ನವದೆಹಲಿ,ಜೂ,೧೩:ಕಾಂಗ್ರೆಸ್ ಪಕ್ಷ ಜಡತ್ವವನ್ನು ಬಿಟ್ಟು ಸಕ್ರಿಯ ರಾಜಕಾರಣದತ್ತ ಮುಖಮಾಡಬೇಕು ಮತ್ತು ಸಂಘಟನಾ ವಲಯದಲ್ಲಿ ವ್ಯಾಪಕ ಸುಧಾರಣೆಗಳ ಅಗತ್ಯವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.
ಭಾರತಕ್ಕೆ ಪುನಃ ಚೇತರಿಸಿಕೊಂಡ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಅದಕ್ಕಾಗಿ ಜಡತ್ವವನ್ನು ಬಿಟ್ಟು ಸಕ್ರಿಯವಾಗಿ ಅರ್ಥಪೂರ್ಣವಾಗಿ ತೊಡಗಿಸಿಕೊಳ್ಳುವ ಮನಸ್ಥಿತಿ ಇದೆ ಎಂದು ಇದು ಸಂಭವಿಸಬೇಕಾದರೆ ಕೇಂದ್ರ ಹಾಗೂ ರಾಜ್ಯ ಸಂಘಟನಾ ವಲಯದಲ್ಲಿ ವ್ಯಾಪಕ ಸುಧಾರಣೆಗಳನ್ನು ಮಾಡಬೇಕಿದೆ. ಈ ಮೂಲಕ ಪಕ್ಷವು ಸಂಘಟನಾ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಸಾಬೀತು ಮಾಡಬೇಕು ಎಂದಿದ್ದಾರೆ
ತ್ಯಾಗವಿರದೇ ಅಧಿಕಾರ ಬಯಸುವವರಿಗೆ ಪಕ್ಷದಲ್ಲಿ ಜಾಗವಿಲ್ಲ: ಬಂಗಾಳ ಬಿಜೆಪಿ ಅಧ್ಯಕ್ಷ ಕೋವಿಡ್ನಿಂದಾಗಿ ನಿಂತು ಹೋಗಿರುವ ಕಾಂಗ್ರೆಸ್ ಸಂಘಟನೆಯ ಚುನಾವಣೆಯು ಸದ್ಯದಲ್ಲೇ ನಡೆಯಲಿದೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಚುನಾವಣಾ ಸೋಲನ್ನು ವಿಮರ್ಶಿಸಲು ಸಮಿತಿ ರಚಿಸುವುದು ಒಳ್ಳೆಯದು. ಆದರೆ ಅದು ಸೂಚಿಸುವ ಪರಿಹಾರಗಳನ್ನು ಅನುಷ್ಠಾನಗೊಳಿಸದಿದ್ದರೆ ಯಾವುದೇ ಪ್ರಯೋಜನವಿಲ್ಲ ಎಂದಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿರುವ ಜಿತಿನ್ ಪ್ರಸಾದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಲ್, ರಾಜಕೀಯ ಲಾಭಕ್ಕಾಗಿ ಅವರು ಪಕ್ಷ ತೊರೆದಿದ್ದು, ಬಿಜೆಪಿಯಿಂದ ’ಪ್ರಸಾದ’ ದೊರಕಿದೆಯೇ ಎಂದು ವ್ಯಂಗ್ಯವಾಡಿದ್ದಾರೆ
ಕಾಂಗ್ರೆಸ್ ಪಕ್ಷದಲ್ಲಿ ವ್ಯಾಪಕ ಸುಧಾರಣೆ ಅಗತ್ಯ-ಕಪಿಲ್ ಸಿಬಲ್
Share