೆ

ಬೆಂಗಳೂರು,ನ,08: ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳವಾಗಿದ್ದು, ಕನಿಷ್ಠ ದರ 25 ರೂಪಾಯಿಂದ 30 ರೂ.ಗೆ ಏರಿಕೆಯಾಗಿದೆ. ನಂತರ ಪ್ರತಿ ಕಿಲೋಮೀಟರ್​ಗೆ 15 ರೂ.ಗೆ ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಕಿಲೋಮೀಟರ್​ಗೆ 13 ರುಪಾಯಿ ಇತ್ತು. ಇದನ್ನು 15 ರುಪಾಯಿಗೆ ಏರಿಕೆ ಮಾಡಲಾಗಿದೆ. ಡಿಸೆಂಬರ್ 1 ರಿಂದಲೇ ಹೊಸ ದರ ಅನ್ವಯವಾಗುತ್ತದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ತಿಳಿಸಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ 5 ರೂಪಾಯಿ ಬಾಡಿಗೆ ಹಣ ನಿಗದಿಪಡಿಸಲಾಗಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ…

ಕರ್ನಾಟಕದಲ್ಲಿ ಪ್ರತಿಯೊಬ್ಬರು ಕನ್ನಡಲ್ಲೇ ವ್ಯವಹರಿಸಬೇಕು-ಬಿ.ಸಿ.ನಾಗೇಶ್

ಬೆಂಗಳೂರು, ನ. ೦೧: ಪ್ರತಿಯೊಬ್ಬರು ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲಿಯೇ ಮಾತನಾಡಬೇಕು. ಕನ್ನಡದಲ್ಲಿಯೇ ಬರೆಯಬೇಕು. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುವುದು ಹಾಗೂ ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವ ಮೂಲಕ ನಮ್ಮ ನಾಡು-ನುಡಿ, ಸಂಸ್ಕತಿ ಉಳಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಭಿಪ್ರಾಯಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೬೬ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ…

ಭಾಷೆ ಸದೃವಾದರೆ ರಾಜ್ಯ ಶಕ್ತಿಶಾಲಿ-ಸಿಎಂ ಬೊಮ್ಮಾಯಿ

ಬೆಂಗಳೂರು,ನ೦೧: ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ ಮತ್ತು ಕನ್ನಡ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿರುವ ಅವರು, ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ…

ಪೇಜಾವರರ ಹೇಳಿಕೆ ಹಾಸ್ಯಾಸ್ಪದ :ಡಾ. ಆರೂಢಭಾರತೀ ಸ್ವಾಮೀಜಿ.

ಬೆಂಗಳೂರು,ಅ,26:ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಸರ್ಕಾರವು ಬ್ರಾಹ್ಮಣೇತರರನ್ನು ಅರ್ಚಕರನ್ನಾಗಿ ನೇಮಿಸುತ್ತಿದ್ದು, ಅರ್ಚಕವೃತ್ತಿಯನ್ನು ಬ್ರಾಹ್ಮಣರಿಂದ ಕಿತ್ತುಕೊಳ್ಳುವ ಪ್ರಯತ್ನವಾಗಿದ್ದು, ಸರ್ಕಾರವು ಅರ್ಚಕ ಉದ್ಯೋಗವನ್ನು ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಮೀಸಲಿಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಭಾನುವಾರ ಮೈಸೂರಿನ ವಿಪ್ರ ಸಮ್ಮೇಳನದಲ್ಲಿ ಹೇಳಿರುವುದಾಗಿ ವರದಿಯಾಗಿದ್ದು ಅವರ ಈ ಹೇಳಿಕೆ ಹಾಸ್ಯಾಸ್ಪದ ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಖಂಡಿಸಿದ್ದಾರೆ. ಇದು ಶ್ರೇಣೀಕೃತ ವರ್ಣ ವ್ಯವಸ್ಥೆಯನ್ನು ವಿಸ್ತರಿಸುವ, ಪುರೋಹಿತಶಾಹಿತನವನ್ನು ಪುನಃ ಪ್ರತಿಷ್ಠಾಪಿಸುವ ಹುನ್ನಾರ. ಈ ಮೂಲಕ ವೇದಾಧ್ಯಯನವನ್ನು…

ಚಿತ್ರಕಲಾ ಪರಿಷತ್ತಿನಲ್ಲಿ ದೀಪಾವಳಿ ದೀಪಗಳ ಉತ್ಸವ – ಬೆಂಗಳೂರು ಉತ್ಸವಕ್ಕೆ ಚಾಲನೆ

ಬೆಂಗಳೂರು ಅ, 22: ದೇಶದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಆಚರಿಸಲ್ಪಡುವ ದೀಪಾವಳಿ ಹಬ್ಬಕ್ಕೆ ಭಾರತೀಯರ ಜೀವನದಲ್ಲಿ ಬಹಳ ಮಹತ್ವವಾದ ಸ್ಥಾನವಿದೆ. ಅದರಲ್ಲೂ ಅಂಧಕಾರವನ್ನು ಹೋಗಲಾಡಿಸುವ ದೀಪಗಳಿಗೆ ಅವುಗಳದೇ ಆದ ವೈಶಿಷ್ಟ್ಯತೆ ಇದೆ. ದೇಶದ ವಿವಿಧ ಭಾಗಗಳಲ್ಲಿ ತಯಾರಿಸಲಾಗುವ ದೀಪಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ದೊರಕುವಂತೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ದೀಪಗಳ ಉತ್ಸವ – ಬೆಂಗಳೂರು ಉತ್ಸವಕ್ಕೆ ನಟಿಯರಾದ ದೀನಶ್ರೀ ಹಾಗೂ ಪೂರ್ಣಿಮಾ ಪ್ರಭಾಕರ್‌ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ…

ಆಲಮಟ್ಟಿ ಡ್ಯಾಂ ಅಂತರಜಲಾಶಯದ ನೀರು ಮರುಹಂಚಿಕೆಗೆ ಒತ್ತಾಯ

ಆಲಮಟ್ಟಿ,ಅ,18: ಕೃಷ್ಣಾಮೇಲ್ದಂಡೆ ಯೋಜನೆ ವ್ಯಾಪ್ತಿಯ ಆಲಮಟ್ಟಿ ಜಲಾಶಯವನ್ನು ಎತ್ತರಿಸುವದು, ಅಂತರಜಲಾಶಯದ ನೀರನ್ನು ಮರುಹಂಚಿಕೆ ಹಾಗೂ ಜನ-ಜಾನುವಾರುಗಳಿಗಾಗಿ ಕಾಲುವೆಗಳ ಮೂಲಕ ನೀರು ಹರಿಸಲು ಒತ್ತಾಯಿಸಿ ಅಖಂಡ ಕರ್ನಾಟಕ ರೈತಸಂಘದವತಿಯಿಂದ ಮುಖ್ಯ ಅಭಿಯಂತರರಿಗೆ ಎರಡು ಪ್ರತ್ಯೇಕ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನಕಾರ್ಯದರ್ಶಿ ಅರವಿಂದ ಕುಲಕರ್ಣಿ, ಬರಗಾಲ ಪೀಡಿತ ಜಿಲ್ಲೆಯ ನೀರಾವರಿಗಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಜಲಾಶಯ ನಿರ್ಮಿಸಿದ್ದರೂ ಜಿಲ್ಲೆಯ ಭೂಮಿಗೆ ನೀರುಣಿಸಲು ಸ್ಕೀಂ.ಗಳ ಹೆಸರಿನಲ್ಲಿ ವಂಚನೆ ಮಾಡಲಾಗುತ್ತದೆ. ಅವಳಿ ಜಲಾಶಯ ನಿರ್ಮಾಣಕ್ಕಾಗಿ ಅಖಂಡ ವಿಜಯಪುರ ಜಿಲ್ಲೆಯ…

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ : ಸಿಎಂ

ಬೆಂಗಳೂರು, ಅ, 18:ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ವಿಶೇಷ ಸಭೆ ಕರೆದು ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಳೆಯಿಂದ ಹಾನಿಗೊಳಗಾದ ಎಚ್.ಎಸ್.ಆರ್ ಬಡಾವಣೆ, ಮಡಿವಾಳ, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೆರೆಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು ಅಗರ ಪಕ್ಕದಲ್ಲಿರುವ ಬಡಾವಣೆಗಳಿಗೆ ನೀರು ಮನೆಗಳಿಗೆ ನುಗ್ಗಿ ಅನಾಹುತಗಳಾಗಿವೆ. 15-20 ಕೆರೆಗಳ…

ಕೌಶಲ್ಯ ಅಭಿವೃದ್ಧಿಗೆ ಹೂಡಿಕೆ ಮಾಡಿ: ಉದ್ಯಮಿಗಳಿಗೆ ಸಚಿವ ಎಂಟಿಬಿ ನಾಗರಾಜ್ ಕರೆ

ಬೆಂಗಳೂರು,ಅ,18: ಕೌಶಲ್ಯ ಅಭಿವೃದ್ಧಿ ಗಾಗಿ ಹೂಡಿಕೆ ಮಾಡುವುದು ಉದ್ಯಮಗಳಿಗೆ ಎಷ್ಟು ಲಾಭದಾಯಕವೋ ಹಾಗೆಯೇ ಅದು ಉದ್ಯೋಗಿಗಳಿಗೂ ಪ್ರಯೋಜನಕಾರಿ.ಹಾಗಾಗಿ,ಉದ್ಯಮಿಗಳು ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಹೆಚ್ಚು ಹೂಡಿಕೆಗೆ ಆದ್ಯತೆ ನೀಡಬೇಕು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಕರೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದಾಬಸ್ ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ-ಎಫ್ ಕೆಸಿಸಿಐ ನಿರ್ಮಿಸಲು ಉದ್ದೇಶಿಸಿರುವ ‘ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಸ್ಕಿಲ್ ಡೆವಲಪ್‌ಮೆಂಟ್’…

ಎಫ್.ಆರ್.ಎಲ್. ಉಪವಿಭಾಗ-೨ನ್ನು ಸ್ಥಳಾಂತರಗೊಳಿಸುವ ಆದೇಶ ರದ್ದತಿಗೆ ಒತ್ತಾಯ

ಆಲಮಟ್ಟಿ,ಅ,:13: ಇಲ್ಲಿನ ಕೃಷ್ಣಾಮೇಲ್ದಂಡೆ ಯೋಜನೆ ವ್ಯಾಪ್ತಿಯ ಎಫ್.ಆರ್.ಎಲ್. ಉಪವಿಭಾಗ-೨ನ್ನು ಬೀಳಗಿಗೆ ಸ್ಥಳಾಂತರಗೊಳಿಸುವ ಆದೇಶವನ್ನು ರದ್ದುಗೊಳಿಸಿ ಇಲ್ಲಿಯೇ ಮುಂದುವರೆಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ಮತ್ತು ಕರ್ನಾಟಕ ರಕ್ಷಣಾವೇದಿಕೆ ಘಟಕದವತಿಯಿಂದ ಬುಧವಾರ ಪ್ರತ್ಯೇಕವಾಗಿ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು. ಬುಧವಾರ ಇಲ್ಲಿನ ಕೆಬಿಜೆನ್ನೆಲ್ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ತಿರುಪತಿ ಬಂಡಿ ಅವರು ಕೃ.ಮೇ.ಯೋಜನೆ ವ್ಯಾಪ್ತಿಯ ಆಲಮಟ್ಟಿ…

ಸ್ವಚ್ಚ,ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ಶ್ರೀರಾಮುಲು ಕರೆ

ಚಿತ್ರದುರ್ಗ. ಅ. 11: ಮೊಳಕಾಲ್ಮೂರಿನಲ್ಲಿಂದು ಕಸಸಂಗ್ರಹಣಾ ವಾಹನಗಳಿಗೆ ಸ್ವಯಂ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ  ಬಿ. ಶ್ರೀರಾಮುಲು, ಸಾರ್ವಜನಿಕರು ಸ್ಚಚ್ಚತೆಯನ್ನು ಮೈಗೂಡಿಸಿಕೊಂಡು ಸ್ವಚ್ಚ, ಸುಂದರ ಹಾಗೂ ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿ, ಜಾಗೃತಿ ಮೂಡಿಸಿದರು. ಮೊಳಕಾಲ್ಮೂರಿನಲ್ಲಿಂದು ಪಟ್ಟಣ ಪಂಚಾಯಿತಿ ಯು ಆಯೋಜಿಸಿದ್ದ ಕಸಸಂಗ್ರಹಣಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಚಚ್ಚ ಭಾರತ ಸ್ವಾಥ್ಯ ಭಾರತವಾಗಿದೆ. ಮಹಾತ್ಮ ಗಾಂಧಿಜಿಯವರ ಆಶಯವೂ ಇದಾಗಿತ್ತು.…

ರಾಜ್ಯವನ್ನು ಆರೋಗ್ಯ ಕರ್ನಾಟಕವನ್ನಾಗಿಸಲು ಸಂಕಲ್ಪ :ಸಿಎಂ ಬೊಮ್ಮಾಯಿ*

ಬೆಂಗಳೂರು, ಅ, 10 : ರಾಜ್ಯವನ್ನು ಆರೋಗ್ಯ ಕರ್ನಾಟಕವನ್ನಾಗಿಸಲು ಸಂಕಲ್ಪ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ತಿಳಿಸಿದರು. ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಅಂಡ್ ಆರ್ಗನ್ ಟ್ರಾನ್ಸ್ ಪ್ಲಾಂಟ್ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸುಖ್ ಎಲ್ ಮಂಡವೀಯ ಅವರೊಂದಿಗೆ ಭಾಗವಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು. ಬೆಂಗಳೂರು ನಗರ ಸೇರಿದಂತೆ ಇಡೀ ಕರ್ನಾಟಕದ ಮೂಲೆ…

ಕಲಿತ ಶಾಲೆಯನ್ನು ಗೌರವಿಸಿದರೆ ಬದುಕಲ್ಲಿಯಶಸ್ಸು ಸಾಧ್ಯ

ಆಲಮಟ್ಟಿ,ಅ,08;ವಿದ್ಯಾರ್ಥಿಗಳು ತಂದೆ, ತಾಯಿ, ಕಲಿಸಿದ ಗುರು ಹಾಗೂ ಕಲಿತ ಸಂಸ್ಥೆಯನ್ನು ಮರೆಯದೇ ಗೌರವಿಸುವ ವಿದ್ಯಾರ್ಥಿ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳಿದರು. ಶುಕ್ರವಾರ, ಸ್ಥಳೀಯ ಮಂಜಪ್ಪ ಹರ್ಡೇಕರ ಸ್ಮಾರಕ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬದುಕಿನ ಓದಿನ,ಬುನಾದಿ ಪ್ರೌಢ ಹಂತ, ಈ ಹಂತದಲ್ಲಿ ಜವಾಬ್ದಾರಿಯುತ ಓದಿನ ಜತೆ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು, ಹುಡುಗಾಟದ ಜತೆಗೂ ಗಂಭೀರ…

1 5 6 7 8 9 15
error: Content is protected !!