Browsing: ಜಿಲ್ಲೆ

ಜಿಲ್ಲೆ

ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ

ಬೆಂಗಳೂರು, ನ, 25: ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಲಾಖೆಗಳ ಮುಖ್ಯಸ್ಥರ ಗಮನಕ್ಕೆ ತಂದು, ವಿಚಾರಣೆ ನಡೆಸಿ,ಯಾವುದೇ ತಪ್ಪು ಕಂಡುಬಂದಲ್ಲಿ , ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ನನ್ನ ಸರ್ಕಾರ ಬಂದ ಮೇಲೆ ಯಾವುದೇ ಟೆಂಡರ್ ಅಂತಿಮವಾಗಿದ್ದರೆ ಅದನ್ನು ವಿಶೇಷವಾಗಿ ಪರಿಶೀಲನೆ…

ಸಾಹಿತಿ ದೇವು ಪತ್ತಾರ್ ಗೆ ವಿ.ಕೃ. ಗೋಕಾಕ್ ಫೇಲೋಶಿಫ್ ಪ್ರಶಸ್ತಿ

ಬೆಂಗಳೂರು,ನ,15:ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಕೊಡಮಾಡುವ ವಿ. ಕೃ. ಗೋಕಾಕ್ ಫೇಲೋಶಿಫ್ ಗೆ 2021ನೆಯ ಸಾಲಿನಲ್ಲಿ ’ಬುಕ್ ಬ್ರಹ್ಮ’ ಪ್ರಧಾನ ಸಂಪಾದಕ, ಸಾಹಿತಿ ದೇವು ಪತ್ತಾರ ಹಾಗೂ ಪತ್ರಕರ್ತೆ, ಲೇಖಕಿ ವಿದ್ಯಾರಶ್ಮಿ ಆಯ್ಕೆಯಾಗಿದ್ದಾರೆ. ‘ಗೋಕಾಕರ ಮುನ್ನುಡಿಗಳ ಅಧ್ಯಯನಕ್ಕಾಗಿ ದೇವು ಪತ್ತಾರ ಮತ್ತು ‘ಗೋಕಾಕರನ್ನು ಕುರಿತ ಕವಿತೆಗಳ ಅಧ್ಯಯನಕ್ಕಾಗಿ ವಿದ್ಯಾರಶ್ಮಿ ಪೆಲತ್ತಡ್ಕ ಅವರಿಗೆ ಗೋಕಾಕ್ ವಾಙ್ಮಯ ಟ್ರಸ್ಟ್ ನೀಡುವ ಪ್ರತಿಷ್ಠಿತ ವಿ. ಕೃ. ಗೋಕಾಕ್ ಫೆಲೋಶಿಫ್‌ನ್ನು ನೀಡಲಾಗಿದೆ. ಪ್ರಶಸ್ತಿಯು 10,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಟ್ರಸ್ಟ್‌ನ…

ಅಲ್ಲಮ ಕಾವ್ಯ ಪ್ರಶಸ್ತಿ’ಗೆ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ.

ಬೆಂಗಳೂರು,ನ,೦೯: ಅಲ್ಲಮ ಪ್ರಕಾಶನದಿಂದ ಅಲ್ಲಮ ಕಾವ್ಯ ಪ್ರಶಸ್ತಿಗಾಗಿ ನಲವತ್ತೈದು ವರ್ಷದೊಳಗಿನ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ನಿಮಗಳ ಅನುಸಾರ ಕವಿತೆಗಳನ್ನು ಕಳುಹಿಸಬಹುದು. ಹಸ್ತಪ್ರತಿ ಕಳಿಸಲು ನಿಯಮಗಳು ಈ ಕೆಳಗಿನಂತಿವೆ. ೧. ಮೂವತ್ತಕ್ಕಿಂತಲೂ ಹೆಚ್ಚಿನ ಸ್ವರಚಿತ ಕನ್ನಡ ಕವಿತೆಗಳನ್ನು ಹಸ್ತಪ್ರತಿಯು ಒಳಗೊಂಡಿರಬೇಕು. ೨. ಅನುವಾದಿತ, ಹನಿಗವನ ಮತ್ತು ಚುಟುಕು ಕವಿತೆಗಳ ಹಸ್ತಪ್ರತಿಗಳು ಬೇಡ. ೩. ಪ್ರವೇಶವನ್ನು ಕಳಿಸುವ ಯುವಕವಿಗಳು ನಲವತ್ತೈದು ವರ್ಷದೊಳಗಿನವರಾಗಿರಬೇಕು. ೪ ಈ ಪ್ರಶಸ್ತಿಯು ೫,೦೦೦ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ೫.…

ಬೆಂಗಳೂರಿನಲ್ಲಿ ಆಟೋದರ ಏರಿಕೆ

ಬೆಂಗಳೂರು,ನ,08: ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳವಾಗಿದ್ದು, ಕನಿಷ್ಠ ದರ 25 ರೂಪಾಯಿಂದ 30 ರೂ.ಗೆ ಏರಿಕೆಯಾಗಿದೆ. ನಂತರ ಪ್ರತಿ ಕಿಲೋಮೀಟರ್​ಗೆ 15 ರೂ.ಗೆ ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಕಿಲೋಮೀಟರ್​ಗೆ 13 ರುಪಾಯಿ ಇತ್ತು. ಇದನ್ನು 15 ರುಪಾಯಿಗೆ ಏರಿಕೆ ಮಾಡಲಾಗಿದೆ. ಡಿಸೆಂಬರ್ 1 ರಿಂದಲೇ ಹೊಸ ದರ ಅನ್ವಯವಾಗುತ್ತದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ತಿಳಿಸಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ 5 ರೂಪಾಯಿ ಬಾಡಿಗೆ ಹಣ ನಿಗದಿಪಡಿಸಲಾಗಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ…

ಕರ್ನಾಟಕದಲ್ಲಿ ಪ್ರತಿಯೊಬ್ಬರು ಕನ್ನಡಲ್ಲೇ ವ್ಯವಹರಿಸಬೇಕು-ಬಿ.ಸಿ.ನಾಗೇಶ್

ಬೆಂಗಳೂರು, ನ. ೦೧: ಪ್ರತಿಯೊಬ್ಬರು ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲಿಯೇ ಮಾತನಾಡಬೇಕು. ಕನ್ನಡದಲ್ಲಿಯೇ ಬರೆಯಬೇಕು. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುವುದು ಹಾಗೂ ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವ ಮೂಲಕ ನಮ್ಮ ನಾಡು-ನುಡಿ, ಸಂಸ್ಕತಿ ಉಳಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಭಿಪ್ರಾಯಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೬೬ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ…

ಭಾಷೆ ಸದೃವಾದರೆ ರಾಜ್ಯ ಶಕ್ತಿಶಾಲಿ-ಸಿಎಂ ಬೊಮ್ಮಾಯಿ

ಬೆಂಗಳೂರು,ನ೦೧: ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ ಮತ್ತು ಕನ್ನಡ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿರುವ ಅವರು, ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ…

ಪೇಜಾವರರ ಹೇಳಿಕೆ ಹಾಸ್ಯಾಸ್ಪದ :ಡಾ. ಆರೂಢಭಾರತೀ ಸ್ವಾಮೀಜಿ.

ಬೆಂಗಳೂರು,ಅ,26:ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಸರ್ಕಾರವು ಬ್ರಾಹ್ಮಣೇತರರನ್ನು ಅರ್ಚಕರನ್ನಾಗಿ ನೇಮಿಸುತ್ತಿದ್ದು, ಅರ್ಚಕವೃತ್ತಿಯನ್ನು ಬ್ರಾಹ್ಮಣರಿಂದ ಕಿತ್ತುಕೊಳ್ಳುವ ಪ್ರಯತ್ನವಾಗಿದ್ದು, ಸರ್ಕಾರವು ಅರ್ಚಕ ಉದ್ಯೋಗವನ್ನು ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಮೀಸಲಿಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಭಾನುವಾರ ಮೈಸೂರಿನ ವಿಪ್ರ ಸಮ್ಮೇಳನದಲ್ಲಿ ಹೇಳಿರುವುದಾಗಿ ವರದಿಯಾಗಿದ್ದು ಅವರ ಈ ಹೇಳಿಕೆ ಹಾಸ್ಯಾಸ್ಪದ ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಖಂಡಿಸಿದ್ದಾರೆ. ಇದು ಶ್ರೇಣೀಕೃತ ವರ್ಣ ವ್ಯವಸ್ಥೆಯನ್ನು ವಿಸ್ತರಿಸುವ, ಪುರೋಹಿತಶಾಹಿತನವನ್ನು ಪುನಃ ಪ್ರತಿಷ್ಠಾಪಿಸುವ ಹುನ್ನಾರ. ಈ ಮೂಲಕ ವೇದಾಧ್ಯಯನವನ್ನು…

ಚಿತ್ರಕಲಾ ಪರಿಷತ್ತಿನಲ್ಲಿ ದೀಪಾವಳಿ ದೀಪಗಳ ಉತ್ಸವ – ಬೆಂಗಳೂರು ಉತ್ಸವಕ್ಕೆ ಚಾಲನೆ

ಬೆಂಗಳೂರು ಅ, 22: ದೇಶದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಆಚರಿಸಲ್ಪಡುವ ದೀಪಾವಳಿ ಹಬ್ಬಕ್ಕೆ ಭಾರತೀಯರ ಜೀವನದಲ್ಲಿ ಬಹಳ ಮಹತ್ವವಾದ ಸ್ಥಾನವಿದೆ. ಅದರಲ್ಲೂ ಅಂಧಕಾರವನ್ನು ಹೋಗಲಾಡಿಸುವ ದೀಪಗಳಿಗೆ ಅವುಗಳದೇ ಆದ ವೈಶಿಷ್ಟ್ಯತೆ ಇದೆ. ದೇಶದ ವಿವಿಧ ಭಾಗಗಳಲ್ಲಿ ತಯಾರಿಸಲಾಗುವ ದೀಪಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ದೊರಕುವಂತೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ದೀಪಗಳ ಉತ್ಸವ – ಬೆಂಗಳೂರು ಉತ್ಸವಕ್ಕೆ ನಟಿಯರಾದ ದೀನಶ್ರೀ ಹಾಗೂ ಪೂರ್ಣಿಮಾ ಪ್ರಭಾಕರ್‌ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ…

ಆಲಮಟ್ಟಿ ಡ್ಯಾಂ ಅಂತರಜಲಾಶಯದ ನೀರು ಮರುಹಂಚಿಕೆಗೆ ಒತ್ತಾಯ

ಆಲಮಟ್ಟಿ,ಅ,18: ಕೃಷ್ಣಾಮೇಲ್ದಂಡೆ ಯೋಜನೆ ವ್ಯಾಪ್ತಿಯ ಆಲಮಟ್ಟಿ ಜಲಾಶಯವನ್ನು ಎತ್ತರಿಸುವದು, ಅಂತರಜಲಾಶಯದ ನೀರನ್ನು ಮರುಹಂಚಿಕೆ ಹಾಗೂ ಜನ-ಜಾನುವಾರುಗಳಿಗಾಗಿ ಕಾಲುವೆಗಳ ಮೂಲಕ ನೀರು ಹರಿಸಲು ಒತ್ತಾಯಿಸಿ ಅಖಂಡ ಕರ್ನಾಟಕ ರೈತಸಂಘದವತಿಯಿಂದ ಮುಖ್ಯ ಅಭಿಯಂತರರಿಗೆ ಎರಡು ಪ್ರತ್ಯೇಕ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನಕಾರ್ಯದರ್ಶಿ ಅರವಿಂದ ಕುಲಕರ್ಣಿ, ಬರಗಾಲ ಪೀಡಿತ ಜಿಲ್ಲೆಯ ನೀರಾವರಿಗಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಜಲಾಶಯ ನಿರ್ಮಿಸಿದ್ದರೂ ಜಿಲ್ಲೆಯ ಭೂಮಿಗೆ ನೀರುಣಿಸಲು ಸ್ಕೀಂ.ಗಳ ಹೆಸರಿನಲ್ಲಿ ವಂಚನೆ ಮಾಡಲಾಗುತ್ತದೆ. ಅವಳಿ ಜಲಾಶಯ ನಿರ್ಮಾಣಕ್ಕಾಗಿ ಅಖಂಡ ವಿಜಯಪುರ ಜಿಲ್ಲೆಯ…

ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ : ಸಿಎಂ

ಬೆಂಗಳೂರು, ಅ, 18:ಬೆಂಗಳೂರು ಒಳಚರಂಡಿ ವ್ಯವಸ್ಥೆ ಸರಿಪಡಿಸಲು ವಿಶೇಷ ಸಭೆ ಕರೆದು ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಳೆಯಿಂದ ಹಾನಿಗೊಳಗಾದ ಎಚ್.ಎಸ್.ಆರ್ ಬಡಾವಣೆ, ಮಡಿವಾಳ, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೆರೆಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು ಅಗರ ಪಕ್ಕದಲ್ಲಿರುವ ಬಡಾವಣೆಗಳಿಗೆ ನೀರು ಮನೆಗಳಿಗೆ ನುಗ್ಗಿ ಅನಾಹುತಗಳಾಗಿವೆ. 15-20 ಕೆರೆಗಳ…

ಕೌಶಲ್ಯ ಅಭಿವೃದ್ಧಿಗೆ ಹೂಡಿಕೆ ಮಾಡಿ: ಉದ್ಯಮಿಗಳಿಗೆ ಸಚಿವ ಎಂಟಿಬಿ ನಾಗರಾಜ್ ಕರೆ

ಬೆಂಗಳೂರು,ಅ,18: ಕೌಶಲ್ಯ ಅಭಿವೃದ್ಧಿ ಗಾಗಿ ಹೂಡಿಕೆ ಮಾಡುವುದು ಉದ್ಯಮಗಳಿಗೆ ಎಷ್ಟು ಲಾಭದಾಯಕವೋ ಹಾಗೆಯೇ ಅದು ಉದ್ಯೋಗಿಗಳಿಗೂ ಪ್ರಯೋಜನಕಾರಿ.ಹಾಗಾಗಿ,ಉದ್ಯಮಿಗಳು ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಹೆಚ್ಚು ಹೂಡಿಕೆಗೆ ಆದ್ಯತೆ ನೀಡಬೇಕು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಕರೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದಾಬಸ್ ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ-ಎಫ್ ಕೆಸಿಸಿಐ ನಿರ್ಮಿಸಲು ಉದ್ದೇಶಿಸಿರುವ ‘ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಸ್ಕಿಲ್ ಡೆವಲಪ್‌ಮೆಂಟ್’…

ಎಫ್.ಆರ್.ಎಲ್. ಉಪವಿಭಾಗ-೨ನ್ನು ಸ್ಥಳಾಂತರಗೊಳಿಸುವ ಆದೇಶ ರದ್ದತಿಗೆ ಒತ್ತಾಯ

ಆಲಮಟ್ಟಿ,ಅ,:13: ಇಲ್ಲಿನ ಕೃಷ್ಣಾಮೇಲ್ದಂಡೆ ಯೋಜನೆ ವ್ಯಾಪ್ತಿಯ ಎಫ್.ಆರ್.ಎಲ್. ಉಪವಿಭಾಗ-೨ನ್ನು ಬೀಳಗಿಗೆ ಸ್ಥಳಾಂತರಗೊಳಿಸುವ ಆದೇಶವನ್ನು ರದ್ದುಗೊಳಿಸಿ ಇಲ್ಲಿಯೇ ಮುಂದುವರೆಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ಮತ್ತು ಕರ್ನಾಟಕ ರಕ್ಷಣಾವೇದಿಕೆ ಘಟಕದವತಿಯಿಂದ ಬುಧವಾರ ಪ್ರತ್ಯೇಕವಾಗಿ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು. ಬುಧವಾರ ಇಲ್ಲಿನ ಕೆಬಿಜೆನ್ನೆಲ್ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ತಿರುಪತಿ ಬಂಡಿ ಅವರು ಕೃ.ಮೇ.ಯೋಜನೆ ವ್ಯಾಪ್ತಿಯ ಆಲಮಟ್ಟಿ…

ಸ್ವಚ್ಚ,ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ಶ್ರೀರಾಮುಲು ಕರೆ

ಚಿತ್ರದುರ್ಗ. ಅ. 11: ಮೊಳಕಾಲ್ಮೂರಿನಲ್ಲಿಂದು ಕಸಸಂಗ್ರಹಣಾ ವಾಹನಗಳಿಗೆ ಸ್ವಯಂ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ  ಬಿ. ಶ್ರೀರಾಮುಲು, ಸಾರ್ವಜನಿಕರು ಸ್ಚಚ್ಚತೆಯನ್ನು ಮೈಗೂಡಿಸಿಕೊಂಡು ಸ್ವಚ್ಚ, ಸುಂದರ ಹಾಗೂ ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿ, ಜಾಗೃತಿ ಮೂಡಿಸಿದರು. ಮೊಳಕಾಲ್ಮೂರಿನಲ್ಲಿಂದು ಪಟ್ಟಣ ಪಂಚಾಯಿತಿ ಯು ಆಯೋಜಿಸಿದ್ದ ಕಸಸಂಗ್ರಹಣಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಚಚ್ಚ ಭಾರತ ಸ್ವಾಥ್ಯ ಭಾರತವಾಗಿದೆ. ಮಹಾತ್ಮ ಗಾಂಧಿಜಿಯವರ ಆಶಯವೂ ಇದಾಗಿತ್ತು.…

ರಾಜ್ಯವನ್ನು ಆರೋಗ್ಯ ಕರ್ನಾಟಕವನ್ನಾಗಿಸಲು ಸಂಕಲ್ಪ :ಸಿಎಂ ಬೊಮ್ಮಾಯಿ*

ಬೆಂಗಳೂರು, ಅ, 10 : ರಾಜ್ಯವನ್ನು ಆರೋಗ್ಯ ಕರ್ನಾಟಕವನ್ನಾಗಿಸಲು ಸಂಕಲ್ಪ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ತಿಳಿಸಿದರು. ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಅಂಡ್ ಆರ್ಗನ್ ಟ್ರಾನ್ಸ್ ಪ್ಲಾಂಟ್ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸುಖ್ ಎಲ್ ಮಂಡವೀಯ ಅವರೊಂದಿಗೆ ಭಾಗವಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು. ಬೆಂಗಳೂರು ನಗರ ಸೇರಿದಂತೆ ಇಡೀ ಕರ್ನಾಟಕದ ಮೂಲೆ…

ಕಲಿತ ಶಾಲೆಯನ್ನು ಗೌರವಿಸಿದರೆ ಬದುಕಲ್ಲಿಯಶಸ್ಸು ಸಾಧ್ಯ

ಆಲಮಟ್ಟಿ,ಅ,08;ವಿದ್ಯಾರ್ಥಿಗಳು ತಂದೆ, ತಾಯಿ, ಕಲಿಸಿದ ಗುರು ಹಾಗೂ ಕಲಿತ ಸಂಸ್ಥೆಯನ್ನು ಮರೆಯದೇ ಗೌರವಿಸುವ ವಿದ್ಯಾರ್ಥಿ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳಿದರು. ಶುಕ್ರವಾರ, ಸ್ಥಳೀಯ ಮಂಜಪ್ಪ ಹರ್ಡೇಕರ ಸ್ಮಾರಕ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬದುಕಿನ ಓದಿನ,ಬುನಾದಿ ಪ್ರೌಢ ಹಂತ, ಈ ಹಂತದಲ್ಲಿ ಜವಾಬ್ದಾರಿಯುತ ಓದಿನ ಜತೆ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು, ಹುಡುಗಾಟದ ಜತೆಗೂ ಗಂಭೀರ…

ಸುರಕ್ಷಿತ, ಸುಂದರ ಬೆಂಗಳೂರು ನಗರ ಮಾಡುವುದು ನಮ್ಮ ಗುರಿ: ಸಿಎಂ

ಬೆಂಗಳೂರ, ಅ, ೦೫: ಸುರಕ್ಷಿತ, ಸುಂದರ, ಹಸಿರುಮಯ ಬೆಂಗಳೂರು ನಗರ ಮಾಡುವುದು ನಮ್ಮ ಗುರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ರಾಜಾಜಿನಗರ ವಿಧಾನಸಭಾ ಕ್ಷೇತ್ರ, ಶಿವನಗರದ ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ೬೫೫ ಮೀಟರ್ ಉದ್ದದ ಮೇಲ್ಸೆತುವೆ ಉದ್ಘಾಟನೆಯನ್ನು ಬೊಮ್ಮಾಯಿ ಅವರು ಮಾಡಿದರು. ಉದ್ಘಾಟನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಾಜಿನಗರ, ಬಸವೇಶ್ವರನಗರ, ಶಿವನಗರ ಪ್ರದೇಶ ಅತಿ ಹೆಚ್ಚು ಜನ ದಟ್ಟಣೆ ಇರುವ ಪ್ರದೇಶ. ಸಿಗ್ನಲ್ ಫ್ರೀ ಕಾರಿಡಾರ್ ನಿಂದ ಮುಕ್ತ ಸಂಚಾರಕ್ಕೆ ಅನುಕೂಲವಾಗಲಿದೆ. ತುಮಕೂರು, ಮೈಸೂರು…

ಬಿಬಿಎಂಪಿ ನಿರ್ಲಕ್ಷ್ಯವೇ ಮಳೆ ಅವಾಂತರಕ್ಕೆ ಕಾರಣ

ಬೆಂಗಳೂರು,ಅ.04:ಬಿಬಿಎಂಪಿ ಅಧಿಕಾರಿಗಳಿಗೆ ಇನ್ನೂ ಬುದ್ದಿ ಬಂದಂತಿಲ್ಲ.ಪ್ರತಿ ಬಾರಿ ಮಳೆ ಬಂದಾಗಲೂ ಹಲವಾರು ಅವಾಂತರಗಳು ಸೃಷ್ಟಿಯಾದಾಗುತ್ತಲೆ ಇವೆ ಆದರೆ ಮುಂದಿನ ಬಾರಿ ಹಾಗೆ ಆಗದಂತೆ ನೋಡಿಕೊಳ್ಳುತ್ತೇವೆ ಎಂಬ ಮಾತು ಈಗ ಬೆಂಗಳೂರನ್ನೆ ಹಾಳು ಮಾಡಿದೆ. ರಾತ್ರಿ ಬಂದ ಮಳೆಗೆ ಹಲವಾರು ಪ್ರದೇಶದಲ್ಲಿ ಮಳೆ ನೀರು ನುಗ್ಗಿ ಅವಾಂತರವಾಗಿದೆ ಈಗಲೂ ಅದೇ ಮಾತು…ಇಂತ ನಾಲಾಯಕ್ ಅಧಿಕಾರಿಗಳಿಂದ ಎಷ್ಟು ಸಂಸಾರಗಳು ಬಲಿಯಾಗಬೇಕು? ನಿನ್ನೆ ರಾತ್ರಿಯಿಡೀ ಸಿಲಿಕಾನ್​ ಸಿಟಿಯಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸುಮಾರು 2 ಗಂಟೆಗಳ ಭೀಕರ…

ನಂದಿನಿ‌ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆ ಮಾಡಿ;ಸಿಎಂ ಸಲಹೆ

ಬೆಂಗಳೂರು,ಸೆ,29:ಹಾಲು ಮತ್ತು ಸಕ್ಕರೆಯ ಉಪ ಉತ್ಪನ್ನಗಳು ಬಹಳಷ್ಟಿವೆ. ಕೆಎಂಎಫ್‌ನ ಉತ್ಪನ್ನಗಳು ಕೂಡ ಉತ್ತಮವಾಗಿವೆ. ಹೀಗಾಗಿ ತನ್ನ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸುವಂತೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಕರ್ನಾಟಕ ಹಾಲು ಮಹಾಮಂಡಲದ ನೂತನ ಯೋಜನೆಗಳಿಗೆ ಚಾಲನೆ ನೀಡಿ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಹಾಲಿನ‌ ಉಪ ಉತ್ಪನ್ನಗಳ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ವಿಸ್ತರಣೆ ಮಾಡಬೇಕು. ಈ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ದೊರೆತರೆ ಹೆಚ್ಚು ಹಾಲು ಉತ್ಪಾದನೆ ಆಗುತ್ತದೆ. ಮುಂದಿನ…

ನನ್ನ ಮೊದಲ ಕನಸೊಂದು ಸಾಕಾರಗೊಂಡಿದೆ;ರಂಜನಿ ರಾಘವನ್

ಬೆಂಗಳೂರು,ಸೆ,29: ಪುಸ್ತಕ ಬರೆಯುವ ಕನಸೊಂದು ನನ್ನ ಮನಸಿನ ಮೂಲೆಯಲ್ಲಿ ಕುಳಿತಿತ್ತು. ಕತೆ ಡಬ್ಬಿ ಮೂಲಕ ಇದು ಸಾಕಾರಗೊಂಡಿದೆ. ಮೊದಲ ಪುಸ್ತಕವಾಗಿದ್ದರಿಂದ ತುಂಬಾ ಸಂಭ್ರಮದಲ್ಲಿರುವೆ ಎಂದು ʻಕನ್ನಡತಿʼ ಖ್ಯಾತಿಯ ನಟಿ ರಂಜನಿ ರಾಘವನ್‌ ತಿಳಿಸಿದರು. ಬಹುರೂಪಿ ಹಮ್ಮಿಕೊಂಡಿದ್ದ ರಂಜನಿ ರಾಘವನ್ ಅವರ ಕಥಾ ಸಂಕಲನ ʻಕತೆ ಡಬ್ಬಿʼ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ʻಅವಧಿʼ ವೆಬ್‌ ಪತ್ರಿಕೆಯಲ್ಲಿ ವಾರಕ್ಕೊಮ್ಮೆ ಕತೆಗಳನ್ನು ಬರೆದೆ. ಅದಕ್ಕೆ ಬಂದ ಪ್ರತಿಕ್ರಿಯೆಗಳು ನನಗೆ ಉತ್ಸಾಹ ತುಂಬಿತು ಅದೇ ಕಾರಣವಾಗಿ ಕತೆ ಡಬ್ಬಿ ರೂಪುಗೊಂಡಿತು. ಮುಂದೆ ಕಾದಂಬರಿಯನ್ನು…

ಬಿರುಸಿನ ನಡಿಗೆ ಅತ್ತ್ಯುತ್ತಮ ವ್ಯಾಯಾಮ;ಸಿಎಂ ಬೊಮ್ಮಾಯಿ

ಬೆಂಗಳೂರು, ಸೆ, 29:ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ವಿಶ್ವ ಹೃದಯ ದಿನಾಚರಣೆ ಅಂಗವಾಗಿ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಇಂದು ಆಯೋಜಿಸಿದ್ದ ಹೃದಯದಿಂದ ಬಾಂಧವ್ಯ ಬೆಳೆಸೋಣ ವಾಕಥಾನ್ ಗೆ ಅವರು ಚಾಲನೆ ನೀಡಿ ಮಾತನಾಡಿದರು. ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯ ಸ್ನೇಹಿ ಚಟುವಟಿಕೆಯಾದ ಬಿರುಸಿನ ನಡಿಗೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಬಿರುಸಿನ ನಡಿಗೆ ಸಹಾಯಕ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಹೃದಯ…

1 7 8 9 10 11 17
error: Content is protected !!