Browsing: ಕ್ರೈಮ್

ಕ್ರೈಮ್

ಪ್ಲಾಸ್ಟಿಕ್ ಮ್ಯಾಟ್‌ಅಂಗಡಿಗೆ ಬೆಂಕಹೊತ್ತಿ ಐವರು ಸಜೀವದಹನ

ಬೆಂಗಳೂರು,ಆ,೧೬-ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಹಲಸೂರು ಗೇಟ್ ನ ನಗರ್ತಪೇಟೆಯಲ್ಲಿ ಇಂದು ಮುಂಜಾನೆ ನಡೆದಿದೆ. ದುರ್ಘಟನೆಯಲ್ಲಿ ಮದನ್ (೩೮), ಪತ್ನಿ ಸಂಗೀತಾ (೩೩) ಮಿತೇಶ್ (೮), ವಿಹಾನ್ (೫) ಸಜೀವ ದಹನಗೊಂಡ ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿದ್ದ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ನಗರ್ತಪೇಟೆಯ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಮುಂಜಾನೆ ೩.೩೦ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿಯಲ್ಲಿ ಬೆಂಕಿ…

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ; ಯೂಟ್ಯೂಪರ್, ಚಾನೆಲ್ ವರದಿಗಾರನ ಮೇಲೆ ಹಲ್ಲೆ

ಧರ್ಮಸ್ಥಳ, ಆ,07-ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ನೇಮಿಸಿರುವ ಎಸ್ ಐಟಿ ತನಿಖೆ ನಡೆಸುತ್ತಿರುವ ವೇಳೆಯ ಇಲ್ಲಿನ ದೇವಸ್ಥಾನದ ಮುಂದೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಪೊಲೀಸರು ಚದುರಿಸಲು ಲಾಠಿಚಾರ್ಜ್ ಮಾಡಿದ ಘಟನೆ ಜರುಗಿದೆ ನಂತರ ಒಂದು ಗುಂಪು, ‘ಕ್ಷೇತ್ರಕ್ಕೆ ಕಳಂಕ ತರುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಧರ್ಮಸ್ಥಳ ಪೊಲೀಸ್‌ ಠಾಣೆಯ ಎದುರು ರಾತ್ರಿ ಧರಣಿ ನಡೆಸಿತು. ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದಂತೆಯೇ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್‌ ಹಾಗೂ…

ಅತ್ಯಾಚಾರ ಪ್ರಕರಣ;ಪ್ರಜ್ವಲ್ ರೇವಣ್ಣಗೆ ಜೀವಾವಧಿಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು,ಆ,02 -ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪುನೀಡಿದೆ. ಮೈಸೂರಿನ ಕೆ.ಆರ್,ನಗರದಲ್ಲಿ ಮನೆ ಕೆಲಸಕ್ಕೆ ಸೇರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪುನೀಡಿದ್ದು ಶಿಕ್ಷೆಯ ತೀರ್ಪು ಇಂದು ಪ್ರಕಟಿಸಿತು. ಪ್ರಜ್ವಲ್ ರೇವಣ್ಣಗೆ ಜೀವಾಧಿ ಶಿಕ್ಷೆ ಒಟ್ಟು 11ಲಕ್ಷ ರೂ ದಂಡ ವಿಧಿಸಿ ಆದೇಶ ಹೊರಡಿಸಿದೆ, ಐಪಿಸಿ ಸೆಕ್ಷನ್ ೩೭೬(೨)(ಕ) ಅಡಿ ಜೀವಾವಧಿ ಶಿಕ್ಷೆ…

ಧರ್ಮಸ್ಥಳ ಹೂತಿಟ್ಟ ಶವ ಪ್ರಕರಣ ; ರವಿಕೆ ಪತ್ತೆ

ಧರ್ಮಸ್ಥಳ, ಜು,30-ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಐಟಿ ನಡೆಸುತ್ತಿರುವ ಶೋಧ ಕಾರ್ಯದಲ್ಲಿ ಮಹಿಳೆ ರವಿಕೆ ಪತ್ತೆಯಾಗಿದ್ದು ಮಹತ್ವದ ಸುಳಿವು ದೊರೆತಂತಾಗಿದೆ. ಕಳೆದ ಎರಡು ದಿನಗಳಿಂದ ಇಲ್ಲಿ ನಡೆಯುತ್ತಿರುವ ಶೋಧ ಕಾರ್ಯದಲ್ಲಿ ಗುಂಡಿ ಅಗೆದರೂ ಯಾವುದೆ ಸುಳಿವು ಸಿಕ್ಕಿರಲಿಲ್ಲ ಈಗ ದೊರೆತಿರುವ ರವಿಕೆ ಮಹತ್ವದ ಸುಳಿವು ದೊರೆತಂತಾಗಿದೆ. ಸೈಟ್ ನಂ.1ರಲ್ಲಿ 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪಾನ್ ಕಾರ್ಡ್, ಎಟಿಎಂ ಕಾರ್ಡ್ ಪತ್ತೆಯಾಗಿವೆ. ಸೈಟ್ ನಂ.1ರಲ್ಲಿ ಪತ್ತೆಯಾದಿರುವಂತ ಎಟಿಎಂ ಕಾರ್ಡ್ ನಲ್ಲಿ ಪುರುಷನ ಹೆಸರು…

ಧರ್ಮಸ್ಥಳ ಪ್ರಕರಣ-ಅನಾಮಿಕ ತಂದುಕೊಟ್ಟ ಬುರುಡೆ ಸುತ್ತ ಎಸ್‌ಐಟಿ ತನಿಖೆ ಆರಂಭ

ಉಡುಪಿ,ಜು,೨೬-ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿರುವ ಎಸ್‌ಐಟಿ ತಂಡ ಇಂದು ವಿಚಾರಣೆ ಆರಂಭಿಸಿತು, ಈ ನಡುವೆ ಮುಸುಕು ದಾರಿವ್ಯಕ್ತಿಯೊಬ್ಬನನ್ನು ವಿಚಾರಣೆ ಮಾಡುವ ವೇಳೆ ಅನಾಮಿಕನೊಬ್ಬ ತಂದ ಕೊಟ್ಟ ಬರುಡೆ ಸುತ್ತ ಈಗ ತನಿಖೆ ಆರಂಬಿಸಿದೆ. ೩೦ ವರ್ಷಗಳ ಹಿಂದಿನ ಈ ಪ್ರಕರಣ ಈಗ ಹಲವು ತಿರುವುಗಳನ್ನು ಪಡೆದುಕೊಂಡಿದೆ ಎಸ್‌ಐಟಿ ತಂಡ ಇಂದು ಬೆಳಗಿನಿಂದಲೇ ವಿಚಾರಣೆ ಆರಂಭಿಸಿದ್ದು ,ಇದಕ್ಕಾಗಿ ಹಲವಾರು ಪ್ರಶ್ನೆಗಳನ್ನು ಸಿದ್ದತೆ ಮಾಡಿಕೊಂಡು ಮಾಹಿತಿಗಾಗಿ ಸನ್ನದ್ಧವಾಗಿದೆ ,ಅಲ್ಲದೆ ದೂರದಾರನಿಂದಲೂ ಮಾಹಿತಿ ಪಡೆದುಕೊಳ್ಳುತ್ತಿದ್ದು ಅತನ…

ಆಂಧ್ರಪ್ರದೇಶದಲ್ಲಿ ಬೆಂಗಳೂರು ಮೂಲದ ಬಿಜೆಪಿ ಮುಖಂಡರ ಬರ್ಭರ ಹತ್ಯೆ

ಬೆಂಗಳೂರು ,ಜು,23-ಬಿಜೆಪಿ ಮುಖಂಡರಾದ ತಂದೆ- ಮಗನನ್ನು ಅಪಹರಿಸಿ ಕತ್ತು ಸೀಳಿ ಆಂದ್ರಪ್ರದೇಶದ  ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದ ತಂದೆ ವೀರಸ್ವಾಮಿರೆಡ್ಡಿ ಹಾಗೂ ಅವರ ಪುತ್ರ ಪ್ರಶಾಂತ್ ರೆಡ್ಡಿಯನ್ನು ಅಪಹರಿಸಿದ ದುಷ್ಕರ್ಮಿಗಳು ಇಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆಯಾದ ಘಟನೆ ನಡೆದಿದೆ. ಕೊಲೆಯಾದ ತಂದೆ ಮಕ್ಕಳು ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದರು. ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದು ಪ್ರಶಾಂತ್ ರೆಡ್ಡಿ ಮಹದೇವಪುರ…

ರೌಡಿಶೀಟರ್ ಹತ್ಯೆ ಪ್ರಕರಣ; ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಪ್ ಐ ಆರ್ ದಾಖಲು

ಬೆಂಗಳೂರು, ಜು,16- ರೌಡಿಶೀಟರ್ ಬಿಕ್ಲು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಭೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ದು ಎಫ್ ಐಆರ್ ದಾಖಲಾಗಿದೆ. ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಎಫ್ ಐಆರ್…

ಚಾಕಲೇಟ್ ಕೊಡುವುದಾಗಿ ನಂಬಿಸಿ ಮಗುಮೇಲೆ ಅತ್ಯಾಚಾರ

ಮಂಡ್ಯ,ಜು.೧೩- ಚಾಕಲೇಟ್ ಕೊಡಿಸುವುದಾಗಿ ಪುಸಲಾಯಿಸಿ ನಾಲ್ಕು ವರ್ಷದ ಮಗುವನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಬಂಧಿತನನ್ನು ಉತ್ತರಪ್ರದೇಶ ಮೂಲದ ಪ್ರವೀಣ್(೨೧) ಎಂದು ಗುರುತಿಸಲಾಗಿದೆ. ಸಂತ್ರಸ್ತ ಮಗುವಿನ ಪೋಷಕರು ಬಿಹಾರ ಮೂಲದವರಾಗಿದ್ದು, ಕಳೆದ ಒಂದೂವರೆ ವರ್ಷದಿಂದ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೇ ಫ್ಯಾಕ್ಟರಿಯಲ್ಲಿ ಬಂಧಿತ ಪ್ರವೀಣ್ ಕೂಡ ಕೆಲಸ ಮಾಡುತ್ತಿದ್ದ. ನಿನ್ನೆ ಮಧ್ಯಾಹ್ನ ಚಾಕಲೇಟ್ ಕೊಡಿಸುತ್ತೇನೆಂದು ಮಗುವನ್ನು ಪುಸಲಾಯಿಸಿ ತನ್ನೊಂದಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಬಿಬಿಎಂಪಿ ಕಸದ ಲಾರಿಯಲ್ಲಿ ದೊರೆತಿದ್ದ ಶವ ಹೆಸರು ಪತ್ತೆ,ಗಂಡನೆ ಕೊಲೆ ಶಂಕೆ!

ಬೆಂಗಳೂರು,ಜೂ. ೨೯-ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಬಿಬಿಎಂಪಿ ಕಸದ ಲಾರಿಯಲ್ಲಿ ಬಿಸಾಡಿದ್ದ ಮಹಿಳೆಶವ ಈಗ ಗುರುತು ಸಿಕ್ಕಿದ್ದು ಆಕೆಯ ಹೆಸರು ಪುಷ್ಪ ಎಂದು ಗೊತ್ತಾಗಿದೆ. ಮುಸ್ಲಿಂ ವ್ಯಕ್ತಿಯೊಬ್ಬ ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಈಕೆಯನ್ನು ಮದುವೆಯಾಗಿದ್ದು ಪತಿಯೇ ಈಕೆಯನ್ನು ಕೊಲೆಮಾಡಿ ಇಲ್ಲಿ ಬಿಸಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ನಗರದಲ್ಲಿ ಮತ್ತೊಂದು ಭಯಾನಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾದ ಅನಾಮಿಕ ಮಹಿಳೆಯ ಶವ ಕೇಸ್‌ಗೆ ಟ್ವಿಸ್ಟ್‌ಗೆ ಸಿಕ್ಕಿದೆ. ಕೊಲೆಯಾದ ಮಹಿಳೆ…

ಮಾಜಿ ಡಿಜಿಪಿ ಓ ಪ್ರಕಾಶ್ ಹತ್ಯೆ ಪ್ರಕರಣ- ಕೌಟಂಬಿಕ ಕಲಹವೇ ಕಾರಣ

ಬೆಂಗಳೂರು, ಮೇ,25-ಮಾಜಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಸಿಸಿಬಿ ತನಿಖೆಯಲ್ಲಿ ತಿಳಿಸಿದ್ದಾರೆ. ಗಂಡನ ಮೇಲೆ ಪತ್ನಿ ಪಲ್ಲವಿ ವಿಪರೀತ ಕೋಪ ಹೊಂದಿದ್ದರು. ಮಗಳಿಗೆ ಮದುವೆ ಮಾಡ್ತಿಲ್ಲ ಅಂತಾ ಕೋಪಗೊಂಡಿದ್ದರಂತೆ. ಅಲ್ಲದೇ ಅಷ್ಟು ದೊಡ್ಡ ಮನೆಯಲ್ಲಿದ್ರೂ ಪಲ್ಲವಿ ಕೈಯಲ್ಲಿ ಹಣ ಕೊಡ್ತಿರಲಿಲ್ಲ.. ಹಣದ ವ್ಯವಹಾರ ಎಲ್ಲಾ ತಾನೇ ನೋಡಿಕೊಳ್ತಿದ್ದರಂತೆ. ಅಲ್ಲದೇ ತನ್ನ ಸ್ವಂತ ಕುಟುಂಬಕ್ಕಿಂತಲೂ ತಂಗಿ ಕುಟುಂಬಕ್ಕೆ ಓಂಪ್ರಕಾಶ್ ಹೆಚ್ಚು ಒತ್ತು ಕೊಡ್ತಿದ್ದರಂತೆ. ಹೀಗಾಗಿ…

ಬಾಲಕಿ ಮೇಲೆ ಅತ್ಯಾಚಾರ ಆರೋಪ ;ಲೋಕೇಶ್ವರ ಸ್ವಾಮೀಜಿ ಬಂಧನ

ಬೆಳಗಾವಿ,ಮೇ,೨೪-ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ರಾಯಭಾಗ ತಲ್ಲೂಕಿನ ಮೇಖಳಿಯ ರಾಮಮಂದಿರದ ಲೋಕೇಶ್ವರ ಸ್ವಾಮೀಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ನಗರದ ಲಾಡ್ಜ್‌ನಲ್ಲಿ ಅತ್ಯಾಚಾರ ಎಸಗಿ ಬಳಿಕ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಡಲಾಗಿತ್ತು. ಬಾಗಲಕೋಟೆಯ ನವನಗರದ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ನಂತರ ಬೆಳಗಾವಿಯ ಮೂಡಲಗಿಗೆ ವರ್ಗಾವಣೆಯಾಗಿತ್ತು. ಬಾಲಕಿಗೆ ೧೭ ವರ್ಷ ಆಗಿದ್ದು ಆಕೆ ಹುಷಾರಿಲ್ಲದೇ ಇದ್ದಾಗ ಪೋಷಕರು ಆಕೆಯನ್ನು ಆಗಾಗ ಮಠಕ್ಕೆ ತಂದು ಬಿಟ್ಟು ಹೋಗುತ್ತಿದ್ದರು. ವಾರಗಟ್ಟಲೇ ಮಗಳನ್ನು ಸ್ವಾಮೀಜಿಯ ಸುಪರ್ದಿಗೆ ಒಪ್ಪಿಸಿ ಮಠದಲ್ಲೇ…

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ.ಸಲೀಂ ನೇಮಕ

ಬೆಂಗಳೂರು, ಮೇ, 21- ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿತ್ತು. ಇಂದು ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ…

ಉತ್ತರ ಕಾಶಿಯಲ್ಲಿ ಹೆಲಿಕಾಪ್ಟರ್ ಪತನ ಐವರು ಯಾತ್ರಿಕರು ಸಾವು

ಉತ್ತರ ಕಾಶಿ,ಮೇ,08- ಯಾತ್ರಿಕರನ್ನು ಕರೆದೊಯ್ಯುತ್ತುದ್ದ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಉತ್ತರಖಂಡದ ಉತ್ತರಕಾಶಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ತೀರ್ಥಯಾತ್ರಿಕರನ್ನ ಕರೆದೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಯಮುನೋತ್ರಿಯಿಂದ ಗಂಗೋತ್ರಿಗೆ ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- 8 ಮಂದಿ ಬಂಧನ

ಮಂಗಳೂರು, ಮೇ,03-ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ ​(28) ಮತ್ತು ಆದಿಲ್ ಮೆಹರೂಫ್ ಬಂಧಿತರು. ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ ಎಂದರು.…

ಸುಹಾಸ್ ಶೆಟ್ಟಿ ಹತ್ಯೆಪ್ರಕರಣ-ಐವರು ಆರೋಪಿಗಳು ಪೊಲೀಸರ ವಶ

ಮಂಗಳೂರು,ಮೇ,೦೩-ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುಹಾಸ್ ಶೆಟ್ಟಿ ಕೊಲೆ ಮಾಡಿದ್ದ ಆರೋಪಿಗಳು ಸ್ವಿಪ್ಟ್ ಕಾರಿನಲ್ಲಿ ಪರಾರಿಯಾಗಿದ್ದರು. ಕಾರನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ, ಹತ್ಯೆಗೆ ಬಳಸಿದ್ದ ಆಯುಧಗಳನ್ನು ಕಾರಿನಲ್ಲಿಯೇ ಬಿಸಾಡಿ ಹೋಗಿದ್ದರು. ಕೊಲೆ ಬಳಿಕ ಆರೋಪಿಗಳು ಮಂಗಳೂರಿನಲ್ಲಿಯೇ ಅವಿತು ಕುಳಿತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಆಗಾಗಲೇ ಆರೋಪಿಗಳನ್ನು ಗುರುತಿಸಿ ಪೊಲೀಸರು…

ರೌಡಿಶೀಟರ್ ,ಹಿಂದೂಕಾರ್ಯಕರ್ತ ಸುಹಾಸ್ ಹತ್ಯೆಹಿನ್ನೆಲೆ ಬೂದಿಮುಚ್ಚಿದ ಕೆಂಡದಂತಿರುವ ಮಂಗಳೂರು

ಮಂಗಳೂರು,ಮೇ,02-ರೌಡಿಶೀಟರ್ ಸುಹಾಸ್ ಹತ್ಯೆ ಈಗ ಮಂಗಳೂರಿನಲ್ಲಿ ಮತ್ತೊಂದು ಆಯಾಮ ಪಡೆದುಕೊಂಡಿದ್ದು ಹಿಂದು ಸಂಘಟನೆ ಮತ್ತು ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಹತ್ಯೆಯಾದ ಸುಹಾಸ್ ಶೆಟ್ಟಿ 2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮತ್ತು ರೌಡಿಶೀಟರ್ ಕೂಡ ಈತನ ಪರ ಈಗ ವಕಾಲತ್ತು ವಹಿಸುವ ಮೂಲಕ ಮತ್ತೊಂದು ಸಂಘರ್ಷಕ್ಕೆ ನಿಂತಂತಾಗಿದೆ. ಸುಹಾಸ್ ಶೆಟ್ಟಿಯನ್ನುಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ…

ಚಾಲಕನ ನಿಯಂತ್ತಣ ತಪ್ಪಿ ಇನ್ನೋವ ಕಾರು ಪಲ್ಟಿ:ಮೂವರ ಸಾವು

ಚಿತ್ರದುರ್ಗ,ಮೇ,01-:ತಾಲೂಕಿನ ಕಾತ್ರಾಳ್ ಗ್ರಾಮದ ಬಳಿ ಗುರುವಾರ ಬೆಳಗ್ಗೆ ರಸ್ತೆ ವಿಭಜಕಕ್ಕೆ ಇನೋವ ಕಾರು ಡಿಕ್ಕಿಯಾಗಿ ಮೂವರು ಮೃಪತಟ್ಟಿದ್ದು, ನಾಲ್ವರು ಮಂದಿ ಗಾಯಗೊಂಡಿದ್ದಾರೆ ಮಿಳುನಾಡು ಮೂಲದ ಅರ್ಜುನ್ (೨೮), ಶರವಣ (೩೧), ಸೇಂಥಿಲ್ (೨೯) ಮೃತ ದುರ್ದೈವಿಗಳು. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಓರ್ವ, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರಲ್ಲಿ ಅರ್ಜುನ್ ಎಂಬ ವ್ಯಕ್ತಿಯು ತಮೀಳುನಾಡಿನ ಚನ್ನೆöÊನಲ್ಲಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್,…

ಲಂಚ ಪಡೆಯುವ ವೇಳೆ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಲೋಕಾಯುಕ್ತ ದಾಳಿ

ಬೆಂಗಳೂರು ಏ.24 -ಪಾನ್ ಮಸಾಲ ಅಕ್ರಮ ಸಾಗಣಿಗೆ ಅನುಕೂಲ ಮಾಡಿಕೊಡಲು 20 ಲಕ್ಷ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್.ಅವರನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಇಂದು ಸಂಜೆ ನಾಗರಭಾವಿ ನಮ್ಮೀರ ತಿಂಡಿ ಹೊಟೇಲ್ ಹತ್ತಿರ ಆರೋಪಿ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್. ಅವರು ಖಾಸಗಿ ವ್ಯಕ್ತಿಯಾದ ಮನೋಜ್ ಎಂ ಎಂಬುವವರ ಕಡೆಯಿಂದ 20 ಲಕ್ಷ ರೂ. ಲಂಚದ ಹಣವನ್ನು ಪಡೆದುಕೊಳ್ಳುತ್ತಿರುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ…

ಕರ್ನಾಟಕ ನಿವೃತ್ತ ಡಿಜಿಪಿ ಓಂ  ಪ್ರಕಾಶ್ ಹತ್ಯೆ

ಬೆಂಗಳೂರು,ಏ.೨೦-ಆಸ್ತಿಯ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಚ್ ಎಸ್ ಆರ್ ಲೇಔಟ್‌ನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕದ ಕೇಡರ್ ೧೯೮೧ರ ಬ್ಯಾಚ್ ಐಪಿಎಸ್ ಅಧಿಕಾರಿ ಆಗಿದ್ದ ಓಂ ಪ್ರಕಾಶ್ ಅವರು ೨೦೧೫ರಲ್ಲಿ ರಾಜ್ಯದ ಡಿಜಿ, ಐಜಿಪಿ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು. ಇನ್ನು ಭಾನುವಾರ ಮಧ್ಯಾಹ್ನದ ವೇಳೆ ಓಂ ಪ್ರಕಾಶ್ ಅವರು…

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕರೈ ಮೇಲೆ ಗುಂಡಿನ ದಾಳಿ

ಬೆಂಗಳೂರು,ಏ,೧೯-ಬೆಂಗಳೂರಿನಲ್ಲಿ ಇನ್ನೂ ನಟೋರಿಯಸ್‌ಗಳ ನಡುವಿನ ಜಿದ್ದು ನಿಂತಂತೆ ಕಾಣುತ್ತಿಲ್ಲ, ಮಾಜಿ ಅಂಡರ್‌ವರ್ಲ್ಡ್ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಯುವ ಮೂಲಕ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇಂದು ಬೆಳಗಿನಜಾವ ೧-೩೦ರ ಸುಮಾರಿನಲ್ಲಿ ರಾಮನಗರ ಜಿಲ್ಲೆ ಬಿಡದಿಯ ಸಮೀಪ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ ದಾಳಿ ನಡದಿದೆ. ಮುತ್ತಪ್ಪೆರೈ ಪುತ್ರ ರಿಕ್ಕಿ ರೈ ಕಾರಿನಲ್ಲಿ ಬರುವ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಆತನ ಮೇಲೆ ಮೂರು ಸುತ್ತಿನ ಗುಂಡು…

1 2 3 6
error: Content is protected !!