ಮಾರಣ ಹೋಮದ ಪೂರ್ವ ತಯಾರಿ!

Share

ಅಲ್ಪಸಂಖ್ಯಾತರು, ಹೆಣ್ಣುಮಕ್ಕಳು, ದಲಿತ ದಮನಿತರು ಭಯದ ನೆರಳಿನಲ್ಲಿ ಬದುಕುವ ದ್ವೇಷ ರಾಜಕಾರಣದ ವಾತಾವರಣವನ್ನು ಕಳೆದ ಕೆಲವು ವರ್ಷಗಳಲ್ಲಿ ಕಟ್ಟಿ ಬೆಳೆಸಲಾಗಿದೆ. ಹೊಸ ದ್ವೇಷಗಳ ವಿಷದ ಕಳೆಗೆ ಯಥೇಚ್ಛ ನೀರು ಗೊಬ್ಬರ ನಿರ್ಭೀತಿ ನಿರ್ಲಜ್ಜೆಯನ್ನು ಎರೆಯತೊಡಗಿದೆ ಈ ವಾತಾವರಣ. ಮುಸಲ್ಮಾನರ ನರಮೇಧಕ್ಕೆ ಬಹಿರಂಗ ಕರೆ ನೀಡುವವರನ್ನು ಮುಟ್ಟಲೂ ಆಗದೆ ಅಸಹಾಯಕವಾಗಿ ಕೈ ಕಟ್ಟಿ ಕುಳಿತಿದೆ ಕಾನೂನು.

ಮಾರಣ ಹೋಮದ ಪೂರ್ವ ತಯಾರಿ!

ಸ್ತ್ರೀದ್ವೇಷ ಮತ್ತು ಧರ್ಮಾಂಧತೆ ಈ ನೆಲಕ್ಕೆ ಹೊಸ ಆವಿಷ್ಕಾರಗಳೇನೂ ಅಲ್ಲ. ಆದರೆ ’ಬೇಟೀ ಬಚಾವೊ, ಬೇಟಿ ಪಢಾವೋ’ (ಮಗಳನ್ನು ಕಾಪಾಡಿರಿ, ಆಕೆಗೆ ಅಕ್ಷರ ಕಲಿಸಿರಿ) ಎಂಬುದು ಖುದ್ದು ಪ್ರಧಾನಮಂತ್ರಿಯವರೇ ವರ್ಷಗಳ ಹಿಂದೆ ನೀಡಿದ ಘೋಷಣೆ. ಎಲ್ಲಿ ನಾರಿಯರು ಪೂಜಿಸಲ್ಪಡುವರೋ ಅಲ್ಲಿ ದೇವಾನುದೇವತೆಗಳೂ ರಮಿಸುವರು ಎಂದು ಅಡಿಗಡಿಗೆ ಹೇಳಿಕೊಳ್ಳಲಾಗುತ್ತದೆ. ಮುಸ್ಲಿಮ್ ನಾರಿಯರು, ದಲಿತ ದಮನಿತ ಆದಿವಾಸಿ ನಾರಿಯರು, ಕ್ರೈಸ್ತ ನಾರಿಯರು ನಾರಿಯರು, ಕಡೆಗೆ ಉಗ್ರ ಹಿಂದುತ್ವವನ್ನು ಒಪ್ಪದಿರುವ ಹಿಂದೂ ನಾರಿಯರು ನಾರಿಯರೇ ಅಲ್ಲವೇ? ಅವರನ್ನು ಹೀನಾಮಾನ ನಿಂದಿಸಲುಬಹುದೇ? ಮುಸಲ್ಮಾನರೂ ಸೇರಿದಂತೆ ಎಲ್ಲ ದೇಶವಾಸಿಗಳ ಡಿ.ಎನ್.ಎ. ಒಂದೇ ಎಂದು ಸರಸಂಘಚಾಲಕರು ನೀಡಿದ ಹೇಳಿಕೆಗೆ ಅರ್ಥವೇನು?

ಪ್ರಧಾನಿಯಾಗಲಿ, ದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರೇ ಇರಲಿ, ಮುಸಲ್ಮಾನ ಹೆಣ್ಣುಮಕ್ಕಳ ಡಿಜಿಟಲ್ ಹರಾಜಿನ ಕುರಿತು ಈತನಕ ತುಟಿ ಬಿಚ್ಚಿಲ್ಲ. ಬೆಚ್ಚಿಬೀಳಿಸುವ ಆತಂಕಕಾರಿ ಅರ್ಥಗರ್ಭಿತ ಮೌನವಿದು. ಸಮ್ಮತಿಯಲ್ಲದೆ ಇನ್ನೇನೆಂದು ಅರ್ಥೈಸಬೇಕು?

ಅಲ್ಪಸಂಖ್ಯಾತರು, ಹೆಣ್ಣುಮಕ್ಕಳು, ದಲಿತ ದಮನಿತರು ಭಯದ ನೆರಳಿನಲ್ಲಿ ಬದುಕುವ ದ್ವೇಷ ರಾಜಕಾರಣದ ವಾತಾವರಣವನ್ನು ಕಳೆದ ಕೆಲವು ವರ್ಷಗಳಲ್ಲಿ ಕಟ್ಟಿ ಬೆಳೆಸಲಾಗಿದೆ. ಹೊಸ ದ್ವೇಷಗಳ ವಿಷದ ಕಳೆಗೆ ಯಥೇಚ್ಛ ನೀರು ಗೊಬ್ಬರ ನಿರ್ಭೀತಿ ನಿರ್ಲಜ್ಜೆಯನ್ನು ಎರೆಯತೊಡಗಿದೆ ಈ ವಾತಾವರಣ. ಮುಸಲ್ಮಾನರ ನರಮೇಧಕ್ಕೆ ಬಹಿರಂಗ ಕರೆ ನೀಡುವವರನ್ನು ಮುಟ್ಟಲೂ ಆಗದೆ ಅಸಹಾಯಕವಾಗಿ ಕೈ ಕಟ್ಟಿ ಕುಳಿತಿದೆ ಕಾನೂನು.

ಮನೆಯಲ್ಲಿ ಉಳಿದು ಮಕ್ಕಳನ್ನು ಹೆತ್ತು ಪೋಷಿಸುವ ಪಾತ್ರವನ್ನು ಮಹಿಳೆ ನಿಭಾಯಿಸಬೇಕೆಂಬ ಮಾತನ್ನು ಆರೆಸ್ಸೆಸ್ ಮುಖ್ಯಸ್ಥರು ಕೂಡ ಹೇಳುತ್ತಾರೆ. ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಬೇಕೆಂಬ ಕರೆಯನ್ನು ವಿಶ್ವಹಿಂದೂ ಪರಿಷತ್ ನೀಡುತ್ತಲೇ ಬಂದಿದೆ. ತೀವ್ರ ಹಿಂದುತ್ವವಾದಿ ನರಸಿಂಘಾನಂದ್ ಹೆಚ್ಚು ಮಕ್ಕಳನ್ನು ಹೆರದಿರುವ ಹಿಂದೂ ಮಹಿಳೆಯರನ್ನು ರಾಕ್ಷಸಿಯರು ಮತ್ತು ನಾಗಿಣಿಯರು ಎಂದು ಜರೆದರು. ಸಾಧು ಸಂತರು ಎರಡೆರಡು ಸಲ ಮದುವೆಯಾಗಿ ’ಶುದ್ಧ ಹಿಂದೂ ಡಿ.ಎನ್.ಎ’ ವೃದ್ಧಿಸಬೇಕು ಎಂದು ಕರೆ ನೀಡಿದರು. ಕುಣಾಲ್ ಶರ್ಮ ಎಂಬ ಈತನ ಶಿಷ್ಯನೊಬ್ಬನು ಬಡತನದ ಹಿನ್ನೆಲೆಯ ಮುಸ್ಲಿಮ್ ಹೆಣ್ಣುಮಕ್ಕಳ ಮೊಬೈಲು ಫೋನು ನಂಬರುಗಳ ಪಟ್ಟಿಯೊಂದನ್ನು ಹೊರಡಿಸಿ ಅವರನ್ನು ರೇಪ್ ಮಾಡುವಂತೆ ಹಿಂದೂ ಗಂಡಸರಿಗೆ ಕರೆ ನೀಡಿದ.ಮುಸ್ಲಿಮ್ ಹುಡುಗಿಯರ ಮದುವೆ ಮಾಡಿಕೊಂಡು ಅವರನ್ನು ಸರ್ಕಾರಿ ಆಸ್ತಿಯೆಂದು ಬಳಸಿರಿ, ಖುದ್ದು ಭೋಗಿಸಿ ಇತರರಿಗೂ ಕೊಡಿಸಿರಿ. ಆಗ ಮಾತ್ರವೇ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ (ಸರ್ವರಿಗೂ ನ್ಯಾಯ) ಸಿಕ್ಕೀತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬೊಗಳಿದ್ದ. ಒಂದನ್ನೊಂದು ಮೀರಿಸುವ ಇಂತಹದೇ ಕಾರ್ಕೋಟಕ ನಂಜಿನ ಹೇಳಿಕೆಗಳಿಂದ ಕಿಕ್ಕಿರಿದಿವೆ ಸಾಮಾಜಿಕ ಜಾಲತಾಣಗಳು.

ಇಸ್ಲಾಮ್ ಕ್ಷಿಪ್ರ ವಿಷವೆಂದೂ, ಕ್ರೈಸ್ತ ಧರ್ಮ ನಿಧಾನ ವಿಷವೆಂದೂ ಎರಡನ್ನೂ ಇಳೆಯಿಂದಲೇ ಅಳಿಸಿ ಹಾಕಬೇಕೆಂದೂ, ತೀವ್ರ ಹಿಂದುತ್ವವಾದಿಗಳು ಪ್ರಚಾರ ಮಾಡುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳ ಕಿಕ್ಕಿರಿದಿರುವ ಧರ್ಮಾಂಧ ಖಾತೆಗಳು ತಾವು ’ಕಾಲಿಫ್ಲವರ್ ಫಾರ್ಮರ್’ (ಹೂಕೋಸು ರೈತ) ಎಂಬ ಬಣ್ಣನೆ ಹೊಂದಿರುತ್ತಿದ್ದವು. ಈಗಲೂ ಇಂತಹ ಲೆಕ್ಕವಿಲ್ಲದಷ್ಟು ಖಾತೆಗಳು ಕಾಣಸಿಗುತ್ತವೆ. ೧೯೮೯ರ ಭಾಗಲ್ಪುರ ಕೋಮುಗಲಭೆಗಳಲ್ಲಿ ಒಂದು ಕೋಮಿನವರು ಮತ್ತೊಂದು ಕೋಮಿಗೆ ಸೇರಿದವರನ್ನು ಕೊಂದು ಹೊಲಗಳಲ್ಲಿ ಹುಗಿದು ಮೇಲೆ ಹೂಕೋಸು ಬೆಳೆಯಲಾಗಿತ್ತು. ಹೂಕೋಸು ಕೃಷಿಯ ಈ ಕ್ರೂರ ರೂಪಕ ಇದೀಗ ಪುನಃ ಚಾಲ್ತಿಗೆ ಬಂದಿದೆ.
ಅರವತ್ತು ಲಕ್ಷ ಯಹೂದಿಗಳ ನರಮೇಧ ಸರಣಿಗೆ ಮುನ್ನ ಜರ್ಮನಿ ಇಂತಹುದೇ ದ್ವೇಷದ ಕೃಷಿ ಜರ್ಮನಿಯಲ್ಲಿ ನಡೆದಿತ್ತು. ಶ್ರೇಷ್ಟ ಜರ್ಮನ್ ಜನಾಂಗೀಯ ಶುದ್ಧಿಯ ವ್ಯಸನದ ಬಲೆಗೆ ಸಿಲುಕಿದ್ದ ಹಿಟ್ಲರ್. ಅವನ ನಾಜೀವಾದವು ಕ್ರೌರ್ಯದ ಪರಮಾವಧಿಯನ್ನು ಮುಟ್ಟಿತ್ತು.

ಜರ್ಮನರ ಆರ್ಯಜನಾಂಗೀಯ ’ಶುದ್ಧ ಶ್ರೇಷ್ಠ ರಕ್ತ’ವನ್ನು ಯಹೂದಿಗಳ ’ಕೀಳು ರಕ್ತ’ದಿಂದ ಕಲುಷಿತವಾಗದಂತೆ ’ಸಂರಕ್ಷಿಸುವುದು’ ನಾಜೀವಾದದ ಗುರಿಯಾಗಿತ್ತು.
ಒಬ್ಬ ಮನುಷ್ಯನ ರಕ್ತ ಶ್ರೇಷ್ಠ ಅಥವಾ ಮತ್ತೊಬ್ಬನದು ಕನಿಷ್ಠ ಎಂಬ ವಾದಕ್ಕೆ ವೈಜ್ಞಾನಿಕ ಸಮರ್ಥನೆ ಇಲ್ಲ. ಆದರೆ ಹಿಟ್ಲರ್ ಅದಕ್ಕೆಲ್ಲ ಸೊಪ್ಪು ಹಾಕಲಿಲ್ಲ. ಜರ್ಮನ್ ರಕ್ತ ಹೊಂದಿರುವವರಿಗೆ ಮಾತ್ರವೇ ಜರ್ಮನ್ ನಾಗರಿಕತೆ ಮೀಸಲು. ಹೀಗಾಗಿ ಅನ್ಯ ಜನಾಂಗವಾಗಿದ್ದ ಯಹೂದಿಗಳು ಜರ್ಮನ್ ನಾಗರಿಕತೆಗೆ ಅರ್ಹರಲ್ಲ ಎಂದು ಸಾರಲಾಯಿತು. ಅವರ ನಾಗರಿಕ ಹಕ್ಕುಗಳ ಕಿತ್ತುಕೊಳ್ಳಲಾಯಿತು. ಯಹೂದಿಗಳು ಮತ್ತು ಜರ್ಮನರ ನಡುವೆ ವಿವಾಹ ಮತ್ತು ವಿವಾಹೀತರ ಸಂಬಂಧವನ್ನು ನಿಷೇಧಿಸಲಾಯಿತು.
ಮತ ಚಲಾಯಿಸುವ ಹಕ್ಕು, ಸಾರ್ವಜನಿಕ ಸ್ಥಾನಮಾನಗಳಿಗೆ ಮತ್ತು ಚುನಾವಣೆಗಳಲ್ಲಿ ಸ್ಪರ್ಧಿಸುವ ಹಕ್ಕುಗಳನ್ನು ಯಹೂದಿಗಳಿಗೆ ನಿರಾಕರಿಸಲಾಯಿತು. ಅವರು ರಾಜ್ಯವಿಲ್ಲದ ಪ್ರಜೆಗಳಾದರು. ಪಾಸ್ಪೋರ್ಟುಗಳು ವೀಸಾಗಳನ್ನೂ ಅವರು ಹೊಂದುವಂತಿರಲಿಲ್ಲ. ಅಂತಿಮವಾಗಿ ಯಹೂದಿಗಳ ಮಾರಣಹೋಮಕ್ಕೆ ನಡೆಸಲಾದ ಪೂರ್ವಭಾವಿ ತಯಾರಿಯಾಗಿತ್ತು ಇದು.
ಹೆಚ್ಚು ಹೆಚ್ಚು ಮಕ್ಕಳ ಹೆರುವ ಮೂಲಕ ಶುದ್ಧ ಆರ್ಯ ಜರ್ಮನ್ ಜನಾಂಗದ ಸಂಖ್ಯೆಯ ವೃದ್ಧಿಸಬೇಕೆಂದು ಜರ್ಮನ್ ಮಹಿಳೆಯರ ಮೇಲೆ ಅತೀವ ಒತ್ತಡ ಹೇರಲಾಯಿತು. ಸ್ತ್ರೀವಾದಿ ಆಂದೋಲನವನ್ನು ಹೀಗಳೆಯಲಾಯಿತು. ಮಹಿಳೆಯು ಕೇವಲ ಮಕ್ಕಳ ಹೆರುವ ಯಂತ್ರವಾಗಿ ಮನೆಯ ನಾಲ್ಕು ಗೋಡೆಗಳ ಉಳಿಯಬೇಕೆಂದು ನಿರೀಕ್ಷಿಸಲಾಯಿತು. ಹೆರಲು ಅಸಮರ್ಥರಾದ ಹೆಂಡತಿಯರಿಗೆ ವಿಚ್ಛೇದನ ನೀಡಿ ಯುವತಿಯರನ್ನು ವರಿಸಿ ಮಕ್ಕಳ ಹುಟ್ಟಿಸುವಂತೆ ಜರ್ಮನ್ ಪುರುಷರನ್ನು ಪ್ರೋತ್ಸಾಹಿಸಲಾಯಿತು.

ಜರ್ಮನಿಯಲ್ಲಿ ದಫನಾದದ್ದು ಹಿಟ್ಲರನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿ ಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

“Birth, Sex and Abuse: Women`s Vioces Under Nazi Rule”ಎಂಬ ಹೆಸರಿನ ಹೊತ್ತಿಗೆಯೊಂದಿದೆ. ಹೊಟ್ಟೆ ತೊಳಸಿ ಬರುವ ಭಯಾನಕ ಅತ್ಯಾಚಾರಗಳ ವಿವರಗಳಿಂದ ಅದು ತುಂಬಿ ಹೋಗಿದೆ. ಓದುವುದು ಕಡುಕಠಿಣ. ಡಾ.ಬೀವರ್ಲೀ ಛಾಮರ್ಸ್ ಎಂಬಾಕೆ ಈ ಪುಸ್ತಕದ ಲೇಖಕಿ.

ಯಾತನಾ ಶಿಬಿರಗಳಲ್ಲಿ ಯಹೂದಿ ಮಹಿಳೆಯರ ಮೇಲೆ ನಾಜೀಗಳು ನಡೆಸುವ ಅತ್ಯಾಚಾರಗಳನ್ನೂ ಅಮಾನುಷ ವೈದ್ಯಕೀಯ ಪ್ರಯೋಗಗಳನ್ನೂ, ಅವರನ್ನು ಸೂಳೆಗಾರಿಕೆಗೆ ಬಳಸಿ ಕೊಲ್ಲುವುದನ್ನೂ ಇಲ್ಲಿ ದಾಖಲಿಸಲಾಗಿದೆ. ಕೌಸರ್ ಬೀಬಿಯ ಬಸಿರನ್ನು ಖಡ್ಗದಿಂದ ಬಗೆದು ಭ್ರೂಣವನ್ನು ಎತ್ತಿ ಹಿಡಿದ ಪೈಶಾಚಿಕತೆಯ ಪೂರ್ವನಿದರ್ಶನಗಳು ಇಲ್ಲಿ ಹೇರಳ.

ಕೋಮು ದಂಗೆಗಳೂ ಸೇರಿದಂತೆ ಚರಿತ್ರೆ ಮತ್ತು ವರ್ತಮಾನ ಕಾಲದ ಧಾರ್ಮಿಕ, ಜನಾಂಗೀಯ, ರಾಜಕೀಯ, ಆರ್ಥಿಕ ಹಿತಾಸಕ್ತಿಯ ಕದನಗಳು, ಯುದ್ಧಗಳಿಗೆ ಲಕ್ಷ ಲಕ್ಷ ಹೆಣ್ಣು ದೇಹಗಳು ಕದನ ಭೂಮಿಗಳಾಗಿ ಪರಿಣಮಿಸಿದ್ದು ನಾಚಿಕೆಗೇಡಿನ ನಿಜ. ಬುಲ್ಲೀಬಾಯಿ ಸುಲ್ಲೀಬಾಯಿ ಹರಾಜಿನ ಅಧಮ ಕೃತ್ಯದ ಹಿಂದೆ ಈ ಬಗೆಯ ಗಂಡಾಳಿಕೆಯೂ ಹೆಡೆಯಾಡಿದೆ.

ಅಪಾಯಕಾರಿ ವ್ಯಾಧಿಯ ನಿಚ್ಚಳ ಲಕ್ಷಣಗಳು ಸಮಕಾಲೀನ ಭಾರತದಲ್ಲಿ ಭುಸುಗುಟ್ಟಿವೆ. ಸೌಹಾರ್ದ ಸಾಮರಸ್ಯದ ಬಹುಮುಖೀ ಸಂಸ್ಕೃತಿಯ ಸಾಮಾಜಿಕ ಹಂದರವನ್ನು ಛಿದ್ರಗೊಳಿಸಿ ದೇಶವನ್ನು ದುರ್ಬಲಗೊಳಿಸುವ ರೋಗ ಚಿಹ್ನೆಗಳಿವು.

ಈ ರೋಗ ಬಡಿದಿದ್ದ ಜರ್ಮನಿಯು ಕಂಡ ನೀಚಾತಿನೀಚ ನರಮೇಧಗಳ ತಾಜಾ ಉದಾಹರಣೆ ನಮ್ಮ ಕಣ್ಣಮುಂದೆಯೇ ಇದೆ. ಹಗಲು ಕಂಡ ಈ ಭಾವಿಗೆ ರಾತ್ರಿ ಬೀಳತೊಡಗಿದೆ ಭಾರ

Girl in a jacket
error: Content is protected !!