ಕೊರೊನಾ ಹೆಚ್ಚಳ; ಗಡಿಗಳಲ್ಲಿ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ

Share

ನವದೆಹಲಿ, ಜು, ೩೦:ಪಕ್ಕದ ಕೇರಳ ಸೇರಿದಂತೆ ಪಕ್ಕದ ರಾಜ್ಯಗಳಲ್ಲಿ ಕೊರೊನಾ ಹೆಚ್ಳವಾಗುತ್ತಿದ್ದು ಗಡಿ ಭಾಗಗಳಲ್ಲಿ ಹೆಚ್ಚರ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಶುಕ್ರವಾರ ಮೊದಲ ಬಾರಿ ದೆಹಲಿಗೆ ಭೇಟಿ ನೀಡಿದ ಅವರು, ರಾಜ್ಯದ ಕೊರೊನಾ ಸ್ಥಿತಿಗತಿ ಕುರಿತು ಮಾತನಾಡಿದ್ದಾರೆ. ಕೊರೊನಾ ಮುಂದಿನ ಅಲೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ಕುರಿತು ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಏಕಾಏಕಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
“ರಾಜ್ಯದ ಗಡಿ ಪ್ರದೇಶಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ. ಕೊರೊನಾ ಪರೀಕ್ಷೆ ಹಾಗೂ ಲಸಿಕೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನಮ್ಮ ಸದ್ಯದ ಆದ್ಯತೆ ಕೊರೊನಾ ಸೋಂಕಿನ ಹರಡುವಿಕೆ ತಡೆಯುವುದು” ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಗುರುವಾರ ೨೦೫೨ ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ೧೩೩೨ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೂ ೩೬೪೯೧ ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬುಧವಾರದ ೧,೫೩೧ ಹೊಸ ಪ್ರಕರಣಗಳಿಂದ ದೈನಂದಿನ ಪ್ರಮಾಣವು ೩೪ ಪ್ರತಿಶತದಷ್ಟು ಹೆಚ್ಚಾಗಿದೆ. ದಿನವು ೧,೩೩೨ ಸೋಂಕಿತರು ಬಿಡುಗಡೆಯಾಗಿದ್ದಾರೆ. ಹೊಸ ಪ್ರಕರಣಗಳನ್ನು ಹೆಚ್ಚಾಗುವುದು ಮುಂದುವರಿಯುತ್ತಿದೆ. ಇದುವರೆಗೆ ರಾಜ್ಯದಲ್ಲಿ ಒಟ್ಟು ಚೇತರಿಕೆಯ ಪ್ರಮಾಣ ೨೮,೪೧,೪೭೯ ಆಗಿದೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ ೨೯೦೧೨೪೭ಕ್ಕೆ ಏರಿಕೆಯಾಗಿದೆ. ಒಟ್ಟು ೨೮೪೧೪೭೯ ಸೋಂಕಿತರು ಗುಣಮುಖರಾಗಿದ್ದು. ೨೩೨೫೩ ಕೊವಿಡ್-೧೯ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Girl in a jacket
error: Content is protected !!