ಬಡವರಿಗೆ ಅನ್ನ,ವಸತಿ,ಉದ್ಯೋಗ ಒದಗಿಸುವ ಸಂಕಲ್ಪ-ಸೋಮಣ್ಣ

Share

ಬೆಂಗಳೂರು,ಜೂ,೧೮: ರಾಜ್ಯದಲ್ಲಿ ಕಷ್ಟದಲ್ಲಿರುವ ಬಡವರಿಗೆ ಅನ್ನ, ವಸತಿ, ಆರೋಗ್ಯ ಮತ್ತು ಉದ್ಯೋಗ ಒದಗಿಸುವುದು ನಮ್ಮ ಸಂಕಲ್ಪ ಎಂದು ವಸತಿ ಸಚಿವರಾದ ವಿ ಸೋಮಣ್ಣನವರು ಅಭಿಪ್ರಾಯಪಟ್ಟಿದ್ದಾರೆ.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜ ನಗರ ವಾರ್ಡ್‌ನಲ್ಲಿ ಬಡವರು, ಬೀದಿ ಬದಿಯ ವ್ಯಾಪಾರಿಗಳು, ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ ಮಾಡಿ ಬಳಿಕ ಮಾತನಾಡಿದ ಸೋಮಣ್ಣನವರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ೯ವಾರ್ಡ್‌ಗಳಲ್ಲಿ ಆರ್ಥಿಕವಾಗಿ ಹಿಂದುಳಿದರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ. ಸೋನ ಮಸೂರಿ ಅಕ್ಕಿ, ಎಣ್ಣೆ, ಬೇಳೆ ಮತ್ತು ಸಾಂಬಾರ್ ಪದಾರ್ಥ, ಸಕ್ಕರೆ ಗೋಧಿ ಉಪ್ಪು ಇನ್ನಿತರೆ ಆಹಾರ ಪದಾರ್ಥಗಳು ನೀಡಲಾಗುತ್ತಿದೆ ಎಂದರು.


ಬಡವರಿಗೆ ಅನ್ನ, ವಸತಿ, ಆರೋಗ್ಯ, ಮತ್ತು ಉದ್ಯೋಗವನ್ನು ಎಲ್ಲರಿಗೂ ಕಲ್ಪಿಸಬೇಕು ಎಂಬುದು ನನ್ನ ಗುರಿ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಇನ್ನೂ ೧೫ದಿನದಲ್ಲಿ ನೂತನ ಪೂಲೀಸ್ ರಾಣೆ ಆರಂಭಿಸಲಾಗುವುದು ಮತ್ತು ಮಾರೇನಹಳ್ಳಿ ವಾರ್ಡ್‌ನಲ್ಲಿ ಕೋವಿಡ್ ಸೋಂಕಿತರಿಗೆ ೮೦ ಬೆಡ್‌ನ ಆಸ್ಪತ್ರೆ ಅತೀ ಶೀಘ್ರದಲ್ಲಿ ಲೋಕರ್ಪಣೆಯಾಗಲಿದೆ. ಕೊವಿಡ್-೧೯ ನಿಯಂತ್ರಣದಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ. ಮಾನ್ಯ ಪ್ರಧಾನ ಮಂತ್ರಿ ನರೇಂದ್ರಮೋದಿರವರು ನವೆಂಬರ್ ವರಗೆ ೮೦ ಕೋಟಿ ಬಿ.ಪಿ.ಎಲ್.ಕಾರ್ಡ್ ದಾರರಿಗೆ ಉಚಿತವಾಗಿ ಅಕ್ಕಿ ನೀಡಲಿದ್ದಾರೆ ಎಂದು ಹೇಳಿದರು.
ದೇವರು ಮೆಚ್ಚುವ ಕೆಲಸ:
ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರು ಮಾತನಾಡಿ, ರಾಜ್ಯದಲ್ಲಿ ಸರ್ಕಾರದ ದಿಟ್ಟ ಕ್ರಮದಿಂದ ಕೊವಿಡ್-೧೯ ಸೋಂಕು ನಿಯಂತ್ರಣದಲ್ಲಿ ಇದೆ. ಕೋವಿಡ್ ಮೂರನೇ ಅಲೆ ತಡೆಗಟ್ಟಲು ೨೪ ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆ ಹಾಗೂ ೫ ಸಾವಿರ ವೆಂಟಿಲೇಟರ್ ಬೆಡ್ ವ್ಯವಸ್ಥೆ ಮಾಡಲಾಗಿದೆ. ವಸತಿ ಸಚಿವರಾದ ವಿ.ಸೋಮಣ್ಣರವರು ಬಡಜನರಿಗೆ ನೆರವಾಗಲು ಆಹಾರ ಕಿಟ್ ವಿತರಣೆ ಮತ್ತು ಕೋವಿಡ್ ಉಸ್ತುವಾರಿಯಲ್ಲಿ ಸಾಂಕ್ರಮಿಕ ರೋಗ ನಿಯಂತ್ರಣ ಮಾಡಲು ಯಶ್ವಸಿಯಾಗಿದ್ದು, ಜನ ಮತ್ತು ದೇವರು ಮೆಚ್ಚುವ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಿಟ್ ವಿತರಣೆಯಲ್ಲಿ ರಾಜ್ಯ ಬಿಜೆಪಿ ಯುವ ಮುಖಂಡರಾದ ಡಾ ಅರುಣ್ ಸೋಮಣ್ಣ ಮತ್ತು ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ಕೆ.ಉಮೇಶ್ ಶೆಟ್ಟಿ, ದಾಸೇಗೌಡ, ಶ್ರೀಮತಿ ಶಂಕುತಲ ಡೊಡ್ಡಲಕ್ಕಪ್ಪ, ಜಯರತ್ನ, ಪಲ್ಲವಿ ಚನ್ನಪ್ಪ, ಗೋವಿಂದರಾಜನಗರ ಬಿಜೆಪಿ ಮಂಡಲ ಅಧ್ಯಕ್ಷರಾದ ವಿಶ್ವನಾಥಗೌಡರು ಹಾಗೂ ಕೊಳಚೆ ನಿರ್ಮೂಲನ ಮಂಡಳಿ ನಿರ್ದೇಶಕರಾದ ಕ್ರಾಂತಿರಾಜು ಅವರು ಪಾಲ್ಗೊಂಡಿದ್ದರು.

Girl in a jacket
error: Content is protected !!