ಬೆಂಗಳೂರು,ಮೇ,೧೪:ಲಾಕ್ಡೌನ್ಸಮಯದಲ್ಲಿ ಉಚಿತ ಅಹಾರ ಕಿಟ್ ಹಾಗೂ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬಹುದು ಎಂದು ನಿರೀಕ್ಷೆಯಲ್ಲಿ ರಾಜ್ಯದ ಜನರಿಗೆ ಬದಲಾಗಿ ಬಿಪಿಎಲ್ ಕಾರ್ಡ್ದಾರರಿಗೆ ವಿತಿರಿಸುವ ಅಕ್ಕಿಯನ್ನು ೫ ರಿಂದ ೧೦ ಕೇಜಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇ, ಜೂನ್ ತಿಂಗಳಿಗೆ ಉಚಿತವಾಗಿ ೧೦ ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಕೆಜಿಗೆ ೧೫ರಂತೆ ೧೦ ಕೆಜಿ ಅಕ್ಕಿಯನ್ನು ಎಪಿಎಲ್ ಅರ್ಜಿದಾರರಿಗೂ ಈ ಅವಧಿಯಲ್ಲಿ ಆಹಾರ ಇಲಾಖೆ ವಿತರಣೆ ಮಾಡಲಿದೆ. ಈ ಕುರಿತು ಆಹಾರ ಸಚಿವ ಉಮೇಶ್ ಕತ್ತಿ ಪ್ರಕಟಣೆ ಹೊರಡಿಸಿದ್ದಾರೆ
ಅಷ್ಟೇ ಅಲ್ಲದೇ, ಪ್ರತಿ ಪಡಿತರ ಚೀಟಿಗೆ ೨ ಕೆಜಿ ಗೋಧಿ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ೩೫ ಕೆಜಿ ಧಾನ್ಯದ ಜತೆಗೆ ೫ ಕೆಜಿ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಎಪಿಎಲ್ ಕಾರ್ಡ್ದಾರರಿಗೆ ಕೆಜಿಗೆ ೧೫ ರೂ.ನಂತೆ ಅಕ್ಕಿ, ರಾಜ್ಯದಿಂದ ನೀಡಲಾಗುತ್ತಿರುವ ೫ ಕೆಜಿ ಧಾನ್ಯದ ಜತೆಗೆ ೫ ಕೆಜಿ ಅಕ್ಕಿ ಸೇರಿಸಿ ೧೦ ಕೆಜಿ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪಿಎಂಜಿಕೆವೈ ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನೀಡಲಾಗುತ್ತಿರುವ ೫ ಕೆಜಿ ಆಹಾರ ಧಾನ್ಯದ ಜೊತೆಗೆ ೫ ಕೆಜಿ ಅಕ್ಕಿ ಸೇರಿಸಿ ಒಟ್ಟು ೧೦ ಕೆಜಿ ಆಹಾರ ಧಾನ್ಯ ನೀಡುವುದಾಗಿ ತಿಳಿಸಿದೆ.
ಪ್ರತಿ ಪಡಿತರ ಚೀಟಿಗೆ ೨ ಕೆಜಿ ಗೋಧಿ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಚೀಟಿಗೆ ೨೫ ಕಿಜಿ ಆಹಾರ ಧಾನ್ಯದ ಜೊತೆಗೆ ೫ ಕೆಜಿ ಅಕ್ಕಿ ಸೇರಿಸಿ ವಿತರಿಸಲು ಆಹಾರ ಸಚಿವ ಉಮೇಶ್ ಕತ್ತಿ ಆದೇಶಿಸಿದ್ದಾರೆ.
ಬಿಪಿಎಲ್ ಕಾರ್ಡ್ದಾರರಿಗೆ ೫ ರಿಂದ ೧೦ಕೆಜಿ ಅಕ್ಕಿ ವಿತರಣೆ
Share