Browsing: ಸುದ್ದಿ

ಸುದ್ದಿ

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ -ಶಾಲಾಕಾಲೇಜುಗಳಿಗೆ ಇಂದು ರಜೆ

ಶಿವಮೊಗ್ಗ, ಫೆ ೨೧: ನಿನ್ನೆ ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಹಿಂದೂ ಕಾರ್ಯಕರ್ತನ ಹರ್ಷ ಎಂಬಾತನ ಮೇಲೆ ಎರಗಿ ಮನ ಬಂದಂತೆ ಕೊಚ್ಚಿ ಕೊಲೆ ಮಾಡಿದೆ ಗೃಹ ಸಚಿವ ಅರಗ ಜ್ಞಾನೇಂದ್ರ ತವರು ಜಿಲ್ಲೆಯಲ್ಲೇ ಆಗಿದೆ. ಈ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಹಿಜಾಬ್ ವಿವಾಧದ ಬೆನ್ನಲ್ಲೆ ಈ ಘಟನೆ ಸಂಭವಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹಿಂದೂ ಕಾರ್ಯಕರ್ತನ ಹತ್ಯೆಯಿಂದ ರೊಚ್ಚಿಗೆದ್ದ ಜನರು ಮನ ಬಂದಂತೆ ಕಲ್ಲು ತೂರಾಟ ನಡೆಸಿದರು.…

ಕೇದ್ರಕಾರಾಗೃಹದ ಕರಾಳ ಕಥೆ.

ಕೇಂದ್ರ ಕಾರಾಗೃಹದ ಕರಾಳ ಕಥ Writing;ಪರಶಿವ ಧನಗೂರು ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿನ ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದ ಬಂದೀಖಾನೆ ಬಾರೀ ಸದ್ದುಮಾಡುತ್ತಿದೆ. ತನ್ನ ಕುಖ್ಯಾತಿಯಿಂದಲೇ ಸುದ್ದಿಯಾಗುತ್ತಿದೆ! ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲವು ಭ್ರಷ್ಟ ಜೈಲು ಪೊಲೀಸ್ ಸಿಬ್ಬಂದಿಗಳು ಅಲ್ಲಿರುವ ರೌಡಿಗಳಿಂದ ಲಂಚ ಪಡೆಯುತ್ತಿರುವ ವೀಡಿಯೋ ದ್ರಶ್ಯಗಳು ನಾಡಿನ ಹಲವು ಮೀಡಿಯಾಗಳಲ್ಲಿ ಪ್ರಸಾರವಾಗಿ ಕಾರಾಗೃಹ ಕ್ಕೆ ಕಿಚ್ಚು ಹಬ್ಬಿತ್ತು. ಬೆಂಗಳೂರಿನ ಕೇಂದ್ರ ಕಾರಾಗೃಹ ದಲ್ಲಿರುವ ಕೆಲವು ವಿಚಾರಣಾಧೀನ ಕೈದಿಗಳು ಹಣಕೊಟ್ಟು ಹಲವು ಸೌಲಭ್ಯಗಳನ್ನು ಪಡೆಯುತ್ತಿರುವ…

ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು, ಜ. 28: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಅವರು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ. ಸೌಂದರ್ಯ ಸಾವಿನ ಸುದ್ದಿ ಕೇಳಿ ಬಿ.ಎಸ್.ಯಡಿಯೂರಪ್ಪ ಕುಟುಂಬ ಆತಂಕಕ್ಕೆ ಒಳಗಾಗಿದೆ. ಕೌಟುಂಬಿಕ ಕಲಹದಿಂದ ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದ್ದು, ಪೊಲೀಸ್ ತನಿಖೆಯಲ್ಲಿ ಸಂಗತಿ ಬೆಳಕಿಗೆ ಬರಬೇಕಿದೆ. 2018 ರಲ್ಲಿ ಡಾ. ಅಬ್ಬಿಗೆರೆ ನಿವಾಸಿ ಡಾ. ನೀರಜ್ ಎಂಬುವರನ್ನು ಸೌಂದರ್ಯ ಮದುವೆಯಾಗಿದ್ದರು. ನೀರಜ್ ಕೂಡ ವೈದ್ಯರಾಗಿದ್ದು ಎಂ.ಎಸ್. ರಾಮಯ್ಯ…

ಬೆಂಗಳೂರು ಹೊರವಲಯದಲ್ಲಿ ಶುರುವಾಯಿತು ಭೂಮಾಫಿಯಾ-ಮರ್ಡರ್ !!

ಬೆಂಗಳೂರು ಹೊರವಲಯದಲ್ಲಿ ಶುರುವಾಯಿತು ಭೂಮಾಫಿಯಾ-ಮರ್ಡರ್ !! Writing;ಪರಶಿವ ದನಗೂರು ಆನೇಕಲ್ ನಾಗರೀಕರನ್ನು ಬೆಚ್ಚಿ ಬೀಳಿಸಿದ್ದ ರಾಜಶೇಖರ್ ರೆಡ್ಡಿ ಎಂಬ ಆಂಧ್ರಪ್ರದೇಶದ ಚಿತ್ತೂರು ಮೂಲದ ರಿಯಲ್ ಎಸ್ಟೇಟ್ ಬ್ರೋಕರ್ ಮರ್ಡರ್ ಮಿಸ್ಟರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಯುವಕರನ್ನು ಬಂಧಿಸಿರುವ ಆನೇಕಲ್ ಪೊಲೀಸರು ಭೂಮಾಫಿಯಾ ಕೈವಾಡವನ್ನು ಬಯಲಿಗೆಳೆದಿದ್ದಾರೆ! ಆನೇಕಲ್ ತಾಲ್ಲೂಕಿನ ತಮ್ಮನಾಯಕನಹಳ್ಳಿಯ ಮೀಸೆ ಜಯರಾಂ ಮತ್ತು ಆತನ ಮಗ ಶಶಿಕುಮಾರ್ ಒಂದೂ ಕಾಲೂ ಕೋಟಿಗೆ ಸುಫಾರಿ ನೀಡಿ ಕೊಲೆ ಮಾಡಿಸಿರುವುದು ತನಿಖೆಯಿಂದ ಬಯಲಾಗಿದೆ! ಬೆಂಗಳೂರಿನ ಬಿ.ಟಿ.ಎಂ ಲೇಔಟಿನ ಸುಧಾಕರ್…

ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್‌ಗೆ ಫೈರಿಂಗ್

ಬೆಂಗಳೂರು,೧೧: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಗಿರಿ ನಗರ ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್, ರೌಡಿಶೀಟರ್ ನರಸಿಂಹ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ರೌಡಿಶೀಟರ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಂಧನ ವೇಳೆ ಕಾನ್ಸ್‌ಟೇಬಲ್ ಮೋಹನ್ ಎಂಬುವವರು ಹಲ್ಲೆಗೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆ, ದರೋಡೆ, ಕಿಡ್ನಾಪ್ ಹಾಗೂ ಮನೆಗಳ್ಳತನ ಹೀಗೆ ೩೦ ಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿದ್ದ ನರಸಿಂಹ ಪೊಲೀಸರಿಗೆ…

ಕಾರು ಅಡ್ಡಗಟ್ಟಿ ಮಹಿಳೆ ಕೊಲೆ

ಆನೇಕಲ್,ಡಿ,28: ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ನಡೆದಿದೆ. ಜಿಗಣಿ ನಿವಾಸಿ ಅರ್ಚನಾರೆಡ್ಡಿ ಹತ್ಯೆಯಾದ ಮಹಿಳೆ. ನವೀನ್, ಸಂತೋಷ್ ಎಂಬುವವರು ಅರ್ಚನಾರೆಡ್ಡಿಯನ್ನು ಕೊಲೆ ಮಾಡಿದ್ದಾರೆ. ತಡರಾತ್ರಿ ಈ ಘಟನೆ ನಡೆದಿದೆ. ಅರ್ಚನಾ ಮೊದಲ ಪತಿ ಬಿಟ್ಟು 2ನೇ ಪತಿ ನವೀನ್ ಜೊತೆ ವಾಸವಿದ್ದರು. ಈ ನಡುವೆ ಚೆನ್ನಪಟ್ಟಣದಲ್ಲಿರುವ ಆಸ್ತಿ ವಿಚಾರವಾಗಿ ಗಲಾಟೆ ನಡೆದಿದ್ದು ಹೀಗಾಗಿ ಇತ್ತೀಚೆಗೆ ನವೀನ್ ಬಿಟ್ಟು ಅರ್ಚನಾ ದೂರವಿದ್ದರು. ಈ ಕಾರಣಕ್ಕಾಗಿ…

ಗಡಿಭಾಗಗಳಲ್ಲಿ ಡ್ರಗ್ಸ್ ಮಾಫಿಯಾ ಟೆರರಿಸಂ!!?

ಗಡಿಭಾಗಗಳಲ್ಲಿ ಡ್ರಗ್ಸ್ ಮಾಫಿಯಾ ಟೆರರಿಸಂ!!? Writing; ಪರಶಿವ ಧನಗೂರು ಹೌದು ಭಾರತದ ಮೇಲೆ ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದ ಭಯೋತ್ಪಾದಕರು ಸೇರಿಕೊಂಡು ಡ್ರಗ್ಸ್ ಮಾಫಿಯಾ ಜಾಲ ವಿಸ್ತರಿಸುವ ಮೂಲಕ ‘ಡ್ರಗ್ಸ್ ಟೆರರಿಸಂ!’ ನಡೆಸುತ್ತಿರುವ ಅನುಮಾನ ಮೂಡುತ್ತಿದೆ. ಏಕೆಂದರೆ ಈಗ ಮತ್ತೆ ಗುಜರಾತಿನ ಕರಾವಳಿ ಸಮುದ್ರದ ಗಡಿಯಲ್ಲಿ ಪಾಕಿಸ್ತಾನದ ಕರಾಚಿಯಿಂದ ಬಂದಿಳಿಯಲಿದ್ದ 400ಕೋಟಿ ಮೌಲ್ಯದ ಡ್ರಗ್ಸ್ ಮೂಟೆಗಳನ್ನು ನಮ್ಮ ಕರಾವಳಿ ಕಾವಲು ಪಡೆ ಮತ್ತು ಭಯೋತ್ಪಾದನೆ ನಿಗ್ರಹ ದಳ ಜಂಟಿ ಕಾರ್ಯಾಚರಣೆ ನಡೆಸಿ ದಾಳಿಮಾಡಿ ವಶಪಡಿಸಿಕೊಂಡು…

ಹಿರಿಯೂರು ಬಳಿ ಅಫಘಾತ; ನಾಲ್ವರು ಸಾವು

ಚಿತ್ರದುರ್ಗ ; ಎಚ್ ಲಕ್ಷ್ಮಣ್ ಚಿತ್ರದುರ್ಗ, ಡಿ, 13: ಜಿಲ್ಲೆಯ ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ (ತೊರೆ ಸೇತುವೆ ಬಳಿ) ಬಳಿ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಾರು ಹಾಗೂ ಲಾರಿಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದು, ಹತ್ತಕ್ಕೂ ಹೆಚ್ಚು ಜನ ಗಾಯಗೊಂಡರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಕಾಫಿ ಹೌಸ್‌ನ ಆಲೂರು…

ಕಾಳು ಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ದಂಧೆ!

Writing- ಪರಶಿವ ಧನಗೂರು ಕಾಳು ಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ದಂಧೆ! ದೇಶದಲ್ಲಿ ಕಡುಬಡವರು ಹೊಟ್ಟೆಹಸಿವಿನಿಂದ ನರಳಬಾರದೆಂದು, ಸರ್ಕಾರಗಳು ಉಚಿತವಾಗಿ ನೀಡುತ್ತಿರುವ ಪಡಿತರ ಯೋಜನೆಯ ಅನ್ನಭಾಗ್ಯ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಹೊರ ರಾಜ್ಯಗಳ ರೈಸ್ ಮಿಲ್ ಗಳಿಗೆ, ರೈಸ್ ಮಾರ್ಕೆಟ್ ಗಳಿಗೆ ಸಾಗಿಸುವ ದಂಧೆ ಈಗ ಹೆಚ್ಚು ರಾಜ್ಯಾದ್ಯಂತ ಸಕ್ರಿಯವಾಗಿದೆ. ಫಲಾನುಭವಿ ಗಳಿಂದ ಕಡಿಮೆ ಬೆಲೆಗೆ ಪಡೆದುಕೊಳ್ಳುವ ಕಾಳಸಂತೆಕೋರರು, ಅನ್ನಭಾಗ್ಯದ ಹಸಿವು ನೀಗಿಸಬೇಕಾದ ಅಕ್ಕಿಯನ್ನು ತಮ್ಮ ಸೀಕ್ರೆಟ್ ಗೋಡೌನ್ ಗಳಿಗೆ ಸಾಗಿಸಿ ಬಿಚ್ಚಿಟ್ಟ, ಆನಂತರ…

ಸರ್ಕಾರ ಗಾಂಜಾಗೆ ಜೈ ಎಂದಿದ್ದೇಕೇ..?

Writing- ಪರಶಿವ ಧನಗೂರು ಸರ್ಕಾರ ಗಾಂಜಾಗೆ ಜೈ ಎಂದಿದ್ದೇಕೇ? ಮಾದಕ ವಸ್ತುಗಳ ಸಾಗಾಣಿಕೆ-ಮಾರಾಟ-ಸೇವನೆ ವಿರುದ್ಧ ಜಗತ್ತಿನ ಎಲ್ಲಾ ದೇಶಗಳ ಜೊತೆ ಸೇರಿಕೊಂಡು 1960ರಲ್ಲೇ ಸಮರ ಸಾರಿದ್ದ ನಮ್ಮ ಭಾರತ ದೇಶ, ಯುದ್ಧ ಘೋಷಿಸಿ ಗೆಲ್ಲುವ ಮೊದಲೇ ಸೋಲೊಪ್ಪಿಕೊಳ್ಳುತ್ತಿರುವ ಕಾರಣವೇನೆಂದು ತಿಳಿಯುತ್ತಿಲ್ಲ. ಕೇಂದ್ರ ಸರ್ಕಾರ ಈಗ ಕಳೆದ ಅಕ್ಟೋಬರ್ ತಿಂಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮೂಲಕ “ಸಣ್ಣ ‌ಪ್ರಮಾಣದ ಮಾದಕ ವಸ್ತು ಸೇವಿಸುವ, ಇಟ್ಟುಕೊಳ್ಳುವ ವ್ಯಕ್ತಿಗಳಿಗೆ ಶಿಕ್ಷೆ ಬೇಡ!” ಎಂಬ ಆದೇಶ ಹೊರಡಿಸಿ ತಮ್ಮ ಕೆಳಹಂತದ…

ನಕಲಿ ಛಾಪಾ ಕಾಗದದ ನೆಟ್ವರ್ಕ್ ಜಾಲ  ರೀ ಆಕ್ಟೀವ್..!

writing-ಪರಶಿವ ಧನಗೂರು ನಕಲಿ ಛಾಪಾ ಕಾಗದದ ನೆಟ್ವರ್ಕ್ ಜಾಲ  ರೀ ಆಕ್ಟೀವ್ ದೇಶದ ಆರ್ಥಿಕತೆಯನ್ನೆ ಬುಡಮೇಲು ಮಾಡಲು ಹೊರಟಿದ್ದ, ಭಾರತವನ್ನೇ ಬೆಚ್ಚಿ ಬೀಳಿಸಿದ್ದ ಬಹುಕೋಟಿ ಛಾಪಾ ಕಾಗದದ ಹಗಹರಣವೂ 2001ರಲ್ಲಿ ಬೆಳಕಿಗೆ ಬಂದದ್ದು ಬೆಂಗಳೂರಿನಲ್ಲೇ! ಸುಮಾರು ಹತ್ತು ವರ್ಷಗಳ ಕಾಲ ಸಿಬಿಐ ಮತ್ತು ಹಲವು ರಾಜ್ಯಗಳ ಪೊಲೀಸರಿಂದ ತನಿಖೆ ಗೊಳಪಟ್ಟಿದ್ದ 20.000 ಕೋಟಿ ರೂಪಾಯಿಗಳ ಮೌಲ್ಯದ ಈ ನಕಲಿ ಛಾಪಾ ಕಾಗದದ ಹಗಹರಣದ ರೂವಾರಿ ಬೆಳಗಾವಿ ಜಿಲ್ಲೆಯ ಖಾನಾಪುರ ಮೂಲದ ಅಬ್ದುಲ್ ಕರೀಂ ಲಾಲಾ ತೆಲಗಿ.…

ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಆನೇಕಲ್, ಅ,23 ಇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಇಬ್ಬರನ್ನು ಹತ್ಯೆ ಮಾಡಿರುವ ಘಟನೆ ಇಲ್ಲಿನ ಅತ್ತಿಬೆಲೆ- ಟಿವಿಎಸ್ ರಸ್ತೆಯಲ್ಲಿ ತಡರಾತ್ರಿಯಲ್ಲಿ  ನಡೆದಿದೆ. ಕೊಲೆಯಾದವರನ್ನು ಅತ್ತಿಬೆಲೆಯ ದೀಪಕ್ ಹಾಗೂ ಮಾಯಸಂದ್ರದ ಬಾಸ್ಕರ್ ಎಂದು ಗುರುತಿಸಲಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಗಲಾಟೆ ನಡೆದು ಮತ್ತೊಂದು ಕಡೆಯವರು ಈ ಇಬ್ಬರನ್ನು ಅಟ್ಟಾಡಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾದವರುಈ ಬಗ್ಗೆ ಮಾಹಿತಿ ತಿಳಿದ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಮೃತದೇಹಗಳ ಪಕ್ಕದಲ್ಲಿ ಎರಡು ಬೈಕ್​ಗಳು…

ಮಗನಿಂದಲೇ ತಂದೆ ಅತನಜೊತಗಿದ್ದ ಮಹಿಳೆಯನ್ನು ಕೊಲೆ ಮಾಡಿದ ಮಗ

ಮೈಸೂರು,ಅ,22:ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ತಂದೆ ಮತ್ತು ಆತನ ಜೊತೆಯಿದ್ದ ಮಹಿಳೆಯನ್ನು ಮಗ ಬರ್ಭರವಾಗಿ ಹತ್ಯೆ ಮಾಡಿದ ಘಟನೆ ಸಾಂಸ್ಕೃತಿಕ ನಗರ ಮೈಸೂರಿನ ಹೊರವಲಯದಲ್ಲಿ ನಡೆದಿದೆ. ಮೈಸೂರಿನ ಶ್ರೀ ನಗರದಲ್ಲಿ ಈ ಘಟನೆ ನಡೆದಿದೆ. ಶಿವಪ್ರಕಾಶ್ (56) ಮತ್ತು ಲತಾ (48) ಕೊಲೆಯಾದವರು. ಕೊಲೆ ಮಾಡಿದ ಸಾಗರ್ ನಾಪತ್ತೆ ಯಾಗಿದ್ದಾನೆ. ಶಿವಪ್ರಕಾಶ್ ಕೆ.ಜಿ ಕೊಪ್ಪಲು ನಿವಾಸಿಯಾಗಿದ್ದು, ಲತಾ ಮೈಸೂರಿನ ಶ್ರೀನಗರದಲ್ಲಿ ವಾಸಿಸುತ್ತಿದ್ದರು. ಈ ನಡುವೆ ಲತಾ ಮನೆಗೆ ನುಗ್ಗಿದ ಸಾಗರ್ ಮೊದಲು ತಂದೆಯನ್ನ ಮಚ್ಚಿನಿಂದ ಕೊಲೆ ಮಾಡಿದ್ದಾನೆ. ನಂತರ…

ಗಗನಕ್ಕೆರುತ್ತಿರುವ ಬಿಟ್ ಕಾಯಿನ್ ಗೆ ಭಾರತದಲ್ಲೇಕೆ ಭಾರೀ ಬೇಡಿಕೆ?

ಗಗನಕ್ಕೆರುತ್ತಿರುವ ಬಿಟ್ ಕಾಯಿನ್ ಗೆ ಭಾರತದಲ್ಲೇಕೆ ಭಾರೀ ಬೇಡಿಕೆ? Writing-ಪರಶಿವ ಧನಗೂರು ಈಗ ಜಗತ್ತಿನ ಎಲ್ಲೆಡೆ ಕ್ರಿಪ್ಟೋಕರೆನ್ಸಿ ಯದೇ ಟ್ರೆಂಡ್! ವಿಶ್ವ ದ ಅತ್ಯಂತ ದುಬಾರಿ ಡಿಜಿಟಲ್ ಮನಿ ಬಿಟ್ ಕಾಯಿನ್ ಮತ್ತು ಇಥೇರಿಯಂ ಮೇಲೆ ದಿನದಿಂದ ದಿನಕ್ಕೆ ಜನರ ಹೂಡಿಕೆ ತಾರಕ್ಕಕ್ಕೇರುತ್ತಿದೆ! ಕಳೆದ ಏಳು ದಿನಗಳಲ್ಲಿ ಶೇಕಡಾ 32% ಬೆಲೆ ಹೆಚ್ಚಳ ಕಂಡಿರುವ ಬಿಟ್ ಕಾಯಿನ್ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಟ್ರೆಂಡಿಂಗ್ ನಲ್ಲಿದೆ. ಚುನಾಯಿತ ಸರ್ಕಾರಗಳಿಗೇ ಚುರುಕು ಮುಟ್ಟಿಸಿ ಸವಾಲು ಒಡ್ಡುತ್ತಿರುವ ಈ ಖಾಸಗಿ ಕಾಸು…

ನಾಪತ್ತೆಯಾಗಿದ್ದ ಮಕ್ಕಳು ಮಂಗಳೂರಿನಲ್ಲಿ ಪತ್ತೆ

ಮಂಗಳೂರು, ಅ, ೧೨: ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಅಮೃತವರ್ಷಿಣಿ, ರಾಯಲ್ ಸಿದ್ಧಾರ್ಥ, ಚಿಂತನ್, ಭೂಮಿ ಎಂಬ ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೆಂಗಳೂರಿನಿಂದ ಸ್ಲಿಪರ್ ಬಸ್‌ನಲ್ಲಿ ಮಂಗಳೂರು ತಲುಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರಿಗೆ ಬಂದಿಳಿದ ಮಕ್ಕಳ ಬಗ್ಗೆ ಅನುಮಾನಗೊಂಡ ಆಟೋ ರಿಕ್ಷಾ ಚಾಲಕರು, ಮಕ್ಕಳನ್ನು ಕರೆತಂದು ಪಾಂಡೇಶ್ವರ ಪೊಲೀಸ್ ಠಾಣೆಗೆ ಬಿಟ್ಟಿದ್ದಾರೆ. “ಮೊದಲು ರೈಲು ಮೂಲಕ ಬೆಳಗಾವಿಗೆ ಹೋಗಿದ್ದೆವು. ಅಲ್ಲಿಂದ ಮೈಸೂರಿಗೆ ಬಂದು ಮತ್ತೆ ಬೆಂಗಳೂರಿಗೆ ಹೋಗಿ ಸೋಮವಾರ ಸಂಜೆ ಮೆಜೆಸ್ಟಿಕ್‌ನಿಂದ ಮಂಗಳೂರಿಗೆ…

ದೆಹಲಿ ರೌಡಿಗಳ ಆಳ್ವಿಕೆಗೆ ಗ್ಯಾಂಗ್ ಸ್ಟರ್ ಸಿಂಡಿಕೇಟ್..!!

ದೆಹಲಿ ರೌಡಿಗಳ ಆಳ್ವಿಕೆಗೆ ಗ್ಯಾಂಗ್ ಸ್ಟರ್ ಸಿಂಡಿಕೇಟ್..!! Writing;ಪರಶಿವ ಧನಗೂರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೌಡಿಗಳ ಗ್ಯಾಂಗ್ ಹಾವಳಿ ಜಾಸ್ತಿಯಾಗಿದ್ದು, ದಶಕಗಳಿಂದಲೂ ಅಂಡರ್ ವರ್ಲ್ಡ್ ಗ್ಯಾಂಗ್ ಸ್ಟರ್ ಗಳು ರಕ್ತದ ಹಸಿವು ಹತ್ತಿಸಿಕೊಂಡು ದೆಹಲಿಯ ಬೀದಿಗಳಲ್ಲಿ ರಕ್ತದ ಕಾಲುವೆ ನಿರ್ಮಾಣ ಮಾಡಿ ಪ್ರತೀಕಾರದ ಹೆಸರಲ್ಲಿ ನಗರವನ್ನು ನರಕಕ ಮಾಡಿಬಿಟ್ಟಿದ್ದಾರೆ! ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನ್ಯಾಯಾಲಯದಲ್ಲಿ ನ್ಯಾಯಾದೀಶರೆದುರು ರೌಡಿಯೊಬ್ಬನನ್ನು ವಿಚಾರಣೆ ನಡೆಸುವಾಗ ಗುಂಡಿಟ್ಟು ಕೊಂದಿರುವ ದಾಖಲೆಯೇ ಬರೆದಿರುವ ನರಹಂತಕ ನಟೋರಿಯಸ್ ದಿಲ್ಲಿಯ ಮಾಫಿಯಾ ಡಾನ್ ಗಳು ಇಡೀ…

ಬೃಹತ್ ಮಕ್ಕಳ ಮಾರಾಟ ಜಾಲ ಪತ್ತೆ

ಬೆಂಗಳೂರು,ಅ.06:  ಮುಂಬೈನಿಂದ ಕಡಿಮೆ ಹಣಕ್ಕೆ ಮಕ್ಕಳನ್ನು ಖರೀದಿಸಿ ತಂದು ಬೆಂಗಳೂರಿನಲ್ಲಿ ಮಕ್ಕಳಿಲ್ಲದ ಪೋಷಕರಿಗೆ ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡುತ್ತಿದ್ದ ಮಕ್ಕಳ ಮಾರಾಟ ಜಾಲವನ್ನ ಪೋಲಸರು  ಭೇದಿಸಿದ್ದಾರೆ. ಮಕ್ಕಳ ಮಾರಾಟ ದಂಧೆಗೆ ಗರ್ಭಿಣಿ ಮಹಿಳೆಯರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊಡುವ ತಾಯಿ ಕಾರ್ಡ್ ನ್ನೇ ನಕಲು ಮಾಡಿ ದುರ್ಬಳಕೆ ಮಾಡಿಕೊಂಡಿರುವ ಆಘಾತಕಾರಿ ಸಂಗತಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಚಾಮರಾಜಪೇಟೆಯ ಸಿರ್ಸಿ ವೃತ್ತದಲ್ಲಿರುವ ಹೆರಿಗೆ ಆಸ್ಪತ್ರೆಯಲ್ಲಿ ಕಳ್ಳತನವಾಗಿದ್ದ ಮಗುವಿನ ಜಾಡು ಹಿಡಿದು ತನಿಖೆ ನಡೆಸಿದ ಪೊಲಿಸ್ ಸಬ್‌ಇನ್‌ಸ್ಪೆಕ್ಟರ್ ಶ್ರೀನಿವಾಸ್ ಬಾಂಬೆಯಿಂದ…

ಒಂದೇ ಕುಟುಂಬದ ಮೂವರು‌ ಆತ್ಮಹತ್ಯೆ.

ಬೆಂಗಳೂರು,ಅ,02:  ಇತ್ತೀಚೆಗಷ್ಟೇ ಒಂದೇ ಕುಟುಂಬದ ಐವರು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯ ಘಟನೆ ಮರುಕಳಿಸಿದ್ದು,ಒಂದೇ ಕುಟುಂಬದ ಮೂವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆಯ ಮನೆಯೊಂದರಲ್ಲಿ ನಡೆದಿದೆ. ತಾಯಿ ಸೇರಿದಂತೆ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದು  ಬಳಕಿಗೆ ಬಂದಿದೆ. ಆತ್ಮಹತ್ಯೆಗೆ ಶರಣಾದವರನ್ನು ವಸಂತಾ(40), ಯಶ್ವಂತ್(15), ನಿಶ್ಚಿತಾ(6) ಎಂದು ಗುರುತಿಸಲಾಗಿದೆ. ರೂಂ ಒಂದರಲ್ಲಿ ತಾಯಿ ಮಗಳು ಒಂದೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ, ಮತ್ತೊಂದು ಕಡೆ ಮಗ…

ಬೆಂಗಳೂರಿನಲ್ಲಿ ಮತ್ತೆ ತಲೆಯೆತ್ತಿದ ರೈಸ್ ಪುಲ್ಲಿಂಗ್ ದಂಧೆ!

ಬೆಂಗಳೂರಿನಲ್ಲಿ ಮತ್ತೆ ತಲೆಯೆತ್ತಿದ ರೈಸ್ ಪುಲ್ಲಿಂಗ್ ದಂಧೆ! Writing-ಪರಶಿವ ಧನಗೂರು ಕೊರೋನೋತ್ತರ ಕಾಲದಲ್ಲಿ ಖರ್ಚಿಗೂ ಕಾಸಿಲಿಲ್ಲದೇ ಅಂಡೆಲೆಯುತ್ತಿರುವ ವಂಚಕರ-ಮೋಸಗಾರರ ಮಾಫಿಯಾ ಮತ್ತೇ ರೀಆಕ್ಟೀವ್! ನಗರದಲ್ಲಿ ಸದ್ದಿಲ್ಲದೇ ತಲೆ ಎತ್ತಿದೆ ನೋಟು ಎಕ್ಸ್ಚೇಂಜ್ ಮಾಫಿಯಾ! ಜಾಲ ವಿಸ್ತರಿಸಲು ಪೀಲ್ಡಿಗೆ ಇಳಿದ ರೈಸ್ ಫುಲ್ಲಿಂಗ್ ವಂಚಕರು! ಒಂದೆಡೆ ಬಡಜನರು, ಮಧ್ಯಮ ವರ್ಗದ ಜನರು ಸೈಬರ್ ವಂಚನೆಗೊಳಗಾಗಿ ಕಾಸು ಕಳೆದುಕೊಂಡು ಕಕ್ಕಾಬಿಕ್ಕಿಯಾಗಿ ಶಾಕ್ ನಿಂದ ಹೊರಬರುವ ಮೊದಲೇ ಹಣಕ್ಕಾಗಿ ಈಗ ಎಲ್ಲಾ ಕಡೆ ಮೋಸಗಾರರ ವಿವಿಧ ರೀತಿಯ ಗುಂಪುಗಳು ಕಾರ್ಯಾಚರಣೆ…

ಐಎಸ್ ಐ ಗೂಢಾಚಾರಿಗಳ ಕಣ್ಣು ಈಗ ಕರ್ನಾಟಕ ದತ್ತ..!

ಐಎಸ್ ಐ ಗೂಢಾಚಾರಿಗಳ ಕಣ್ಣು ಈಗ ಕರ್ನಾಟಕ ದತ್ತ..! Writing;ಪರಶಿವನ ಧನಗೂರು ದಕ್ಷಿಣ ಕಮಾಂಡರ್ ಸೇನಾ ಗುಪ್ತದಳದ ಅಧಿಕಾರಿಗಳು ಮತ್ತು ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಏಜೆಂಟ್ ನಂತೆ ಕೆಲಸಮಾಡುತ್ತಿದ್ದ ನಕಲಿ ಸೇನಾಧಿಕಾರಿ ಜಿತೇಂದರ್ ಸಿಂಗ್ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆಯ ಜಾಲಿಮೊಹಲ್ಲಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಈ ಜಿತೇಂದರ್ ಸಿಂಗ್ ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿ ಹಂಚಿಕೊಂಡಿರುವ ಬಾಡ್ಮೇರ್ ಜಿಲ್ಲೆಯವನು. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ…

error: Content is protected !!